ಅದೆಷ್ಟೋ ಯುವಕರಿಗೆ ಮದುವೆಯಾಗದ ಸ್ಥಿತಿ ತಂದೊಡ್ಡಿದೆ ಬಿಜೆಪಿ; ಎನ್​ಸಿಪಿ ನಾಯಕ ಶರದ್​ ಪವಾರ್ ಅಸಮಾಧಾನ - Vistara News

ದೇಶ

ಅದೆಷ್ಟೋ ಯುವಕರಿಗೆ ಮದುವೆಯಾಗದ ಸ್ಥಿತಿ ತಂದೊಡ್ಡಿದೆ ಬಿಜೆಪಿ; ಎನ್​ಸಿಪಿ ನಾಯಕ ಶರದ್​ ಪವಾರ್ ಅಸಮಾಧಾನ

ನಮ್ಮ ರೈತರು ಉತ್ಪಾದನೆಯನ್ನು ಹೆಚ್ಚಿಸಿದ್ದರಿಂದ ಈ ದೇಶದ ಹಸಿವಿನ ಸಮಸ್ಯೆ ನೀಗಿಸಲು ಸಾಧ್ಯವಿದೆ. ಆದರೆ ಅಧಿಕಾರದಲ್ಲಿರುವ ಜನರು ರೈತರಿಗೆ ತಕ್ಕ ಪ್ರತಿಫಲ ನೀಡಲು ಸಿದ್ಧರಿಲ್ಲ. ಮಧ್ಯವರ್ತಿಗಳ ಹಿತಕಾಪಾಡುವುದರಲ್ಲೇ ಮಗ್ನರಾಗಿದ್ದಾರೆ ಎಂದೂ ಶರದ್​ ಪವಾರ್​ ಆರೋಪಿಸಿದ್ದಾರೆ.

VISTARANEWS.COM


on

After
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ ಬಿಜೆಪಿ ಸಮಾಜದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ನ್ಯಾಶನಲಿಸ್ಟ್​ ಕಾಂಗ್ರೆಸ್​ ಪಾರ್ಟಿ (NCP) ಮುಖ್ಯಸ್ಥ ಶರದ್​ ಪವಾರ್​​ ಆರೋಪ ಮಾಡಿದ್ದಾರೆ. ಪುಣೆಯಲ್ಲಿ ಆಯೋಜಿಸಲಾಗಿದ್ದ ಎನ್​ಸಿಪಿ ಜನ ಜಾಗರ್ ಯಾತ್ರೆ ಅಭಿಯಾನ ಉದ್ಘಾಟನೆ ಮಾಡಿ ಮಾತನಾಡಿದ ಶರದ್​ ಪವಾರ್ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರದಲ್ಲಿ ಈಗಿರುವ ಬಿಜೆಪಿ-ಶಿವಸೇನೆ ಶಿಂಧೆ ಬಣ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರಗಳು ನಿರುದ್ಯೋಗ ಸೃಷ್ಟಿಸುತ್ತಿವೆ. ಈ ನಿರುದ್ಯೋಗ ಕಾರಣದಿಂದ ಯುವಕರಿಗೆ ಮದುವೆಯಾಗುತ್ತಿಲ್ಲ. ಅವರಿಗೆ ಹೆಣ್ಣು ಸಿಗುತ್ತಿಲ್ಲ ಎಂದು ಶರದ್​ ಪವಾರ್ ವಾಗ್ದಾಳಿ ನಡೆಸಿದರು. ‘ನಾನು ಎಲ್ಲಿಗೋ ಹೋಗುತ್ತಿದ್ದೆ. ಹಳ್ಳಿಯೊಂದರ ಮೂಲೆಯಲ್ಲಿ ಸುಮಾರು 25-30ವರ್ಷ ವಯಸ್ಸಿನ 15-20 ಯುವಕರು ಕುಳಿತಿದ್ದರು. ನಾನು ಅಲ್ಲಿ ನಿಂತು ಅವರ ಬಳಿ ಮಾತನಾಡಿದೆ. ಏನು ಕೆಲಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಯುವಕರು, ನಮಗೆ ಎಲ್ಲೂ ಕೆಲಸ ಸಿಕ್ಕಿಲ್ಲ. ನಮ್ಮಲ್ಲಿ ಕೆಲವರು ಪದವಿಧರರು ಇದ್ದೇವೆ, ಇನ್ನೂ ಕೆಲವರು ಸ್ನಾತಕೋತ್ತರ ಪದವೀಧರರು ಇದ್ದೇವೆ ಎಂದು ಹೇಳಿದರು. ಆಗ ನಾನು, ಮದುವೆ ಆಗಿದೆಯೇ ಎಂದು ಪ್ರಶ್ನಿಸಿದೆ. ‘ಇಲ್ಲ’ ಎಂದು ಉತ್ತರಿಸಿದರು. ಯಾಕೆ ಮದುವೆ ವಯಸ್ಸಾದರೂ ಮದುವೆಯಾಗಿಲ್ಲ ಎಂದು ನಾನು ಕೇಳಿದ್ದಕ್ಕೆ ‘ನಾವು ನಿರುದ್ಯೋಗಿಗಳು, ನಮಗೆ ಹೆಣ್ಣು ಕೊಡಲು ಯಾರೂ ಒಪ್ಪುತ್ತಿಲ್ಲ’ ಎಂದು ಉತ್ತರಿಸಿದರು ಎಂದು ಶರದ್​ ಪವಾರ್​ ಹೇಳಿದರು.

‘ನಮ್ಮ ಮಹಾರಾಷ್ಟ್ರದ ಹಲವು ಹಳ್ಳಿಗಳಲ್ಲಿ ಯುವಕರಿಗೆ ಈ ಸಮಸ್ಯೆ ಕಾಡುತ್ತಿದೆ. ನಿರುದ್ಯೋಗ, ಹಣದುಬ್ಬರ ನೀಗಿಸಲು ಸರ್ಕಾರಗಳು ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಸಮುದಾಯಗಳು, ಮತಗಳ ಮಧ್ಯೆ ಜಗಳ-ಗಲಭೆ ಸೃಷ್ಟಿಸುವ ಕೆಲಸವನ್ನು ಮಾಡುತ್ತಿವೆ. ಈ ಮೂಲಕ ಜನರ ಗಮನವನ್ನು ತಿರುಗಿಸಲು ಪ್ರಯತ್ನಿಸುತ್ತಿವೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಅದನ್ನು ಮರೆಮಾಚಲು ಗಲಭೆ ಸೃಷ್ಟಿಸುತ್ತಿದೆ ಎಂದು ಶರದ್​ ಪವಾರ್ ಹೇಳಿದರು.

‘ನಮ್ಮ ರೈತರು ಉತ್ಪಾದನೆಯನ್ನು ಹೆಚ್ಚಿಸಿದ್ದರಿಂದ ಈ ದೇಶದ ಹಸಿವಿನ ಸಮಸ್ಯೆ ನೀಗಿಸಲು ಸಾಧ್ಯವಿದೆ. ಆದರೆ ಅಧಿಕಾರದಲ್ಲಿರುವ ಜನರು ರೈತರಿಗೆ ತಕ್ಕ ಪ್ರತಿಫಲ ನೀಡಲು ಸಿದ್ಧರಿಲ್ಲ. ಮಧ್ಯವರ್ತಿಗಳ ಹಿತಕಾಪಾಡುವುದರಲ್ಲೇ ಮಗ್ನರಾಗಿದ್ದಾರೆ. ಸಾಮಾನ್ಯ ಜನರನ್ನು ಬೆಲೆ ಏರಿಕೆ ಎಂಬ ಕೂಪಕ್ಕೆ ತಳ್ಳುತ್ತಿದ್ದಾರೆ’ ಎಂದು ಪವಾರ್​ ಹೇಳಿದರು. ಹಾಗೇ, ‘ಇಂದು ಮಹಾರಾಷ್ಟ್ರದಲ್ಲಿ ಕೈಗಾರಿಕೆಗಳು ನೆಲಕಚ್ಚುತ್ತಿವೆ. ಇಲ್ಲಿದ್ದ ಕೈಗಾರಿಕೆಗಳು ಬೇರೆಡೆಗೆ ಸ್ಥಳಾಂತರ ಆಗುತ್ತಿವೆ. ಉದ್ಯೋಗಾವಕಾಶ ಹೆಚ್ಚಿಸುವ ಹೊಸ ಉದ್ಯಮಗಳ ಸ್ಥಾಪನೆಗೆ ಅವಕಾಶವನ್ನೂ ಸರ್ಕಾರ ಸೃಷ್ಟಿಸಿಕೊಡುತ್ತಿಲ್ಲ’ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Border Dispute | ಬೆಳಗಾವಿಗೆ ಕಳ್ಳ ಹೆಜ್ಜೆ ಇಟ್ಟ ಶರದ್‌ ಪವಾರ್‌ ಸಹೋದರನ ಪುತ್ರ; ವಿವಿಧ ಕಡೆ ಸಂಚಾರ, ಕನ್ನಡಿಗರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Modi 3.0 Cabinet: ಐವರು ಬಿಜೆಪಿ ಸಂಸದರು ತಕ್ಷಣವೇ ಟಿಎಂಸಿಗೆ ಹಾರಲು ರೆಡಿಯಾಗಿದ್ದರೆ, ಇನ್ನು ಕೆಲವರು ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆ ಬಳಿಕ ನಿರ್ಧರಿಸಲಿದ್ದಾರೆ ಇನ್ನು ಎನ್‌ಡಿಎಯ ಒಟ್ಟು 10 ಸಂಸದರು ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಜೊತೆ ಸಂಪರ್ಕದಲ್ಲಿದ್ದಾರೆ. ಎಂದು ಟಿಎಂಸಿ ಮೂಲಗಳು ಹೇಳಿವೆ. ಹೀಗಾಗಿ ಮಮತಾ ಬ್ಯಾನರ್ಜಿ ಹೇಳಿದಂತೆಯೇ ಕೇಂದ್ರ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ ಅನ್ನೋ ಅನುಮಾನ ಹುಟ್ಟಿಸಿದೆ.

VISTARANEWS.COM


on

Modi 3.0 Cabinet
Koo

ಕೋಲ್ಕತ್ತಾ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ(Modi 3.0 Cabinet) ಅಧಿಕಾರಕ್ಕೆ ಬರುತ್ತಿದ್ದಂತೆ ಕೇವಲ 15 ದಿನಗಳಲ್ಲಿ ಸರ್ಕಾರ ಪತನ ಆಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹೇಳಿಕೆ ಬೆನ್ನಲ್ಲೇ ಬಿಜೆಪಿಯ ಕನಿಷ್ಟ ಐವರು ಸಂಸದರು ತೃಣಮೂಲ ಕಾಂಗ್ರೆಸ್‌(TMC) ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂಬ ಶಾಕಿಂಗ್‌ ಸುದ್ದಿ ಹೊರಬಿದ್ದಿದೆ. ಪಶ್ಚಿಮ ಬಂಗಾಳ(West Bengal)ದದಲ್ಲಿ ಈ ಬಾರಿ ಚುನಾಯಿತರಾಗಿರುವ 12 ಬಿಜೆಪಿ ಸಂಸದರ ಪೈಕಿ ಐವರು ಸಂಸದರು ಶೀಘ್ರದಲ್ಲೇ ಪಕ್ಷ ತೊರೆದು ಟಿಎಂಸಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಹೊಸ ಬಾಂಬ್‌ವೊಂದನ್ನು ಟಿಎಂಸಿ ಸ್ಫೋಟಿಸಿದೆ.

ಇನ್ನು ಈ ಬಾರಿ ಸೋಲುಂಡಿರುವ ಬಿಜೆಪಿ ಅಭ್ಯರ್ಥಿಗಳು ಕೂಡ ಟಿಎಂಸಿಗೆ ಸೇರ್ಪಡೆಗೊಳ್ಳಲು ಬಯಸುತ್ತಿದ್ದಾರೆ. ಸಂಸದರ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಪಶ್ಚಿಮ ಬಂಗಾಳದಲ್ಲಿ ಈ ಮಹತ್ವದ ಬದಲಾವಣೆ ಆಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ಸಂಸದರ ಜೂನ್‌ ಮಧ್ಯದಲ್ಲಿ ಸಂಸದರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಇನ್ನು ಐವರು ಬಿಜೆಪಿ ಸಂಸದರು ತಕ್ಷಣವೇ ಟಿಎಂಸಿಗೆ ಹಾರಲು ರೆಡಿಯಾಗಿದ್ದರೆ, ಇನ್ನು ಕೆಲವರು ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆ ಬಳಿಕ ನಿರ್ಧರಿಸಲಿದ್ದಾರೆ ಇನ್ನು ಎನ್‌ಡಿಎಯ ಒಟ್ಟು 10 ಸಂಸದರು ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಜೊತೆ ಸಂಪರ್ಕದಲ್ಲಿದ್ದಾರೆ. ಎಂದು ಟಿಎಂಸಿ ಮೂಲಗಳು ಹೇಳಿವೆ. ಹೀಗಾಗಿ ಮಮತಾ ಬ್ಯಾನರ್ಜಿ ಹೇಳಿದಂತೆಯೇ ಕೇಂದ್ರ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ ಅನ್ನೋ ಅನುಮಾನ ಹುಟ್ಟಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಅವರು ನಿನ್ನೆ ಸ್ಫೋಟಕ ಭವಿಷ್ಯ ನುಡಿದಿದ್ದು, ಯಾವುದೇ ಸರ್ಕಾರವು 15 ದಿನಗಳಲ್ಲಿ ಬೇಕಾದರೂ ಪತನವಾಗಬಹುದು ಎಂಬುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತೃಣಮೂಲ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ಮಾತನಾಡಿದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ” ಎಂದು ಹೇಳಿದರು.
ಕೇಂದ್ರದಲ್ಲಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕೊನೆಗೆ ಒಂದು ದಿನ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುತ್ತದೆ. ಕೆಲವು ದಿನಗಳವರೆಗೆ ಅವರು ಅಧಿಕಾರದಲ್ಲಿ ಇರಲಿ. ಆದರೆ, ಒಂದು ನೆನಪಿರಲಿ, ಒಂದೇ ದಿನದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಏನು ಬೇಕಾದರೂ ಆಗಬಹುದು. ಯಾರಿಗೆ ಗೊತ್ತು, 15 ದಿನಗಳಲ್ಲಿ ಬೇಕಾದರೂ ಸರ್ಕಾರ ಪತನವಾಗಬಹುದು” ಎಂಬುದಾಗಿ ಎನ್‌ಡಿಎ ಸರ್ಕಾರದ ಪತನದ ಕುರಿತು ಮಮತಾ ಬ್ಯಾನರ್ಜಿ ಮಹತ್ವದ ಹೇಳಿಕೆ ನೀಡಿದ್ದಾರೆ.

ನರೇಂದ್ರ ಮೋದಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಟಿಎಂಸಿ ನಿರ್ಧರಿಸಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದರು. “ಕಾನೂನುಬಾಹಿರ ಹಾಗೂ ಪ್ರಜಾಸತ್ತಾತ್ಮಕವಲ್ಲದ ಮಾರ್ಗದ ಮೂಲಕ ಎನ್‌ಡಿಎ ಸರ್ಕಾರ ರಚಿಸುತ್ತಿದೆ. ಹಾಗಾಗಿ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಟಿಎಂಸಿ ಭಾಗವಹಿಸಲ್ಲ” ಎಂದಿದ್ದಾರೆ.

ಇದನ್ನೂ ಓದಿ:Assault case : ಮೊದಲನೇ ಹೆಂಡ್ತಿ ಮಕ್ಕಳೊಂದಿಗೆ ಬಂದು 2ನೇ ಹೆಂಡ್ತಿಗೆ ರಕ್ತ ಬರುವಂತೆ ಬಾರಿಸಿದ ಭೂಪ

Continue Reading

ದೇಶ

Modi 3.0 Cabinet: ರಾಜ್ಯದಿಂದ ಜೋಶಿ, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿಗೆ ಸಚಿವ ಸ್ಥಾನ; ಡಾ. ಮಂಜುನಾಥ್‌ಗೆ ಇಲ್ಲ ಅವಕಾಶ

Modi 3.0 Cabinet:ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತವಾಗಿದೆ. ಈ ಬಾರಿ ರಾಜ್ಯದ ಮೂರು ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದ್ದು, ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ. ಇನ್ನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಡಾ.ಮಂಜುನಾಥ್ ಅವರಿಗೆ ಲಭಿಸುವ ಸಾಧ್ಯತೆ ಎನ್ನಲಾಗಿತ್ತು. ಆದರೆ ಅವರ ಹೆಸರು ಸಂಭಾವ್ಯರ ಪಟ್ಟಿಯಲ್ಲಿಲ್ಲ.

VISTARANEWS.COM


on

Modi 3.0 Cabinet
Koo

ನವದೆಹಲಿ: ಮೂರನೇ ಬಾರಿ ಪ್ರಧಾನಿ ಪಟ್ಟ ಏರುತ್ತಿರುವ ನರೇಂದ್ರ ಮೋದಿ(Narendra Modi) ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಎಲ್ಲರಿಗೂ ಈ ಬಾರಿ ಪ್ರಧಾನಿ ಮೋದಿ ಸಂಪುಟದಲ್ಲಿ ಯಾರ್ಯಾರಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲ ಇದ್ದೇ ಇದೆ. ಈಗಾಗಲೇ ಕೆಲವು ಅಧಿಕೃತ ಮೂಲಗಳ ಪ್ರಕಾರ ಈ ಬಾರಿ ಕೇಂದ್ರ ಸಚಿವ ಸಂಪುಟ(Modi 3.0 Cabinet)ದಲ್ಲಿ ಎನ್‌ಡಿಎ ಮೈತ್ರಿಕೂಟದ 35ಮಂದಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.

ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತವಾಗಿದೆ. ಈ ಬಾರಿ ರಾಜ್ಯದ ಮೂರು ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದ್ದು, ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ. ಇನ್ನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಡಾ.ಮಂಜುನಾಥ್ ಅವರಿಗೆ ಲಭಿಸುವ ಸಾಧ್ಯತೆ ಎನ್ನಲಾಗಿತ್ತು. ಆದರೆ ಅವರ ಹೆಸರು ಸಂಭಾವ್ಯರ ಪಟ್ಟಿಯಲ್ಲಿಲ್ಲ. ಹಾಗಿದ್ದರೆ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯಾವ್ಯಾವ ನಾಯಕರ ಹೆಸರಿದೆ? ಯಾವ ಪಕ್ಷಗಳಿಗೆ ಎಷ್ಟು ಸ್ಥಾನಗಳು ಸಿಕ್ಕಿವೆ ಎಂಬುದನ್ನು ನೋಡೋಣ.

ನಾಯಕರುಪಕ್ಷ
1ರಾಜನಾಥ್ ಸಿಂಗ್ ಬಿಜೆಪಿ
2ನಿತಿನ್ ಗಡ್ಕರಿ ಬಿಜೆಪಿ
3ಅರ್ಜುನ್ ರಾಮ್ ಮೇಘವಾಲ್ ಬಿಜೆಪಿ
4 ಚಿರಾಗ್ ಪಾಸ್ವಾನ್ಎಲ್‌ಜೆಪಿ
5ಎಚ್ ಡಿ ಕುಮಾರಸ್ವಾಮಿಜೆಡಿ(ಎಸ್)
6ಸರ್ಬಾನಂದ ಸೋನೋವಾಲ್ಬಿಜೆಪಿ
7ಪ್ರಹ್ಲಾದ್ ಜೋಶಿ ಬಿಜೆಪಿ
8ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ
9ಚಂದ್ರಶೇಖರ್ ಪೆಮ್ಮಸಾನಿ TDP
10ರಾಮ್ ಮೋಹನ್ ನಾಯ್ಡು ಕಿಂಜರಾಪು TDP
11ರಾಮನಾಥ್ ಠಾಕೂರ್ JDU
12ಲಾಲನ್ ಸಿಂಗ್JDU
13ಪ್ರತಾಪ್ ರಾವ್ ಜಾಧವ್ಶಿವಸೇನೆ
14ಕೆ ಅಣ್ಣಾಮಲೈ ಬಿಜೆಪಿ
15ಅಮಿತ್ ಶಾ ಬಿಜೆಪಿ
16ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ
17ಎಂಎಲ್ ಖಟ್ಟರ್ ಬಿಜೆಪಿ
18ಚಂದ್ರಶೇಖರ ಚೌಧರಿ AJSU
19ಜಯಂತ್ ಚೌಧರಿ RJD
20ಮನ್ಸುಖ್ ಮಾಂಡವಿಯಾ ಬಿಜೆಪಿ
21ಅಶ್ವಿನಿ ವೈಷ್ಣವ್ ಬಿಜೆಪಿ
22ಪಿಯೂಷ್ ಗೋಯಲ್ ಬಿಜೆಪಿ
23ಕಿರಣ್ ರಿಜಿಜು ಬಿಜೆಪಿ
24ರಕ್ಷಾ ಖಡ್ಸೆ ಬಿಜೆಪಿ
25ಕಮಲಜೀತ್ ಸೆಹ್ರಾವತ್ ಬಿಜೆಪಿ
26ರಾವ್ ಇಂದ್ರಜಿತ್ ಸಿಂಗ್ ಬಿಜೆಪಿ
27ರಾಮದಾಸ್ ಅಠವಲೆರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ
28ಜಿತನ್ ರಾಮ್ ಮಾಂಝಿಹಿಂದೂಸ್ತಾನಿ ಆವಾಮ್ ಮೋರ್ಚಾ
29ಗಿರಿರಾಜ್ ಸಿಂಗ್ ಬಿಜೆಪಿ
30ಬಂಡಿ ಸಂಜಯ್ ಬಿಜೆಪಿ
31ಸುರೇಶ್ ಗೋಪಿಬಿಜೆಪಿ
32 ಜಿ ಕಿಶನ್ ರೆಡ್ಡಿ ಬಿಜೆಪಿ
33ಶೋಭಾ ಕರಂದ್ಲಾಜೆಬಿಜೆಪಿ
34ಹರ್ಷ್ ಮಲ್ಹೋತ್ರಾಬಿಜೆಪಿ

ಇದನ್ನೂ ಓದಿ:ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

Continue Reading

ದೇಶ

Modi 3.0 Cabinet: ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ಅಟಲ್‌ ಸಮಾಧಿಗೆ ಮೋದಿ ನಮನ

Modi 3.0 Cabinet: ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

VISTARANEWS.COM


on

Modi 3.0 Cabinet
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ನಾಯಕರು ಭಾಗಿಯಾಗಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.

ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Viral Video: ರೈಲಿನಲ್ಲಿ ಊಟ ಸೇವಿಸುವ ಮುನ್ನ ಎಚ್ಚರ…ಎಚ್ಚರ..! ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

ಸದ್ಯ ಯಾರಿಗೆಲ್ಲ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ದೊರೆಯಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

Lok Sabha Election 2024

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಇವರಿಗೆಲ್ಲ ಸಚಿವ ಸ್ಥಾನ ಫಿಕ್ಸ್?‌

Modi 3.0 Cabinet: ಇಂದು (ಜೂನ್‌ 9) ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತು ಕೇಳಿ ಬರುತ್ತಿದೆ. ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತ. 4+1 ಫಾರ್ಮುಲಾದ ಪ್ರಕಾರ ಒಟ್ಟು ಐವರು ಮೋದಿ ಸರ್ಕಾರದಲ್ಲಿ ಸಚಿವರಾಗುವ ಸಾಧ್ಯತೆ ಇದೆ.

VISTARANEWS.COM


on

Modi 3.0 Cabinet
Koo

ಬೆಂಗಳೂರು: ಬಹುಮತದೊಂದಿಗೆ ಎನ್‌ಡಿಎ (NDA) ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಇಂದು (ಜೂನ್‌ 9) ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಹಾಗಾದರೆ ಸಚಿವ ಸ್ಥಾನದ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ ಎನ್ನುವ ಮಾಹಿತಿ ಇಲ್ಲಿದೆ (Modi 3.0 Cabinet).

ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತ. 4+1 ಫಾರ್ಮುಲಾದ ಪ್ರಕಾರ ಒಟ್ಟು ಐವರು ಮೋದಿ ಸರ್ಕಾರದಲ್ಲಿ ಸಚಿವರಾಗುವ ಸಾಧ್ಯತೆ ಇದೆ. ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಸಿಗುವುದು ಪಕ್ಕಾ ಎನ್ನಲಾಗಿದೆ. ಇವರ ಜತೆಗೆ ಪ್ರಹ್ಲಾದ ಜೋಶಿ ಅವರಿಗೂ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಸಿಗಲಿದೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಚಿವರಾಗಿ ಮುಂದುವರಿಯಲಿದ್ದು, ಕರ್ನಾಟಕದ ಕೋಟಾದಲ್ಲಿ ಸಚಿವ ಸ್ಥಾನ ಫಿಕ್ಸ್ ಎನ್ನುವ ಮಾತು ಕೇಳಿ ಬಂದಿದೆ. ಇನ್ನೊಂದು ಒಂದು ಸ್ಥಾನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಡಾ.ಮಂಜುನಾಥ್ ಅವರಿಗೆ ಲಭಿಸುವ ಸಾಧ್ಯತೆ ಇದೆ.

ಮತ್ತೊಂದು ಸ್ಥಾನಕ್ಕೆ ಬಾರಿ ಪೈಪೋಟಿ ನಡೆದಿದೆ. ಬಹುತೇಕ ಮಾಜಿ ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಇದು ಒಲಿಯುವ ಸಾಧ್ಯತೆ ಇದೆ. ಈ ನಡುವೆ ನಾಲ್ಕು ಬಾರಿ ಸಂಸದರಾಗಿರುವ ಬಿ.ವೈ.ರಾಘವೇಂದ್ರ ಅವರಿಂದಲೂ ಸಚಿವ ಸ್ಥಾನ ಪಡೆಯುವ ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ. ಇನ್ನೂ ಒಂದು ಸ್ಥಾನ ಹೆಚ್ಚು ಸಿಕ್ಕಿದರೆ ಬಹುತೇಕ ದಲಿತ ಕೋಟಾದಲ್ಲಿ ಗೋವಿಂದ ಕಾರಜೋಳ ಇಲ್ಲವೇ ರಮೇಶ್ ಜಿಗಜಿಣಿಗೆ ಲಕ್ ಹೊಡೆಯಲಿದೆ ಎನ್ನುವ ಚರ್ಚೆಯೂ ಆರಂಭವಾಗಿದೆ.

ಇನ್ನು ಹಿರಿಯ ನಾಯಕರಾದ ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ವಿ.ಸೋಮಣ್ಣ ಮತ್ತು ಡಾ.ಸುಧಾಕರ್‌ ಅವರಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇಲ್ಲ. ಹೀಗಾಗಿ ಸದ್ಯ ಯಾರೆಲ್ಲ ಸಚಿವರಾಗುತ್ತಾರೆ ಎನ್ನುವ ಕುತೂಹಲ ಮುಂದುವರಿದಿದೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ.

Continue Reading
Advertisement
IND vs PAK
ಕ್ರೀಡೆ1 min ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Modi 3.0 Cabinet
ದೇಶ13 mins ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು20 mins ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ37 mins ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Niveditha Gowda chandan matters told by Prashanth Sambargi
ಸ್ಯಾಂಡಲ್ ವುಡ್48 mins ago

Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

assault Case in Bengaluru
ಬೆಂಗಳೂರು49 mins ago

Assault case : ಮೊದಲನೇ ಹೆಂಡ್ತಿ ಮಕ್ಕಳೊಂದಿಗೆ ಬಂದು 2ನೇ ಹೆಂಡ್ತಿಗೆ ರಕ್ತ ಬರುವಂತೆ ಬಾರಿಸಿದ ಭೂಪ

Puja Tomar
ಕ್ರೀಡೆ1 hour ago

Puja Tomar: ಯುಎಫ್​ಸಿ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ತೋಮರ್

road Accident
ಕಲಬುರಗಿ1 hour ago

Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

Modi 3.0 Cabinet
ದೇಶ1 hour ago

Modi 3.0 Cabinet: ರಾಜ್ಯದಿಂದ ಜೋಶಿ, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿಗೆ ಸಚಿವ ಸ್ಥಾನ; ಡಾ. ಮಂಜುನಾಥ್‌ಗೆ ಇಲ್ಲ ಅವಕಾಶ

Gold Rate Today
ಚಿನ್ನದ ದರ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌