ತೆಲಂಗಾಣ ಸಿಎಂ ಕೆಸಿಆರ್​​ಗೆ ಶೂ ಗಿಫ್ಟ್​ ಕೊಟ್ಟ ಆಂಧ್ರ ಮುಖ್ಯಮಂತ್ರಿ ಸಹೋದರಿ; ವೈ.ಎಸ್​.ಶರ್ಮಿಳಾ ಹಾಕಿದ ಸವಾಲೇನು? - Vistara News

ದೇಶ

ತೆಲಂಗಾಣ ಸಿಎಂ ಕೆಸಿಆರ್​​ಗೆ ಶೂ ಗಿಫ್ಟ್​ ಕೊಟ್ಟ ಆಂಧ್ರ ಮುಖ್ಯಮಂತ್ರಿ ಸಹೋದರಿ; ವೈ.ಎಸ್​.ಶರ್ಮಿಳಾ ಹಾಕಿದ ಸವಾಲೇನು?

ಕೊನೇ ಹಂತದ ಪ್ರಜಾ ಪ್ರಸ್ಥಾನಂ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನ ಹೈದರಾಬಾದ್​ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ವೈ.ಎಸ್​. ಶರ್ಮಿಳಾ ಕೆ.ಚಂದ್ರಶೇಖರ್​ ರಾವ್​ಗೆ ಸವಾಲೊಂದನ್ನು ಹಾಕಿದ್ದಾರೆ.

VISTARANEWS.COM


on

YS Sharmila Gives Shoes as Gift for Telangana Chief Minister KCR
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೈಎಸ್​ಆರ್​ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ.ಎಸ್​.ಶರ್ಮಿಳಾ ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಒಂದು ಸವಾಲು ಹಾಕಿದ್ದಾರೆ ಮತ್ತು ಒಂದು ಜತೆ ಶೂ ಗಿಫ್ಟ್​ ಕೊಡುವುದಾಗಿ ಹೇಳಿದ್ದಾರೆ. ಹಾಗೇ, ‘ಶೂ ಬಾಕ್ಸ್​​ನಲ್ಲಿ ಬಿಲ್​ ಕೂಡ ಹಾಗೇ ಇಟ್ಟಿದ್ದೇನೆ. ನಿಮಗೆ ಒಮ್ಮೆ ಬೂಟುಗಳ ಅಳತೆ ಸರಿ ಹೊಂದದೆ ಇದ್ದರೆ, ಈ ಬಿಲ್​ ತೋರಿಸಿ, ಬದಲಿಸಿಕೊಳ್ಳಬಹುದು’ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ರೆಡ್ಡಿ ಸಹೋದರಿ ವೈ.ಎಸ್​.ಶರ್ಮಿಳಾ ಅವರು ಸಿಎಂ ಕೆಸಿಆರ್​ ವಿರುದ್ಧ ತಿರುಗಿಬಿದ್ದಿದ್ದಾರೆ. ಕೆ.ಚಂದ್ರಶೇಖರ್​​ ಅವರ ವೈಫಲ್ಯಗಳನ್ನು ತಿಳಿಸುವ ಸಲುವಾಗಿಯೇ ತೆಲಂಗಾಣದಲ್ಲಿ ಪ್ರಜಾ ಪ್ರಸ್ಥಾನಂ ಪಾದಯಾತ್ರೆ ಕೂಡ ಹಮ್ಮಿಕೊಂಡಿದ್ದಾರೆ. ಶರ್ಮಿಳಾ ಪಾದಯಾತ್ರೆಗೆ ಕೆಲವು ಕಡೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಇದು ಹಲವು ಬಾರಿ ಪ್ರತಿಭಟನೆಗೂ ಕಾರಣವಾಗಿದೆ.

ಇದೀಗ ಕೊನೇ ಹಂತದ ಪ್ರಜಾ ಪ್ರಸ್ಥಾನಂ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನ ಹೈದರಾಬಾದ್​ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ವೈ.ಎಸ್​.ಶರ್ಮಿಳಾ ‘ನಾನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಒಂದು ಜತೆ ಶೂಗಳನ್ನು ಉಡುಗೊರೆ ಕೊಡುತ್ತಿದ್ದೇನೆ ಮತ್ತು ಒಂದು ಚಾಲೆಂಜ್​ ಮಾಡುತ್ತಿದ್ದೇನೆ. ಮತ್ತೇನಿಲ್ಲ, ಅವರೂ ನನ್ನೊಂದಿಗೆ ಪಾದಯಾತ್ರೆಯಲ್ಲಿ ಸ್ವಲ್ಪ ದೂರ ನಡೆಯಲಿ. ಈ ಶೂ ಧರಿಸಿ ನನ್ನೊಂದಿಗೆ ಮೂರು ಕಿಲೋಮೀಟರ್​​ಗಳಷ್ಟು ದೂರವಾದರೂ ಹೆಜ್ಜೆ ಹಾಕಲಿ. ಆಗಲಾದರೂ ಅವರಿಗೆ ರಾಜ್ಯದ ಜನರ ಸಂಕಷ್ಟ ಅರ್ಥವಾಗುತ್ತದೆಯೆನೋ’ ಎಂದು ಹೇಳಿದ್ದಾರೆ. ಹಾಗೇ, ನಾನು ಕೊಟ್ಟ ಶೂ ಅಳತೆ ಸರಿ ಇಲ್ಲದೆ ಇದ್ದರೆ, ಬದಲಿಸಿಕೊಳ್ಳಿ ಎಂಬ ಸಂದೇಶ ಕೊಟ್ಟು, ಮಾಧ್ಯಮಗಳ ಎದುರು ಶೂ ಪ್ರದರ್ಶಿಸಿದ್ದಾರೆ.

‘ತೆಲಂಗಾಣದಲ್ಲಿ ಕಳೆದ 9ವರ್ಷಗಳಿಂದಲೂ ನಿರಂಕುಶ ಮತ್ತು ಅಸಮರ್ಥ ಆಡಳಿತವಿದೆ. ಈ ಆಡಳಿತದಡಿಗೆ ಆಗಿ ಸಮಾಜದ ಪ್ರತಿವರ್ಗವೂ ನರಳುತ್ತಿದೆ. ರೈತರು, ಯುವಕರು, ಮಹಿಳೆಯರು, ಶಿಕ್ಷಣ ಕ್ಷೇತ್ರ ಸೇರಿ ಪ್ರತಿಯೊಬ್ಬರಿಗೂ ಕೆಸಿಆರ್​ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ರಾಜ್ಯದ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಹೇಳುತ್ತಿರುವುದು ಸುಳ್ಳು ಎಂದು ದೃಢಪಡಿಸಿದರೆ, ನಾನು ಕೆಸಿಆರ್​ ಕ್ಷಮೆ ಕೇಳಿ, ರಾಜಕೀಯದಿಂದ ಶಾಶ್ವತವಾಗಿ ನಿವೃತ್ತಿ ಪಡೆದು, ಮನೆಗೆ ಹೋಗುತ್ತೇನೆ. ಹಾಗೊಮ್ಮೆ ಜನರು ಸಂಕಷ್ಟದಲ್ಲಿ ಇರುವುದು ಸಾಬೀತಾದರೆ ಮುಖ್ಯಮಂತ್ರಿ ಕೆಸಿಆರ್​ ಅವರು ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

Rajendra Nagar Tragedy: ಶನಿವಾರ ಭೀಕರ ಮಳೆಗೆ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ. ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಕಟ್ಟಡದ ಮಾಲೀಕ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕಟ್ಟಡದ ಗೇಟ್‌ ಧ್ವಂಸ ಮಾಡಲು ಯತ್ನಿಸಿದವರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Rajendra Nagar Tragedy
Koo

ನವದೆಹಲಿ: ಭೀಕರ ಮಳೆಗೆ ದೆಹಲಿ (Delhi Floods) ತತ್ತರಿಸಿದ್ದು, ಶನಿವಾರ ರಾಜೇಂದ್ರ ನಗರದಲ್ಲಿರುವ ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ (Rau’s IAS Coaching Institute)ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Rajendra Nagar Tragedy).

ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಕಟ್ಟಡದ ಮಾಲೀಕ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕಟ್ಟಡದ ಗೇಟ್‌ ಧ್ವಂಸ ಮಾಡಲು ಯತ್ನಿಸಿದವರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರು ಭಾನುವಾರ ಐಎಎಸ್ ಕೋಚಿಂಗ್ ಸೆಂಟರ್‌ನ ಮಾಲೀಕ ಮತ್ತು ಸಂಯೋಜಕರನ್ನು ಬಂಧಿಸಿದ್ದರು. ಉಳಿದವರನ್ನು ಇಂದು ವಶಕ್ಕೆ ಪಡೆಯಲಾಗಿದೆ. ʼʼಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಸುಮ್ಮನೆ ಬಿಡುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ” ಎಂದು ಡಿಸಿಪಿ ಎಂ. ಹರ್ಷವರ್ಧನ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

“ನೆಲಮಾಳಿಗೆಯಲ್ಲಿರುವ ಗ್ರಂಥಾಲಯವು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಬಯೋಮೆಟ್ರಿಕ್ ಸಕ್ರಿಯಗೊಳಿಸಿದ್ದ ಕಾರಣ ವಿದ್ಯಾರ್ಥಿಗಳಿಗೆ ತಕ್ಷಣ ಹೊರ ಬರಲು ಸಾಧ್ಯವಾಗಲಿಲ್ಲ. ಅಲ್ಲದೆ ಪ್ರವೇಶ ಮತ್ತು ನಿರ್ಗಮನಕ್ಕೆ ಒಂದೇ ದ್ವಾರ ಇರುವುದು ಕೂಡ ದುರಂತಕ್ಕೆ ಕಾರಣವಾಗಿದೆ. ಹೀಗಾಗಿ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಸಂಸ್ಥೆಯ ಮಾಲೀಕರು ವಿಫಲರಾಗಿದ್ದಾರೆ” ಎಂದು ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿ (MCD)ಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈಗಾಗಲೇ 13 ಅಕ್ರಮ ತರಬೇತಿ ಕೇಂದ್ರಗಳಿಗೆ ಬೀಗ ಹಾಕಲಾಗಿದೆ.

ಘಟನೆ ವಿವರ

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿತ್ತು. ಇದರಿಂದಾಗಿ ಇಲ್ಲಿನ ರಾವ್ಸ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿ ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಮೃತಪಟ್ಟಿದ್ದರು.

ಇದನ್ನೂ ಓದಿ: Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

ಬೇಸ್‌ಮೆಂಟ್‌ನಲ್ಲಿ ಸಂಸ್ಥೆಯ ಲೈಬ್ರರಿ ಇದ್ದು, ಇಲ್ಲಿ ಸುಮಾರು 150-180 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡಲಾಗಿದೆ. ಲೈಬ್ರರಿಯಲ್ಲಿ ಕುಳಿತು ಓದುತ್ತಿರುವಾಗ ಚರಂಡಿ ಮೋರಿಯ ತಡೆಗೋಡೆ ಒಡೆದು ಮಳೆ ನೀರು ನುಗ್ಗಿದ ಹಿನ್ನಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಇದೀಗ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿಯನ್ನು ನಿಯಂತ್ರಿಸುವ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ಮೇಲೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಇದು ಸರ್ಕಾರ ಮತ್ತು ಪುರಸಭೆಯ ವೈಫಲ್ಯ. ಇದು ಈ ದೇಶದ ಅತ್ಯಂತ ಸಂವೇದನಾರಹಿತ ಸರ್ಕಾರ. ಇದು ವಿದ್ಯಾರ್ಥಿಗಳ ಸಾವಲ್ಲ, ಕೊಲೆ” ಎಂದು ಆರೋಪಿಸಿದೆ. ಜತೆಗೆ ವಿದ್ಯಾರ್ಥಿಗಳು ಆಹೋರಾತ್ರಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Continue Reading

ದೇಶ

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Arvind Kejriwal: ದೆಹಲಿ ಅಬಕಾರಿ ನೀತಿ ಜಾರಿ ವೇಳೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧದ ತನಿಖೆ ಪೂರ್ಣಗೊಳಿಸಿದ್ದು, ದೆಹಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದರಿಂದ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತಷ್ಟು ಸಂಕಷ್ಟ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಅಬಕಾರಿ ನೀತಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪದ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ ಭಾಗವಾಗಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಕೇಜ್ರಿವಾಲ್‌ ಅವರು ಪ್ರಮುಖ ಆರೋಪಿಯಾಗಿದ್ದು, ಹಣಕಾಸು ಅವ್ಯವಹಾರದ ಕುರಿತು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಸಿಬಿಐ ತನಿಖೆ ಅಂತ್ಯವಾದಂತಾಗಿದೆ. ಚಾರ್ಜ್‌ಶೀಟ್‌ ಆಧಾರದ ಮೇಲೆ ಕೋರ್ಟ್‌ ಮುಂದಿನ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಅರವಿಂದ್‌ ಕೇಜ್ರಿವಾಲ್‌ ಅವರನ್ನು ಆಗಸ್ಟ್‌ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ರೋಸ್‌ ಅವೆನ್ಯೂ ಕೋರ್ಟ್‌ ತಿಳಿಸಿದೆ. ಅಷ್ಟೇ ಅಲ್ಲ, ಜು.31ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೇಜ್ರಿವಾಲ್‌ ಅವರನ್ನು ಹಾಜರುಪಡಿಸುವಂತೆ ತಿಹಾರ್‌ ಜೈಲಿನ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. 

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Continue Reading

ಅಂಕಣ

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ರಾಜಮಾರ್ಗ ಅಂಕಣ: ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ.

VISTARANEWS.COM


on

mukesh bollywood ರಾಜಮಾರ್ಗ ಅಂಕಣ
Koo

ಸಹಸ್ರಮಾನದ ಬಾಲಿವುಡ್ ಗಾಯಕ ಮುಕೇಶ್ – ನೂರಾ ಒಂದರ ನೆನಪು

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆತನು ಬದುಕಿದ್ದರೆ ಮೊನ್ನೆ ಜುಲೈ 22ಕ್ಕೆ ನೂರಾ ಒಂದು ವರ್ಷಗಳು ತುಂಬಿದ ಸಂಭ್ರಮವು ಇರುತ್ತಿತ್ತು! ಇಂದು ಮುಕೇಶ್ (Mukesh) ನಮ್ಮೊಂದಿಗಿಲ್ಲ! ಆದರೆ ಆ ಗಾಯಕ (Singer) ಹಾಡಿರುವ 1300 ಮಾಧುರ್ಯದ ಹಾಡುಗಳಿವೆ! ಸಾವಿಲ್ಲದ ಹಾಡುಗಳನ್ನು ಮುಕೇಶ್ ಬಾಲಿವುಡ್ (Bollywood) ಜಗತ್ತಿನಲ್ಲಿ ಹಾಡಿ ಸೂತಕದ ಛಾಯೆ ಮೂಡಿಸಿ ಹೊರಟೇ ಹೋದರು!

ದಿಲ್ ಜಲ್ತಾ ಹೈ ತೋ ಜಲನೇ ದೋ

ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ. ಬಾಲಿವುಡ್ಡಿಗೆ ಇನ್ನೊಬ್ಬ ಮುಕೇಶ್ ಮತ್ತೆ ಹುಟ್ಟಿ ಬರಲಿ ಎಂಬ ಹಾರೈಕೆಯೊಂದಿಗೆ!

ಆವಾರಾ ಹೂಂ…ಆವಾರಾ ಹೂಂ!

ಅವನ ಪೂರ್ತಿ ಹೆಸರು ಮುಕೇಶ್ ಚಂದ್ ಮಾಥುರ್. ಹುಟ್ಟಿದ್ದು ದೆಹಲಿಯಲ್ಲಿ. ಓದಿದ್ದು ಎಸೆಸೆಲ್ಸಿ. ಉದ್ಯೋಗ ಮಾಡಿದ್ದು PWD ಇಲಾಖೆಯಲ್ಲಿ. ಅವನ ಅಕ್ಕ ಸುಂದರ ಪ್ಯಾರಿಗೆ ಸಂಗೀತ ಕಲಿಸಲು ಗುರುಗಳು ಪ್ರತೀ ದಿನ ಮನೆಗೆ ಬಂದಾಗ ಪಕ್ಕದ ಕೋಣೆಯಲ್ಲಿ ಹಾಡುಗಳನ್ನು ಗುನುಗುತ್ತ ಸಂಗೀತವನ್ನು ಕಲಿತವನು ಮುಕೇಶ್. ಅವನ ಅಕ್ಕನ ಮದುವೆಯ ರಸಮಂಜರಿಯ ವೇದಿಕೆಯಲ್ಲಿ ಆತನು ಹಾಡುವಾಗ ಕೇಳಿದ್ದ ಹಿಂದಿಯ ಖ್ಯಾತ ನಟ ಮೋತಿಲಾಲ್ ಅವನಿಗೆ ಹೇಳಿದ್ದು ‘ನೀನು ಇರಬೇಕಾದ್ದು ಇಲ್ಲಿ ಅಲ್ಲ! ನಡಿ ಮುಂಬೈಗೆ!’

ಮುಂಬೈಗೆ ಕರೆದುಕೊಂಡು ಬಂದ ಮೋತಿಲಾಲ್ ಅವರು ಅವನ ಸಂಗೀತ ಕಲಿಕೆಗೂ ಅವಕಾಶ ಮಾಡಿಕೊಟ್ಟರು.

ಅದರ ನಡುವೆ ಎರಡು ಸಿನೆಮಾದಲ್ಲಿ ಹೀರೋ ಆಗಿ ಅಭಿನಯ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದ ಮುಕೇಶ್! ಸಿನೆಮಾ ಓಡಲಿಲ್ಲ. ಅವನಿಗೆ ತಕ್ಷಣವೇ ಅರ್ಥ ಆಗಿತ್ತು, ಇದು ನನ್ನ ಕ್ಷೇತ್ರ ಅಲ್ಲ!

ಮತ್ತೆ ಅವಕಾಶ ಹುಡುಕುತ್ತ ಸ್ಟುಡಿಯೋಗಳಿಗೆ ಅಲೆದಾಟ ತಪ್ಪಲಿಲ್ಲ. ಅನಿಲ್ ಬಿಸ್ವಾಸ್ ಕಂಪೋಸ್ ಮಾಡಿದ ‘ಪೇಹ್ಲಿ ನಜರ್’ ಸಿನಿಮಾದ ಸ್ಮರಣೀಯ ಹಾಡು ‘ದಿಲ್ ಜಲ್ತಾ ಹೈ ತೋ ಜಲನೇ ದೋ’ ಮುಕೇಶ್ ಹಾಡಿದ್ದೇ ಹಾಡಿದ್ದು, ಬಂಪರ್ ಹೊಡೆಯಿತು! ಆ ಹಾಡನ್ನು ಕೇಳಿದ ಆಗಿನ ಲೆಜೆಂಡ್ ಸಿಂಗರ್ ಸೈಗಲ್ ಹೇಳಿದರಂತೆ, ‘ಈ ಹಾಡು ನಾನೇ ಹಾಡಿದ್ದಲ್ಲವಾ! ಯಾವಾಗ ಹಾಡಿದ್ದು ಎಂದು ಮರೆತುಹೋಗಿದೆ!’

ಆಗ ಅವನಿಗೆ ಅರ್ಥ ಆದದ್ದು ʼನಾನು ಅರಿವಿಲ್ಲದೆ ಸೈಗಲ್ ಅವರ ಅನುಕರಣೆಯನ್ನು ಮಾಡುತ್ತಿರುವೆ’ ಎಂದು!

ಮುಖೇಶಗೆ ಒಲಿದ ಗುರು ನೌಶಾದ್

ಅನುಕರಣೆಯಿಂದ ಹೊರಬಂದು ಅವನದ್ದೇ ವಾಯ್ಸ್ ಡೆವೆಲಪ್ ಮಾಡಲು ತರಬೇತಿ ನೀಡಿದವರು ನೌಶಾದ್ ಸಾಬ್. ಅವರನ್ನು ಮುಕೇಶ್ ಕೊನೆತನಕ ಮರೆಯಲಿಲ್ಲ. ಸಂಗೀತ ಕ್ಷೇತ್ರದಲ್ಲಿ ತಾನು ಮಾಡಿದ ಅಷ್ಟೂ ಸಾಧನೆಯನ್ನು ತನ್ನ ಗುರುವಿಗೆ ಸಮರ್ಪಣೆ ಮಾಡಿದ್ದಾನೆ ಮುಕೇಶ್.

ಚಂಚಲ್ ಶೀತಲ್ ಸರಲಾ!

ಬಾಲಿವುಡ್ಡಿನಲ್ಲಿ ಗಟ್ಟಿಯಾಗಿ ಕಾಲು ಊರುವ ಮೊದಲೇ ಆತ ಪ್ರೀತಿಯ ಬಲೆಗೆ ಬಿದ್ದಾಗಿತ್ತು. ಅವಳ ಹೆಸರು ಸರಲಾ. ಕೋಟ್ಯಾಧಿಪತಿ ಅಪ್ಪನ ಪ್ರೀತಿಯ ಒಬ್ಬಳೇ ಮಗಳು. ಇವನೋ ʼಮಾನಾ ಆಪ್ನಿ ಜೇಬ್ ಸೆ ಫಕೀರ್ ಹೆ’ ಎಂದು ಹಾಡುತ್ತಿದ್ದ ಐಡೆಂಟಿಟಿ ಇಲ್ಲದ ಹಿನ್ನೆಲೆ ಗಾಯಕ! ʼಮೈನಾ ಭೂಲೂಂಗಾ’ ಎಂದು ಹಾಡುತ್ತ ಮುಕೇಶ್ ಅವಳಿಗೆ ಮೋಡಿಯನ್ನು ಮಾಡಿದ್ದ! ʼಚಂಚಲ ಶೀತಲ್’ ಸರಲಾ ಅವನನ್ನು ಬಿಟ್ಟಿರಲು ಆಗದೇ ಒಂದು ದಿನ ʼಭಾಗ್ ಚಲೇ’ ಎಂದಳು!

ಸಾವನ್ ಕಾ ಮಹೀನಾ..

ಸರಳವಾಗಿ ಒಂದು ʼಸಾವನ ಕಾ ಮಹೀನಾ’ ಅವರು ಒಂದು ದೇವಸ್ಥಾನದಲ್ಲಿ ಮದುವೆ ಆದರು. ಕೊನೆಯವರೆಗೂ ಪ್ರೀತಿಯಿಂದ ಬಾಳಿದರು.

1945-1978ರ ಅವಧಿಯಲ್ಲಿ ಅವನು ಹಾಡಿದ್ದು 1300 ಅಮರವಾದ ಹಾಡುಗಳನ್ನು! ಅವನ ಸಮಕಾಲೀನ ಗಾಯಕರಾದ ರಫೀ ಮತ್ತು ಕಿಶೋರ್ ಕುಮಾರ್ ಅವರಿಗೆ ಹೋಲಿಸಿದರೆ ಈ ಸಂಖ್ಯೆಯು ತುಂಬಾ ಕಡಿಮೆ. ಆದರೆ ಮುಕೇಶ್ ಹಾಡಿದ ಹಾಡುಗಳು ಎಲ್ಲವೂ ಸೂಪರ್ ಹಿಟ್. ಮಾಧುರ್ಯದ ಪರಾಕಾಷ್ಠೆ!

ಶೋಕ ಗೀತೆಗಳ ಸಾಮ್ರಾಟ ಮುಕೇಶ್!

ಅವನ ಧ್ವನಿಯಲ್ಲಿ ರಫಿಯ ವೈವಿಧ್ಯತೆ ಇರಲಿಲ್ಲ. ಕಿಶೋರ್ ಕುಮಾರನ ಕಶಿಷ್ ಇರಲಿಲ್ಲ. ಆದರೆ ಒಂದು ಹಾಂಟಿಂಗ್ ಮೆಲಡಿಯು ಖಂಡಿತವಾಗಿಯು ಇರುತ್ತಿತ್ತು. ಅದರಲ್ಲಿ ಕೂಡ ಭಗ್ನಪ್ರೇಮಿಗಳಿಗೆ ಒಂದಿಷ್ಟು ಸಾಂತ್ವನ ನೀಡುವ ವಿಷಾದ ಭಾವ ಇರುತ್ತಿತ್ತು. ಅದಕ್ಕೆ ಅವನನ್ನು ‘ಶೋಕ ಗೀತೆಗಳ ಸಾಮ್ರಾಟ’ ಎಂದು ಜನರು ಕರೆದರು. ನೋವಿನಲ್ಲಿ ಅದ್ದಿ ತೆಗೆದ ಆ ಆರ್ದ್ರ ಧ್ವನಿಯು ಬೇರೆ ಯಾವ ಗಾಯಕನಲ್ಲೂ ಇರಲಿಲ್ಲ! ಒಂದು ರೀತಿಯಲ್ಲಿ ಆತನದ್ದು ನಶೆ ಏರಿಸುವ ಧ್ವನಿ ಆಗಿತ್ತು. ಶಂಕರ್ ಜೈಕಿಷನ್, ಕಲ್ಯಾಣ್ ಜಿ ಆನಂದ ಜಿ, ಸಚಿನ್ ದೇವ್ ಬರ್ಮನ್, ಖಯ್ಯಾಂ, ಸಲೀಲ್ ಚೌಧರಿ ಮೊದಲಾದ ಸಂಗೀತ ನಿರ್ದೇಶಕರು ಮುಕೇಶನ ಒಳಗಿದ್ದ ಅದ್ಭುತ ಗಾಯಕನನ್ನು ಕಡೆದು ನಿಲ್ಲಿಸಿದರು.

ಆಗಿನ ಕಾಲದಲ್ಲಿ ಸ್ಟುಡಿಯೋ ವ್ಯವಸ್ಥೆ ಹೇಗಿತ್ತು ಎಂದರೆ ಎಲ್ಲಾ ವಾದ್ಯಗಳ ಕಲಾವಿದರು ಸಾಕಷ್ಟು ರಿಹರ್ಸಲ್ ಮಾಡಿ ಲೈವ್ ಆಗಿ ನುಡಿಸಬೇಕಾಗಿತ್ತು. ಹಿನ್ನೆಲೆ ಗಾಯಕರು ರೀ ಟೇಕ್ ಮಾಡಲು ಅವಕಾಶ ಇಲ್ಲದೆ ಒಂದೇ ಉಸಿರಲ್ಲಿ ಹಾಡಿ ಮುಗಿಸಬೇಕು. ಮುಕೇಶ್ ಇಂತಹ ಸವಾಲನ್ನು ಗೆದ್ದು ಬಂದಿದ್ದವರು!

ʼಮುಕೇಶ್ ನನ್ನ ಆತ್ಮ’ ಎಂದರು ರಾಜಕಪೂರ್

ಹಿಂದಿ ಸಿನೆಮಾರಂಗದ ಮಹಾನಟ, ಶೋಮ್ಯಾನ್ ರಾಜ್ ಕಪೂರ್ ಅವರ ವ್ಯಕ್ತಿತ್ವಕ್ಕೆ ಮುಕೇಶ್ ಧ್ವನಿಯು ತುಂಬಾ ಚೆನ್ನಾಗಿಯೇ ಹೊಂದಾಣಿಕೆ ಆಗುತ್ತಿತ್ತು. ಅದರಿಂದ ಹುಟ್ಟಿ ಬಂದದ್ದು ಎವರ್ ಗ್ರೀನ್ ಆದ ನೂರಾರು ಹಾಡುಗಳು! ಆವಾರಾ, ಬರ್ಸಾತ್, ಶ್ರೀ 420, ಸಂಗಂ, ಮೇರಾ ನಾಮ್ ಜೋಕರ್, ಅನಾರಿ, ಆಗ್, ಜಿಸ್ ದೇಶ್ ಮೆ ಗಂಗಾ ಬಹತಿ ಹೈ……….. ಈ ಸಿನಿಮಾಗಳ ಹಾಡುಗಳನ್ನು ಕೇಳಿ ನೋಡಿ. ಅಂತಹ ಹಾಡುಗಳಿಗೆ ಸಾವಿಲ್ಲ. ಅದಕ್ಕಾಗಿ ಮುಂದೆ ಮುಕೇಶ್ ನಿಧನರಾದಾಗ ರಾಜಕಪೂರ್ ಹೇಳಿದ್ದು – ನಾನು ನನ್ನ ಆತ್ಮವನ್ನು ಕಳೆದುಕೊಂಡೆ!

ಕಯಿ ಬಾರ್ ಯೂ ಹಿ ದೇಖಾ ಹೈ..

ಮುಕೇಶನಿಗೆ ‘ರಜನಿ ಗಂಧಾ’ ಹಿಂದೀ ಸಿನಿಮಾದ ಹಾಡಿಗೆ ಅತ್ಯುತ್ತಮ ಗಾಯಕ ರಾಷ್ಟ್ರ ಪ್ರಶಸ್ತಿ ದೊರೆಯಿತು( ಕಯಿ ಬಾರ್ ಯೂ ಹಿ ದೇಖಾ ಹೈ). ನಾಲ್ಕು ಫಿಲ್ಮ್ ಫೇರ್ ಪ್ರಶಸ್ತಿ, ಬೆಂಗಾಲಿ ಪತ್ರಕರ್ತರ ಸಂಘದ ಮೂರು ಪ್ರಶಸ್ತಿಗಳು ಅವನಿಗೆ ದೊರೆತಿವೆ. ಇದೆಲ್ಲಕ್ಕಿಂತ ಹೆಚ್ಚಾಗಿ ಆತನ ಮೆಲಡಿ ಹಾಡುಗಳನ್ನು ಈಗಲೂ ಕೇಳುವ, ಆಸ್ವಾದಿಸುವ, ಫೀಲ್ ಮಾಡಿಕೊಳ್ಳುವ ಬಹು ದೊಡ್ಡ ಅಭಿಮಾನಿಗಳ ಪ್ರೀತಿಯು ದೊರೆತಿತು. ಮುಖೇಶನಿಗೆ ವಿದೇಶದಲ್ಲಿ ಕೂಡ ಬಹಳ ದೊಡ್ಡ ಸಂಖ್ಯೆಯ ಅಭಿಮಾನಿಗಳ ಬಳಗ ಇದೆ.

ʼದಿಲ್ ಜಲ್ತಾ ಹೈ’ ಮುಕೇಶ್ ಅವನ ಮೊದಲ ಮತ್ತು ಕೊನೆಯ ಹಾಡಾಯಿತು!

1976 ಆಗಸ್ಟ್ 27ರಂದು ಅಮೆರಿಕಾದ ಒಂದು ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಹಾಡಲು ಹೋಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮುಕೇಶ್ ಉಸಿರು ನಿಂತಿತು. ಅಲ್ಲಿ ಕೂಡಾ ಆತ ಹಾಡಿದ ಕೊನೆಯ ಹಾಡು – ದಿಲ್ ಜಲ್ತಾ ಹೈ ತೋ ಜಲನೆ ದೋ! ನೆನಪು ಮಾಡಿಕೊಳ್ಳಿ, ಅದು ಮುಕೇಶ್ ಹಾಡಿದ ಮೊದಲ ಹಾಡು ಕೂಡ ಆಗಿತ್ತು! ಉಸಿರು ನಿಂತಾಗ ಅವನಿಗೆ ಕೇವಲ 53 ವರ್ಷ ಆಗಿತ್ತು. ಮುಂದೆ ಆತನ ಮಗ ನಿತಿನ್ ಮುಕೇಶ್ ಅಪ್ಪನ ಹಾಗೆ ಹಿನ್ನೆಲೆ ಗಾಯಕರಾಗಿ ಜನಪ್ರಿಯತೆ ಪಡೆದರು.

ಮುಕೇಶನ ಹಾಡುಗಳನ್ನು ಆರಾಧಿಸುತ್ತಾ, ಅವುಗಳನ್ನು ನನಗೆ ದೊರೆತ ಎಲ್ಲಾ ಕಾಲೇಜಿನ ವೇದಿಕೆಯಲ್ಲಿ, ಸ್ಪರ್ಧೆಗಳಲ್ಲಿ ಆರ್ದ್ರವಾಗಿ ಹಾಡುತ್ತ ಇದ್ದ ನನ್ನ ಹಾಗೆ ಇರುವ ಕೋಟಿ ಕೋಟಿ ಅಭಿಮಾನಿಗಳ ಮೇಲೆ ಆತನು ದಟ್ಟವಾದ ಪ್ರಭಾವವನ್ನು ಬಿಟ್ಟು ಹೋಗಿದ್ದಾನೆ. ಆತನ ಟಾಪ್ 12 ಹಾಡುಗಳನ್ನು ಪಟ್ಟಿ ಮಾಡಿ ಇಲ್ಲಿಟ್ಟು ಅವನಿಗೆ ಶ್ರದ್ಧಾಂಜಲಿ ಕೊಡುತ್ತಿರುವೆ. ಅವನ ಸಾವಿರದ ಹಾಡುಗಳಿಗೆ ಕಿವಿ ಆಗಿ ಆಯ್ತಾ!

ಈ ಹಾಡುಗಳನ್ನೊಮ್ಮೆ ಕೇಳಿ, ನೀವು ಮುಕೇಶ್ ಫ್ಯಾನ್ ಆಗದಿದ್ದರೆ ಮತ್ತೆ ಹೇಳಿ!

1) ಹೊಂಟೋ ಪೆ ಸಚ್ಚಾಯಿ ರಹತಿ ಹೈ( ಜೀಸ್ ದೇಶ್ ಮೆ ಗಂಗಾ ಬೇಹತಿ ಹೈ)
2) ದೋಸ್ತ್ ದೋಸ್ತ್ ನಾ ರಹಾ( ಸಂಗಂ)
3) ಸಾವನ ಕಾ ಮಹೀನಾ ಪವನ್ ಕರೆ ಶೋರ್ (ಮಿಲನ್)
4) ಬಸ್ ಏಹಿ ಅಪರಾಧ್ ( ಪೆಹಾಚಾನ್)
5) ಜಾನೆ ಕಹಾನ್ ಗಯೇ ಓ ದಿನ್ (ಮೇರಾ ನಾಮ್ ಜೋಕರ್)
6) ಕಹೀನ್ ದೂರ್ ಜಬ್ ದಿನ್ ಧಲ ಜಾಯೆ ( ಆನಂದ್)
7) ಮೈ ನಾ ಭೂಲೂಂಗಾ(ರೋಟಿ ಕಪಡಾ ಔರ್ ಮಕಾನ್)
8) ಇಕ್ ದಿನ್ ಭಿಕ್ ಜಾಯೆಗಾ ( ಧರಂ ಕರಂ)
9) ಕಭೀ ಕಭಿ ಮೇರೆ ದಿಲ್ ಮೆ( ಕಭೀ ಕಭಿ)
10) ಮೇರಾ ಜೂತಾ ಹೈ ಜಪಾನಿ( ಆವಾರ)
11) ತಾಲ್ ಮಿಲೆ ನದೀ ಕೆ ಜಲ ಮೆ ( ಅನೋಖಿ ರಾತ)
12) ದಿಲ್ ತಡಪ್ ತಡಪ್ ಕೆ (ಮಧುಮತಿ)

ಸಹಸ್ರಮಾನದ ಮುಕೇಶ್ ಧ್ವನಿಗೆ ಕೋಟಿ ಪ್ರಣಾಮಗಳು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Continue Reading

ದೇಶ

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kalika Temple: ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಈಗ ದೇವಾಲಯದ ಆಡಳಿತ ಮಂಡಳಿಯು ತುಂಡುಡುಗೆ, ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಿದೆ. ಭಕ್ತರು ಆಡಳಿತ ಮಂಡಳಿಯ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

VISTARANEWS.COM


on

Kalika Temple
Koo

ಭೋಪಾಲ್:‌ ಬದಲಾದ ಕಾಲಘಟ್ಟದಲ್ಲಿ, ದೇವಾಲಯಗಳಿಗೂ ತುಂಡುಡುಗೆ ಧರಿಸಿ ಬರುವ ಭಕ್ತರ ಸಂಖ್ಯೆ ಜಾಸ್ತಿಯಾಗಿರುವ ಕಾರಣ ಭಾರತದ ಹಲವು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯಕ್ಕೆ ಆಗಮಿಸಬೇಕು ಎಂಬುದಾಗಿ ದೇವಾಲಯಗಳ ಆಡಳಿತ ಮಂಡಳಿಗಳು ಆದೇಶ ಹೊರಡಿಸಿವೆ. ಈಗ ಮಧ್ಯಪ್ರದೇಶದ (Madhya Pradesh) ರತ್ಲಾಮ್‌ನಲ್ಲಿರುವ (Ratlam), ಪ್ರಸಿದ್ಧ ಕಾಳಿಕಾ ದೇವಾಲಯವು (Kalika Temple) ಕೂಡ ವಸ್ತ್ರಸಂಹಿತೆ ಜಾರಿಗೊಳಿಸಿದ್ದು, ಭಕ್ತಾದಿಗಳು ವಿದೇಶಿ ಹಾಗೂ ತುಂಡುಡುಗೆ ಧರಿಸಿ ಬರುವಂತಿಲ್ಲ ಎಂದು ಆದೇಶಿಸಿದೆ.

ದೇವಾಲಯದ ಅರ್ಚಕ ರಾಜೇಂದ್ರ ಶರ್ಮಾ ಅವರು ವಸ್ತ್ರಸಂಹಿತೆ ಜಾರಿಗೊಳಿಸಿದ್ದಾರೆ. “ದೇವಾಲಯದ ಪಾವಿತ್ರ್ಯ ಕಾಪಾಡಲು, ಭಕ್ತರು ವಿದೇಶಿ ಹಾಗೂ ತುಂಡುಡುಗೆ, ಶಾರ್ಟ್ಸ್‌ಗಳನ್ನು ಧರಿಸಿ ಬಂದರೆ, ಅವರಿಗೆ ದೇವಾಲಯ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಇಂತಹ ಉಡುಪು ಧರಿಸಿ ಬರುವ ಯಾರಿಗೂ ದೇವಾಲಯದ ಗರ್ಭಗುಡಿ ಪ್ರವೇಶಿಸಲು ಭದ್ರತಾ ಸಿಬ್ಬಂದಿಯು ಬಿಡುವುದಿಲ್ಲ. ಅಂತಹ ಭಕ್ತಾದಿಗಳು ದೇವಾಲಯದ ಹೊರಗಿನಿಂದಲೇ ದರ್ಶನ ಪಡೆದು ಹೋಗಬೇಕಾಗುತ್ತದೆ” ಎಂಬುದಾಗಿ ಅರ್ಚಕ ತಿಳಿಸಿದ್ದಾರೆ.

ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ದೇವಾಲಯವನ್ನು ನಿರ್ಮಿಸಿದ್ದಾರೆ. ಪ್ರಸಕ್ತ ದೇವಾಲಯದ ನಿರ್ವಹಣೆಯನ್ನು ಕೋರ್ಟ್‌ ಆಫ್‌ ವಾರ್ಡ್ಸ್‌ ಕಾಯ್ದೆ ಅಡಿಯಲ್ಲಿ ಜಿಲ್ಲಾಡಳಿತವೇ ನೋಡಿಕೊಳ್ಳುತ್ತದೆ. ತಹಸೀಲ್ದಾರ್‌ ರಿಷಭ್‌ ಠಾಕೂರ್‌ ಅವರು ಕೂಡ ವಸ್ತ್ರಸಂಹಿತೆ ಕುರಿತು ಮಾತನಾಡಿದ್ದಾರೆ. “ದೇವಾಲಯದ ನಿರ್ವಹಣಾ ಸಮಿತಿಯು ಪಾಶ್ಚಿಮಾತ್ಯ ಉಡುಪುಗಳನ್ನು ನಿರ್ಬಂಧಿಸಿದೆ” ಎಂದು ಹೇಳಿದ್ದಾರೆ.

ನಿರ್ಧಾರ ಸ್ವಾಗತಿಸಿದ ಭಕ್ತರು

ಕಾಳಿಕಾ ದೇವಾಲಯದಲ್ಲಿ ಪಾಶ್ಚಿಮಾತ್ಯ ಹಾಗೂ ತುಂಡುಡುಗೆಯನ್ನು ನಿಷೇಧಿಸಿರುವ ದೇವಾಲಯ ಆಡಳಿತ ಮಂಡಳಿ ತೀರ್ಮಾನವನ್ನು ಭಕ್ತರು ಸ್ವಾಗತಿಸಿದ್ದಾರೆ. ದೇಶ-ವಿದೇಶಗಳಿಂದ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗೆ ದೇವಾಲಯಕ್ಕೂ ತುಂಡುಡುಗೆ ಧರಿಸಿ ಬರುವವರ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ, ದೇವಾಲಯವು ವಸ್ತ್ರಸಂಹಿತೆ ಜಾರಿಗೊಳಿಸಿರುವುದು ಉತ್ತಮ ನಿರ್ಧಾರವಾಗಿದೆ. ಭಕ್ತರು ಸಾಂಪ್ರದಾಯಿಕ ದಿರಸು ಧರಿಸಿ ದೇವಾಲಯಕ್ಕೆ ಆಗಮಿಸುವುದು ಉತ್ತಮ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 16 ದೇಗುಲಗಳಲ್ಲಿ ವಸ್ತ್ರಸಂಹಿತೆ; ಹರಿದ ಜೀನ್ಸ್‌, ಶಾರ್ಟ್ಸ್‌ ತೊಟ್ಟು ಹೋದರೆ ಹೆಣ್ಣುಮಕ್ಕಳಿಗಿಲ್ಲ ಪ್ರವೇಶ

Continue Reading
Advertisement
Rajendra Nagar Tragedy
ದೇಶ21 seconds ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

cm siddaramaiah mallikarjun kharge dk shivakumar
ಪ್ರಮುಖ ಸುದ್ದಿ12 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Carrie Fisher Iconic Golden Bikini Rs 1.46 Crore
ಸಿನಿಮಾ17 mins ago

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Drowned in river
ಬಾಗಲಕೋಟೆ19 mins ago

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Gold Rate Today
ಚಿನ್ನದ ದರ44 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Arvind Kejriwal
ದೇಶ52 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Dhruva Sarja``KD'' Sanjay Dutt First Look Out of
ಸ್ಯಾಂಡಲ್ ವುಡ್53 mins ago

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Actor Darshan case Vinod Raj said that he did not go to negotiations Renukaswamy family
ಕ್ರೈಂ1 hour ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ1 hour ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ18 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ20 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ22 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ23 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌