ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ? - Vistara News

ಪೆಟ್ರೋಲ್ ದರ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಕೇಂದ್ರ ಸರಕಾರ ಇತ್ತೀಚೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ತೈಲ ದರಗಳು ಇಳಿಕೆಯಾಗಿವೆ. ಹಾಗಾದರೆ ನಾನಾ ನಗರಗಳಲ್ಲಿ ಇವುಗಳ ದರ ತಿಳಿಯೋಣ

VISTARANEWS.COM


on

petrol pump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ದೇಶಾದ್ಯಂತ ಇವುಗಳ ದರ ಇಳಿಕೆಯಾಗಿದೆ. ಹಾಗಾದರೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಪ್ರತಿ ಲೀಟರ್‌ ಗೆ ಎಷ್ಟಿದೆ ಎನ್ನುವಿರಾ. ಇಲ್ಲಿದೆ ವಿವರ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101. 94 ರೂ. ಹಾಗೂ ಡೀಸೆಲ್‌ ದರ 87.89 ರೂ. ಇದೆ.

ಕಾಸರಗೋಡಿನಲ್ಲಿ ಪೆಟ್ರೋಲ್‌ ದರ 106.70 ರೂ. ಹಾಗೂ ಡೀಸೆಲ್‌ ದರ 95.60 ರೂ. ಇದೆ.

ಮುಂಬಯಿನಲ್ಲಿ ಪೆಟ್ರೋಲ್‌ ದರ 110.35 ರೂ. ಹಾಗೂ ಡೀಸೆಲ್‌ ದರ 97.28 ರೂ. ಇದೆ

ನವ ದೆಹಲಿಯಲ್ಲಿ ಪೆಟ್ರೋಲ್‌ ದರ 96. 72 ರೂ. ಹಾಗೂ ಡೀಸೆಲ್‌ ದರ 89.62 ರೂ. ಇದೆ.

ಕೋಲ್ಕೊತಾದಲ್ಲಿ ಪೆಟ್ರೋಲ್‌ ದರ 106.03 ರೂ. ಹಾಗೂ ಡೀಸೆಲ್‌ ದರ 92. 76 ರೂ. ಇದೆ.

ಚೆನ್ನೈನಲ್ಲಿ ಪೆಟ್ರೋಲ್‌ ದರ 102.63 ರೂ. ಹಾಗೂ ಡೀಸೆಲ್‌ ದರ 94.24 ರೂ. ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Petrol Price Cut: ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ₹2 ಇಳಿಕೆ; ಚುನಾವಣೆಗೂ ಮುನ್ನ ಸಿಹಿ ಸುದ್ದಿ ಕೊಟ್ಟ ಕೇಂದ್ರ

Petrol Price Cut: ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದವು.

VISTARANEWS.COM


on

Petrol, Diesel Price
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ (petrol price) ಮತ್ತು ಡೀಸೆಲ್ (Diesel Price) ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಇಳಿಕೆ (Price cut) ಮಾಡಿದೆ.

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬೆಲೆಗಳಲ್ಲಿ ಇತ್ತೀಚೆಗೆ ಕಡಿತ ಮಾಡಲಾಗಿತ್ತು. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದವು. ಅದು ಈಗ ನಿಜವಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಈ ಬೆಲೆ ಇಳಿಕೆಯಿಂದ ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಿದೆ.

ಕಳೆದ ವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, “ಜಾಗತಿಕ ಇಂಧನ ಮಾರುಕಟ್ಟೆ, ಭೌಗೋಳಿಕ ರಾಜಕೀಯ ಸವಾಲುಗಳು ಮತ್ತು ಕಂಪನಿಗಳ ಆರ್ಥಿಕ ಆರೋಗ್ಯದ ಹಿನ್ನೆಲೆಯಲ್ಲಿ ಸ್ಥಿರತೆಯ ದೃಷ್ಟಿಯಿಂದ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMCಗಳು) ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿನ ಇಳಿಕೆ ಬಗ್ಗೆ ಯೋಚಿಸಬೇಕಾಗಿದೆ” ಎಂದು ಹೇಳಿದ್ದರು.

ತೈಲ ದರ ಇಳಿಕೆಯ ನಿರೀಕ್ಷೆ ಇತ್ತು:

ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದಲ್ಲಿ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಇಳಿಸಿತ್ತು. ಆ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರ ಹೊರೆಯನ್ನು ಕಡಿಮೆ ಮಾಡಿದೆ. ಇಷ್ಟೇ ಅಲ್ಲ, ಪೆಟ್ರೋಲ್‌ (Petrol Price Cut) ಸೇರಿ ಹಲವು ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಇಳಿದಿರುವುದೂ ಪೆಟ್ರೋಲ್‌, ಡೀಸೆಲ್‌ ದರ ಇಳಿಸಲು ಪೂರಕ ವಾತಾವರಣ ಸೃಷ್ಟಿಸಿದೆ.

ದೇಶದಲ್ಲಿ ಎಲ್ಲಿಯೇ ಚುನಾವಣೆ ನಡೆದರೂ ಬೆಲೆಯೇರಿಕೆಯು ಪ್ರತಿಪಕ್ಷಗಳ ಅಸ್ತ್ರವಾಗಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿದ್ದು ಇದಕ್ಕೆ ಕಾರಣವಾಗಿದೆ. ಹಾಗಾಗಿ, ಪ್ರತಿಪಕ್ಷಗಳ ಅಸ್ತ್ರದಿಂದ ತಪ್ಪಿಸಿಕೊಳ್ಳುವುದು ಹಾಗೂ ಜನರ ಹೊರೆ ಕಡಿಮೆ ಮಾಡುವ ಮೂಲಕ ಅವರ ವಿಶ್ವಾಸ ಗಳಿಸುವುದು ಕೇಂದ್ರದ ಉದ್ದೇಶವಾಗಿದೆ. ಹಾಗಾಗಿ, ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನೂ ಇಳಿಕೆ ಮಾಡಲಾಗಿದೆ.

ಕಿಸಾನ್‌ ಸಮ್ಮಾನ್‌ ನಿಧಿ ಹೆಚ್ಚಳ?

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಂತರ ರೈತರಿಗೆ ವಾರ್ಷಿಕವಾಗಿ ನೀಡುವ 6 ಸಾವಿರ ರೂ. ಸಹಾಯಧನದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪವೂ ಕೇಂದ್ರ ಸರ್ಕಾರದ ಮುಂದಿದೆ. ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸುವ ಮೂಲಕ ಕೋಟ್ಯಂತರ ರೈತರ ಬೆಂಬಲ ಗಳಿಸುವುದು ಸರ್ಕಾರದ ತಂತ್ರವಾಗಿದೆ.

ಇದನ್ನೂ ಓದಿ: Fuel Price Cut: ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ ಆಗುತ್ತಾ? ಕೇಂದ್ರದಿಂದ ಮಹತ್ವದ ಅಪ್‌ಡೇಟ್‌

Continue Reading

ದೇಶ

ಮಾತು ತಪ್ಪದ ಸಿಎಂ ಶಿಂಧೆ; ಮಹಾರಾಷ್ಟ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿತ

ಮುಂಬೈನಲ್ಲಿ ಪೆಟ್ರೋಲ್‌ ಬೆಲೆ 111 ರೂಪಾಯಿ ಇತ್ತು. ಅದೀಗ 106.35ಕ್ಕೆ ಇಳಿಕೆಯಾಗಿದೆ. ಇದು ರಾಜ್ಯ ಸರ್ಕಾರಕ್ಕೆ ಹೊರೆಯಾದರೂ ಜನಾನುಕೂಲವೇ ನಮ್ಮ ಆದ್ಯತೆ ಎಂದು ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

VISTARANEWS.COM


on

Petrol rate hike in Pakistan by rs 10 per liter
Koo

ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಒಂದೊಳ್ಳೆ ಗಿಫ್ಟ್‌ ಕೊಟ್ಟಿದೆ. ಸಿಎಂ ಶಿಂಧೆ ಬಹುಮತ ಸಾಬೀತಾಗುತ್ತಿದ್ದಂತೆ ಮಾತೊಂದನ್ನು ಕೊಟ್ಟಿದ್ದರು. ಅದನ್ನೀಗ ಉಳಿಸಿಕೊಂಡಿದ್ದಾರೆ. ಅಂದು ವಿಧಾನಸಭೆಯಲ್ಲಿ ಮಾತನಾಡುತ್ತ ಪೆಟ್ರೋಲ್‌-ಡೀಸೆಲ್‌ ಮೇಲಿನ ತೆರಿಗೆ ಕಡಿಮೆ ಮಾಡುವುದಾಗಿ ಹೇಳಿದ್ದ ಅವರೀಗ ಅದನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಮಹಾರಾಷ್ಟ್ರಲ್ಲಿ ಪೆಟ್ರೋಲ್‌-ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಅದರ ಅನ್ವಯ ಇನ್ಮುಂದೆ ಪೆಟ್ರೋಲ್‌ ಬೆಲೆ ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್‌ ಬೆಲೆ ಲೀಟರ್‌ಗೆ 3 ರೂಪಾಯಿ ಕಡಿಮೆಯಾಗಿದೆ.

ಪೆಟ್ರೋಲ್‌ ಬೆಲೆ ಮುಂಬೈ ಮಹಾನಗರದಲ್ಲಿ ಕಳೆದ 11 ದಿನಗಳಿಂದ 111.35 ರೂಪಾಯಿ ಇತ್ತು. ಅದೀಗ ಲೀಟರ್‌ಗೆ 106.35ಕ್ಕೆ ಇಳಿದಿದೆ. ಹಾಗೇ ಡೀಸೆಲ್‌ ಬೆಲೆ 97.28 ರೂಪಾಯಿ ಇದ್ದಿದ್ದು, 94.28ಕ್ಕೆ ಇಳಿಕೆಯಾಗಿದೆ. ಈ ಮೂಲಕ ಜನರ ಮೇಲಿನ ಹೊರೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶಿವಸೇನೆ-ಬಿಜೆಪಿಯ ನೂತನ ಮೈತ್ರಿ ಸರ್ಕಾರ ಜನಾನುಕೂಲಕರ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುತ್ತದೆ. ಅದರ ಭಾಗವಾಗಿಯೇ ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿತ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರವೆಷ್ಟು?
ನವ ದೆಹಲಿ: ಪೆಟ್ರೋಲ್‌ 96.72 ರೂ.-ಡೀಸೆಲ್‌ 89.62 ರೂ.
ಮುಂಬೈ: ಪೆಟ್ರೋಲ್‌ 111.35 ರೂ. (ನಾಳೆಯಿಂದ 106.35 ರೂ.)- ಡೀಸೆಲ್‌ 97.28 ರೂ. (ನಾಳೆಯಿಂದ 94.28)
ಕೋಲ್ಕತ್ತಾ: ಪೆಟ್ರೋಲ್‌ 106.03 ರೂ.-ಡೀಸೆಲ್‌ 92.76 ರೂ.
ಚೆನ್ನೈ: ಪೆಟ್ರೋಲ್‌ 102.63 ರೂ.- ಡೀಸೆಲ್‌ 94.24 ರೂಪಾಯಿ.
ಗುವಾಹಟಿ: ಪೆಟ್ರೋಲ್‌ 96.48 ರೂ. -ಡೀಸೆಲ್‌ 84.37 ರೂ.
ಬೆಂಗಳೂರು: ಪೆಟ್ರೋಲ್‌ 101.94 ರೂ.-ಡೀಸೆಲ್‌ 87.89 ರೂ.

ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ದೇಶದಲ್ಲಿ ಪೆಟ್ರೋಲ್‌ ಬ್ಯಾನ್‌ ಆಗುತ್ತಾ? ನಿತಿನ್‌ ಗಡ್ಕರಿ ಹೇಳಿದ್ದೇನು?

Continue Reading

ಕ್ರೈಂ

ಲಷ್ಕರೆ ಉಗ್ರ ತಾಲಿಬ್‌ ಹುಸೇನ್ ಐಟಿ ಸೆಲ್‌ ಚೀಫ್‌ ಅಲ್ಲ,‌ ನಮಗೆ ಸಂಬಂಧವೇ ಇಲ್ಲ ಎಂದ ಬಿಜೆಪಿ

ಪಾಕಿಸ್ತಾನದ ಲಷ್ಕರೆ ತಯ್ಬಾ ಸಂಘಟನೆ ಜತೆ ಸಂಬಂಧ ಹೊಂದಿರುವ ಉಗ್ರ ತಾಲಿಬ್‌ ಹುಸೇನ್‌ಗೂ ಪಕ್ಷಕ್ಕೂ ಸಂಬಂಧವೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

VISTARANEWS.COM


on

Talib hussain
Koo

ನವ ದೆಹಲಿ: ಅಮರನಾಥ ಯಾತ್ರೆ ಮೇಲೆ ದಾಳಿ ಮಾಡಲು ಸಂಚು ಮಾಡುತ್ತಿದ್ದ, ಪಾಕಿಸ್ತಾನದ ಲಷ್ಕರೆ ತಯ್ಬಾ ಸಂಘಟನೆಗೆ ಸೇರಿದ ಉಗ್ರ ತಾಲಿಬ್‌ ಹುಸೇನ್‌ ಶಾಗೆ ಬಿಜೆಪಿ ಜತೆ ಸಂಬಂಧವಿದೆ ಎಂಬ ಅಂಶದ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಪಕ್ಷ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದೆ.

ತಾಲಿಬ್‌ ಹುಸೇನ್‌ ಕಾಶ್ಮೀರದ ಐಟಿ ಸೆಲ್‌ ಮುಖ್ಯಸ್ಥನಾಗಿದ್ದ ಎಂಬ ಆರೋಪವನ್ನು ಬಲವಾಗಿ ತಳ್ಳಿ ಹಾಕಿರುವ ಬಿಜೆಪಿ, ಅವನು ಐಟಿ ಸೆಲ್‌ ಮುಖ್ಯಸ್ಥನಾಗಿರಲಿಲ್ಲ ಮತ್ತು ಅವನಿಗೂ ಪಕ್ಷಕ್ಕೂ ಸಂಬಂಧವೇ ಇಲ್ಲ ಎಂದು ವಾದಿಸಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸಿ ಎಲ್ಲ ಸತ್ಯಾಂಶಗಳನ್ನು ಬಯಲಿಗೆ ತರಬೇಕು ಎಂದು ಒತ್ತಾಯಿಸಿದೆ.

ಕಾಶ್ಮೀರದ ರಜೌರಿ ಜಿಲ್ಲೆಯ ತಾಲಿಬ್‌ ಹುಸೇನ್‌ ಮತ್ತು ಪುಲ್ವಾಮಾ ಜಿಲ್ಲೆಯ ಫೈಜಲ್‌ ಅಹಮದ್‌ ಎಂಬಿಬ್ಬರನ್ನು ಭದ್ರತಾ ಪಡೆಗಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಜುಲೈ ೫ರಂದು ಬಂಧಿಸಿದ್ದು. ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ಟುಕ್ಸನ್‌ ಧೋಕ್‌ ಗ್ರಾಮದಲ್ಲಿ ಬಂಧಿತರಾದ ಅವರಿಂದ ಎರಡು ಎ.ಕೆ. ರೈಫಲ್‌ಗಳು, ಏಳು ಗ್ರೆನೇಡ್‌ಗಳು, ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿತ್ತು. ತಾಲಿಬ್‌ ಹುಸೇನ್‌ ಒಬ್ಬ ಘೋಷಿತ ಅಪರಾಧಿಯಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿತ್ತು. ಹುಸೇನ್‌ಗೆ ಲಷ್ಕರ್‌ಗೆ ಸಂಘಟನೆ ಜತೆ ಸಂಬಂಧವಿರುವುದು ಮಾತ್ರವಲ್ಲ, ಉಗ್ರ ಸಂಘಟನೆ ಆತನಿಗೆ ಡ್ರೋನ್‌ ಮೂಲಕ ಶಸ್ತ್ರಾಸ್ತ್ರಗಳನ್ನು ಒದಗಿಸಿತ್ತು ಎಂದು ಹೇಳಲಾಗಿದೆ.

ಐಟಿ ಸೆಲ್‌ ಮುಖ್ಯಸ್ಥನೇ?
ಇಂಥ ಉಗ್ರಗಾಮಿಯೊಬ್ಬ ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಸದಸ್ಯನೆಂಬ ಮಾಹಿತಿ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಅತ ಜಮ್ಮು ಪ್ರಾಂತ್ಯದ ಅಲ್ಪಸಂಖ್ಯಾತ ಮೋರ್ಚಾದ ಉಸ್ತುವಾರಿಯಾಗಿದ್ದ ಮತ್ತು ಐಟಿ ಹಾಗೂ ಸೋಷಿಯಲ್‌ ಮೀಡಿಯಾ ಸೆಲ್‌ನ್ನೂ ನೋಡಿಕೊಳ್ಳುತ್ತಿದ್ದ ಎಂಬ ಸುದ್ದಿ ಹರಡಿತ್ತು.

ಬಿಜೆಪಿ ಕೂಡಾ ಒಪ್ಪಿಕೊಂಡಿತ್ತು
ಒಂದು ಹಂತದಲ್ಲಿ ಹುಸೇನಿ ಬಿಜೆಪಿ ಸದಸ್ಯನಾಗಿದ್ದ ಎಂದು ಬಿಜೆಪಿ ಕೂಡಾ ಆರಂಭದಲ್ಲಿ ಒಪ್ಪಿಕೊಂಡಿತ್ತು. ಆದರೆ, ಬಳಿಕ ಆತ ಕೇವಲ ೧೮ ದಿನಗಳ ಕಾಲ ಸದಸ್ಯನಾಗಿದ್ದ. ಮೇ ತಿಂಗಳಲ್ಲಿ ರಾಜೀನಾಮೆ ಕೊಟ್ಟಿದ್ದಾನೆ ಎಂದು ಹೇಳಿತು. ಆದರೆ, ಅವನಿಗೆ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದ್ರ ರೈನಾ ಸ್ಪಷ್ಟಪಡಿಸಿದ್ದರು. ತಾಲಿಬ್‌ ಹುಸೇನ್‌ ಪಕ್ಷದ ಸದಸ್ಯನೇ ಆಗಿರಲಿಲ್ಲ. ಅವನು ಪತ್ರಕರ್ತನ ಸೋಗಿನಲ್ಲಿ ಬಿಜೆಪಿ ಕಚೇರಿಗೆ ಬರುತ್ತಿದ್ದರು ಎಂದು ರೈನಾ ಹೇಳಿಕೊಂಡಿದ್ದಾರೆ.

ಬಿಜೆಪಿ ನಾಯಕರೇ ಹಿಟ್‌ ಲಿಸ್ಟಲ್ಲಿದ್ದರು!

ತಾಲಿಬ್‌ ಹುಸೇನ್‌ನ ಹಿಟ್‌ ಲಿಸ್ಟ್‌ನಲ್ಲಿ ಬಿಜೆಪಿ ನಾಯಕರು ಇದ್ದರು. ಅವನು ನನ್ನ ಕಚೇರಿಗೆ ಬಂದು ವಿಡಿಯೊ ಮಾಡಿದ್ದ. ಅವುಗಳನ್ನು ಪಾಕಿಸ್ತಾನದ ಉಗ್ರ ಸಂಘಟನೆಗಳಿಗೆ ಕಳುಹಿಸಿದ್ದ. ಪತ್ರಕರ್ತನೆಂದು ಹೇಳಿಕೊಂಡು ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿದ್ದ ಎನ್ನುವುದು ರವೀಂದ್ರ ರೈನಾ ನೀಡುವ ವಿವರಣೆ.

ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಗೆ ನೋಟಿಸ್‌
ಈ ನಡುವೆ, ತಾಲಿಬ್‌ ಹುಸೇನ್‌ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ೪೮ ಗಂಟೆಗಳ ಒಳಗೆ ವಿವರ ನೀಡುವಂತೆ ಜಮ್ಮು ಮತ್ತು ಕಾಶ್ಮೀರದ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಶೇಖ್‌ ಬಶೀರ್‌ ಅವರಿಗೆ ರೈನಾ ಶೋಕಾಸ್‌ ನೋಟಿಸ್‌ ನೀಡಿದ್ದಾರೆ. ʻʻಅವರಿಗೆ ಯಾರನ್ನೇ ಅದರೂ ನೇಮಕ ಮಾಡಿಕೊಳ್ಳಲು ಅಧಿಕಾರವಿಲ್ಲ. ಪ್ರತಿಯೊಂದು ನೇಮಕವನ್ನೂ ಪಕ್ಷದ ಅಧ್ಯಕ್ಷರೇ ನಡೆಸಬೇಕುʼʼ ಎಂದು ರೈನಾ ಹೇಳಿದ್ದಾರೆ.

ಇದನ್ನೂ ಓದಿ| ಅಮರನಾಥ ಯಾತ್ರಿಕರ ಮೇಲೆ ದಾಳಿಗೆ ಸ್ಕೆಚ್‌, ಇಬ್ಬರು ಮೋಸ್ಟ್‌ ವಾಂಟೆಡ್‌ ಉಗ್ರರು ಅರೆಸ್ಟ್, ಒಬ್ಬ I love NAMO ಎಂದಿದ್ದ!

Continue Reading

ಪೆಟ್ರೋಲ್ ದರ

PETROL, DIESEL PRICE: ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್‌ ದರ

VISTARANEWS.COM


on

petrol
Koo
ಪೆಟ್ರೋಲ್‌ ಪ್ರತಿ ಲೀಟರ್‌ಗೆ ರೂ.ಗಳಲ್ಲಿ111.09
ಡೀಸೆಲ್‌ ಪ್ರತಿ ಲೀಟರ್‌ಗೆ94.79
Continue Reading
Advertisement
ಕರ್ನಾಟಕ11 mins ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ58 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ1 hour ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ2 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ2 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ2 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20243 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ3 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ3 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20243 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ10 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202411 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202411 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ17 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌