777 Charlie : ವೇಸ್ಟ್‌ ಬಾಡಿ ಚಾರ್ಲಿ ಸೂಪರ್‌ ಹೀರೊ ಆಗಿದ್ದು ಹೀಗೆ - Vistara News

ಫೋಟೊ

777 Charlie : ವೇಸ್ಟ್‌ ಬಾಡಿ ಚಾರ್ಲಿ ಸೂಪರ್‌ ಹೀರೊ ಆಗಿದ್ದು ಹೀಗೆ

777 Charlie : ಒಂದು ಕಾಲದಲ್ಲಿ ಯಾರಿಗೂ ಬೇಡವಾಗಿದ್ದ ಚಾರ್ಲಿ ಸತತ ತರಬೇತಿ ನಂತರ ಆಯಿತು ಸೂಪರ್‌ ಆಕ್ಟರ್‌.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇದನ್ನೂ ಓದಿ | 777 charlie: ಚಾರ್ಲಿಗೆ ಲಂಚ ಕೊಡುತ್ತಿದ್ದ ನಟಿ, ಶೂಟಿಂಗ್‌ ಜರ್ನಿ ನೆನಪಿಸಿಕೊಂಡ ಸಂಗೀತಾ ಶೃಂಗೇರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರವಾಸ

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ. ಈ ಎಂಟು ಅದ್ಭುತ ಹಳ್ಳಿಗಳ ಪರಿಚಯ ಇಲ್ಲಿದೆ.

VISTARANEWS.COM


on

Summer Tour
Koo

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಇದನ್ನೂ ಓದಿ: Summer Travel Fashion Tips: ಬೇಸಿಗೆ ಪ್ರವಾಸದ ವೇಳೆ ಯುವತಿಯರು ಗಮನಿಸಲೇಬೇಕಾದ 5 ಸಂಗತಿಗಳು

Continue Reading

ಪ್ರವಾಸ

Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

Jammu Tour: ಸೆಕೆಯ ತಾಪದಿಂದ ಒಂದೊಂದು ದಿನಕಳೆಯುವುದು ಕಷ್ಟ ಎನ್ನುವವರು ಜುಮ್ಮುವಿನ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ. ಇಲ್ಲಿನ ವಿಸ್ತಾರವಾದ ಕಾಡುಗಳು, ಪುರಾತನ ದೇವಾಲಯಗಳು ಹಿಮದಿಂದ ಆವೃತವಾದ ಪರ್ವತ ಶಿಖರಗಳು ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಈ ಪ್ರವಾಸಿ ತಾಣಗಳ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Jammu Tour
Koo

ಬೆಂಗಳೂರು: ಎತ್ತರದ ಹಿಮಾಲಯದ ತಪ್ಪಲಿನಲ್ಲಿರುವ ಜಮ್ಮು ತುಂಬಾ ಚಳಿಯಿಂದ ಕೂಡಿದ ಪ್ರದೇಶವಾಗಿದೆ. ಹಾಗಾಗಿ ಬೇಸಿಗೆಯಲ್ಲಿ ಬಿಸಿಲಿನ ಬೇಗೆಯಿಂದ ಬೆಂದು ಹೋದವರು ಎಸಿಯಲ್ಲಿ ಕುಳಿತು ಕಾಲ ಕಳೆಯುವ ಬದಲು ಈ ಸ್ಥಳಕ್ಕೆ ಪ್ರಯಾಣ ಬೆಳೆಸಬಹುದು. ಇಲ್ಲಿನ ವಿಸ್ತಾರವಾದ ಕಾಡುಗಳು, ಪುರಾತನ ದೇವಾಲಯಗಳು ಹಿಮದಿಂದ ಆವೃತವಾದ ಪರ್ವತ ಶಿಖರಗಳು ನಿಮ್ಮನ್ನು ಮೋಡಿ ಮಾಡುವುದಂತು ಸತ್ಯ. ಹಾಗಾಗಿ ಜಮ್ಮುವಿಗೆ ಪ್ರಯಾಣ (Jammu Tour) ಬೆಳೆಸುವವರು ಈ ಸ್ಥಳಗಳಿಗೆ ಭೇಟಿ ನೀಡಿ ಮತ್ತು ಈ ವಿಚಾರಗಳನ್ನು ತಿಳಿದುಕೊಂಡಿರಿ.

ಆಧ್ಯಾತ್ಮಿಕ ಸಾರ

ಅನೇಕ ಧರ್ಮಗುರುಗಳ ತವರೂರಾದ ಜಮ್ಮು ತನ್ನ ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ಇಸ್ಲಾಮಿಕ್ ದರ್ಗಾಗಳು ಮತ್ತು ಸಿಖ್ ಗುರುದ್ವಾರಗಳ ಜೊತೆಗೆ ಪ್ರಸಿದ್ಧ ಹಿಂದೂ ದೇವಾಲಯಗಳನ್ನು ಹೊಂದಿದೆ. ಇಲ್ಲಿನ ರಘುನಾಥ ದೇವಾಲಯದ ಸಂಕೀರ್ಣವು ಉತ್ತರ ಭಾರತದ ಅತಿದೊಡ್ಡ ದೇವಾಲಯದ ಸಂಕೀರ್ಣಗಳಲ್ಲಿ ಒಂದಾಗಿದೆ. ಇದು ಎತ್ತರದ ಗೋಪುರಗಳನ್ನು ಹೊಂದಿದೆ. ಅಲ್ಲದೇ ಇಲ್ಲಿನ ಬಾವೆ ವಾಲಿ ಮಾತಾ ದೇವಸ್ಥಾನ ಮತ್ತು ಪೀರ್ ಬಾಬಾ ದೇವಾಲಯ ಭಕ್ತರನ್ನು ಆಕರ್ಷಿಸುತ್ತದೆ.

Vaishno Devi Yatra Jammu

ದೈವಿಕ ವೈಷ್ಣೋದೇವಿ ಯಾತ್ರೆ

ತ್ರಿಕೂಟ ಬೆಟ್ಟ ಗಳಲ್ಲಿರುವ ಮಾತಾ ವೈಷ್ಣೋದೇವಿಯ ಪವಿತ್ರ ಗುಹೆಯ ದೇಗುಲಕ್ಕೆ ಚಾರಣ ಮಾಡುವುದು ಭಾರತದ ಅತ್ಯಂತ ಪೂಜ್ಯ ತೀರ್ಥಯಾತ್ರೆಗಳಲ್ಲಿ ಒಂದು ಎನ್ನಬಹುದು. ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಜನರು ಬಂದು ತಮ್ಮ ದೀರ್ಘ ಪ್ರಯಾಣದ ಮೂಲಕ ಭಕ್ತಿಯನ್ನ ಸಾರುತ್ತಾರೆ. ತೀರ್ಥಯಾತ್ರೆಯ ಸಮಯದಲ್ಲಿ ಈ ಸ್ಥಳದಲ್ಲಿ ಯಾವುದೇ ಸಮಸ್ಯೆಯಾಗುವುದನ್ನು ತಡೆಯಲು ಅಧಿಕಾರಿಗಳನ್ನು ನೀಮಿಸಲಾಗುತ್ತದೆ. ಅವರು ಭದ್ರತಾ ಕ್ರಮಗಳನ್ನು ನೋಡಿಕೊಳ್ಳುತ್ತಾರೆ.

Jammu navaratri

ಸಂಸ್ಕೃತಿ ಮತ್ತು ಹಬ್ಬಗಳು

9 ದಿನಗಳ ನವರಾತ್ರಿ ಉತ್ಸವವನ್ನು ಜಮ್ಮುವಿನಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಮೇಳಗಳನ್ನು ನಡೆಸಲಾಗುತ್ತದೆ. ಸ್ಥಳೀಯ ನೃತ್ಯಗಳು, ಸಂಗೀತ ಮತ್ತು ಕರಕುಶಲ ವಸ್ತುಗಳ ಪ್ರದರ್ಶನೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನವೆಂಬರ್ ನಲ್ಲಿ ಕಲಾಕೇಂದ್ರವು ವಾರ್ಷಿಕ ಜಮ್ಮು ಉತ್ಸವವನ್ನು ಆಯೋಜಿಸುತ್ತದೆ.

Kesar Fenni

ಫ್ಯೂಷನ್ ಆಹಾರ

ಜಮ್ಮುವಿನ ಪಾಕಪದ್ಧತಿಯು ಪಂಜಾಬ್, ಕಾಶ್ಮೀರ ಮತ್ತು ದಕ್ಷಿಣ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳ ರುಚಿಗಳನ್ನು ಹೊಂದಿರುತ್ತದೆ. ನೀವು ಇಲ್ಲಿಗೆ ಭೇಟಿ ನೀಡಿದರೆ ರಾಜ್ಮಾ-ಅಕ್ಕಿ, ಚೋಲೆ-ಪುರಿಮತ್ತು ಕುಲ್ಚಾದಂತಹ ವಿಶೇಷ ತಿಂಡಿಗಳ ರುಚಿ ಸವಿಯುವುದನ್ನು ಮರೆಯಬೇಡಿ. ಇದಲ್ಲದೇ ಫಿರ್ನಿ(ಅಕ್ಕಿ ಕಡುಬು), ಗುಡ್ ಪಾಪ್ಡಿ ಮತ್ತು ಕಳಾರಿಯಂತಹ ಭಕ್ಷ್ಯಗಳನ್ನು ಕೇಸರ್ ಗುಲ್ಶನ್‌ನ ಪ್ರಸಿದ್ಧ ಕೇಸರಿ ಚಹಾ ಅಥವಾ ಕಾಶ್ಮೀರಿ ಕಹ್ವಾದೊಂದಿಗೆ ಸವಿಯಿರಿ.

ಪ್ರಕೃತಿಯ ಅದ್ಭುತ

ಜಮ್ಮುವಿನ ಸಮೀಪದಲ್ಲಿರುವ ಪಟ್ನಿಟಾಪ್ ಗಿರಿಧಾಮವು ಬೇಸಿಗೆಯಲ್ಲಿ ಅಥವಾ ಚಳಿಗಾಲದಲ್ಲಿ ಪ್ರವಾಸಿಗರಿಗೆ ಕಾಲ ಕಳೆಯಲು ಉತ್ತಮ ಸ್ಥಳವಾಗಿದೆ. ಇಲ್ಲಿ ಪ್ಯಾರಾಗ್ಲೈಡಿಂಗ್ ಮತ್ತು ಸ್ಕೀಯಿಂಗ್ ನಂತಹ ಚಟುವಟಿಕೆಗಳನ್ನು ನೀಡಲಾಗುತ್ತದೆ. ಇಲ್ಲಿನ ಸನ್ಸಾರ್ ಮತ್ತು ಮನ್ಸಾರ್ ಸರೋವರದಲ್ಲಿ ನೀವು ಕ್ಯಾಂಪಿಂಗ್ ಮತ್ತು ಬೋಟಿಂಗ್ ಮಾಡಬಹುದು.

Badamwari Garden in Srinagar, Jammu and Kashmir

ಐತಿಹಾಸಿಕ ತಾಣಗಳು

ತಾವಿ ನದಿಯ ಮೇಲಿರುವ ಬಹು ಕೋಟೆಯು ಜಮ್ಮುವಿನ ವಿಶೇಷವಾದ ಐತಿಹಾಸಿಕ ತಾಣವಾಗಿದೆ. ಇಲ್ಲಿ ಹಲವಾರು ಹಿಂದೂ ದೇವಾಲಯಗಳಿವೆ. ಜೊತೆಗೆ ಸ್ಮಾರಕ, ಆಹಾರ ಪದಾರ್ಥಗಳವರೆಗೆ ಎಲ್ಲವನ್ನೂ ಮಾರಾಟ ಮಾಡುವಂತಹ ಅಂಗಡಿಗಳನ್ನ ಹೊಂದಿದೆ. ಇಲ್ಲಿ ಪಾಳು ಬಿದ್ದಿರುವ ಸಿಮ್ಥಾನ್ ಶಿಖರವನ್ನು ಏರಿದರೆ ಜಲಚರಗಳು ಮತ್ತು ಕಲ್ಲಿನ ಕಟ್ಟಡಗಳನ್ನು ನೋಡಬಹುದು.

Jammu

ಟ್ರಾವೆಲ್ ಪಾಯಿಂಟರ್ಸ್

ಜಮ್ಮುವಿಗೆ ಪ್ರಯಾಣಿಸಲು ಬಯಸುವವರು ದೆಹಲಿ , ಶ್ರೀನಗರ, ಮುಂಬೈ ಮತ್ತು ಅಮೃತಸರದಂತಹ ಪ್ರಮುಖ ನಗರಗಳಿಂದ ನೇರ ವಿಮಾನಗಳ ವ್ಯವಸ್ಥೆಯಿದೆ. ಹಾಗೇ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಪ್ರವಾಣಿಸುವವರಿಗೆ ಖಾಸಗಿ ಮತ್ತು ರಾಜ್ಯ ಸಾರಿಗೆ ಬಸ್ಸುಗಳ ವ್ಯವಸ್ಥೆ ಇದ್ದು, ಇವು ಹಿಮಾಚಲ ಪ್ರದೇಶದ ಹತ್ತಿರದ ಪ್ರವಾಸಿ ತಾಣಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: Travel Time: ಸಮುದ್ರದಲ್ಲೇ ಜೀವನ; ಹೊಸ ಬಗೆಯ ಅಲೆಮಾರಿ ಪ್ರವಾಸಿ ದಂಪತಿ ಇವರು!

ಜಮ್ಮುವಿಗೆ ಪ್ರಯಾಣಿಸುವವರು ನೆನಪಿಡಬೇಕಾದ ವಿಷಯಗಳು

ನೀವು ಜಮ್ಮುವಿಗೆ ಪ್ರಯಾಣ ಬೆಳೆಸುವಾಗ ನಿಮ್ಮ ಐಡಿ ಕಾರ್ಡ್ ಗಳನ್ನು ತೆಗೆದುಕೊಂಡು ಹೋಗಿ. ಹಾಗೇ ರಾತ್ರಿಯ ಸಮಯದಲ್ಲಿ ಪ್ರಯಾಣಿಸುವವರು ನಿರ್ಜನ ಪ್ರದೇಶದಲ್ಲಿ ಮತ್ತು ಮಂದ ಬೆಳಕಿರುವ ಕಾಲುದಾರಿಗಳಲ್ಲಿ ಸಾಗುವಾಗ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ. ಸಾಧಾರಣ ಉಡುಪುಗಳನ್ನು ಧರಿಸಿ. ಇಲ್ಲಿನ ಪವಿತ್ರ ಸ್ಥಳಗಳಿಗೆ ಪ್ರವೇಶಿಸುವಾಗ ನಿಮ್ಮ ಪಾದರಕ್ಷೆಗಳನ್ನು ಹೊರಗೆ ಬಿಚ್ಚಿಡಿ. ಹಾಗೇ ಯಾವುದೇ ಸ್ಥಳೀಯ ಅಥವಾ ಅಧಿಕೃತ /ಮಿಲಿಟರಿ ಸಂಸ್ಥೆಗಳ ಫೋಟೊಗಳನ್ನು ಕ್ಲಿಕ್ಕಿಸುವ ಮುನ್ನ ಅನುಮತಿ ಪಡೆಯಿರಿ.

Continue Reading

ಪ್ರವಾಸ

Summer Travel Tips: ಬೇಸಿಗೆ ರಜೆಯಲ್ಲಿ ವಿದೇಶ ಪ್ರವಾಸ ಮಾಡಬೇಕೇ? ಇಲ್ಲಿವೆ ನೋಡಿ ಪರ್ಫೆಕ್ಟ್‌ ತಾಣಗಳು!

ಶಾಂತವಾದ, ತಂಪಾದ ವಿದೇಶೀ (Summer Travel Tips) ನೆಲದಲ್ಲೊಂದಿಷ್ಟು ದಿನ ಸುತ್ತು ಹಾಕಿ ಬರುವ ಆಸಕ್ತಿಯಿರುವ ಮಂದಿಗೆ ಟಾಪ್‌ ಐದು ಜಾಗಗಳು ಇಲ್ಲಿವೆ.

VISTARANEWS.COM


on

Summer Travel
Koo

ಬೇಸಿಗೆ ಬಂದಾಕ್ಷಣ (Summer Travel Tips) ಪ್ರವಾಸಗಳ ಸುಗ್ಗಿ. ಬೇಸಿಗೆಯಲ್ಲಿ ಬಿಸಿಲ ಝಳವನ್ನು ತಪ್ಪಿಸಿ, ನಿತ್ಯದ ಅದೇ ಜಂಜಾಟವನ್ನು ಮರೆತು ಒಂದಿಷ್ಟು ದಿನ ಎಲ್ಲಾದರೂ ಹೋಗಿ ಬರೋಣ ಎಂದು ಎಲ್ಲರಿಗೂ ಅನಿಸುವುದುಂಟು. ಮಕ್ಕಳು ಮರಿಗಳಿರುವ ಹೆತ್ತವರಿಗೆ ಬೇಸಿಗೆ ರಜೆಯಲ್ಲಿ ಎಲ್ಲಾದರೂ ಹೋಗಿ ಬರುವ ತವಕ. ಹೀಗೆ ಬಹುತೇಕ ಎಲ್ಲರೂ ಪ್ರವಾಸ ಬಯಸುವ ಕಾಲ ಎಂದರೆ ಅದು ಬೇಸಿಗೆ ಕಾಲ. ಇಂಥ ಬೇಸಿಗೆಯಲ್ಲಿ ವಿದೇಶೀ ಪ್ರವಾಸವೂ ಕೂಡ ಸಾಕಷ್ಟು ಮಂದಿಯ ಕನಸು. ಶಾಂತವಾದ, ತಂಪಾದ ವಿದೇಶೀ ನೆಲದಲ್ಲೊಂದಿಷ್ಟು ದಿನ ಸುತ್ತು ಹಾಕಿ ಬರುವ ಆಸಕ್ತಿಯಿರುವ ಮಂದಿಗೆ ಟಾಪ್‌ ಐದು ಜಾಗಗಳು ಇಲ್ಲಿವೆ. ಇವೆಲ್ಲವೂ ಬೇಸಿಗೆಯಲ್ಲಿ ಹೋಗಿ ಬರಬಹುದಾದ ಪರ್ಫೆಕ್ಟ್‌ ತಾಣಗಳು.

Zermatt, Switzerland

ಝರ್ಮಾಟ್‌, ಸ್ವಿಜರ್‌ಲ್ಯಾಂಡ್

ಝರ್ಮಾಟ್‌ ಎಂಬ ಪುಟ್ಟ ಪಟ್ಟಣ ಸ್ವಿಜರ್‌ಲ್ಯಾಂಡಿನ ಆಲ್ಫ್ಸ್‌ ಪರ್ವತ ಶ್ರೇಣಿಗಳ ಮಧ್ಯದಲ್ಲಿದೆ. ಹಾಗಾಗಿಯೇ ಈ ಪಟ್ಟಣ ಸ್ಕೀಯಿಂಗ್‌, ಚಾರಣ, ಕೇಬಲ್‌ ಕಾರ್‌ ಪಯಣ ಸೇರಿದಂತೆ ಹಲವು ಸಾಹಸಮಯ ಚಟುವಟಿಕೆಗಳಿಗೆ ಪ್ರಸಿದ್ಧ ತಾಣ. ಮನಮೋಹಕ ಹುಲ್ಲುಗಾವಲು, ಹಿಮಪರ್ವತ ಸಾಲು, ಪಟ್ಟಣದ ಜೀವನಕ್ರಮ, ಸುಮ್ಮನೆ ನಡೆಯಲು ಬೇಕಾದಷ್ಟು ಜಾಗ ಎಲ್ಲವೂ ಈ ಪಟ್ಟಣವನ್ನು ಪ್ರವಾಸಿಗರ ಕನಸಿನ ತಾಣವನ್ನಾಗಿಸಿದೆ. ಜೂನ್‌ ತಿಂಗಳಿಂದ ಸೆಪ್ಟೆಂಬರ್‌ ಇಲ್ಲಿಗೆ ಭೇಟಿ ಕೊಡಲು ಪ್ರಶಸ್ತ ಸಮಯ. ಝೂರಿಚ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ಜಿನೀವಾ ವಿಮಾನ ನಿಲ್ದಾಣದಿಂದ ಇಲ್ಲಿಗೆ ರೈಲಿನಲ್ಲಿ ಹೋಗಬಹುದು. ವೆಚ್ಚ (ಉಳಿದುಕೊಳ್ಳಲು ಹಾಗೂ ಊಟೋಪಚಾರ): ಸುಮಾರು 1.8 ಲಕ್ಷ ರೂಪಾಯಿಗಳು (ಒಂದು ವಾರದ ಪ್ರವಾಸಕ್ಕೆ)

Bali, Indonesia

ಬಾಲಿ, ಇಂಡೋನೇಷ್ಯಾ

ಹನಿಮೂನಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಬಾಲಿ ಬೇಸಿಗೆಯಲ್ಲಿ ಪಯಣಿಸಬಹುದಾದ ಅತ್ಯಂತ ಸುಂದರ ತಾಣ. ಇಂಡೋನೇಷ್ಯಾದ ಪ್ರಕೃತಿ ಸೌಂದರ್ಯ, ದೇವಾಲಯಗಳು, ಸಾಂಸ್ಕೃತಿ ಉತ್ಸವಗಳು ಎಲ್ಲವೂ ಪ್ರವಾಸಿಗರ ಕಣ್ಣಿಗೆ ಹಬ್ಬ. ಸಾವಿರಾರು ಮಂದಿ ಇಲ್ಲಿನ ಸ್ಪಾ ಟ್ರೀಟ್‌ಮೆಂಟ್‌ಗಳಿಗಾಗಿಯೂ ಬರುತ್ತಾರೆ. ಬಾಲಿ ಸಫಾರಿ, ಮರೈನ್‌ ಪಾರ್ಕ್‌ ಭೇಟಿ, ಬಗೆಬಗೆಯ ಜಲಕ್ರೀಡೆಗಳು ಇಲ್ಲಿನ ಪ್ರವಾಸದ ಪ್ರಮುಖ ಆಕರ್ಷಣೆಗಳು. ಮೇ ತಿಂಗಳಿಂದ ಜುಲೈವರೆಗೆ ಇಲ್ಲಿಗೆ ಭೇಟಿ ಕೊಡಲು ಸಕಾಲ. ಏಳು ದಿನದ ಪ್ರವಾಸದಲ್ಲಿ ಉಳಿದುಕೊಳ್ಳಲು ಹಾಗೂ ಊಟೋಪಚಾರಕ್ಕಾಗಿ ಒಬ್ಬರಿಗೆ ಸುಮಾರು ಕನಿಷ್ಟ 35,000 ರೂಪಾಯಿಗಳು ಖರ್ಚಾಗಬಹುದು.

Pokhara, Nepal

ಪೊಖಾರಾ, ನೇಪಾಳ

ನೇಪಾಳದ ಅದ್ಭುತ ಸೌಂದರ್ಯದ ಊರುಗಳಲ್ಲಿ ಪೊಖಾರಾ ಕೂಡಾ ಒಂದು. ಇಲ್ಲಿಂದ ಕಾಣುವ ಹಿಮಾಲಯದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು, ಬೌದ್ಧಸ್ತೂಪಗಳು, ದೇವಾಲಯಗಳು ಹೀಗೆ ನೇಪಾಳದ ಸಂಸ್ಕೃತಿಯನ್ನು ಕಾಣಲು ಪೊಖಾರಾ ಉತ್ತಮ ಜಾಗ. ಇಲ್ಲಿನ ಪ್ಯೂ ಸರೋವರದಲ್ಲಿ ಬೋಟಿಂಗ್, ಮಚುಪುಚರೇ ಶಿಖರ ದರ್ಶನ, ಝಿಪ್‌ ಲೈನಿಂಗ್‌, ಹಿಮಾಲಯದಲ್ಲಿ ಚಾರಣ, ಬಂಜೀ ಜಂಪಿಂಗ್ ಇತ್ಯಾದಿಗಳನ್ನೂ ಸಮಯವಿದ್ದರೆ ಮಾಡಬಹುದು. ಏಪ್ರಿಲ್‌ನಿಂದ ಜೂನ್‌ ತಿಂಗಳಲ್ಲಿ ಇಲ್ಲಿಗೆ ಭೇಟಿ ಕೊಡಬಹುದು.‌ ಒಬ್ಬರಿಗೆ ಏಳು ದಿನದ ಪ್ರವಾಸದಲ್ಲಿ ಉಳಿದುಕೊಳ್ಳಲು ಹಾಗೂ ಊಟೋಪಚಾರಕ್ಕಾಗಿ ಸುಮಾರು ಕನಿಷ್ಠ 10,000 ರೂಪಾಯಿಗಳು ಖರ್ಚಾಗಬಹುದು.

Hamburg, Germany

ಹ್ಯಾಂಬರ್ಗ್‌, ಜರ್ಮನಿ

ಜರ್ಮನಿಯ ಹ್ಯಾಂಬರ್ಗ್‌ ನಗರ ಪ್ರಸಿದ್ಧ ಬೇಸಿಗೆಯ ಪ್ರವಾಸೀ ತಾಣಗಳ ಪೈಕಿ ಒಂದಾಗಿದೆ. 19ನೇ ಶತಮಾನದಲ್ಲಿ ನಿರ್ಮಾಣವಾದ ಈ ನಗರದ ವಾಸ್ತುಶಿಲ್ಪ, ಬೀದಿಗಳು, ಸಂಸ್ಕೃತಿ ಎಲ್ಲವೂ ಕೂಡಾ ಹೊಸ ಪರಿಚಯವನ್ನೇ ಮಾಡಿಸುತ್ತದೆ. ಮುಖ್ಯವಾಗಿ ಇಲ್ಲಿನ ಬೀಯರ್‌ಗಳು, ಅವುಗಳನ್ನು ತಯಾರು ಮಾಡುವ ಮನೆಗಳು, ಉದ್ಯಮ ಎಲ್ಲವೂ ನೋಡಬೇಕಾದಂಥದ್ದೇ. ಏಳು ದಿನದ ಪ್ರವಾಸದಲ್ಲಿ ಉಳಿದುಕೊಳ್ಳಲು ಹಾಗೂ ಊಟೋಪಚಾರಕ್ಕಾಗಿ ಒಬ್ಬರಿಗೆ ಸುಮಾರು ಕನಿಷ್ಠ 52,000 ರೂಪಾಯಿಗಳು ಖರ್ಚಾಗಬಹುದು.

Whistler, Canada

ವಿಸ್ಲರ್‌, ಕೆನಡಾ

ಸಮುದ್ರ ತೀರದ ಈ ಪಟ್ಟಣ ಪ್ರಕೃತಿ ಸೌಂದರ್ಯವನ್ನು ಇಷ್ಟಪಡುವ ಮಂದಿಗೆ ಹೇಳಿ ಮಾಡಿಸಿದ ಪಟ್ಟಣ. ಬೆಟ್ಟಗುಡ್ಡಗಳಲ್ಲಿ ಚಾರಣ, ವನ್ಯಧಾಮಗಳಲ್ಲಿ ಸಫಾರಿ, ಕಲೆ ಸಂಸ್ಕೃತಿಗಳ ಪರಿಚಯ ಇತ್ಯಾದಿಗಳನ್ನು ನೋಡಿ ಅನುಭವಿಸಲು ಇಷ್ಟವಿರುವ ಮಂದಿ ಈ ಊರನ್ನು ತುಂಬಾ ಇಷ್ಟಪಡಬಹುದು. ಜೂನ್‌ನಿಂದ ಆಗಸ್ಟ್‌ ತಿಂಗಳ ಸಮಯ ಇಲ್ಲಿಗೆ ಭೇಟಿ ಕೊಡಲು ಅತ್ಯಂತ ಪ್ರಶಸ್ತ. ಒಂದು ಶಿಖರದಿಂದ ಇನ್ನೊಂದಕ್ಕೆ ಇರುವ ಗೊಂಡೋಲಾ ರೈಡ್‌, ಆರ್ಟ್‌ ಮ್ಯೂಸಿಯಂಗಳು, ಪುರಾತನ ಕಟ್ಟ್ಡಗಳ ಸೌಂದರ್ಯವನ್ನು ವೀಕ್ಷಿಸುತ್ತಾ ಇಲ್ಲಿ ಸಮಯ ಕಳೆಯಬಹುದು. ಏಳು ದಿನದ ಪ್ರವಾಸದಲ್ಲಿ ಉಳಿದುಕೊಳ್ಳಲು ಹಾಗೂ ಊಟೋಪಚಾರಕ್ಕಾಗಿ ಒಬ್ಬರಿಗೆ ಸುಮಾರು ಕನಿಷ್ಠ 60,000 ರೂಪಾಯಿಗಳು ಖರ್ಚಾಗಬಹುದು.

Continue Reading

ಗಣೇಶ ಚತುರ್ಥಿ

Top 10 Ganesh Temple In India: ಒಮ್ಮೆ ನೋಡಲೇಬೇಕಾದ ದೇಶದ ಪ್ರಸಿದ್ಧ ಗಣೇಶ ಮಂದಿರಗಳಿವು

ಆದಿ ಪೂಜಿತನಾಗಿರುವ ಗಣೇಶನಿಗೆಂದು ನಮ್ಮ (Top 10 Ganesh Temple In India) ದೇಶದಲ್ಲಿ ಲಕ್ಷಾಂತರ ದೇವಸ್ಥಾನಗಳಿವೆ. ಅವುಗಳಲ್ಲಿ ಕೆಲವು ದೇವಸ್ಥಾನಗಳು ಅನನ್ಯವಾಗಿವೆ. ಅಂಥ ಹತ್ತು ಗಣೇಶ ಮಂದಿರಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

Top 10 Ganesh Temple In India
Koo

ಗಣಪತಿ ಹಬ್ಬ ಇನ್ನೇನು ಬಂದೇಬಿಟ್ಟಿತು. ಗಣಪತಿಯನ್ನು (Top 10 Ganesh Temple In India) ಪ್ರತಿಷ್ಠಾಪಿಸಿ, ಪೂಜಿಸಲೆಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ಹಲವರು ತಮ್ಮ ಪ್ರೀತಿಯ ಗಣಪತಿಯ ಆಗಮನಕ್ಕೆಂದು ಭರ್ಜರಿ ತಯಾರಿಯನ್ನೇ ನಡೆಸಿಕೊಳ್ಳುತ್ತಿದ್ದಾರೆ. ಅಂದ ಹಾಗೆ ನಮ್ಮ ದೇಶದಲ್ಲಿ ಆದಿ ಪೂಜಿತನಾಗಿರುವ ಗಣೇಶನಿಗೆಂದು ಲಕ್ಷಾಂತರ ದೇವಸ್ಥಾನಗಳಿವೆ. ಅದರಲ್ಲಿ ಅತ್ಯಂತ ಪ್ರಸಿದ್ಧವಾದ ಕೆಲವು ಗಣಪತಿ ದೇವಸ್ಥಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

Siddhivinayak Temple, Mumbai

ಸಿದ್ಧಿವಿನಾಯಕ ದೇವಸ್ಥಾನ, ಮುಂಬೈ

ಈ ದೇವಸ್ಥಾನ ಮಹಾರಾಷ್ಟ್ರದ ರಾಜಧಾನಿ ಮುಂಬೈನ ಪ್ರಭಾದೇವಿಯಲ್ಲಿದೆ. ಈ ಮಂದಿರಕ್ಕೆ ಸುಮಾರು 200 ವರ್ಷಗಳಷ್ಟು ಇತಿಹಾಸವಿದೆ. ಈ ದೇಗುಲದಲ್ಲಿ ಗಣೇಶನ ಅಕ್ಕಪಕ್ಕದಲ್ಲಿ ರಿದ್ಧಿ ಮತ್ತು ಸಿದ್ಧಿ ದೇವರನ್ನು ಪ್ರತಿಷ್ಠಾಪಿಸಲಾಗಿದೆ. ನಿತ್ಯ ಸಹಸ್ರಾರು ಭಕ್ತರು ಈ ಮಂದಿರಕ್ಕೆ ಭೇಟಿ ನೀಡುತ್ತಾರೆ. ಇಲ್ಲಿಗೆ ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಆಗಾಗ ಭೇಟಿ ನೀಡುತ್ತಿರುತ್ತಾರೆ.
ದೇಗುಲದ ಸಮಯ
ಬೆಳಗ್ಗೆ 5ರಿಂದ ರಾತ್ರಿ 9

Ganpatipule Temple, Ratnagiri

ಗಣಪತಿಪುಲೆ ದೇವಸ್ಥಾನ, ರತ್ನಗಿರಿ

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಗಣಪತಿಪುಲೆ ದೇವಸ್ಥಾನವಿದೆ. ಈ ದೇವಸ್ಥಾನವನ್ನು 400 ವರ್ಷಗಳ ಹಿಂದೆ ಸ್ಥಾಪಿಸಲಾಯಿತು. ಈ ದೇವಸ್ಥಾನ ಪಶ್ಚಿಮ ದಿಕ್ಕಿಗೆ ಮುಖ ಮಾಡಿದ್ದು, ಗಣಪತಿ ದೇವರು ಪಶ್ಚಿಮ ಘಟ್ಟವನ್ನು ಕಾಪಾಡುತ್ತಿದ್ದಾರೆ ಎಂದು ನಂಬಲಾಗಿದೆ. ಈ ದೇವಸ್ಥಾನಕ್ಕೆ ಹಿಂದೆ ಹಸಿರಿನ ಬೆಟ್ಟಗಳನ್ನು ನೀವು ಕಾಣಬಹುದು. ದೇಗುಲದಲ್ಲಿ ಮುಂಜಾನೆ 5, ಮಧ್ಯಾಹ್ನ 12 ಮತ್ತು ಸಂಜೆ 7 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುತ್ತದೆ.
ದೇಗುಲದ ಸಮಯ
ಬೆಳಗ್ಗೆ 5ರಿಂದ ರಾತ್ರಿ 9

Kanhipakam Vinayaka Temple, Chittoor

ಕಾಣಿಪಾಕಂ ವಿನಾಯಕ ದೇವಸ್ಥಾನ, ಚಿತ್ತೂರು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಹುದಾ ನದಿ ದಡದಲ್ಲಿ ಕಾಣಿಪಾಕಂ ವಿನಾಯಕ ದೇವಸ್ಥಾನವಿದೆ. ಈ ದೇಗುಲವನ್ನು 11ನೇ ಶತಮಾನದ ಆರಂಭದಲ್ಲಿ ಚೋಳರ ರಾಜ ಕಟ್ಟಿದ್ದರು ಎಂದು ಹೇಳಲಾಗಿದೆ. ಈ ದೇವಸ್ಥಾನದ ಮೂರ್ತಿಯ ಎತ್ತರ ಕ್ರಮೇಣವಾಗಿ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ನಂಬುತ್ತಾರೆ. ಇದು ದೇಶದ ಅತ್ಯಂತ ಸುಂದರವಾದ ಗಣಪತಿ ದೇವಾಲಯಗಳಲ್ಲಿ ಒಂದು ಎಂದು ಬಣ್ಣಿಸಲಾಗಿದೆ.
ದೇಗುಲದ ಸಮಯ
ಬೆಳಗ್ಗೆ 5ರಿಂದ ರಾತ್ರಿ 9

Moti Dungri Ganesh Temple, Jaipur

ಮೋತಿ ಡುಂಗ್ರಿ ಗಣೇಶ ದೇವಸ್ಥಾನ, ಜೈಪುರ

ಈ ದೇವಸ್ಥಾನವನ್ನು ಜೈಪುರದ ಮೋತಿ ಡುಂಗ್ರಿಯ ಬೆಟ್ಟಗಳ ನಡುವೆ 17ನೇ ಶತಮಾನದಲ್ಲಿ ನಿರ್ಮಿಸಲಾಯಿತು. ಸೀಥ್‌ ಜೈರಾಮ್‌ ಪೈಲ್ವಾನ್‌ ಮತ್ತು ಮಹಂತ್‌ ಶಿವ್‌ ನಾರಾಯಣ್ ಅವರು ಈ ದೇವಸ್ಥಾನವನ್ನು ನಿರ್ಮಿಸಿದರು. ಈ ದೇಗುಲ ನಿರ್ಮಾಣಕ್ಕೆ ನಾಲ್ಕು ವರ್ಷಗಳ ತಗುಲಿತು. 1761ರಲ್ಲಿ ದೇವಸ್ಥಾನ ಸಂಪೂರ್ಣವಾಗಿ ನಿರ್ಮಾಣವಾಯಿತು.
ದೇವಸ್ಥಾನದ ಸಮಯ
ಮುಂಜಾನೆ 4.30ರಿಂದ ಮಧ್ಯಾಹ್ನ 11.30
ಸಂಜೆ 5.45ರಿಂದ ರಾತ್ರಿ 9.00

Manakula Vinayagar Temple, Pondicherry

ಮನಕುಲ ವಿನಯಗರ್ ದೇವಸ್ಥಾನ, ಪುದುಚೆರಿ

ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪುದುಚೆರಿಯಲ್ಲಿ ಮನಕುಲ ವಿನಯಗರ್ ದೇವಸ್ಥಾನವಿದೆ. ಈ ಪ್ರದೇಶದಲ್ಲಿ ಇದನ್ನು ಅತ್ಯಂತ ಹಳೆಯ ದೇವಸ್ಥಾನ ಎಂದು ಕರೆಯಲಾಗುತ್ತದೆ. ಇದಕ್ಕೆ ಸುಮಾರು 500 ವರ್ಷಗಳ ಇತಿಹಾಸವಿದೆ. ಈ ದೇವಸ್ಥಾನದಲ್ಲಿ ನೃತ್ಯದ ಭಂಗಿಯಲ್ಲಿರುವ ಗಣೇಶನ ಮೂರ್ತಿಯಿರುವುದು ವಿಶೇಷ.
ದೇವಸ್ಥಾನದ ಸಮಯ
ಮುಂಜಾನೆ 5.45ರಿಂದ ಮಧ್ಯಾಹ್ನ 12.30
ಸಂಜೆ 4ರಿಂದ ರಾತ್ರಿ 9.30

Ranthambore Ganesha Temple, Rajasthan

ರಣಥಂಬೋರ್‌ ಗಣೇಶ ದೇಗುಲ, ರಾಜಸ್ಥಾನ

ರಾಜಸ್ಥಾನದಲ್ಲಿನ ಪ್ರಸಿದ್ಧ ಗಣೇಶ ದೇವಸ್ಥಾನವೆಂದರೆ ಅದು ರಣಥಂಬೊರ್ ಗಣೇಶ ದೇವಸ್ಥಾನ. ಕ್ರಿ.ಶ.1300ರಲ್ಲಿ ರಾಜ ಹಮ್ಮೀರ ಈ ದೇವಸ್ಥಾನವನ್ನು ನಿರ್ಮಿಸಿದನು. ಈ ದೇವಸ್ಥಾನಕ್ಕೆ ತೆರಳಬೇಕೆಂದರೆ ನೀವು 250 ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕು. ಈ ದೇವಸ್ಥಾನಕ್ಕೆ ಪ್ರಪಂಚದಾದ್ಯಂತದಿಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ. ನೋಡಲೇಬೇಕಾದ ಅಪರೂಪದ ದೇವಸ್ಥಾನ ಇದು.
ದೇವಸ್ಥಾನದ ಸಮಯ
ಬೆಳಗ್ಗೆ 6ರಿಂದ ರಾತ್ರಿ 8

Rockfort Ucchi Pillayar Koil Temple, Tamil Nadu

ರಾಕ್‌ಫೋರ್ಟ್‌ ಉಚ್ಚಿ ಪಿಲ್ಲಯಾರ್‌ ಕೊಯ್ಲ್‌ ದೇವಸ್ಥಾನ, ತಮಿಳುನಾಡು

ತಮಿಳುನಾಡಿನ ತಿರುಚಿ ಜಿಲ್ಲೆಯ ರಾಕ್‌ಫೋರ್ಟ್‌ನಲ್ಲಿ ಈ ದೇವಸ್ಥಾನ ಕಾಣಸಿಗುತ್ತದೆ. ಈ ದೇವಸ್ಥಾನವನ್ನು 7ನೇ ಶತಮಾನದಲ್ಲಿ ಪಲ್ಲವರು ನಿರ್ಮಿಸಿದರು. ಈ ದೇವಸ್ಥಾನವು 273 ಅಡಿ ಎತ್ತರದ ಕಲ್ಲಿನ ಮೇಲಿದೆ. 437 ಮೆಟ್ಟಿಲುಗಳನ್ನು ಹತ್ತಿ ದೇವಸ್ಥಾನ ತಲುಪಬೇಕು. ಇಲ್ಲಿ ನೂರು ಕಂಬಗಳಿರುವ ದೊಡ್ಡ ಸಭಾಂಗಣವೂ ಇದ್ದು, ತಮಿಳುನಾಡಿನಾದ್ಯಂತ ಈ ದೇಗುಲಕ್ಕೆ ಭಕ್ತರಿದ್ದಾರೆ.
ದೇಗುಲದ ಸಮಯ
ಬೆಳಗ್ಗೆ 5.30ರಿಂದ ಮಧ್ಯಾಹ್ನ 12
ಸಂಜೆ 4ರಿಂದ ರಾತ್ರಿ 9

Mustard and kadalekalu Ganesha Temple, Hampi

ಸಾಸಿವೆಕಾಳು ಮತ್ತು ಕಡಲೆಕಾಳು ಗಣೇಶ ದೇವಸ್ಥಾನ, ಹಂಪಿ

ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಯಲ್ಲಿ ಸಾಸಿವೆಕಾಳು ಮತ್ತು ಕಡಲೆಕಾಳು ಗಣೇಶನ ದೇವಸ್ಥಾನವಿದೆ. ಇಲ್ಲಿನ ಗಣೇಶ ದೇವಸ್ಥಾನವನ್ನು ಕ್ರಿ.ಶ. 1500ರಲ್ಲಿ ನಿರ್ಮಿಸಲಾಯಿತು. ಇದರಲ್ಲಿ ಅತಿ ಎತ್ತರದ ಗಣೇಶನ ಮೂರ್ತಿಯಿದ್ದು, ಯುನೆಸ್ಕೋ ಈ ಸ್ಥಳವನ್ನು ವಿಶ್ವ ಪಾರಂಪರಿಕ ಸ್ಥಳ ಎಂದು ಗುರುತಿಸಿದೆ. ವಿಜಯನಗರ ಸಾಮ್ರಾಜ್ಯದ ರಾಜ ನರಸಿಂಹ 2 ಈ ದೇಗುಲವನ್ನು ನಿರ್ಮಿಸಿದನು ಎಂಬ ದಾಖಲೆ ಇದೆ.
ದೇವಸ್ಥಾನದ ಸಮಯ
ಬೆಳಗ್ಗೆ 6ರಿಂದ ಸಂಜೆ 6

Karpaga Vinayagar Temple, Pillaiyarpatti, Tamil Nadu

ಕರ್ಪಗ ವಿನಯಗರ ದೇವಸ್ಥಾನ, ಪಿಳ್ಳಯಾರ್‌ಪಟ್ಟಿ, ತಮಿಳುನಾಡು

ತಮಿಳುನಾಡಿನ ಪಿಳ್ಳಯಾರ್‌ಪಟ್ಟಿಯಲ್ಲಿ ಈ ದೇವಸ್ಥಾನವಿದೆ. ಈ ದೇಗುಲವನ್ನು ಏಳನೇ ಶತಮಾನದಲ್ಲಿ ನಿರ್ಮಿಸಲಾಯಿತು. 1600 ವರ್ಷಗಳ ಇತಿಹಾಸವಿರುವ ಈ ದೇವಸ್ಥಾನದಲ್ಲಿ ಅತ್ಯದ್ಭುತ ಶಿಲ್ಪಕಲೆಯನ್ನು ನೀವು ಕಾಣಬಹುದು. ಇಲ್ಲಿ ಗಣೇಶನ ಮೂರ್ತಿ ಉತ್ತರ ದಿಕ್ಕಿಗೆ ಮುಖ ಮಾಡಿದೆ. ದೇಶದ ಅಪರೂಪದ ದೇವಸ್ಥಾನಗಳಲ್ಲಿ ಇದೂ ಒಂದು.
ದೇವಸ್ಥಾನದ ಸಮಯ
ಬೆಳಗ್ಗೆ 6ರಿಂದ ಮಧ್ಯಾಹ್ನ 12
ಸಂಜೆ 4ರಿಂದ ರಾತ್ರಿ 8

Ganesha Temple, Gangtok, Sikkim

ಗಣೇಶ ದೇವಸ್ಥಾನ, ಗ್ಯಾಂಕ್ಟಕ್‌, ಸಿಕ್ಕಿಂ

ಸಿಕ್ಕಿಂನ ಗ್ಯಾಂಕ್ಟಕ್‌ನಲ್ಲಿ ವಿಶೇಷ ಗಣೇಶ ದೇವಸ್ಥಾನವಿದೆ. ಈ ದೇವಸ್ಥಾನವನ್ನು 1953ರಲ್ಲಿ ನಿರ್ಮಿಸಲಾಯಿತು. ಈ ದೇವಸ್ಥಾನದಿಂದ ಕಾಂಚನಜುಂಗ ಬೆಟ್ಟ ಮತ್ತು ಗ್ಯಾಂಕ್ಟಕ್‌ ನಗರದ ಸುಂದರ ದೃಶ್ಯವನ್ನು ನೋಡಬಹುದು. ಇದು ಅತ್ಯಂತ ಸುಂದರವಾದ ದೇಗುಲಗಳಲ್ಲಿ ಒಂದು ಎಂದೂ ಕರೆಸಿಕೊಂಡಿದೆ.
ದೇವಸ್ಥಾನದ ಸಮಯ
ಬೆಳಗ್ಗೆ 9ರಿಂದ ಸಂಜೆ 5

ಇದನ್ನೂ ಓದಿ: Famous Ganesha Temples: ಭಕ್ತರ ಮನಸ್ಸಿಗೆ ನೆಮ್ಮದಿ ನೀಡುವ ತಾಣ, ಕರ್ನಾಟಕದ ಪ್ರಮುಖ ಗಣಪತಿ ದೇವಸ್ಥಾನಗಳಿವು

Continue Reading
Advertisement
Prajwal Revanna Case
ಕರ್ನಾಟಕ18 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ36 mins ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest56 mins ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Prajwal Revanna Case
ಪ್ರಮುಖ ಸುದ್ದಿ58 mins ago

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಬಂಧಿಸಲು ಸಿದ್ಧವಾದ ಎಸ್‌ಐಟಿ!

Physical abuse
ಮೈಸೂರು1 hour ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Summer Tour
ಪ್ರವಾಸ1 hour ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ1 hour ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌