‌visual Info: ಆರ್‌ಪಿಜಿ ಅಟ್ಯಾಕ್ ರಹಸ್ಯ - Vistara News

ಫೋಟೊ

‌visual Info: ಆರ್‌ಪಿಜಿ ಅಟ್ಯಾಕ್ ರಹಸ್ಯ

ಪಂಜಾಬ್‌ನ ಮೊಹಾಲಿಯ ಗುಪ್ತಚರ ಇಲಾಖೆ ಕಚೇರಿ ಮೇಲೆ ನಡೆದ ದಾಳಿಯಲ್ಲಿ ಬಳಸಲಾದ ರಾಕೆಟ್‌ ಚಾಲಿತ ಗ್ರೆನೇಡ್‌ನ ಹಿಂದಿನ ಕೌತುಕ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕಿರುತೆರೆ

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Namratha Gowda: ಹಾಟ್‌ ಆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರು ನಮ್ರತಾ ಗೌಡ . ಇಲ್ಲಿವೆ ಫೋಟೊಗಳು!

VISTARANEWS.COM


on

Namratha Gowda
Koo
Namratha Gowda
ಬಿಗ್‌ಬಾಸ್‌ ಖ್ಯಾತಿಯ ನಮ್ರತಾ ಗೌಡ ಲಕ್ಷ್ಮೀ ಕೃಷ್ಣ ಡಿಸೈನ್ ಮಾಡಿರುವ ಕಪ್ಪು ಸೀರೆಯುಟ್ಟು ಗಮನ ಸೆಳೆದಿದ್ದಾರೆ.
Namratha Gowda
ಸ್ಲೀವ್ ಲೆಸ್ ಬ್ಲೌಸ್ ಜತೆ ಬ್ಲ್ಯಾಕ್‌ ಹ್ಯಾಂಡ್‌ ಗ್ಲೌಸ್‌, ಅದರ ಮೇಲೆ ಡೈಮಂಡ್‌ ರಿಂಗ್‌ ಮತ್ತು ಸಿಂಹಿಣಿಯ ಲೋಗೋ ಇರುವ ಬೆಲ್ಟ್‌ ಇದು ಬೆಡಗಿಯ ನ್ಯೂ ಲುಕ್‌ನ ವಿಷೇಶವಾಗಿದೆ.
Namratha Gowda
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಯೂಟ್‌ ಮತ್ತು ಹಾಟ್ ಫೋಟೊಗಳನ್ನು ಪೋಸ್ಟ್‌ ಮಾಡಿರುವ ನಮ್ಮು “Some wars help us bloom” ಎಂದು ಕ್ಯಾಪ್ಶನ್ ಸಹ ಹಾಕಿಕೊಂಡಿದ್ದಾರೆ.
Namratha Gowda
ಕೆಲದಿನಗಳ ಹಿಂದೆ ಪ್ಯಾರ್ ಗೆ ಆಗ್ಬಿಟ್ಟೈತೆ ನಟಿ ಪಾರುಲ್ ಯಾದವ್ ಬ್ಲ್ಯಾಕ್ ಸೀರೆ ಧರಿಸಿ ಬೋಲ್ಡ್‌ ಆಗಿ ಫೋಟೊ ಶೂಟ್ ಮಾಡಿಸಿದ್ದು ಅದು ವೈರಲ್ ಆಗಿತ್ತು. ಇದೀಗ ಅವರನ್ನು ಮೀರಿಸುವ ಹಾಗೆ ನಟಿ ನಮ್ರತಾ ಗೌಡ ಫೋಟೊಗಳನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
Namratha Gowda
ಸದ್ಯಕ್ಕೆ ಜಿಮ್‌ ವರ್ಕೌಟ್‌ ಮಾಡಿ ಫಿಟ್‌ ಆಗುತ್ತಿರುವ ನಮ್ರತಾ ಮುಂಬರುವ ಪ್ರಾಜೆಕ್ಟ್‌ಗಳಲ್ಲಿ ಬ್ಯೂಸಿ ಆಗಲಿದ್ದಾರೆ.
Continue Reading

Latest

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

Grand Marriage: ಕೆಲವರು ಹಣಕಾಸಿನ ಸಮಸ್ಯೆಯಿಂದ ಮಗ/ಮಗಳ ಮದುವೆ ಮಾಡುವುದಕ್ಕೆ ಆಗದೇ ಒದ್ದಾಡುತ್ತಾರೆ. ಇನ್ನು ಕೆಲವರು ಮದುವೆಯನ್ನು ಹೇಗಲ್ಲಾ ಅದ್ಧೂರಿಯಾಗಿ ಮಾಡಬಹುದು ಎಂದು ತಲೆಕೆಡಿಸಿಕೊಳ್ಳುತ್ತಾರೆ. ಭಾರತದಲ್ಲಿ ಸಾಕಷ್ಟು ಶ್ರೀಮಂತ ಕುಟುಂಬಗಳಿವೆ. ಇವರು ಮದುವೆಗಾಗಿ ಯಥೇಚ್ಛವಾಗಿ ದುಡ್ಡು ಸುರಿದಿದ್ದಾರೆ. ಅದ್ಧೂರಿಯಾಗಿ ನಡೆದ ಮದುವೆಗಳು ಯಾರದ್ದು?ಎಷ್ಟೆಲ್ಲಾ ಖರ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Grand Marriage
Koo

ಮುಂಬೈ : ಮಕ್ಕಳ ಮದುವೆಯೆಂದರೆ ಎಲ್ಲಾ ತಂದೆ-ತಾಯಿಗೂ ಸಂಭ್ರಮವಿರುತ್ತದೆ. ಇನ್ನು ಶ್ರೀಮಂತ ಮನೆತನದ ಮಕ್ಕಳ ಮದುವೆಯೆಂದರೆ ಕೇಳಬೇಕಾ…? ತಮ್ಮ ಶ್ರೀಮಂತಿಕೆಯನ್ನು ತೋರ್ಪಡಿಸುವುದಕ್ಕಾದರೂ ಅದ್ಧೂರಿಯಿಂದ ಮದುವೆ ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ಹಲವಾರು ಶ್ರೀಮಂತ ಮನೆತನದವರ ಮದುವೆಗಳು ಬಹಳ ಅದ್ಧೂರಿ (Grand Marriage)ಯಾಗಿ ನಡೆದಿದ್ದು, ಅದರ ಬಗ್ಗೆ ಇಲ್ಲಿದೆ ಮಾಹಿತಿ.

Grand Marriage
Grand Marriage

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದೆ ಹೆಸರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಜುಲೈ 12, 2024ರಂದು ಮುಂಬೈನಲ್ಲಿ ರಾಧಿಕಾ ಮರ್ಚೆಂಟ್ ಅವರ ಜೊತೆ ನಿಶ್ಚಯವಾಗಿದ್ದು, ಇದು  ಅತ್ಯಂತ ದುಬಾರಿ ರಿ ಮದುವೆ ಎಂದು ಊಹಿಸಲಾಗಿದೆ.

Grand Marriage
Grand Marriage

1. ಇಶಾ ಅಂಬಾನಿ ಮತ್ತು ಆನಂದ್ ಪಿರಮಾಲ್: 700 ಕೋಟಿ ರೂ. ಖರ್ಚು

ಬಿಲಿಯನೇರ್ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಅವರು ಆನಂದ್ ಪಿರಮಾಲ್ ಅವರನ್ನು ವಿವಾಹವಾಗಿದ್ದು, ಸುಮಾರು ಒಂದು ವಾರಗಳ ಕಾಲ ನಡೆದ ಈ ಮದುವೆಗೆ  ಅಂದಾಜು 700 ಕೋಟಿ ರೂ. ಖರ್ಚು ಮಾಡಲಾಗಿದೆ ಎನ್ನಲಾಗಿದೆ. ಉದಯಪುರ, ಇಟಲಿಯ ಲೇಕ್ ಕೊಮೊ ಮತ್ತು ಮುಂಬೈನಲ್ಲಿ ನಡೆದ ಈ ಉತ್ಸವದಲ್ಲಿ ಜಗತ್ತಿನ ಅನೇಕ ಸೂಪರ್ ಸ್ಟಾರ್‌ಗಳು  ಭಾಗವಹಿಸಿದ್ದರು.  ಮತ್ತು ವಿವಾಹ ಸಮಾರಂಭವು ಲೇಕ್ ಪಿಚೋಲಾದ ಖಾಸಗಿ ದ್ವೀಪದಲ್ಲಿ ನಡೆಯಿತು.

Grand Marriage

2. ಸುಶಾಂತ್ ರಾಯ್ ಮತ್ತು ಸೀಮಂತೋ ರಾಯ್: 554 ಕೋಟಿ ರೂ. ಖರ್ಚು

2004ರಲ್ಲಿ ಸಹಾರಾ ಗ್ರೂಪ್‌ನ ಮಾಜಿ ಅಧ್ಯಕ್ಷ ಉದ್ಯಮಿ ಸುಬ್ರತಾ ರಾಯ್ ಅವರ ಪುತ್ರರಾದ ಸುಶಾಂತ್ ರಾಯ್ ಮತ್ತು ಸೀಮಾಂತೋ ರಾಯ್ ಅವರ ವಿವಾಹಕ್ಕೆ ಅಂದಾಜು 554 ಕೋಟಿ ರೂ. ಖರ್ಚುಮಾಡಲಾಗಿದೆ ಎನ್ನಲಾಗಿದೆ. ಲಕ್ನೋದ ಸಹಾರಾ ಕ್ರೀಡಾಂಗಣದಲ್ಲಿ ನಡೆದ ಈ  ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರು ಮತ್ತು ಕ್ರೀಡಾಕೂಟದವರು  ಸೇರಿದಂತೆ 11,000ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು.

Grand Marriage
Grand Marriage

3. ಬ್ರಹ್ಮಣಿ ರೆಡ್ಡಿ ಮತ್ತು ರಾಜೀವ್ ರೆಡ್ಡಿ: 500 ಕೋಟಿ ರೂ. ಖರ್ಚು

ಮಾಜಿ ರಾಜಕಾರಣಿ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಣಿ ರೆಡ್ಡಿ ಮತ್ತು ರಾಜೀವ್ ರೆಡ್ಡಿ ಅವರ ವಿವಾಹಕ್ಕೆ ಸುಮಾರು 500 ಕೋಟಿ ರೂಪಾಯಿ (74 ಮಿಲಿಯನ್ ಡಾಲರ್) ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು ಅರಮನೆಯಲ್ಲಿ ನಡೆದ ಐದು ದಿನಗಳ ಆಚರಣೆಯಲ್ಲಿ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಸುಮಾರು 50,000 ಮಂದಿ ಭಾಗವಹಿಸಿದ್ದರು.

Grand Marriage
Grand Marriage

4. ಸೃಷ್ಟಿ ಮಿತ್ತಲ್ ಮತ್ತು ಗುಲ್ರಾಜ್ ಬೆಹ್ಲ್: 500 ಕೋಟಿ

ಸ್ಟೀಲ್  ಉದ್ಯಮಿ ಪ್ರಮೋದ್ ಮಿತ್ತಲ್ ಅವರ ಪುತ್ರಿ ಸೃಷ್ಟಿ ಮಿತ್ತಲ್ ಅವರು ಇನ್‌ವೆಸ್ಟ್‌ಮೆಂಟ್ ಬ್ಯಾಂಕರ್ ಗುಲ್ರಾಜ್ ಬೆಹ್ಲ್ ಅವರನ್ನು 2013 ರಲ್ಲಿ ಸ್ಪೇನ್‌ನ ಬಾರ್ಸಿಲೋನಾದಲ್ಲಿ ಮದುವೆಯಾದರು. ಇದು  ಮೂರು ದಿನಗಳ ಅದ್ದೂರಿ ಮದುವೆಯಾಗಿದ್ದು, ಈ ಕಾರ್ಯಕ್ರಮಕ್ಕೆ ಸುಮಾರು 500 ಕೋಟಿ ರೂ. ಖರ್ಚುಮಾಡಲಾಗಿದೆ ಎನ್ನಲಾಗಿದೆ. ಮದುವೆಯಲ್ಲಿ 500 ಅತಿಥಿಗಳು ಭಾಗವಹಿಸಿದ್ದರು ಮತ್ತು ಪ್ರಸಿದ್ಧ ಸ್ಪ್ಯಾನಿಷ್ ಪ್ರಸಿದ್ಧ ಬಾಣಸಿಗ ಸೆರ್ಗಿ ಅರೋಲಾ ಸಿದ್ಧಪಡಿಸಿದ ಮೆನು ಮತ್ತು 60 ಕೆಜಿ, ಬೃಹತ್ ವಿವಾಹ ಕೇಕ್ ಅನ್ನು ಕತ್ತರಿಸಲಾಗಿತ್ತು. ಈ ವಿವಾಹ ಸಮಾರಂಭವು ಬೆಟ್ಟದ ಮೇಲಿರುವ ನ್ಯಾಷನಲ್ ಮ್ಯೂಸಿಯಂ ಆಫ್ ಕ್ಯಾಟಲಾನ್ ಆರ್ಟ್‌ನಲ್ಲಿ ನಡೆಯಿತು.

Grand Marriage
Grand Marriage

5. ವಾಣಿಶಾ ಮಿತ್ತಲ್ ಮತ್ತು ಅಮಿತ್ ಭಾಟಿಯಾ: 240 ಕೋಟಿ ರೂ.

2004ರಲ್ಲಿ ಸ್ಟೀಲ್ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಪುತ್ರಿ ವಾಣಿಶಾ ಮಿತ್ತಲ್ ಮತ್ತು ಲಂಡನ್ ಬ್ಯಾಂಕರ್ ಅಮಿತ್ ಭಾಟಿಯಾ ಅವರ ವಿವಾಹವು ಆರು ದಿನಗಳ ಕಾಲ ಪ್ಯಾರಿಸ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ಉತ್ಸವದಲ್ಲಿ ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರು ಆಗಮಿಸಿದ್ದರು. ಪ್ರಸಿದ್ಧ ಕವಿ ಜಾವೇದ್ ಅಖ್ತರ್ ವಿವಾಹಪೂರ್ವ ಸಮಾರಂಭಗಳಿಗಾಗಿ ನಾಟಕವನ್ನು ಸಹ ಬರೆದಿದ್ದಾರೆ. ಮುಖ್ಯ ವಿವಾಹವು 17 ನೇ ಶತಮಾನದ ಚಾಟೌ ಡಿ ವಾಕ್ಸ್-ಲೆ-ವಿಕಾಮ್ಟೆಯಲ್ಲಿ ನಡೆಯಿತು, ಈ ಮದುವೆಗಾಗಿ  ಎಸ್ಟೇಟ್‌ನ  ಉದ್ಯಾನಗಳಲ್ಲಿನ ಕೊಳದ ಮೇಲೆ ಭವ್ಯವಾದ ಮಂಟಪವನ್ನು ನಿರ್ಮಿಸಲಾಗಿತ್ತು.

Grand Marriage
Grand Marriage

6. ಸೋನಮ್ ವಾಸ್ವಾನಿ ಮತ್ತು ನವೀನ್ ಫ್ಯಾಬಿಯಾನಿ: 210 ಕೋಟಿ ರೂ. ಖರ್ಚು

2017 ರಲ್ಲಿ, ಸ್ಟಾಲಿಯನ್ ಗ್ರೂಪ್ ಸಂಸ್ಥಾಪಕ ಸುನಿಲ್ ವಾಸ್ವಾನಿ ಅವರ ಪುತ್ರಿ ಸೋನಮ್ ವಾಸ್ವಾನಿ  ಮತ್ತು ಮುಂಬೈ ಮೂಲದ ಉದ್ಯಮಿ ನವೀನ್ ಫ್ಯಾಬಿಯಾನಿ ಅವರ ವಿವಾಹವು ಆಸ್ಟ್ರಿಯಾದ ವಿಯೆನ್ನಾದಲ್ಲಿ ಸುಮಾರು 210 ಕೋಟಿ ರೂ.ಗಳ (30 ಮಿಲಿಯನ್ ಡಾಲರ್) ವೆಚ್ಚದಲ್ಲಿ ಅದ್ಧೂರಿಯಾಗಿ ನೇರವೇರಿತ್ತು. ಉತ್ಸವಗಳು ಪಲೈಸ್ ಫೆರ್ಸ್ಟೆಲ್, ಪಲೈಸ್ ಲಿಚೆನ್ಸ್ಟೇನ್ ಪಾರ್ಕ್ ಮತ್ತು ಬೆಲ್ವೆಡೆರೆ ಅರಮನೆಯಲ್ಲಿ ನಡೆದವು.

Grand Marriage
Grand Marriage

7. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ: 100 ಕೋಟಿ ರೂ. ಖರ್ಚು

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2017ರ ಡಿಸೆಂಬರ್ ನಲ್ಲಿ ಇಟಲಿಯ ಟಸ್ಕನಿಯಲ್ಲಿರುವ ಲೇಕ್ ಕೊಮೊದಲ್ಲಿ ವಿವಾಹವಾದರು. ಕೆಲವು ದಿನಗಳ ನಂತರ ಮುಂಬೈನಲ್ಲಿ ನಡೆದ ಅವರ ವಿವಾಹ ಆರತಕ್ಷತೆ ಕೂಡ ಹೆಚ್ಚು ಅದ್ದೂರಿಯಾಗಿ ನಡೆಯಿತು, ಇದರಲ್ಲಿ ಸೆಲೆಬ್ರಿಟಿಗಳು ಮತ್ತು ಕ್ರಿಕೆಟಿಗರು ಭಾಗವಹಿಸಿದ್ದರು ಮತ್ತು ಪಿಎಂ ಮೋದಿ ಕೂಡ ಇವರ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.

Grand Marriage
Grand Marriage

8. ಅಡೆಲ್ ಸಾಜನ್ ಮತ್ತು ಸನಾ ಖಾನ್: 100 ಕೋಟಿ ರೂ. ಖರ್ಚು

ದುಬೈ ಉದ್ಯಮಿ ಅಡೆಲ್ ಸಾಜನ್ ಅವರು ನಟಿ ಸನಾ ಖಾನ್ ಅವರನ್ನು ಕ್ರೂಸ್‌ನಲ್ಲಿ  ಅದ್ದೂರಿಯಾಗಿ ವಿವಾಹವಾದರು. ಇವರ ವಿವಾಹಕ್ಕೆ 100 ಕೋಟಿ ರೂ.ಗಳ ಖರ್ಚಾಗಿದೆ ಎಂದು ಊಹಿಸಲಾಗಿದೆ. ಬಾರ್ಸಿಲೋನಾದಿಂದ ಫ್ರಾನ್ಸ್ ಮೂಲಕ ಇಟಲಿಗೆ ಪ್ರಯಾಣಿಸುತ್ತಿದ್ದ ಕೋಸ್ಟಾ ಫಾಸಿನೋಸಾ ಕ್ರೂಸ್ ಹಡಗಿನಲ್ಲಿ ದಂಪತಿಗಳು ವಿವಾಹ ವಿಧಿಯನ್ನು ಆಚರಿಸಿದ್ದಾರೆ.

Grand Marriage
Grand Marriage

9. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ: 77 ಕೋಟಿ ರೂ. ಖರ್ಚು

ಆರು ವರ್ಷಗಳ ಡೇಟಿಂಗ್ ನಂತರ, ಬಾಲಿವುಡ್ ದಂಪತಿಗಳಾದ ರಣವೀರ್‌ಸಿಂಗ್ ಮತ್ತು ದೀಪಿಕಾ ಪಡುಕೋಣೆ 2018 ರ ನವೆಂಬರ್ ನಲ್ಲಿ ಇಟಲಿಯ ಲೇಕ್ ಕ್ಯಾಮೊದಲ್ಲಿ ವಿವಾಹವಾದರು, ಅವರ ವಿವಾಹ ಸಮಾರಂಭಗಳು ಸಿಂಧಿ ಮತ್ತು ಕೊಂಕಣಿ ಸಂಪ್ರದಾಯಗಳಲ್ಲಿ ನಡೆದವು. ಇವರ ಮದುವೆಯ ಖರ್ಚು 77 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

Grand Marriage
Grand Marriage

10. ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ

ಮುಕೇಶ್ ಅಂಬಾನಿ ಅವರ ಹಿರಿಯ ಮಗ ಆಕಾಶ್ ಅಂಬಾನಿ ಅವರು ವಜ್ರದ ಉದ್ಯಮಿಯ ಪುತ್ರಿ ಶ್ಲೋಕಾ ಮೆಹ್ತಾ ಅವರನ್ನು 2019 ರಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ವಿವಾಹವಾದರು. ಈ ಮದುವೆಯಲ್ಲಿ ಬಹಳ ವರ್ಣರಂಜಿತ ಅಲಂಕಾರಗಳನ್ನು ಮಾಡಲಾಗಿತ್ತು. ಆದರೆ ಮದುವೆಯ ಖರ್ಚಿನ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Continue Reading

ಕ್ರೀಡೆ

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ಆರೋಗ್ಯ

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Overweight man suffering from chest pain, high blood pressure, cholesterol level
Koo
Obese male suffering from chest pain high blood pressure cholesterol level Sesame Benefits
ಕೊಲೆಸ್ಟ್ರಾಲ್‌ ಅಪಾಯಕಾರಿ
ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ಅತಿಯಾದ ಕೊಬ್ಬಿನ ಆಹಾರ ಸೇವನೆ, ಸಂಸ್ಕರಿತ ಸಕ್ಕರೆ ಸೇವನೆಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಎದುರಾಗುತ್ತವೆ.
Skin Care Foods
ಆಹಾರದ ಪಾತ್ರ ಮುಖ್ಯ
ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ.
reen Tea Benefits Of Drinking Green Tea
ಗ್ರೀನ್‌ ಟೀ
ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.
Chia seeds and soy milk
ಚಿಯಾ ಬೀಜ ಮತ್ತು ಸೋಯ್‌ ಹಾಲು
ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.
Beetroot and carrot juice
ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ
ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.
Ginger, lemon juice
ಶುಂಠಿ, ನಿಂಬೆ ರಸ
ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.
Tomato juice
ಟೊಮೇಟೊ ರಸ
ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.
Turmeric and soy milk
ಅರಿಶಿನ ಮತ್ತು ಸೋಯ್‌ ಹಾಲು
ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.
Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ4 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು5 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು5 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು7 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು9 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ9 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್10 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ10 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ16 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌