HD Kumaraswamy : ಎಚ್‌.ಡಿ. ಕುಮಾರಸ್ವಾಮಿ ಮಾತು ನಂಬಲು ನಾನು ದಡ್ಡನೇ?: ಡಿ.ಕೆ. ಶಿವಕುಮಾರ್ - Vistara News

ಕರ್ನಾಟಕ

HD Kumaraswamy : ಎಚ್‌.ಡಿ. ಕುಮಾರಸ್ವಾಮಿ ಮಾತು ನಂಬಲು ನಾನು ದಡ್ಡನೇ?: ಡಿ.ಕೆ. ಶಿವಕುಮಾರ್

HD Kumaraswamy : ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಎಚ್‌.ಡಿ. ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah and DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ (Karnataka Chief Minister) ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಕೆ. ಗೋಪಾಲಯ್ಯ (K Gopalaiah) ಮತ್ತು ಎಸ್.ಟಿ. ಸೋಮಶೇಖರ್ (ST Somashekhar) ಫೋನ್ ಮಾಡಿ ಹೇಳಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನನ್ನ ಹೆಸರು ಹೇಳಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Actor Darshan : ವೈದ್ಯೆಗೆ ನಾಯಿ ಕಚ್ಚಿದ ಪ್ರಕರಣ; ವಿಚಾರಣೆಗೆ ನಟ ದರ್ಶನ್‌ ಹಾಜರ್‌

ಸರ್ಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್‌ಡಿಎಯಿಂದ ಮೊದಲು ಹೊರಬನ್ನಿ, ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು ಎಂದು ಅವರಿಗೆ ಹೇಳಿದೆ. ನಂತರ ಈ ಕುರಿತು ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗಲೇ ಇಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌ಡಿಕೆ ದ್ವಂದ್ವ ನಿಲುವು

ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ಗೆ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

Operation Hasta and congress Karnataka

ಸರ್ಕಾರ ಬೀಳಿಸಿದವರ ಜತೆಗೇ ನೆಂಟಸ್ತನ

ಜೆಡಿಎಸ್ ಜಾತ್ಯತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ಥನ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ನಾವು ಆಡಳಿತ ಮಾಡಲು ಬಿಡಲಿಲ್ಲವೇ?

ಕುಮಾರಸ್ವಾಮಿ ಅವರೇ, ನೀವು ಸಹ 20 ಮತ್ತು 14 ತಿಂಗಳು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೀರಿ. ನಿಮಗೆ ಆಡಳಿತ ಮಾಡಲು ಬಿಡಲಿಲ್ಲವೇ? ವಿರೋಧ ಪಕ್ಷವಾಗಿ ಟೀಕೆಗಳನ್ನು ಮಾಡಿದರೂ ಬಿಜೆಪಿಯವರಿಗೆ ನಾವು ಆಡಳಿತ ಮಾಡಲು ಬಿಡಲಿಲ್ಲವೇ? ಆದರೆ ನೀವು ಅಧಿಕಾರ ನನಗೆ ಸಿಗಲಿಲ್ಲ ಎಂದು ಅಸೂಯೆಯಿಂದ ಕೈ, ಕೈ ಉಜ್ಜಿಕೊಂಡು ಕುಳಿತರೆ ಏನು ಪ್ರಯೋಜನ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ನಮಗೆ ಇನ್ನೆಷ್ಟು ಶಕ್ತಿ ಇರಬೇಕು?

ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಮ್ಮ ಆಡಳಿತವನ್ನು ನೋಡಿಕೊಂಡು ಇರಲು ನಿಮಗೆ ಆಗುತ್ತಿಲ್ಲ. ಗ್ಯಾರಂಟಿಗಳ ಬಗ್ಗೆ, ಆಡಳಿತದ ಬಗ್ಗೆ ಎಲ್ಲದರ ಬಗ್ಗೆಯೂ ಕುಹಕವಾಡುತ್ತಿದ್ದೀರಿ. ನಮ್ಮ ತಪ್ಪುಗಳನ್ನು ಹೇಳಿದರೆ ತಿದ್ದಿಕೊಂಡು ಕೆಲಸ ಮಾಡುತ್ತೇವೆ, ಅನವಶ್ಯಕ ಟೀಕೆಗಳು ಸಲ್ಲದು. ನಮ್ಮ ಆಡಳಿತ ವೈಫಲ್ಯಗಳನ್ನು ಎತ್ತಿ ತೋರಿಸಲಿ, ಅದರ ಬದಲು ನಮ್ಮ ಶಾಸಕರಿಗೆ ಕರೆ ಮಾಡುವುದು ಸೇರಿದಂತೆ ಇತರೇ ಕೆಲಸಗಳನ್ನು ಮಾಡಿದರೆ, ಇದನ್ನು ಏನೆಂದು ಕರೆಯಬೇಕು? ನಮಗೆ ಎಲ್ಲ ವಿಚಾರ ಗೊತ್ತಿದೆ! ವಿರೋಧ ಪಕ್ಷಕ್ಕೆ ಅಷ್ಟೊಂದು ಶಕ್ತಿ ಇರುವಾಗ ನಮಗೆ ಇನ್ನೆಷ್ಟು ಶಕ್ತಿ ಇರಬೇಕು ಎಂದು ಡಿ.ಕೆ. ಶಿವಕುಮಾರ್ ಗುಡುಗಿದರು.

ಬಿಜೆಪಿಯವರು 6 ತಿಂಗಳ ನಂತರ ನೂತನ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಅವರು ನಮ್ಮನ್ನು ರಚನಾತ್ಮಕವಾಗಿ ಟೀಕೆ ಮಾಡಿದರೆ ಒಪ್ಪಿಕೊಳ್ಳುತ್ತೇವೆ, ಇದೇ ಪ್ರಜಾಪ್ರಭುತ್ವ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕುಮಾರಸ್ವಾಮಿ ಒಂದು ನಿಮಿಷ ಇದ್ದಂತೆ ಇನ್ನೊಂದು ನಿಮಿಷ ಇರುವುದಿಲ್ಲ

ಮಂಜುನಾಥ್, ಗೌರಿಶಂಕರ್ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕರ ಬಳಿ ಕೇಳಿದ್ದೇನೆ, ʼಕುಮಾರಸ್ವಾಮಿ ಅವರು ಹೇಗೆʼ ಎಂದು. ಒಂದು ನಿಮಿಷ ಇದ್ದ ನಿರ್ಧಾರ ಇನ್ನೊಂದು ನಿಮಿಷ ಇರುವುದಿಲ್ಲ, ಅದಕ್ಕೆ ನಮಗೆ ಅವರ ಬಳಿ ಕೆಲಸ ಮಾಡಲು ಆಗುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷವೇ ಸರಿ ಎಂದು ಹೇಳಿದ್ದರು. ಹೀಗಾಗಿ ಅವರು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Karnataka Politics : ಕಾಂಗ್ರೆಸ್‌ ಸೇರಿದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು; ಕೋಮುವಾದಿ ಜನತಾ ದಳವೆಂದ ಸಿಎಂ

ಮೋಸ ಮಾಡಿದಂತೆ ಅಲ್ಲವೇ?

ಪಕ್ಷ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಅಂದವರಿಗೆ ಕುಮಾರಸ್ವಾಮಿ, “ನೀನು ದಳದಲ್ಲೇ ಇರು, ಆದರೆ ಬಿಜೆಪಿಗೆ ಕೆಲಸ ಮಾಡುವ ಬದಲು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡು” ಎಂದು ಹೇಳಿದ್ದಾರಂತೆ. ಇದು ಹೇಗೆ ಸಾಧ್ಯ? ಮೋಸ ಮಾಡಿದಂತೆ ಅಲ್ಲವೇ? ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಗೌರಿಶಂಕರ್ ಮತ್ತು ಮಂಜುನಾಥ್ ಅವರನ್ನೇ ಕೇಳಬೇಕು. ಈ ಕಾರಣಕ್ಕೆ ಇವರಿಬ್ಬರು ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೈಬಿಡುವ ಪ್ರಶ್ನೆಯೇ ಇಲ್ಲ

ನಮ್ಮ ಪಕ್ಷದ ಬಿ.ಎಲ್.ಶಂಕರ್, ನರೇಂದ್ರಸ್ವಾಮಿ, ವಿನಯ್ ಕುಲಕರ್ಣಿ ಸೇರಿದಂತೆ ಇವರಿಗೆ ಪಕ್ಷದಲ್ಲಿ ಇರುವಂತಹ ಹಿರಿತನ ಹೊಸದಾಗಿ ಪಕ್ಷ ಸೇರ್ಪಡೆ ಆದವರಿಗೂ ಇದೆ. ಎಷ್ಟೇ ಮತಗಳನ್ನು ಪಡೆದುಕೊಂಡು ಸೋತಿದ್ದರೂ ನಮ್ಮ ಪಕ್ಷದ ಕಷ್ಟಕಾಲದಲ್ಲಿ ಜತೆಗೆ ನಿಂತ ಕಾರ್ಯಕರ್ತರು, ನಾಯಕರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ದಿವಂಗತ ಧ್ರುವನಾರಾಯಣ ಅವರು ಕೇವಲ 1 ಮತಗಳ ಅಂತರದಲ್ಲಿ ಗೆದ್ದಿದ್ದರು, ನಂತರದ ಲೋಕಸಭಾ ಚುನಾವಣೆಯಲ್ಲಿ ಒಂದೊಂದು ಬೂತಿನಲ್ಲಿ ಒಂದೊಂದೇ ಮತಗಳು ಕಡಿಮೆಯಾಗಿ 1200 ಮತಗಳ ಅಂತರದಲ್ಲಿ ಸೋತರು, ಅವರ ಮಗ 50 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾನೆ. ಸೌಮ್ಯಾ ರೆಡ್ಡಿ, ದಿನೇಶ್ ಗುಂಡೂರಾವ್ ಅವರು ಕಡಿಮೆ ಅಂತರದಲ್ಲಿ ಸೋಲು – ಗೆಲುವು ಕಂಡಿದ್ದಾರೆ. ಅಂದರೆ ನಾವು ಯಾರನ್ನೂ ಕೂಡ ಎಂತಹ ಸಂದರ್ಭದಲ್ಲಿಯೂ ದೂರ ಮಾಡುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶಗಳು ಉದಾಹರಣೆ ನೀಡಿವೆ ಎಂದು ಡಿ.ಕೆ. ಶಿವಕುಮಾರ್ ವಿವರಣೆ ನೀಡಿದರು.

ಸ್ವಾಭಿಮಾನ ಇರುತ್ತದೆ ಅಲ್ಲವೇ?

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನುಗ್ಗಬೇಕು, ಹಳಬರು, ಹೊಸಬರು ಎಲ್ಲರಿಗೂ ಅವಕಾಶ ನೀಡುತ್ತಿದ್ದೇವೆ, ಮುಂದೆಯೂ ನೀಡುತ್ತೇವೆ. ಕುಮಾರಸ್ವಾಮಿ ಅವರೇ, ಗೌರಿಶಂಕರ್ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ನೋಟಿಸ್ ನೀಡಿ, ಮತ್ತೆ ನಿಮ್ಮ ಜತೆಯೇ ಕೆಲಸ ಮಾಡು ಎಂದರೆ ಅದು ಹೇಗೆ ಸಾಧ್ಯ. ಮನುಷ್ಯನಿಗೆ ತನ್ನದೇ ಆದ ಸ್ವಾಭಿಮಾನವಿರುತ್ತದೆ ಅಲ್ಲವೇ?

ನಾನು ಮತ್ತು ಚೆನ್ನಿಗಪ್ಪ ಅವರು ಒಂದೇ ಜಿಲ್ಲೆಯವರು, ಒಟ್ಟಿಗೆ ರಾಜಕಾರಣ ಮಾಡುತ್ತಾ ಬೆಳೆದವರು. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅವರನ್ನು ನೋಡಲು ಹೋಗಿದ್ದೆ. ಈ ವೇಳೆ ‘ಯಾವ ಕಾರಣಕ್ಕೆ ಚುಂಚನಗಿರಿ ಸ್ವಾಮೀಜಿಗಳ ಮೇಲೆ ಪ್ರಕರಣ ದಾಖಲಿಸಬೇಕಾಯಿತು’ ಎಂದು ಹೇಳಿ ಬೇಸರ ವ್ಯಕ್ತಪಡಿಸಿದ್ದರು.

ಪ್ರಬಲ ಶಕ್ತಿ ಸೇರ್ಪಡೆ

ಡಿ.ಸಿ.ಗೌರಿಶಂಕರ್ ಅವರನ್ನು ಸೋಲಿಸಲು ನಾವು ಸಾಕಷ್ಟು ಕೆಲಸ ಮಾಡಿದೆವು, ನಮ್ಮ ಅಭ್ಯರ್ಥಿ 6 ಸಾವಿರ ಮತಗಳನ್ನು ಪಡೆದರೆ ಗೌರಿಶಂಕರ್ ಅವರು 2 ಸಾವಿರ ಮತಗಳ ಅಂತರದಿಂದ ಸೋತರು. ಈಗ ನಮ್ಮವರೇ ಆಗಿದ್ದಾರೆ, ಪ್ರಬಲ ಶಕ್ತಿಯೊಂದು ತುಮಕೂರಿನ ಭಾಗದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಬಿಜೆಪಿಯವರು ನಮ್ಮ ಮುಹೂರ್ತವನ್ನೇ ಹುಡುಕಿದ್ದಾರೆ

ಗೌರಿಶಂಕರ್ ಮತ್ತು ಮಂಜುನಾಥ್ ಅವರು ನ.15 ರಂದೆ ಪಕ್ಷ ಸೇರ್ಪಡೆಯಾಗಬೇಕು ಎಂದು ಇಚ್ಚಿಸಿದ್ದರು, ವಿಜಯೇಂದ್ರ ಅವರು ಈ ದಿನವೇ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ ಎಂದರೆ ನಿಮ್ಮಿಬ್ಬರ ಮುಹೂರ್ತ ಚೆನ್ನಾಗಿದೆ ಅಂತ ಅಲ್ಲವೇ? ಕಾಂಗ್ರೆಸ್ ಪಕ್ಷದಲ್ಲಿ ಯಾವ ಸ್ಥಾನ ಸಿಗದೇ ಇರಬಹುದು, ಆದರೆ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಳ್ಳುವ ಪುಣ್ಯ ಸಿಗುತ್ತದೆ. ಬೇರೆ ಯಾವ ಪಕ್ಷದಲ್ಲಿಯೂ ಈ ಅವಕಾಶ ಸಿಗಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: HD Kumarswamy : ಕಾಂಗ್ರೆಸ್‌ ಎಂದರೆ ಕಳ್ಳಕಳ್ಳವಾಗಿ ಪೋಸ್ಟರ್‌ ಅಂಟಿಸುವ ಶಿಖಂಡಿ ಪಕ್ಷ; ಜೆಡಿಎಸ್‌ ತಿರುಗೇಟು

ಇನ್ನಷ್ಟು ನಾಯಕರು ಕಾಂಗ್ರೆಸ್‌ ಸೇರುತ್ತಾರೆ

ಯಾರೇ ಏನೂ ತಿಪ್ಪರಲಾಗ ಹೊಡೆದರೂ ಯಾರು ಏನೂ ಮಾಡಲು ಆಗುವುದಿಲ್ಲ, ಮುಂದಿನ ಚುನಾವಣೆಯನ್ನು ಎಲ್ಲರೂ ಎದುರಿಸೋಣ. ಮುಂದಿನ ವಾರ ಇನ್ನಷ್ಟು ಪ್ರಮುಖ ನಾಯಕರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಯಾದ ಕ್ಷೇತ್ರಗಳಲ್ಲಿ ನಾನೇ ಖುದ್ದಾಗಿ ಬಂದು ಕಾರ್ಯಕರ್ತರ ಸಭೆ ನಡೆಸಲಿದ್ದು, ದಾಸರಹಳ್ಳಿ, ತುಮಕೂರು ಗ್ರಾಮಾಂತರದಲ್ಲಿ ಶೀಘ್ರ ಸಭೆ ನಡೆಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Physical Abuse: ಕೂಲಿ ಕೆಲಸ ಮಾಡುವವರ ಮಗಳಾದ ಬಾಲಕಿಯನ್ನು ರೈಲ್ವೆ ಸ್ಟೇಷನ್ ಪಾರ್ಕಿಂಗ್‌ನಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

bangalore murder case

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Actor Darshan: ಮಗುವಿಗೆ ಕೈದಿ ನಂಬರ್ ಡ್ರೆಸ್ ಹಾಕಿಸಿ ಫೋಟೊ ಶೂಟ್ ಮಾಡಿಸುವ ಮೂಲಕ ಅತಿರೇಖದ ವರ್ತನೆ ತೋರಿದ ಪೋಷಕರಿಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಟ್ರೆಂಡ್‌ ಆಗುತ್ತಿದೆ. ಕೆಲ ಅಭಿಮಾನಿಗಳು ದರ್ಶನ್‌ ಕೈದಿ ಸಂಖ್ಯೆ 6106 ಅನ್ನು ವಾಹನಗಳ ಮೇಲೆ ಸ್ಟಿಕ್ಕರ್‌, ಕೈ ಮೇಲೆ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮಗುವಿಗೆ ಕೈದಿ 6106 ಫೋಟೋ ಶೂಟ್ ಮಾಡಿಸಿದವರಿಗೆ ಇದೀಗ ಕಾನೂನು ಕಂಟಕ ಎದುರಾಗಿದೆ. ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೇಸ್ ದಾಖಲಿಸಿಕೊಂಡಿದ್ದು, ಕೈದಿ ಫೋಟೊ ಶೋಟ್‌ ಮಾಡಿಸಿದವರಿಗೆ ನೋಟಿಸ್‌ ನೀಡಿದೆ.

ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಹಾಗಿಲ್ಲ. ಕುಟುಂಬಸ್ಥರಿಗೆ ಸಮನ್ಸ್ ಜಾರಿ ಮಾಡುತ್ತೇವೆ. ಈ ಬಗ್ಗೆ ಪೊಲೀಸ್ ಐಟಿ ಸೆಲ್‌ಗೆ ಪತ್ರ ಬರೆಯಲಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ತಿಳಿಸಿದ್ದಾರೆ.

ಪೋಷಕರ ನಡೆಯಿಂದ ಮಗುವಿನ ಭವಿಷ್ಯಕ್ಕೆ ತೊಂದರೆ ಉಂಟಾಗಲಿದೆ. ಮುಂದೆ ಆ ಮಗುವನ್ನು ಕೈದಿ ಎಂದು ಕರೆಯಬಹುದು. ಇದು ಮಗುವಿನ ಮಾನಸಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಡ್ರೆಸ್ ಹಾಕಿರುವುದು ಮಗುವಿನ ಆಯ್ಕೆಯಾಗಿರಲ್ಲ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಂತೆ. ಇದೇ ಕಾರಣಕ್ಕೆ ಆಯೋಗ ಕೇಸ್ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

lovers death self harming

ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ (Lovers death) ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ʼಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Viral News: ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ!

VISTARANEWS.COM


on

viral news signboard
Koo

ಬೆಂಗಳೂರು: ಕರ್ನಾಟಕದ ಕೊಡಗಿನ (Coorg) ಬಳಿಯ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ತುರ್ತು ಸೂಚನಾ ಫಲಕವೊಂದು (Sign Board) ಇದೀಗ ಅಂತರ್ಜಾಲವನ್ನು (Internet) ನಗೆಗಡಲಿನಲ್ಲಿ (Viral News) ತೇಲಿಸುತ್ತಿದೆ. ಕನ್ನಡದಿಂದ ಇಂಗ್ಲಿಷ್‌ಗೆ ತಪ್ಪಾಗಿ ಅನುವಾದ (Translation) ಮಾಡಿರುವುದರಿಂದ ಉಂಟಾದ ಅವಾಂತರವಿದು. ಮಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ (Mangalore Mysore National Highway) ಹಾದುಹೋಗುವ ಸಂಪಾಜೆಯಲ್ಲಿ (Sampaje) ಈ ಫಲಕವಿದೆ.

ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ! ಈ ಸೂಚನಾ ಫಲಕವನ್ನು ವಾಹನ ಚಾಲಕರು ಅಕ್ಷರಶಃ ಪಾಲಿಸಲು ಹೋದರೆ ಅನರ್ಥವೇ ಆಗುತ್ತದೆ!

ಕಳಪೆ ಇಂಗ್ಲಿಷ್‌ನಲ್ಲಿ ಅನುವಾದ ಮಾಡಲಾಗಿರುವ ಈ ಫಲಕದಲ್ಲಿ ಇಂಗ್ಲಿಷ್‌ ವಾಕ್ಯ ʼOverspeeding Causes accidents’ ಎಂದು ಇರಬೇಕಾಗಿತ್ತು. ಇಂಟರ್ನೆಟ್ ಬಳಕೆದಾರರು ಇದರ ಬಗ್ಗೆ ಹಾಸ್ಯಮಯ ಕಾಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಸೈನ್‌ಬೋರ್ಡ್‌ಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವ ಸರ್ಕಾರದ ಪ್ರಯತ್ನವನ್ನು ಕೆಲವರು ಪ್ರಶ್ನಿಸಿದ್ದಾರೆ. ಇತರರು ಈ ದೋಷವನ್ನು ತಮಾಷೆಯಾಗಿ, ಸ್ವಾರಸ್ಯಕರವಾಗಿ ತೆಗೆದುಕೊಂಡಿದ್ದಾರೆ.

“ಇದಕ್ಕೂ ಸಹ ಅನುವಾದಕರು ಚಾಟ್‌ಜಿಪಿಟಿ ಬಳಸಿದ್ದಾರೆ” ಎಂದು ಒಬ್ಬ ಬಳಕೆದಾರರು ತಮಾಷೆ ಮಾಡಿದ್ದಾರೆ. “ಕನ್ನಡವು ಇಂಗ್ಲಿಷ್ ಅಲ್ಲ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ. “urgent ನಂತರ ಒಂದು ಅಲ್ಪವಿರಾಮ ಹಾಕಿದರೆ ಅರ್ಥ ಸಂಪೂರ್ಣವಾಗಿ ಬದಲಾಗುತ್ತದೆ” ಎಂದು ಬೇರೊಬ್ಬರು ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು, “ಇನ್ಶುರೆನ್ಸ್ ಏಜೆಂಟ್ಸ್ ಅನ್ನು ಟ್ಯಾಗ್ ಮಾಡಿ. ಅವರು ಇದನ್ನು ವೇಗವಾಗಿ ಸರಿಪಡಿಸುತ್ತಾರೆ” ಎಂದು ತಮಾಷೆ ಮಾಡಿದ್ದಾರೆ.

ಮಾರ್ಚ್‌ನಲ್ಲಿ, ಕೊಡಗು ಜಿಲ್ಲೆಯ ಒಂದು ಕಡೆಯ ಸ್ಥಳೀಯರು ಗೂಗಲ್‌ನ ನ್ಯಾವಿಗೇಷನ್ ತಪ್ಪಿನ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡುವ ತಾತ್ಕಾಲಿಕ ಸೈನ್‌ಬೋರ್ಡ್ ಅನ್ನು ಹಾಕಿದ್ದರು. ʼಗೂಗಲ್ ತಪ್ಪು ಮಾಡಿದೆ. ಈ ರಸ್ತೆ ಕ್ಲಬ್ ಮಹೀಂದ್ರಾ ರೆಸಾರ್ಟ್‌ಗೆ ಹೋಗುವುದಿಲ್ಲ’ ಎಂದು ಫಲಕದಲ್ಲಿತ್ತು. ಗೂಗಲ್‌ ಮ್ಯಾಪ್‌ನಿಂದಾಗಿ ದಾರಿ ತಪ್ಪಿದ ಪ್ರಯಾಣಿಕರು ಸದಾ ದಾರಿ ಕೇಳುವುದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಆ ಸೈನ್‌ಬೋರ್ಡ್ ಅನ್ನು ಹಾಕಿದ್ದರು.

ಇದನ್ನೂ ಓದಿ: Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Continue Reading

ಕರ್ನಾಟಕ

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Stray Dogs Attack: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ 15 ಕುರಿಗಳು ಮೃತಪಟ್ಟಿವೆ.

VISTARANEWS.COM


on

Stray Dogs Attack
Koo

ಯಾದಗಿರಿ: ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿಯಾಗಿರುವ ಘಟನೆ (Stray Dogs Attack) ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಸಂಜೀವಪ್ಪ ದೇವಾಪುರ ಎಂಬುವವರ ಕುರಿಗಳು ಮೃತಪಟ್ಟಿವೆ.

ಗ್ರಾಮದ ಹೊರ ಭಾಗದ ಕುರಿ ಹಟ್ಟಿಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ನಾಲ್ಕೈದು ಬೀದಿ ನಾಯಿಗಳು ದಾಳಿ‌ ಮಾಡಿ, ಕೊಂದಿವೆ. ಕುರಿಗಳನ್ನೇ ನಂಬಿಕೊಂಡು ಕುರಿಗಾಹಿ ಸಂಜೀವಪ್ಪ ಜೀವನ ಸಾಗಿಸುತ್ತಿದ್ದರು. ಕುರಿಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಕುರಿಗಾಹಿ ಮನವಿ‌‌ ಮಾಡಿದ್ದಾರೆ.

ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ

ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.

ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.

ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ | Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Physical Abuse
ಕರ್ನಾಟಕ25 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ31 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್34 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ58 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ1 hour ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ1 hour ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್1 hour ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ1 hour ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ2 hours ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌