Bangalore Suburban Train: 2027ರ ಡಿಸೆಂಬರ್‌ಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ - Vistara News

ರಾಜಕೀಯ

Bangalore Suburban Train: 2027ರ ಡಿಸೆಂಬರ್‌ಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ

Bangalore Suburban Train: ಕೆಎಫ್‌ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲ ನಾಲ್ಕೂ ಕಾರಿಡಾರ್‌ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

VISTARANEWS.COM


on

Bangalore Suburban Train project to be completed by December 2027
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್‌ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರ್ಕಾರದ ಕೆ-ರೈಡ್ ಸಂಸ್ಥೆಗೆ 4,561 ಕೋಟಿ ರೂಪಾಯಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಅಂಕಿತ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್‌ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಬಿ. ಪಾಟೀಲ, `ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್‌ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್‌ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲ ನಾಲ್ಕೂ ಕಾರಿಡಾರ್‌ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ ಎಂದು ಹೇಳಿದರು.

ಶೇ. 4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ಜರ್ಮನಿ ಬ್ಯಾಂಕ್ ನೀಡುತ್ತಿದೆ ಎಂದು ಎಂ.ಬಿ. ಪಾಟೀಲ ಮಾಹಿತಿ‌ ನೀಡಿದರು.

Bangalore Suburban Train project to be completed by December 2027

ಕೆಎಫ್‌ಡಬ್ಲ್ಯು ನೀಡುತ್ತಿರುವ ಹಣವನ್ನು ಕೆಂಗೇರಿ-ವೈಟಫೀಲ್ಡ್ ನಡುವಿನ ಕಾರಿಡಾರ್-3ರ ಅಡಿ ಬರುವ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್-4ರ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿಯಲ್ಲಿನ ಡಿಪೋ-1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್ ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಗ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಶೀನ್ ಇಂಟರ್ಫೇಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು ಎಂದು ಎಂ.ಬಿ. ಪಾಟೀಲ ವಿವರಿಸಿದರು.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರ್ಕಾರದ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಸಬರ್ಬನ್ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯು ರಾಜ್ಯದ ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ ಎಂದು ಪಾಟೀಲ ಹೇಳಿದರು.

Bangalore Suburban Train project to be completed by December 2027

ಒಟ್ಟು 58 ನಿಲ್ದಾಣ, 4 ಕಾರಿಡಾರ್‌

ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಈ ಯೋಜನೆಯು 58 ನಿಲ್ದಾಣಗಳನ್ನು ಹೊಂದಿರಲಿದ್ದು, ಒಟ್ಟು 4 ಕಾರಿಡಾರ್‌ಗಳಲ್ಲಿ 148 ಕಿ.ಮೀ. ಉದ್ದ ಇರಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳು ತಲಾ ಶೇಕಡಾ 20ರಷ್ಟು ಹೂಡಿಕೆ ಮಾಡಲಿದ್ದು, ಬಾಹ್ಯ ಸಾಲದ ರೂಪದಲ್ಲಿ ಶೇ. 60ರಷ್ಟು ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಎಂ.ಬಿ. ಪಾಟೀಲ ನುಡಿದರು.

ಇದನ್ನೂ ಓದಿ: KS Eshwarappa: ಡಿ.ಕೆ. ಸುರೇಶ್‌ಗೆ ಗುಂಡಿಕ್ಕಿ ಎಂದ ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕೆಎಫ್‌ಡಬ್ಲ್ಯು ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha election 2024: ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha election 2024) ನಾಲ್ಕನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ(INDIA) ಇದು ಬಹಳ ಸವಾಲಿನ ಹಂತವಾಗಿದ್ದು, ಆಂತರಿಕ ಬಿಕ್ಕಟ್ಟು ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಕಳೆದ ಹಂತಗಳಿಗೆ ಹೋಲಿಸಿದರೆ ಬಿಜೆಪಿ ನೇತೃತ್ವದ (NDA) ಒಕ್ಕೂಟದಲ್ಲಿ ಈ ಬಾರಿ ಸಣ್ಣಪುಟ್ಟ ಬಿಕ್ಕಟ್ಟನ್ನು ಹೊರತುಪಡಿಸಿದರೆ ಬೇರೆ ಏನು ಸಮಸ್ಯೆ ಇಲ್ಲದಂತೆ ಭಾಸವಾಗುತ್ತಿದೆ. ಪಶ್ಚಿಮ ಬಂಗಾಳ(West Bengal)ದ ಎಂಟು ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಬಿಕ್ಕಟ್ಟು ಎದುರಿಸುತ್ತಿದ್ದು, ಕಾಂಗ್ರೆಸ್‌ ಮತ್ತು ಸಿಎಐ(ಎಂ) ಜೊತೆ ಮೈತ್ರಿಯಲ್ಲಿ ಸಾಗಲು ತೃಣಮೂಲ ಕಾಂಗ್ರೆಸ್‌ (TMC) ಹಿಂದೇಟು ಹಾಕಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಕಾಂಗ್ರೆಸ್‌ಗಿರುವ ಸವಾಲುಗಳೇನು?

ಎನ್‌ಡಿಎಗೆ ವಿರುದ್ಧ ನೇರಾನೇರ ಹಣಾಹಣಿಯಲ್ಲಿರುವ ಇಂಡಿಯಾ ಒಕ್ಕೂಟದಲ್ಲೂ ಈ ಹಂತದ ಚುನಾವಣೆಯಲ್ಲಿ ಭಾರೀ ಬಿಕ್ಕಟ್ಟು ಭುಗಿಲೆದ್ದಿರುವುದನ್ನು ಕಾಣಬಹುದಾಗಿದೆ. ಇಂಡಿಯಾ ಒಕ್ಕೂಟ ಈ ಬಾರಿ 95 ಕ್ಷೇತ್ರಗಳಲ್ಲಿ 148 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬರೋಬ್ಬರಿ 48 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂಧೋರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತನ್ನ ನಾಮಪತ್ರ ಹಿಂಪಡೆದಿರುವ ಕಾರಣ ಆ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಕಣದಲ್ಲಿಲ್ಲ. ಈ ಹಂತದ ಚುನಾವಣೆಯಲ್ಲಿ 96 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 61 ಕ್ಷೇತ್ರಗಳಲ್ಲಿ(63.5%) ಸ್ಪರ್ಧಿಸುತ್ತಿದೆ. ಮೊಲದ ಮೂರು ಹಂತಗಳಲ್ಲಿ 54.9%, 79.5%, ಮತ್ತು 73.1% ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿತ್ತು.

ಇದನ್ನೂ ಓದಿ:Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪಕ್ಷವು ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಸಣ್ಣ ಪಾಲುದಾರನಾಗಿರುವುದರಿಂದ ಹೆಚ್ಚಿನ ಪ್ರಮಾಣದ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿಲ್ಲ; ಪ್ರಸ್ತುತ ಹಂತದಲ್ಲಿ ಚುನಾವಣೆ ನಡೆಯಲಿರುವ ಈ ರಾಜ್ಯಗಳ 41 ಸ್ಥಾನಗಳಲ್ಲಿ ಕೇವಲ 10 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇನ್ನು ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ವಿರುದ್ಧವೇ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

Continue Reading

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

ಕ್ರೈಂ

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Prajwal Revanna Case: ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

Prajwal Revanna Case I was never kidnapped and son has made a false complaint Video of victim goes viral
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದ ಮಹಿಳೆ!

“ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ, ನಾನು ಎಲ್ಲಿಯೂ ಹೋಗಿಲ್ಲ. ನನ್ನ ಸಂಬಂಧಿಕರ ಮನೆಯಲ್ಲಿದ್ದೇನೆ. ರೇವಣ್ಣ ಆಗಲಿ, ಪ್ರಜ್ವಲ್ ರೇವಣ್ಣ ಆಗಲಿ, ಭವಾನಿ ಅಕ್ಕಾ ಆಗಲಿ, ಸತೀಶ್ ಬಾಬಾಣ್ಣ ಆಗಲಿ ಯಾರಿಂದಲೂ ತೊಂದರೆ ಆಗಿಲ್ಲ. ನನ್ನನ್ನು ಚೆನ್ನಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದಾರೆ. ನಾನು ಆರಾಮಾಗಿದ್ದೇನೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡುವಾಗ ವಿಚಾರ ಗೊತ್ತಾಯಿತು. ಮೊಬೈಲ್‌ನಲ್ಲಿ ಬಂದ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ. ಮನೆಯ ಬಳಿ ಯಾರು ಗಾಬರಿ ಆಗೋದು ಬೇಡ. ನಾನು ಸುರಕ್ಷಿವಾಗಿದ್ದೇನೆ. ಎಲ್ಲರೂ ಆರಾಮಾಗಿರಿ. ನಾಲ್ಕು ದಿನ ಸಂಬಂಧಿಕರ ಮನೆಗೆ ಹೋಗಿದ್ದೆ. ವಾಪಸ್‌ ಬರುತ್ತೇನೆ. ಎಲ್ಲಿ ಯಾರಿಗೆ ಮಾಹಿತಿ ಕೊಡಬೇಕೋ ಕೊಡುತ್ತೇನೆ. ಯಾರು ಮನೆ ಹತ್ತಿರ ಹೋಗಬೇಡಿ, ಪೊಲೀಸ್‌ನವರು ಟಾರ್ಚರ್ ಕೊಡಬೇಡಿ. ಎಲ್ಲರೂ ಗಾಬರಿಯಾಗುತ್ತಾರೆ. ನಾವು ಕೂಲಿ ಮಾಡಿಕೊಂಡು ಇರುವವರು ಹೊಟ್ಟೆ ಮೇಲೆ‌ ಹೊಡಿಯಬೇಡಿ. ಪೊಲೀಸಿನವರು ಮನೆ ಬಳಿ ಬಂದರೆ ಅಕ್ಕಪಕ್ಕದವರು ಏನೆಂದು ಕೊಳ್ಳುವುದಿಲ್ಲ. ಏನಾದರೂ ತೊಂದರೆಯಾದರೆ ನಾನೇ ಬಂದು ಹೇಳಿಕೆ ಕೊಡ್ತೇನೆ. ನನಗಾಗಲಿ, ಕುಟುಂಬದವರಿಗೆ ಆಗಲಿ, ಗಂಡನಿಗಾಗಲೀ ಏನಾದರೂ ತೊಂದರೆಯಾದರೆ ನೀವೇ ಜವಾಬ್ದಾರರು. ನನ್ನ ಮಗ ಗೊತ್ತಿಲ್ಲದೆ ಹೀಗೆ ಮಾಡಿಬಿಟ್ಟಿದ್ದಾನೆ. ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನಾಗಿಯೇ ಸಂಬಂಧಿಕರ ಮನೆಗೆ ಬಂದಿದ್ದೇನೆ” ಎಂದು ಸಂತ್ರಸ್ತೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಈ ವಿಡಿಯೊ ಮಾಡಿದ್ದು ಯಾರು?

ಸದ್ಯ ಎಸ್‌ಐಟಿ ವಶದಲ್ಲಿರುವ ಸಂತ್ರಸ್ತ ಮಹಿಳೆಯ ಈ ವಿಡಿಯೊವನ್ನು ಮಾಡಿದ್ದು ಯಾರು? ರಿಲೀಸ್ ಮಾಡಿದ್ದು ಯಾರು? ಎಂಬ ಪ್ರಶ್ನೆ ಈಗ ಎಸ್‌ಐಟಿಗೆ ತಲೆನೋವಾಗಿ ಕಾಡುತ್ತಿದೆ. ಹಾಗಾದರೆ, ತಾವು ವಶಕ್ಕೆ ಪಡೆಯುವ ಮೊದಲೇ ಈ ವಿಡಿಯೊವನ್ನು ಮಾಡಲಾಗಿತ್ತಾ? ಆದರೆ, ಮಹಿಳೆಯನ್ನ ಎಲ್ಲಿ ಇರಿಸಿ ಈ ವಿಡಿಯೊ ಮಾಡಲಾಗಿದೆ? ಈ ವಿಡಿಯೊವನ್ನು ಯಾವ? ಯಾರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಲಾಗಿದೆ. ಈಕೆಯೇ ಆ್ಯಂಡ್ರಾಯ್ಡ್ ಮೊಬೈಲ್ ಅನ್ನು ಬಳಕೆ ಮಾಡುತ್ತಿದ್ದರೇ ಎಂಬಿತ್ಯಾದಿ ಪ್ರಶ್ನೆಗಳೊಂದಿಗೆ ತನಿಖೆ ನಡೆಸಬೇಕಿದೆ.

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Prajwal Revanna Case Naveen Gowda post against MLA A Manju
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading
Advertisement
Lok Sabha Election 2024
ದೇಶ3 mins ago

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha Elections 2024 Jr NTR, Allu Arjun, Chiranjeevi cast votes
ಟಾಲಿವುಡ್16 mins ago

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

shivamogga triple murder case
ಕ್ರೈಂ38 mins ago

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Turbo Trailer Out mammoottys raj b shetty looks menacing
ಮಾಲಿವುಡ್44 mins ago

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Health Tips Kannada Stay away from these foods to get rid of acne
ಆಹಾರ/ಅಡುಗೆ1 hour ago

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

Kannada New Movie meghashri starrer kuntebille goes on floor
ಸ್ಯಾಂಡಲ್ ವುಡ್2 hours ago

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Brinda Acharya Saavira Gungali Video Song Out
ಸ್ಯಾಂಡಲ್ ವುಡ್2 hours ago

Brinda Acharya: ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ-ಭರತ್ ಬೋಪಣ್ಣ!

pm narendra Modi Varanasi road show
Lok Sabha Election 20242 hours ago

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Food Tips Kannada adulterated food effect health
ಲೈಫ್‌ಸ್ಟೈಲ್2 hours ago

Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ4 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ6 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ16 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ17 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ21 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌