ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ದಿನವೇ ರೋಹಿತ್‌ ಚಕ್ರತೀರ್ಥ ಸಮಿತಿ ವಜಾಗೊಳಿಸುವ ಬಹುತೇಕ ನಿರ್ಧಾರವಾಗಿತ್ತು. ಆದರೆ ಅದಕ್ಕೂ ಮುನ್ನ ಕೆಲವು ಪ್ರಕ್ರಿಯೆಗಳನ್ನು ಪೂರೈಸಲಾಗಿದೆ, ಅವುಗಳಲ್ಲಿ ಒಂದು ಬಿ.ಸಿ. ನಾಗೇಶ್‌ ಅವರು ನೀಡಿರುವ ಈ ವರದಿ ಎನ್ನಲಾಗುತ್ತಿದೆ.

VISTARANEWS.COM


on

bc nagesh report on rohit chakratirtha
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ರಚಿಸಿದ್ದ ರೋಹಿತ್‌ ಚಕ್ರತೀರ್ಥ ಸಮಿತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ವಿಸರ್ಜನೆ ಮಾಡಿದ್ದಾರೆ. ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಲಾಗಿದೆ ಎನ್ನುವುದರಿಂದ ಆರಂಭವಾರ ವಿವಾದ ಕುವೆಂಪು, ಬಸವಣ್ಣ, ನಾಡಗೀತೆವರೆಗೆ ಸಾಗಿಬಂತು.

ಮುಖ್ಯವಾಗಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನಾಡಗೀತೆಗೆ ಅವಮಾನದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ನಂತರದಲ್ಲಿ ಇಡೀ ವಿವಾದದ ದಿಕ್ಕು ಬದಲಾಯಿತು. ರೋಹಿತ್‌ ಚಕ್ರತೀರ್ಥ ಅವರನ್ನು ವಜಾ ಮಾಡಬೇಕು ಎಂಬ ಮಾತು ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾದರೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಒತ್ತಾಸೆ ಮೇರೆಗೆ ನಿರ್ಧಾರ ಮುಂದೂಡಲಾಯಿತು.

ಕೊನೆಯ ಅವಕಾಶವಾಗಿ, ಸ್ವತಃ ಸಚಿವರೇ ಸ್ವಾಮೀಜಿಯವರನ್ನು ಮಾತನಾಡಿಸಿ ಮನವೊಲಿಸುವ ಹೊಣೆ ಹೊತ್ತರು. ಈ ಸಂದರ್ಭದಲ್ಲಿ, ಆರೋಪಗಳ ಕುರಿತು ಒಂದು ವರದಿಯನ್ನು ಸಿದ್ಧಪಡಿಸಿ ಕೊಡುವಂತೆ ನಾಗೇಶ್‌ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಈ ವರದಿಯನ್ನು ಆಧರಿಸಿ ನಿರ್ಧಾರ ಮಾಡುವುದಾಗಿ ತಿಳಿಸಿದ್ದರು. ನಾಗೇಶ್‌ ಅವರು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ 14 ಅಂಶಗಳ ಸ್ಪಷ್ಟೀಕರಣ ವರದಿ ಇಲ್ಲಿದೆ.

ಕ್ರಮ ಸಂಖ್ಯೆಆರೋಪ/ಆಕ್ಷೇಪಣೆ ಸ್ಪಷ್ಟೀಕರಣ
1ರಾಷ್ಟ್ರಕವಿ ಕುವೆಂಪು ರವರ ವ್ಯಕ್ತಿತ್ವಕ್ಕೆ ಅವಮಾನವಾದಂತೆ ಬರೆಯಲಾಗಿದೆ.(4ನೇ ತರಗತಿಯ ಪರಿಸರ ಅಧ್ಯಯನದ ಪಠ್ಯಪುಸ್ತಕದಲ್ಲಿ ಕುವೆಂಪು ರವರ ಪರಿಚಯ ಮಾಡಿಸುವ ವಿಷಯಾಂಶದಲ್ಲಿ ‘ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನ್ನಿಸಿಕೊಂಡರು’ ಎಂದು ಬರೆದಿರುವ ಸಾಲುಗಳ ಬಗ್ಗೆ.-1ರಿಂದ 5ನೇ ತರಗತಿಗಳ ಪರಿಸರ ಅಧ್ಯಯನ ಪಠ್ಯಪುಸ್ತಕಗಳನ್ನು ಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ಪರಿಷ್ಕರಣೆಯನ್ನು ಮಾಡಿರುವುದಿಲ್ಲ. 4ನೇ ತರಗತಿಗೆ ಸಂಬಂಧಿಸಿದ ಸದರಿ ವಿಷಯಾಂಶವು 2014-15ರಲ್ಲಿ ಪ್ರೊ. ಮುಡಂಬಡಿತ್ತಾಯ ಸಮಿತಿಯು ರಚಿಸಿದ ಪಠ್ಯ ಹಾಗೂ ಪ್ರೊ. ಬರಗೂರುರವರ ಸಮಿತಿಯು ಪರಿಷ್ಕರಿಸಿದ ಪಠ್ಯಗಳಲ್ಲಿ ಇದ್ದದ್ದು ಹಾಗೆಯೇ ಮುಂದುವರಿದಿದೆ.

-2014-15ನೇ ಸಾಲಿನಿಂದಲೂ ಸದರಿ ಪಠ್ಯಪುಸ್ತಕ ಜಾರಿಯಲ್ಲಿದ್ದರೂ, ಈ ಕುರಿತು ಯಾವುದೇ ವಿವಾದ ಆಗಿರಲಿಲ್ಲ.
2ಕುವೆಂಪುರವರ ರಾಷ್ಟ್ರಕವಿ ಬರಹಗಳನ್ನು ಭಾಷಾ ಪಠ್ಯಪುಸ್ತಕದಿಂದ ಕೈಬಿಟ್ಟಿರುವ ಆರೋಪ-ಪ್ರೊ. ಮುಡಂಬಂಡಿತ್ತಾಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಕುವೆಂಪು ಅವರ ಒಟ್ಟು 8 ಪಾಠ/ಪದ್ಯಗಳಿದ್ದವು.

-ಪ್ರೊ. ಬರಗೂರು ಸಮಿತಿಯು ಕನ್ನಡ ಪ್ರಥಮ ಭಾಷೆ, ದ್ವಿತೀಯ ಭಾಷೆ ಹಾಗೂ ತೃತೀಯ ಭಾಷೆ ಸೇರಿ ಕುವೆಂಪುರವರ 1 ಪಾಠ ಕಡಿಮೆ ಮಾಡಿ ಒಟ್ಟು 7 ಬರಹಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿತ್ತು

-ಶ್ರೀ ರೋಹಿತ್‌ ಚಕ್ರತೀರ್ಥ ರವರು ಪರಿಷ್ಕರಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಹೊಸದಾಗಿ ಕುವೆಂಪುರವರ 3 ಪಾಠ/ಪದ್ಯಗಳನ್ನು ಸೇರಿಸಿದ್ದು, ಒಟ್ಟು 10 ಪಾಠ/ಪದ್ಯಗಳನ್ನು ಅಳವಡಿಸಲಾಗಿದೆ.
3ಭಗತ್‌ಸಿಂಗ್ ಪಾಠವನ್ನು ಕೈಬಿಡಲಾಗಿದೆ ಎಂಬ ಆರೋಪ-2021-22 ಸಾಲಿನ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಇದ್ದ ಭಗತ್‌ ಸಿಂಗ್‌ ಪಾಠವು (ಲೇಖಕರು: ಜಿ. ರಾಮಕೃಷ್ಣ) ಪರಿಷ್ಕೃತ ಪಠ್ಯಪುಸ್ತಕದಲ್ಲಿ ಮುಂದುವರಿದಿದೆ.

-ಭಗತ್‌ ಸಿಂಗ್‌ ಕುರಿತು ಸಮಾಜ ವಿಜ್ಞಾನ 7ನೇ ತರಗತಿ ಹಾಗೂ 10ನೇ ತರಗತಿ ಪಠ್ಯಪುಸ್ತಕಗಳಲ್ಲಿಯೂ ಮಾಹಿತಿಯನ್ನು ನೀಡಲಾಗಿದೆ.  

-2021-22 ಸಾಲಿನ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಇದ್ದ ಭಗತ್‌ ಸಿಂಗ್‌ ಪಾಠವು (ಲೇಖಕರು: ಜಿ. ರಾಮಕೃಷ್ಣ) ಪರಿಷ್ಕೃತ ಪಠ್ಯಪುಸ್ತಕದಲ್ಲಿ ಮುಂದುವರಿದಿದೆ.

-ಭಗತ್‌ ಸಿಂಗ್‌ ಕುರಿತು ಸಮಾಜ ವಿಜ್ಞಾನ 7ನೇ ತರಗತಿ ಹಾಗೂ 10ನೇ ತರಗತಿ ಪಠ್ಯಪುಸ್ತಕಗಳಲ್ಲಿಯೂ ಮಾಹಿತಿಯನ್ನು ನೀಡಲಾಗಿದೆ.  
4ಶ್ರೀ ನಾರಾಯಣ ಗುರು ಹಾಗೂ ಪೆರಿಯಾರ್‌ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ.-ಕಳೆದ ಸಾಲಿನ 10ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಶ್ರೀ ನಾರಾಯಣಗುರು ಹಾಗೂ ಪೆರಿಯಾರ್‌ ವಿಷಯಾಂಶವನ್ನು ನೀಡಲಾಗಿತ್ತು. ಪರಿಷ್ಕರಣೆ ಸಂದರ್ಭದಲ್ಲಿ ಮಕ್ಕಳಿಗೆ ಸಮಾಜವಿಜ್ಞಾನ ಪಠ್ಯಗಳಲ್ಲಿ ವಿಷಯಾಂಶಗಳ ಹೊರೆ ಎಂಬ ದೂರುಗಳು ಇದ್ದುದ್ದರಿಂದ ಸಮಾಜವಿಜ್ಞಾನದ ಕೆಲವು ಘಟಕಗಳನ್ನು ಸಂಪೂರ್ಣವಾಗಿ ಕೈಬಿಡಲಾಗಿತ್ತು. ಕೆಲವನ್ನು ಸಂಕ್ಷಿಪ್ತಗೊಳಿಸಲಾಗಿತ್ತು ಹಾಗೂ ಕೆಲವನ್ನು ಬೇರೆ ವಿಷಯಗಳಿಗೆ ವರ್ಗಾಯಿಸಲಾಗಿದೆ.

-ಅದರಂತೆ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿದ್ದ ಶ್ರೀ ನಾರಾಯಣಗುರು ಹಾಗೂ ಪೆರಿಯಾರ್‌ ವಿಷಯಾಂಶಗಳನ್ನು 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು ಎಂಬ ಪಾಠದಲ್ಲಿ ನೀಡಲಾಗಿದೆ.

-ಶ್ರೀ ನಾರಾಯಣಗುರು ಕುರಿತ ಪಾಠವನ್ನು 7ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಮುಂದುವರಿಸಲಾಗಿದೆ.
5ಟಿಪ್ಪು ಸುಲ್ತಾನ್‌ ಕುರಿತ ಪಾಠಗಳನ್ನು ತೆಗೆದಿರುವ ಆರೋಪ-ಕಳೆದ ಸಾಲಿನ ಸಮಾಜವಿಜ್ಞಾನ 6,7 ಹಾಗೂ 10ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್‌ ಕುರಿತು ಪಾಠಗಳನ್ನು ನೀಡಲಾಗಿತ್ತು.

-ಪರಿಷ್ಕೃತ 6,7 ಹಾಗೂ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲು ಟಿಪ್ಪು ಸುಲ್ತಾನ್‌ ಪಾಠಗಳನ್ನು ಉಳಿಸಿಕೊಳ್ಳಲಾಗಿದೆ.
6ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶಗಳಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪ-ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ʼವೀರಶೈವ ಧರ್ಮʼ ಎಂಬ ಉಲ್ಲೇಖವಿದೆ.

-ಎರಡೂ ಪಠ್ಯಗಳಲ್ಲಿ ಬಸವಣ್ಣನವರು ʼಲಿಂಗದೀಕ್ಷೆ ಪಡೆದರುʼ ಎಂಬ ಉಲ್ಲೇಖವಿದೆ. 
7ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿದ್ದ ಕೆಲವು ಲೇಖಕರ ಪಾಠ/ಪದ್ಯಗಳನ್ನು ಪಠ್ಯಪುಸ್ತಕದಿಂದ ಕೂಬಿಟ್ಟಿರುವ ಆಕ್ಷೇಪಣೆ-1ರಿಂದ 10ನೇ ತರಗತಿ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಪ್ರಥಮಭಾಷೆಯಲ್ಲಿ 33 ಪಾಠ/ಪದ್ಯಗಳು, ದ್ವಿತೀಯ ಭಾಷೆಯಲ್ಲಿ 8 ಪಾಠ/ಪದ್ಯಗಳು, ತೃತೀಯ ಭಾಷೆಯಲ್ಲಿ 4 ಪಾಠ/ಪದ್ಯಗಳು ಬದಲಾವಣೆ ಮಾಡಲಾಗಿದೆ.

-ಯಥಾವತ್ತಾಗಿ ಉಳಿಸಿಕೊಂಡಿರುವ ಪಾಠ/ಪದ್ಯಗಳು:
*ಪ್ರಥಮ ಭಾಷೆ:165
*ದ್ವಿತೀಯ ಭಾಷೆ: 162
*ತೃತೀಯ ಭಾಷೆ:94
8ಪರಿಷ್ಕೃತ ಕನ್ನಡ ಪಠ್ಯಪುಸ್ತಕದಲ್ಲಿರುವ ಕೆಲವುಪದ್ಯ/ಗದ್ಯಗಳಿಗೆ ನೀಡಿದ ಅನುಮತಿಯನ್ನು ಹಿಂಪಡೆದಿರುವ ಬಗ್ಗೆ1ರಿಂದ 10ನೇ ತರಗತಿಯ ಪರಿಷ್ಕೃತ ಕನ್ನಡ ಭಾಷೆ ಪಠ್ಯಪುಸ್ತಕದಲ್ಲಿರುವ ತಮ್ಮ ಪದ್ಯ/ಗದ್ಯಗಳಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವುದಾಗಿ ಇದುವರೆಗೆ 7 ಲೇಖಕರು ಹೇಳಿದ್ದಾರೆ
9ಶ್ರೀ ಹೆಡಗೆವಾರ್‌ ರವರ ಪಾಠವನ್ನು 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ-ನಿಜವಾದ ಆದರ್ಶಪುರುಷ ಯಾರಾಗಬೇಕು ಎಂಬ ಸದರಿ ಪಾಠವು ವ್ಯಕ್ತಿಗಳ ಬದಲು ತತ್ವವನ್ನು ಗೌರವಿಸಿ ಎಂಬ ಸಂದೇಶ ನೀಡುತ್ತಿದ್ದು, ಬರಹದ ಮೌಲ್ಯವನ್ನಾಧರಿಸಿ ಆಯ್ಕೆ ಮಾಡಿ ಅಳವಡಿಸಲಾಗಿದೆ.

-ಶಿವಕೋಟ್ಯಾಚಾರ್ಯರವರ ಸುಕುಮಾರ ಸ್ವಾಮಿಯ ಕಥೆ ಪಾಠದ ಬದಲು ಸೇರ್ಪಡೆ ಮಾಡಲಾಗಿದೆ
10ಶ್ರೀ ಸೂಲಿಬೆಲೆಯವರ ʼತಾಯಿ ಭಾರತಿಯ ಅಮರ ಪುತ್ರರುʼ ಎಂಬ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿರುವ ಬಗ್ಗೆ-ಸದರಿ ಪಾಠವು ಹುತಾತ್ಮರಾದ ಶ್ರೀ ಭಗತ್‌ ಸಿಂಗ್‌, ಸುಖದೇವ್‌ ಹಾಗೂ ರಾಜಗುರುರವರ ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯ ಕಥೆಯನ್ನು ಹೊಂದಿದ್ದು, ಪಾಠದ ವಿಷಯದ ಮೌಲ್ಯದ ಕಾರಣ ಆಯ್ಕೆ ಮಾಡಿ ಅಳವಡಿಸಲಾಗಿದೆ.
11ಸಮಿತಿ ಅಧ್ಯಕ್ಷರಾದ ಶ್ರೀ ರೋಹಿತ್‌ ಚಕ್ರತೀರ್ಥರವೆ ಮೇಲೆ ಇರುವ ಆರೋಪ ಕುರಿತು-2017ರಲ್ಲಿ ಆದ ಘಟನೆಯಿದು. ಅಪರಿಚಿತರು ಕುವೆಂಪುರವರ ಪದ್ಯದ ದಾಟಿಯಲ್ಲಿ ಯಾರೋ ಬರೆದ ಕವನವನ್ನು ರೋಹಿತ್‌ ಚಕ್ರತೀರ್ಥರವರು ಸಾಮಾಜಿಕ ಮಾಧ್ಯಮದಲ್ಲಿ ಷೇರ್‌ ಮಾಡಿದ್ದರಷ್ಟೆ. ಅದು ಅವರು ಬರೆದದ್ದಲ್ಲ.

-ಈ ಕುರಿತು ಪೊಲೀಸ್‌ ತನಿಖೆ ನಡೆದಿದ್ದು, ಬಿ, ರಿಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
12ಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ಎಲ್ಲ ವಿಷಯಗಳ ಪಠ್ಯಪುಸ್ತಕಗಳನ್ನೂ ಸಮಗ್ರವಾಗಿ ಪರಿಷ್ಕರಣೆ ಮಾಡಲಾಗಿದೆ ಎಂಬ ಆರೋಪಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ವಾಸ್ತವವಾಗಿ 1ರಿಂದ 10ನೇ ತರಗತಿಯ ಕನ್ನಡ ಭಾಷೆಯ 15 ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ.

-6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದ 5 ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ.
13ಪಠ್ಯಪುಸ್ತಕಗಳನ್ನು ಪಕ್ಷ ಪುಸ್ತವನ್ನಾಗಿ ಮಾಡಿದ್ದು ಯಾರು?-2014-15ರಲ್ಲಿ ಸಾಕಷ್ಟು ಉತ್ತಮವಾಗಿ ರೂಪಿಸಲ್ಪಟ್ಟ ನೂತನ ಪಠ್ಯಪುಸ್ತಕಗಳನ್ನು ಜಾರಿಯಾದ ಒಂದೆರಡು ವರ್ಷದಲ್ಲಿಯೇ ಅನಗತ್ಯವಾಗಿ ಕೇಸರೀಕರಣದ ನೆಪವೊಡ್ಡಿ ಮತ್ತೊಮ್ಮೆ ಪರಿಷ್ಕರಿಸಲು ಅಂದಿನ ಸರ್ಕಾರ ನಿರ್ಧಾರ ಮಾಡಿ 2017-18ರಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ರಚಿತವಾದ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಜಾರಿಗೊಳಿಸಿತ್ತು.

-ಪ್ರೊ. ಬರಗೂರು ಸಮಿತಿಯಿಂದ ರಚಿತವಾದ ಪಠ್ಯಪುಸ್ತಕಗಳಲ್ಲಿ ನಿರ್ದಿಷ್ಟ ಜಾತಿ, ಧರ್ಮ, ಪಂಥಗಳಿಗೆ ಚ್ಯುತಿ ತರುವ ಅಂಶಗಳು ಇದ್ದ ಕಾರಣ ಸಮಾಜದ ಕೆಲ ವರ್ಗ ಸರ್ಕಾರಕ್ಕೆ ಮನವಿ ಮಾಡಿದ್ದರ ಮೇರೆಗೆ 2020-21ನೇ ಸಾಲಿನಲ್ಲಿ ಸರ್ಕಾರವು ರೋಹಿತ್‌ ಚಕ್ರತೀರ್ಥರವರ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಯನ್ನು ರಚನೆ ಮಾಡಿತ್ತು.

-ಪ್ರೊ. ಬರಗೂರು ಸಮಿತಿಯ ಪಠ್ಯಪುಸ್ತಸಕಗಳಲ್ಲಿ ಇದ್ದ ಕೆಲ ಸಮಸ್ಯೆಗಳ ಕುರಿತ ವಿವರಗಳನ್ನು ನೀಡಲಾಗಿದೆ.
14ಪಠ್ಯಪುಸ್ತಕಗಳು ಮುದ್ರಣಗೊಂಡಿಲ್ಲ ಮತ್ತು ಶಾಲೆಗಳಿಗೆ ಸರಬರಾಜು ಆಗಿಲ್ಲ ಎಂಬ ಮಾಹಿತಿಯ ಕುರಿತು-ಪಠ್ಯಪುಸ್ತಕಗಳ ಮುದ್ರಣ ಪೂರೈಕೆಗಾಗಿ ಟೆಂಡರನ್ನು ದಿನಾಂಕ 22.12.2021ರಂದು ಕರೆಯಲಾಗಿತ್ತು. ಮುದ್ರಕರಿಗೆ ಕಾರ್ಯಾದೇಶವನ್ನು ದಿನಾಂಕ 18.02.2022ರಿಂದ 05.03.2022ರಲ್ಲಿ ನೀಡಲಾಗಿತ್ತು.

-ಪ್ರಸ್ತುತ ದಿನಾಂಕ: 3-6-2022ರಲ್ಲಿದ್ದಂತೆ ಪಠ್ಯಪುಸ್ತಕಗಳು ಶೇ.79.70ರಷ್ಟು ಮುದ್ರಣಗೊಂಡು ಶೇ.66.98 ಶಾಲೆಗಳಿಗೆ ಸರಬರಾಜು ಆಗಿರುತ್ತದೆ.

ಇದನ್ನೂ ಓದಿ | ರೋಹಿತ್‌ ʼಚಕ್ರವ್ಯೂಹʼದಲ್ಲಿ CM ಬಸವರಾಜ ಬೊಮ್ಮಾಯಿ: ಇಂದು ಕ್ಲೈಮ್ಯಾಕ್ಸ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಇದೆಲ್ಲವೂ ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಎಚ್‌.ಡಿ. ರೇವಣ್ಣ ಅವರ ಬಳಿ ವಿಸ್ತೃತವಾಗಿ ಚರ್ಚೆ ಮಾಡಿ ತಾಕೀತು ಮಾಡಿದ್ದಾರೆನ್ನಲಾಗಿದೆ.

VISTARANEWS.COM


on

Prajwal Revanna Case Deve Gowda lashes out at Bhavani
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ (Bhavani Revanna) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ ಬಿಟ್ಟಿದ್ದು ಎಂಬುದಾಗಿ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ, ದೇವೇಗೌಡರ ಮನೆಯತ್ತಲೂ ಸುಳಿಯಲಿಲ್ಲ. ಇದು ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ. ತಾವು ಗಳಿಸಿಟ್ಟ ಗೌರವ, ಹೆಸರನ್ನು ಮಣ್ಣು ಪಾಲಾಗಲು ಬಿಡುವುದಿಲ್ಲ. ಆ ರೀತಿ ಮಾಡಲು ಇನ್ನು ಮುಂದೆ ಅವಕಾಶವನ್ನೂ ಕೊಡುವುದಿಲ್ಲ ಎಂದು ಗುಡುಗಿದ್ದಾರೆನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

ಹಾಗಾದರೆ ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು. ಆಸರೆಯ ಮಾತನಾಡಬೇಕಿತ್ತು. ಆದರೆ, ಈ ಯಾವುದನ್ನೂ ಮಾಡದ ಭವಾನಿ, ತಮ್ಮ ಸೇಫ್‌ ಅನ್ನು ಮಾತ್ರವೇ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪುತ್ರ ಪ್ರಜ್ವಲ್ ಸಹ ತಂದೆ ಜೈಲುಪಾಲಾದರೂ ನನಗೇನು ಎಂಬ ರೀತಿಯಲ್ಲಿ ವಿದೇಶವನ್ನು ಬಿಟ್ಟು ಹೊರ ಬರುತ್ತಿಲ್ಲ. ಇದೆಲ್ಲವೂ ದೇವೇಗೌಡರಿಗೆ ಸಿಟ್ಟು ತರಿಸಿದೆ ಎನ್ನಲಾಗಿದೆ.

ಅಮ್ಮ – ಮಗನ ಆಟಕ್ಕೆ ರೇವಣ್ಣ ಬಲಿ ಎಂದು ಅಸಮಾಧಾನ

ಸಾಮಾನ್ಯವಾಗಿ ಪುತ್ರನ ಕುಟುಂಬದ ವ್ಯವಹಾರಗಳಿಗೆ ತಲೆ ಹಾಕದ ಎಚ್.ಡಿ. ದೇವೇಗೌಡರು, ಈ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಹೆಸರು ಮಣ್ಣುಪಾಲಾಗುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರೇವಣ್ಣ ಅವರನ್ನು ಕರೆದು ಒಂದಷ್ಟು ಬುದ್ಧಿ ಮಾತುಗಳನ್ನು ಹೇಳಿದ್ದಾರೆ. ಅಮ್ಮ – ಮಗನ ಆಟಕ್ಕೆ ನೀನು ಬಲಿಯಾಗುತ್ತಿರುವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ನಿನ್ನ ಕಷ್ಟದ ಕಾಲದಲ್ಲಿಯೂ ಭವಾನಿ ಸಾಥ್‌ ಕೊಡಲಿಲ್ಲವೆಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನ ಒಳ್ಳೆಯತನವೇ ಮುಳುವಾಯಿತು ಎಂದು ಎಚ್‌.ಡಿ. ದೇವೇಗೌಡ ಕಿಡಿಕಾರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಕರೆದು ಬುದ್ಧಿ ಹೇಳು, ಮತ್ತೆ ಹೀಗಾಗದಂತೆ ನೋಡಿಕೋ!!

ಭವಾನಿ ಮತ್ತು ಮಕ್ಕಳು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಯ ನೋಡಿ ಅವರೆಲ್ಲರಿಗೂ ಎಚ್ಚರಿಕೆ ಕೊಡು. ಪ್ರಜ್ವಲ್ ವಿದೇಶದಿಂದ ಬಂದು ಕೋರ್ಟ್‌ನಿಂದ ಜಾಮೀನು ಪಡೆದ ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನೀನು ಜವಾಬ್ದಾರಿಯಿಂದ ನೋಡಿಕೊ ಎಂದು ಎಚ್.ಡಿ. ರೇವಣ್ಣ ಅವರಿಗೆ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

Continue Reading

ದೇಶ

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

CAA

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Continue Reading

ವಿದೇಶ

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Google: ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ.

VISTARANEWS.COM


on

Google
Koo

ವಾಷಿಂಗ್ಟನ್:‌ ಇದೇನಿದ್ದರೂ ಡಿಜಿಟಲ್‌ (Digital) ಯುಗ. ಎಲ್ಲ ಮಾಹಿತಿಯೂ ಈಗ ಕಂಪ್ಯೂಟರ್‌ನಲ್ಲಿ, ಗೂಗಲ್‌ ಕ್ಲೌಡ್‌ ಸೇರಿ ಹಲವು ಮಾದರಿಯಲ್ಲಿ ಸಂಗ್ರಹಿಸಲಾಗುತ್ತದೆ. ಬ್ಯಾಂಕಿಂಗ್‌ನಿಂದ ಹಿಡಿದು ಎಲ್ಲ ಕ್ಷೇತ್ರಗಳ ಮಾಹಿತಿಯೂ ಆನ್‌ಲೈನ್‌ನಲ್ಲೇ ಸಂಗ್ರಹಿಸಲಾಗುತ್ತದೆ. ಆದರೆ, ಈ ಮಾಹಿತಿ ಡಿಲೀಟ್‌ ಮಾಡಿದರೆ, ಯಾರಾದರೂ ಡಿಲೀಟ್‌ ಮಾಡಿದರೆ ಆಗುವ ಅನಾಹುತಗಳು ಅಷ್ಟಿಷ್ಟಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಗೂಗಲ್‌ (Google) ಸಂಸ್ಥೆಯು ಗೂಗಲ್‌ ಕ್ಲೌಡ್‌ನಲ್ಲಿ (Google Cloud) ಸುಮಾರು 10.43 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾವನ್ನು ಅಚಾತುರ್ಯವಾಗಿ ಡಿಲೀಟ್‌ ಮಾಡಿದೆ.

ಆಸ್ಟ್ರೇಲಿಯಾದ ನಿವೃತ್ತಿದಾರರಿಗೆ ಪಿಂಚಣಿ ಒದಗಿಸುವ ಯುನಿಸೂಪರ್‌ (UniSuper) ಎಂಬ ಸಂಸ್ಥೆಯ 6.2 ಲಕ್ಷ ಜನರ ಮಾಹಿತಿಯನ್ನು ಗೂಗಲ್‌ ಡಿಲೀಟ್‌ ಮಾಡಿದೆ. ಯುನಿಸೂಪರ್‌ ಸಂಸ್ಥೆಯು ಡೇಟಾ ಸಂಗ್ರಹಕ್ಕಾಗಿ ಗೂಗಲ್‌ ಕ್ಲೌಡ್‌ ಜತೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಗೂಗಲ್‌ ಸಂಸ್ಥೆಯು ಅಚಾತುರ್ಯದಿಂದ 6.2 ಲಕ್ಷ ಜನರ ಡೇಟಾವನ್ನು ಡಿಲೀಟ್‌ ಮಾಡಿದೆ. ಕಳೆದ ಒಂದು ವಾರದಿಂದ ಯುನಿಸೂಪರ್‌ ಸದಸ್ಯರು ತಮ್ಮ ಪಿಂಚಣಿ ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Sorry ಎಂದ ಗೂಗಲ್‌

ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಿ ಎಂಬುದಾಗಿ ಸಂಸ್ಥೆಯನ್ನು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಗೂಗಲ್‌ ಜತೆಗಿನ ಒಪ್ಪಂದವನ್ನು ಯುನಿಸೂಪರ್‌ ರದ್ದುಗೊಳಿಸಿದೆ.

ಬ್ಯಾಕಪ್‌ಗಾಗಿ ಹರಸಾಹಸ

6 ಲಕ್ಷಕ್ಕೂ ಅಧಿಕ ಮಾಹಿತಿಯನ್ನು ಮರು ಸಂಗ್ರಹಿಸಲು (ಬ್ಯಾಕಪ್‌) ಯುನಿಸೂಪರ್‌ ಹರಸಾಹಸ ಮಾಡುತ್ತಿದೆ. ಡಿಲೀಟ್‌ ಆಗಿರುವ ಎಲ್ಲ ಮಾಹಿತಿಯನ್ನು ಬ್ಯಾಕಪ್‌ ಮಾಡಿಕೊಳ್ಳಲು ಬೇರೊಂದು ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಮಾಹಿತಿಯು ತಾತ್ಕಾಲಿಕವಾಗಿ ಡಿಲೀಟ್‌ ಆಗಿದೆಯೋ, ಇಲ್ಲವೋ? ಅದನ್ನು ಬ್ಯಾಕಪ್‌ ಮಾಡುವುದು ಸುಲಭವೋ, ಇಲ್ಲವೋ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಾಹಿತಿ ಲಭ್ಯವಾಗುವವರೆಗೂ ಗ್ರಾಹಕರು ಹಾಗೂ ಕಂಪನಿಗೆ ಆತಂಕ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading
Advertisement
private hospitals heads and health department officers Meeting at vijayanagara DC office
ವಿಜಯನಗರ3 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್5 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ6 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್6 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Team India Coach Applications
ಕ್ರೀಡೆ11 mins ago

Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

CAA
ದೇಶ15 mins ago

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Kannada New Movie swapna mantapa shooting compleated
ಸ್ಯಾಂಡಲ್ ವುಡ್37 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್38 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ51 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್52 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌