LK Advani: ಅಡ್ವಾಣಿಗೆ ಭಾರತರತ್ನ; ವಿನಯವಂತ ರಾಜಕಾರಣಿಗೆ ಸಂದ ಗೌರವ; ಪೇಜಾವರ ಶ್ರೀ - Vistara News

ರಾಜಕೀಯ

LK Advani: ಅಡ್ವಾಣಿಗೆ ಭಾರತರತ್ನ; ವಿನಯವಂತ ರಾಜಕಾರಣಿಗೆ ಸಂದ ಗೌರವ; ಪೇಜಾವರ ಶ್ರೀ

LK Advani: ರಥಯಾತ್ರೆಯ ಮೂಲಕ ಸುಪ್ತವಾಗಿದ್ದ ರಾಮಮಂದಿರ ಹೋರಾಟಕ್ಕೆ ಬಲ ತುಂಬಿದವರು ಇವರು. ಹಿರಿಯ ಶ್ರೀಗಳಾಗಿರುವ ವಿಶ್ವೇಶ ತೀರ್ಥರ ಜತೆ ಅಡ್ವಾಣಿಯವರಿಗೆ ವಿಶೇಷ ಒಡನಾಟ ಇತ್ತು. ಈ ವಯಸ್ಸಿನಲ್ಲೂ ಅಡ್ವಾಣಿ ಅವರ ಶ್ರದ್ಧೆ ಮೆಚ್ಚುವಂಥದ್ದು ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

VISTARANEWS.COM


on

Bharat Ratna for LK Advani tribute to a humble politician says Pejawar Sri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (LK Advani) ಅವರಿಗೆ ‘ಭಾರತ ರತ್ನ’ (Bharat Ratna) ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿ (Vishwa Prasanna Swamiji) ಸಂತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಿಂದ ಸಂದೇಶ ನೀಡಿರುವ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿ ಈ ವಿಚಾರ ಕೇಳಿ ತುಂಬಾ ಸಂತೋಷವಾಗಿದೆ. ಶ್ರೀರಾಮಚಂದ್ರನ ಭಕ್ತಿಯನ್ನು ದೇಶದಲ್ಲಿ ಜಾಗೃತವಾಗಿ ಇಟ್ಟವರು ಅಡ್ವಾಣಿಯಾಗಿದ್ದಾರೆ. ರಥಯಾತ್ರೆಯ ಮೂಲಕ ಸುಪ್ತವಾಗಿದ್ದ ರಾಮಮಂದಿರ ಹೋರಾಟಕ್ಕೆ ಬಲ ತುಂಬಿದವರು ಇವರು. ಹಿರಿಯ ಶ್ರೀಗಳಾಗಿರುವ ವಿಶ್ವೇಶ ತೀರ್ಥರ ಜತೆ ಅಡ್ವಾಣಿಯವರಿಗೆ ವಿಶೇಷ ಒಡನಾಟ ಇತ್ತು. ಈ ವಯಸ್ಸಿನಲ್ಲೂ ಅಡ್ವಾಣಿ ಅವರ ಶ್ರದ್ಧೆ ಮೆಚ್ಚುವಂಥದ್ದು ಎಂದು ಹೇಳಿದ್ದಾರೆ.

ಅಡ್ವಾಣಿ ದೇಶದ ರಾಜಕಾರಣಕ್ಕೆ ಉತ್ತಮ ಮಾರ್ಗದರ್ಶಿಯಾಗಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಹುಟ್ಟಿ ದೊಡ್ಡ ರಾಜಕಾರಣಿಯಾಗಿ ಬೆಳೆದವರು ಅವರು. ಉಪ ಪ್ರಧಾನಿಯಾಗಿ ಗೃಹ ಇಲಾಖೆ ಹಾಗೂ ವಾರ್ತಾ ಸಚಿವರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಕೇವಲ ರಾಜಕೀಯ ಮಾತ್ರವಲ್ಲ ಧಾರ್ಮಿಕ ಪ್ರಜ್ಞೆ ಇರುವ ವ್ಯಕ್ತಿಯಾಗಿದ್ದಾರೆ. ನಾನು ಅಯೋಧ್ಯೆ ರಾಮ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಾಸ್ಥನಾದಾಗ ಆಡ್ವಾಣಿ ಅವರನ್ನು ಭೇಟಿಯಾಗಿದ್ದೆ. ಅವರ ಮನೆಗೆ ತೆರಳಿ ಅವರನ್ನು ಅಭಿನಂದಿಸಿ ಬಂದಿದ್ದೆ ಎಂದು ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

ಅಡ್ವಾಣಿ ಓರ್ವ ವಿನಯವಂತ ರಾಜಕಾರಣಿಯಾಗಿದ್ದಾರೆ. ಇಳಿ ವಯಸ್ಸಿನಲ್ಲೂ ಬಾಗಿಲವರೆಗೆ ಬಂದು ನನ್ನನ್ನು ಬೀಳ್ಕೊಟ್ಟು ಹೋಗಿದ್ದರು. ರಾಮ ಮತ್ತು ಕೃಷ್ಣದೇವರ ಅನುಗ್ರಹ ಆಡ್ವಾಣಿಯವರಿಗೆ ಸದಾ ಕಾಲ ಇರಲಿ ಎಂದು ವಿಶ್ವಪ್ರಸನ್ನ ಸ್ವಾಮೀಜಿ ಶುಭ ಹಾರೈಸಿದ್ದಾರೆ.

ವಿಜಯೇಂದ್ರ ಅಭಿನಂದನೆ

ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಪ್ರಕಟಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದು, ಇದಕ್ಕಾಗಿ ಮೋದಿ ಮತ್ತು ಅವರ ಸಂಪುಟದ ಸದಸ್ಯರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ಅಲ್ಲದೆ, ಅಡ್ವಾಣಿ ಅವರಿಗೆ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಅಡ್ವಾಣಿ ಅವರು ಭಾರತದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ಅವರು ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ನಡೆಯೂ ಆದರ್ಶಪ್ರಾಯವಾಗಿವೆ ಎಂದು ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ: ಆರ್.‌ ಅಶೋಕ್

ಎಲ್‌.ಕೆ. ಅಡ್ವಾಣಿ ಅವರು ತಾವು ನಂಬಿರುವ ತತ್ವ ಸಿದ್ಧಾಂತಗಳಿಗೆ ಚ್ಯುತಿ ಬರದಂತೆ ನಡೆದುಕೊಂಡಿರುವ ವ್ಯಕ್ತಿಯಾಗಿದ್ದಾರೆ. ಮೂರು ಸಂದರ್ಭದಲ್ಲಿ ಅಡ್ವಾಣಿ ಜತೆ ಸೇವೆ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ಅದು ನನ್ನ ಪುಣ್ಯ. ದೇಶದ ನೆಚ್ಚಿನ ನಾಯಕ ಅಡ್ವಾಣಿಯವರಿಗೆ ಭಾರತ ರತ್ನ ಸಿಕ್ಕಿರುವುದು ಖುಷಿಯಾಗಿದೆ. ಅವರಿಗೆ ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿ.ಎಸ್.‌ ಯಡಿಯೂರಪ್ಪ ಅಭಿನಂದನೆ

ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರು ಟ್ವೀಟ್‌ ಮಾಡಿ ಸಂತಸವನ್ನು ಹಂಚಿಕೊಂಡಿದ್ದಾರೆ. “ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪ ಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು.

ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನೂ ಸುದೀರ್ಘ ಕಾಲ ಆ ದೇವರು ಅವರಿಗೆ ಉತ್ತಮ ಆರೋಗ್ಯದೊಂದಿಗೆ ನಮಗೆ ಪ್ರೇರಣೆ ನೀಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೋರುತ್ತೇನೆ” ಎಂದು ಹೇಳಿದ್ದಾರೆ.

ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಅಭಿನಂದನೆ

ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಗೌರವ ಪ್ರಕಟಿಸಿದೆ. ರಾಷ್ಟ್ರ ನಾಯಕನಿಗೆ ಭಾರತ ರತ್ನ ಗೌರವ ಪುರಸ್ಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಘೋಷಿಸಿದ್ದಾರೆ ಎಂದು ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಮ ಜನ್ಮಭೂಮಿ ಹೋರಾಟದ ನೇತೃತ್ವ ಸೇರಿದಂತೆ ದೇಶಕ್ಕೆ ಎಲ್.ಕೆ. ಅಡ್ವಾಣಿ ಅವರ ಕೊಡುಗೆ ಅವಿಸ್ಮರಣೀಯ. ರಾಷ್ಟ್ರದ ಒಬ್ಬ ಧೀಮಂತ ನಾಯಕನಿಗೆ ಭಾರತ ರತ್ನ ಗೌರವ ಸಂದಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ವನ್ನು ನೀಡುತ್ತಿರುವುದು ಖುಷಿ ತಂದಿದೆ. ಅಡ್ವಾಣಿ ಅವರು ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರು. ಭಾರತದ ಅಭಿವೃದ್ಧಿಗೆ ಈ ಮುತ್ಸದ್ಧಿಯ ಕೊಡುಗೆ ಅಪಾರವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ, ಉಪ ಪ್ರಧಾನಿಯಾಗಿ ದೇಶಕ್ಕೆ ಅಮೋಘ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ ಎಂದು ಸಚಿವ ಜೋಶಿ ಬಣ್ಣಿಸಿದ್ದಾರೆ.

ಇಂದು ಅತ್ಯಂತ ಸಂತೋಷದ ಸಮಯ: ಸಂಸದ ಸದಾನಂದಗೌಡ

ಎಲ್‌.ಕೆ. ಅಡ್ವಾಣಿಯವರಿಗೆ ಭಾರತರತ್ನ ಗೌರವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಡಿ.ವಿ. ಸದಾನಂದಗೌಡ, ಇವತ್ತು ದೇಶದ 140 ಕೋಟಿ ಜನರು ಸಂತಸಪಡುವ ದಿನವಾಗಿದೆ. ಶ್ರೀರಾಮ ಮಂದಿರ ಹೋರಾಟವನ್ನು ಪ್ರಾರಂಭ ಮಾಡಿದ್ದೇ ಅಡ್ವಾಣಿಯವರು. ಭಾವನಾತ್ಮಕ ಸಂಬಂಧಗಳು ದೇಶವನ್ನು ಒಗ್ಗೂಡಿಸುತ್ತವೆ. ಆದರೆ, ಕಾಂಗ್ರೆಸ್ ದೇಶವನ್ನು ಒಡೆಯುವ ಕೆಲಸ ಮಾಡಿದ್ದರು. ಇದನ್ನು ಒಗ್ಗೂಡಿಸುವ ಕೆಲಸವನ್ನು ರಾಮ ಮಂದಿರ ಮಾಡಿತು. ಆದರೆ, ಈ ಹಿಂದೆ ರಾಮ ಮಂದಿರ ಕೆಲಸವು ಕಾಂಗ್ರೆಸ್‌ನಿಂದ ನನೆಗುದಿಗೆ ಬಿದ್ದಿತ್ತು. ಅಡ್ವಾಣಿಯವರಿಗೆ ಯಾವತ್ತೋ ಭಾರತರತ್ನ ಸಿಗಬೇಕಿತ್ತು. ಇವತ್ತು ಸಿಕ್ಕಿರುವುದು ಖುಷಿ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ: LK Advani : ಎಲ್.ಕೆ. ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಕಾಂಗ್ರೆಸ್‌ನವರಿಗೆ ನೇರ ಹೊಡೆತ

ಯಾವ ಮನೆಗೆ ಅಕ್ಷತೆ ತೆಗೆದುಕೊಂಡು ಹೋದರೂ ಜೈ ಶ್ರೀರಾಮ್ ಅಂತಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಸಹ ಜೈ ಶ್ರೀರಾಮ್ ಅಂತಿದ್ದರು. ಈಗ ಅಡ್ವಾಣಿ ಅವರಿಗೆ ಭಾರತ ರತ್ನ ಕೊಟ್ಟಿರುವುದಕ್ಕೆ ಕಂಗಾಲಾಗುವ ವ್ಯಕ್ತಿಗಳು ಅಂದರೆ ಅದು ಕಾಂಗ್ರೆಸ್‌ನವರಾಗಿದ್ದಾರೆ. ಅವರನ್ನು ಬಿಜೆಪಿ ಕಡೆಗಣಿಸಿಲ್ಲ, ಕಡೆಗಣಿಸುವುದೂ ಇಲ್ಲ. ಭಾರತದ ಉನ್ನತ ಗೌರವವನ್ನು ಈಗ ಬಿಜೆಪಿಯಿಂದ ಕೊಟ್ಟಿದ್ದೇವೆ. ಕಾಂಗ್ರೆಸ್‌ನವರು ಇನ್ನೆರಡು ದಿನ ನಿಮ್ಮ ಕಣ್ಣಿಗೆ ಕಾಣೋದಿಲ್ಲ. ಯಾವ ಕಾಲಕ್ಕೆ ಏನು ಕೊಡಬೇಕು ಅಂತ ಮೋದಿಗೆ ಗೊತ್ತು. ಕಾಂಗ್ರೆಸ್‌ನವರಿಗೆ ನೇರ ಹೊಡೆತ ಇದು. ಇಂದು ಅತ್ಯಂತ ಸಂತೋಷದ ಸಮಯ ಎಂದು ಡಿ.ವಿ. ಸದಾನಂದ ಗೌಡ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

PM Narendra Modi:ಉತ್ತರಪ್ರದೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮಲಲ್ಲಾ ಮತ್ತೆ ಟೆಂಟ್‌ನಲ್ಲಿ ಕೂರಬೇಕಾದೀತು. ಏಕೆಂದರೆ ಅವರು ಬುಲ್ಡೋಜರ್‌ ಮೂಲಕ ರಾಮಮಂದಿರವನ್ನು ಕೆಡವುತ್ತಾರೆ. ಬುಲ್ಡೋಜರ್‌ ಅನ್ನು ಎಲ್ಲಿ ಬಳಸಬೇಕು ಅಥವಾ ಎಲ್ಲಿ ಬಳಸಬಾರದು ಎಂಬುದನ್ನು ಯೋಗಿಯಿಂದ ಕಲಿಯಬೇಕು. ಒಂದೆಡೆ ದೇಶದ ಪ್ರಗತಿಗಾಗಿ ಎನ್‌ಡಿಎ ಶ್ರಮಿಸುತ್ತಿದೆ. ಮತ್ತೊಂದೆಡೆ ಇಂಡಿಯಾ ಒಕ್ಕೂಟ ದೇಶದಲ್ಲಿ ಅಶಾಂತಿ ಹುಟ್ಟಿಸಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌(Yogi Adityanath) ಬುಲ್ಡೋಜರ್‌ ಬಾಬಾ ಎಂದೇ ಜನಪ್ರಿಯರಾದವರು. ಕೊಲೆ ದರೋಡೆ, ಅತ್ಯಾಚಾರ, ಗೂಂಡಾಗಿರಿ ಮಾಡುವವರಿಗೆ ಬಿಸಿ ಮುಟ್ಟಿಸಲು ಅವರ ಮನೆಗಳನ್ನೇ ಬುಲ್ಡೋಜರ್‌ ಮೂಲಕ ನೆಲಸಮ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದವರು. ಇದೀಗ ಈ ಬುಲ್ಡೋಜರ್‌ ನೀತಿ ಬಗ್ಗೆ ನರೇಂದ್ರ ಮೋದಿ(PM Narendra Modi) ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್‌(Congress) ಮತ್ತು ಸಮಾಜವಾದಿ ಪಕ್ಷ(Samajwadi Party) ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್‌ ಚಲಾಯಿಸುತ್ತಾರೆ. ಅವರು ಬುಲ್ಡೋಜರ್‌ ಅನ್ನು ಎಲ್ಲಿ ಬಳಸಬೇಕು ಎಂಬುದನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ಅವರಿಂದ ಕಲಿಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂಡಿಯಾ(INDIA bloc) ವಿರುದ್ಧ ಹರಿಹಾಯ್ದಿದ್ದಾರೆ.

ಉತ್ತರಪ್ರದೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮಲಲ್ಲಾ ಮತ್ತೆ ಟೆಂಟ್‌ನಲ್ಲಿ ಕೂರಬೇಕಾದೀತು. ಏಕೆಂದರೆ ಅವರು ಬುಲ್ಡೋಜರ್‌ ಮೂಲಕ ರಾಮಮಂದಿರವನ್ನು ಕೆಡವುತ್ತಾರೆ. ಬುಲ್ಡೋಜರ್‌ ಅನ್ನು ಎಲ್ಲಿ ಬಳಸಬೇಕು ಅಥವಾ ಎಲ್ಲಿ ಬಳಸಬಾರದು ಎಂಬುದನ್ನು ಯೋಗಿಯಿಂದ ಕಲಿಯಬೇಕು. ಒಂದೆಡೆ ದೇಶದ ಪ್ರಗತಿಗಾಗಿ ಎನ್‌ಡಿಎ ಶ್ರಮಿಸುತ್ತಿದೆ. ಮತ್ತೊಂದೆಡೆ ಇಂಡಿಯಾ ಒಕ್ಕೂಟ ದೇಶದಲ್ಲಿ ಅಶಾಂತಿ ಹುಟ್ಟಿಸಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಸಮಾಜವಾದಿ ಪಕ್ಷದ ರಾಜಕುಮಾರ ಅಖಿಲೇಶ್‌ ಯಾದವ್‌ ಹೊಸ ಆಂಟಿಯ(ಮಮತಾ ಬ್ಯಾನರ್ಜಿ) ಆಶ್ರಯ ಪಡೆಯುತ್ತಿದ್ದಾರೆ. ಆ ಆಂಟಿ ಬಂಗಾಳದಲ್ಲಿದ್ದಾರೆ. ಅವರು ಮಾತ್ರ ತಾವು ನೇರವಾಗಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ ಕೊಡುವುದಿಲ್ಲ. ಬಾಹ್ಯ ಬೆಂಬಲ ಸೂಚಿಸುತ್ತೇನೆ ಅಂದಿದ್ದಾರೆ.

ಇದನ್ನೂ ಓದಿ:DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


Continue Reading

ರಾಜಕೀಯ

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

CM Siddaramaiah: ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಮುಗಿ ಬೀಳುತ್ತಿರುವ ಬಿಜೆಪಿಗರು ಕಾನೂನು ಸುವ್ಯವಸ್ಥೆ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ಇನ್ನು ಒಂದು ವರ್ಷ ಸರ್ಕಾರ ಏನೆಲ್ಲ ವೈಫಲ್ಯಗಳನ್ನು ಮಾಡಿದೆ ಎಂಬ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು, ಇದು ಸರ್ಕಾರದ ಸಾಧನೆ ಎಂದು ನೆಗೆಟಿವ್‌ ರೋಲ್‌ನಲ್ಲಿ ಬಿಂಬಿಸಲು ಮುಂದಾಗಿದೆ. ಬಿಜೆಪಿಯ “ಫೆಲ್ಯೂರ್ ಸರ್ಕಾರ” ಅಸ್ತ್ರಕ್ಕೆ ಪ್ರತಿಯಾಗಿ ಸಾಧನಾ ಸಮಾವೇಶ ಮಾಡಿ ಚೆಕ್‌ಮೇಟ್‌ ಕೊಡಲು ಕಾಂಗ್ರೆಸ್ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

1 year of CM Siddaramaiah government BJP prepares chargesheet and Congress gears up for counter
Koo

ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆ (Lok Sabha Election 2024) ಕಾವು ಜೋರಾಗಿಯೇ ಇದೆ. ಈ ನಡುವೆ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government) ಒಂದು ವರ್ಷ ಪೂರ್ಣವಾಗುತ್ತಿದೆ. ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ರೆಡಿ ಮಾಡಲು ಸಿದ್ಧತೆ ನಡೆಸಿದೆ. ಇದಕ್ಕೆ ಕೌಂಟರ್‌ ಕೊಡಲು ಸಿಎಂ ಮತ್ತವರ ಮಂತ್ರಿ ಮಂಡಲದ ಸದಸ್ಯರು ಪ್ಲ್ಯಾನ್‌ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಮುಗಿ ಬೀಳುತ್ತಿರುವ ಬಿಜೆಪಿಗರು ಕಾನೂನು ಸುವ್ಯವಸ್ಥೆ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ಇನ್ನು ಒಂದು ವರ್ಷ ಸರ್ಕಾರ ಏನೆಲ್ಲ ವೈಫಲ್ಯಗಳನ್ನು ಮಾಡಿದೆ ಎಂಬ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು, ಇದು ಸರ್ಕಾರದ ಸಾಧನೆ ಎಂದು ನೆಗೆಟಿವ್‌ ರೋಲ್‌ನಲ್ಲಿ ಬಿಂಬಿಸಲು ಮುಂದಾಗಿದೆ.

ರಾಜ್ಯದಲ್ಲಿ ಎಂದೂ ಕಂಡರಿಯದ ಭೀಕರ ಬರಗಾಲ ಬಂದಿದೆ. ಆದರೆ, ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ರೈತರಿಗೆ ಪರಿಹಾರವನ್ನು ನೀಡಿಲ್ಲ. ರೈತರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದ ಹಣವೂ ರೈತರಿಗೆ ತಲುಪುತ್ತಿಲ್ಲ. ಅದನ್ನು ಬ್ಯಾಂಕ್‌ಗಳು ಸಾಲಕ್ಕೆ ಬಳಸಿಕೊಳ್ಳುತ್ತಿವೆ. ಇನ್ನು ಸರ್ಕಾರವು ಒಂದು ವರ್ಷದಲ್ಲಿ ಹೊಸ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನೂ ಮಾಡಿಲ್ಲ.

ಇಷ್ಟಲ್ಲದೆ ಶಾಸಕರ ಪರಿಸ್ಥಿತಿ ಇನ್ನೂ ಕಷ್ಟಕರವಾಗಿದೆ. ಶಾಸಕರಿಗೆ ಅನುದಾನ ಕೊಡಲು ಹಣವಿಲ್ಲ. ರಾಜ್ಯದಲ್ಲಿ ಸರಣಿ ಕೊಲೆ, ಅತ್ಯಾಚಾರಗಳಾದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಅನುದಾನ ಕೊಡುತ್ತೇವೆ, ಕೊಡುತ್ತೇವೆ ಎಂದೇ ದಿನ ದೂಡುತ್ತಿದೆ ಎಂದು ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಜನರ ಮುಂದಿಡಲು ಬಿಜೆಪಿ ಮುಂದಾಗಿದೆ.

ಬುಕ್‌ ರಿಲೀಸ್‌ಗೆ ಬಿಜೆಪಿ ಸಿದ್ಧತೆ

ರಾಜ್ಯ ಸರ್ಕಾರದ ಮೇಲೆ ಮಾಡಲಾಗುವ ಎಲ್ಲ ಆರೋಪಗಳ ಪಟ್ಟಿಯನ್ನು ಒಂದು ಪುಸ್ತಕ ರೂಪದಲ್ಲಿ ತರಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಅಭಿಯಾನವನ್ನಾಗಿ ಕೈಗೊಳ್ಳಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸರ್ಕಾರದ ವಿರುದ್ಧ ಇದೇ ಇವರಿಗೆ ಪ್ರಮುಖ ಅಸ್ತ್ರವಾಗಿರಲಿದೆ.

ಕೌಂಟರ್‌ ಕೊಡಲು ಸಿದ್ದು ಪ್ಲ್ಯಾನ್‌ ಏನು?

ಇತ್ತ ಒಂದು ವರ್ಷ ಪೂರೈಸಿರುವ ಸಿದ್ದರಾಮಯ್ಯ ಸರ್ಕಾರದಿಂದ ಸಾಧನಾ ಸಮಾವೇಶ ಮಾಡಲು ಪ್ಲ್ಯಾನ್‌ ಮಾಡಲಾಗಿದೆ. ಈಗ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಫಲಿತಾಂಶದವರೆಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಜೂನ್ ಎರಡನೇ ವಾರದಲ್ಲಿ ಸಾಧನಾ ಸಮಾವೇಶ ಮಾಡಲು ಸಿದ್ಧತೆಗಳು ನಡೆದಿವೆ ಎನ್ನಲಾಗಿದೆ.

ಇದನ್ನೂ ಓದಿ: DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ಅಧಿಕ ಸ್ಥಾನ ಬಂದರೆ ಎರಡನ್ನೂ ಒಟ್ಟಿಗೆ ಸೇರಿ ಸಮಾವೇಶ ಮಾಡುವಂತೆ ಸಿಎಂ ಆಪ್ತರು ಸಲಹೆ ನೀಡಿದ್ದಾರೆನ್ನಲಾಗಿದೆ. ಈ ಸಮಾವೇಶ ಮಾಡುವ ಮೂಲಕ ಗ್ಯಾರಂಟಿ ಸರ್ಕಾರದ ಯಶಸ್ವಿ ನಾಗಾಲೋಟ ಮುಂದುವರಿಯುತ್ತದೆ ಎಂಬ ಸಂದೇಶವನ್ನು ರವಾನೆ ಮಾಡಲು ಚಿಂತನೆ ನಡೆಸಲಾಗಿದೆ. ಒಟ್ಟಾರೆಯಾಗಿ ಬಿಜೆಪಿಯ “ಫೆಲ್ಯೂರ್ ಸರ್ಕಾರ” ಅಸ್ತ್ರಕ್ಕೆ ಪ್ರತಿಯಾಗಿ ಸಾಧನಾ ಸಮಾವೇಶ ಮಾಡಿ ಚೆಕ್‌ಮೇಟ್‌ ಕೊಡಲು ಕಾಂಗ್ರೆಸ್ ಪ್ಲ್ಯಾನ್‌ ಮಾಡಿಕೊಂಡಿದೆ.

Continue Reading

ದೇಶ

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

PM Narendra Modi: ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನು ಮೂರು ಹಂತಗಳ ಮತದಾನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೂರನೇ ಬಾರಿಗೆ ಗದ್ದುಗೆ ಏರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಷ್ಟೇ ಅಲ್ಲದೇ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ನೂರು ದಿನಗಳ ಯೋಜನೆ ನೀಲನಕ್ಷೆಯನ್ನು ಬಹಿರಂಗಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮ ಮೊದಲ 100 ದಿನಗಳ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ಈ ಬಾರಿ ಯುವಕರನ್ನೇ ಗುರಿಯನ್ನಾಗಿಸಿ ಯೋಜನೆ ರೂಪಿಸಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ನಾನು 100ದಿನಗಳ ಯೋಜನೆ ರೂಪಿಸಿ ಆಗಿದೆ. ಇದೀಗ ನಾನು ಯುವಕರಿಗಾಗಿ ಹೆಚ್ಚುವರಿಯಾಗಿ 25ಗಳವರೆಗೆ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇನೆ. ಒಟ್ಟು 125 ದಿನಗಳಲ್ಲಿ 25 ದಿನಗಳನ್ನು ಯುವಕರಿಗಾಗಿ ಮೀಸಲಿಟ್ಟಿದ್ದೇನೆ. ಈ ಯೋಜನೆಯಲ್ಲಿ ಯುವಕರು ಸಕ್ರಿಯವಾಗಿ ಭಾಗಿಯಾಗಿ ತಮ್ಮ ಅಭಿಪ್ರಾಯ, ಚಿಂತನೆಯನ್ನು ಹಂಚಿಕೊಳ್ಳಬಹುದಾಗಿದೆ. ಈ ಬಗ್ಗೆ 20 ಲಕ್ಷಕ್ಕೂ ಅಧಿಕ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನೂ ಓದಿ: DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

ಪ್ರಧಾನಿ ಮೋದಿ ಇದೇ ವಿಚಾರವನ್ನು ಮುಂಬೈನಲ್ಲಿ ನಡೆದ ರ್ಯಾಲಿ ವೇಳೆಯೂ ಪ್ರಸ್ತಾಪಿಸಿದ್ದರು. ಮೊದಲ 100ದಿನಗಳ ಯೋಜನೆ ಬ್ಲೂ ಪ್ರಿಂಟ್‌ ತಯಾರಾಗಿದೆ. ಜೂ.4ರಿಂದ ಜಾರಿಗೊಳಿಸೋದೆ ನಮ್ಮ ಗುರಿ. ಎಲ್ಲರೂ ಕೇಳುತ್ತಿದ್ದಾರೆ ಇದೇನು ನಿಮ್ಮ ಅತಿಯಾದ ಆತ್ಮವಿಶ್ವಾಸವೇ ಎಂದು. ನಾನು ಹೇಳುವುದು ಇಷ್ಟೇ ಇದು ಓವರ್‌ ಕಾನ್ಫಿಡೆನ್ಸ್‌ ಅಲ್ಲ ಬದಲಾಗಿ ಇದು ಜನರ ಆಶೀರ್ವಾದ ನಮ್ಮ ಮೇಲಿರುವ ನಂಬಿಕೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಈಗಾಗಲೇ ದೇಶದಲ್ಲಿ 4 ಹಂತಗಳ ಮತದಾನ ಪೂರ್ಣಗೊಂಡಿದೆ. ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

Continue Reading

ರಾಜಕೀಯ

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

2024ರ ಲೋಕಸಭಾ ಚುನಾವಣೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಅವರು ತಮ್ಮ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ರಾಹುಲ್ ಗಾಂಧಿ (Modi v/s Rahul) ಆರು ಪಟ್ಟು ಹೆಚ್ಚು ಶ್ರೀಮಂತರು ಎಂಬುದನ್ನು ಅಫಿಡವಿಟ್ ನಲ್ಲಿ ಘೋಷಿಸಲಾಗಿದೆ.

VISTARANEWS.COM


on

By

Modi v/s Rahul
Koo

ಪ್ರಧಾನಿ (Prime Minister) ನರೇಂದ್ರ ಮೋದಿ (narendra modi) ಸಾಮಾನ್ಯ ಕುಟುಂಬದಿಂದ ಬಂದವರು. ಇನ್ನು ಕಾಂಗ್ರೆಸ್ (congress) ನಾಯಕ ರಾಹುಲ್ ಗಾಂಧಿ (rahul gandhi) ಹುಟ್ಟಿದ್ದೇ ಶ್ರೀಮಂತ, ರಾಜಕಾರಣಿಗಳ ಕುಟುಂಬದಲ್ಲಿ. ಆದರೂ ಇವರಿಗೆ ರಾಜಕೀಯ ಜೀವನ ಮಾತ್ರ ಸುಲಭದ ಹಾದಿಯಾಗಲಿಲ್ಲ. “ಹಮ್ ತೋ ಫಕೀರ್ ಆದ್ಮಿ ಹೈಂ, ಜೊಲಾ ಲೇ ಕೆ ಚಲ್ ಪಡೆಂಗೆ” ಅಂದರೆ ನಾನೊಬ್ಬ ಸನ್ಯಾಸಿ, ಜೋಳಿಗೆ ಹಿಡಿದು ಹೊರಟುಬಿಡುತ್ತೇನೆ… ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು 2016ರ ಡಿಸೆಂಬರ್ ನಲ್ಲಿ ಹೇಳಿದ್ದ ಘೋಷಣೆ ಆಗ ಜನಪ್ರಿಯವಾಗಿತ್ತು.

ಚಲಾವಣೆಯಲ್ಲಿರುವ 18 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ನೋಟುಗಳಲ್ಲಿ ಸುಮಾರು ಶೇ. 86ರಷ್ಟು ಅಮಾನ್ಯಗೊಳಿಸುವ ಸರ್ಕಾರದ ಕಠಿಣ ನಿರ್ಧಾರವನ್ನು ಆಗ ಅವರು ಸಮರ್ಥಿಸಿಕೊಂಡಿದ್ದರು. ಭ್ರಷ್ಟಾಚಾರದ ವಿರುದ್ಧದ ಇದು ಹೋರಾಟ ಎಂದು ಬಣ್ಣಿಸಿದರು. ಈ ನಿರ್ಧಾರದ ಬಗ್ಗೆ ಸಾಕಷ್ಟು ಟೀಕೆಗಳನ್ನು ಎದುರಿಸಿದರೂ ಅದೆಲ್ಲವನ್ನೂ ತಳ್ಳಿಹಾಕಿದರು. ಕಳೆದುಕೊಳ್ಳಲು ಏನೂ ಇಲ್ಲ ನನ್ನ ಬಳಿ ಎಂದು ಹೇಳಿದರು.

2014ರ ಚುನಾವಣೆ ಮುನ್ನ ಮೋದಿ ತಮ್ಮ ಅಫಿಡವಿಟ್‌ನಲ್ಲಿ 1.65 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಕಳೆದ 10 ವರ್ಷಗಳಲ್ಲಿ ಅವರ ಆಸ್ತಿ 2014ರಲ್ಲಿ 1.65 ಕೋಟಿ ರೂಪಾಯಿ ಇದದ್ದು 2024ರಲ್ಲಿ 3.02 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ಉತ್ತರ ಪ್ರದೇಶದ ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಪ್ರಧಾನಿ ಸಲ್ಲಿಸಿದ ಅಫಿಡವಿಟ್ ತೋರಿಸುತ್ತದೆ. 2019ರಲ್ಲಿ ಪ್ರಧಾನಿ ಮೋದಿಯವರ ಆಸ್ತಿ 2.51 ಕೋಟಿ ರೂ. ಆಗಿತ್ತು.


ನರೇಂದ್ರ ಮೋದಿಯವರ ಆಸ್ತಿ ಎಷ್ಟಿದೆ?

ಪ್ರಧಾನಿ ನರೇಂದ್ರ ಮೋದಿ ಅವರ ಅಫಿಡವಿಟ್ ಪ್ರಕಾರ, ಅವರು ಯಾವುದೇ ಸ್ಥಿರ ಆಸ್ತಿಯನ್ನು ಹೊಂದಿಲ್ಲ ಮತ್ತು ಅವರ ಹೆಸರಿನಲ್ಲಿ ಯಾವುದೇ ಆಸ್ತಿ ಅಥವಾ ವಾಹನಗಳು ನೋಂದಣಿಯಾಗಿಲ್ಲ. ಅವರ ಹೆಸರಿನಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು ಬ್ಯಾಂಕ್ ಠೇವಣಿಗಳಲ್ಲಿ 2.86 ಕೋಟಿ ರೂ.ಗಳನ್ನು ಒಳಗೊಂಡಿವೆ. ಎಲ್ಲವೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿವೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರಗಳು 9 ಲಕ್ಷ ರೂಪಾಯಿ ಇದೆ. ಅವರು ಸುಮಾರು 2.7 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಷೇರು, ಮ್ಯೂಚುವಲ್ ಫಂಡ್‌ ಮತ್ತು ಬಾಂಡ್‌ಗಳಂತಹ ಸೆಕ್ಯೂರಿಟಿಗಳನ್ನು ಹೊಂದಿಲ್ಲ.

ಅವರ ಚರ ಆಸ್ತಿಗಳ ಅಡಿಯಲ್ಲಿ ಈ ಹಿಂದೆ ಪಟ್ಟಿ ಮಾಡಲಾದ 1.1 ಕೋಟಿ ಮೌಲ್ಯದ ವಸತಿ ಆಸ್ತಿಯು ಇನ್ನು ಮುಂದೆ ಅವರ 2024ರ ಅಫಿಡವಿಟ್‌ನ ಭಾಗವಾಗಿರುವುದಿಲ್ಲ. ಪ್ರಧಾನಮಂತ್ರಿಯವರ ಅಫಿಡವಿಟ್‌ನಲ್ಲಿ 52,920 ರೂಪಾಯಿ ನಗದು ಎಂದು ನಮೂದಿಸಲಾಗಿದೆ. ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2.86 ಕೋಟಿ ರೂಪಾಯಿ ಮೌಲ್ಯದ ಎಫ್‌ಡಿಗಳನ್ನು ಹೊಂದಿದ್ದಾರೆ. ಅವರ ವಿರುದ್ಧ ಯಾವುದೇ ಸಾಲ ಅಥವಾ ಬಾಕಿ ಉಳಿದಿಲ್ಲ.
ಪ್ರಧಾನಿ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಅವರು ಮೊದಲು 2014 ಮತ್ತು 2019ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ.


ರಾಹುಲ್ ಗಾಂಧಿ ಮೋದಿಗಿಂತ ಆರು ಪಟ್ಟು ಹೆಚ್ಚು ಶ್ರೀಮಂತರು

ಕೇರಳದ ವಯನಾಡ್‌ನ ಹಾಲಿ ಸಂಸದರಾಗಿರುವ ಮತ್ತು ಈ ವರ್ಷದ ಆರಂಭದಲ್ಲಿ ಅವರ ತಾಯಿ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್‌ಬರೇಲಿಯಿಂದ ಕಣದಲ್ಲಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಆಸ್ತಿ ಪ್ರಧಾನಿ ಮೋದಿಗಿಂತ ಹೆಚ್ಚಿದೆ.

2014ರ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಅನಂತರ ರಾಹುಲ್ ಅವರು ರಫೇಲ್ ಒಪ್ಪಂದದಲ್ಲಿನ ಅಕ್ರಮಗಳಿಂದ ಹಿಡಿದು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ದೇಣಿಗೆಯ ನೆಪದಲ್ಲಿ ತಮ್ಮ ಕೈಗಾರಿಕೋದ್ಯಮಿ “ಸ್ನೇಹಿತರಿಗೆ” ಕ್ವಿಡ್ ಪ್ರೋಕೋವರೆಗಿನ ಆರೋಪಗಳೊಂದಿಗೆ ಪ್ರಧಾನಿ ಮೋದಿ ವಿರುದ್ಧ ಆರೋಪವನ್ನು ಮುಂದುವರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ನ್ಯಾಯಾಲಯವು ಈ ಆರೋಪ ಕುರಿತು ಎಚ್ಚರಿಕೆ ನೀಡಿತ್ತು.

ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಮುನ್ನ ಸಲ್ಲಿಸಿದ ಅಫಿಡವಿಟ್‌ಗಳ ಪ್ರಕಾರ, ರಾಹುಲ್ ಅವರು 20.34 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದು ಮೋದಿಯವರ ಆಸ್ತಿಯ ಆರು ಪಟ್ಟು ಹೆಚ್ಚು.
ಅವರ ಸ್ವಯಂ ಪ್ರಮಾಣಪತ್ರದ ಪ್ರಕಾರ, ರಾಹುಲ್ ಅವರು 9.24 ಕೋಟಿ ರೂ. ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದು, ಅವರ ಸ್ಥಿರ ಆಸ್ತಿ ಮೌಲ್ಯ 11.14 ಕೋಟಿ ರೂಪಾಯಿ. ರಾಹುಲ್ ಬಳಿ 4.3 ಕೋಟಿ ರೂಪಾಯಿ ಷೇರು ಮಾರುಕಟ್ಟೆ ಹೂಡಿಕೆ, 3.81 ಕೋಟಿ ರೂಪಾಯಿ ಮ್ಯೂಚುವಲ್ ಫಂಡ್ ಠೇವಣಿ, ಬ್ಯಾಂಕ್ ಖಾತೆಯಲ್ಲಿ 26.25 ಲಕ್ಷ ರೂಪಾಯಿ ಮತ್ತು ಚಿನ್ನದ ಬಾಂಡ್ 15.21 ಲಕ್ಷ ರೂಪಾಯಿ ಇದೆ. ರಾಹುಲ್ ಅವರ ಸ್ಥಿರಾಸ್ತಿಗಳಲ್ಲಿ ಅವರು 9.04 ಕೋಟಿ ರೂಪಾಯಿ ಮೌಲ್ಯದ ಮತ್ತು 2.10 ಕೋಟಿ ರೂಪಾಯಿ ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ಸ್ಥಿರ ಆಸ್ತಿಗಳಲ್ಲಿ ಹೊಸದಿಲ್ಲಿಯ ಮೆಹ್ರೌಲಿ ಗ್ರಾಮದ ಸುಲ್ತಾನ್‌ಪುರದಲ್ಲಿ ಸುಮಾರು 3.77 ಎಕರೆ ವಿಸ್ತೀರ್ಣದ ಕೃಷಿ ಭೂಮಿಯನ್ನು ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜಂಟಿಯಾಗಿ ಹೊಂದಿದ್ದಾರೆ. 5,838 ಚದರ ಅಡಿ ಅಳತೆಯ ಗುರುಗ್ರಾಮ್‌ನ ಸಿಗ್ನೇಚರ್ ಟವರ್ಸ್‌ನಲ್ಲಿರುವ ವಾಣಿಜ್ಯ ಅಪಾರ್ಟ್‌ಮೆಂಟ್‌ಗಳು ಸೇರಿವೆ.

2022-23ರ ಹಣಕಾಸು ವರ್ಷದಲ್ಲಿ ಅವರ ಒಟ್ಟು ಆದಾಯ 1.02 ಕೋಟಿ ರೂಪಾಯಿಗಳಷ್ಟಿದ್ದರೆ; ಸಂಬಳ, ರಾಯಧನ, ಬಾಡಿಗೆ, ಬಾಂಡ್‌ಗಳಿಂದ ಬಡ್ಡಿ, ಲಾಭಾಂಶ ಮತ್ತು ಮ್ಯೂಚುವಲ್ ಫಂಡ್‌ಗಳಿಂದ ಬಂಡವಾಳ ಗಳಿಕೆ ಸೇರಿದಂತೆ ಮೂಲಗಳಿಂದ ರಾಹುಲ್ 55,000 ರೂಪಾಯಿ ನಗದು ಘೋಷಿಸಿದ್ದಾರೆ. ಅವರು 4.2 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ ಮತ್ತು ಸುಮಾರು 49.7 ಲಕ್ಷ ರೂಪಾಯಿಗಳ ಸಾಲ ಹೊಂದಿದ್ದಾರೆ. ಅವರು ಯಾವುದೇ ವಸತಿ ಅಪಾರ್ಟ್ಮೆಂಟ್ ಹೊಂದಿಲ್ಲ.

Continue Reading
Advertisement
PM Narendra Modi
ದೇಶ2 mins ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್2 mins ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Prajwal Revanna Case Lawyer Devarajegowda sent to judicial custody End of police custody
ಕ್ರೈಂ47 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ1 hour ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್1 hour ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ1 hour ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್1 hour ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು1 hour ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ1 hour ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್2 hours ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌