ಸಂತೋಷ್‌ ಆತ್ಮಹತ್ಯೆ: ಎಲೆಕ್ಷನ್‌ ವರ್ಷದಲ್ಲಿ BJPಗೆ ಟೆನ್ಷನ್‌, "ಕೈ"ಗೆ ಅಸ್ತ್ರ - Vistara News

ರಾಜಕೀಯ

ಸಂತೋಷ್‌ ಆತ್ಮಹತ್ಯೆ: ಎಲೆಕ್ಷನ್‌ ವರ್ಷದಲ್ಲಿ BJPಗೆ ಟೆನ್ಷನ್‌, “ಕೈ”ಗೆ ಅಸ್ತ್ರ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಹಿರಿಯ ಸಚಿವರ ಮೇಲೆ ಆರೋಪ ಮಾಡಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವುದು ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ. ಈಶ್ವರಪ್ಪ ರಾಜೀನಾಮೆ ಕುರಿತು ಸದ್ಯದಲ್ಲೆ ತೀರ್ಮಾನವಾಗಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ 150+ ಸ್ಥಾನಗಳನ್ನು ಗೆಲ್ಲಲೇ ಬೇಕು ಎಂದು ಬಿಜೆಪಿ (BJP) ಅಭಿಯಾನ ಆರಂಭಿಸುವ ಹೊಸ್ತಿಲಲ್ಲಿ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ( Santosh Suicide) ಪ್ರಕರಣ ಎದುರಾಗಿದೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನೇಕ ರ‍್ಯಾಲಿಗಳಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದ ಕುರಿತು ಪ್ರಸ್ತಾಪಿಸಿದ್ದರು. ಸಿದ್ದರಾಮಯ್ಯ ಸರ್ಕಾರವನ್ನು ಸೀಧಾರುಪಯ್ಯ ಸರ್ಕಾರ ಎಂದಿದ್ದ ಪ್ರಧಾನಿ, ಇಲ್ಲಿ ಎಲ್ಲ ಯೋಜನೆಗಳಿಗೂ 10% ಕಮಿಷನ್‌ ಲಂಚ ನಡೆಯುತ್ತಿದೆ ಎಂದು ಹೇಳಿದ್ದರು. ಇದು ಚುನಾವಣೆಯಲ್ಲಿ ಭಾರೀ ಸದ್ದು ಮಾಡಿತ್ತು.

ಆದರೆ ಇತ್ತೀಚೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಪಡೆಯುವ ಗುತ್ತಿಗೆದಾರರರ ಸಂಘ ಮಾಡಿದ ಸುದ್ದಿಗೋಷ್ಠಿಯಿಂದ ಬಿಜೆಪಿಗೆ ಮುಖಭಂಗ ಆಗಿತ್ತು. ಈ ಸರ್ಕಾರದಲ್ಲಿ ಎಲ್ಲ ಕಾಮಗಾರಿಗಳಿಗೂ 40% ಕಮಿಷನ್‌ ಪಡೆಯಲಾಗುತ್ತಿದೆ. ಇಷ್ಟು ಲಂಚ ನೀಡಿ ತಾವು ಕಾಮಗಾರಿ ಮಾಡುವುದು ಹೇಗೆ, ಜೀವನ ನಡೆಸುವುದು ಹೇಗೆ ಎಂದು ಅಲವೊತ್ತುಕೊಂಡಿದ್ದರು.

ಕಾಂಗ್ರೆಸ್‌ ಅವಧಿಯಲ್ಲಿ 10% ಲಂಚಕ್ಕೇ ಅಬ್ಬರಿಸಿದ್ದ ಬಿಜೆಪಿ ಇದೀಗ 40% ಲಂಚ ಪಡೆಯುತ್ತಿದೆ ಎಂದು ಪ್ರತಿಪಕ್ಷಗಳು, ಮುಖ್ಯವಾಗಿ ಕಾಂಗ್ರೆಸ್‌ ಹರಿಹಾಯ್ದಿತ್ತು. ಈ ನಡುವೆ ರಾಜ್ಯದಲ್ಲಿ ಹಿಜಾಬ್‌, ಹಲಾಲ್‌ ಮುಂತಾದ ವಿಚಾರಗಳು ಪ್ರಸ್ತಾಪವಾಗಿ ಲಂಚ ವಿಚಾರ ಹಿನ್ನೆಲೆಗೆ ಸರಿದಿತ್ತು. ಇದೀಗ ನಳಿನ್‌ ಕುಮಾರ್‌ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸಂದರ್ಭದಲ್ಲಿ ಇದೇ ಭ್ರಷ್ಟಾಚಾರದ ಆರೋಪವನ್ನು ಎದುರಿಸಬೇಕಿದೆ.

ಮತ್ತೆ ಭುಗಿಲೆದ್ದ 40% ಲಂಚ

ಇನ್ನೇನು ಹಲಾಲ್‌, ಹಿಜಾಬ್‌ ವಿಚಾರದಿಂದ ಅಭಿವೃದ್ಧಿಯತ್ತ ಹೊರಳಬೇಕು ಎನ್ನುವಷ್ಟರಲ್ಲಿ ಕಳೆದ 15 ದಿನದ ಹಿಂದೆ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಸುದ್ದಿಗೋಷ್ಠಿ ಮಾಡಿದ್ದರು. ಈಶ್ವರಪ್ಪ ಸಚಿವರಾಗಿರುವ ಗ್ರಾಮೋಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲೆಯ ಗ್ರಾಮದಲ್ಲಿ ಸುಮಾರು ₹4 ಕೋಟಿ ಮೊತ್ತದ ಕಾಮಗಾರಿ ನಡೆಸಿದ್ದೇನೆ. ಆದರೆ ಈವರೆಗೆ ಹಣ ಪಾವತಿ ಆಗಿಲ್ಲ. ಈಶ್ವರಪ್ಪ ಅವರು 40% ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಸಂತೋಷ್‌ ಆರೋಪಿಸಿದ್ದರು.

ಹಿಂದೂ ವಾಹಿನಿ ನ್ಯಾಷನಲ್‌ ಎಂಬ ಸಂಘಟನೆಯ ಕಾರ್ಯದರ್ಶಿ ಎಂದೂ ಹೇಳಿಕೊಂಡಿದ್ದ ಸಂತೋಷ್‌, ಇದೇ ದೂರನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೂ ಕಳಿಸಿದ್ದರು. ಅದಾಗಲೇ 40% ಲಂಚದ ಆರೋಪ ಹೊತ್ತಿದ್ದ ಸರ್ಕಾರಕ್ಕೆ ಇದು ಮತ್ತಷ್ಟು ಮುಜುಗರಕ್ಕೆ ಕಾರಣವಾಗಿತ್ತು.

ಇಷ್ಟೆಲ್ಲ ಆರೋಪ ಮಾಡಿದ ಸಂತೋಷ್‌ ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಬರೆದಿದ್ದಾರೆ ಎನ್ನಲಾದ ಆತ್ಮಹತ್ಯಾ ಪತ್ರದಲ್ಲಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಹೆಸರನ್ನು ನೇರವಾಗಿ ನಮೂದಿಸಲಾಗಿದೆ. ಇದೇ ಪತ್ರದ ಆಧಾರದಲ್ಲಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಸಹ ದಾಖಲಾಗಿದೆ.

ಹೆಚ್ಚಿನ ಓದಿಗಾಗಿ: ಸಂತೋಷ್‌ ಅತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ A1: ಉಡುಪಿ ಠಾಣೆಯಲ್ಲಿ FIR
ಗಣಪತಿ ಆತ್ಮಹತ್ಯೆ ಪರಕರಣ ನೆನಪು

2016ರಲ್ಲಿ ಡಿವೈಎಸ್‌ಪಿ ಎಂ.ಕೆ. ಗಣಪತಿ (DYSP Ganapathi) ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಡಿಕೇರಿಯ ವಿನಾಯಕ ಲಾಡ್ಜ್‌ನ ರೂಂ ನಂಬರ್‌315ರಲ್ಲಿ ಜುಲೈ 7ರಂದು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸ್ಥಳೀಯ ಸುದ್ದಿವಾಹಿನಿ ಕಚೇರಿಗೆ ತೆರಳಿದ್ದರು. ಸಚಿವರಾಗಿದ್ದ ಕೆ.ಜೆ. ಜಾರ್ಜ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪ್ರಣಬ್‌ ಮೊಹಂತಿ ಹಾಗೂ ಎ.ಎಂ. ಪ್ರಸಾದ್‌ ಅವರುಗಳು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಮುದ್ರಣ ಮಾಡಿಸಿದ್ದರು.

ಪ್ರತಿಪಕ್ಷ ಬಿಜೆಪಿ ಕೈಗೆ ಸಿಕ್ಕ ಈ ಪ್ರಬಲ ಅಸ್ತ್ರದಿಂದ ಹೊರಬರಲು ಆಡಳಿತಾರೂಢ ಕಾಂಗ್ರೆಸ್‌ ಹೆಣಗಾಡಿತು. ಜಾರ್ಜ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಡ ಹೇರಿದರೂ, ರಾಜೀನಾಮೆ ನೀಡುವುದಿಲ್ಲ ಎಂದು ಅನೇಕ ದಿನ ಹೇಳಲಾಯಿತು. ಕೊನೆಗೆ, ಚನಾವಣೆಯಲ್ಲಿ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ರಾಜೀನಾಮೆ ಪಡೆಯಲಾಯಿತು.

ಇದೀಗ ಚುನಾವಣೆ ಹೊಸ್ತಿಲಲ್ಲಿರುವಂತೆ ಈಶ್ವರಪ್ಪ ವಿರುದ್ಧ ಆರೋಪಿಸಿ ಗುತ್ತಿಗೆದಾರ ಆರೋಪ ಮಾಡಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜೀನಾಮೆ ಪಡೆದರೂ ಪ್ರತಿಪಕ್ಷ ಈ ವಿಚಾರವನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತದೆ. ಈಗಾಗಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆಗಳನ್ನು ನಡೆಸುತ್ತಿದೆ. ರಾಜೀನಾಮೆ ಪಡೆಯದಿದ್ದರೆ ಇದರ ಪರಿಣಾಮ ಇನ್ನಷ್ಟು ಹೆಚ್ಚಾಗುತ್ತದೆ ಎಂಬ ಲೆಕ್ಕಾಚಾರವಿದೆ. ಈಗಾಗಲೆ ಬಿಜೆಪಿ ವರಿಷ್ಠರು ಈ ಕುರಿತು ಆಲೋಚನೆ ಮಾಡುತ್ತಿದ್ದು, ಕೆಲವೇ ಸಮಯದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

Prajwal Revanna Case: ನಾವು ಸಂತ್ತಸ್ತ ಮಹಿಳೆಯರಿಗೆ ರಕ್ಷಣೆ ನೀಡುತ್ತೇವೆ. ಭಯದ ವಾತಾವರಣ ಸೃಷ್ಟಿಯಾದರೆ ಯಾರು ಬಂದು ಹೇಳುತ್ತಾರೆ. ಸಾವಿರಾರು ವಿಡಿಯೊ ಇದೆ ಅಂತ ಹೇಳುತ್ತಿದ್ದಾರೆ. ಕೆ.ಆರ್. ನಗರದ ಸಂತ್ರಸ್ತೆ ಬಗ್ಗೆ ನನಗೆ ಗೊತ್ತಿಲ್ಲ. ಟೆಕ್ನಿಕಲ್ ವಿಷಯದಲ್ಲಿ ನಾವ್ಯಾರೂ ಎಕ್ಸ್‌ಪರ್ಟ್ ಅಲ್ಲ. ಯಾವ ಯಾವುದೋ ಸೆಕ್ಷನ್ಸ್ ಹಾಕಲು ಸಾಧ್ಯವಿಲ್ಲ. ದೂರಿನಲ್ಲಿ ಏನಿದೆಯೋ ಅದರ ಆಧಾರದ ಮೇಲೆ ಸೆಕ್ಷನ್‌ಗಳನ್ನು ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂತ್ರಸ್ತೆಯರು ಮುಂದೆ ಬಂದು ಹೇಳಿಕೆ ಕೊಡಬಹುದು. ಹೀಗಾಗಿ ಕೇಸ್ ಮತ್ತಷ್ಟು ಕಾಂಪ್ಲಿಕೇಟೇಡ್ ಆಗಬಹುದು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case If Prajwal and Revanna fails to appear infront of SIT they will be arrested says Dr Parameshwara
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿಗೆ ಅಧಿಕಾರ ಇದೆ. ಎರಡನೇ ನೋಟಿಸ್‌ಗಾದರೂ 24 ಗಂಟೆಯ ಒಳಗೆ ವಿಚಾರಣೆಗೆ ಹಾಜರಾಗಬೇಕು. ಹಾಜರಾಗದೇ ಇದ್ದರೆ ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಇನ್ನು ರೇವಣ್ಣ ಅವರಿಗೂ ಮತ್ತೊಂದು ನೋಟಿಸ್‌ ನೀಡಿದ್ದು, ಸ್ಪಂದಿಸದಿದ್ದರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ರೇವಣ್ಣಗೂ ಕೂಡ 41ಎ ಅಡಿ ಇನ್ನೊಂದು ನೋಟಿಸ್ ನೀಡಿದ್ದೇವೆ. ರೇವಣ್ಣ ಕೂಡ 24 ಗಂಟೆ ಸಮಯ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೋಟಿಸ್‌ ನೀಡಿದ್ದೇವೆ. ಅದಕ್ಕೂ ಸ್ಪಂದನೆ ಮಾಡದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮಹಿಳೆಯ ಕಿಡ್ನ್ಯಾಪ್ ವಿಚಾರವಾಗಿಯೂ ಎಸ್‌ಐಟಿಯವರು ಕ್ರಮ ಕೈಗೊಳ್ಳುತ್ತಾರೆ. ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ನಾವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ನಾವು ಸಂತ್ತಸ್ತ ಮಹಿಳೆಯರಿಗೆ ರಕ್ಷಣೆ ನೀಡುತ್ತೇವೆ. ಭಯದ ವಾತಾವರಣ ಸೃಷ್ಟಿಯಾದರೆ ಯಾರು ಬಂದು ಹೇಳುತ್ತಾರೆ. ಸಾವಿರಾರು ವಿಡಿಯೊ ಇದೆ ಅಂತ ಹೇಳುತ್ತಿದ್ದಾರೆ. ಕೆ.ಆರ್. ನಗರದ ಸಂತ್ರಸ್ತೆ ಬಗ್ಗೆ ನನಗೆ ಗೊತ್ತಿಲ್ಲ. ಟೆಕ್ನಿಕಲ್ ವಿಷಯದಲ್ಲಿ ನಾವ್ಯಾರೂ ಎಕ್ಸ್‌ಪರ್ಟ್ ಅಲ್ಲ. ಯಾವ ಯಾವುದೋ ಸೆಕ್ಷನ್ಸ್ ಹಾಕಲು ಸಾಧ್ಯವಿಲ್ಲ. ದೂರಿನಲ್ಲಿ ಏನಿದೆಯೋ ಅದರ ಆಧಾರದ ಮೇಲೆ ಸೆಕ್ಷನ್‌ಗಳನ್ನು ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂತ್ರಸ್ತೆಯರು ಮುಂದೆ ಬಂದು ಹೇಳಿಕೆ ಕೊಡಬಹುದು. ಹೀಗಾಗಿ ಕೇಸ್ ಮತ್ತಷ್ಟು ಕಾಂಪ್ಲಿಕೇಟೇಡ್ ಆಗಬಹುದು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಮ್ಯಾಜಿಸ್ಟ್ರೇಟ್ ಮುಂದೆ ಸಿಆರ್‌ಪಿಸಿ 164 ಹೇಳಿಕೆ

ಸಂತ್ರಸ್ತೆಯರಿಂದ ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆಯನ್ನು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನನೀಡಲಾಗಿದೆ. ಯಾರು ಕೂಡ ಮುಂದೆ ಎಸ್ಐಟಿ ಮೇಲೆ ಬೆರಳು ತೋರಿಸಬಾರದು. ಹೀಗಾಗಿ ನೇರವಾಗಿ ಮ್ಯಾಜಿಸ್ಟ್ರೇಟ್ ಮುಂದೆ ಸಿಆರ್‌ಪಿಸಿ 164 ಹೇಳಿಕೆಯನ್ನು ಕೊಡಿಸಲಾಗುತ್ತಿದೆ. ಈ ಮಧ್ಯೆ 41ಎ ಅಡಿಯಲ್ಲಿ ನೋಟಿಸ್ ಕೊಟ್ಟಿದ್ದೇವೆ. ನೋಟಿಸ್‌ಗೆ ಪ್ರಜ್ವಲ್ ರೇವಣ್ಣ ಪರ ವಕೀಲ ಸಮಯ ಕೊಡಿ ಅಂತ ಕೇಳಿದ್ದಾರೆ. ಅದಕ್ಕೆ ಸಮಯ ಕೊಡುವುದಕ್ಕೆ ಪ್ರಾವಿಷನ್ ಇಲ್ಲ ಅಂತ ತಿಳಿಸಿದ್ದೇವೆ. ಪ್ರಜ್ವಲ್‌ ಪ್ರಕರಣದಲ್ಲಿ ಕಾನೂನಿನಡಿ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂದು ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಲುಕ್‌ಔಟ್ ನೋಟಿಸ್‌ ಅನ್ನು ಕೊಟ್ಟಿದ್ದೇವೆ. ಇದನ್ನು ಸಹ ಕಾನೂನಿನ ಪ್ರಕಾರವೇ ನೀಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

ಗುರುವಾರವೂ ಒಂದು ದೂರು ದಾಖಲಾಗಿದೆ‌‌. ಅದೇ ಸ್ಟೇಟ್‌ಮೆಂಟ್‌ ಅನ್ನು ಮ್ಯಾಜಿಸ್ಟ್ರೇಟ್ ಮುಂದೆಯೇ ಮಾಡಿಸಲಾಗಿದೆ. ಆನಂತರ ಎಸ್‌ಐಟಿಯವರು ಒತ್ತಾಯ ಮಾಡಿ ಹೇಳಿಸಿದ್ದಾರೆ ಎಂದು ಹೇಳಬಾರದಲ್ಲವೇ? ಅದಕ್ಕೆ ಮ್ಯಾಜಿಸ್ಟ್ರೇಟ್ ಮುಂದೆಯೇ ಹೇಳಿಕೆ ಕೊಡಿಸಲಾಗಿದೆ. ಹಲವು ವಿಚಾರಗಳನ್ನು ಪಬ್ಲಿಕ್ ಡೊಮೈನ್‌ನಲ್ಲಿ ಹೇಳೋಕೆ ಆಗಲ್ಲ. ಅವರ ಮನೆ ಮೇಲೆ ರೈಡ್ ಆಗಿರುವ ಸಂಗತಿ ಗೊತ್ತಿಲ್ಲ. ಆದರೆ, ಲುಕ್‌ಔಟ್ ನೋಟಿಸ್ ಕೊಟ್ಟಿದ್ದೇವೆ. ಎಲ್ಲ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ರವಾನೆ ಆಗಿದೆ. ದುಬೈಗೆ ಪ್ರಜ್ವಲ್‌ ಹೋಗಿರುವುದು ಗೊತ್ತಿಲ್ಲ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಜರ್ಮನಿಗೆ ಹೋಗಿದ್ದಾರೆ. ಜರ್ಮನಿಯಲ್ಲಿ ನಾವು ಹುಡುಕೋಕೆ ಹೋಗಿಲ್ಲ. ನಾವು ಅಲ್ಲಿ ಅದನ್ನು ಮಾಡೋಕೆ ಆಗಲ್ಲ. ನೋಟಿಸ್ ಕೊಟ್ಟ ಮೇಲೆ 24 ಗಂಟೆಯಲ್ಲಿ ಅವರು ಹಾಜರಾಗಬೇಕು. ಹಾಜರಾಗದಿದ್ದರೆ ಬಂಧನವೋ? ಮುಂದೇನು ಅನ್ನೋದನ್ನು ಎಸ್‌ಐಟಿಯವರು ತೀರ್ಮಾನ ಮಾಡ್ತಾರೆ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

Continue Reading

ದೇಶ

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Lalu Prasad Yadav: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

VISTARANEWS.COM


on

Lalu Prasad Yadav
Koo

ಪಾಟ್ನಾ: ಬಿಹಾರದ ಸಾರನ್‌ ಲೋಕಸಭಾ ಕ್ಷೇತ್ರ(Saran)ದಲ್ಲಿ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ವರ್ಸಸ್‌ ಲಾಲೂ ಪುತ್ರಿ ಪರಸ್ಪರ ಮುಖಾಮುಖಿಯಾಗಿ ಕಣಕ್ಕಿದಿದ್ದಾರೆ. ಅರೆ.. ಇದೇನಿದು ಎಂದೇ ಕ್ಷೇತ್ರದಲ್ಲಿ ಅಪ್ಪ-ಮಗಳು ಇಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರಾ ಎಂದು ಅಚ್ಚರಿ ಆಗೋದಂತೂ ನಿಜ. ಆದರೆ ನಿಜಾಂಶ ಏನೆಂದರೆ ಆರ್‌ಜೆಡಿ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ(RJP) ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

ಯಾರು ಈ ಲಾಲೂ ಪ್ರಸಾದ್‌ ಯಾದವ್‌?

ಸ್ಥಳೀಯ ರೈತನಾಗಿರುವ ಲಾಲೂ ಪ್ರಸಾದ್‌ ಯಾದವ್‌, ಸಾರನ್‌ ಜಿಲ್ಲೆಯವರಾಗಿದ್ದು, ಏಪ್ರಿಲ್‌ 26ರಂದು ಆರ್‌ಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. 2022ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯ ಸಂದರ್ಭದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಸ್ಪರ್ದಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೂ ಅಲ್ಲದೇ 2017ರಲ್ಲಿ ಮಾಜಿ ಲೋಕಸಭಾ ಸ್ಪೀಕರ್‌ ಮೀರಾ ಕುಮಾರ್‌ ಮತ್ತು ರಾಮನಾಥ್‌ ಕೋವಿಂದ್‌ ಕಣದಲ್ಲಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಅವರ ನಾಮಪತ್ರವನ್ನು ತಿರಸ್ಕರಿಸಲಾಯಿತು.

ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಸಾರನ್‌ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಅನೇಕ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧವೂ ಸ್ಪರ್ಧಿಸಿದ್ದೆ. ಈ ಬಾರಿ ಅವರ ಪುತ್ರಿ ರೋಹಿಣಿ ಆಚಾರ್ಯ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ನಾನು ಬದುಕಲು ಕೃಷಿ ಮಾಡುತ್ತಿದ್ದೇನೆ. ಅದರ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಂಡಿದ್ದೇನೆ. ನಾನು ಪಂಚಾಯತ್‌ನಿಂದ ಅಧ್ಯಕ್ಷೀಯ ಚುನಾವಣೆವರೆಗೂ ಅದೃಷ್ಟಪರೀಕ್ಷೆಗೆ ನಡೆಸಿದ್ದೇನೆ. ನಾನು ಗೆದ್ದೇ ಗೆಲ್ಲುತ್ತೇನೆ. ಸಾರನ್‌ ಕ್ಷೇತ್ರದ ಜನ ನನ್ನ ಜೊತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

ಇನ್ನು ಕೇವಲ ಪ್ರಚಾರಕ್ಕಾಗಿ, ಮತ ವಿಭಜನೆಗಾಗಿ ಸ್ಪರ್ಧೆ ಎಂಬ ಟೀಕೆಗೆ ಟಾಂಗ್‌ ಕೊಟ್ಟ ಯಾದವ್‌, ನಾನು ಇಂತಹ ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಪ್ರತಿಸ್ಪರ್ಧಿಗಳು. ಅವರಿಂದ ಇಂತಹ ಹೇಳಿಕೆಗಳು ಬರುವುದು ಸಹಜ. ಇಂತಹ ಟೀಕೆಗಳಿಗೆ ನಾನು ಕುಗ್ಗಲ್ಲ. ನಾನು ಕೇವಲ ನನ್ನ ಮತದಾರರಿಗಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು. ಇನ್ನು ಲಾಲೂ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಬಳಿ 5 ಲಕ್ಷ ರೂ ಮತ್ತು ತಮ್ಮ ಪತ್ನಿ ಬಳಿ 2 ಲಕ್ಷ ರೂ. ನಗದು, 17.60 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಹಾಗೂ ತಮ್ಮ ಪತ್ನಿ ಬಳಿ 5.20 ಲಕ್ಷ ರೂ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

ದೇಶ

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Lok Sabha Election 2024: ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿಆಪ್ತ ಕಿಶೋರಿ ಲಾಲ್‌ ಶರ್ಮಾಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

VISTARANEWS.COM


on

Lok sabha Election
Koo

ನವದೆಹಲಿ:‌ ಲೋಕಸಭೆ ಚುನಾವಣೆ(Lok Sabha Election 2024)ಯ ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ(Rae Bareli) ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ(Kishori Lal Sharma) ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ. ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂದಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಠಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಇಂದೇ ನಾಮಪತ್ರ ಸಲ್ಲಿಕೆ

ಇನ್ನು ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುವುದರಿಂದ ಈ ಇಬ್ಬರೂ ನಾಯಕರೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಸೋನಿಯಾ ಗಾಂಧಿ ಸಾಥ್‌ ಕೊಡಲಿದ್ದಾರೆ. ಮತ್ತೊಂದೆಡೆ ಅಮೇಠಿಯಲ್ಲಿ ಕಿಶೋರಿಲಾಲ್‌ ಅವರಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ರಾಹುಲ್‌ ಮತ್ತು ಪ್ರಿಯಾಂಕಾ ಬೆಂಬಲಿಗರು ನಾಮಪತ್ರ ದಾಖಲೆಗಳನ್ನು ತಯಾರು ಮಾಡಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಸ್ಮೃತಿ ಇರಾನಿ ಕೂಡ ಇಂದೇ ಅಮೇಠಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Continue Reading
Advertisement
Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ12 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ27 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ27 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ46 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ47 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ57 mins ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ1 hour ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್1 hour ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ1 hour ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ1 hour ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌