BJP-JDS Alliance: ಅವ್ರು ಗೆಲ್ಲಲ್ಲ; ತುಮಕೂರಿನಲ್ಲಿ ದೇವೇಗೌಡ್ರ ಸ್ಪರ್ಧೆಗೆ ಹಾಲಿ ಬಿಜೆಪಿ ಸಂಸದ ಬಸವರಾಜ್‌ ತೀವ್ರ ವಿರೋಧ Vistara News

ಕರ್ನಾಟಕ

BJP-JDS Alliance: ಅವ್ರು ಗೆಲ್ಲಲ್ಲ; ತುಮಕೂರಿನಲ್ಲಿ ದೇವೇಗೌಡ್ರ ಸ್ಪರ್ಧೆಗೆ ಹಾಲಿ ಬಿಜೆಪಿ ಸಂಸದ ಬಸವರಾಜ್‌ ತೀವ್ರ ವಿರೋಧ

BJP-JDS Alliance : ತುಮಕೂರಿನಲ್ಲಿ ದೇವೇಗೌಡರ ಸ್ಪರ್ಧೆಗೆ ಬಿಜೆಪಿಯಿಂದ ಮೊದಲ ವಿರೋಧ ವ್ಯಕ್ತವಾಗಿದೆ. ಅವರು ನಿಂತ್ರೆ ಜನ ವೋಟ್‌ ಹಾಕಲ್ಲ ಎಂದು ಹಾಲಿ ಸಂಸದ ಬಸವರಾಜ್‌ ನೇರವಾಗಿ ಹೇಳಿದ್ದಾರೆ.

VISTARANEWS.COM


on

GS Basavaraj HD Devegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ʻʻತುಮಕೂರಿನಿಂದ ದೇವೇಗೌಡರನ್ನು (HD Devegowda) ನಿಲ್ಲಿಸಲು ಹೊರಟಿದ್ದಾರಂತೆ. ದೇವೇಗೌಡರು ನಿಂತರೆ ತುಮಕೂರು ಜನ ಯಾವತ್ತಿದ್ದರೂ ವೋಟ್‌ ಹಾಕಲ್ಲʼʼ- ಹೀಗೆಂದು ಖಡಾಖಡಿಯಾಗಿ ಹೇಳಿದ್ದರು ತುಮಕೂರು ಬಿಜೆಪಿ ಸಂಸದ ಜಿ.ಎಸ್‌. ಬಸವರಾಜ್‌ (MP GS Basavaraj) ಅವರು.

ಅವರು ಮಾತನಾಡುತ್ತಿದ್ದುದು ಬಿಜೆಪಿ- ಜೆಡಿಎಸ್ ಮೈತ್ರಿ (BJP-JDS Alliance) ವಿಚಾರ. ʻʻನಮ್ಮ ಪಕ್ಷದವರು ಒಪ್ಪಿ ಮೈತ್ರಿ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ನಾನು ಏನೂ ಕಮೆಂಟ್ ಮಾಡಲ್ಲ. ಜೆಡಿಎಸ್‌ನವರು ಐದು ಸೀಟ್ ಕೇಳಿದ್ದಾರಂತೆ. ತುಮಕೂರನ್ನೂ ಜೆಡಿಎಸ್ ನವರು ಕೇಳಿದ್ದಾರಂತೆ. ಜನ ವೋಟ್ ಹಾಕ್ತಾರೋ ಏನೋ ಗೊತ್ತಿಲ್ಲ. ತುಮಕೂರಿನಿಂದ ದೇವೇಗೌಡರನ್ನು ನಿಲ್ಲಿಸಲು ಹೊರಟಿದ್ದಾರಂತೆ. ದೇವೇಗೌಡರು ನಿಂತರೇ ಜನ ಮತ ಹಾಕಲ್ಲʼʼ ಎಂದು ಹೇಳಿದರು ಬಸವರಾಜ್‌

ʻʻರಕ್ತ ಕೊಟ್ಟರೂ ಕೊಟ್ಟೆನೂ ತುಮಕೂರಿಗೆ ಹೇಮಾವತಿ ನೀರು ಕೊಡಲ್ಲ ಎಂದಿದ್ದ ದೇವೇಗೌಡರನ್ನು ಒಮ್ಮೆ ಜನ ಸೋಲಿಸಿದ್ದಾರೆ. ಅವರ ಸ್ವಂತ ನೆಂಟರೂ ವೋಟ್ ಹಾಕಲ್ಲ. ಒಬ್ಬ ಗೌಡರೂ ಅವರಿಗೆ ಮತ ಹಾಕಲ್ಲʼʼ ಎಂದು ಹೇಳಿದರು ಬಸವರಾಜ್‌.

ʻʻಹೇಮಾವತಿ ನೀರಿನ ವಿಚಾರದಲ್ಲಿ ದೇವೇಗೌಡರು ತುಮಕೂರಿಗೆ ಎಂದೂ ಕಂಡಿರಿಯದ ಮೋಸ ಮಾಡಿದ್ದಾರೆ. ಯಾರಿಗಾದರೂ ವೋಟ್ ಹಾಕಲಿ, ದೇವೇಗೌಡರಿಗೆ ವೋಟ್ ಹಾಕಬಾರದು. ದೇವೇಗೌಡರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದಂಗೆʼʼ ಎಂದು ನಿಷ್ಠುರವಾಗಿ ನುಡಿದರು.

ʻʻದೇವೇಗೌಡರು ಎಂದಾದರೂ ಜೀವಮಾನದಲ್ಲಿ ಈಲ್ಡ್ ಆಗಿಲ್ಲ. ಹಿಂದೆ ಜೆಡಿಎಸ್‌ ನಮ್ಮ ಜತೆ ಮೈತ್ರಿ ಮಾಡಿಕೊಂಡಿತ್ತು. ನಂತರ 2018ರಲ್ಲಿ 39 ಸೀಟ್ ಪಡೆದು ಕಾಂಗ್ರೆಸ್ ಜೊತೆ ಸೇರಿ ಕುಮಾರಸ್ವಾಮಿ ಸಿಎಂ ಆದ್ರುʼʼ ಎಂದು ನೆನಪಿಸಿಕೊಂಡರು ಬಸವರಾಜ್‌.

ಬಸವರಾಜ್‌ ಸೀಟು ಬಿಟ್ಟುಕೊಡುವುದು ಅನಿವಾರ್ಯ!

ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಮೈತ್ರಿ ಮಾತುಕತೆಯಲ್ಲಿ ಹಾಸನ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬೇಕು ಎಂಬ ಮಾತುಕತೆ ಆಗಿದೆ ಎಂದು ಹೇಳಲಾಗಿದೆ. ಆದರೆ, ಇದ್ಯಾವುದೂ ಅಂತಿಮ ಆಗಿಲ್ಲ. ಈಗಿರುವ ಸುದ್ದಿಯಂತೆ ಅದು ನಿಜವಾದರೆ ತುಮಕೂರು ಜೆಡಿಎಸ್‌ ಪಾಲಾಗಲಿದೆ. ಆಗ ಅನಿವಾರ್ಯವಾಗಿ ಜಿ.ಎಸ್‌. ಬಸವರಾಜ್‌ ಅವರು ತಮ್ಮ ಸೀಟು ಬಿಟ್ಟುಕೊಡಬೇಕಾಗುತ್ತದೆ. ಅದಲ್ಲದೆ ಹೋದರೂ ಈಗ 82 ವರ್ಷ ಆಗಿರುವ ಬಸವರಾಜ್‌ ಅವರಿಗೆ ಮುಂದಿನ ಬಾರಿ ಟಿಕೆಟ್‌ ಸಿಗೋದು ಡೌಟು. ಅವರು ಆಗಲೇ ನಿವೃತ್ತಿ ಘೋಷಿಸಿದ್ದಾರೆ.

ಅಷ್ಟಾದರೂ ಬಸವರಾಜ್‌ ಅವರು ದೇವೇಗೌಡರು ಬರಲೇಬಾರದು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಜತೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಆಕ್ರೋಶ ಅವರ ಮಾತಿನಲ್ಲಿ ಕಾಣಿಸುತ್ತಿದೆ.

ತುಮಕೂರಿನಿಂದ ಸೋಮಣ್ಣ ಸ್ಪರ್ಧೆ ಮಾಡ್ತಾರಾ?

ಈ ನಡುವೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹಾಲಿ ಬಿಜೆಪಿ ನಾಯಕರಾಗಿರುವ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಡಿದೆ. ಅದರ ಬಗ್ಗೆ ಪ್ರಶ್ನೆ ಮಾಡಿದರೆ, ʻʻಸೋಮಣ್ಣರನ್ನ ನಾನು ಕರೆದಿಲ್ಲ. ಅವರ ಭವಿಷ್ಯಕ್ಕೆ ನಾನು ಅಡ್ಡಿಯಾಗಿಲ್ಲ. ಅಪ್ಪಾ ನೀನು ಎಲ್ಲಿ ನಿಲ್ತೀಯಾ ಅಲ್ಲಿ ಸಪೋರ್ಟ್ ಮಾಡ್ತೀವಿ ಅಂದಿದ್ದೀನಿʼʼ ಎಂದು ಬಸವರಾಜ್‌ ಹೇಳಿದರು.

ʻʻಪಾರ್ಟಿಯೊಳಗೆ ಇದ್ದು ಕೆಲಸ ಮಾಡು ಅಂದಿದ್ದೇನೆ. ಏನು ಮಾಡ್ತಾರೋ ಗೊತ್ತಿಲ್ಲʼʼ ಎಂದ ಬಸವರಾಜ್‌, ʻʻಹಿಂದಿನ ಬಾರಿ‌ ನಾನು ಗೆಲ್ಲಲು ವಿ.ಸೋಮಣ್ಣರೇ ಕಾರಣ. ನನ್ನತ್ರ ದುಡ್ಡೇ‌ ಇರಲಿಲ್ಲ. ಸೋಮಣ್ಣರೇ ದುಡ್ಡು ಕೊಟ್ಟಿದ್ದುʼʼ ಎಂದು ಸತ್ಯ ಬಿಚ್ಚಿಟ್ಟರು!

ಇದನ್ನೂ ಓದಿ: BJP-JDS Alliance : ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!

ತುಮಕೂರಿನ ರಾಜಕೀಯ ಪರಿಸ್ಥಿತಿ ಹೇಗಿದೆ?

ತುಮಕೂರಿನಲ್ಲಿ ಕಳೆದ ಬಾರಿ ಬಿಜೆಪಿಯಿಂದ ಬಸವರಾಜ್‌ ಅವರು ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದಾಗಿ ತುಮಕೂರನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕಾಗಿತ್ತು. ಅಲ್ಲಿ ದೇವೇಗೌಡರು ಸ್ಪರ್ಧೆ ಮಾಡಿದ್ದರು. ತುಮಕೂರಿನಲ್ಲಿ ಹಿಂದಿನಿಂದಲೂ ಕಾಂಗ್ರೆಸ್‌ನಿಂದ ಕಣಕ್ಕಿಳಿಯುತ್ತಿದ್ದ ಮುದ್ದಹನುಮೇ ಗೌಡರು ಬೇಸರಗೊಂಡು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿಕೊಂಡರು. ಬಳಿಕ ಅಲ್ಲಿಯೂ ಭ್ರಮನಿರಸನಗೊಂಡು ಕಾಂಗ್ರೆಸ್‌ಗೆ ಮರಳಿದ್ದಾರೆ. ಈ ಬಾರಿ ಅವರಿಗೆ ಟಿಕೆಟ್‌ ಕೊಡುವುದು ಡೌಟ್‌ ಎಂದು ಹೇಳಲಾಗುತ್ತಿದೆ. ಇತ್ತ ಬಸವರಾಜ್‌ ಅವರಿಗೂ ಬಿಜೆಪಿಯಲ್ಲಿ ಅಷ್ಟೇನೂ ಹಿತಕರ ಅನಿಸುತ್ತಿಲ್ಲ ಎಂಬ ಮಾತಿದೆ. ಇತ್ತ ಸೋಮಣ್ಣ ಅವರು ತುಮಕೂರಿನ ಮೇಲೆ ಕಣ್ಣಿಟ್ಟಿದ್ದಾರೆ.

ಕಾಂಗ್ರೆಸ್‌ ನಿರ್ಲಕ್ಷ್ಯದಿಂದ ಕಾವೇರಿ ಜಲ ವಿವಾದ ಎಂದ ಬಸವರಾಜ್‌

ʻʻಕಾಂಗ್ರೆಸ್ ನವರ ನಿರ್ಲಕ್ಷ್ಯದಿಂದಾಗಿ ನಾವು ತಮಿಳುನಾಡಿಗೆ ನೀರು ಬಿಡಬೇಕಾದ ಪರಿಸ್ಥಿತಿ ಬಂದಿದೆ. ಅಚ್ಚುಕಟ್ಟಾಗಿ ಒಳ್ಳೆ ಲಾಯರ್ ಗೆ ಇಟ್ಟು ವಾದ ಮಾಡಬೇಕಿತ್ತು. ತಜ್ಞರನ್ನು ಕಳುಹಿಸಿ ನೀರಿನ ಲೆಕ್ಕಾಚಾರ ಮಾಡಬೇಕಿತ್ತುʼʼ ಎಂದು ಬಸವರಾಜ್‌ ಹೇಳಿದರು.

ʻʻಕಾಂಗ್ರೆಸ್ ನವರು ತಮಿಳುನಾಡಿನವರನ್ನು ಎದುರು ಹಾಕಿಕೊಳ್ಳಲು ಆಗುತ್ತಿಲ್ಲ. ತಮಿಳುನಾಡಿನ ನೆಂಟಸ್ತನ ಬೇಕಾಗಿದೆ. ಹಾಗಾಗಿ ನೀರು ಬಿಟ್ಟಿದೆʼʼ ಎಂದು ಕಾಂಗ್ರೆಸ್‌ ವಿರುದ್ಧ ಹರಿ ಹಾಯ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Captain Pranjal: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್‌ ಹಸ್ತಾಂತರ

Captain Pranjal: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ನೀಡಲಾಗಿದೆ.

VISTARANEWS.COM


on

Captain Pranjal family
Koo

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಿಸಿದ್ದ 50 ಲಕ್ಷ ರೂ. ಪರಿಹಾರಧನವನ್ನು ಮಂಗಳವಾರ ಹಸ್ತಾಂತರಿಸಲಾಗಿದೆ. ಜಿಲ್ಲಾಧಿಕಾರಿ ದಯಾನಂದ್ ಅವರು ಅವರು ಪರಿಹಾರಧನದ ಚೆಕ್‌ ಅನ್ನು ಮೃತ ಯೋಧ ಪ್ರಾಂಜಲ್‌ ಕುಟುಂಬಸ್ಥರಿಗೆ ನೀಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.

ಇದನ್ನೂ ಓದಿ | CM Siddaramaiah : ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಹುತಾತ್ಮ ಕ್ಯಾಪ್ಟನ್‌ ಎಂವಿ ಪ್ರಾಂಜಲ್‌

ಇದನ್ನೂ ಓದಿ | Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Continue Reading

ಶಿವಮೊಗ್ಗ

Hosanagara News: ಸತ್ಯನಾರಾಯಣ ಪೂಜೆಯಿಂದ ಸಂಕಷ್ಟ ದೂರ: ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ

Hosanagara News: ಸತ್ಯನಾರಾಯಣ ಪೂಜೆ ವ್ರತಾಚರಣೆಯಿಂದ ದಾರಿದ್ರ್ಯ ನಾಶವಾಗಿ ಸಂಕಷ್ಟಗಳು ದೂರವಾಗುತ್ತವೆ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Satyanarayana Vrata programme inauguration at Ganganakoppa
ಗಂಗನಕೊಪ್ದದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ವ್ರತದ ಧಾರ್ಮಿಕ ಸಭೆಗೆ ಚಾಲನೆ ನೀಡಲಾಯಿತು.
Koo

ಹೊಸನಗರ: ಸತ್ಯನಾರಾಯಣ ಪೂಜೆ (Satyanarayana Pooja) ಮಾಡಿದರೆ ಸಂಕಷ್ಟಗಳು ದೂರವಾಗುತ್ತವೆ. ಈ ಕಾರಣಕ್ಕಾಗಿಯೇ ಶುಭ ಸಮಾರಂಭಗಳ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಸತ್ಯನಾರಾಯಣ ವ್ರತಾಚರಣೆ ನಡೆಸುತ್ತಾರೆ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಪಟ್ಟಣಕ್ಕೆ ಸಮೀಪದ ಗಂಗನಕೊಪ್ದದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ವ್ರತದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಮಾತನಾಡಿದರು.

ನಂಬಿಕೆ ಇಲ್ಲದೇ ಫಲದ ನಿರೀಕ್ಷೆ ಮಾಡಬಾರದು. ಭಗವಂತನಲ್ಲಿ ನಂಬಿಕೆ ಇಟ್ಟು ಕೆಲಸ ಮಾಡುವುದರಿಂದ ನಿಶ್ಚಿತವಾಗಿ ಒಳಿತಾಗುತ್ತದೆ. ತಾಂತ್ರಿಕ ಜಗತ್ತಿಗೆ ಕಾಲಿಟ್ಟ ಬಳಿಕ ಧರ್ಮಾಚರಣೆಗಳು ಆಡಂಬರ ಹಾಗೂ ಪ್ರಚಾರಕ್ಕೆ ಸೀಮಿತ ಆಗುತ್ತಿವೆ. ದೇವರ ಅಸ್ತಿತ್ವವನ್ನೇ ಪ್ರಶ್ನಿಸುವ ಪ್ರಕರಣಗಳು ನಡೆಯುತ್ತಿವೆ. ಇಂದಿನ ಪೀಳಿಗೆಯ ಯುವಕರಲ್ಲಿ ಧಾರ್ಮಿಕ ಮನೋಭಾವ ಹೆಚ್ಚಬೇಕಿದೆ. ಸಾತ್ವಿಕ ನಡೆನುಡಿಗಳನ್ನು ರೂಡಿಸಿಕೊಳ್ಳುವ ವ್ಯಕ್ತಿ ಎಲ್ಲರಿಂದ ಗೌರವ ಪಡೆಯುತ್ತಾನೆ ಎಂದರು.

ಇದನ್ನೂ ಓದಿ: Belagavi Protest: ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸಿ; ಉ.ಕ. ಹೋರಾಟ ಸಮಿತಿ ಆಗ್ರಹ

ಸತ್ಯನಾರಾಯಣ ಪೂಜೆ ವ್ರತಾಚರಣೆಯಿಂದ ದಾರಿದ್ರ್ಯ ನಾಶವಾಗಿ ಸಂಕಷ್ಟಗಳು ದೂರವಾಗುತ್ತವೆ. ಕುಟುಂಬದಲ್ಲಿ ನಡೆಯುವ ಶುಭ ಕಾರ್ಯಗಳ ಸಂದರ್ಭದಲ್ಲಿ ನಡೆಸುವುದು ಹಿಂದಿನಿಂದಲೂ ನಡೆದು ಬಂದಿದೆ ಎಂದವರು ಹೇಳಿದರು.

ಹಿರಿಯ ಸಾಹಿತಿ ಡಾ. ಶಾಂತಾರಾಮ ಪ್ರಭು ಅವರು ದೇವಾಲಯಗಳ ಪ್ರಾಮುಖ್ಯತೆ, ದೇವರ ಆರಾಧನೆಯ ಕ್ರಮ, ಜೀವನದಲ್ಲಿ ಗುರುವಿನ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಇದನ್ನೂ ಓದಿ: Ajay Jadeja: ಇಶಾನ್​ ಕಿಶನ್​ ವಿಚಾರದಲ್ಲಿ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ ಜಡೇಜಾ

ಜನಜಾಗೃತಿ ವೇದಿಕೆಯ ಎನ್.ಆರ್.ದೇವಾನಂದ, ಗ್ರಾಪಂ ಅಧ್ಯಕ್ಷ ಓಂಕೇಶ್, ದೇವಸ್ಥಾನ ಸಮಿತಿಯ ಉಪಾಧ್ಯಕ್ಷ ಎನ್.ಗಣೇಶ್, ಯೋಜನಾಧಿಕಾರಿ ಬೇಬಿ, ಮೇಲ್ವಿಚಾರಕ ಸುಭಾಷ್ ಮತ್ತಿತರರು ಪಾಲ್ಗೊಂಡಿದ್ದರು. ಸುತ್ತಮುತ್ತಲ ಗ್ರಾಮದ ವಿವಿಧ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಗೂ ಭಕ್ತರು ಆಗಮಿಸಿದ್ದರು.

Continue Reading

ತುಮಕೂರು

Tumkur News: ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿ ಉದ್ಘಾಟನೆ

Tumkur News: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ ಚಿಕ್ಕನಾಯಕನಹಳ್ಳಿ-2 ಯೋಜನಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

Chikkanayakanahalli 2 project office inaugurated at Huliyar
ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ನೂತನ ಯೋಜನಾ ಕಛೇರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್. ಮಂಜುನಾಥ್ ಉದ್ಘಾಟಿಸಿದರು.
Koo

ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ (Rural) ಭಾಗದಲ್ಲಿ ದುರ್ಬಲರನ್ನು ಹಾಗೂ ಮಹಿಳೆಯರನ್ನು ಸಂಘಟಿಸಿ ಅವರಿಗೆ ಉತ್ತಮ ಜೀವನ ನಡೆಸಲು ಸಹಕಾರ ನೀಡಲಾಗುತ್ತಿದೆ. ದುರ್ಬಲ ವರ್ಗದ ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಿ ಆರ್ಥಿಕವಾಗಿ ಸಬಲೀಕರಣರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಸಂಘದಿಂದ ಯಶಸ್ವಿಯಾಗಿ ಸಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ “ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿಯ” ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳ ಮೂಲಕ ಸರ್ಕಾರದ ಹಾಗೂ ಬ್ಯಾಂಕಿನ ಸಹಭಾಗಿತ್ವದೊಂದಿಗೆ ಹತ್ತು ಹಲವಾರು ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಿಸುತ್ತಿದೆ ಎಂದರು.

ಇದನ್ನೂ ಓದಿ: Viral News: ಹಸಿವಿನಿಂದ ಭಿಕ್ಷುಕ ಸಾವು; ಆತನ ಬಳಿ ಇತ್ತು 1 ಲಕ್ಷ ರೂ!

ನಮ್ಮೂರು ನಮ್ಮ ಕೆರೆ ಯೋಜನೆ ಇಡೀ ತುಮಕೂರು ಜಿಲ್ಲೆಯಲ್ಲಿ 49 ಕೆರೆಗಳನ್ನು ಸರಿಸುಮಾರು ಆರು ಕೋಟಿ ವೆಚ್ಚದಡಿ ಅಭಿವೃದ್ಧಿ ಪಡಿಸಲಾಗಿದೆ, ಶುದ್ಧ ನೀರು ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 75 ಶುದ್ಧಗಂಗಾ ಘಟಕಗಳನ್ನು ಸ್ಥಾಪಿಸಲಾಗಿದೆ, ಜಿಲ್ಲೆಯ 15 ರುದ್ರ ಭೂಮಿಗಳಿಗೆ 17.5 ಲಕ್ಷ ಅನುದಾನ ನೀಡಲಾಗಿದೆ, ಧಾರ್ಮಿಕ ಕ್ಷೇತ್ರದ ಪುನಶ್ಚೇತನಕ್ಕೆ ಜಿಲ್ಲೆಯಲ್ಲಿ 12 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯ 4,245 ಸದಸ್ಯರಿಗೆ ಉದ್ಯೋಗ ತರಬೇತಿ ನೀಡಲಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾರ್ಷಿಕ 22 ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಯುತ್ತಿದ್ದು ನಿತ್ಯ 100 ಕೋಟಿ ರೂಪಾಯಿಗೂ ಮೀರಿ ವ್ಯವಹಾರ ನಡೆಯುತ್ತಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ನೊಂದವರಿಗೆ ದಾರಿದೀಪವಾಗಿರುವ ಧರ್ಮಸ್ಥಳ ಸಂಘವು ಮಹಿಳೆಯರಿಗೆ ಉದ್ಯೋಗ ಹಾಗೂ ಆರ್ಥಿಕ ಸಹಾಯ ನೀಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದ್ದು, ಜಾತಿ ಮತ ಭೇದವಿಲ್ಲದೆ ಎಲ್ಲರನ್ನೂಳಗೊಂಡು ಅಭಿವೃದ್ಧಿ ಕೆಲಸಗಳು ಧರ್ಮಸ್ಥಳ ಸಂಘದಿಂದ ನಡೆಯುತ್ತಿದೆ ಎಂದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಶ್, ಆಂಜನೇಯ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಡಗಿ ರಾಮಣ್ಣ ಮಾತನಾಡಿದರು.

ಇದನ್ನೂ ಓದಿ: Byju’s Debt: ಸಿಬ್ಬಂದಿ ಸಂಬಳಕ್ಕಾಗಿ ಮನೆ ಅಡವಿಟ್ಟ ಬೈಜೂಸ್ ಕಂಪನಿ ಮಾಲಿಕ!

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್, ಮುಖಂಡರಾದ ಶೀನಪ್ಪ, ಸೌಜನ್ಯ, ಬಡಗೀರಾಜು, ಚಂದ್ರಶೇಖರ್, ಶಿವಕುಮಾರ್, ನಂದಿಹಳ್ಳಿ ಶಿವಣ್ಣ ಹಾಗೂ ಪ್ರೇಮಾನಂದ್, ರಾಮಚಂದ್ರ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಇತರರು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Lokayukta Raid : 13 ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್;‌ ಕೋಟಿ ಕೋಟಿ ಹಣ ಲಾಕ್!

Lokayukta raid : ರಾಜ್ಯದ 13 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಮುಗಿಬಿದ್ದಿದೆ. ಅವರಿಗೆ ಸೇರಿದ 63 ಕಡೆ ದಾಳಿ ಮಾಡಿದ ಅಧಿಕಾರಿಗಳು ಕೋಟಿ ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Thimmarajappa KIRDL ENgineer
ಕೆಐಆರ್‌ಡಿಎಲ್‌ ಎಂಜಿನಿಯರ್‌ ತಿಮ್ಮರಾಜಪ್ಪ ಮನೆಯಲ್ಲಿ ಸಿಕ್ಕಿದ ಹಣ ಮತ್ತು ಬಾಗಿಲು ನೋಡಿ
Koo

ಬೆಂಗಳೂರು: ಯಾವುದೇ ಭಯ, ನಾಚಿಕೆ ಇಲ್ಲದೆ ಕಂಡವರ ಮುಂದೆ ಹಣಕ್ಕೆ ಕೈ ಚಾಚುವ, ಬೆದರಿಕೆ ಹಣ ಕೀಳುವ ದುಷ್ಟ ದಂಧೆಯನ್ನು ನಡೆಸಿಕೊಂಡು ಬರುತ್ತಿದ್ದ ರಾಜ್ಯದ 13 ಮಂದಿ ಕಡುಭ್ರಷ್ಟ ಅಧಿಕಾರಿಗಳ (Corrupt officers) ಮೇಲೆ ಮಂಗಳವಾರ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ಈ ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಚೇರಿ ಮನೆಗಳಿಗೆ ದಾಳಿ ಮಾಡಿ ಕೋಟ್ಯಂತರ ರೂ. ನಗದು, ಅದಕ್ಕಿಂತಲೂ ದೊಡ್ಡ ಮೊತ್ತದ ಚಿನ್ನಾಭರಣ, ಅದನ್ನೂ ಮೀರಿದ ಆಸ್ತಿಪಾಸ್ತಿಗಳ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ರಾಜಧಾನಿ ಬೆಂಗಳೂರು, ಕೋಲಾರ, ಬೀದರ್, ಕಲಬುರ್ಗಿ, ಯಾದಗಿರಿ. ಕೊಪ್ಪಳ, ಮೈಸೂರು, ರಾಮನಗರ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ ಹೀಗೆ 10 ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಅಖಾಡಕ್ಕಿಳಿದ ಲೋಕಾಯುಕ್ತ ಅಧಿಕಾರಿಗಳು ಚಳಿಯಲ್ಲಿ ಬೆಚ್ಚಗೆ ಮಲಗಿದ್ದ 13 ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. 63ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲೇ ದಾಳಿ ನಡೆಸಿರೋ ಲೋಕಾಯುಕ್ತ ಟೀಂ ಅಧಿಕಾರಿಗಳು ಆದಾಯ ಮೀರಿ ಗಳಿಸಿದ್ದ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ದಾಳಿಗೆ ಒಳಗಾದ ಅಧಿಕಾರಿಗಳು ಇವರು

  1. ಚನ್ನಕೇಶವ H.D, EE, ಬೆಸ್ಕಾಂ, ಜಯನಗರ, ಉಪವಿಭಾಗ, ಬೆಂಗಳೂರು
  2. ಸುಧಾಕರ್ ರೆಡ್ಡಿ , ವಿಜಿಲೆನ್ಸ್ EE ಬೆಸ್ಕಾಂ, ಬೆಂಗಳೂರು
  3. H.S.ಕೃಷ್ಣಮೂರ್ತಿ, ಕಣ್ಮಿಣಿಕೆ ಹಾ.ಉ.ಸ.ಸಂಘ, ಕುಂಬಳಗೋಡು
  4. H.D.ನಾರಾಯಣ ಸ್ವಾಮಿ, ನಿವೃತ್ತ ವೈಸ್ ಚಾನ್ಸಲರ್, ಕರ್ನಾಟಕ ಪಶುವೈದ್ಯಕೀಯ ವಿವಿ, ಬೀದರ್
  5. ಸುನೀಲ್ ಕುಮಾರ್, ಸಹಾಯಕ(ಹೊರಗುತ್ತಿಗೆ), ಹಣಕಾಸು ಕಚೇರಿ, ಕರ್ನಾಟಕ ಪಶುವೈದ್ಯಕೀಯ ವಿವಿ, ಬೀದರ್
  6. ಡಾ.ಪ್ರಭುಲಿಂಗ್, ಜಿಲ್ಲಾ ಆರೋಗ್ಯಾಧಿಕಾರಿ ಯಾದಗಿರಿ
  7. ಬಿ ಮಾರುತಿ, RFO, ಆನೆಗುಂಡಿ ಡಿವಿ, ಪ್ರಾದೇಶಿಕ ಶ್ರೇಣಿ, ಗಂಗಾವತಿ, ಕೊಪ್ಪಳ
  8. ಚಂದ್ರಶೇಖರ, ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ, ಬಳ್ಳಾರಿ
  9. ಶರಣಪ್ಪ, ಆಯುಕ್ತರು, ನಗರಸಭೆ, ಯಾದಗಿರಿ.
  10. ಮಹದೇವ ಸ್ವಾಮಿ M S, ಉಪನ್ಯಾಸಕ, ಸ.ಪ್ರ.ದ.ಕಾಲೇಜು, ನಂಜನಗೂಡು
  11. ತಿಮ್ಮರಾಜಪ್ಪ, EE, KRDL, ವಿಜಯಪುರ ಜಿಲ್ಲೆ. (ಪ್ರಸ್ತುತ ಬೆಳಗಾವಿಯಲ್ಲಿ ಇಇ)
  12. ಮುನೇಗೌಡ ಎನ್, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ರಾಮನಗರ
  13. ಬಸವರಾಜ, ಸ್ಟೋರ್ ಕೀಪರ್, ಗ್ರೇಡ್-2, ಓ & ಎಂ ಸಿಟಿ ವಿಭಾಗ ಅಂಗಡಿ, ಹೆಸ್ಕಾಂ, ಹುಬ್ಬಳ್ಳಿ, (ನಿವೃತ್ತ)

ಬೆಸ್ಕಾಂ ಇಇ ಚನ್ನಕೇಶವ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ

ಬೆಂಗಳೂರಿನ ಜಯನಗರ ಉಪವಿಭಾಗ ಇಇ ಬೆಸ್ಕಾಂ ಚೆನ್ನಕೇಶವ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಪಾಸ್ತಿ ಪತ್ತೆಯಾಗಿದೆ. ಅಮೃತಹಳ್ಳಿಯ ಮಿಥುನ ಅಪಾರ್ಟಮೆಂಟ್‌ನಲ್ಲಿರುವ ಚೆನ್ನಕೇಶವ ಮನೆಗೆ ಬೆಳಗ್ಗೆ 6 ಗಂಟೆಗೆ ಮೂರು ವಾಹನದಲ್ಲಿ ಬಂದಿದ್ದ 13 ಜನ ಅಧಿಕಾರಿಗಳು ದಾಳಿ ನಡೆಸಿದರು.

ಈ ದಾಳಿಯಲ್ಲಿ 6 ಲಕ್ಷ ನಗದು, 3ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ಡೈಮಂಡ್ ಜುವೆಲರಿ, ಸೇರಿ 1.5 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿದೆ. ಆತ ಯಲಹಂಕ ಬಳಿ ಕಮರ್ಷಿಯಲ್ ಕಟ್ಟಡ ನಿರ್ಮಿಸುತ್ತಿರುವುದು ಕೂಡಾ ಪತ್ತೆಯಾಗಿದೆ. ದಾಳಿ ವೇಳೆ ಶಾಕ್‌ಗೆ ಒಳಗಾದ ಚೆನ್ನಕೇಶವಗೆ ಬಿಪಿ ಹೆಚ್ಚಾಗಿ ಆರೋಗ್ಯ ಸಮಸ್ಯೆ ಎದುರಾಗಿದೆ. ಹೀಗಾಗಿ ಅಧಿಕಾರಿಗಳು ಮಾತ್ರೆಗಳನ್ನು ತಂದುಕೊಟ್ಟ ಬಳಿಕ ಸುಧಾರಿಸಿಕೊಂಡು ಅಧಿಕಾರಿಗಳ ಪರಿಶೀಲನೆಗೆ ಸಹಕಾರ ನೀಡಿದ್ದಾರೆ. ಹಾಗೆ ಚನ್ನಕೇಶವ ಸೋದರ ಮಾನವ ಮನೆ ಮೇಲೂ ದಾಳಿ ನಡೆದಿದ್ದು ಸುಮಾರು 1 ಕೋಟಿ ನಗದು ಸಿಕ್ಕಿದೆ.

ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್‌ ರೆಡ್ಡಿ ಆಸ್ತಿ ನೋಡಿದ್ರೆ…

ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್ ರೆಡ್ಡಿಯ ಬೆಂಗಳೂರಿನ ಮನೆ, ಚಿಂತಾಮಣಿಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸುಧಾಕರ್‌ಗೆ ಸೇರಿದ ಐದು ಕಡೆ ದಾಳಿ ನಡೆದಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಸಾತನೂರು ಬಳಿಯ ನಿವಾಸಕ್ಕೆ ಲೋಕಾಯುಕ್ತ ಎಸ್ ಪಿ ವಂಶಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

Loka Sudhakar reddy

ಹಾಗೆ ಈ ದಾಳಿಯಲ್ಲಿ ಸುಧಾಕರ್ ರೆಡ್ಡಿಗೆ ಸಂಬಂಧಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಗ್ರಾಮೀಣ ಪ್ರದೇಶದಲ್ಲಿ 12 ಎಕರೆ ಕೃಷಿ ಜಾಗ ಪತ್ತೆಯಾಗಿದ್ದು, ಸುಧಾಕರ್ ಪತ್ನಿ ಟೆಲಿ ಇಂಡಿಯನ್ ಪ್ರೈವೆಟ್‌ ಲಿಮಿಟೆಡ್ ಎಂಬ ಕಂಪನಿಯಲ್ಲಿ ನಿರ್ದೇಶಕರಾಗಿದ್ದು, ಆ ಕಂಪನಿಯಲ್ಲಿ 700 ರಿಂದ 800ರಷ್ಟು ಜನ ಕೆಲಸ ಮಾಡುತ್ತಿದ್ದಾರಂತೆ. ಸದ್ಯ ಕಂಪನಿಯ ಮೇಲೂ ಸಹ ದಾಳಿ ನಡೆಸಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.

ಕೃಷ್ಣ ಮೂರ್ತಿ ಕಣಿಮಿಣಿಕೆ: ಬೆಳ್ಳಗಿರೋದೆಲ್ಲ ಹಾಲಲ್ಲ!

Loka Krishnamurthy Kumbalagodu

ಕುಂಬಳಗೋಡು ಹಾಲು ಸಹಕಾರ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಎಸ್ ಕೃಷ್ಣಮೂರ್ತಿಯ ಕಣಿಮಿಣಿಕೆ ನಿವಾಸ ಸೇರಿದಂತೆ 5 ಕಡೆ ಲೋಕಾ ದಾಳಿ ನಡೆದಿದೆ. 16 ಸಾವಿರ ಸಂಬಳ ಇದ್ರೂ ಕೃಷ್ಣಮೂರ್ತಿ ಕೋಟಿ ಕೋಟಿ ಸಂಪಾದನೆ ಮಾಡಿದ್ದು, ಪ್ರತಿ ತಿಂಗಳು ಸೊಸೈಟಿಗೆ ಎರಡು ಲಕ್ಷ ಆದಾಯ ಇದ್ದರು ಕೇವಲ ಹತ್ತು ಸಾವಿರ ತೋರಿಸಿರುವ ಆರೋಪ ಕೇಳಿಬಂದಿದೆ. ರೈತರಿಗೆ ವಂಚಿಸಿ ಹಣ ಮಾಡಿದ್ದು ದಾಳೆ ವೇಳೆ ಬೆಳಕಿಗೆ ಬಂದಿದ್ದು, ಕೆಜಿ ಕೆಜಿ ಬಂಗಾರದ ಜೊತೆ 77 ಬಾಡಿಗೆ ಮನೆಯ ಮಾಲೀಕ ಈ ಕೃಷ್ಣಮೂರ್ತಿ ಅನ್ನೋದು ಬೆಳಕಿಗೆ ಬಂದಿದೆ.

ಕೆಆರ್‌ಐಡಿಎಲ್ ಸೂಪರಿಂಟೆಂಡೆಂಟ್ ಇಂಜಿನಿಯರ್‌ ತಿಮ್ಮರಾಜಪ್ಪ

Thimmarajappa Bangalore Belagavi house

ಕೆಆರ್‌ಐಡಿಎಲ್ ಸೂಪರಿಂಟೆಂಡೆಂಟ್ ಎಂಜಿನಿಯರ್‌ ಆಗಿರುವ ತಿಮ್ಮರಾಜಪ್ಪ ಮೊದಲು ಬೆಂಗಳೂರಿನಲ್ಲಿದ್ದು ಇತ್ತೀಚೆಗಷ್ಟೇ ಬೆಳಗಾವಿಗೆ ನಿಯೋಜನೆಗೊಂಡಿದ್ದಾರೆ. ಅವರಿಗೆ ಸೇರಿದ ಬೆಳಗಾವಿಯ ಶಿವಬಸವನಗರದ ನಿವಾಸಕ್ಕೆ ಳಗಾವಿ ಲೋಕಾಯುಕ್ತ ಡಿವೈಎಸ್‌ಪಿ ಭರತರೆಡ್ಡಿ ನೇತೃತ್ವದಲ್ಲಿ ದಾಳಿಮಾಡಲಾಗಿದೆ. ತಿಮ್ಮರಾಜಪ್ಪ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನ ಮಹದೇವಪುರ ಗ್ರಾಮದವರು. ಅವರಿಗೆ ಸೇರಿದ ಬೆಂಗಳೂರಿನ ಐದು ಮನೆ ಮತ್ತು ಬೆಳಗಾವಿಯ ಮನೆಗಳಿಗೆ ದಾಳಿ ನಡೆದಿದೆ.

  1. ಕಲ್ಯಾಣ್ ನಗರ, ಚಳ್ಳಕೆರೆ ಮುಖ್ಯ ರಸ್ತೆಯಲ್ಲಿ ಮನೆ.
  2. ಬೆಂಗಳೂರಿನ ಹೂಡಿಯಲ್ಲಿರುವ ಅಪಾರ್ಟ್‌ಮೆಂಟ್.
  3. ಡಾಲರ್ಸ್ ಕಾಲೋನಿ ಮನೆ
  4. ವಿಲ್ಲಾ, ಟಿಎಂಆರ್ ಆರ್ಚೇಡ್, ಸಂಪಿಗೆಹಳ್ಳಿ,
  5. ಮಹದೇವಪುರ ಗ್ರಾಮದಲ್ಲಿ ಗ್ರಾಮದ ಮನೆ, ಕೆಜಿಎಫ್
  6. ಬೆಳಗಾವಿಯಲ್ಲಿ ಪ್ರಸ್ತುತ ವಾಸಿಸುತ್ತಿರುವ ಮನೆ (ಬಾಡಿಗೆ) ವಾಸ

Continue Reading
Advertisement
Captain Pranjal family
ಕರ್ನಾಟಕ4 mins ago

Captain Pranjal: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್‌ ಹಸ್ತಾಂತರ

Satyanarayana Vrata programme inauguration at Ganganakoppa
ಶಿವಮೊಗ್ಗ9 mins ago

Hosanagara News: ಸತ್ಯನಾರಾಯಣ ಪೂಜೆಯಿಂದ ಸಂಕಷ್ಟ ದೂರ: ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ

MS Dhoni
ಕ್ರಿಕೆಟ್10 mins ago

MS Dhoni : ಐಪಿಎಲ್​ಗೆ ಮೊದಲು ಇಷ್ಟ ದೇವತೆಯ ದರ್ಶನ ಪಡೆದ ಎಂ ಎಸ್ ಧೋನಿ

Chikkanayakanahalli 2 project office inaugurated at Huliyar
ತುಮಕೂರು12 mins ago

Tumkur News: ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿ ಉದ್ಘಾಟನೆ

Thimmarajappa KIRDL ENgineer
ಕರ್ನಾಟಕ16 mins ago

Lokayukta Raid : 13 ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್;‌ ಕೋಟಿ ಕೋಟಿ ಹಣ ಲಾಕ್!

BJP to ask to mla winners to resign their mp post in Rajasthan
ದೇಶ24 mins ago

ರಾಜಸ್ಥಾನ ಚುನಾವಣೆಯಲ್ಲಿ ಗೆದ್ದ ನಾಲ್ವರು ಸಂಸದರ ರಾಜೀನಾಮೆಗೆ ಬಿಜೆಪಿ ಸೂಚನೆ?

Belagavi Protest
ಕರ್ನಾಟಕ40 mins ago

Belagavi Protest: ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸಿ; ಉ.ಕ. ಹೋರಾಟ ಸಮಿತಿ ಆಗ್ರಹ

MLC Dinesh Gooligowda discuss with Chaluvarayaswamy and Satish jarkiholi
ಕರ್ನಾಟಕ43 mins ago

Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

gange gowri
ಕಿರುತೆರೆ44 mins ago

Udaya Tv: ಉದಯ ಟಿವಿಯಲ್ಲಿ ಬರ್ತಿದೆ ಅಕ್ಕ-ತಂಗಿಯರ ಹೊಸ ಕಥೆ ʻಗಂಗೆ ಗೌರಿʼ

Man throws acid on owner for barking dog
ಕರ್ನಾಟಕ50 mins ago

Acid attack: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಆ್ಯಸಿಡ್‌ ಎರಚಿದ ದುರುಳ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ12 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌