FSL Report : FSL ವರದಿ ಬಿಡುಗಡೆ ಮಾಡಿದ ಬಿಜೆಪಿ; ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗೆ ಸಾಕ್ಷಿ - Vistara News

ರಾಜಕೀಯ

FSL Report : FSL ವರದಿ ಬಿಡುಗಡೆ ಮಾಡಿದ ಬಿಜೆಪಿ; ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗೆ ಸಾಕ್ಷಿ

FSL Report : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗೆ ಸಂಬಂಧಿಸಿ ಬಿಜೆಪಿ ಖಾಸಗಿ ಎಫ್‌ಎಸ್‌ಎಲ್‌ ವರದಿ ಬಿಡುಗಡೆ ಮಾಡಿ ಕಾಂಗ್ರೆಸ್‌ ಸರ್ಕಾರಕ್ಕೆ ಸಡ್ಡು ಹೊಡೆದಿದೆ.

VISTARANEWS.COM


on

BJP Karnataka Pakistan zindabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajyasabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಎಫ್‌ಎಸ್‌ಎಲ್‌ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಈ ಮೂಲಕ ಘೋಷಣೆ ಕೂಗಿದ್ದಕ್ಕೆ ಸಾಕ್ಷ್ಯ ಒದಗಿಸಿರುವ ಪಕ್ಷ ಕಾಂಗ್ರೆಸ್‌ (Congress Party) ಈ ವಿಷಯದಲ್ಲಿ ಸುಳ್ಳು ‌ ಹೇಳುತ್ತಿದೆ ಎಂದು ಆರೋಪಿಸಿದೆ.

ಖಾಸಗಿ ವಿಧಿ ವಿಜ್ಞಾನ ತಜ್ಞರಾದ ಫಣೀಂದ್ರ ಬಿ.ಎನ್‌ ಅವರು ನೀಡಿರುವ ಎಫ್‌ಎಸ್‌ಎಲ್‌ ವರದಿಯನ್ನು ಟ್ವೀಟ್‌ ಮಾಡಿರುವ ಬಿಜೆಪಿ, ಇದರಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದನ್ನು ದೃಢಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದೆ. ಇದನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಮಲಪಕ್ಷ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಜೆಪಿ ಹೇಳಿದ್ದೇನು?

BJP Karnataka Pakistan zindabad

ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಬಿಜೆಪಿ ತನ್ನ ಟ್ವೀಟ್‌ನಲ್ಲಿ ಹೇಳಿದೆ.

ರಾಷ್ಟ್ರ ವಿರೋಧಿ ಧೋರಣೆಯ ಕರ್ನಾಟಕ ಕಾಂಗ್ರೆಸ್‌ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ಫಣೀಂದ್ರ ಅವರು ನೀಡಿದ ವರದಿಯಲ್ಲಿ ಏನಿದೆ?

ನಿರ್ದಿಷ್ಟ ವಿಡಿಯೊದಲ್ಲಿ ಹೇಳಿದ್ದು ನಾಸಿರ್‌ ಖಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಅಥವಾ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಎಂಬ ಸೀಮಿತ ವಿಚಾರದಲ್ಲಿ ಪರಿಶೀಲಿಸಿದಾಗ ಬಹುಪಾಲು ಇದು ಪಾಕಿಸ್ತಾನ್‌ ಜಿಂದಾಬಾದ್‌ ಎಂದೇ ಹೇಳಿದಂತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ವಿಧಾನಸೌಧದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ನಿಜ; ಎಫ್‌ಎಸ್‌ಎಲ್‌ ತಜ್ಞ ಫಣೀಂದ್ರ ಹೇಳಿಕೆ

ಖಾಸಗಿ ವರದಿ ಒಪ್ಪಲಾಗದು ಎಂದ ಜಿ. ಪರಮೇಶ್ವರ್‌

ರಾಜ್ಯ ಸರಕಾರ ಕೂಡಾ ವಿವಾದಿತ ವಿಡಿಯೊದ ಎಫ್‌ಎಸ್‌ಎಲ್‌ ವಿಶ್ಲೇಷಣೆಗೆ ಕಳುಹಿಸಿಕೊಟ್ಟಿದ್ದು, ಅದರ ವರದಿ ಬಂದಿದೆ ಎನ್ನಲಾಗಿದೆ. ಆದರೆ ಅದನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಈಗ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವರದಿಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ʻʻ ಖಾಸಗಿ ಸಂಸ್ಥೆ ವರದಿ ಗಣನೆಗೆ ತೆಗೆದುಕೊಳ್ಳಲ್ಲ. ಸರ್ಕಾರದ ಎಫ್‌ಎಸ್‌ಎಲ್‌, ಗೃಹ ಇಲಾಖೆಯ ಫಾರೆನ್ಸಿಕ್ ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾಸಿಟಿವ್ ಆಗಿ, ಕೂಗಿರೋದು ದೃಢ ಅಂದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆʼʼ ಎಂದು ಜಿ. ಪರಮೇಶ್ವರ್‌ ಹೇಳಿದ್ದಾರೆ.

ಸರ್ಕಾರ ವರದಿಯನ್ನು ಮುಚ್ಚಿಡುತ್ತಿದೆ ಎನ್ನುವ ಬಿಜೆಪಿ ಆರೋಪ, ಘಟನೆಯ ಮರುದಿನವೇ ಪ್ರಿಯಾಂಕ್ ಖರ್ಗೆ ವರದಿ ಬಂದಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇದು ನಮ್ಮ‌ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳ್ತೀನಿ ಎಂದು ಹೇಳಿದರು.

ಎಫ್‌ಎಸ್‌ಎಲ್‌ ವರದಿ ಬಿಡುಗಡೆ ಮಾಡಲು ಖಾಸಗಿಯವರು ಯಾರು? ಅವರಿಗೆ NOC ಯಾರು ಕೊಟ್ಟಿದ್ದಾರೆ. ಅವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ.? ಎಲ್ಲವನ್ನೂ ಚೆಕ್ ಮಾಡ್ತೀನಿ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದು ದೂರಿದರು.

Continue Reading

ಗದಗ

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

HK Patil: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ರಾಜಕಾರಣಿ ಹಾಗೂ ಸಚಿವ ಎಚ್.ಕೆ.ಪಾಟೀಲ್‌ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ ಡಿ.ಕೆ ಎಂದು ಹೇಳಿ ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡ ಘಟನೆ ನಡೆದಿದೆ.

VISTARANEWS.COM


on

HK patil

ಗದಗ: ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಥಾನದ‌‌ ಮೇಲೆ ಎಲ್ಲರ ಕಣ್ಣಿದೆ. ಕಾರಣ ಮುಡಾ ಹಗರಣ‌‌ ಎದುರಿಸುತ್ತಿರುವ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮುಡಾ ಹಗರಣದಿಂದ‌ ಖಾಲಿಯಾಗುತ್ತೆ ಅನ್ನೋ ಬಿಸಿ‌ಬಿಸಿ ಚರ್ಚೆ ಪ್ರಚಲಿತದಲ್ಲಿದೆ. ಇದಕ್ಕೆ ಪುಷ್ಟಿಕರೀಸುವಂತೆ ಗದಗದಲ್ಲಿ ಸಚಿವ ಎಚ್‌ಕೆ ಪಾಟೀಲ್‌ (HK Patil) ಮುಖ್ಯಮಂತ್ರಿ ಹೆಸರನ್ನು ಹೇಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್‌ ಹೆಸರು ಪ್ರಸ್ತಾಪಿಸಿ, ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡಿದ್ದಾರೆ.

ಮುದ್ರಣ‌ ಕಾಶಿ ಗದಗ ಜಿಲ್ಲೆಯಲ್ಲಿ‌ ಶುಕ್ರವಾರ ಅದ್ಧೂರಿ 66ನೇ ಕನ್ನಡ ರಾಜ್ಯೋತ್ಸವ ಜರುಗಿತು. ‌ಈ ವೇಳೆ ಜಿಲ್ಲಾ ಉಸ್ತುವಾರಿ‌ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವೇದಿಕೆ ಮೇಲೆ ಭಾಷಣದ‌ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಬದಲಾಗಿ, ಡಿಕೆ ಎಂದು ಪ್ರಸ್ತಾಪಿಸಿ, ತಕ್ಷಣ ಎಚ್ಚೆತ್ತು,‌ ಸಿದ್ಧರಾಮಯ್ಯ‌ ಎಂದು ಮುಂದುವರೆದು,‌ ಉಪಮುಖ್ಯಮಂತ್ರಿ‌ ಡಿ.ಕೆ. ಶಿವಕುಮಾರ್‌ ಅವರು ಎಂದೇಳಿ, ತಮ್ಮ ಭಾಷಣ ಮುಂದುವರೆಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ‌ ನಾಮಕರಣದ ಐವತ್ತರ‌ ಸಂಭ್ರಮಾಚರಣೆಯನ್ನು ಕಳೆದ ವರ್ಷ 2023ರ ನವಂಬರ್, 1,2,3 ರಂದು ಮೂರು‌ ದಿನಗಳ‌ ಕಾಲ ಗದಗ ನಗರದ ಸೊಸೈಟಿಯ ಆವರಣದಲ್ಲಿ ನಡೆದಿತ್ತು.‌ ಗತವೈಭವ ಮರುಕಳಿಸುವ ಹಾಗೆ, ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಎಲ್ಲ ಜನತೆ‌ ಸಾಕ್ಷಿಯಾಗಿದ್ದೀರಿ. ನಾಡಿನ ಮುಖ್ಯಮಂತ್ರಿಗಳಾದ ಡಿ.ಕೆ (ತಕ್ಷಣ ಎಚ್ಚೆತ್ತು ಭಾಷಣದ ಪ್ರತಿ ತೀಕ್ಷ್ಣವಾಗಿ ವೀಕ್ಷಿಸಿ) ಮಾನ್ಯ‌ ಸಿದ್ಧರಾಮಯ್ಯನವರು,‌ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ, ಸಚಿವ ಸಂಪುಟದ ಎಲ್ಲ‌ ಸಹೋದ್ಯೋಗಿಗಳು ಈ‌ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಪ್ರಸ್ತಾಪಿಸಿ, ಮುಂದೆ ತಮ್ಮ ಭಾಷಣದ ಸಂದೇಶವನ್ನು ಮುಂದುವರಿಸಿದ್ದಾರೆ.

ಸಿದ್ದರಾಮಯ್ಯನವರ ಸಂಪುಟದಲ್ಲಿ ‌ಅತ್ಯಂತ‌ ಹಿರಿಯ ಮತ್ತು ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ.ಪಾಟೀಲ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿಯೂ ಒಬ್ಬರಾಗಿದ್ದಾರೆ.‌ ದೀಪಾವಳಿ‌ ಶುಭ‌ ಸಂದರ್ಭದಲ್ಲಿ ಸಚಿವರ ಬಾಯಲ್ಲಿ, ಡಿಕೆಶಿ ಮುಖ್ಯಮಂತ್ರಿಯಾಗಿದ್ದು ಅಚಾನಕ್ ಆಗಿ ಆದ ಅಚಾತುರ್ಯವೋ,‌ ಅಥವಾ ಸಚಿವರ ಆಂತರ್ಯದ ನುಡಿಯೋ ಎಲ್ಲವೂ ಕಾಕತಾಳಿಯ‌ ಎಂಬಂತಿದೆ.

Continue Reading

ಬೆಂಗಳೂರು

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Fraud Case : ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

VISTARANEWS.COM


on

Fraud case Union Minister Pralhad Joshis brother duped of ticket for Lok Sabha polls
ಮಾಜಿ ಶಾಸಕ ದೇವಾನಂದ್ ಚೌಹಾಣ್ ಹಾಗೂ ಗೋಪಾಲ್‌ ಜೋಶಿ

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರನ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಪ್ರಲ್ಹಾದ ಜೋಶಿ ಸಹೋದರ ಗೋಪಾಲ್‌ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ (Fraud Case) ಎಫ್‌ಐಆರ್‌ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.

ಮಾಜಿ ಶಾಸಕ ದೇವಾನಂದ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಎಂಬುವರಿಂದ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 2018ರಲ್ಲಿ ನಾಗಠಾಣಾ ಕ್ಷೇತ್ರದಿಂದ ಜೆಡಿಎಸ್‌ (JDS)ದೇವಾನಂದ್ ಚೌಹಾಣ್ ಶಾಸಕರಾಗಿದ್ದರು. 2023ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ದೇವಾನಂದ್ ಚೌಹಾಣ್ ಸೋತಿದ್ದರು. ಬಳಿಕ ಪರಿಚಯಸ್ಥ ಶೇಖರ್ ನಾಯಕ್ ಮೂಲಕ ಗೋಪಾಲ್ ಜೋಶಿ ಪರಿಚಯವಾಗಿದ್ದರು. ಮಾರ್ಚ್ ಮೊದಲ ವಾರ ಹುಬ್ಬಳ್ಳಿಯಲ್ಲಿ ಗೋಪಾಲ್ ಜೋಶಿ ಚೌಹಾಣ್ ದಂಪತಿಯನ್ನು ಭೇಟಿ ಮಾಡಿದ್ದರು. ಈ ವೇಳೆ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ನನ್ನ ತಮ್ಮನಿಗೆ ಕೇಂದ್ರ ಸರ್ಕಾರದಲ್ಲಿ ವರ್ಚಸ್ಸು ಚೆನ್ನಾಗಿದೆ. ಪ್ರಹ್ಲಾದ್ ಜೋಶಿ ಹೇಳಿದಂತೆ ಮೋದಿ, ಅಮಿತ್ ಶಾ ಕೇಳುತ್ತಾರೆ. ಹೀಗಾಗಿ ಬಿಜಾಪುರ ಕ್ಷೇತ್ರದಿಂದ ನಿಮಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು.

ಗೋಪಾಲ್ ಜೋಶಿ ಟಿಕೆಟ್‌ಗೆ ಬರೋಬ್ಬರಿ 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಯಲ್ಲಿಯೇ ಡೀಲ್ ನಡೆದಿತ್ತು. ಆದರೆ 5 ಕೋಟಿ ರೂ.‌ಸಾಧ್ಯವಿಲ್ಲ ಎಂದು ಚೌಹಣ್ ದಂಪತಿ ಹೊರಟು ಹೋಗಿದ್ದರು ಎನ್ನಲಾಗಿದೆ. ಬಳಿಕ ಗೋಪಾಲ್ ಜೋಶಿ ಮತ್ತು ಶೇಖರ್ ಇಬ್ಬರು ಚೌಹಣ್ ದಂಪತಿ ಮನವೊಲಿಸಿದ್ದರು. ಸದ್ಯಕ್ಕೆ 25 ಲಕ್ಷ ರೂ. ಕೊಟ್ಟು ಉಳಿದ ಹಣಕ್ಕೆ ಚೆಕ್ ಕೊಡಿ ಎಂದಿದ್ದರಂತೆ. ಹೀಗಾಗಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಗೋಪಾಲ್ ಜೋಶಿ ಸಹೋದರಿ ವಿಜಯಲಕ್ಷ್ಮಿ ಮನೆಗೆ 25 ಲಕ್ಷ ರೂ. ಹಣವನ್ನು ತಂದು ಸುನೀತಾ ಚೌಹಣ್ ನೀಡಿದ್ದರು. ಆದರೆ ದೇವನಾಂದ್‌ಗೆ ಗೋಪಾಲ್ ಜೋಶಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸಲಿಲ್ಲ.

ಸುನೀತಾ ಚೌಹಾಣ್ ತಮ್ಮ 25 ಲಕ್ಷ ರೂ.‌ ಹಣ ನೀಡುವಂತೆ ಕೇಳಿದ್ದಾರೆ. ಹಣ ಕೇಳಿದರೆ 200 ಕೋಟಿ ರೂ. ಪ್ರಾಜೆಕ್ಟ್ ಹಣ ಬರಬೇಕು ಕೊಡುವುದಾಗಿ ಸಬೂಬು ನೀಡಿದ್ದಾರೆ. ಅಷ್ಟಲ್ಲದೇ ಗೋಪಾಲ್ ಜೋಶಿ, ಸುನೀತಾ ಬಳಿ ಮತ್ತೆ 1.75 ಕೋಟಿ ರೂ. ಹಣ ಕೇಳಿದ್ದರು. ಮುಂದಿನ ಚುನಾವಣೆಗೆ ಸಹಾಯ ಮಾಡುವುದಾಗಿ ಹಣ ಕೇಳಿದ್ದರು. ಈ ಮಾತನ್ನು ನಂಬಿ ಮತ್ತೆ 1.75 ಕೋಟಿ ಹಣವನ್ನು ವಿಜಯಲಕ್ಷ್ಮಿಗೆ ಸುನೀತಾ ಚೌಹಣ್ ನೀಡಿದ್ದರು. ಆದರೆ ಹಣ ಕೇಳಿದಾಗ ಸಬೂಬು ಗೋಪಾಲ್, ವಿಜಯಲಕ್ಷ್ಮಿ ಹೇಳುತ್ತಿದ್ದರು.

ಈ ವೇಳೆ ಗೋಪಾಲ್ ಜೋಶಿ ಪುತ್ರ ಅಜಯ್ ಜೋಶಿ ಹಣ ನಾನು ವಾಪಸ್ ಕೊಡುವುದಾಗಿ ಹೇಳಿದ್ದರು. ಆದರೆ ಯಾರು ಕೂಡ ಸುನೀತಾಗೆ ಹಣ ವಾಪಸ್ ನೀಡಿರಲಿಲ್ಲ. ಕಳೆದ ಆ. 1ರಂದು ವಿಜಯಲಕ್ಷ್ಮಿ ಮನೆ ಬಳಿ ಬಂದಿದ್ದ ಸುನೀತಾ, ಹಣ ಕೇಳಿದಾಗ, ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ಮೊರೆ ಹೋಗಿರುವ ಸುನೀತಾ ಚೌಹಣ್ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Continue Reading

ಬೆಂಗಳೂರು

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್; ತನಿಖೆಯಲ್ಲಿ ಬಯಲಾಯ್ತು ಪ್ರಭಾವಿ ನಾಯಕರ ಹೆಸರು

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ತನಿಖೆಯಲ್ಲಿ ಪ್ರಭಾವಿ ನಾಯಕರ ಹೆಸರುಗಳು ಬಯಲಾಗಿವೆ.

VISTARANEWS.COM


on

Munirathnas honeytrap case gets a twist Names of influential leaders revealed in probe

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ಹನಿ ಟ್ರ್ಯಾಪ್ ಕೇಸ್ ದಿನೆದಿನೇ ತಿರುವು ಪಡೆದುಕೊಳ್ಳುತ್ತಾ ಹೋಗುತ್ತಿದೆ. ಮುನಿರತ್ನ ಸದ್ಯ ಎಸ್ಐಟಿ ಕಸ್ಟಡಿಯಲ್ಲಿದ್ದರೆ, ಅತ್ತ ವಿಚಾರಣೆ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಂತ್ರಸ್ತೆಯ ಹೇಳಿಕೆ ದಾಖಲಿಸಿರುವ ಅಧಿಕಾರಿಗಳು ಆ ಹೇಳಿಕೆ ಮೇರೆಗೆ ಹಲವು ಗಣ್ಯರಿಗೆ ನೋಟಿಸ್ ನೀಡಲಿದ್ದಾರೆ. ಹಾಗಾದರೆ ಈ ಪ್ರಕರಣದಲ್ಲಿ ಮುನಿರತ್ನ ಜತೆ ಕೈಜೋಡಿಸಿದ ಆ ರಾಜಕಾರಣಿಗಳು ಯಾರು?

ಎಸ್ಐಟಿ ಅಧಿಕಾರಿಗಳಿಂದ ಹನಿಟ್ರ್ಯಾಪ್ ಕೇಸ್ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ಶಾಸಕ ಮುನಿರತ್ನ ವಿಚಾರಣೆ ಅನುಭವಿಸುತ್ತಿದ್ದರೆ, ಅತ್ತ ಸಂತ್ರಸ್ತೆ ವಿಚಾರಣೆಯಲ್ಲಿ ಕುತೂಹಲಕಾರಿ ಸಂಗತಿಯನ್ನು ಬಹಿರಂಗ ಪಡಿಸಿದ್ದು, ಪ್ರಕರಣದಲ್ಲಿ ಮುನಿರತ್ನ ಜತೆಗೆ ಇನ್ನು ಹಲವರು ಭಾಗಿಯಾಗಿದ್ದರು. ಅದರಲ್ಲಿ ಹಲವು ಅಧಿಕಾರಿಗಳು, ಮಾಜಿ ಕಾರ್ಪೋರೇಟರ್‌ಗಳು, ರಾಜಕಾರಣಿಗಳು ಈ ಹನಿ ಟ್ರ್ಯಾಪ್‌ನಲ್ಲಿ ಶಾಮಿಲಾಗಿದ್ದಾರೆ ಎಂದಿದ್ದಾಳೆ. ಸದ್ಯ ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆ ಪ್ರಬಲ ವ್ಯಕ್ತಿಗಳಿಗೆ ನೋಟಿಸ್ ನೀಡಲಿದ್ದಾರೆ.

ಇನ್ನು ಮುನಿರತ್ನ ಸಂಬಂಧ ಹೇಳಿಕೆ ದಾಖಲಿಸುವಾಗ ಖುದ್ದು ಸಂತ್ರಸ್ಥ ಮಹಿಳೆಯಿಂದಲೇ ಹೆಸರು ಉಲ್ಲೇಖ ಆಗಿದೆ. ಈ ಟ್ರ್ಯಾಪ್‌ನಲ್ಲಿ ಯಾರೆಲ್ಲ ಭಾಗಿಯಾಗಿದ್ದರು ಎಂದು ಪ್ರಭಾವಿಗಳ ಹೆಸರನ್ನು ಹೇಳಿದ್ದಾರೆ. ಸದ್ಯ ಈ ಬಗ್ಗೆ ಎಸ್ಐಟಿ ಕೆಲ ಮಾಜಿ ಕಾರ್ಪೋರೇಟರ್‌ಗಳಿಗೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗಲು ಸೂಚನೆ ನೀಡುವ ಸಾಧ್ಯತೆ ಇದೆ. ಕಾರ್ಪೋರೇಟರ್‌ ಜತೆಗೆ ಅಧಿಕಾರಿಗಳಲ್ಲದೆ ಪ್ರಭಾವಿ ರಾಜಕಾರಣಿಗಳು ಸಹ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಮಹಿಳೆ ವಿಚಾರಣೆಯಲ್ಲಿ ಹೇಳಿದ್ದು, ಈ ಬಗ್ಗೆ ಎಸ್ಐಟಿ ಆ ರಾಜಕಾರಣಿಗಳಿಗೆ ನೋಟಿಸ್ ನೀಡುವ ಮುನ್ನ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ.

ಇದೆಲ್ಲ ಒಂದು ಕಡೆಯಾದರೆ ಅತ್ಯಾಚಾರ ಕೇಸ್‌ನ ತನಿಖೆ ಜತೆಗೆ ಹನಿಟ್ರ್ಯಾಪ್ ಕೇಸ್‌ನ ಮೂಲಕ್ಕೆ ಕೈ ಹಾಕಿರುವ ಎಸ್ಐಟಿ ಅಧಿಕಾರಿಗಳು ಮುನಿರತ್ನರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಸಂತ್ರಸ್ತೆ ಹೇಳಿಕೆ‌ ಸಂಚಲನಕ್ಕೆ ಕಾರಣವಾಗಿದ್ದು, ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಯುತ್ತಿದೆ.

Continue Reading
Advertisement
ಕರ್ನಾಟಕ13 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest16 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ17 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ17 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌