Site icon Vistara News

Ram Mandir: ರಾಮನನ್ನು ಕೇವಲ ಕಾಲ್ಪನಿಕ ಎಂದಿದ್ದು ನೀವಲ್ಲವೇ? ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

Ram Mandir and BJP vs Congress

ಬೆಂಗಳೂರು: ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರಕ್ಕೆ (Ram Mandir) ಸಂಬಂಧಪಟ್ಟಂತೆ “ರಾಮನ ಯುದ್ಧ” ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್‌ (Congress Karnataka) ನಾಯಕರ ನಡೆಯನ್ನು ಬಿಜೆಪಿ (BJP Karnataka) ಟೀಕಿಸುತ್ತಲೇ ಬಂದಿತ್ತು. ಇದಕ್ಕೆ ಆಕ್ರೋಶಗೊಂಡಿದ್ದ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುವ ಮೂಲಕ ತನ್ನ “ರಾಮಭಕ್ತಿ”ಯನ್ನು ಪ್ರದರ್ಶನ ಮಾಡಿತ್ತು. ಅಲ್ಲದೆ, ಬಿಜೆಪಿ ಹಲವು ಪ್ರಶ್ನೆಗಳನ್ನು ಕೇಳಿ ಕುಟುಕಿತ್ತು. ಈಗ ಇದಕ್ಕೆ ಬಿಜೆಪಿ ಕೌಂಟರ್‌ ಅಟ್ಯಾಕ್‌ ಮಾಡಿದೆ. ರಾಮನನ್ನು ಕೇವಲ ಕಾಲ್ಪನಿಕ ಎಂದಿದ್ದು ನೀವಲ್ಲವೇ? ಎಂದು ಪ್ರಶ್ನೆ ಮಾಡಿರುವ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ‌‌ ಎಂದು ತಿರುಗೇಟು ನೀಡಿದೆ.

ಬಿಜೆಪಿ ಪೋಸ್ಟ್‌ನಲ್ಲೇನಿದೆ?

ಪೋಸ್ಟ್‌ ಮಾಡಿ ಪ್ರಶ್ನೆ ಮಾಡಿದ್ದ ಕಾಂಗ್ರೆಸ್‌!

ಸೋಮವಾರ ಈ ಬಗ್ಗೆ ಸೋಷಿಯಲ್‌ ಮೀಡಿಯಾ (Social Media) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕಾಂಗ್ರೆಸ್‌, ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿತ್ತು. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದೂ ಹೇಳಿತ್ತು.

ಬಿಜೆಪಿಗೆ ಹಲವು ಪ್ರಶ್ನೆ ಕೇಳಿದ್ದ ಕಾಂಗ್ರೆಸ್‌

ಇದನ್ನೂ ಓದಿ: Lok Sabha Election 2024: ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಯದುವೀರ್ ಒಡೆಯರ್‌ ಬಿಜೆಪಿ ಅಭ್ಯರ್ಥಿ?

Exit mobile version