BK Hariprasad : ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ಶಕ್ತಿ ಪ್ರದರ್ಶನ; ಖಾಕಿ ಚಡ್ಡಿ ಹಾಕಿಕೊಂಡ ಸಮಾಜವಾದಿ ಎಂದು ಗೇಲಿ - Vistara News

ಕರ್ನಾಟಕ

BK Hariprasad : ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ಶಕ್ತಿ ಪ್ರದರ್ಶನ; ಖಾಕಿ ಚಡ್ಡಿ ಹಾಕಿಕೊಂಡ ಸಮಾಜವಾದಿ ಎಂದು ಗೇಲಿ

BK Hariprasad : ಬೆಂಗಳೂರಿನ ಅರಮನೆ ಮೈದಾನದಲ್ಲಿ ಅತಿ ಹಿಂದುಳಿದ ವರ್ಗಗಳ ನಾಯಕರ, ಸ್ವಾಮೀಜಿಗಳ ಸಭೆ ಮಾಡಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ ಬಿ.ಕೆ. ಹರಿಪ್ರಸಾದ್‌. ಎಲ್ಲರೂ ಹರಿಪ್ರಸಾದ್‌ ಅವರಿಗೆ ನ್ಯಾಯ ಬೇಕು ಎಂದಿರುವುದು ಇದರ ಸೂಚ್ಯಂಕವಾಗಿದೆ.

VISTARANEWS.COM


on

BK Hariprasad and CM Siddaramaih
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಗೆ ಮಂತ್ರಿ ಸ್ಥಾನ ಸಿಗದ ಸಿಟ್ಟಿನಲ್ಲಿ ಕುದಿಯುತ್ತಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ (BK Hariprasad) ಅವರು ಶನಿವಾರ ಅರಮನೆ ಮೈದಾನದಲ್ಲಿ (Palace Grounds) ತಮಗೆ ಅಪಮಾನ ಮಾಡಿದ ಸಿಎಂ ಸಿದ್ದರಾಮಯ್ಯ (CM Siddaamaiah) ವಿರುದ್ಧ ಶಕ್ತಿ ಪ್ರದರ್ಶನ ಮಾಡಿದರು. ತಮಗೆ ಸಚಿವ ಸ್ಥಾನ ಸಿಗದೆ ಇರುವುದು ಅತಿ ಹಿಂದುಳಿದ ವರ್ಗಗಳಿಗೆ (Most Backward Communities) ಮಾಡಿದ ಅಪಮಾನ ಎಂದು ಬಿಂಬಿಸಿರುವ ಹರಿಪ್ರಸಾದ್‌ ಅವರು ನಾರಾಯಣಗುರು ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ (Pranavanda swameeji) ಅವರನ್ನು ಮುಂದಿಟ್ಟುಕೊಂಡು ಶನಿವಾರ ಅರಮನೆ ಮೈದಾನದಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಸಮಾರಂಭದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳೂ ಸೇರಿದಂತೆ ಎಲ್ಲರೂ ಹರಿಪ್ರಸಾದ್‌ ಅವರನ್ನು ಅವಗಣಿಸಲಾಗಿದೆ ಎಂಬ ಮಾತನ್ನೇ ಆಡಿದ್ದು ಸಭೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿತ್ತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ (Bangalore Palace grounds) ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ ನಡೆಯಿತು. ಪ್ರಣವಾನಂದ ಸ್ವಾಮಿಯವರು, ಅತಿ ಹಿಂದುಳಿದ ಸಮುದಾಯಗಳ ಹಲವು ಮಠಾಧೀಶರು, ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಆಂಧ್ರ ಪ್ರದೇಶ ವಸತಿ ಸಚಿವ ಜೋಗಿ ರಮೇಶ್, ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ್, ಮಾಜಿ ಸಚಿವ ಶಿವಮೂರ್ತಿ ನಾಯಕ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್, ಬಿಜೆಪಿ ಮುಖಂಡ ನೆಲ ನರೇಂದ್ರಬಾಬು, ಆಮ್‌ ಆದ್ಮಿ ಪಾರ್ಟಿಯ ಮುಖ್ಯಮಂತ್ರಿ ಚಂದ್ರು ಸೇರಿ ಹಲವರು ಭಾಗವಹಿಸಿದ್ದರು.

ಮಾತನಾಡಿದ ಎಲ್ಲರೂ ಬಿ.ಕೆ. ಹರಿಪ್ರಸಾದ್‌ ಅವರಿಗೆ ರಾಜಕೀಯವಾಗಿ ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಣವಾನಂದ ಸ್ವಾಮೀಜಿಯವರು ʻನೀವೇ ಎಷ್ಟು ವರ್ಷ ಮುಖ್ಯಮಂತ್ರಿ ಆಗಿರ್ತೀರಿ. ನಾವೇನು ಇಲ್ಲಿ ಕಾದುಕೊಂಡೇ ಸಾಯ್ಬೇಕಾʼʼ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಕೇಳಿದ್ದರು. ಜ್ಞಾನ ಪ್ರಕಾಶ ಸ್ವಾಮೀಜಿ ಅವರು ದಲಿತರು ಯಾಕೆ ಸಿಎಂ ಆಗಬಾರದು ಎಂಬ ಪ್ರಶ್ನೆ ಎತ್ತಿದರು.

ಇದೆಲ್ಲದರ ನಂತರ ಮಾತನಾಡಿದ ಬಿ.ಕೆ. ಹರಿಪ್ರಸಾದ್‌ ಅವರು ಕೂಡಾ ಮುಖ್ಯವಾಗಿ ಸಿದ್ದರಾಮಯ್ಯ ಅವರನ್ನೇ ಪರೋಕ್ಷವಾಗಿ ಟಾರ್ಗೆಟ್‌ ಮಾಡಿದರು. ಸಿದ್ದರಾಮಯ್ಯ ಅವರು ಒಳಗೆ ಖಾಕಿ ಚಡ್ಡಿ ಹಾಕಿಕೊಂಡ ಸಮಾಜವಾದಿ ಎಂದು ಕೂಡಾ ಅವರು ಆಕ್ಷೇಪಿಸಿದರು.

ಅಧಿಕಾರಕ್ಕೆ ಬಂದ ಮೇಲೆ ನಮ್ಮ ನೆನಪಾಗಲಿಲ್ಲ

ʻʻನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆʼʼ ಎಂದು ಹೇಳುತ್ತಲೇ ಮಾತು ಆರಂಭಿಸಿದ ಹರಿಪ್ರಸಾದ್‌, ʻʻಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬಂದರೆ ಹಾಗೆ ಮಾಡುತ್ತೇವೆ, ಅಧಿಕಾರ ಕೊಡುತ್ತೇವೆ ಎಂದರು. ಆದರೆ, ಅಧಿಕಾರ ಬಂದ ಮೇಲೆ ಅತೀ ಹಿಂದುಳಿದ ವರ್ಗಗಳು ನೆನಪೇ ಆಗಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಕೊಡಬೇಕಾಗಿರುವುದು ಇನ್ನೂ ಸಿಕ್ಕಿಲ್ಲʼʼ ಎಂದರು ಹೇಳಿದರು. ಜತೆಗೆ ʻʻಸಮುದಾಯದ ಶಕ್ತಿ ಏನು ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲʼʼ ಎಂದರು.

ಪರಮೇಶ್ವರ್‌ ಸಿಎಂ ಮಾಡಬಹುದಿತ್ತಲ್ವ?

ದಲಿತರು ಯಾಕೆ ಸಿಎಂ ಆಗಬಾರದು ಎಂಬ ಜ್ಞಾನಪ್ರಕಾಶ್‌ ಸ್ವಾಮೀಜಿ ಅವರ ಮಾತಿಗೆ ಉತ್ತರಿಸಿದ ಹರಿಪ್ರಸಾದ್‌ ಅವರು, ʻʻಅತಿ ಹೆಚ್ಚಿನ ಸಮಯ ಡಾ.ಜಿ ಪರಮೇಶ್ವರ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. ಸಿಎಂ ಮಾಡುವುದಕ್ಕೆ ಎಲ್ಲ ರೀತಿಯ ಅರ್ಹತೆ ಇದ್ದವರು ಅವರು. ಅವರನ್ನು ಸಿಎಂ ಮಾಡುವುದು ಬಿಡಿ, ಹಿಂದೆ ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯಿತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ ಅಂದರೆ ಇನ್ನು ಸಿಎಂ ಮಾಡ್ತಾರಾʼʼ ಎಂದು ಕೇಳಿದರು.

ʻʻಸಿಎಂ ಬಿಡಿ ಈಗಲೂ ಡಿಸಿಎಂ ಮಾಡುವಾಗ ದಲಿತರನ್ನು ಮಾಡಬಹುದಿತ್ತು, ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಮಾಡಬಹುದಿತ್ತುʼʼ ಎಂದು ಹರಿಪ್ರಕಾಶ್‌ ಹೇಳಿದರು.

ʻʻನಾನು ಸರ್ಕಾರ ಮಾಡಿದ್ದೇನೆ. ಹೇಗೆ ಬೇಕಾದರೂ‌ ತೀರ್ಮಾನ ಮಾಡ್ತೀನಿ ಅಂದ್ರೆ ಜನರೂ ಕೂಡ ತೀರ್ಮಾನ ಮಾಡ್ತಾರೆʼʼ ಎಂದು ಸಿದ್ದರಾಮಯ್ಯ ಅವರಿಗೆ ನೇರ ಎಚ್ಚರಿಕೆ ನೀಡಿದ ಹರಿಪ್ರಸಾದ್‌, ಶಿಕ್ಷಣ ಕ್ಷೇತ್ರದಲ್ಲಿ ಮಾಫಿಯಾ ಮಾಡಿಕೊಂಡು ಇರುವವರು ಹೆಂಡ ಸಾರಾಯಿ ಬಗ್ಗೆ ಮಾತಾಡ್ತಾರೆ. ರಾಜ್ಯ ನಡೆಯಬೇಕಾದರೆ ೩೬ ಸಾವಿರ ಕೋಟಿ ತೆರಿಗೆ ಕಟ್ಟುವ ಅಬಕಾರಿ ಇಲಾಖೆ ಮುಖ್ಯ ಅನ್ನೋದು ನೆನಪಿರಲಿ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತಾಡ್ತಾನೆ. ಆದರೂ ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ ನಾನುʼʼ ಎಂದು ಹೇಳಿದರು.

ಅರಸು ಕಾರಿನಲ್ಲಿ ಕುಳಿತರೆ ಆಗಲ್ಲ, ಚಿಂತನೆ ಇರಬೇಕು

ʻʻದೇವರಾಜ ಅರಸು ಕಾರಿನಲ್ಲಿ ಕುಳಿತರೆ ನೀವು ದೇವರಾಜ ಅರಸು ಆಗೋದಿಲ್ಲ. ದೇವರಾಜ ಅರಸು ಚಿಂತನೆ ಇರಬೇಕುʼʼ ಎಂದು ನೇರವಾಗಿ ಅಟ್ಯಾಕ್‌ ಮಾಡಿದ ಹರಿಪ್ರಸಾದ್‌ ಅವರು, ʻʻಸ್ಕ್ರೀನಿಂಗ್ ಕಮಿಟಿ ಮೀಟಿಂಗ್ ನಲ್ಲಿ ನಾನು ಅರಸು ಮೊಮ್ಮಗ ಸೂರಜ್ ಹೆಗ್ಡೆಗೆ ಎಂಎಲ್ಸಿ ಮಾಡಿ ಅಂದೆ ಮಾಡಲಿಲ್ಲʼʼ ಎಂದು ಹೇಳಿದರು.

ಪಂಚೆ, ವಾಜ್‌ ಮತ್ತು ಖಾಕಿ ಚಡ್ಡಿ: ಹರಿಪ್ರಸಾದ್‌ ಆಕ್ರೋಶ

ಸಿದ್ದರಾಮಯ್ಯ ಅವರ ಹೆಸರು ಹೇಳದೆ ಇದ್ದರೂ ಮಾತು ಮಾತಿಗೂ ಸಿಎಂ ಅವರನ್ನು ತನ್ನ ಮೊನಚು ಮಾತುಗಳಿಂದ ಖಂಡಿಸಿದ ಹರಿಪ್ರಸಾದ್‌, ʻʻಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲʼʼ ಎಂದರು.

ʻʻಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲʼʼ ಎಂದು ಸಿದ್ದರಾಮಯ್ಯ ಅವರ ಹ್ಯುಬ್ಲೊಟ್‌ ವಾಚ್‌ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದರು.

ಪ್ರಣವಾನಂದ ಸ್ವಾಮೀಜಿ ಹೇಳಿದ್ದೇನು?

ʻʻಈಡಿಗ, ಬಿಲ್ಲವ, ನಾಮಧಾರಿ ಸಮುದಾಯ ಭಿಕ್ಷೆ ಬೇಡುವ ಸಮುದಾಯ ಅಲ್ಲ. ಈ ರಾಜ್ಯಕ್ಕೆ ಕೊಡುಗೆ ಕೊಟ್ಟ ಸಮುದಾಯ ಅದು. ಆದರೆ ಆ ಸಮುದಾಯದ ನಾಯಕರನ್ನು ಇಂದು ಷಡ್ಯಂತ್ರದಿಂದ ತುಳಿಯಲಾಗಿದೆ. ದೇವರಾಜು ಅರಸು ಸಿಎಂ ಆದಾಗ ಬಂಗಾರಪ್ಪ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬಾರದು ಅಂತ ದೆಹಲಿಯಿಂದ ಪತ್ರ ಬರುತ್ತದೆ. ಆದರೂ ದೇವರಾಜ್ ಅರಸು ಅವರು ಬಂಗಾರಪ್ಪ ಅವರನ್ನು ಸಂಪುಟಕ್ಕೆ ತೆಗೆದುಕೊಂಡರು. ಆದರೆ ಈಗ ಇಲ್ಲಿಂದ ಲೆಟರ್ ಹೋಗುತ್ತದೆ. ಇಂಥವರಿಗೆ ಸಚಿವ ಸ್ಥಾನ ಕೊಡಬಾರದು ಅಂತ ಇಲ್ಲಿಂದ ದೆಹಲಿಗೆ ಪತ್ರ ಹೋಗುತ್ತದೆ. ಪರಿಸ್ಥಿತಿ ಹೇಗೆ ಬದಲಾಗಿದೆ ನೋಡಿʼʼ ಎಂದು ಬಿ.ಕೆ. ಹರಿಪ್ರಸಾದ್‌ ಅವರ ಹೆಸರನ್ನು ಹೇಳದೆಯೇ ಸ್ವಾಮೀಜಿ ನುಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ (Engineering Seats) ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸೀಟುಗಳು ಲಭ್ಯ ಆಗಲಿವೆ. ಆದರೆ ಸಿಇಟಿ ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಖ್ಯೆಯೂ ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿದೆ.

VISTARANEWS.COM


on

By

Engineering Seats
Koo

ಬೆಂಗಳೂರು: ಎಂಜಿನಿಯರ್ (engineering) ಆಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ (students) ಒಂದು ಸಿಹಿ ಸುದ್ದಿ. ಈ ಬಾರಿ ರಾಜ್ಯದಲ್ಲಿ ಹೆಚ್ಚುವರಿಯಾಗಿ ಎಂಟು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸುವರ್ಣ ಅವಕಾಶ ಸಿಗಲಿದೆ.

ಎಂಜಿನಿಯರಿಂಗ್ ಸೀಟುಗಳಿಗೆ (Engineering Seats) ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿ ಕ ಶಿಕ್ಷಣ ಪರಿಷತ್ (AICTE) ಇನ್ ಟೇಕ್ (IN-Take) ಸಡಿಲಗೊಳಿಸಿದ್ದರಿಂದ ಎಂಟು ಸಾವಿರಕ್ಕೂ ಹೆಚ್ಚು ಸೀಟುಗಳು ಈ ವರ್ಷದಲ್ಲಿ ಸಿಗಲಿದೆ.

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಇದರಲ್ಲಿ ಸರ್ಕಾರಿ ಕೋಟಾದಡಿಯಲ್ಲಿ 62,930 ಸೀಟುಗಳು, COMED-K ಕೋಟಾದ ಅಡಿಯಲ್ಲಿ 28,656 ಸೀಟುಗಳು ಮತ್ತು ಸೂಪರ್ ನ್ಯೂಮರರಿ ಕೋಟಾದ ಅಡಿಯಲ್ಲಿ 5,155 ಸೀಟುಗಳು ಸೇರಿವೆ.

ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) 62,930 ಸೀಟುಗಳ ಲಭ್ಯ ವಾಗಿದೆ. 2023ರಲ್ಲಿ 245 ಕಾಲೇಜುಗಳಿಂದ 1,24,551 ಸೀಟುಗಳು ಲಭ್ಯವಾಗಿದ್ದು, ಇದರಲ್ಲಿ ಕೆಇಎಗೆ 58,845 ಸೀಟುಗಳಿದ್ದವು.
ಕಳೆದ ವರ್ಷ ಒಟ್ಟು ಸೀಟುಗಳ ಸಂಖ್ಯೆ 1,24,551 ಮತ್ತು ಸರ್ಕಾರಿ ಕೋಟಾದ ಸೀಟುಗಳು 58,845 ಆಗಿತ್ತು. ಈ ಬಾರಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಎಂಜಿನಿಯರಿಂಗ್ ಪ್ರವೇಶದ ಮೇಲಿನ ಮಿತಿಯನ್ನು ತೆಗೆದುಹಾಕುವುದರೊಂದಿಗೆ, ಈ ಶೈಕ್ಷಣಿಕ ವರ್ಷದಲ್ಲಿ ಸೀಟುಗಳ ಸಂಖ್ಯೆ 7,758 ಹೆಚ್ಚಲಿದೆ. ಇದರಲ್ಲಿ ಸರ್ಕಾರಿ ಕೋಟಾದ ಅಡಿಯಲ್ಲಿ 4,085ರಷ್ಟು ಸೀಟು ಹೆಚ್ಚು ಸಿಗಲಿದೆ.

ಇನ್ನು 13 ಕಾಲೇಜುಗಳ ಸೀಟುಗಳು ಇದಕ್ಕೆ ಸೇರ್ಪಡೆಯಾಗಲಿದ್ದು, ಹೀಗಾಗಿ ಕೆಇಎಗೆ ಇನ್ನೂ ಹೆಚ್ಚಿನ ಸೀಟುಗಳು ಲಭ್ಯವಾಗುವ ನಿರೀಕ್ಷೆ ಇದೆ.

ಎಲ್ಲಿ ಎಷ್ಟು ಸೀಟು ?

ಕೆಇಎಗೆ ಲಭ್ಯವಾಗಿರುವ 62,930 ಸೀಟುಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ 38,024 ಖಾಸಗಿ ವಿವಿಗಳಲ್ಲಿ 9,988 ಸೀಟುಗಳು ಸೇರಿವೆ. ಇದರಲ್ಲಿ 246 ಸೀಟುಗಳು ಆರ್ಕಿಟೆಕ್ಚರ್ ಗೆ ಸಂಬಂಧಿಸಿದೆ.

ಯಾವುದಕ್ಕೆ ಹೆಚ್ಚಿನ ಬೇಡಿಕೆ?

ಹೆಚ್ಚಿನ ಸೀಟುಗಳು ಕಂಪ್ಯೂಟರ್ ವಿಜ್ಞಾನ ಮತ್ತು ಸಂಬಂಧಿತ ವಿಷಯಗಳಲ್ಲಿವೆ. ಈ ಶೈಕ್ಷಣಿಕ ವರ್ಷದಿಂದ, ಎಐಸಿಟಿಇ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಮಿತಿಯನ್ನು ತೆಗೆದುಹಾಕಿದೆ. ಅದರ ಅನಂತರ ಹಲವಾರು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವಿಷಯಗಳಿಗೆ ಸೀಟು ಗಳ ಸಂಖ್ಯೆಯನ್ನು 500ರಿಂದ 1,000ಕ್ಕೆ ಹೆಚ್ಚಿಸಿವೆ.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ಎಂಜಿನಿಯರಿಂಗ್ ಆಕಾಂಕ್ಷಿಗಳು ಹೆಚ್ಚಳ

ಈ ವರ್ಷ ಸಿಇಟಿಗೆ ಹಾಜರಾದ 3.1೦ ಲಕ್ಷ ವಿದ್ಯಾರ್ಥಿಗಳ ಪೈಕಿ 2.74 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರಲು ಅರ್ಹರಾಗಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 2.03 ಲಕ್ಷ ಇತ್ತು. ಈ ವರ್ಷ 30 ಸಾವಿರ ವಿದ್ಯಾರ್ಥಿಗಳು ಹೆಚ್ಚಾಗಿದೆ.

ಈ ಹಿಂದೆ ಸೀಟು ಹೆಚ್ಚಳಕ್ಕೆ ಆಯಾ ವಿವಿಗಳಿಗೆ ಕಾಲೇಜುಗಳು ಪ್ರಸ್ತಾವನೆ ಸಲ್ಲಿಸಬೇಕಿತ್ತು. ಇದನ್ನು ಸ್ಥಳೀಯ ವಿಚಾರಣಾ ಸಮಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುತ್ತಿತ್ತು. ಆದರೆ ಈ ಬಾರಿ ಕಾಲೇಜುಗಳು ಸೀಟು ಹೆಚ್ಚಳಕ್ಕೆ ನೇರವಾಗಿ ಎಐಸಿಟಿಇಯಿಂದ ಅನುಮೋದನೆಯನ್ನು ಪಡೆಯಬೇಕಾಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

Continue Reading

ಕ್ರೈಂ

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

Assault Case : ಮೂರು ವರ್ಷದ ಬಾಲಕಿ ಮೇಲೆ ಎರಗಿದ ಮಲತಂದೆ ಕ್ರೌರ್ಯವನ್ನೇ ಮೆರೆದಿದ್ದಾನೆ. ಬಾಲಕಿಯ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ. ಸದ್ಯ ಮಲತಂದೆ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

By

assault Case
ವಿಕೃತಿ ಮೆರೆದಿದ್ದ ಮಲತಂದೆ
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ದೌರ್ಜನ್ಯ (Assault Case) ನಡೆಸಿದ್ದಾನೆ. ಮಹಿಳೆಯ ಮೂರನೇ ಗಂಡನ ವಿಕೃತಿ ಅದ್ಯಾವ ಪರಿ ಇದೆ ಎಂದರೆ ಮಗುವಿನ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ಮೃಗೀಯ ರೀತಿ ವರ್ತಿಸಿದ್ದಾನೆ.

ಗೌರಿಬಿದನೂರಿನಲ್ಲಿ ಮಲತಂದೆಯೊಬ್ಬ ಅಟ್ಟಹಾಸ ತೋರಿದ್ದಾನೆ. ಜರೀನಾ ತಾಜ್‌ ಎಂಬಾಕೆ ಒಟ್ಟು ಮೂರು ಮದುವೆ ಆಗಿದ್ದು, ಅದರಲ್ಲಿ ಎರಡನೇ ಗಂಡನ ಮಗುವಿಗೆ ಮೂರನೇ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಅಜ್ಮಂತ್‌ ಎಂಬಾತ ಮಗುವಿಗಷ್ಟೇ ಅಲ್ಲದೇ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೂರು ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದು ವಿಕೃತಿ ಮೆರೆದಿದ್ದಾನೆ.

ಜರೀನಾ ತಾಜ್‌ಗೆ ಮೂರು ಮದುವೆಯಾಗಿದ್ದು, ಮೊದಲ ಪತಿಯಿಂದ 2 ಹೆಣ್ಮಕ್ಕಳು ಆಗಿದ್ದವು. 2ನೇ ಪತಿಯಿಂದ ಮತ್ತೊಂದು ಹೆಣ್ಣು ಮಗು ಜನಿಸಿತ್ತು. ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ಅಜ್ಮಂತ್‌ ಜತೆಗೆ ಮೂರನೇ ಮದುವೆಯಾಗಿದ್ದಳು. ಎರಡನೇ ಪತಿಯಿಂದ ಜನಿಸಿದ್ದ ಹೆಣ್ಣು ಮಗುವಿನ ಮೇಲೆ ಅಜ್ಮಂತ್‌ ಕಿರುಕುಳ ನೀಡಿದ್ದಾನೆ.

ತೀವ್ರ ಗಾಯಗೊಂಡಿರುವ ಮೂರು ವರ್ಷದ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತಂದೆಯ ವಿಕೃತಿಯಿಂದ ಪುತ್ರಿ ಶಾಕ್‌ಗೆಗೊಳಗಾಗಿದ್ದಾಳೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading
Advertisement
Engineering Seats
ಶಿಕ್ಷಣ9 mins ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ10 mins ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ24 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ28 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್31 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest47 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest50 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ55 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ2 hours ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌