Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ - Vistara News

ರಾಜಕೀಯ

Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ

Blast in Bengaluru: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Blast in Bengaluru Experimental preparation for serial blasts says CT Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ ಪ್ರಕರಣ (Blast in Bengaluru) ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೆಂಡಕಾರಿದ್ದಾರೆ. ಮತಾಂಧತೆಯ ಅತಿರೇಕದ ಪರಿಣಾಮವಾಗಿ ಪಾಕಿಸ್ತಾನದ ಪ್ರೀತಿಯನ್ನು ಬೆಳಗಾವಿ, ವಿಧಾನಸೌಧದಲ್ಲಿ ವ್ಯಕ್ತಪಡಿಸಲಾಗಿದೆ. ದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿ ಎಂದು ಅನುಮಾನ ಮೂಡುವಂತಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿ.ಟಿ. ರವಿ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಬಾಂಬ್ ಸ್ಫೋಟದ ಕುರಿತ ಸಮಗ್ರ ತನಿಖೆಯನ್ನು ಎನ್.ಐ.ಎ.ಗೆ ಒಪ್ಪಿಸಬೇಕು.‌ ಬ್ರ್ಯಾಂಡ್ ಬೆಂಗಳೂರಿಗೆ ಬಾಂಬ್ ಭೀತಿ ಎದುರಾಗಿದೆ. ಶುಕ್ರವಾರ (ಮಾ. 1) ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು. ಈ ಮೂಲಕ ಮುನ್ಸೂಚನೆ ಕೊಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಭಯೋತ್ಪಾದಕರು ಸ್ಲೀಪರ್ ಸೆಲ್ ಆಗಿ ಮಾಡಿಕೊಂಡದ್ದು ಹೊಸತಲ್ಲ. ತರಬೇತಿ ಕೇಂದ್ರವಾಗಿಯೂ ಕರ್ನಾಟಕವನ್ನು ಬಳಸಿಕೊಂಡಿದ್ದಾರೆ. ಕೊಪ್ಪದಲ್ಲಿ ಹಿಂದೆ ಬಂದೂಕು, ಬಾಂಬ್ ತಯಾರಿಸುವ ತರಬೇತಿಯನ್ನು ಕೊಡಲಾಗುತ್ತಿತ್ತು. ತೀರ್ಥಹಳ್ಳಿಯಲ್ಲಿ ಕುಕ್ಕರ್ ಬಾಂಬ್ ತಯಾರಿಸಲಾಗುತ್ತಿತ್ತು. ಕೊಡಗಿನಲ್ಲೂ ಭಯೋತ್ಪಾದಕರಿಗೆ ತರಬೇತಿ ಕೊಡಲಾಗುತ್ತಿತ್ತು. ಈ ಎಲ್ಲ ಮಾಹಿತಿ ಸರ್ಕಾರದ ಬಳಿ ಇದೆ ಎಂದು ‌ಸಿ.ಟಿ. ರವಿ ವಿವರಿಸಿದರು.

ದೇಶದ ಉತ್ತರ ಭಾಗದಲ್ಲಿ ಬಾಂಬ್ ಸ್ಫೋಟದ ಸದ್ದು ಕ್ಷೀಣವಾಗಿದೆ. ಬಹುತೇಕ ನಿಂತುಹೋಗಿದೆ. ಭಾರತದ ದಕ್ಷಿಣ ಭಾಗದಲ್ಲಿ ಕೇರಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಿ.ಟಿ. ರವಿ ಆಗ್ರಹಿಸಿದರು.

ಮತಾಂಧತೆಯ ಅತಿರೇಕದಿಂದ ಭಯೋತ್ಪಾದನೆ ಆರಂಭ

ಭಯೋತ್ಪಾದನೆ ಆರಂಭವಾಗುವುದೇ ಮತಾಂಧತೆಯ ಅತಿರೇಕದಿಂದ ಎಂದು ಹೇಳಿದ ಸಿ.ಟಿ.ರವಿ, ಮತಾಂಧತೆಯ ಅತಿರೇಕವನ್ನು ಕೋವಿಡ್ ಸಂದರ್ಭದಲ್ಲಿ ಹಲವೆಡೆ ಗಮನಿಸಿದ್ದೇವೆ. ಪಾದರಾಯನಪುರದಲ್ಲಿ ಕೋವಿಡ್ ವಾರಿಯರ್ಸ್‍ಗಳ ಮೇಲೆ ದಾಳಿ ನಡೆದಿತ್ತು. ಡಿ.ಜೆ.ಹಳ್ಳಿ- ಕೆಜೆ.ಹಳ್ಳಿ ಗಲಭೆ ಸಂದರ್ಭದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಸುಟ್ಟಿದ್ದರು. 200ಕ್ಕೂ ಹೆಚ್ಚು ಮನೆಗಳ ವಾಹನಗಳನ್ನು ಸುಟ್ಟದ್ದಲ್ಲದೆ, ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದರು ಎಂದು ಆಕ್ರೋಶವನ್ನು ಹೊರಹಾಕಿದರು.

ಹಿಂದೆ ಕೊಯಮತ್ತೂರಿನಲ್ಲಿ ಸರಣಿ ಸ್ಫೋಟ ನಡೆದಿತ್ತು. ಈಗ ಆ ಥರ ಸರಣಿ ಸ್ಫೋಟದ ತಯಾರಿ ಮಾಡುತ್ತಿದ್ದಾರೆ. ಮತಾಂಧ ಶಕ್ತಿಗಳು ಮತ್ತು ಭಯೋತ್ಪಾದಕರು ಕೈಜೋಡಿಸಿದ್ದಾರೆ ಎಂಬ ಸಂಶಯ ಇದೆ. ಈ ಸರ್ಕಾರ ಬಂದ ಬಳಿಕ ಎನ್‍ಐಎ ಬಂಧಿತ ಶಂಕಿತ ಭಯೋತ್ಪಾದಕರ ಸಂಖ್ಯೆ 21 ಎಂದು ಸಿ.ಟಿ. ರವಿ ತಿಳಿಸಿದರು.‌

ಜುಲೈನಲ್ಲಿ 5 ಜನರು, ಡಿಸೆಂಬರ್‌ನಲ್ಲಿ 8, ಜನವರಿಯಲ್ಲಿ ದಾಳಿ ಸಂಚಿನಲ್ಲಿ 8 ಜನ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಹಿಂದೆ ಭಟ್ಕಳವನ್ನು ಜೈನರ ಕಾಶಿ ಎಂದು ಕರೆಯಲಾಗುತ್ತಿತ್ತು. ಈಗ ಅದು ಭಯೋತ್ಪಾದಕರ ನೆಲೆಯಾಗಿದೆ. ಭಯೋತ್ಪಾದಕರ ಜತೆ ಭಟ್ಕಳದ ಹೆಸರು ತಳಕು ಹಾಕಿಕೊಂಡಿದೆ (ಉದಾ: ಯಾಸೀನ್ ಭಟ್ಕಳ್) ಎಂದು ಸಿ.ಟಿ. ರವಿ ಹೇಳಿದರು.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ – ಮಂಗಳೂರು ಬ್ಲಾಸ್ಟ್‌ಗೆ ಸಾಮ್ಯತೆ; ಇಲ್ಲ ಅಂದ್ರು ಸಿಎಂ, ಇದೆ ಅಂದ್ರು ಡಿಸಿಎಂ!

ಇದೆಲ್ಲವನ್ನೂ ಗಮನಿಸಿದಾಗ ಭಾರತವನ್ನು ಆಕ್ರಮಿಸಿ ಇಸ್ಲಾಮಿ ರಾಷ್ಟ್ರವಾಗಿ ಮಾಡುವ ಅರಬ್ ಯೋಜನೆಯ ಪ್ರಕಾರ ನಡೆಯುವಂತಿದೆ. ಆ ಯೋಜನೆಯಂತೆ ಗಾಂಧಾರ ಕಳಕೊಂಡಿದ್ದು, ಅದು ಅಪಘಾನಿಸ್ತಾನವಾಗಿದೆ. ಸಿಂಧ್ ಕಳಕೊಂಡಿದ್ದು, ಪಾಕಿಸ್ತಾನವಾಗಿದೆ. ಬಂಗಾಲ ತುಂಡರಿಸಿ ಬಾಂಗ್ಲಾದೇಶ ಮಾಡಲಾಗಿದೆ. ಕಾಶ್ಮೀರವನ್ನು ಭಾರತದಿಂದ ತುಂಡರಿಸುವ ಸಂಚು ಕೂಡ ಆ ಯೋಜನೆಯ ಮುಂದುವರಿದ ಭಾಗವಾಗಿತ್ತು. ಸಿಮಿ ಕಚೇರಿ ಮೇಲೆ ದಾಳಿ ನಡೆದಾಗ ನಕ್ಷೆ ಲಭಿಸಿತ್ತು. ಮೊಘಲರ ಆಳ್ವಿಕೆ ಇದ್ದ ಪ್ರದೇಶಗಳನ್ನು ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂದು ಯೋಜನೆ ರೂಪಿಸಿ ಹಲವು ರೀತಿಯ ತಯಾರಿ ಮಾಡುತ್ತಿದ್ದ ಮಾಹಿತಿ ಅದರಲ್ಲಿತ್ತು. ಇದು ಅದರ ಮುಂದುವರಿದ ಭಾಗ ಇರಬಹುದು. ಇದರ ಸಮಗ್ರ ತನಿಖೆ ಮಾಡಲು ಇದನ್ನು ಎನ್‍ಐಎಗೆ ಒಪ್ಪಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

Lok Sabha Election 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಮನೂರು, ನಿಟ್ಟುವಳ್ಳಿಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದರು.ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

VISTARANEWS.COM


on

Davanagere lok sabha constituency bjp candidate gayatri siddeshwar election campaign
Koo

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧೆಡೆ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚನೆ (Lok Sabha Election 2024) ನಡೆಸಿದರು. ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಮನೂರು, ನಿಟ್ಟುವಳ್ಳಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹೆಚ್ಚಿನ ಮತಗಳ ಅಂತರದಿಂದ ತಮ್ಮನ್ನು ಗೆಲ್ಲಿಸುವಂತೆ ಕೋರಿದರು.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

ಈ ವೇಳೆ ಶಾಮನೂರು, ನಿಟ್ಟುವಳ್ಳಿಯಲ್ಲಿ ಸ್ಥಳೀಯರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಲೊಕಿಕೆರೆ ನಾಗರಾಜ್, ಸಂಕೋಳ್, ಚಂದ್ರಶೇಖರ್‌, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್‌, ಗ್ಯಾರಿಳಿ ಶಿವಕುಮಾರ್, ವೀರೇಶ್, ಚಂದ್ರಪ್ಪ, ಗೌಡರು ಚನ್ನಪ್ಪ, ಯುವರಾಜ್, ರಾಜು, ಬುದಳ್ ನಿಂಗರಾಜ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Latest

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Lok Sabha Election: ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election) ಮೈತ್ರಿ ವಿಚಾರದಲ್ಲಿ ಅಸಮಾಧಾನ ಹೊಂದಿದ್ದ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರಿದರು. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಅಮಿತ್ ಮಲಿಕ್ ಸೇರಿದಂತೆ ಇತರ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರು ಲವ್ಲಿ ಅವರೊಂದಿಗೆ ಪಕ್ಷಾಂತರಗೊಂಡರು.

ತಮಗೆ ಮತ್ತು ತಮ್ಮ ಸಹೋದ್ಯೋಗಿಗಳಿಗೆ ಬಿಜಪಿ ಸೇರಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಲವ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಬಿಜೆಪಿಯ ಬ್ರಾಂಡ್​ ಅಡಿಯಲ್ಲಿ ಮತ್ತು ಪ್ರಧಾನಿಯ ನಾಯಕತ್ವದಲ್ಲಿ ದೆಹಲಿಯ ಜನರಿಗಾಗಿ ಹೋರಾಡಲು ನಮಗೆ ಅವಕಾಶ ನೀಡಲಾಗಿದೆ” ಎಂದು ಅವರು ಹೇಳಿಕೊಂಡಿದ್ದಾರೆ. “ನನಗೆ ಸಂಪೂರ್ಣ ಭರವಸೆ ಇದೆ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರವು ಭಾರಿ ಬಹುಮತದೊಂದಿಗೆ ರಚನೆಯಾಗುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಮುಂಬರುವ ದಿನಗಳಲ್ಲಿ ದೆಹಲಿಯಲ್ಲೂ ಬಿಜೆಪಿಯ ಬಾವುಟ ಹಾರಾಡಲಿದೆ” ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

ಕನ್ಹಯ್ಯ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯಿಂದ ಲವ್ಲಿ ಮತ್ತು ಇತರ ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ದೆಹಲಿ ಘಟಕದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಲವ್ಲಿ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೆಹಲಿಯ ಮಾಜಿ ಶಾಸಕರಾದ ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಅವರಂತಹ ನಾಯಕರೂ ಪಕ್ಷ ತೊರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Lok Sabha Election: ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಕಾಂಗ್ರೆಸ್​ಗೆ ದೊಡ್ಡ ಹಿನ್ನಡೆ ಉಂಟಾಗಿದ್ದು, ಪಕ್ಷವು ಚುನಾವಣಾ ಖರ್ಚಿಗೆ ಹಣ ನೀಡಿಲ್ಲವೆಂದು ಅಲ್ಲಿನ ಅಭ್ಯರ್ಥಿ ತನ್ನ ಟಿಕೆಟ್ ಅನ್ನು ಹಿಂದಿರುಗಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದರೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಭ್ಯರ್ಥಿ ಸುಚರಿತಾ ಮೊಹಾಂತಿ ಹೇಳಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ ಮಾಜಿ ನಾಯಕ ಸಂಜಯ್ ನಿರುಪಮ್ ಅವರು ಕೆ.ಸಿ.ವೇಣುಗೋಪಾಲ್ ಅವರನ್ನು ‘ಡೀಲರ್’ ಎಂದು ಕರೆದಿದ್ದಾರೆ. ಇದು ‘ಇಂದಿನ ಬಡ ಕಾಂಗ್ರೆಸ್’ ಎಂದು ಹೇಳಿದ್ದಾರೆ.

ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಸುಚರಿತಾ ಮೊಹಾಂತಿ ಟಿಕೆಟ್ ನಿರಾಕರಿಸಿದ್ದು ಯಾಕೆ?

ಸುಚರಿತಾ ಮೊಹಾಂತಿ 10 ವರ್ಷಗಳ ಹಿಂದೆ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಪತ್ರಕರ್ತೆಯಾಗಿದ್ದರು. ಈ ಚುನಾವಣೆಯಲ್ಲಿ ಅವರು ಕಾಂಗ್ರೆಸ್​ ಟಿಕೆಟ್ ಪಡೆದಿದ್ದರು. ಆದರೆ ಈಗ ಪ್ರಚಾರಕ್ಕಾಗಿ ತನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷವು ನನಗೆ ಹಣ ನೀಡದ ಕಾರಣ ನಾನು ಟಿಕೆಟ್ ಹಿಂದಿರುಗಿಸಿದ್ದೇನೆ. ಮತ್ತೊಂದು ಕಾರಣವೆಂದರೆ, ಏಳು ವಿಧಾನಸಭಾ ಕ್ಷೇತ್ರಗಳ ಕೆಲವು ಸ್ಥಾನಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿಲ್ಲ. ಬದಲಾಗಿ, ಕೆಲವು ದುರ್ಬಲ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದೆ. ನಾನು ಈ ರೀತಿ ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಸುಚರಿತಾ ಹೇಳಿದ್ದಾರೆ.

“ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ತೀವ್ರ ಹೊಡೆತ ಬಿದ್ದಿದೆ ಏಕೆಂದರೆ ಪಕ್ಷವು ನನಗೆ ಹಣವನ್ನು ನಿರಾಕರಿಸಿದೆ. ಎಐಸಿಸಿ ಒಡಿಶಾ ಉಸ್ತುವಾರಿ ಅಜಯ್ ಕುಮಾರ್ ಜಿ ಸಲಹೆ ಕೊಟ್ಟಿದ್ದಾರೆ. ನಾನು ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತಳಾಗಿದ್ದೆ, 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ. ಪುರಿಯಲ್ಲಿನ ನನ್ನ ಪ್ರಚಾರಕ್ಕಾಗಿ ನನ್ನಲ್ಲಿರುವ ಎಲ್ಲವನ್ನೂ ನೀಡಿದ್ದೇನೆ” ಎಂದು ಮೊಹಾಂತಿ ಕೆಸಿ ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ನಾನು ಸಾರ್ವಜನಿಕ ದೇಣಿಗೆ ಅಭಿಯಾನ ಪ್ರಯತ್ನಿಸಿದೆ ಆದರೆ ಇಲ್ಲಿಯವರೆಗೆ ಹೆಚ್ಚಿನ ಯಶಸ್ಸು ಸಿಗಲಿಲ್ಲ. ಪ್ರಚಾರ ವೆಚ್ಚವನ್ನು ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸಲು ನಾನು ಪ್ರಯತ್ನಿಸಿದೆ” ಎಂದು ಅವರು ಹೇಳಿದರು.

“ನಾನು ಸ್ವಂತವಾಗಿ ಹಣವನ್ನು ಸಂಗ್ರಹಿಸಲು ಸಾಧ್ಯವಾಗದ ಕಾರಣ, ಪುರಿ ಸಂಸತ್ ಕ್ಷೇತ್ರದಲ್ಲಿ ಪರಿಣಾಮಕಾರಿ ಪ್ರಚಾರಕ್ಕಾಗಿ ಅಗತ್ಯವಾದ ಪಕ್ಷದ ನಿಧಿಯನ್ನು ನೀಡುವಂತೆ ಒತ್ತಾಯಿಸಿ ನಮ್ಮ ಪಕ್ಷದ ಕೇಂದ್ರ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಈ 2024 ರ ಚುನಾವಣೆಯಲ್ಲಿ, ಜನರು ಎರಡು ಭ್ರಷ್ಟ ಮತ್ತು ಹಗರಣಕೋರ ಆಡಳಿತ ಪಕ್ಷಗಳಾದ ಬಿಜೆಪಿ ಮತ್ತು ಬಿಜೆಡಿ ಹೊರಹಾಕಲು ಸಜ್ಜಾಗಿದ್ದಾರೆ. ಕಾಂಗ್ರೆಸ್​​ನ 5 ನ್ಯಾಯಗಳು ಮತ್ತು 25 ಗ್ಯಾರಂಟಿಗಳಿಗೆ ಮತ ಚಲಾಯಿಸಲಿದ್ದಾರೆ” ಎಂದು ಮೊಹಾಂತಿ ಹೇಳಿದರು.

ಹಣದ ಕೊರತೆ ಪುರಿಯಲ್ಲಿನ ನಮ್ಮ ಗೆಲುವನ್ನು ತಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷದ ಧನಸಹಾಯವಿಲ್ಲದೆ, ಪುರಿಯಲ್ಲಿ ಪ್ರಚಾರವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ನಾನು ವಿಷಾದಿಸುತ್ತೇನೆ. ಆದ್ದರಿಂದ ನಾನು ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಹಿಂದಿರುಗಿಸುತ್ತೇನೆ” ಎಂದಿರುವ ಸುಚರಿತಾ ಪಕ್ಷ ಮತ್ತು ರಾಹುಲ್ ಗಾಂಧಿಗೆ ತಮ್ಮ ಬೆಂಬಲ ಮುಂದುವರಿಸಿದ್ದಾರೆ.

ಪ್ರಸ್ತುತ ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ಅವರ ವಶದಲ್ಲಿರುವ ಪುರಿ ಕ್ಷೇತ್ರದಿಂದ ಬಿಜೆಪಿ ಸಂಬಿತ್ ಪಾತ್ರಾ ಅವರನ್ನು ಕಣಕ್ಕಿಳಿಸಿದೆ. ಪುರಿಯಲ್ಲಿ ಮೇ 25 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Continue Reading

ಕರ್ನಾಟಕ

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Prajwal Revanna Case: ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಸಂತ್ರಸ್ತೆ ಸಮ್ಮುಖದಲ್ಲಿ ಸತತ 3:46 ಗಂಟೆ ಕಾಲ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಹಾಸನ ಪೆನ್‌ ಡ್ರೈವ್‌ ಕೇಸ್‌ (Prajwal Revanna Case) ಸಂಬಂಧಿಸಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ. ರೇವಣ್ಣ ವಿರುದ್ಧ ತಲಾ ಎರಡು ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಸಮ್ಮುಖದಲ್ಲಿ ಶುಕ್ರವಾರ ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮತ್ತು ಎಚ್‌.ಡಿ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ 2 ಕೇಸ್‌ ದಾಖಲಾಗಿವೆ. ಪ್ರಕರಣದಲ್ಲಿ ಈಗಾಗಲೇ ಸಿಆರ್‌ಪಿಸಿ ಸೆಕ್ಷೆನ್ 164 ಅಡಿ ನ್ಯಾಯಾಧೀಶರ ಮುಂದೆ ಸಂತ್ರಸ್ತ ಮಹಿಳೆಯರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಮಹಜರು ನಡೆಸಲಾಗಿದೆ.

ಸಂತ್ರಸ್ತೆಯೊಂದಿಗೆ ಡಿವೈಎಸ್ಪಿ, ಇಬ್ಬರು ಇನ್‌ಸ್ಪೆಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಆಗಮಿಸಿ, ಎಸ್‌ಐಟಿ ತಂಡಕ್ಕೆ ಸಾಥ್ ನೀಡಿದರು. ಸ್ಥಳ ಮಹಜರು ಬಳಿಕ ಸಂತ್ರಸ್ತೆಯ ಹೇಳಿಕೆಯನ್ನು ಎಸ್‌ಐಟಿ ಅಧಿಕಾರಿಗಳು ದಾಖಲಿಸಿಕೊಂಡಿದ್ದು, ಎಲ್ಲವನ್ನೂ ವಿಡಿಯೊ ಮಾಡಿಕೊಂಡಿದ್ದಾರೆ. ಮನೆಯ ಬಾಗಿಲು ಬಳಿಯಿಂದ ಮೂಲೆ‌ ಮೂಲೆಯಲ್ಲೂ ಪರಿಶೀಲನೆ ನಡೆಸಲಾಗಿದ್ದು, ಯಾವ ಸ್ಥಳ ಏನಾಗಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ಮಾಹಿತಿ ಪಡೆಯಲಾಗಿದೆ.

ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದರು ಎಂದು ಸಂತ್ರಸ್ತೆ ಆರೋಪ ಮಾಡಿದ್ದರು. ಸತತ 3:46 ಗಂಟೆ ಕಾಲ ಅಧಿಕಾರಿಗಳು ಮಹಜರು ನಡೆಸಿ, ಅಗತ್ಯ ಮಾಹಿತಿ, ಸಾಕ್ಷ್ಯಗಳನ್ನು ಕಲೆಹಾಕಿದರು.

ಇದನ್ನೂ ಓದಿ | Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

HD Deve gowda prajwal revanna case

ಬೆಂಗಳೂರು: ಮೊಮ್ಮಗ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಪೆನ್ ಡ್ರೈವ್ ಪ್ರಕರಣ (Pen drive Case) ಉಂಟುಮಾಡಿರುವ ಚಿಂತೆ ಹಾಗೂ ಒತ್ತಡದ ದೆಸೆಯಿಂದ ಮಾಜಿ ಪ್ರಧಾನಿ ದೇವೇಗೌಡರ (hd Deve gowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಪ್ರಕರಣದಲ್ಲಿ ಕೈ ತೊಳೆದುಕೊಂಡು ಬೆನ್ನು ಹತ್ತಿರುವುದು ಇನ್ನಷ್ಟು ಚಿಂತೆ ಮೂಡಿಸಿದೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ.

ನಿನ್ನೆ ದೇವೇಗೌಡರ ಅಳಿಯ, ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ. ಪುತ್ರಿಯರು ದೇವೇಗೌಡರ ಮನೆಯಲ್ಲಿಯೇ ಉಳಿದುಕೊಂಡಿದ್ದು, ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ.

ರೇವಣ್ಣ ಕೂಡ ಕಣ್ಮರೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

Continue Reading
Advertisement
HD Revanna
ಕರ್ನಾಟಕ8 mins ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ16 mins ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ18 mins ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Davanagere lok sabha constituency bjp candidate gayatri siddeshwar election campaign
ದಾವಣಗೆರೆ27 mins ago

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

HD Revanna
ಕರ್ನಾಟಕ32 mins ago

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Prajwal Revanna Case
ಕರ್ನಾಟಕ50 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ1 hour ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest1 hour ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಬಂಧಿಸಲು ಸಿದ್ಧವಾದ ಎಸ್‌ಐಟಿ!

Physical abuse
ಮೈಸೂರು2 hours ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌