Don't Worry, ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೀನಿ ಎಂದ BSY - Vistara News

ಪ್ರಮುಖ ಸುದ್ದಿ

Don’t Worry, ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೀನಿ ಎಂದ BSY

ರಾಜಕೀಯದ ರಾಜಾಹುಲಿ BSY ಮತ್ತೆ ಗುಟುರು ಹಾಕಿದೆ. ಇನ್ನೂ ಹತ್ತು ವರ್ಷ ಕ್ರಿಯಾಶೀಲವಾಗಿರುತ್ತೇನೆ ಎನ್ನುವುದು ಪಕ್ಷದಲ್ಲಿ ಕೆಲವರಿಗೆ ಸಂತಸವನ್ನೂ ಕೆಲವರಿಗೆ ಆತಂಕವನ್ನೂ ಉಂಟುಮಾಡಿರಲಿಕ್ಕೆ ಸಾಕು.

VISTARANEWS.COM


on

BS Yeddyurappa sayas he will remain in politics for another ten years
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದೇ ಫೆಬ್ರವರಿ 27ಕ್ಕೆ 79 ತುಂಬಿ 80ನೇ ವರ್ಷ ರನ್ನಿಂಗ್‌ನಲ್ಲಿರೋ ಯಡಿಯೂರಪ್ಪ ಅವರ ಹುಮ್ಮಸ್ಸು, ಮಾತಿನ ಧೃಡತೆ ಇನ್ನೂ ಕುಂದಿಲ್ಲ. ʼನಾನು ಇನ್ನೂ ಹತ್ತು ವರ್ಷ ಇದೇ ರೀತಿ ರಾಜಕೀಯದಲ್ಲಿ ಸಕ್ರಿಯನಾಗಿರುತ್ತೀನಿʼ ಎಂದು ವಿಜಯಪುರದಲ್ಲಿ ಸ್ವತಃ ಬಿ.ಎಸ್‌. ಯಡಿಯೂರಪ್ಪ (BSY) ಮಂಗಳವಾರ ಘೋಷಿಸಿದ್ದಾರೆ. ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆ ಸಲುವಾಗಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ BSY ಮಾತನಾಡಿದ್ದಾರೆ.

75ವರ್ಷ ತುಂಬಿದವರಿಗೆ ಅಧಿಕಾರವಿಲ್ಲ ಎಂಬ ಅಲಿಖಿತ ಹಾಗೂ ಕಾಲಕ್ಕೆ ತಕ್ಕಂತೆ ಅದನ್ನು ಹೊಂದಿಸಿಕೊಳ್ಳಬಹುದಾದ ನಿಯಮ ಬಿಜೆಪಿಯಲ್ಲಿದೆ. ತಮಗೆ ಇಷ್ಟವಾದವರನ್ನು ಮುಂದುವರಿಸಲು ಇದೇ ನಿಯಮದಲ್ಲಿ ಕಾರಣ ಸಿಗುತ್ತದೆ, ಅದೇ ರೀತಿ ತಮಗೆ ಬೇಡವಾದವರಿಗೆ ಗೇಟ್‌ ಪಾಸ್‌ ಅಥವಾ ಗವರ್ನರ್‌ ಹುದ್ದೆಗೆ ಕಳಿಸಲೂ ಈ ನಿಯಮ ಉಪಯೋಗಕ್ಕೆ ಬರುತ್ತದೆ ಎನ್ನುವುದು ಸಾರ್ವಜನಿಕವಾಗಿ ಕೇಳಿಬರುವ ಮಾತು.

ಇದನ್ನೂ ಓದಿ | ಬಿಎಸ್‌ವೈ- ಸಿದ್ದು Photo: ರಾಜ್ಯಸಭೆ ಚುನಾವಣೆ ಫಿಕ್ಸಿಂಗ್‌ ಊಹಾಪೋಹಕ್ಕೆ ರೆಕ್ಕೆ

75 ತುಂಬಿದ ನಂತರವೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗುವ ಅವಕಾಶವನ್ನು ಬಿಜೆಪಿ ನೀಡಿತು. ಇದಕ್ಕೆ ಯಡಿಯೂರಪ್ಪ ಅವರು ಯಾರಿಗೋ ಆಪ್ತರಾಗಿದ್ದರು ಎನ್ನುವುದಕ್ಕಿಂತಲೂ ಅವರ ಶಕ್ತಿಯೇ ಪ್ರಮುಖ ಕಾರಣ ಎನ್ನಬಹುದು. ಶಕ್ತಿ ಎಂದರೆ ಕೇವಲ ಜನಬಲ ಮಾತ್ರವಲ್ಲ. ಜನಬಲ ಅವರಿಗೆ ಇದ್ದೇ ಇದೆ. ಅದರಲ್ಲೂ ವೀರಶೈವ ಲಿಂಗಾಯತ ಸಮುದಾಯದ ಸಾಲಿಡ್‌ ವೋಟ್‌ಬ್ಯಾಂಕ್‌ ಈಗಲೂ ಯಡಿಯೂರಪ್ಪ ಬೆನ್ನಿಗಿದೆ. ಆದರೆ ಈ ವೋಟ್‌ಬ್ಯಾಂಕ್‌ ಎನ್ನುವುದು ಅವರು ಬಿಜೆಪಿಯಲ್ಲಿರುವವರೆಗೂ ಇದ್ದೇ ಇರುತ್ತದೆ ಎನ್ನುವುದು ಈ ಹಿಂದೆ ಕೆಜೆಪಿ ಮಾಡಿದ ಸಂದರ್ಭದಲ್ಲಿ ಸಾಬೀತಾಗಿದೆ. ಸದ್ಯದ ಮಟ್ಟಿಗೆ ಲಿಂಗಾಯತ ಸಮುದಾಯ ಯಡಿಯೂರಪ್ಪ ಅವರನ್ನೇ ಮೊದಲ ನಾಯಕ ಎಂದು ಒಪ್ಪಿಕೊಂಡಿದೆ ಎನ್ನಬಹುದು.

ಯಡಿಯೂರಪ್ಪ ಅವರು 75 ದಾಟಿದ ನಂತರವೂ ಅಧಿಕಾರದಲ್ಲಿ ಮುಂದುವರಿಯುವಂತೆ ಮಾಡಿದ ಇನ್ನೊಂದು ಶಕ್ತಿ ಎಂದರೆ ಬೇರೆ ಬೇರೆ ಪಕ್ಷದಲ್ಲಿನ ಫ್ರೆಂಡ್ಸ್‌ ಸರ್ಕಲ್‌. ಹಾಗೆ ನೋಡಿದರೆ ಯಡಿಯೂರಪ್ಪ, ದೇವೇಗೌಡರಿಂದ ಸಿದ್ದರಾಮಯ್ಯ ಆದಿಯಾಗಿ ಎಲ್ಲರ ಜತೆಗೂ ಜಗಳ ಆಡಿದವರು. ಆದರೆ ಎಲ್ಲರ ಜತೆಗೂ ಫ್ರೆಂಡ್‌ಷಿಪ್‌ ಹೊಂದಿರುವವರು. ಯಡಿಯೂರಪ್ಪ ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿದ್ದಾರೆ. ಅವರೇ ಹೇಳುವಂತೆ ʼಅಟಲ್‌ಜಿ, ಆಡ್ವಾಣಿ ಜಿ ಗರಡಿಯಲ್ಲಿ ಬೆಳೆದವರುʼ. ಆದರೂ ಸಾಮಾಜಿಕವಾಗಿ ಯಡಿಯೂರಪ್ಪ ಬೆನ್ನ ಹಿಂದೆ ಹಿಂದುತ್ವವಾದಿ, ರಾಷ್ಟ್ರೀಯವಾದಿ, ಕೋಮುವಾದಿ ಎಂಬ ಹಣೆಪಟ್ಟಿ ಅಂಟಿಕೊಳ್ಳಲೇ ಇಲ್ಲ.

ಅಧಿಕಾರಕ್ಕೆ ಬಂದಾಗಲೂ BSY ಒಂಥರ ಜಾತ್ಯಾತೀತ ವ್ಯಕ್ತಿಯೇ. ಬಿಜೆಪಿಯ ಹಾರ್ಡ್‌ಕೋರ್‌ ವಿಚಾರಗಳಾದ ಗೋಹತ್ಯೆ, ಮತಾಂತರ ನಿಷೇಧ, ಹಿಂದು ಕಾರ್ಯಕರ್ತರ ಹತ್ಯೆ, ಜಮ್ಮು ಕಾಶ್ಮೀರ ಸೇರಿ ಎಲ್ಲದರ ಕುರಿತೂ ಯಡಿಯೂರಪ್ಪ ಅವರಿಗೆ ಒಲವಿದೆ. ಆದರೆ ತೀರಾ ಅದಕ್ಕೇ ಅಂಟಿಕೊಂಡಿಲ್ಲ. ಪಕ್ಷ ಸೂಚನೆ ನೀಡಿದಾಗ ಈ ವಿಚಾರಗಳಲ್ಲಿ ಒಂದು ಲಿಖಿತ ಹೇಳಿಕೆ ನೀಡಿ ಹೋಗುವುದು ಅಷ್ಟೆ. ಅವರ ಆದ್ಯತೆಗಳು ಬೇರೆ.

ಅಲ್ಪಸಂಖ್ಯಾತರು ಬಹುಸಂಖ್ಯಾತರೆನ್ನದೆ ಯೋಜನೆಗಳನ್ನು ಘೋಷಿಸುವುದು, ಮಠ ಮಾನ್ಯಗಳನ್ನು ಹತ್ತಿರ ಮಾಡಿಕೊಳ್ಳುವುದು. ವೀರಶೈವ ಲಿಂಗಾಯತ ಸಮುದಾಯದವರು ತಮಗಿಂತ ಮೇಲೆ ಏರಬಾರದು ಎನ್ನುವ ಒಂದು ವಿಚಾರ ಹೊರತುಪಡಿಸಿ ಪ್ರಪಂಚದ ಎಲ್ಲ ಜಾತಿಯ ಕಾರ್ಯಕರ್ತ, ನಾಯಕನನ್ನೂ ಅವರು ಬೆಳೆಸಿದರು ಎಂಬ ಮಾತು ಬಿಜೆಪಿ ವಲಯದಲ್ಲೇ ಇದೆ. ಅಷ್ಟರ ಮಟ್ಟಿಗೆ ಅವರು ಜಾತ್ಯಾತೀತರು. ಈ ಕಾರಣಕ್ಕಾಗಿಯೇ, ಬಿಜೆಪಿಯನ್ನು ಬದ್ಧ ಧ್ವೇಷಿಸುವವರೂ ಯಡಿಯೂರಪ್ಪ ಅವರನ್ನು ಇಷ್ಟಪಡುತ್ತಾರೆ. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಲ್ಲೂ ಅವರ ವಿಶೇಷ ಫ್ಯಾನ್ಸ್‌ ಇದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನೊಂದಿಗೂ ಇರುವ ಸಖ್ಯದ ಮೂಲಕ ಬಿಜೆಪಿ ಹೈಕಮಾಂಡ್‌ಗೆ ಆಗಿಂದಾಗ್ಗೆ ಟಾಸ್ಕ್‌ ಕೊಟ್ಟವರು ಯಡಿಯೂರಪ್ಪ.

ಇದನ್ನೂ ಓದಿ | ಯಡಿಯೂರಪ್ಪ ಸರ್ಜಿಕಲ್‌ ಸ್ಟ್ರೈಕ್‌ ಫೇಲ್‌: ಬಿಜೆಪಿಯಲ್ಲಿ ಸಂತೋಷ್‌ ಮೇಲುಗೈ

ತಾವು ಹೇಳಿದ ಅಭ್ಯರ್ಥಿಗೆ ಟಿಕೆಟ್‌ ಕೊಡದಿದ್ದರೆ ಏನು ಮಾಡಬೇಕು ಗೊತ್ತಿದೆ ಎನ್ನುವ ಧೋರಣೆ. ಈದೀಗ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗೊಂದು ಏರ್‌ಪೋರ್ಟ್‌ ಸೆಲ್ಫಿಗೆ ಪೋಸ್‌ ಕೊಟ್ಟಿದ್ದಾರಲ್ಲ ಹಾಗೆ. ನನಗೆ ಪಾರ್ಟಿ ಸರ್ಕಲ್‌ ಮೀರಿ ಫ್ರೆಂಡ್‌ಷಿಪ್‌ ಇದೆ ಎನ್ನುವುದನ್ನು ಒಮ್ಮೊಮ್ಮೆ ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಮೂಲಕ, ಕೆಲವೊಮ್ಮೆ ಕಾಂಗ್ರೆಸ್‌ ನಾಯಕರ ಮೂಲಕ ತೋರಿಸಿಕೊಟ್ಟಿದ್ದಾರೆ.

ಇಷ್ಟೆಲ್ಲ ಪವರ್‌ಫುಲ್‌ ಯಡಿಯೂರಪ್ಪ ಅವರು 78 ವರ್ಷ 6 ತಿಂಗಳು ಮುಗಿಸಿದ್ದಾಗ ಬಿಜೆಪಿ ವರಿಷ್ಠರು ರಾಜೀನಾಮೆ ಪಡೆದರು. ತಾನು ಸ್ವಯಿಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದರೂ ಅವರ ಧ್ವನಿ ನಡುಗುತ್ತಿತ್ತು. ʼಮುಖ್ಯಮಂತ್ರಿಯಾದರೂ ಮಂತ್ರಿಮಂಡಲ ರಚಿಸಲು ಅವಕಾಶ ನೀಡಲಿಲ್ಲ, ಪ್ರವಾಹ ಬರಗಾಲದ ಸಮಯದಲ್ಲಿ ನಾನೇ ಎಲ್ಲ ಕಡೆ ಓಡಾಡಬೇಕಾಯಿತುʼ ಎಂದು ತಮಗಾದ ನೋವನ್ನೂ ಹಂಚಿಕೊಂಡು 2021ರ ಜುಲೈ 26ರಂದು ರಾಜೀನಾಮೆ ನೀಡಿದರು.

ಯಡಿಯೂರಪ್ಪ ಅವರ ರಾಜಕೀಯ ಇಲ್ಲಿಗೆ ಮುಗಿಯಿತು ಎಂದೇ ಎಲ್ಲರೂ ಭಾವಿಸಿದ್ದರು. ಅವರ ಸ್ಥಾನಕ್ಕೆ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಪ್ರತಿಷ್ಠಾಪನೆ ಮಾಡುವ ಕಾರ್ಯ ಆರಂಭವಾಗುತ್ತದೆ ಎನ್ನಲಾಗಿತ್ತು. ಈ ಕುರಿತು ಒಂದೆರಡು ಪ್ರಯತ್ನಗಳು ನಡೆದವಾದರೂ ಪೂರ್ಣ ಪ್ರಮಾಣದಲ್ಲಿ ಇನ್ನೂ ಫಲ ನೀಡಿಲ್ಲ. ಈ ನಡುವೆ ಕಳೆದೊಂದು ವಾರದಿಂದ ಯಡಿಯೂರಪ್ಪ ಫುಲ್‌ ಆಕ್ಟಿವ್‌ ಆಗಿದ್ದಾರೆ.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತ್ತದೆ ಹಳೇ ಖದರ್‌ನಲ್ಲಿ ಓಡಾಡುತ್ತಿದ್ದಾರೆ. ಮಂಗಳವಾರ ವಿಜಯಪುರದಲ್ಲಿ ಮಾತನಾಡುತ್ತ ತಮ್ಮ ಮೇಲಿನ ಅನುಮಾನಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ. ” ಇನ್ನು ಹತ್ತು ವರ್ಷ ಪ್ರವಾಸ ಮಾಡುತ್ತೇನೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಕೆಲಸ ಆರಂಭಿಸಿದ್ದೇನೆ. ಯಡಿಯೂರಪ್ಪನಿಗೆ ಎಪ್ಪತ್ತೊಂಭತ್ತು, ಎಂಭತ್ತು ವರ್ಷ ಆಗಿದೆ ಎಂದು ಯಾರೂ ಚಿಂತಿಸಬೇಕಿಲ್ಲ. ಇನ್ನೂ ಹತ್ತು ವರ್ಷ ಅಂದರೆ ತೊಂಭತ್ತು ವರ್ಷವಾಗುವವರೆಗೂ ಇದೇ ರೀತಿ ಕೆಲಸ ಮಾಡುತ್ತೇನೆ. ಅದಕ್ಕೆ ನಿಮ್ಮೆಲ್ಲರ ಬೆಂಬಲ, ಆಶೀರ್ವಾದ ಹೀಗೇ ಇರಲಿʼ ಎಂದಿದ್ದಾರೆ.

ರಾಜಕೀಯದ ರಾಜಾಹುಲಿ ಮತ್ತೆ ಗುಟುರು ಹಾಕಿದೆ. ಇನ್ನೂ ಹತ್ತು ವರ್ಷ ಕ್ರಿಯಾಶೀಲವಾಗಿರುತ್ತೇನೆ ಎನ್ನುವುದು ಪಕ್ಷದಲ್ಲಿ ಕೆಲವರಿಗೆ ಸಂತಸವನ್ನೂ ಕೆಲವರಿಗೆ ಆತಂಕವನ್ನೂ ಉಂಟುಮಾಡಿರಲಿಕ್ಕೆ ಸಾಕು.

ಇದನ್ನೂ ಓದಿ | ನನಗೆ ಸಾಮರ್ಥ್ಯ ಇದೆ: BJP ಹೈಕಮಾಂಡ್‌ಗೆ ಪರೋಕ್ಷ ಸಂದೇಶ ನೀಡಿದ ವಿಜಯೇಂದ್ರ ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಅಲ್ಲಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮೋದಿ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಬಿಟ್ಟಿದ್ದಾರೆ. ಇದಕ್ಕೂ ಮುಂಚೆ ಮೋದಿ ಪ್ರವಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಮೋದಿ ಸಮಾವೇಶ ಇತ್ತು ಎನ್ನಲಾಗಿತ್ತು. ಆದರೆ, ಅದರಲ್ಲೀಗ ಬದಲಾವಣೆಯಾಗಿದೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ. ಈ ಸಂಬಂಧ ಶನಿವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಲಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಅಲ್ಲಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮೋದಿ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಬಿಟ್ಟಿದ್ದಾರೆ.

ಶನಿವಾರ (ಏಪ್ರಿಲ್‌ 27) ರಾತ್ರಿ 8:45ಕ್ಕೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಹೀಗಾಗಿ ಬೆಳಗಾವಿಯಲ್ಲೇ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್‌ 28ರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. 11:40ರ ವರೆಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದ್ದು, ಬಳಿಕ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಶಿರಸಿಯಲ್ಲಿ ಬೃಹತ್‌ ಸಮಾವೇಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ರಿಂದ 1.50ರ ವರೆಗೂ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಲ್ಲಿಂದ ದಾವಣಗೆರೆ ಜಿಲ್ಲೆಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 3 ರಿಂದ 3.50 ವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಳ್ಳಾರಿ ಜಿಲ್ಲೆಗೆ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ಅಲ್ಲಿನ ಪುನೀತ್ ರಾಜ್‍ಕುಮಾರ್ ಆಟದ ಮೈದಾನದಲ್ಲಿ ಸಂಜೆ 5ರಿಂದ 5.50ರ ವರೆಗೂ ಮೋದಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.

ಏಪ್ರಿಲ್ 28ರಂದು ರಾತ್ರಿ ಬಳ್ಳಾರಿಯ ಹೊಸಪೇಟೆಯಲ್ಲೇ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏಪ್ರಿಲ್‌ 29ರಂದು ಬಳ್ಳಾರಿಯಿಂದ ಬಾಗಲಕೋಟೆಗೆ ಪ್ರವಾಸ ಮಾಡಲಿರುವ ಮೋದಿ, ಬಾಗಲಕೋಟೆಯಲ್ಲಿ ಮಧ್ಯಾಹ್ನ 12 ರಿಂದ, 12.55 ರವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ‌ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

2ನೇ ಹಂತದ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ರೆಡಿ

ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

Lok Sabha Election 2024

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

Lok Sabha Election 2024: ಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ. ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Lok Sabha Election 2024 Bjp workers clash in Chikmagalur
Koo

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಹೃದಯಾಘಾತಕ್ಕೆ ಮೂವರು ಸಾವು

ತುಮಕೂರು/ ಕೊಡಗು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನಕ್ಕೆ (First phase of polling) ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ.

ತುಮಕೂರಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ

ತುಮಕೂರು ನಗರದ ಎಸ್.ಎಸ್.ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಿದ್ದ ರಮೇಶ್ (54) ಎಂಬುವವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Lok Sabha Election 2024 Two die of heart attack in Tumakuru and Kodagu

ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದ ರಮೇಶ್ ಅವರು ಶುಕ್ರವಾರ ಬೆಳಗ್ಗೆ ನಗರದ ಎಸ್.ಎಸ್. ಪುರಂನಲ್ಲಿರುವ ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜತೆ ಹೋಗಿ ಮತ ಚಲಾಯಿಸಿ ಬಂದಿದ್ದರು. ಮನೆಗೆ ಬಂದವರಿಗೆ ತೀವ್ರ ಎದೆ ನೋವು ಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೊಡಗಿನಲ್ಲಿ ಮತದಾನಕ್ಕೆ ನಿಂತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ವೀರಾಜಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಮೀಪ ಮತ ಹಾಕಲು ಸರತಿ ಸಾಲಿನಲ್ಲಿ ನಿಂತಿದ್ದ ಪದಾರ್ಥಿ ಮನೋಹರ (58) ಎಂಬುವವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

Lok Sabha Election 2024 Two die of heart attack in Tumakuru and Kodagu
ಪದಾರ್ಥಿ ಮನೋಹರ

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿದ್ದು, ಗರಿಷ್ಠ ಪ್ರಮಾಣದಲ್ಲಿ ಮತ ಚಲಾವಣೆಗೊಂಡಿದೆ. ಆದರೆ ಮತದಾನ ಮುಕ್ತಾಯಗೊಂಡ ಬಳಿಕ ಒಟ್ಟು ಎಷ್ಟು ಪ್ರಮಾಣದಲ್ಲಿ ಮತ ಚಲಾವಣೆಗೊಂಡಿತು ಎಂಬುದರ ಅಂಕಿ ಅಂಶಗಳನ್ನು ಚುನಾವಣಾ ಅಧಿಕಾರಿಗಳು ಇನ್ನೊಂದಿಷ್ಟು ಹೊತ್ತಿನ ಬಳಿಕ ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

lok sabha election
Koo

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿದ್ದು, ಗರಿಷ್ಠ ಪ್ರಮಾಣದಲ್ಲಿ ಮತ ಚಲಾವಣೆಗೊಂಡಿದೆ. ಹೀಗಾಗಿ 6 ಗಂಟೆಗೆ ಇನ್ನಷ್ಟು ಮತದಾನವಾಗಿದ್ದು ಪ್ರಮಾಣ ಹೆಚ್ಚಾಗಲಿದೆ. ಮತದಾನ ಮುಕ್ತಾಯಗೊಂಡ ಬಳಿಕ ಒಟ್ಟು ಎಷ್ಟು ಪ್ರಮಾಣದಲ್ಲಿ ಮತ ಚಲಾವಣೆಗೊಂಡಿತು ಎಂಬುದರ ಅಂಕಿ ಅಂಶಗಳನ್ನು ಚುನಾವಣಾ ಅಧಿಕಾರಿಗಳು ಇನ್ನೊಂದಿಷ್ಟು ಹೊತ್ತಿನ ಬಳಿಕ ಬಿಡುಗಡೆ ಮಾಡಲಿದ್ದಾರೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದ್ದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿದೆ.

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

ಇದನ್ನೂ ಓದಿ: Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶುಕ್ರವಾರ ಸಂಜೆ 5 ಗಂಟೆವರೆಗೆ ಶೇ 63.90 ಮತದಾನ ದಾಖಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ವೋಟಿಂಗ್ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಶೇ. 74.87, ಉಡುಪಿ-ಚಿಕ್ಕಮಗಳೂರು 72.13, ಹಾಸನ 72.13, ದಕ್ಷಿಣ ಕನ್ನಡ 71.83 ಬೆಂಗಳೂರು ಸೆಂಟ್ರಲ್‌ 48.61 ಮತದಾನವಾಗಿದೆ. ಇನ್ನು ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದ್ದು, ಕೊನೆಯ ಕ್ಷಣದಲ್ಲಿ ಹಲವು ಕಡೆ ಮತದಾರರು ಓಡೋಡಿ ಬಂದಿದ್ದು ಕಡುಬಂದಿದೆ. ಆದರೆ, ಸಮಯ ಮುಗಿದ ಹಿನ್ನೆಲೆ ಮತದಾನಕ್ಕೆ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿಲ್ಲ. ಕೆಲವರು ಇನ್ನೂ ಸಮಯವಿತ್ತು ಆದರೂ ತಮ್ಮನ್ನು ಬಿಟ್ಟಿಲ್ಲ ಎಂದು ಆರೋಪಿಸಿರುವುದು ಕಂಡುಬಂದಿದೆ.

ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿತ್ತು. ದಕ್ಷಿಣ ಕನ್ನಡ – 58.76, ಉಡುಪಿ – 57.49, ಮಂಡ್ಯ – 57.44, ತುಮಕೂರು -56.62, ಹಾಸನ – 55.90 ಮತದಾನ ಆಗಿದ್ದು, ಈ ಕ್ಷೇತ್ರದಲ್ಲಿ ಶರವೇಗದಲ್ಲಿ ಮತದಾನ ಮಾಡಿದ್ದರು.

ಕೆಲವೆಡೆ ಬಹಿಷ್ಕಾರ

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆಯಿತು.ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದ ಕಾರಣ ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಅವರಿಗೆ ಎದುರಾಯಿತು.

ಸೆಲೆಬ್ರಿಟಿಗಳಿಂದ ಮತದಾನ

ಸಿನಿಮಾ, ಉದ್ಯಮ, ಐಟಿ ಸೇರಿದಂತೆ ನಾನಾ ಕ್ಷೇತ್ರಗಳ ಸೆಲೆಬ್ರಿಟಿಗಳು ಕರ್ನಾಟಕದ ನಾನಾ ಮತ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ. ಬಹುತೇಕ ಮಂದಿ ಬೆಂಗಳೂರಿನಲ್ಲಿಯೇ ನೆಲೆಸಿರುವ ಕಾರಣ ಹೆಚ್ಚಿನವರು ನಗರದ ಸುತ್ತಲಿನ ಮತಗಟ್ಟೆಗಳಲ್ಲಿ ಕಾಣಿಸಿಕೊಂಡರು. ಅವರೆಲ್ಲರೂ ಮತದಾನ ಮಾಡುವಂತೆ ಕೋರಿಕೊಂಡರು. ತಮ್ಮ ಹಕ್ಕನ್ನು ಚಲಾಯಿಸಲು ಇರುವ ಅದ್ಬುತ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ ಎಂದು ಹೇಳಿದರು.

Continue Reading

ಕರ್ನಾಟಕ

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Lok Sabha Election 2024: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದ ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ವೋಟಿಂಗ್ ದಾಖಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶುಕ್ರವಾರ ಸಂಜೆ 5 ಗಂಟೆವರೆಗೆ ಶೇ 63.90 ಮತದಾನ ದಾಖಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ವೋಟಿಂಗ್ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಶೇ. 74.87, ಉಡುಪಿ-ಚಿಕ್ಕಮಗಳೂರು 72.13, ಹಾಸನ 72.13, ದಕ್ಷಿಣ ಕನ್ನಡ 71.83 ಬೆಂಗಳೂರು ಸೆಂಟ್ರಲ್‌ 48.61 ಮತದಾನವಾಗಿದೆ. ಇನ್ನು ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದ್ದು, ಕೊನೆಯ ಕ್ಷಣದಲ್ಲಿ ಹಲವು ಕಡೆ ಮತದಾರರು ಓಡೋಡಿ ಬಂದಿದ್ದು ಕಡುಬಂದಿದೆ. ಆದರೆ, 6 ಗಂಟೆ ವೇಳೆಗೆ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಿದ್ದು, ನಂತರ ಬಂದವರಿಗೆ ಮತದಾನ ಮಾಡಲು ಬಿಟ್ಟಿಲ್ಲ. ಸಮಯ ಮುಗಿದ ಹಿನ್ನೆಲೆ ಮತದಾನಕ್ಕೆ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿಲ್ಲ. ಕೆಲವರು ಇನ್ನೂ ಸಮಯವಿತ್ತು ಆದರೂ ತಮ್ಮನ್ನು ಬಿಟ್ಟಿಲ್ಲ ಎಂದು ಆರೋಪಿಸಿರುವುದು ಕಂಡುಬಂದಿದೆ.

ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ

ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿತ್ತು. ದಕ್ಷಿಣ ಕನ್ನಡ – 58.76, ಉಡುಪಿ – 57.49, ಮಂಡ್ಯ – 57.44, ತುಮಕೂರು -56.62, ಹಾಸನ – 55.90 ಮತದಾನ ಆಗಿದ್ದು, ಈ ಕ್ಷೇತ್ರದಲ್ಲಿ ಶರವೇಗದಲ್ಲಿ ಮತದಾನ ಮಾಡಿದ್ದರು.

Continue Reading
Advertisement
Modi in Karnataka stay in Belagavi tomorrow and Huge gatherings at five places
Lok Sabha Election 202416 mins ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ24 mins ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ32 mins ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 202441 mins ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

lok sabha election
ಪ್ರಮುಖ ಸುದ್ದಿ1 hour ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Karnataka weather Forecast
ಮಳೆ1 hour ago

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Lok Sabha Election 2024
ಕರ್ನಾಟಕ1 hour ago

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Flower Crown Trend
ಫ್ಯಾಷನ್2 hours ago

Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

Rinku Singh
ಕ್ರೀಡೆ2 hours ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Tejasvi Surya
ಕರ್ನಾಟಕ2 hours ago

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ8 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20248 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20249 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ15 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌