BY Vijayendra: 100 ಮತವನ್ನು 200 ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ಟಾಸ್ಕ್‌; ಸಿಎಂ ವಿರುದ್ಧ ವಾಗ್ದಾಳಿ - Vistara News

ರಾಜಕೀಯ

BY Vijayendra: 100 ಮತವನ್ನು 200 ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ಟಾಸ್ಕ್‌; ಸಿಎಂ ವಿರುದ್ಧ ವಾಗ್ದಾಳಿ

BY Vijayendra: ವಿದ್ಯುತ್ ನಿಯಂತ್ರಣ ಪ್ರಾಧಿಕಾರವು ವಿದ್ಯುತ್ ದರ ಏರಿಸಿದೆ ಎನ್ನುವ ಮುಖ್ಯಮಂತ್ರಿಗಳು ಹಣಕಾಸು ಆಯೋಗವು ತೆರಿಗೆ ಹಂಚಿಕೆಯನ್ನು ನಿರ್ಧರಿಸಿದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ದೇಶ ಮಾತ್ರವಲ್ಲದೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

VISTARANEWS.COM


on

Veer Savarkar flyover
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರವನ್ನು ಮತ್ತು‌ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ನಿರಂತರವಾಗಿ ಟೀಕಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ದ್ವಿಮುಖ ನೀತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಟೀಕಿಸಿದ್ದಾರೆ. ಅಲ್ಲದೆ, ಈ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡಬೇಕು ಎಂಬ ನಿಟ್ಟಿನಲ್ಲಿ ಸಲಹೆ ನೀಡಿದ್ದಾರೆ. ಅಲ್ಲದೆ, 100 ಮತವನ್ನು 200 ಮಾಡಬೇಕು, 500 ಮತವನ್ನು ಮತ್ತಷ್ಟು ಹೆಚ್ಚು ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮ ಹಾಕಬೇಕು ಎಂದು ಟಾಸ್ಕ್‌ ನೀಡಿದ್ದಾರೆ.

ಮಲ್ಲೇಶ್ವರದ ಹವ್ಯಕ ಭವನದಲ್ಲಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ವಿದ್ಯುತ್ ನಿಯಂತ್ರಣ ಪ್ರಾಧಿಕಾರವು ವಿದ್ಯುತ್ ದರ ಏರಿಸಿದೆ ಎನ್ನುವ ಮುಖ್ಯಮಂತ್ರಿಗಳು ಹಣಕಾಸು ಆಯೋಗವು ತೆರಿಗೆ ಹಂಚಿಕೆಯನ್ನು ನಿರ್ಧರಿಸಿದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ದೇಶ ಮಾತ್ರವಲ್ಲದೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಹಿತದೃಷ್ಟಿ, ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸಿದ್ದಾರೆ. ರಾಜ್ಯದಲ್ಲೂ 28ಕ್ಕೆ 28 ಸೀಟುಗಳನ್ನು ಬಿಜೆಪಿ- ಜೆಡಿಎಸ್ ಪಕ್ಷಗಳು ಗೆಲ್ಲಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ. ವಿಜಯೇಂದ್ರ, ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮೋದಿಯವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ. ಈ ದುಷ್ಟ, ಭ್ರಷ್ಟ, ದುರಹಂಕಾರಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಮುಂದಾಗಬೇಕು ಎಂದ ಅವರು, ಗೆಲುವಿನ ಸವಾಲನ್ನು ಸವಾಲಾಗಿ ಸ್ವೀಕಾರ ಮಾಡೋಣ ಎಂದು‌ ಬಿ.ವೈ. ವಿಜಯೇಂದ್ರ ಕರೆ ನೀಡಿದರು.

ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಪರಾಭವದಿಂದ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಉಂಟಾಗಿದೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ನಾವೇ ಮೋದಿ ಎಂದು ಭಾವಿಸಿ ಹಗಲಿರುಳೆನ್ನದೆ ದುಡಿಯಬೇಕು. ಅಭ್ಯರ್ಥಿಯ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಭ್ಯರ್ಥಿ ಯಾರೇ ಇದ್ದರೂ ಕಮಲದ ಹೂವನ್ನು ಗೆಲ್ಲಿಸಲು ಮುಂದಾಗಿ ಎಂದು ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.

ಒಬಿಸಿ ಮೋರ್ಚಾದ ಪದಾಧಿಕಾರಿಗಳು ತಾವು ಬಿಜೆಪಿ ಕಾರ್ಯಕರ್ತರು ಎಂಬುದನ್ನು ಮರೆಯಬಾರದು. ನಮ್ಮ ಪದಾಧಿಕಾರಿಗಳು ತಮ್ಮ ಬೂತ್ ಕಡೆ ಗಮನ ಹರಿಸಬೇಕು. ಮತದಾರರ ಪಟ್ಟಿ, ಬೂತ್ ಕಡೆ ಗಮನ ಕೊಡಬೇಕು. ಎಷ್ಟು ಹೆಸರು ಸೇರ್ಪಡೆ ಆಗಿದೆ? ಎಷ್ಟು ಹೆಸರು ರದ್ದಾಗಿದೆ ಎಂಬ ಕಡೆ ಗಮನಿಸಬೇಕು ಎಂದು ಬಿ.ವೈ. ವಿಜಯೇಂದ್ರ ಸೂಚಿಸಿದರು.

100 ಮತವನ್ನು 200 ಮತ ಮಾಡಲು ಟಾಸ್ಕ್‌

100 ಮತ ಬಂದಿದ್ದರೆ ಅದನ್ನು 200 ಮಾಡುವುದು ಹೇಗೆ? 500 ಮತ ಬಂದಿದ್ದರೆ ಅದನ್ನು ಮತ್ತಷ್ಟು ಹೆಚ್ಚಿಸುವುದು ಹೇಗೆ ಎಂಬ ಕಡೆ ಗಮನ ಹರಿಸಬೇಕಿದೆ. ಕ್ಷೇತ್ರಕ್ಕೆ ತೆರಳಿ ಬೂತ್ ಬಲಪಡಿಸುವ ಕಡೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಬೇಕು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಬರಲಿದೆ ಚುನಾವಣಾ ಫಲಿತಾಂಶ

ಸೂರ್ಯ ಚಂದ್ರ ಇರುವುದು ಹೇಗೆ ಸತ್ಯವೋ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಸತ್ಯ ಎಂದು ನುಡಿದ ಬಿ.ವೈ. ವಿಜಯೇಂದ್ರ, ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಫಲಿತಾಂಶವು ಈ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕಕ್ಕೆ ಲಭ್ಯವಾಗಲಿದೆ. 28ಕ್ಕೆ 28 ಸ್ಥಾನ ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಖಜಾನೆಯಲ್ಲಿ ದುಡ್ಡಿಲ್ಲ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೇವಲ 8-9 ತಿಂಗಳಲ್ಲಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ. ರಾಜ್ಯಕ್ಕೆ ಸಂಬಂಧಿಸಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಅದು ಪ್ರಕಟಿಸಿಲ್ಲ ಎಂದು ಟೀಕಿಸಿದ ಬಿ.ವೈ. ವಿಜಯೇಂದ್ರ, ನಮ್ಮ ಸರ್ಕಾರವು ಉತ್ತರ ಕರ್ನಾಟಕದ 7800 ಕೋಟಿ ‌ರೂಪಾಯಿ ಮೊತ್ತದ ನೀರಾವರಿ ಯೋಜನೆಗೆ ಅನುಮೋದನೆ ಕೊಟ್ಟಿತ್ತು. ಅದರ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲದಿರುವುದು ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ: Sumalatha Ambareesh: ಸ್ಪರ್ಧೆ ಖಚಿತ ಎಂದ ಸುಮಲತಾ; ‌ಅವರು ಬಿಜೆಪಿಯೊಳಗೆ ಇರ್ತಾರೆ ಎಂದ ಜೋಶಿ

ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಯಶ್‍ಪಾಲ್ ಸುವರ್ಣ, ಒಬಿಸಿ ಮೋರ್ಚಾ ರಾಜ್ಯ ಪ್ರಭಾರಿ ಎಸ್.ಕೆ. ಕವೆರ್ಂಧನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ತಪಸ್ವಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅವ್ವಣ್ಣ ಮ್ಯಾಕರಿ, ಬಿ.ಸೋಮಶೇಖರ್ ಅವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

HD Kumaraswamy: ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ಮುಡಾ ನಿವೇಶನವನ್ನೇ ಕೊಟ್ಟಿಲ್ಲ: ಎಚ್‌ಡಿಕೆ

HD Kumaraswamy: ಮುಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ? ಇದು ಮುಗಿದ ಆಟ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ.

VISTARANEWS.COM


on

HD Kumaraswamy
Koo

ನವದೆಹಲಿ: ಮುಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು. ಆದರೆ, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಹೇಳಿದರು.

ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ | MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

2012ರಲ್ಲಿ ನಾನು ಮುಡಾಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ. ನಾನೆಂದೂ ಸಿದ್ದರಾಮಯ್ಯ ಅವರಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಟಾಂಗ್‌ ನೀಡಿದರು.

40 ವರ್ಷಗಳಾದ್ರೂ ನಿವೇಶನ ಕೊಟ್ಟಿಲ್ಲ

ಈ ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಇವತ್ತು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ.. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ಗೆ ತಿರುಗೇಟು ಕೊಟ್ಟರು.

ನನ್ನ ಹೆಸರಿನಲ್ಲಿರುವ ನಿವೇಶನವನ್ನು ಬೇಕಿದ್ದರೆ ನೀವೇ ನಿಮ್ಮ ಮಗನಿಗೋ ಅಥವಾ ನಿಮ್ಮ ಧರ್ಮಪತ್ನಿ ಹೆಸರಿಗೋ ಅಥವಾ ನಿಮ್ಮ ಪರಮಾಪ್ತ ಭೈರತಿ ಸುರೇಶ್ ಹೆಸರಿಗೋ ಇಲ್ಲವೇ ಯಾವುದಾದರೂ ಅನಾಥಾಶ್ರಮಕ್ಕೋ ಬರೆದುಕೊಟ್ಟುಬಿಡಿ. ನನಗೆ ಯಾವ ತಕರಾರೂ ಇಲ್ಲ ಎಂದು ತಿಳಿಸಿದರು.

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?

16/2 ಮಾಡಿದ ಮೇಲೆ ಪುನಾ ನಿವೇಶನವನ್ನು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಂಗಪ್ಪ ಎನ್ನುವ ವ್ಯಕ್ತಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಎಂದು ಸ್ವರ್ಗದಿಂದ ಇಳಿದುಬಂದು ನಿಮಗೆ ಅರ್ಜಿ ಕೊಟ್ಟಿದ್ದರಾ ಸಿದ್ದರಾಮಯ್ಯ ಅವರೇ? ನಿಂಗಪ್ಪ ಸತ್ತ ಮೇಲೆ ಡಿನೋಟಿಫಿಕೇಶನ್ ಮಾಡಲು ಅರ್ಜಿ ಸಲ್ಲಿಸಲಾಗಿದೆ. 2001, 2003ರಲ್ಲಿ‌ ಸಿಎಂ ಪತ್ನಿಗೆ ಮೈಸೂರಿನ ವಿಜಯನಗರದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. 2005ರಲ್ಲಿ ಕೃಷಿಭೂಮಿ ಎಂದಿದ್ದ ಭೂಮಿಯನ್ನು ಇವರು ಹೇಗೆ ಖರೀದಿ ಮಾಡಿದರು? ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡದೆಯೇ ಭೂ ಪರಿವರ್ತನೆ ಮಾಡಿಕೊಟ್ಟರು. ಅದು ಹೇಗೆ ಮಾಡಿಕೊಟ್ಟರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಆಗಲೂ ಈ ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದರು. ಆಗ ಈ ಮಹಾನುಭಾವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಈ ಹಗರಣವನ್ನು ಬಯಲು ಮಾಡಿದ್ದು, ಎಲ್ಲಾ ದಾಖಲೆಗಳನ್ನು ಹೊರಗೆ ಬಿಟ್ಟಿದ್ದು ಮುಖ್ಯಮಂತ್ರಿ ಕುರ್ಚಿಯ ಟವೆಲ್ ಹಾಕಿದ ಮಹಾಶಯರು ಎಂದು ಯಾರ ಹೆಸರನ್ನೂ ಹೇಳದೆ ಕಾಂಗ್ರೆಸ್‌ ಪಕ್ಷದ ಒಳರಾಜಕೀಯದ ಬಗ್ಗೆ ಸ್ಫೋಟಕ ವಿಷಯವನ್ನು ಬಹಿರಂಗ ಮಾಡಿದರು.

ನಿಮ್ಮವರೇ ಕೊಟ್ಟ ದಾಖಲೆಗಳನ್ನು ವಿಪಕ್ಷಗಳು ಚರ್ಚೆ ಮಾಡತ್ತಿವೆ. ಸರ್ಕಾರಿ ಭೂಮಿಯನ್ನು ನೀವೇ ಕಬಳಿಕೆ ಮಾಡಿ, ಈಗ 64 ಕೋಟಿ ಪರಿಹಾರ ಕೊಡಿ ಎಂದು ಯಾವ ನೈತಿಕತೆ ಮೇಲೆ ಕೇಳುತ್ತಿದ್ದೀರಿ ಸಿದ್ದರಾಮಯ್ಯನವರೇ..? ಇಂತಹ ಆರೋಪ ಹೊತ್ತು ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ವಾಲ್ಮಿಕಿ ಹಗರಣ ಸಿದ್ದರಾಮಯ್ಯ ಸರ್ಕಾರದ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದೆ. ಹಗರಣ ನಡೆದಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಹಗರಣದ ಜವಾಬ್ದಾರಿ ಯಾರು ಹೊರಬೇಕು? ಈ ಹಗರಣವನ್ನು ಮಾಡಿರುವವರು ಅಯೋಗ್ಯ ಅಧಿಕಾರಿಗಳು ಎಂದು ಹೇಳಿಕೆ ನೀಡಿದ್ದಾರೆ. ಅಂತಹ ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಮೇಲೆ ಚಾಟಿ ಬೀಸಿದರು.

ಅಧಿಕಾರಿ ಕಲ್ಲೇಶರನ್ನು ಅಮಾನತು ಮಾಡಿದ್ದೀರಿ. ಅವರ ಕೈಯಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ಪೋಲಿಸರಿಗೆ ದೂರು ಕೊಡಿಸಿ ಎಫ್‌ ಐಆರ್‌ ಮಾಡಿಸಿದ್ದೀರಿ. ಅದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನಿಮಗೆ ಯಾರು ಈ ಐಡಿಯಾ ಕೊಟ್ಟರೋ ಗೊತ್ತಿಲ್ಲ, ಆದರೆ; ಅವರು ಸರಿಯಾದ ಐಡಿಯಾನಾದರೂ ನಿಮಗೆ ಕೊಡಬೇಕಿತ್ತು ಎಂದು ಸಿಎಂಗೆ ಕುಟುಕಿದರು ಕೇಂದ್ರ ಸಚಿವರು.

ಎಂಟು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ತೆರಿಗೆ ಪಾಲು, ರಾಜ್ಯದ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದೀರಲ್ಲ ಸಿದ್ದರಾಮಯ್ಯನವರೇ, ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ. ಇದು ಮುಗಿದ ಆಟ ಸಿದ್ದರಾಮಯ್ಯನವರೇ… ಕಾಂಗ್ರೆಸ್‌ನವರು ಮೈಸೂರಿಂದ ಬೆಂಗಳೂರಿಗಲ್ಲ, ದೆಹಲಿಗೆ ಪಾದಯಾತ್ರೆ ಬರಲಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನೂ ಓದಿ | Bengaluru South District: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಮುಡಾ ಹಗರಣದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಲಿವೆ. ಈ ಬಗ್ಗೆ ರೂಪರೇಷೆ ಸಿದ್ಧ ಮಾಡಲು ಎನ್‌ಡಿಎ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಪಾದಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Continue Reading

ಕರ್ನಾಟಕ

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

B.S.Yediyurappa: ಪೋಕ್ಸೊ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

VISTARANEWS.COM


on

B.S.Yediyurappa
Koo

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಜತೆಗೆ ಪೋಕ್ಸೋ ವಿಶೇಷ ಕೋರ್ಟ್‌ಗೆ ಹಾಜರಾಗುವುದಕ್ಕೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ಮುಂದುವರಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

ಇದನ್ನೂ ಓದಿ | Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Actor Darshan wife Vijayalakshmi Darshan Visit Kollur Temple
Actor Darshan wife Vijayalakshmi Darshan Visit Kollur Temple

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

ಇದನ್ನೂ ಓದಿ | Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.

Continue Reading

ಕರ್ನಾಟಕ

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

PU Lecturer Recruitment: ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಕೆ ಮಾಡಲಾಗಿದೆ.

VISTARANEWS.COM


on

Koo

ಬೆಂಗಳೂರು: ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ (PU Lecturer Recruitment) ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು, ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ‌ಸಂಬಂಧಿಸಿದಂತೆ ನಿಯಮಗಳನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉಪನ್ಯಾಸಕರಾಗಲು ಇಚ್ಛಿಸುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು, ಇನ್ನು ಮುಂದೆ ಶೇ.50 ಅಂಕ ಪಡೆದರೆ ಪಿಯು ಕಾಲೇಜು ಉಪನ್ಯಾಸಕಗಲು ಅರ್ಹರಾಗುತ್ತಾರೆ.

ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.55 ಅಂಕ, ಪರಿಶಿಷ್ಟ ಜಾತಿ, ಪಂಗಡದವರು ಶೇ.50 ಅಂಕ ಪಡೆಯಬೇಕಿದೆ. ಇದೀಗ ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ | Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
Continue Reading

ನೌಕರರ ಕಾರ್ನರ್

KAS Recruitment 2024: ಕೆಎಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ; ಸಚಿವ ಸಂಪುಟ ಅನುಮೋದನೆ

KAS Recruitment 2024: 2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದವರಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ ಈ ಬಾರಿಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

VISTARANEWS.COM


on

KAS Recruitment 2024
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ (Job News) ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (KAS Recruitment 2024) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅರ್ಜಿ ಸಲ್ಲಿಕೆಗೆ ವಿಶೇಷ ಅವಕಾಶ ನೀಡಲಾಗಿತ್ತು. ಇದೀಗ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದರಿಂದ ಗರಿಷ್ಠ ವಯೋಮಿತಿ ಮೀರಿದವರಿಗೆ ಅನುಕೂಲವಾಗಲಿದೆ.

‘ಕೆಎಎಸ್ ಹುದ್ದೆಗಳ ನೇಮಕಾತಿಗೆ ಪ್ರತಿವರ್ಷ ಅಧಿಸೂಚನೆ ಹೊರಡಿಸಬೇಕು ಎಂದು ಪಿ.ಸಿ. ಹೋಟಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯದಲ್ಲಿ 3-4 ವರ್ಷಗಳಿಗೊಮ್ಮೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಒಡಿಶಾ ಸರ್ಕಾರವು 2017ರಲ್ಲಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ 2024ರ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಅದೇ ರೀತಿ ಗರಿಷ್ಠ ವಯೋಮಿತಿ ಮೀರಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ಈ ಹಿಂದೆ ಕೆಪಿಎಸ್‌ಸಿಗೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಹೀಗಾಗಿ 2017-18ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ ಕೆಪಿಎಸ್‌ಸಿ ಆದೇಶ ಹೊರಡಿಸಿತ್ತು. ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನುಕೂಲವಾಗಲು ಅರ್ಜಿ ಸಲ್ಲಿಕೆ ಅವಧಿ ಮುಗಿದರೂ ಕೂಡ ಜುಲೈ 6ರಿಂದ ಜುಲೈ 21ರವರೆಗೆ ಕೆಎಎಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ವಿಶೇಷ ಅವಕಾಶ ನೀಡಿತ್ತು.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ| Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
Continue Reading
Advertisement
puneeth kerehalli dog meat
ಕ್ರೈಂ12 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ25 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ49 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ1 hour ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌