Site icon Vistara News

C.T. Ravi: ಲಿಂಗಾಯತ ಸಮುದಾಯವನ್ನು ಒಡೆಯುವುದು ಕಾಂಗ್ರೆಸ್‌ ಚಾಳಿ: ಪತ್ರಿಕಾ ವರದಿ ಸುಳ್ಳು ಎಂದ ಸಿ.ಟಿ. ರವಿ

c t raviacvuses congress for dividing community

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕಿಲ್ಲ ಎಂದು ತಮ್ಮ ಹೆಸರಿನಲ್ಲಿ ಪ್ರಕಟವಾಗಿರುವ ಪತ್ರಿಕಾ ವರದಿ ಸುಳ್ಳು ಎಂದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ, ಸಮುದಾಯವನ್ನು ಒಡೆಯುವುದು ಕಾಂಗ್ರೆಸ್‌ ಚಾಳಿ ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿ.ಟಿ. ರವಿ, ಲಿಂಗಾಯತ ಸಮುದಾಯದ ಒಗ್ಗಟ್ಟನ್ನು ಒಡೆಯುವ ಕಾಂಗ್ರೆಸ್’ನ ಚಾಳಿ ಎಲ್ಲರಿಗೂ ತಿಳಿದದ್ದೇ ಮತ್ತು ಅದಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸಲೂ ಹೇಸದ ಹಂತ ತಲುಪಿದ್ದಾರೆ. ಲಿಂಗಾಯತ ಸಮುದಾಯದಲ್ಲಿ ಬಿಜೆಪಿಯ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಪತ್ರಿಕೆಯಲ್ಲಿ ಪ್ರಕಟವಾದ ರೀತಿ ಸುಳ್ಳು ಸೃಷ್ಟಿಸಿ, ಮಾಧ್ಯಮಗಳಿಗೂ ಅಪಚಾರ ಎಸಗಲಾಗಿದೆ ಎಂದಿದ್ದಾರೆ.

Exit mobile version