Narendra Modi: ಮೋದಿ ಬಗ್ಗೆ ಸಂಸ್ಕೃತಿ ಸಚಿವ ಹೀಗೆ ಹೇಳಬಹುದಾ?; ಕಾಂಗ್ರೆಸ್‌ಗೆ ಜೋಶಿ ತರಾಟೆ - Vistara News

ರಾಜಕೀಯ

Narendra Modi: ಮೋದಿ ಬಗ್ಗೆ ಸಂಸ್ಕೃತಿ ಸಚಿವ ಹೀಗೆ ಹೇಳಬಹುದಾ?; ಕಾಂಗ್ರೆಸ್‌ಗೆ ಜೋಶಿ ತರಾಟೆ

ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಕಾಂಗ್ರೆಸ್‌ ನಾಯಕರಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಎಚ್ಚರಿಸಿದ್ದಾರೆ.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಕಾಂಗ್ರೆಸ್‌ನವರಿಗೆ ಯಾವಾಗಲೂ ಹೊಡಿಬಡಿ ಸಂಸ್ಕೃತಿಯೇ ಮೈಗೂಡಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ಅವರು ಸಿದ್ದರಾಮಯ್ಯ ಸರ್ಕಾರದಲ್ಲಿನ ಸಚಿವ ಶಿವರಾಜ್ ತಂಗಡಗಿ (Shivaraj Thangadagi) ವಿರುದ್ಧ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಮಾದ್ಯಮದವರೊಂದಿಗೆ ಮಾತನಾಡುತ್ತ, “”ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಇದ್ದುಕೊಂಡು ಹೀಗೆ ಹೊಡಿ ಬಡಿಯುವ ರೀತಿ ಪ್ರಚೋದನೆ ನೀಡುವುದು ಅವರ ವ್ಯಕ್ತಿತ್ವ ಮತ್ತು ಹುದ್ದೆಗೆ ಘನತೆ, ಗೌರವ ತರುವಂಥದ್ದಲ್ಲʼʼ ಎಂದು ಖಂಡಿಸಿದರು.

PM Narendra Modi in kalaburagi

“ಪ್ರಧಾನಿ ಮೋದಿ ವಿರುದ್ಧ ದ್ವೇಷ ಕಾರುವುದೇಕೆ? ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಕಾಂಗ್ರೆಸ್‌ ನಾಯಕರಿಗೆ ತಕ್ಕ ಉತ್ತರ ಕೊಡುತ್ತಾರೆʼʼ ಎಂದು ಜೋಶಿ ಎಚ್ಚರಿಸಿದರು. “ಪ್ರಧಾನಿ ಮೋದಿ ಅವರನ್ನು ಹಳಿದರೆ ವರ್ಚಸ್ಸು ಕುಗ್ಗುವಂತೆ ಮಾಡಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ನೀವೆಷ್ಟು ಮೋದಿ ಅವರನ್ನು ದ್ವೇಷಿಸುತ್ತೀರೋ, ಸೇಡಿನ ಭಾವನೆಯಿಂದ ವರ್ತಿಸುತ್ತಿರೋ? ಅಷ್ಟೇ ಪ್ರೀತಿಯಿಂದ ಜನ ಮೋದಿ ಅವರನ್ನು ಕಾಣುತ್ತಾರೆʼʼ ಎಂದು ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದರು.

Does congress karnataka have the power to slap youth for PM Narendra Modi slogan Pralhad Joshi question

ನಿನ್ನೆಯೂ ತಂಗಡಗಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಜೋಶಿ

ಮೋದಿ ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವ ಪ್ರಲ್ಹಾದ್‌ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಆಸ್ತಿ. ಈ ದೇಶದ ಪರಿವಾರಕ್ಕೆ ಸೇರಿದವರು. ದೇಶವಾಸಿಗಳ ಆರಕ್ಷಕರು. ಅದಕ್ಕಾಗಿ ಜನರೇ ಮೋದಿಯವರಿಗೆ ಜೈಕಾರ ಕೂಗುತ್ತಿದ್ದಾರೆ. ಹೀಗಿರುವಾಗ ಅವರೆಲ್ಲರ ಕಪಾಳಕ್ಕೆ ಹೊಡೆಯುವ “ಶಕ್ತಿ” ನಿಮ್ಮ “ಕೈ”ಗಿದೆಯೇ? ಎಂದು ಪ್ರಶ್ನಿಸಿದ್ದರು.
ಮೋದಿಯವರಿಗೆ ಜೈಕಾರ ಹಾಕುವವರ ಕಪಾಳಕ್ಕೆ ಹೊಡೆಯಬೇಕೆ? ಯಾವ ಕಾರಣಕ್ಕೆ? ಭಾರತದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿಯೇ? ಅಥವಾ ಜನರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಕ್ಕಾಗಿಯೇ? ಎಂದು ಪ್ರಲ್ಹಾದ್‌ ಜೋಶಿ ಕಾಂಗ್ರೆಸ್ಸಿಗರನ್ನು ತರಾಟೆಗೆ ತೆಗೆದುಕೊಂಡಿದ್ದರು.
ದೇಶದ ಪ್ರಧಾನ ಮಂತ್ರಿಯನ್ನು ಹೇಗೆ ಗೌರವಿಸಬೇಕು ಎಂಬ ಕಿಂಚಿತ್ತೂ ಆಲೋಚನೆ, ಸೌಜನ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ತೀರಾ ಉಡಾಫೇ ಮಾತನಾಡುತ್ತಾರೆ. ಇವರ ಅಸಹನೀಯ ಪದ ಬಳಕೆಗೆ ಯುವ ಪಡೆಯೇ ಉತ್ತರ ಕೊಡವ ಕಾಲ ದೂರವಿಲ್ಲ ಎಂದು ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಿವರಾಜ್‌ ತಂಗಡಗಿ ಒಬ್ಬ ಮಂತ್ರಿಯಾಗಿದ್ದುಕೊಂಡು ಪ್ರಧಾನಿ ಬಗ್ಗೆ, ದೇಶದ ಭವಿಷ್ಯದ ಆಸ್ತಿಯಾಗಿರುವ ಯುವ ಪಡೆ ಬಗ್ಗೆ ಹೀಗೆ ಕಪಾಳ ಮೋಕ್ಷದ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂದು ಸಚಿವ ಪ್ರಹ್ಲಾದ ಜೋಶಿ ತೀವ್ರವಾಗಿ ಖಂಡಿಸಿದ್ದರು.

ಸಚಿವ ತಂಗಡಗಿ ಹೇಳಿದ್ದೇನು?

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ ಎಂದು ಪ್ರಶ್ನೆ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ತಮ್ಮತಮ್ಮ ಕ್ಷೇತ್ರದ ಸಂಸದರಿಗೆ (Minister Of Parliament) ಸಿಗುವ ವಿವಿಧ ಸವಲತ್ತುಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇದೆ. ಇದರಲ್ಲಿ ಅವರ ವೇತನ, ಸೌಲಭ್ಯಗಳು ಸೇರಿವೆ. ಹಾಗಾದರೆ ಪ್ರತಿ ಕ್ಷೇತ್ರದ ಸಂಸದರು ಐದು ವರ್ಷಗಳ ಅಧಿಕಾರಾವಧಿಯಲ್ಲಿ ಏನೆಲ್ಲಾ ಸೌಲಭ್ಯ ಪಡೆಯುತ್ತಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Minister Of Parliament
Koo

ಲೋಕಸಭಾ ಚುನಾವಣೆ 2024ರ (Loksabha election-2024) ಫಲಿತಾಂಶ (result) ಈಗಾಗಲೇ ಹೊರಬಿದ್ದಿದೆ. ಇದರೊಂದಿಗೆ ತಮ್ಮತಮ್ಮ ಕ್ಷೇತ್ರದ ಸಂಸದರ (Minister Of Parliament) ಅಧಿಕಾರ, ಅವರ ವಿಶೇಷ ಸೌಲಭ್ಯಗಳ ಕುರಿತಾಗಿ ಒಂದಷ್ಟು ತಿಳಿದುಕೊಳ್ಳುವ ಆಸಕ್ತಿಯಂತೂ ಎಲ್ಲರಲ್ಲೂ ಇದ್ದೇ ಇರುತ್ತದೆ.

ಭಾರತೀಯ ಸಂಸತ್ತಿನ ಎರಡು ಸದನಗಳಲ್ಲಿ ಒಂದಾಗಿರುವ ಸಂಸತ್ತಿನ ಕೆಳಮನೆಯಾದ ಲೋಕಸಭೆಯ ಸದಸ್ಯರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಲು ಸಾರ್ವಜನಿಕರಿಂದ ಚುನಾಯಿತರಾಗುತ್ತಾರೆ. ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸಂಸತ್ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಇವರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಸಂಬಳ ಎಷ್ಟು?:

ಸಂಸದರು ಮಾಸಿಕವಾಗಿ 1 ಲಕ್ಷ ರೂ. ವೇತನವನ್ನು ಪಡೆಯುತ್ತಾರೆ. ಅವರ ಸಂಬಳವು ಪ್ರತಿ ಐದು ವರ್ಷಗಳಿಗೊಮ್ಮೆ ದೈನಂದಿನ ಭತ್ಯೆಗಳ ರೂಪದಲ್ಲಿ ಹೆಚ್ಚಾಗುತ್ತದೆ.

ಸಂಸತ್ತಿನ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿ (ತಿದ್ದುಪಡಿ) ಕಾಯಿದೆ 2010ರ ಪ್ರಕಾರ ಅವರ ಮೂಲ ವೇತನವು ತಿಂಗಳಿಗೆ 50,000 ರೂ. ಅನ್ನು ಒಳಗೊಂಡಿರುತ್ತದೆ, ಸಂಬಳದ ಪ್ರಕಾರ, ಸಂಸತ್ತಿನ ಅಧಿವೇಶನಗಳಿಗೆ ಹಾಜರಾಗಲು ದೈನಂದಿನ ಭತ್ಯೆಯಾಗಿ ಅವರು 2,000 ರೂಪಾಯಿಗಳನ್ನು ಪಡೆಯುತ್ತಾರೆ. ಸಂಸದರು ರಸ್ತೆ ಮೂಲಕ ಪ್ರಯಾಣಿಸುತ್ತಿದ್ದರೆ ಪ್ರತಿ ಕಿ.ಮೀ.ಗೆ 16 ರೂ.ನಂತೆ ಪ್ರಯಾಣ ಭತ್ಯೆಗೆ ಅರ್ಹರಾಗಿರುತ್ತಾರೆ.

ಅವರು ತಿಂಗಳಿಗೆ 45,000 ರೂ.ಗಳ ಕ್ಷೇತ್ರ ಭತ್ಯೆಯನ್ನೂ ಪಡೆಯುತ್ತಾರೆ. ದೂರವಾಣಿ ಮತ್ತು ಅಂಚೆ ವೆಚ್ಚಕ್ಕೆ 15,000 ರೂ. ಸೇರಿದಂತೆ ಕಚೇರಿ ವೆಚ್ಚವಾಗಿ ತಿಂಗಳಿಗೆ 45,000 ರೂ. ಪಡೆಯುತ್ತಾರೆ.

ಇದನ್ನೂ ಓದಿ: Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

ಕಾರ್ಯದರ್ಶಿ, ಸಹಾಯಕರ ವೇತನ ನೀಡಲು ಅವರು ಭತ್ಯೆ ಬಳಸಿಕೊಳ್ಳಬಹುದು. ಪ್ರತಿ ತಿಂಗಳು ಸದಸ್ಯರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಪಡೆಯಲು 500 ರೂ. ಪಡೆಯುತ್ತಾರೆ.

ಸಂಸದರಿಗೆ ವಿವಿಧ ಸಭೆಗಳಿಗೆ ಹಾಜರಾಗಲು ಸೇರಿದಂತೆ ತಮ್ಮ ಕರ್ತವ್ಯಗಳ ನಿರ್ವಹಣೆಗೆ ಉಂಟಾಗುವ ಪ್ರಯಾಣ ವೆಚ್ಚಗಳಿಗೆ ಮರುಪಾವತಿಗಳನ್ನು ನೀಡಲಾಗುತ್ತದೆ. ಸಂಸದರು ತಮ್ಮ ಅಧಿಕಾರ ಅವಧಿಗೆ ಬಾಡಿಗೆ ರಹಿತ ವಸತಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಇದಲ್ಲದೆ ಸಂಸದರಿಗೆ ಮತ್ತು ಅವರ ಕುಟುಂಬದವರಿಗೆ ಬಸ್‌, ರೈಲು ಮತ್ತು ವಿಮಾನ ಪ್ರಯಾಣ ಉಚಿತವಾಗಿರುತ್ತದೆ. ಸಂಸದರು ಮತ್ತು ಅವರ ಕುಟುಂಬದವರಿಗೆ ಚಿಕಿತ್ಸೆ ಉಚಿತವಾಗಿರುತ್ತದೆ. ಒಂದೇ ಒಂದು ದಿನ ಸಂಸದರಾಗಿದ್ದರೂ ಬದುಕಿರುವವರೆಗೂ ಪ್ರತಿ ತಿಂಗಳು 25,000 ರೂ. ಪಿಂಚಣಿ ಸಿಗುತ್ತದೆ. ಹತ್ತು ವರ್ಷ ಎಂಪಿ ಆಗಿದ್ದರೆ 35,000 ರೂ. ಪಿಂಚಣಿ ಸಿಗುತ್ತದೆ. ಜತೆಗೆ ಇತರ ಸೌಲಭ್ಯಗಳೂ ಮುಂದುವರಿಯುತ್ತವೆ.

Continue Reading

ಪ್ರಮುಖ ಸುದ್ದಿ

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

Uttarakhand Trekking Tragedy: ಉತ್ತರಾಖಂಡದ ಶಾಸ್ತ್ರತಾಳ್‌ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ 22 ಚಾರಣಿಗರ ತಂಡ ತೆರಳಿತ್ತು. ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ರಾಜ್ಯದ ಐವರು ಸೇರಿ 9 ಮಂದಿ ಮೃತಪಟ್ಟಿದ್ದಾರೆ.

VISTARANEWS.COM


on

Uttarakhand Trekking Tragedy
Koo

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್‌ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್‌ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜತೆ ದೂರವಾಣಿ ಮೂಲಕ ಮಾತನಾಡಿ ಸಿಎಂ ಅವರು, ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಮೃತರಿಗೆ ಸಿಎಂ ಸಂತಾಪ

ಉತ್ತರಾಖಂಡದ ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ (Uttarakhand Trekking Tragedy) ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ 9 ಮಂದಿ ಸಾವು

Uttarkashi Trekking Tragedy

ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ಐವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಶಾಸ್ತ್ರತಾಳ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಸುಜಾತ ಬೆಂಗಳೂರು (52), ಸಿಂಧು (47), ಚಿತ್ರಾ (48), ಪದ್ಮಿನಿ (45), ವೆಂಕಟೇಶ್‌ ಪ್ರಸಾದ್‌ (52, ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ KPS (50), ವಿನಾಯಕ್ ಎಂದು ಗುರುತಿಸಲಾಗಿದೆ.

ಸೌಮ್ಯಾ (36), ವಿನಯ್ (49), ಶಿವಜ್ಯೋತಿ (46), ಸುಧಾಕರ್‌ (64), ಸ್ಮೃತಿ (41), ಸೀನಾ (48), ಮಧುರೆಡ್ಡಿ (52), ಜಯಪ್ರಕಾಶ್ (61), ಭರತ್ (53), ಅನಿಲ್ ಭಟ್ಟ್ (52), ವಿವೇಕ್ ಶ್ರೀಧರ್, ರಿತಿಕಾ ಜಿಂದಾಲ್, ನವೀನ್ ಸೇರಿ 13 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಶಾಸ್ತ್ರತಾಳ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದರು. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | ‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

ಇನ್ನು ಉತ್ತರಾಖಂಡಕ್ಕೆ ಟ್ರೆಕ್ಕಿಂಗ್ ಹೋದ ತಂಡದ ರಕ್ಷಣಾ ಕಾರ್ಯಕ್ಕಾಗಿ ಐಎಎಸ್‌ ಅಧಿಕಾರಿ ವಿಪುಲ್ ಬನ್ಸಲ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಉತ್ತರಾಖಾಂಡ ಸರ್ಕಾರದ ಜೊತೆ ನಿರಂತರ ಸಂಪರ್ಕ ಬೆಳಸಲು ಸಮನ್ವಯ ಅಧಿಕಾರಿಯಾಗಿ ಇವರನ್ನು ನೇಮಕ ಮಾಡಲಾಗಿದೆ.

Continue Reading

ದೇಶ

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India Bloc Meeting: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು ಸೇರಿ ಹಲವು ವಿಷಯಗಳ ಕುರಿತು ಇಂಡಿಯಾ ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

India Bloc Meeting
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟವು ನರೇಂದ್ರ ಮೋದಿ ಅವರನ್ನೇ ನಾಯಕನನ್ನಾಗಿ ಘೋಷಣೆ ಮಾಡಿದೆ. ಎನ್‌ಡಿಎ ಸಭೆಯಲ್ಲಿ (NDA Meeting) ಎಲ್ಲ ಪಕ್ಷಗಳ ನಾಯಕರು ಮೋದಿ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ. ಜೂನ್‌ 8ರಂದು ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪವಾಡ ನಡೆದು, ಅಧಿಕಾರದ ಆಸೆಯಲ್ಲಿದ್ದ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ಸಭೆ (India Bloc Meeting) ನಡೆಸಿದ್ದು, ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎನ್‌ಸಿಪಿಯ ಶರದ್‌ ಪವಾರ್‌, ಸುಪ್ರಿಯಾ ಸುಳೆ, ಡಿಎಂಕೆಯ ಎಂ.ಕೆ.ಸ್ಟಾಲಿನ್‌, ಟಿ.ಆರ್‌.ಬಾಲು, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಜತೆಗೆ ಟಿಎಂಸಿ, ಶಿವಸೇನೆ (ಉದ್ಧವ್‌ ಠಾಕ್ರೆ ಬಣ), ಆರ್‌ಜೆಡಿ, ಸಿಪಿಐ (ಎಂ), ಸಿಪಿಐ, ಜೆಜೆಎಂ, ಆಮ್‌ ಆದ್ಮಿ ಪಾರ್ಟಿ, ವಿಸಿಕೆ, ಕೆಎಂಡಿಕೆ ಸೇರಿ ಹಲವು ಪಕ್ಷಗಳ ನಾಯಕರು, ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪವಾಡದ ನಿರೀಕ್ಷೆಯಲ್ಲಿದ್ದ ಒಕ್ಕೂಟ

ಲೋಕಸಭೆ ಚುನಾವಣೆಯಲ್ಲಿ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಇಂಡಿಯಾ ಒಕ್ಕೂಟವು ಪವಾಡ ನಡೆಯುವ ನಿರೀಕ್ಷೆಯಲ್ಲಿತ್ತು. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಹಾಗೂ ನಿತೀಶ್‌ ಕುಮಾರ್‌ ಅವರ ಜೆಡಿಯು ಕೂಡ ಇಂಡಿಯಾ ಒಕ್ಕೂಟದ ಜತೆಗೆ ಕೈಜೋಡಿಸಿದರೆ ಸರ್ಕಾರ ರಚಿಸುವ ಕನಸಿತ್ತು. ಆದರೆ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್‌ ಕುಮಾರ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದಾರೆ. ನರೇಂದ್ರ ಮೋದಿ ಅವರೇ ನಾಯಕ ಎಂಬುದಾಗಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಇಂಡಿಯಾ ಒಕ್ಕೂಟವು ಅಧಿಕಾರದ ಆಸೆಯನ್ನು ಕೈಬಿಡುವಂತಾಗಿದೆ.

ಇನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading

ದೇಶ

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Lowest Margin of Wins: ಇಡೀ ದೇಶದಲ್ಲಿಯೇ ಈ ಬಾರಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವವರು ಶಿವಸೇನಾ (ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್. ಇವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ ಗಜಾನನ್ ಕೀರ್ತಿಕರ್ ಅವರನ್ನು ಸೋಲಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

VISTARANEWS.COM


on

Lowest Margin of Wins
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆ ಫಲಿತಾಂಶ(Lok Sabha Election 2024) ಹೊರಬಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಮುಗಿದಿದೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದವರು, ಅತಿ ಹೆಚ್ಚು ಬಾರಿ ಗೆದ್ದವರು ಹೀಗೆ ಚುನಾವಣೆ ಕುರಿತ ಇಂಟ್ರೆಸ್ಟಿಂಗ್‌ ಸುದ್ದಿಗಳನ್ನು ನೋಡಿದ್ದೇವೆ. ಹೀಗಿರುವಾಗ ಈ ಬಾರಿ ಅತ್ಯಂತ ಕಡಿಮೆ ಮತಗಳಲ್ಲಿ ಅಂದರೆ ಇನ್ನೇನು ಸೋತೆ ಬಿಟ್ರು ಅನ್ನೋವಾಗ ಗೆಲುವಿನ ನಗೆ ಬೀರಿದವರ ಬಗ್ಗೆ ತಿಳಿದುಕೊಳ್ಳಬೇಕು. ನೆಕ್‌ ಟು ನೆಕ್‌ ಫೈಟ್‌ ನೀಡಿ ಕೇವಲ ಕೆಲವೇ ಕೆಲವು ಮತಗಳ ಅಂತರದಲ್ಲಿ ಗೆದ್ದವರು(Lowest Margin of Wins) ಯಾರು ಗೊತ್ತೇ?

ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳು

ಇಡೀ ದೇಶದಲ್ಲಿಯೇ ಈ ಬಾರಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವವರು ಶಿವಸೇನಾ (ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್. ಇವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ ಗಜಾನನ್ ಕೀರ್ತಿಕರ್ ಅವರನ್ನು ಸೋಲಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಅಂದರೆ 1989 ಮತ್ತು 1998 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಅನಕಾಪಲ್ಲಿಯಿಂದ ಕೊನತ್ತಲ ರಾಮಕೃಷ್ಣ ಮತ್ತು ಬಿಹಾರದ ರಾಜಮಹಲ್‌ನಿಂದ ಸೋಮ್ ಮರಾಂಡಿ ಅವರು ಕ್ರಮವಾಗಿ ಒಂಬತ್ತು ಮತಗಳಿಂದ ಗೆಲ್ಲುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಅವರ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ಕಡಿಮೆ ಮತಗಳ ಅಂತರದಿಂದ ರವೀಂದ್ರ ವೈಕರ್‌ ಗೆಲುವು ಸಾಧಿಸಿದ್ದಾರೆ.

ಇನ್ನು ಎರಡನೇ ಸ್ಥಾನದಲ್ಲಿರುವವರು ಕೇರಳದ ಅಟ್ಟಿಂಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಡೂರ್ ಪ್ರಕಾಶ್. ಈ ಚುನಾವಣೆಯಲ್ಲಿ, 684 ಮತಗಳಿಂದ ಜಯಗಳಿಸಿದ್ದಾರೆ. ಜೈಪುರ ಗ್ರಾಮಾಂತರದಿಂದ ಬಿಜೆಪಿಯ ರಾವ್ ರಾಜೇಂದ್ರ ಸಿಂಗ್ (1,615 ಮತಗಳು) ಮತ್ತು ಛತ್ತೀಸ್‌ಗಢದ ಕಂಕೇರ್‌ನಿಂದ ಅವರ ಪಕ್ಷದ ಸಹೋದ್ಯೋಗಿ ಬ್ರೋಜರಾಜ್ ನಾಗ್ (1,884 ಮತಗಳು) 2,000 ಮತಗಳಿಗಿಂತ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಲ್ಲಿ ಪಟ್ಟಿಗೆ ಸೇರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಗೆದ್ದ ಇತರ ಅಭ್ಯರ್ಥಿಗಳೆಂದರೆ ಉತ್ತರ ಪ್ರದೇಶದ ಫರೂಕಾಬಾದ್‌ನಿಂದ ಬಿಜೆಪಿಯ ಮುಖೇಶ್ ರಜಪೂತ್ (2,678 ಮತಗಳು), ಬಿಜೆಪಿಯ ಪ್ರವೀಣ್ ಪಟೇಲ್ ಫುಲ್ಪುರ (4,332 ಮತಗಳು), ಪಂಜಾಬ್‌ನ ಫಿರೋಜ್‌ಪುರದಿಂದ ಕಾಂಗ್ರೆಸ್‌ನ ಶೇರ್ ಸಿಂಗ್ ಘುಬಯಾ (3,242 ಮತಗಳು). ಮತಗಳು), ಚಂಡೀಗಢದಿಂದ ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ (2,504 ಮತಗಳು), ಲಕ್ಷದ್ವೀಪದಿಂದ ಕಾಂಗ್ರೆಸ್‌ನ ಮುಹಮ್ಮದ್ ಹಮ್ದುಲ್ಲಾ ಸಯೀದ್ (2,647 ಮತಗಳು) ಮತ್ತು ಉತ್ತರ ಪ್ರದೇಶದ ಧೌರಾಹ್ರಾದಿಂದ ಸಮಾಜವಾದಿ ಪಕ್ಷದ ಆನಂದ್ ಭದೌರಿಯಾ (4,449 ಮತಗಳು).

ಉತ್ತರ ಪ್ರದೇಶದ ಬನ್ಸ್‌ಗಾಂವ್‌ನಿಂದ ಬಿಜೆಪಿಯ ಕಮಲೇಶ್ ಪಾಸ್ವಾನ್ 3,150 ಮತಗಳ ಅಂತರದಿಂದ, ಬಿಷ್ಣುಪುರದಿಂದ ಕೇಸರಿ ಪಕ್ಷದ ಸೌಮಿತ್ರಾ ಖಾನ್ 5,567 ಮತಗಳಿಂದ, ತೆಲಂಗಾಣದ ಮಹಬೂಬ್‌ನಗರದಿಂದ ಅದರ ಅಭ್ಯರ್ಥಿ ಅರುಣಾ ಡಿಕೆ 4,500 ಮತಗಳಿಂದ ಗೆದ್ದಿದ್ದಾರೆ. ಸಮಾಜವಾದಿ ಪಕ್ಷದ ಅಜೇಂದ್ರ ಸಿಂಗ್ ಲೋಧಿ ಅವರು ಉತ್ತರ ಪ್ರದೇಶದ ಹಮೀರ್‌ಪುರದಿಂದ 2,629 ಮತಗಳಿಂದ ಗೆದ್ದಿದ್ದರೆ, ಸೇಲಂಪುರದಿಂದ ಅದರ ಅಭ್ಯರ್ಥಿ ರಾಮಶಂಕರ್ ರಾಜ್‌ಭರ್ 3,573 ಮತಗಳಿಂದ ಜಯಗಳಿಸಿದ್ದಾರೆ.

ಪಶ್ಚಿಮ ಬಂಗಾಳದ ಅರಾಂಬಾಗ್ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌ನ ಮಿತಾಲಿ ಬಾಗ್ 6,399 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್‌ನ ಮಾಣಿಕ್ಕಂ ಟ್ಯಾಗೋರ್ ತಮಿಳುನಾಡಿನ ವಿರುದುನಗರದಿಂದ 4,633 ಮತಗಳಿಂದ ಮುನ್ನಡೆಯಲ್ಲಿದ್ದರೆ, ಮಹಾರಾಷ್ಟದ ಧುಲೆಯಲ್ಲಿ ಗ್ರ್ಯಾಂಡ್ ಓಲ್ಡ್ ಪಕ್ಷದ ಬಚ್ಚವ್ ಶೋಭಾ ದಿನೇಶ್ 3,831 ಮತಗಳಿಂದ ಮುಂದಿದ್ದಾರೆ.

ಇದನ್ನೂ ಓದಿ:Bangalore Central Election Result 2024 : ಪಿ.ಸಿ ಮೋಹನ್​ ಮರ್ಯಾದೆ ಉಳಿಸಿದ ಮಹದೇವರಪುರ ಕ್ಷೇತ್ರ!

Continue Reading
Advertisement
French Open 2024
ಕ್ರೀಡೆ5 mins ago

French Open 2024: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಮ್ಯಾಥ್ಯೂ ಜೋಡಿ

Minister Of Parliament
Latest29 mins ago

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

Uttarakhand Trekking Tragedy
ಪ್ರಮುಖ ಸುದ್ದಿ30 mins ago

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

India Bloc Meeting
ದೇಶ39 mins ago

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India vs Ireland
ಕ್ರೀಡೆ1 hour ago

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

Water Supply Cut
ಕರ್ನಾಟಕ1 hour ago

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Lowest Margin of Wins
ದೇಶ1 hour ago

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Rahul Dravid
ಕ್ರೀಡೆ2 hours ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ2 hours ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ2 hours ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌