Cauvery water dispute : ಕನ್ನಡಿಗರಿಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಡಿಸಿಎಂಗೆ ಸಂತೋಷವಾಗುತ್ತಿದೆ! - Vistara News

ಕರ್ನಾಟಕ

Cauvery water dispute : ಕನ್ನಡಿಗರಿಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಡಿಸಿಎಂಗೆ ಸಂತೋಷವಾಗುತ್ತಿದೆ!

Cauvery water dispute : ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕನ್ನಡಿಗರು ಸಂಕಷ್ಟದಲ್ಲಿ ಇದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ತಮಿಳುನಾಡಿಗೆ ನೀರು ಹರಿಸಲು ಸಂತೋಷವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅವರು ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

HD kumaraswamy infront of KRS dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಜನರು ನೀರಿಲ್ಲದೆ ಸಂಕಷ್ಟದಲ್ಲಿ ಇದ್ದರೆ ಜಲ ಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ. ಶಿವಕುಮಾರ್‌ (Water Resources Minister and Deputy CM DK Shivakumar) ಅವರು ತಮಿಳುನಾಡಿಗೆ ಕಾವೇರಿ ನೀರನ್ನು (Cauvery water to Tamil Nadu) ಸಂತೋಷವಾಗಿ ಬಿಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former Chief Minister HD Kumaraswamy) ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನು ಮಳೆ ಬರುವ ಸಾಧ್ಯತೆ ಬಹಳ ಕಡಿಮೆ. ಜಲಾಶಯಗಳು ಬರಿದಾಗಿವೆ. ಇದ್ದ ನೀರಿನಲ್ಲಿ ಬಹುಪಾಲನ್ನು ತಮಿಳುನಾಡಿಗೆ ಹರಿಸಲಾಗಿದೆ. ಈ ಬಗ್ಗೆ ಪ್ರಾಯಶ್ಚಿತ್ತವೇ ಇಲ್ಲದ ಜಲಸಂಪನ್ಮೂಲ ಸಚಿವರು ತಮಿಳುನಾಡಿಗೆ ನೀರು ಹೋಗುತ್ತಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಇವರಿಗೆ ರಾಜ್ಯದ ಜನ ಕಷ್ಟದಲ್ಲಿ ಇದ್ದರೆ ಸಂತೋಷ ಆಗುತ್ತದೆ ಎನ್ನುವ ವಿಷಯ ತಿಳಿದು ಅಚ್ಚರಿ ಆಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಇದನ್ನೂ ಓದಿ: Operation Hasta : ಆಪರೇಷನ್‌ ಹಸ್ತ ಮಾಡಲ್ಲ, ಹಾಲಿ ಶಾಸಕರನ್ನು ಸೆಳೆಯಲ್ಲ; ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ

ಡಿ.ಕೆ. ಶಿವಕುಮಾರ್‌ ತಮಿಳುನಾಡಿನ ಏಜೆಂಟಾ?

ಕಾವೇರಿ ಜಲ ನಿಯಂತ್ರಣ ಮಂಡಳಿಯ (Cauvery Water Regulation Board) ಮುಂದೆ ತಮಿಳುನಾಡು 12,500 ಕ್ಯೂಸೆಕ್ ನೀರು ಬಿಡಿಸಿ ಎಂದು ಬೇಡಿಕೆ ಇಟ್ಟಿತ್ತು. ಸಮಿತಿ ದೊಡ್ಡ ಮನಸ್ಸು ಮಾಡಿ ಕೇವಲ ಮುಂದಿನ 18 ದಿನಗಳ ಕಾಲ 3,000 ಕ್ಯೂಸೆಕ್ ಮಾತ್ರ ಬಿಡುಗಡೆ ಮಾಡಿ ಎಂದು ಕರ್ನಾಟಕಕ್ಕೆ ಆದೇಶ ನೀಡಿದೆ. ಅದು ತಮಗೆ ಸಂತಸ ಉಂಟು ಮಾಡಿದೆ ಎಂದು ಸಚಿವರು ಹೇಳಿದ್ದಾರೆ. ಇವರು ಕರ್ನಾಟಕದ ಉಪ ಮುಖ್ಯಮಂತ್ರಿಯಾ? ಅಥವಾ ತಮಿಳುನಾಡಿನ ಏಜೆಂಟಾ? (Agent of Tamil Nadu) ಎಂದು ಎಚ್.ಡಿ. ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಎಚ್‌ಡಿಕೆ ಬೇಸರ

ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬೇಡಿ ಎಂದು ಜನರು ಮತ್ತು ವಿರೋಧ ಪಕ್ಷಗಳು ಒತ್ತಾಯ ಮಾಡುತ್ತಿದ್ದರೆ ಇವರು ಸಂತೋಷವಾಗಿ ನೆರೆ ರಾಜ್ಯಕ್ಕೆ ನೀರು ಹರಿಸುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಡಿಸಿಎಂ ಹೇಳಿಕೆ ಬೇಜವಾಬ್ದಾರಿಯ ಪರಮಾವಧಿ

ಜಲ ಸಂಪನ್ಮೂಲ ಸಚಿವರು ನೀಡುತ್ತಿರುವ ಹೇಳಿಕೆಗಳು ರಾಜ್ಯಕ್ಕೆ ಧಕ್ಕೆ ತರುತ್ತಿವೆ. ಬುಧವಾರ ಹೇಳಿಕೆ ನೀಡಿದ್ದ ಅವರು ಕೆಆರ್‌ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ಹೇಳಿಕೆ ನೀಡಿದ್ದರು. ಆದರೆ, ಅಧಿಕಾರಿಗಳು ನೀರೇ ಇಲ್ಲ ಎಂದು ನಿಯಂತ್ರಣ ಸಮಿತಿ ಸಭೆಯಲ್ಲಿ ಹೇಳುತ್ತಾರೆ. ಜನರು ಯಾರ ಮಾತು ನಂಬುವುದು? ಮಂಗಳವಾರ ಸಚಿವರು ನೀಡಿರುವ ಹೇಳಿಕೆಯಂತೂ ಬೇಜವಾಬ್ದಾರಿಯ ಪರಮಾವಧಿ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ಇದನ್ನೂ ಓದಿ: Cauvery water dispute : ಕರ್ನಾಟಕ ಬಂದ್‌ಗೆ ಬಿಜೆಪಿ-ಜೆಡಿಎಸ್‌ ಜಂಟಿ ಬೆಂಬಲ; ಕಾವೇರಲಿದೆಯೇ ಹೋರಾಟ?

ಈ ವಿವರ ಸಚಿವರ ಬಳಿ ಇದೆಯಾ?

ನಾನಿಂದು ಮೆಟ್ಟೂರು ಜಲಾಶಯದ ನೀರಿನ ಮಟ್ಟದ ವಿವರಗಳನ್ನು ತರಿಸಿದ್ದೇನೆ. 124.80 ಅಡಿ ಗರಿಷ್ಠ ಮಟ್ಟದ ಆ ಜಲಾಶಯದಲ್ಲಿ ಬುಧವಾರ 38.02 ಅಡಿ ನೀರಿತ್ತು. 11.09 ಟಿಎಂಸಿ ನೀರು ಸಂಗ್ರಹ ಇದೆ. 7231 ಕ್ಯೂಸೆಕ್ ಒಳಹರಿವು ಇದ್ದರೆ, 6500 ಕ್ಯೂಸೆಕ್ ಹೊರ ಹರಿವು ಇದೆ. ಈ ವಿವರ ಸಚಿವರ ಬಳಿ ಇದೆಯಾ? ಅವರು ಕೊಡುತ್ತಿರುವ ಹೇಳಿಕೆಗಳಿಗೆ ತಾಳಮೇಳ ಇದೆಯಾ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading

ಶಿಕ್ಷಣ

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

SSLC Grace Marks: ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

VISTARANEWS.COM


on

SSLC Grace Marks 20 per cent grace marks CM Siddaramaiah slams education department
Koo

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ರಾಮನಗರ

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Drowned In water : ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ಬಾಲಕರು ನೀರುಪಾಲಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಮನಗರದಲ್ಲೂ ಈಜಲು ಹೋದ 8 ಮಂದಿ ಪೈಕಿ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

VISTARANEWS.COM


on

By

Drowned in water
Koo

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

Illegal Sand Mining: ಮರಳು ಮಾಫಿಯಾದಿಂದ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ. ಆದರೆ, ಅಕ್ರಮಕ್ಕೆ ಕಡಿವಾಣ ಹಾಕಲು ಪೊಲೀಸರು ಹಾಗೂ ಅಧಿಕಾರಿಗಳು ಹೆದರುತ್ತಿದ್ದು, ಅವರಿಗೆ ರಕ್ಷಣೆ ನೀಡಬೇಕು ಎಂದು ಪೊಲೀಸ್‌ ಕಮೀಷನರ್‌ ಹಾಗೂ ಜಿಲ್ಲಾಧಿಕಾರಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮಸ್ಥರು ಮನವಿ ಮಾಡಿದ್ದಾರೆ.

VISTARANEWS.COM


on

Illegal sand mining
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಸುತ್ತಮುತ್ತ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಳವಾಗಿದ್ದು, ಪ್ರಭಾವಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಮರಳು ಮಾಫಿಯಾಗೆ (Illegal Sand Mining) ಕಡಿವಾಣ ಹಾಕಲು ಹೆದರುತ್ತಿರುವ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು ಎಂದು ಗ್ರಾಮಸ್ಥರು, ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಅಕ್ರಮದ ಬಗ್ಗೆ ಸಾಕ್ಷಿ ಸಮೇತ ಕೋಣಾಜೆ ಪೊಲೀಸರು, ಎಸಿಪಿ ಧನ್ಯಾ ನಾಯಕ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ‌ ನೀಡಿದ್ದರೂ, ದಾಳಿ ಮಾಡಿಲ್ಲ. ಮರಳು ಮಾಫಿಯಾದಿಂದ ಗ್ರಾಮಸ್ಥರಿಗೆ ವಿವಿಧ ರೀತಿಯಲ್ಲಿ ತೊಂದರೆ ಆಗುತ್ತಿದೆ. ಆದರೆ, ಪ್ರಭಾವಿಗಳು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವುದರಿಂದ ದಾಳಿ ನಡೆಸಲು ಅಧಿಕಾರಿಗಳು ಹೆದರಿರುವ ಶಂಕೆ ವ್ಯಕ್ತವಾಗಿದ್ದರಿಂದ ಎಸಿಪಿ ಸೇರಿ ಕೋಣಾಜೆ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ರಕ್ಷಣೆ ಕೊಡಿ ಎಂದು ಗ್ರಾಮಸ್ಥರು ಕೋರಿದ್ದಾರೆ.

ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

illegal hunting chikkamagaluru

ಚಿಕ್ಕಮಗಳೂರು: ಶಿಕಾರಿಗೆ (Illegal hunting) ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ (misfire) ಆದ ಪರಿಣಾಮ, ಯುವಕ ಸ್ಥಳದಲ್ಲೇ (crime news) ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ (Chikkamagaluru crime) ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ.

ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂಜಲಿ ಹಂತಕನ ಬಂಧನ, ಸಾರ್ವಜನಿಕರಿಂದ ಗೂಸಾ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

Continue Reading
Advertisement
Jr NTR and Prashanth Neel get the title Dragon from Karan
ಬಾಲಿವುಡ್56 seconds ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ12 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

ambulance-booking
ಆರೋಗ್ಯ14 mins ago

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

SSLC Grace Marks 20 per cent grace marks CM Siddaramaiah slams education department
ಶಿಕ್ಷಣ21 mins ago

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Kannada New Movie powder Teaser Out
ಸ್ಯಾಂಡಲ್ ವುಡ್32 mins ago

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Drowned in water
ರಾಮನಗರ32 mins ago

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Illegal sand mining
ಕರ್ನಾಟಕ34 mins ago

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

RCB vs CSK
ಕ್ರಿಕೆಟ್36 mins ago

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ತಂಡಗಳ ಐಪಿಎಲ್​ ದಾಖಲೆ ಹೇಗಿದೆ?

Narayana Murthy
ದೇಶ42 mins ago

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

IPL 2024
ಪ್ರಮುಖ ಸುದ್ದಿ50 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌