Cauvery water dispute : ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಗುಡುಗು Vistara News
Connect with us

ಕರ್ನಾಟಕ

Cauvery water dispute : ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಗುಡುಗು

Cauvery water dispute : ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್‌ ನೀರನ್ನು 15 ದಿನಗಳ ವರೆಗೆ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀಡಿರುವ ಆದೇಶವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರೋಧಿಸಿದ್ದಾರೆ. ಈ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Basavaraj Bommai and CM Siddaramaiah
Koo

ಬೆಂಗಳೂರು: ಕಾವೇರಿ ಜಲವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ – Cauvery Water Management Authority – CWMA) ಆದೇಶಿಸಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರಕ್ಕೂ ಚಾಟಿ ಬೀಸಿದ್ದು, ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋಗಲು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಸವರಾಜ ಬೊಮ್ಮಾಯಿ ಅವರು, ಈಗ ನೀರು ಬಿಡುವ ಪರಿಸ್ಥಿತಿಯನ್ನು ತಂದುಕೊಂಡಿದ್ದು ರಾಜ್ಯ ಸರ್ಕಾರವೇ ಆಗಿದೆ. ಸುಪ್ರೀಂ ಕೋರ್ಟ್‌ ಆದೇಶಕ್ಕೆ ಮುಂಚೆ ನೀರು ಬಿಟ್ಟು ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಈಗ ಕಾನೂನು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೊಮ್ಮಾಯಿ ಟ್ವೀಟ್‌ನಲ್ಲೇನಿದೆ?

“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲುಆರ್‌ಸಿ) ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ.

ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಸಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು” ಎಂದು ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ.

ಆದೇಶದಲ್ಲೇನಿದೆ?

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯು ನೀಡಿದ್ದ ಆದೇಶವನ್ನು ಮುಂದುವರಿಸಿದೆ. ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ಆದರೆ, 15 ದಿನಗಳ ಕಾಲ ನೀರು ಬಿಡುವ ಲೆಕ್ಕವನ್ನು ಸೆ. 13ರಿಂದ ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Cauvery water dispute : ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಲು CWMA ಆದೇಶ!

ರಾಜ್ಯ ಸರ್ಕಾರದ ನಿರ್ಣಯ ಏನು?

ನಮ್ಮ ಕಾವೇರಿ ನದಿಯಲ್ಲಿಯೇ ನೀರಿಲ್ಲ, ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದರು. ಆದರೆ, ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚನೆ ನೀಡಿರುವುದನ್ನು ರಾಜ್ಯ ಸರ್ಕಾರ ಪಾಲನೆ ಮಾಡುತ್ತದೆಯೇ? ಅಥವಾ ಸೆಡ್ಡು ಹೊಡೆದು ನಿಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ. ಅಲ್ಲದೆ, ಮಂಡ್ಯ ಭಾಗದ ರೈತರು, ವಿರೋಧ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಈಗಾಗಲೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಡೆ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್‌

ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಕರ್ನಾಟಕದ ಜನರಿಗೆ ಬರೆ ಎಳೆದಂತಾಗಿದೆ . ಹೀಗಾಗಿ ಮಂಡ್ಯ ಸೇರಿದಂತೆ ಹಲವೆಡೆ ಪ್ರತಿಭಟನೆ ಜೋರಾಗಿದೆ.

VISTARANEWS.COM


on

Edited by

Protest in Mandya over Cauvery water
Koo

ಕಾವೇರಿ ನೀರು ಹಂಚಿಕೆ ಖಂಡಿಸಿ ಸೆ.23ರಂದು ಮಂಡ್ಯ ಬಂದ್‌‌ಗೆ (Cauvery Protest) ಕರೆ ನೀಡಲಾಗಿದೆ. ಇದರ ಜತೆಗೆ ಬೆಂಗಳೂರು ಗಡಿಭಾಗ ಹಾಗೂ ಮದ್ದೂರಿನಲ್ಲೂ ಬಂದ್‌‌ಗೆ ಕರೆ ಕೊಡಲಾಗಿದೆ. ಬಂದ್‌ಗೆ ವಿವಿಧ ಸಂಘಟನೆಗಳಿಂದ ಸಾಥ್ ಸಿಕ್ಕಿದ್ಯಾ? ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ.

Cauvery Protests in several parts of the state for Cauvery water
ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು
Urulu seve
ರಸ್ತೆಯಲ್ಲಿ ಮಲಗಿ ಉರುಳು ಸೇವೆ ಮಾಡಿದ ವ್ಯಕ್ತಿ
Bike jatha
ಮದ್ದೂರು ರಸ್ತೆಯಲ್ಲಿ ಕಾವೇರಿ ಹೋರಾಟ ಬೈಕ್‌ ಜಾಥಾ ನಡೆಸಿ ಆಕ್ರೋಶ
stores are closed
ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೆಂಬಲ ನೀಡಿದ ಮದ್ದೂರು ಜನತೆ
Protest in bengluru rural
ಬೆಂಗಳೂರು ಗಡಿಭಾಗದಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹಿಸಿ ಆಕ್ರೋಶ
Cauvery Protests in several parts of the state for Cauvery water
ಬೈಕ್‌ ಜಾಥಾ ಮೂಲಕ ಬಂದ್‌ಗೆ ಬೆಂಬಲ ನೀಡುವಂತೆ ಮಾಡಿದ ಹೋರಾಟಗಾರರು
Cauvery Protests in several parts of the state for Cauvery water
ಮಂಡ್ಯದಲ್ಲಿ ಪೆಟ್ರೋಲ್‌ ಬಂಕ್‌ ಮುಚ್ಚಿಸಿದ ಹೋರಾಟಗಾರರು
Cauvery Protests in several parts of the state for Cauvery water
ಕಿವಿಯಲ್ಲಿ ಹೂವಿಟ್ಟುಕೊಂಡು ಪ್ರತಿಭಟಿಸಿದ ಹೋರಾಟಗಾರರು

police alert
ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಬಂದ್‌‌‌ಗೆ ಕರೆ ಕೊಟ್ಟ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ
Puneeth Photo Cauvery Protests in several parts of the state for Cauvery water
ಮಂಡ್ಯದ ಕಾವೇರಿ ಹೋರಾಟದಲ್ಲಿ ಅಪ್ಪು ಚಿತ್ರ
Cauvery Protests in several parts of the state for Cauvery water
ಪುನೀತ್‌ ಫೋಟೊ ಹಿಡಿದು ಕುಳಿತ ಹೋರಾಟಗಾರರು
Cauvery Protests in several parts of the state for Cauvery water
ಬಂದ್‌ ಹಿನ್ನೆಲೆ ರಸ್ತೆಗಿಳಿದ ಬೈಕ್‌ ಸವಾರನನ್ನು ತಡೆಹಿಡಿದ ಮಹಿಳೆ ಹೊಟ್ಟೆಗೆ ಏನ್ ತಿನ್ನುತ್ತೀರಿ ಎಂದು ಆಕ್ರೋಶ
Cauvery Protests in several parts of the state for Cauvery water
ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
Continue Reading

ಕರ್ನಾಟಕ

CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!

CM Siddaramaiah : ಮುಖ್ಯಮಂತ್ರಿಗಳಾದವರು ಶಾಸಕರ ಜತೆ ನಿರಂತರ ಸಂಪರ್ಕದಲ್ಲಿರಬೇಕು ಎನ್ನುವುದನ್ನು ಅರಿತಿರುವ ಸಿದ್ದರಾಮಯ್ಯ ಅದಕ್ಕಾಗಿ ವಾರದಲ್ಲೊಂದು ದಿನ ಫಿಕ್ಸ್‌ ಮಾಡಿದ್ದಾರೆ. ಆಡಳಿತಾತ್ಮಕವಾಗಿಯೂ ಇದು ಉತ್ತಮ ನಿರ್ಧಾರ ಎಂದು ತರ್ಕಿಸಲಾಗಿದೆ.

VISTARANEWS.COM


on

Edited by

CM Siddaramiah new
Koo

ಬೆಂಗಳೂರು: ಇನ್ನು ಮುಂದೆ ಪ್ರತಿ ಶನಿವಾರ ರಾಜ್ಯದ ಯಾವುದೇ ಸಂಸದರು, ಶಾಸಕರು (Every saturday meet with MLAs and MPs) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ (Home office Krishna) ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದು ಸೆಪ್ಟೆಂಬರ್‌ 23ರಿಂದಲೇ ಜಾರಿಗೆ ಬಂದಿದೆ.

ಮುಖ್ಯಮಂತ್ರಿಗಳು ಇನ್ನು ಮುಂದೆ ಪ್ರತಿ ಶನಿವಾರ ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಸಂಸದರು, ರಾಜ್ಯದ ಎಲ್ಲ ವಿಧಾನಸಭೆ ಸದಸ್ಯರು ಮತ್ತು ವಿಧಾನಪರಿಷತ್‌ ಸದಸ್ಯರ ಭೇಟಿಗೆ ಲಭ್ಯವಿರುತ್ತಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮವಿದ್ದು, ಯಾವ ಪಕ್ಷದ ಶಾಸಕರು, ಸಂಸದರು ಬೇಕಾದರೂ ಮುಕ್ತವಾಗಿ ಬಂದು ತಮ್ಮ ಅಹವಾಲುಗಳ ಬಗ್ಗೆ ಮಾತುಕತೆ ನಡೆಸಬಹುದಾಗಿದೆ.

ಭೇಟಿಗೆ ಮೊದಲು ಚೆಕ್‌ ಮಾಡಿಕೊಳ್ಳಿ

ಇದು ಮುಕ್ತವಾದ ಭೇಟಿಯೇ ಆಗಿದ್ದರೂ ಮುಖ್ಯಮಂತ್ರಿಗಳ ಲಭ್ಯತೆಯ ಆಧಾರದಲ್ಲಿ ನಡೆಯುತ್ತದೆ. ಮುಖ್ಯಮಂತ್ರಿ ತೀರಾ ಅನಿವಾರ್ಯವಾದ ಸಂದರ್ಭ ಹೊರತುಪಡಿಸಿ ಪ್ರತಿ ಶನಿವಾರ ಭೇಟಿಗೆ ಲಭ್ಯರಿರುತ್ತಾರೆ. ಅದರೆ, ಮೊದಲೇ ಅವರ ಇರುವಿಕೆಯನ್ನು ಖಾತರಿ ಮಾಡಿಕೊಂಡು ಬರಬಹುದು ಎಂದು ತಿಳಿಸಲಾಗಿದೆ.

ಎಲ್ಲರೂ ಒಂದೇ ಬಾರಿಗೆ ಬಂದು ಭೇಟಿಯಾಗಲು ಒತ್ತಡ ಸೃಷ್ಟಿಸುವುದಕ್ಕಿಂತ ಒಂದು ದಿನ ಎಷ್ಟು ಜನರು ಭೇಟಿಯಾಗಬಹುದು ಎಂಬುದನ್ನು ಪರಿಗಣಿಸಿ ಒಂದು ದಿನದಲ್ಲಿ ಎಷ್ಟು ಮಂದಿಗೆ ಅವಕಾಶ ನೀಡಬಹುದೋ ಅಷ್ಟು ಜನರು ಮಾತ್ರ ಬಂದರೆ ಒಳ್ಳೆಯದು ಎಂದು ತಿಳಿಸಲಾಗಿದೆ.

ಶಾಕಸರು ಮತ್ತು ಸಂಸದರು ಮುಂದಿನ ಶನಿವಾರದ ಭೇಟಿಗಾಗಿ ಮೊದಲೇ ಬುಕ್‌ ಮಾಡಿಕೊಂಡರೆ ಸಮಯಾವಕಾಶದ ಜತೆಗೆ ಸಮಯವನ್ನೂ ನಿಗದಿಪಡಿಸಲು ಅವಕಾಶವಾಗುತ್ತದೆ ಎನ್ನಲಾಗಿದೆ. ವಿಶೇಷಾಧಿಕಾರಿಗಳು ಈ ಎಲ್ಲ ಅಂಶಗಳನ್ನು ಪರಿಗಣಿಸಿ ಭೇಟಿಗೆ ಅವಕಾಶ ಕಲ್ಪಿಸಲಿದ್ದಾರೆ.

ಶಾಸಕರ ಭೇಟಿಗೆ ಅವಕಾಶ ಕೇಳಿದ್ದ ರಾಯರೆಡ್ಡಿ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳು ಶಾಸಕರ ಜತೆಗೆ ಮುಕ್ತವಾಗಿ ಮಾತನಾಡಲು ಅವಕಾಶ ಸಿಗುವುದರಿಂದ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ ಎನ್ನಲಾಗಿದೆ. ರಾಜಕೀಯವಾದುದು, ಇತರ ಸಾಮಾಜಿಕ ವಿಚಾರಗಳಿಗೂ ಇದು ಅನುಕೂಲ ಎನ್ನಲಾಗಿದೆ. ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ತಮಗೆ ಸಿಎಂ ಜತೆ ಮಾತನಾಡಲು ಅವಕಾಶವೇ ಸಿಗುತ್ತಿಲ್ಲ, ಅನುದಾನ ಸಿಗುತ್ತಿಲ್ಲ ಎಂಬ ಕಾರಣ ನೀಡಿಯೇ 17 ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ವ್ಯವಸ್ಥೆಯಲ್ಲಿ ಶಾಸಕರ ಜತೆ ಸಂವಹನ ಅತ್ಯಂತ ಮುಖ್ಯ ಎಂಬುದನ್ನು ಮನಗಂಡು ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: CM Siddaramaiah: ಬರಿಗಾಲಲ್ಲಿ ಬರುವವರನ್ನು ಕಾರಲ್ಲಿ ಓಡಾಡೋರು ಗೌರವಿಸಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

CM and DCM

ಸಿದ್ದರಾಮಯ್ಯ ಸಭೆಗಳೆಂದರೆ ಅತ್ಯಂತ ಗಹನ

ಅದರ ಜತೆಗೆ ಆಡಳಿತಾತ್ಮಕ ವಿಷಯದಲ್ಲಿ ಸಾಕಷ್ಟು ಪರಿಣತಿಯನ್ನು ಹೊಂದಿರುವ ಸಿದ್ದರಾಮಯ್ಯ ಅವರು ಯಾವುದೇ ಸಭೆಯನ್ನಾದರೂ ಪರಿಪೂರ್ಣವಾಗಿ ನಡೆಯುತ್ತದೆ. ಅವರು ನಡೆಸುವ ಕೆಡಿಪಿ ಸಭೆಗಳು, ಅಧಿಕಾರಿಗಳ ಸಭೆಗಳೂ ಅತ್ಯಂತ ಗಹನವಾಗಿರುವುದು ಇದೇ ಕಾರಣಕ್ಕಾಗಿ. ಕೆಲವೊಮ್ಮೆ ಅವರು ಮಧ್ಯಾಹ್ನದ ಊಟವನ್ನೂ ಟೇಬಲ್‌ಗೇ ತರಿಸಿಕೊಂಡು ನಿರಂತರ ಏಳೆಂಟು ಗಂಟೆ ಸಭೆ ನಡೆಸಿದ್ದೂ ಇದೆ. ಹಲವಾರು ವಿಚಾರಗಳ ತೀರ್ಮಾನಗಳು ಅಲ್ಲೇ ನಡೆಯುತ್ತವೆ. ಏನು ಮಾಡಬೇಕು, ಏನು ಮಾಡಬಾರದು ಎಂಬ ಸ್ಪಷ್ಟ ಸೂಚನೆಯನ್ನು ಅಲ್ಲೇ ನೀಡಲಾಗುತ್ತದೆ.

Continue Reading

ಕರ್ನಾಟಕ

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

KSOU Exam : ಬಿಕಾಂನ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಪ್ರಶ್ನೆ ಪತ್ರಿಕೆ ಪರೀಕ್ಷೆ ಮುನ್ನಾದಿನ ಲೀಕ್‌ ಆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗಿದ್ದರೆ ಪರೀಕ್ಷೆ ಯಾವಾಗ?

VISTARANEWS.COM


on

Edited by

Karnataka State Open University
Koo

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (Karnataka State Open University) ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ (Computer in Business) ಪರೀಕ್ಷೆಯನ್ನು ಮತ್ತೆ ನಡೆಸಲು (Re examination) ನಿರ್ಧರಿಸಿದೆ. ಸೆಪ್ಟೆಂಬರ್‌ 21ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ (KSOU Exam) ಒಂದು ದಿನ ಮೊದಲೇ ವಾಟ್ಸ್‌ ಆಪ್‌ನಲ್ಲಿ ಹರಿದಾಡಿತ್ತು. ಅದನ್ನು ಎರಡು ಸಾವಿರ ರೂ.ಗಳಿಗೆ ಮಾರಾಟ (Question paper sold) ಮಾಡಲಾಗಿದೆ ಎಂಬ ಬಗ್ಗೆ ದೂರು ದಾಖಲಾಗಿತ್ತು. ಇದೀಗ ವಿವಿಯು ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಮರು ಪರೀಕ್ಷೆ ದಿನಾಂಕವನ್ನು ಸದ್ಯವೇ ಪ್ರಕಟಿಸಲಾಗಿದೆ.

ಪರೀಕ್ಷೆಗೆ ಒಂದು ದಿನ ಮೊದಲೇ ವಿಶ್ವವಿದ್ಯಾಲಯದ ಬಿಕಾಂನ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಕೆಲವರ ಕೈಯಲ್ಲಿತ್ತು. ಕೆಎಸ್‌ಓಯು ಮಂಗಳೂರು (KSOU Mangalore Center) ಕೇಂದ್ರದ ಸಿಬ್ಬಂದಿ 2000 ರೂ.ಗೆ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಆರೋಪಿಗಳಿಗೆ ಕಳುಹಿಸಿರುವ ಶಂಕೆ ವ್ಯಕ್ತವಾಗಿತ್ತು. ಪರೀಕ್ಷೆ ದಿನ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಮಾರಾಟವಾದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದ್ದವು. ಈ ಬಗ್ಗೆ ಚಂದು.ಹೆಚ್.ಎಸ್. ಎಂಬ ವಿದ್ಯಾರ್ಥಿ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ಪೊಲೀಸರು ನವೀನ್‌ ಮತ್ತು ಮುರಳೀಧರ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

exam question paper

ಪ್ರಶ್ನೆ ಪತ್ರಿಕೆ ಮಾರಾಟ
ವಿದ್ಯಾರ್ಥಿಗಳು ಭಾರಿ ಕಷ್ಟಪಟ್ಟು ಓದಿರುತ್ತಾರೆ. ಸಿಬ್ಬಂದಿಗಳು ಈ ರೀತಿ ಮೋಸದಾಟ ಆಡುವುದರಿಂದ ಅವರಿಗೆ ಅನ್ಯಾಯವಾಗುತ್ತದೆ ಎಂಬ ಮಾತು ಕೇಳಿಬಂದಿದೆ. ಅದಕ್ಕಿಂತಲೂ ಹೆಚ್ಚಾಗಿ ಮುಕ್ತ ವಿವಿಯಲ್ಲಿ ಓದುವ ಹೆಚ್ಚಿನವರು ಬೇರೆ ಬೇರೆ ಉದ್ಯೋಗಗಳಲ್ಲಿ ಇದ್ದಾರೆ. ಅವರು ತಮ್ಮ ಕೆಲಸ ಕಾರ್ಯಗಳ ನಡುವೆ ಕಷ್ಟಪಟ್ಟು ಸಮಯ ಹೊಂದಾಣಿಕೆ ಮಾಡಿಕೊಂಡು ಓದುತ್ತಿರುತ್ತಾರೆ. ಹೆಚ್ಚಿನವರಿಗೆ ಒಂದು ದಿನ ಪರೀಕ್ಷೆಗೆ ಅಟೆಂಡ್‌ ಆಗಲೂ ಆಗದಷ್ಟು ಕೆಲಸದ ಒತ್ತಡ ಇರುವುದಿಲ್ಲ, ಹೆಚ್ಚಿನವರಿಗೆ ರಜೆಯೂ ಸಿಗುವುದಿಲ್ಲ. ಇಂಥವರಿಗೆ ಮರು ಪರೀಕ್ಷೆ ಕೂಡಾ ಒಂದು ದೊಡ್ಡ ಹೊರೆಯೇ. ಹೀಗಾಗಿ ವಿಶ್ವವಿದ್ಯಾಲಯ ಈ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಬೇಕು, ಈ ಮೂಲಕ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ತಡೆಯುವುದು ಮಾತ್ರವಲ್ಲ, ವಿವಿಯ ಘನತೆಯನ್ನು ಉಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: KSOU Scam: ಕೆಎಸ್‌ಒಯು ಹಗರಣದ ತನಿಖೆಗೆ ಸಿಬಿಐ ಎಂಟ್ರಿ

Continue Reading

ಕರ್ನಾಟಕ

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

VISTARANEWS.COM


on

Edited by

gold
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 79.30, ಎಂಟು ಗ್ರಾಂ ₹ 634.40 ಮತ್ತು 10 ಗ್ರಾಂ ₹ 793ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,930 ಮತ್ತು 1 ಕಿಲೋಗ್ರಾಂಗೆ ₹ 79,300 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
54,990 59,930
ಮುಂಬಯಿ54,950 59,950
ಬೆಂಗಳೂರು
54,950 59,950
ಚೆನ್ನೈ 55,210 60,320

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading
Advertisement
Mannangatti Poster
South Cinema28 seconds ago

Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್‌!

Kannada Serials
ಕಿರುತೆರೆ2 mins ago

Kannada Serials TRP: ʻಅಮೃತಧಾರೆʼ ಬೀಟ್‌ ಮಾಡಿದ ʻಗಟ್ಟಿಮೇಳʼ; ಟಿಆರ್‌ಪಿ ರೇಸ್‌ನಲ್ಲಿ ʻಶ್ರೀರಸ್ತು ಶುಭಮಸ್ತುʼ!

Protest in Mandya over Cauvery water
ಕರ್ನಾಟಕ2 mins ago

Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್‌

CM Siddaramiah new
ಕರ್ನಾಟಕ21 mins ago

CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!

Narendra Modi And Justin Trudeau
ದೇಶ57 mins ago

India Canada Row: ಆನೆ ಜತೆ ಇರುವೆ ಜಗಳವಾಡುತ್ತಿದೆ! ಕೆನಡಾಗೆ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಗೇಲಿ!

Karnataka State Open University
ಕರ್ನಾಟಕ59 mins ago

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

Vijay Raghavendra
South Cinema1 hour ago

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Bigg boss Kannada
ಬಿಗ್ ಬಾಸ್1 hour ago

Bigg Boss Kannada: ಬಿಗ್​ಬಾಸ್ ಕನ್ನಡ ಹತ್ತನೇ ಸೀಸನ್ ಆಟಕ್ಕೆ ದಿನಾಂಕ ಫಿಕ್ಸ್‌!

gold
ಕರ್ನಾಟಕ1 hour ago

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

Rain day Girl enjoying
ಉಡುಪಿ1 hour ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ7 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌