CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Vistara News

ರಾಜಕೀಯ

CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

CM Siddaramaiah: ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.9ಕ್ಕೆ ಮತ್ತೆ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್‌ ಸಿಕ್ಕಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಸೆ.9ಕ್ಕೆ ಮುಂದೂಡಿಕೆಯಾಗಿದೆ. ಕಳೆದ ವಿಚಾರಣೆಯಲ್ಲಿ ರಾಜ್ಯಪಾಲರ ಪರವಾಗಿ ವಕೀಲ ತುಷಾರ ಮೆಹ್ತಾ , ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ಹಾಗೂ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ (ಸೆ.2) ಮಧ್ಯಾಹ್ನಕ್ಕೆ ಮುಂದೂಡಿತ್ತು.

ಇಂದು ಸೋಮವಾರ (ಸೆ.2) ಮತ್ತೆ ಪ್ರತಿವಾದಿಗಳ ಪರ ಕೆಲ ವಕೀಲರಿಂದ ವಾದ ಮಂಡನೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಆಗಮಿಸಿದ್ದರು. ದೂರದಾರ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಆರಂಭಿಸಿದ್ದರು. 17A ಸಂಬಂಧಿಸಿದಂತೆ ಅನುಮತಿ ಬೇಕೋ, ಬೇಡವೋ ಎಂಬುದರ ಬಗ್ಗೆ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಮಂಡನೆ ಮಾಡಿದರು. 17-A ಮೇಲೆ ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪ್ರಕರಣದ ಗಂಭೀರತೆ ಮತ್ತು ದಾಖಲೆ ಇದ್ದರೆ ಸಾಕು, ಪೊಲೀಸ್‌ ಅಧಿಕಾರಿಗಳು ಯಾವುದೇ ಮನವಿ ಕೂಡಾ ಸಲ್ಲಿಸುವ ಅಗತ್ಯವಿಲ್ಲ. ಈ ಪ್ರಕರಣದಲ್ಲಿ ಕೆಲ ತಪ್ಪುಗಳು ಆಗಿವೆ.

ಅಂತಹ ಸಂದರ್ಭವನ್ನು ಸಹ 17-a ಅಡಿಯಲ್ಲಿ ಕೊಡಬಹುದು. The procedures is improper ಹೀಗಾಗಿ ತನಿಖೆ ಆಗಬೇಕು. ಖಾಸಗಿ ದೂರುದಾರ ನೇರವಾಗಿ ಯಾವಾಗ ಹೋಗಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ನೇರವಾಗಿ ಸಂಬಂಧ ಹೊಂದಿಲ್ಲದಿದ್ದರೂ ಸಾರ್ವಜನಿಕ ಸೇವಕರಾಗಿ ಪ್ರಭಾವ ಬೀರಿದರೆ ಅದು ಸೆಕ್ಷನ್‌ 17A ಅಡಿ ಬರುತ್ತದೆ. ಸಿಎಂ ಮಾಡದಿದ್ದರೂ ಅವರ ಪ್ರಭಾವದಿಂದ ಆಗಿದ್ದರೂ ಈ ಕಾಯಿದೆ ಅಡಿಯಲ್ಲಿ ಬರುತ್ತೆ. ಅಧಿಕಾರಿಯನ್ನು ಉಪಯೋಗಿಸಿಕೊಂಡು ಆಗಿದ್ದರೂ ಅದು ಅಧಿಕಾರ ದುರುಪಯೋಗ ಆಗುತ್ತದೆ ಎಂದು ರಾಘವನ್ ವಾದಿಸಿದ್ದರು.

ಒಬ್ಬ ಸಚಿವ ತನ್ನ ಇಲಾಖೆಯಲ್ಲದೇ ಬೇರೆಡೆ ಪ್ರಭಾವ ಬೀರಿದರೂ ಅದು ಅಪರಾಧವೇ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯತೆ ತರಲು ಈ ಕಾಯ್ದೆ ರಚಿಸಲಾಗಿದೆ. 17-a ಇರುವುದೇ ಆಡಳಿತದಲ್ಲಿ ಭ್ರಷ್ಟಾಚಾರ ತಡೆಯುವುದಕ್ಕೆ, ಹೀಗಾಗಿ ಇದನ್ನು ನಾವು ಸಣ್ಣ ವಿಚಾರ ಎಂದು ನೋಡಬಾರದು. ಇದನ್ನು ನಾವು ವಿವರವಾಗಿ ವಿಸ್ತಾರವಾಗಿ ಅರ್ಥ ಮಾಡಿಕೊಳ್ಳಬೇಕು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಬಳಿಕ ನ್ಯಾಯಾಧೀಶರ ತನಿಖೆ ಆಗಬೇಕು. ಇಲ್ಲದಿದ್ದರೆ ಇಂತಹ ವರದಿಗಳು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುತ್ತಾರೆ. ಈ ವೇಳೆ ನೀವು ಕಮೀಷನರ್ ತನಿಖೆಗೆ ಸಮ್ಮತಿ ನೀಡುತ್ತೀರಾ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದಾಗ ಸಾರ್ವಜನಿಕ ವಿಶ್ವಾಸಾರ್ಹತೆಯ ದೃಷ್ಟಿಯಿಂದ ಪ್ರಕರಣವನ್ನು ನೋಡಬೇಕು. ಸರ್ಕಾರ ನ್ಯಾಯಾಂಗ ಆಯೋಗ ರಚಿಸಿರುವುದೇ ತನಿಖೆ ನಡೆಸಬೇಕೆಂದು. ನ್ಯಾಯಾಲಯವು ತನಿಖೆ ನಡೆಸಬೇಕು ಎಂಬುದರ ಪರವಾಗಿರಬೇಕು. ಏಕೆಂದರೆ ಸಾರ್ವಜನಿಕ ಶುಚಿತ್ವ ಕಾಪಾಡುವುದು ಇಲ್ಲಿ ಅಗತ್ಯಇದೆ. ಇಲ್ಲಿ ಕ್ಲೀನ್‌ಚಿಟ್‌ ನೀಡಬಹುದು ಎಂದು ರಾಘವನ್‌ ವಾದಿಸಿದರು.

ಡಿಸಿಎಂ ಆಗಿದ್ದ ವೇಳೆ ಹಗರಣ

ಅರ್ಜಿದಾರರು (ಸಿದ್ದರಾಮಯ್ಯ) ಡಿಸಿಎಂ ಆಗಿದ್ದ ವೇಳೆ ಈ ಹಗರಣ ನಡೆದಿದೆ. ಕೆಸರೆ ಗ್ರಾಮದಲ್ಲಿದ್ದ ಲ್ಯಾಂಡ್‌ ಲಿಂಗ ಎಂಬಾತನಿಗೆ ಸೇರಿದ್ದು, ಅವರಿಗೆ ಮಲ್ಲಯ್ಯ, ಮೈಲರಾಯ್ಯ ಹಾಗೂ ದೇವರಾಜು ಎಂಬುವವರು ಮೂವರು ಮಕ್ಕಳಿದ್ದಾರೆ. ಮೈಲಾರಯ್ಯ ಅವರಿಗೆ ದೇವರಾಜ ಮತ್ತು ಮಲ್ಲಯ್ಯ ಜಮೀನನ್ನು ಮಾರಾಟ ಮಾಡಿದ್ದರು. ಇದರಲ್ಲಿ ಹಕ್ಕು ಖುಲಾಸೆಯೂ ಆಗಿದೆ. ಮೈಲಾರಯ್ಯ 3.16 ಎಕರೆ ಭೂಮಿಯ ಮಾಲೀಕರಾಗಿದ್ದರು. ಇಲ್ಲಿ ದೇವರಾಜು ಆಕ್ಷೇಪಾರ್ಹವಾದ ಭೂಮಿಯ ಡಿನೋಟಿಫಿಕೇಶನ್‌ ಕೋರಿದ್ದಾರೆ. ಭೂ ಪರಿವರ್ತನೆ ಮಾಡಲು ಮಲ್ಲಿಕಾರ್ಜುನಯ್ಯ ಎಂಬುವರು ಸಲ್ಲಿಸಿದ ಅರ್ಜಿ ವಕೀಲ ರಾಘವನ್ ಓದಿ ಹೇಳಿದರು.

ದೇವರಾಜು ಭೂ ಮಾಲೀಕರಾಗಿರಲ್ಲಿಲ್ಲ. ಆದರೆ 2004ರಲ್ಲಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿಗೆ ದೇವರಾಜು ಭೂಮಿ ಮಾರಾಟ ಮಾಡಿದ್ದಾರೆ. ದೇವರಾಜ ಹೆಸರಿಗೆ ಡಿನೋಟಿಫಿಕೇಷನ್ ಕೇಳಿದ್ದರು. ಆದರೆ ಇದು ಮೈಲಾರಯ್ಯ ಹೆಸರಲ್ಲಿ ಜಮೀನು ಇದೆ. 1999 ನೋಟಿಫಿಕೇಷನ್ ಆದ ಜಮೀನಿಗೆ ಪರಿಹಾರ ಕೊಟ್ಟರು. ಇವರಿಗೆ ಮಾತ್ರ ಡಿನೋಟಿಫಿಕೇಷನ್ ಆಯಿತು ಎಂದು ದೇವನೂರು ಬಡವಾಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಬಗ್ಗೆ ಉಲ್ಲೇಖಿಸಿದರು.

ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ರಾಘವನ್ ಮನವಿ

ಸರ್ಕಾರವೇ ಈ ಪ್ರಕರಣ ಸಂಬಂಧ ತನಿಖೆ ಅಗತ್ಯವಿದೆ ಎಂದು ಭಾವಿಸಿ ಆಯೋಗ ರಚಿಸಿದೆ. ಹೀಗಾಗಿ ರಾಜ್ಯಪಾಲರು 17 A ಅಡಿ ಅನುಮತಿ ನೀಡಿರುವುದು ಸರಿಯಿದೆ. ಈ ಹಂತದಲ್ಲಿ ತನಿಖೆಯನ್ನು ತಡೆಹಿಡಿಯಬಾರದು. ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ರಾಘವನ್ ಮನವಿ ಮಾಡಿದ್ದರು. ಮೂರು ಎಕರೆಗಿಂತ ಹೆಚ್ಚಿನ ಭೂಮಿ ಸ್ವಾಧೀನವಾದರೆ 4800 ಚದರಡಿ ಪರಿಹಾರ ನೀಡಬೇಕು. 1994ರ ನಿಯಮದ ಪ್ರಕಾರ ಎರಡು ಸೈಟಿಗಷ್ಟೇ ಅವಕಾಶವಿದೆ. ಮುಡಾ ವಶಪಡಿಸಿಕೊಂಡ ಮೇಲೆ ದೇವರಾಜು ಹೇಗೆ ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಾಟ ಮಾಡುತ್ತಾರೆ? ಸರಳವಾದ ತನಿಖೆ ನಡೆಯಬೇಕಾದ ಈ ಪ್ರಕರಣಕ್ಕೆ ನ್ಯಾಯಾಲಯದ ಇಷ್ಟು ಸಮಯ ತೆಗೆದುಕೊಳ್ಳುವ ಅಗತ್ಯವೇನಿದೆ? ತನಿಖೆ ಆದ ಮೇಲೆ ಆಗಿದೀಯಾ, ಇಲ್ಲವೋ ಗೊತ್ತಾಗಲಿದೆ. ಈ ಪ್ರಕರಣವನ್ನು ಕಾಂಪ್ಲಿಕೇಟ್ ಮಾಡಿದ್ದೇವೆ.

2003 ರಲ್ಲಿ ಮತ್ತೆ ಡಿನೋಟಿಫಿಕೇಷನ್ ಆಗುತ್ತದೆ. 2005ರಲ್ಲಿ ದೇವರಾಜ ಅವರು ಮಲ್ಲಿಕಾರ್ಜುನಯ್ಯಗೆ ಜಮೀನು ಮಾರಾಟ ಮಾಡುತ್ತಾರೆ. ಬಳಿಕ ಮಲ್ಲಿಕಾರ್ಜುನಯ್ಯ ಸಹೋದರಿ ಪಾವರ್ತಮ್ಮರಿಗೆ ಗಿಫ್ಟ್ ಕೊಡುತ್ತಾರೆ. ಪಾರ್ವತಮ್ಮ ನನಗೆ ಪರ್ಯಾಯ ನಿವೇಶನ ಕೊಡಿ ಎಂದು ಮನವಿ ಮಾಡಿದ್ದಾರೆ. ಇಲ್ಲಿ ಅರ್ಜಿದಾರರ ಬಾಮೈದನಿಂದ ಸಿಎಂ ಪತ್ನಿ ಪಾರ್ವತಿ ಹೆಸರಿಗೆ ದಾನ ಪತ್ರ ರಿಜಿಸ್ಟರ್ ಆಗಿದೆ. ಅದಕ್ಕೆ ಸಂಬಂಧಿಸಿದಂತೆ ಪರಿಹಾರ ಕೇಳುತ್ತಾರೆ. ಸಾಮಾನ್ಯ ಅರ್ಜಿದಾರರಂತೆ ಅರ್ಜಿ ಹಾಕಿದ್ದಾರೆ. 2015ರಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನಡೆದಿದೆ. ಸಿಎಂ ಪತ್ನಿ ಅಲ್ಲದೇ ಬೇರೆ ಯಾರಾದರೂ ಈ ಸ್ಥಾನದಲ್ಲಿದ್ದರೆ ಕೋರ್ಟ್ ಆದೇಶ ಪಡೆದು ಮುಡಾ ಸಂಪರ್ಕಿಸಬೇಕಿತ್ತು. ಇಲ್ಲಿ ಪಾರ್ವತಿ ಅವರು ಸಿಎಂ ಪತ್ನಿ ಆಗಿರುವುದರಿಂದ ಅದ್ಯಾವುದೂ ನಡೆದಿಲ್ಲ. ಮಾಲೀಕರೇ ಅಲ್ಲದವರಿಗೆ ಯಾವ ರೀತಿ ನಿವೇಶನ ಕೊಟ್ಟರು. ಈ ಪ್ರಕರಣದಲ್ಲಿ ಆಗಿರುವ ಎಲ್ಲ ವ್ಯವಹಾರಗಳು ದುರುದ್ದೇಶ ಪೂರಕವಾಗಿವೆ ಎಂದು ರಾಘವನ್‌ ಲಾ ಪಾಯಿಂಟ್‌ ಹಾಕಿದರು.

ಮಾಲೀಕನೇ ಅಲ್ಲದವನಿಂದ ಡಿನೋಟಿಫಿಕೇಷನ್‌ಗೆ ಅರ್ಜಿ ಸಲ್ಲಿಕೆ

ಡಿನೋಟಿಫಿಕೇಷನ್ ಕೇಳಿ ಅರ್ಜಿ ಸಲ್ಲಿಸಿದ್ದು ದೇವರಾಜು, ಆದರೆ ದೇವರಾಜು ಆಗ ಜಮೀನಿನ ಮಾಲೀಕನೇ ಅಲ್ಲ. 20.08.1997 ರಂದು ಅಂತಿಮ ಭೂಸ್ವಾಧೀನ ಅಧಿಸೂಚನೆಯಾಯಿತು. 30.03.1998 ರಂದು ಜಮೀನಿಗೆ ಪರಿಹಾರವೂ ನಿಗದಿಯಾಯಿತು. 18.05.1998 ರಂದು 3.16 ಎಕರೆ ಜಮೀನು ಡಿನೋಟಿಫೈ ಮಾಡಲಾಯಿತು. 25.08.2004 ರಂದು ದೇವರಾಜು ಈ ಜಮೀನನ್ನು ಬಿ.ಎಂ.ಮಲ್ಲಿಕಾರ್ಜುನ್ ಗೆ ಮಾರಾಟ ಮಾಡಿದ್ದರು. ನಂತರ ಭೂಪರಿವರ್ತನೆಗೂ ಮುನ್ನ ನಿವೇಶನ ಸ್ಥಳ ತನಿಖೆ ಮಾಡಲಾಯಿತು. ಭೂಪರಿವರ್ತನೆ ವೇಳೆಗಾಗಲೇ ಭೂಸ್ವಾಧೀನಗೊಂಡು ಸೈಟ್ ಹಂಚಲಾಗಿತ್ತು. ಈ ಅಕ್ರಮಗಳ ಬಗ್ಗೆ ತನಿಖೆಯ ಅಗತ್ಯವಿದೆ. ತನಿಖೆಯನ್ನು ತಡೆಹಿಡಿಯಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇಕೆ ಎಂಬುದೇ ಅಚ್ಚರಿ. ಸಾಮಾನ್ಯ ದೂರು ಬಂದರೂ ಇಂತಹ ವಿಚಾರದಲ್ಲಿ ತನಿಖೆ ಆಗಬೇಕು ಎಂದು ರಾಘವನ್ ವಾದ ಮಂಡಿಸಿದ್ದರು.

40-60 ಫಾರ್ಮುಲಾ ಸೆಟಲ್ಮೆಂಟ್‌ಗೆ ಒಪ್ಪದ ಪಾರ್ವತಮ್ಮ

ಮುಡಾ ಪ್ರಾಧಿಕಾರದ 40-60 ಫಾರ್ಮುಲಾ ಸೆಟಲ್ಮೆಂಟ್‌ಗೆ ಒಪ್ಪದ ಪಾರ್ವತಮ್ಮ (ಸಿದ್ದರಾಮಯ್ಯ ಪತ್ನಿ) ಜಮೀನು ಕೊಡಿಸುಂತೆ ಪತ್ರ ಕೊಟ್ಟಿದ್ದರು. ಲೇಔಟ್ ಅಭಿವೃದ್ಧಿ ಪಡಿಸಿರುವುದರಿಂದ ಅವರಿಗೆ ಬದಲಿ ನಿವೇಶನ ಕೊಡಲು ಒಪ್ಪಿಗೆ ಸೂಚಿಸಿದ್ದರು. ಒಂದು ಕಡೆ ಪರಿಹಾರ ಕೊಟ್ಟಿದ್ದಾರೆ, ಮತ್ತೊಂದು ಕಡೆ 14 ನಿವೇಶನಗಳನ್ನು ಪಡೆದಿದ್ದಾರೆ. ಕಡಿಮೆ ಬೆಲೆಯ ಜಮೀನು ಕೊಟ್ಟು, ಹೆಚ್ಚು ಬೆಲೆ ಬಾಳುವ ಜಮೀನು ಪಡೆಯಲು ಮುಂದಾಗಿದ್ದಾರೆ. ಕೆಸರೆ ಜಮೀನು ಕೊಟ್ಟು ವಿಜಯನಗರ ನಿವೇಶನ ಪಡೆಯಲು ಮನವಿ ನೀಡಿದ್ದಾರೆ. ಅಧಿಕಾರಿಗಳು ಸಹ ಇದಕ್ಕೆ ಮೌನ ವಹಿಸಿದ್ದಾರೆ. ಇದರಲ್ಲಿ ಎಲ್ಲವೂ ಅನುಮಾನಕ್ಕೆ ಕಾರಣವಾಗಿವೆ. ಹೀಗಾಗಿ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಬೇಕೆಂದು ರಾಘವನ್‌ ವಾದಿಸಿದರು.

ಆಸ್ತಿಯ ಮೌಲ್ಯಕ್ಕೆ ಸಂಬಂಧಿಸಿದಂತೆ ಮುಡಾ ಪ್ರಾಧಿಕಾರ ವಿವೇಚನೆ ಬಳಸಿಲ್ಲ. ಎಲ್ಲಾ ವಿಚಾರಗಳನ್ನು ಗಾಳಿಗೆ ತೂರಿರುವುದರಿಂದ ತನಿಖೆ ನಡೆಯಬೇಕಿದೆ. ಪ್ರಾಧಿಕಾರ ಇಷ್ಟು ನಡು ಬಗ್ಗಿಸಿರುವುದನ್ನು ನಾನು ಹಿಂದೆಂದೂ ನೋಡಿಲ್ಲ. 2017-21ರಿಂದ ಯಾವುದೇ ಬೆಳವಣಿಗೆಯಾಗುವುದಿಲ್ಲ. 2021ರ ಡಿಸೆಂಬರ್‌ನಲ್ಲಿ 38 ಸಾವಿರ ಚದರ ಅಡಿ ಜಾಗವನ್ನು ಸಿಎಂ ಪತ್ನಿಗೆ ಮುಡಾ ಹಂಚಿಕೆ ಮಾಡುತ್ತೆ. ಅದಕ್ಕೆ 2017ರಲ್ಲಿ ತೆಗೆದುಕೊಂಡ ನಿರ್ಣಯವನ್ನು ಲಿಂಕ್ ಮಾಡಿದೆ.

ಸುಣ್ಣಕ್ಕೆ ಬೆಣ್ಣೆಯ ಬೆಲೆ – ರಾಘವನ್‌ ಪ್ರಶ್ನೆ

ಒಂದು ತಪ್ಪಾದರೆ ಸರಿ, ಪದೆಪದೇ ತಪ್ಪಾದರೆ ದುರುದ್ದೇಶವಿದೆ ಎಂದರ್ಥ. 1998ರಲ್ಲಿ 3.16 ಎಕರೆಗೆ 3.24 ಲಕ್ಷ ರೂಪಾಯಿ ಪರಿಹಾರ ನಿಗದಿಪಡಿಸಲಾಗಿತ್ತು. ಆದರೆ ಸಿಎಂ ಪತ್ನಿಗೆ 3.24 ಲಕ್ಷ ರೂಪಾಯಿಯ ಪರಿಹಾರ ಕೊಡುತ್ತಿದ್ದೀರಾ. 14 ಸೈಟಿನ ಮೌಲ್ಯ ಎಷ್ಟಿದೆ, ಸುಣ್ಣಕ್ಕೆ ಬೆಣ್ಣೆಯ ಬೆಲೆ ನೀಡುತ್ತಿದ್ದೀರಾ ಎಂದು ರಾಘವನ್ ಪ್ರಶ್ನೆ ಮಾಡಿದರು. 1998 ರ ಭೂಸ್ವಾಧೀನಕ್ಕೆ 2015ರ ನೋಟಿಫಿಕೇಷನ್ ಅನ್ವಯಿಸಿದ್ದೀರಿ. ಮಾಲೀಕರೇ ಡಿನೋಟಿಫಿಕೇಷನ್ ಮಾಡಿದ್ದೀರಿ. ಕಡಿಮೆ ಬೆಲೆಯ ಜಮೀನಿಗೆ ಅತಿ ಹೆಚ್ಚಿನ ಪರಿಹಾರ ನೀಡಿದ್ದೀರಿ. ತನಿಖೆ ನಡೆಸಲು ಇನ್ನೆಷ್ಟು ಸಂಗತಿಗಳು ಬೇಕು. ಸಿಎಂ ಮತ್ತು ಈ ಘಟನೆಗೂ ಸಂಬಂಧವೇನು ಎಂಬ ಪ್ರಶ್ನೆ ಕೇಳಿದ್ದೀರಿ. ಈ ಎಲ್ಲಾ ಘಟನೆ ನಡೆದಾಗ ಸಿದ್ದರಾಮಯ್ಯ ಡಿಸಿಎಂ ಅಥವಾ ಸಿಎಂ ಆಗಿದ್ದರು ಎಂದು ಅರ್ಜಿದಾರರ ಪರ ರಾಘವನ್‌ ವಿವರಿಸಿದರು.

ಒಂದು ಸೈಟ್‌ಗೂ ಅರ್ಹತೆ ಇಲ್ಲದವರಿಗೆ 14 ಸೈಟ್ ನೀಡಿರುವುದು ಎಷ್ಟು ಸರಿ?

2015ರಲ್ಲಿ 50 :50 ಅನುಪಾತದಲ್ಲಿ ಹಂಚಿಕೆ ಮಾಡುವಂತೆ ನಿಯಮ ರೂಪಿಸಲಾಯಿತು. 23.6.2014ರಲ್ಲಿ ಸಿಎಂ ಪತ್ನಿ ಮನವಿ ಸಲ್ಲಿಸಿದ್ದರು. 1998 ರ ಭೂಸ್ವಾಧೀನಕ್ಕೆ 2015 ರ 50 50 ನಿಯಮ ಅನ್ವಯಿಸಲು ಸಾಧ್ಯವೇ? 2017 ಡಿಸೆಂಬರ್ ತಿಂಗಳಿನಲ್ಲಿ ಸಿಎಂ ಪತ್ನಿಗೆ 50 :50 ಹಂಚಿಕೆ ನಿರ್ಣಯಿಸಲಾಯಿತು. ಸಿಎಂ ಗೂ ಮುಡಾ ಹಗರಣಕ್ಕೂ ಸಂಬಂಧವಿದೆಯೇ ಎಂದರೆ ಹೌದು ಎನ್ನುತ್ತೇನೆ. ಸಿಎಂ ಹಾಗೂ 2017 ರಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಕ್ಕೂ ಸಂಬಂಧವಿದೆ. ಒಂದು ಸೈಟ್‌ಗೂ ಅರ್ಹತೆ ಇಲ್ಲದವರಿಗೆ 14 ಸೈಟ್ ನೀಡಿದ್ದಾರೆ. ಇಂತಹ ಕೃತ್ಯಕ್ಕೆ ತನಿಖೆ ಅವಶ್ಯಕತೆ ಇಲ್ಲವೆಂದು ಹೇಳಲು ಸಾಧ್ಯವೇ? 2017 ರ ನಿರ್ಣಯಕ್ಕೂ ಅಧಿಕಾರದಲ್ಲಿದ್ದದ್ದಕ್ಕೂ ಸಂಬಂಧವಿದೆ. ವಿಸ್ತೃತವಾದ ನೆಲೆಯಲ್ಲಿ ಪ್ರಕರಣವನ್ನು ನೋಡಬೇಕು ಎಂದು ಹಿರಿಯ ವಕೀಲ ರಾಘವನ್ ವಾದ ಮುಕ್ತಾಯಗೊಳಿಸಿದರು.

ಬಳಿಕ ನ್ಯಾಯಮೂರ್ತಿಗಳು ಸೆ.9ಕ್ಕೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿದರು. ಸೆ.9ರಂದು ಎಜಿ ಶಶಿಕಿರಣ್‌ ಆಡಟ್ಟು ವಾದ ಮಂಡಿಸಲಿದ್ದು, ಸೆ.12ರಂದು ಸಿಎಂ ಪರ ಅಭಿಷೇಕ್‌ ಸಿಂಗ್ವಿ ವಾದ ಮಾಡಲಿದ್ದಾರೆ.

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​ ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

VISTARANEWS.COM


on

ಬೆಂಗಳೂರು, ಏ.19: ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇಂಡಿಯಾ ಒಕ್ಕೂಟಕ್ಕೆ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಾಗೂ ಕ್ಷೇತ್ರ ವಿಂಗಡಣೆ ವಿರುದ್ದ ಪ್ರತಿಭಟಿಸಿದ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳ ಹೋರಾಟಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕಂತಹ ದೊಡ್ಡ ಜಯ. ಮಹಿಳೆಯರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ನಿಂತಿದೆ. ಇಲ್ಲಿ ಯಾರಿಗೂ ಅವಮಾನವಾಗಿಲ್ಲ” ಎಂದರು.
ಸಂವಿಧಾನ ತಿದ್ದುಪಡಿ ಮಾಡುವಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಮಹಿಳಾ ಮೀಸಲಾತಿ ಕಾಯ್ದೆ ಕಾಂಗ್ರೆಸ್ ಪಕ್ಷದ ಕನಸು ಮತ್ತು ಕೂಸು. ಇದರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಬಿಜೆಪಿ ಸರ್ಕಾರ ಮಾಡಿರುವ ನಿರ್ಧಾರ ಸರಿಯಾದ ಸಮಯವಲ್ಲ. ನಮ್ಮದು ಹಿಟ್ಲರ್ ಆಡಳಿತವಲ್ಲ” ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸಬೇಕಿತ್ತು. ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ತರುವ ಪ್ರಮೇಯವೇನಿತ್ತು. ಇಂಡಿಯಾ ಒಕ್ಕೂಟದ ಎಲ್ಲಾ ಸದಸ್ಯರಿಗೆ ನಾನು ಶುಭಾಶಯಗಳನ್ನು ತಿಳಿಸುತ್ತೇನೆ ಎಂದೂ ಶಿವಕುಮಾರ್‌ ಹೇಳಿದ್ದಾರೆ.
ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ
ವಿಪಕ್ಷಗಳ ವಿರುದ್ದ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಲ್ ಸೋಲುತ್ತದೆ ಎಂದು ಗೊತ್ತಿದ್ದರೂ ತಂದವರು ಅವರು. ಅವರುಗಳು ಮಹಿಳಾ ವಿರೋಧಿಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಪ್ರತಿನಿಧಿಗಳಲ್ಲವೇ? ಇವರುಗಳು ಜನರಿಂದ ಗೆದ್ದಿಲ್ಲವೇ? ಅವರುಗಳು ಇದರ ಬಗ್ಗೆ ಮಾತನಾಡಬೇಕಿತ್ತು, ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಬಿಲ್ ಅವರ ಆಸ್ತಿಯಲ್ಲ. ದೇಶದ ಆಸ್ತಿ” ಎಂದರು.
“ಈ ಹಿಂದೆ ರಾಜೀವ್ ಗಾಂಧಿಯವರು ಶೇ 50 ರಷ್ಟು ಮೀಸಲಾತಿ ತಂದಿದ್ದರು. ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು. ಈ ಬಿಲ್ ಅಡಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮನ್ನೆಲ್ಲಾ ಕರೆದು ಚರ್ಚೆ ಮಾಡಬೇಕಿತ್ತು” ಎಂದು ಹೇಳಿದರು.

Continue Reading

ದೇಶ

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

VISTARANEWS.COM


on

ಪಶ್ಚಿಮ ಬಂಗಾಳದ ಜಾರ್ಗ್ರಾಮ್‌ನಲ್ಲಿ ಚುರುಮುರಿ (ಝಲ್ಮುರಿ) ವ್ಯಾಪಾರ ಮಾಡುವ ವಿಕ್ರಮ್ ಶಾ ಅವರ ಬದುಕಿನಲ್ಲಿ ಮರೆಯಲಾಗದ ಘಟನೆಯೊಂದು ನಡೆದಿದೆ. ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಅಚಾನಕ್ಕಾಗಿ ವಿಕ್ರಮ್ ಅವರ ಪುಟ್ಟ ಅಂಗಡಿಯ ಮುಂದೆ ಬಂದು ನಿಂತಿದ್ದರು. ದೇಶದ ಪ್ರಧಾನಿಯೇ ತಮ್ಮ ಅಂಗಡಿಗೆ ಬಂದಿದ್ದನ್ನು ಕಂಡು ವಿಕ್ರಮ್ ಮೊದಲು ಗಾಬರಿಯಾದರೂ, ಮೋದಿ ಅವರು ಅತ್ಯಂತ ಸರಳವಾಗಿ ಮಾತುಕತೆ ನಡೆಸಿ ವಿಕ್ರಮ್ ಕೈಯಾರೆ ಸಿದ್ಧಪಡಿಸಿದ ಚುರುಮುರಿಯನ್ನು ಇಷ್ಟಪಟ್ಟು ಸವಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೇವಲ ವಿಕ್ರಮ್ ಕೊಟ್ಟ ತಿಂಡಿ ತಿಂದಿದ್ದಲ್ಲದೇ ಅವರ ಕುಟುಂಬ ಮತ್ತು ಜೀವನದ ಬಗ್ಗೆಯೂ ವಿಚಾರಿಸಿದರು. ಬಡತನದ ಕಾರಣ 9ನೇ ತರಗತಿಗೆ ಓದು ಬಿಟ್ಟಿದ್ದ ವಿಕ್ರಮ್, ಪ್ರಧಾನಿಯವರ ಆತ್ಮೀಯತೆಗೆ ಮನಸೋತರು. ತಿಂಡಿ ತಿಂದ ನಂತರ ಮೋದಿ ಅವರು ಹಠ ಹಿಡಿದು ಹಣ ಪಾವತಿಸಿ ವಿಕ್ರಮ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿಕೊಂಡರು. ಪ್ರಧಾನಿಯವರ ಈ ಸರಳತೆಯನ್ನು ಕಂಡು ಅಲ್ಲಿದ್ದ ಜನಸಮೂಹ ಚಪ್ಪಾಳೆ ತಟ್ಟಿ ಸಂಭ್ರಮಿಸಿತು.

ಆದರೆ, ಈ ಇಡೀ ಘಟನೆಯಲ್ಲಿ ವಿಕ್ರಮ್ ಶಾ ಅವರಿಗೆ ಒಂದು ಸಣ್ಣ ವಿಷಾದ ಉಳಿದುಬಿಟ್ಟಿದೆ. ಪ್ರಧಾನಿ ತಮ್ಮ ಮುಂದೆಯೇ ಅಷ್ಟು ಹೊತ್ತು ನಿಂತಿದ್ದರೂ, ಆತಂಕದ ನಡುವೆ ಅವರಿಂದ ಒಂದು ಹಸ್ತಾಕ್ಷರ (Autograph) ಪಡೆಯಲು ಅವರಿಗೆ ಸಾಧ್ಯವಾಗಲಿಲ್ಲ. “ಒಂದು ವೇಳೆ ನಾನು ಅವರ ಸಹಿ ಕೇಳಿದ್ದರೆ ಅದು ನನ್ನ ಜೀವನದ ದೊಡ್ಡ ಆಸ್ತಿಯಾಗಿರುತ್ತಿತ್ತು” ಎಂದು ವಿಕ್ರಮ್ ಈಗ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೂ, ದೇಶದ ಪ್ರಧಾನಿ ತಮ್ಮ ಅಂಗಡಿಗೆ ಬಂದು ಚುರುಮುರಿ ತಿಂದ ಆ ಕ್ಷಣಗಳು ಮಾತ್ರ ವಿಕ್ರಮ್ ಅವರ ಬದುಕಿನ ಸುವರ್ಣ ನೆನಪಾಗಿ ಉಳಿದಿವೆ.

Continue Reading

Latest

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

VISTARANEWS.COM


on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದು ಸರಿಯಷ್ಟೇ. ಈ ಸಂದರ್ಭದಲ್ಲಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟಿದ ಫೋಟೋ ಭಾರಿ ವೈರಲ್‌ ಆಗಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನು ಹೇಳಿರಬಹುದು ಎಂದು ಕುತೂಹಲ ಮೂಡಿದ್ದು ಮಾತ್ರವಲ್ಲದೆ, ಊಹಾಪೋಹಗಳಿಗೂ ಕಾರಣವಾಗಿತ್ತು.
ಇದೀಗ ಮೋದಿ-ಸಿದ್ದರಾಮಯ್ಯ ಅವರ ಮಾತಿನ ರಹಸ್ಯ ಬಹಿರಂಗವಾಗಿದೆ. ಸ್ವತಃ ಸಿದ್ದರಾಮಯ್ಯ ಅವರೇ ಗುಟ್ಟನ್ನು ಬಹಿರಂಗಗೊಳಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೋದಿ ಇಬ್ಬರು ಗುಟ್ಟಾಗಿ ಏನನ್ನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳೀದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಉತ್ತರಿಸಿದೆ. ಇಷ್ಟು ವಿಚಾರ ಬಿಟ್ಟು ಬೇರೆ ಏನೂ ಇಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Continue Reading

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading
Advertisement
Latest2 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest3 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ3 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ3 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest3 ಗಂಟೆಗಳು ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ3 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest4 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest4 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest5 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest5 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌