CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದ್ದಾರೆ.

VISTARANEWS.COM


on

Cm Siddaramaiah hits out at BJP for Gaurantee Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ಮೀಸಲಿರಿಸಿದೆ. ಈ ಬಿಜೆಪಿಯವರಿಗೆ (BJP Karnataka) ಬಜೆಟ್‌, ಆರ್ಥಿಕತೆ ಬಗ್ಗೆ ಏನು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿನ್ನೆ (ಮೇ 20) ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಒಟ್ಟು ಮೊತ್ತ 44816 ಕೋಟಿ ರೂಪಾಯಿ ಆಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Satish Jarkiholi: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Satish Jarkiholi
Koo

ಚಿಕ್ಕೋಡಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆಯೇ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಪದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳುವ ಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್‌ ತೀರ್ಮಾನವಾಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆಗೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ” ಎಂದು ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದಿಷ್ಟು

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಲಿಂಗಾಯತ ಸಿಎಂ ಕೂಗು

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

ಇದನ್ನೂ ಓದಿ: Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Continue Reading

ಕರ್ನಾಟಕ

Gruha Lakshmi: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

Gruha Lakshmi: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಜತೆಗೆ ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

VISTARANEWS.COM


on

Gruha Lakshmi
Koo

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ (Gruha Lakshmi)ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಭರವಸೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ʼʼಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಜಮೆ ಆಗಲಿದೆʼʼ ಎಂದು ವಿವರಿಸಿದ್ದಾರೆ.

ಯೋಜನೆಯನ್ನು ನಿಲ್ಲಿಸುವುದಿಲ್ಲ

ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು, ʼʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಇದು ಮುಂದುವರಿಯಲಿದೆ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಆಧಾರ್‌ ಸೀಡಿಂಗ್

ಇನ್ನೂ ಸಾಕಷ್ಟು ಫಲಾನುಭವಿಗಳು ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರು ಕೂಡ ಆಧಾರ್‌ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದ ಸಿದ್ದರಾಮಯ್ಯ

ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Congress Guarantee Scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದಿದ್ದರು.

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದರು.

Continue Reading

ಪ್ರಮುಖ ಸುದ್ದಿ

Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Karnataka CM Row: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಎಂದು ಆಗ್ರಹಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಚಂದ್ರಶೇಖರ ಸ್ವಾಮೀಜಿ ಅವರು ಒಕ್ಕಲಿಗ ಸಮುದಾಯದ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದರಿಂದಾಗಿ ಸಿಎಂ ಬದಲಾವಣೆಯ ಚರ್ಚೆಯು ಇನ್ನಷ್ಟು ಕಾವು ಪಡೆದುಕೊಂಡಿದೆ.

VISTARANEWS.COM


on

Karnataka CM Row
Koo

ಕಲಬುರಗಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆಗಳು (Karnataka CM Row) ನಡೆಯುತ್ತಿದ್ದು, ಆಯಾ ಸಮುದಾಯಗಳ ಸ್ವಾಮೀಜಿಗಳು ಒಂದೊಂದು ಹೆಸರನ್ನು ಸೂಚಿಸುತ್ತಿದ್ದಾರೆ. ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. ಇದು ಈಗ ಸಿಎಂ ಬದಲಾವಣೆ ಚರ್ಚೆಗೆ ಹೊಸ ತಿರುವು ನೀಡಿದಂತಾಗಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

Shamanur Shivashankarappa

“ರಾಜ್ಯದಲ್ಲಿ ವೀರೇಂದ್ರ ಪಾಟೀಲ್‌ ಅವರಿಗೆ ಬಿಟ್ಟರೆ ಬೇರೆಯವರು ಸಿಎಂ ಆಗಿಲ್ಲ. ಹಾಗಾಗಿ, ಈಗ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಿಎಂ ಸ್ಥಾನ ಕೊಡಿ. ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಇವರಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಹುದ್ದೆ ನೀಡಿದರೆ ರಾಜ್ಯದಲ್ಲಿ ಇನ್ನಷ್ಟು ಒಳ್ಳೆಯ ಆಡಳಿತ ಸಿಕ್ಕು ರಾಜ್ಯವು ಅಭಿವೃದ್ಧಿಯಾಗುತ್ತದೆ” ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

Bangalore Rain

ಚರ್ಚೆಯೇ ಬೇಡ ಎಂದ ಡಿಕೆಶಿ

ಸಿಎಂ, ಡಿಸಿಎಂ ಕುರಿತು ಕಾಂಗ್ರೆಸ್‌ನ ಯಾವ ಎಂಎಲ್‌ಎ ಕೂಡ ಚರ್ಚಿಸಬಾರದು ಎಂಬುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. “ಪಕ್ಷವನ್ನು ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ನಿಮ್ಮ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಒಳ್ಳೆಯದಾಗುತ್ತದೆ. ಚಂದ್ರಶೇಖರ ಸ್ವಾಮೀಜಿ ಅವರು ನನ್ನ ಮೇಲಿನ ಅಭಿಮಾನಕ್ಕಾಗಿ ಹಾಗೆ ಮಾತನಾಡಿದ್ದಾರೆ. ಬೇರೆ ಯಾವ ಸ್ವಾಮೀಜಿಗಳೂ ಮಾತನಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ” ಎಂದಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Continue Reading

ಕರ್ನಾಟಕ

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

DK Shivakumar: ಕರ್ನಾಟಕದ ಸಿಎಂ ಹಾಗೂ ಡಿಸಿಎಂ ಕುರಿತು ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್‌ ಕೂಡ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಸೇರಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕ ಕೂಡ ಇದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂಬುದಾಗಿ ಸಿಎಂ ಹಾಗೂ ಡಿಸಿಎಂ ಗೊಂದಲದ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ (Karnataka) ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ. ಸಮುದಾಯವಾರು ಡಿಸಿಎಂ ಹುದ್ದೆ ನೀಡಬೇಕು ಎಂದು ಒಂದಷ್ಟು ಜನ ಆಗ್ರಹಿಸಿದರೆ, ಡಿ.ಕೆ.ಶಿವಕುಮಾರ್‌ ಅವರಿಗೇ ಸಿಎಂ ಹುದ್ದೆ ನೀಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಸಿಎಂ, ಡಿಸಿಎಂ ಚರ್ಚೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಪ್ರತಿಕ್ರಿಯಿಸಿದ್ದು, “ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡಿರಿ” ಎಂಬುದಾಗಿ ಬಣ ರಾಜಕೀಯ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಕರ್ನಾಟಕದ ಸಿಎಂ ಹಾಗೂ ಡಿಸಿಎಂ ಕುರಿತು ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್‌ ಕೂಡ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಸೇರಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕ ಕೂಡ ಇದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇಲ್ಲದಿದ್ದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೆ ನೋಟಿಸ್‌ ನೀಡಬೇಕಾಗುತ್ತದೆ. ಅನಿವಾರ್ಯವಾಗಿ ಪಕ್ಷದ ಶಿಸ್ತು ಕಾಪಾಡಲು ನೋಟಿಸ್ ನೀಡಬೇಕಾಗುತ್ತದೆ” ಎಂದು ಲಾಬಿ ಮಾಡುವ ಶಾಸಕರಿಗೆ ಎಚ್ಚರಿಕೆ ನೀಡಿದರು.

“ಪಕ್ಷವನ್ನು ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ನಿಮ್ಮ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಒಳ್ಳೆಯದಾಗುತ್ತದೆ. ಚಂದ್ರಶೇಖರ ಸ್ವಾಮೀಜಿ ಅವರು ನನ್ನ ಮೇಲಿನ ಅಭಿಮಾನಕ್ಕಾಗಿ ಹಾಗೆ ಮಾತನಾಡಿದ್ದಾರೆ. ಬೇರೆ ಯಾವ ಸ್ವಾಮೀಜಿಗಳೂ ಮಾತನಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ” ಎಂದು ಕೂಡ ಹೇಳಿದರು.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಇದನ್ನೂ ಓದಿ: DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

Continue Reading
Advertisement
baby Death
ತುಮಕೂರು3 mins ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest8 mins ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ12 mins ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ14 mins ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest14 mins ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Kalaburagi News
ಕರ್ನಾಟಕ15 mins ago

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kidnapping Case
ದೇಶ24 mins ago

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

kalaburagi Murder Case
ಕಲಬುರಗಿ30 mins ago

Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

Battlegrounds Mobile India
ಬೆಂಗಳೂರು30 mins ago

Battlegrounds Mobile India : ಬಿಜಿಎಮ್​ಐ ಜತೆ ಹೊಸ ಪಾಲುದಾರಿಕೆ ಮಾಡಿಕೊಂಡ ಕೆಎಫ್​​ಸಿ

Varalaxmi Sarathkumar invite PM Narendra Modi for wedding
ಸಿನಿಮಾ41 mins ago

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ20 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌