CM Siddaramaiah : 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

CM Siddaramaiah : 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಸಿದ್ದರಾಮಯ್ಯ

CM siddaramaiah : ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ, ರಾಮೇಶ್ವರಂ ಕೆಫೆ ಸ್ಫೋಟ, ದಲಿತ ಸಿಎಂ ಬೇಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah Bidar tour
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್: ಲೋಕಸಭಾ ಚುನಾವಣೆಯ (Lokasabha Election 2024) ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ (Congress Candidates list) ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಗುರುವಾರ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೀದರ್‌ ಜಿಲ್ಲಾ ಪ್ರವಾಸಕ್ಕೆ (Bidar District tour) ಆಗಮಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಬೆಂಗಳೂರಿನ ಎಚ್ ಎ ಎಲ್‌ನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಅವರಿಗೆ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು‌ ಘೋಷಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ ಕಾರ್ಯಕ್ರಮವಿದೆ.

CM Siddaramaiah Bidar tour

ರಾಮೇಶ್ವರ ಕೆಫೆ (Rameshwara Cafe) ಬಾಂಬ್ ಸ್ಫೋಟ ಪ್ರಕರಣದ ಸುಳಿವು ದೊರೆತಿದೆ

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.

ಬಾಕಿ ಇರುವ ಕಾಮಗಾರಿಗಳ ಬಿಲ್ಲು ಪಾವತಿಗೆ ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ

ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪಾವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ದಲಿತ ಸಿಎಂ: ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : CM Siddaramaiah: ನೀರಾವರಿ ಯೋಜನೆಗಳ ಬಗ್ಗೆ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಧ್ವನಿ ಎತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಬಸವಣ್ಣ-ಸಿದ್ದರಾಮಯ್ಯ: ಸಮಾನ ಕಟೌಟ್‌ ಹಾಕಿದ್ದಕ್ಕೆ ಆಕ್ರೋಶ

ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣನಿಗೆ ಸರಿಸಮನಾಗಿ ಸಿಎಂ ಸಿದ್ದರಾಮಯ್ಯ ಅವರ ಕಟೌಟ್ ಹಾಕಿದ್ದಕ್ಕೆ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

CM Siddaramaiah birthday

ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ಕಟೌಟ್ ಗೆ ಬಾರಿ ವಿರೋಧ ವ್ಯಕ್ತವಾಗಿದ್ದು, ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ವಿಶ್ವ ಗುರು ಬಸವಣ್ಣ ಎಲ್ಲಿ, ಜಾತಿವಾದಿ ಸಿಎಂ ಸಿದ್ದರಾಮಯ್ಯ ಎಲ್ಲಿ ಎಂದು ಕೆಲವರು ಕೇಳಿದ್ದಾರೆ.

ಬಸವಣ್ಣನನ್ನು ಕನ್ನಡದ ಸಾಂಸ್ಕೃತಿಕ ನಾಯಕ ಮಾಡಿದ್ದು ಹೆಮ್ಮೆ ಇದೆ. ಆದರೆ ಸಿಎಂ ಹೋಲಿಕೆಗೂ ಒಂದು ಮಿತಿ ಇರಬೇಕು. ಜಾತಿ ರಹಿತ ಸಮಾಜದ ಸಂದೇಶವನ್ನು ಸಾರಿದ್ದು ಬಸವಣ್ಣ. ಆದರೆ ಜಾತಿವಾದಿ ಸಿಎಂ ಸಿದ್ದರಾಮಯ್ಯ ಬಸವಣ್ಣನವರ ಜೊತೆ ಹೋಲಿಕೆ ಖಂಡನೀಯ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿನಂದನಾ ಸಮಾರಂಭ ನಡೆಯುವ ಥೇರು ಮೈದಾನದ ಮುಂಭಾಗ ಹಾಕಿರುವ ಕಟೌಟ್‌ಗಳ ಬಗ್ಗೆ ಈ ಆಕ್ಷೇಪ ವ್ಯಕ್ತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Diplomatic passport: ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಈ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ನೀಡಲಾಗುತ್ತದೆ.

VISTARANEWS.COM


on

Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ:

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

Prajwal Revanna Case: ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

VISTARANEWS.COM


on

Prajwal Revanna Case Passport Cancellation Process Begins Arrest of Prajwal is certain
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

Lok Sabha Election 2024

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

PM Narendra Modi: ಉತ್ತರಪ್ರದೇಶದ ಶ್ರವಸ್ಥಿಯಲ್ಲಿ ನಿನ್ನೆ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ನೆಚ್ಚಿನ ನಾಯಕನನ್ನು ನೋಡಲು ಲಕ್ಷಾಂತರ ಜನ ಆಗಮಿಸಿದ್ದರು. ಸೇರಿದ್ದ ಜನಸ್ತೋಮದ ಏರಿಯಲ್‌ ವ್ಯೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ಆಗಿದೆ. ಈ ದೃಶ್ಯವನ್ನು ಸ್ವತಃ ಪ್ರಧಾನಿ ಮೋದಿಯೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾರೀ ಜನಸ್ತೋಮದ ಮೂಲಕ ಪ್ರಧಾನಿ ಮೋದಿ ಶಕ್ತಿಪ್ರದರ್ಶನ ನಡೆಸಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಚಾರ ಕಾರ್ಯಕ್ರಮದಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರಪ್ರದೇಶದ ಶ್ರವಸ್ಥಿಯಲ್ಲಿ ನಿನ್ನೆ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ನೆಚ್ಚಿನ ನಾಯಕನನ್ನು ನೋಡಲು ಲಕ್ಷಾಂತರ ಜನ ಆಗಮಿಸಿದ್ದರು. ಸೇರಿದ್ದ ಜನಸ್ತೋಮದ ಏರಿಯಲ್‌ ವ್ಯೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ಆಗಿದೆ. ಈ ದೃಶ್ಯವನ್ನು ಸ್ವತಃ ಪ್ರಧಾನಿ ಮೋದಿಯೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾರೀ ಜನಸ್ತೋಮದ ಮೂಲಕ ಪ್ರಧಾನಿ ಮೋದಿ ಶಕ್ತಿಪ್ರದರ್ಶನ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಕೋಮುವಾದ, ಜಾತಿವಾದ ಮತ್ತು ಸ್ವಜನಪಕ್ಷಪಾತ ಕ್ಯಾನ್ಸರ್‌ಗಿಂತಲೂ ಭೀಕರವಾಗಿದ್ದು, ಅದು ದೇಶವನ್ನೇ ಹಾಳು ಮಾಡುತ್ತವೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂಡಿಯಾ ಒಕ್ಕೂಟ ಕ್ಯಾನ್ಸರ್‌ಗೊಂತಲೂ ಭೀಕರವಾದ ಖಾಯಿಲೆಗಳನ್ನು ಹೊಂದಿದೆ. ಅವರು ದೇಶದೆಲ್ಲೆಡೆ ಹರಡಿದರೆ ದೇಶ ನಾಶವಾಗುವುದು ಖಚಿತ. ದೇಶದೆಲ್ಲೆಡೆ ಎಸ್‌ ಮತ್ತು ಕಾಂಗ್ರೆಸ್‌ ಸಂಪೂರಣವಾಗಿ ನಾಶವಾಗಿದೆ. ಇಡೀ ದೇಶವೇ ಮತ್ತೊಮ್ಮೆ ಮೋದಿ ಎಂಬ ಮಂತ್ರ ಪಠಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ರ್ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ

ಕಳೆದ ವಾರ ಉತ್ತರಪ್ರದೇಶದ ಪಡಿಲ ಮಹಾದೇವ್‌ನಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿ, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ: Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿದ್ದರು.

Continue Reading

ದೇಶ

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Phalodi Satta Bazar: ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು.

VISTARANEWS.COM


on

Phalodi satta market
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಫಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಭವಿಷ್ಯವಾಣಿಯತ್ತ ಎಲ್ಲರ ಕಣ್ಣು ನೆಟ್ಟಿದೆ.‍ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡ ಬಳಿಕ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದಿದ್ದ ಸಟ್ಟಾ ಬಜಾರ್‌, ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 329 ರಿಂದ 332 ಸೀಟು ಗೆಲ್ಲಬಹುದೆಂದು ಹೇಳುವ ಮೂಲಕ ಬಿಜೆಪಿಗೆ ಶಾಕ್‌ ಕೊಟ್ಟಿತ್ತು.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಇದೀಗ ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಇನ್ನುಳಿದಿರುವುದು ಕೇವಲ ಎರಡೇ ಹಂತದ ಚುನಾವಣೆ. ಹೀಗಿರುವಾಗ ಮತ್ತೊಮ್ಮೆ ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಫಲೋಡಿ ಮಾರುಕಟ್ಟೆಗೆ ಎಂಟ್ರಿ ಸಿಗೋಗು ಅಷ್ಟು ಸುಲಭ ಅಲ್ಲ

ಫಲೋಡಿ ಸಟ್ಟಾ ಮಾರುಕಟ್ಟೆಯನ್ನು ಪ್ರವೇಶಿಸುವುದು ಹೊರಗಿನವರಿಗೆ ಅಷ್ಟೊಂದು ಸುಲಭದ ಮಾತಲ್ಲ. ಸಾಮಾನ್ಯವಾಗಿ ಏಜೆಂಟ್‌ಗಳ ಮೂಲಕ ಹೋಗಬೇಕಾಗುತ್ತದೆ. ಬೆಟ್ಟಿಂಗ್‌ನಲ್ಲಿ ಭಾಗವಹಿಸುವವರು ಮುಂಚಿತವಾಗಿ ಹಣ ಪಾವತಿಸಬೇಕು. ಈ ಮಾರುಕಟ್ಟೆಯಲ್ಲಿ ಎಲ್ಲಾ ಹಣಕಾಸು ವಹಿವಾಟುಗಳು ಡಿಜಿಟಲ್ ಚಾನೆಲ್‌ಗಳ ಮೂಲಕ ನಡೆಸಲ್ಪಡುತ್ತವೆ. ವಿಷಯದ ಆಧಾರದ ಮೇಲೆ ಬೆಟ್ಟಿಂಗ್‌ ಮೊತ್ತವು ಬದಲಾಗುತ್ತದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾರುಕಟ್ಟೆ ಕಾರ್ಯ ನಿರ್ವಹಿಸುತ್ತಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಇದು ಅಕ್ರಮ ಚಟುವಟಿಕೆ ಆಗಿದ್ದರೂ ಚುನಾವಣಾ ಭವಿಷ್ಯ ಕ್ಷೇತ್ರ ನುಡಿಯುವುದರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ.

ಚುನಾವಣಾ ಭವಿಷ್ಯವಾಣಿ ಏನು?

ಮೇ 13, 2024 ರಂದು, ಬೆಟ್ಟಿಂಗ್ ಮಾರುಕಟ್ಟೆಯು ಬಿಜೆಪಿ ಈ ಬಾರಿ ಉತ್ತಮ ಪ್ರದರ್ಶನ ತೋರಲಿದೆ ಎಂದು ಹೇಳಿತ್ತು, ಬಿಜೆಪಿ ಸುಮಾರು 300 ಸ್ಥಾನಗಳನ್ನು ಗೆಲ್ಲಲಿದ್ದು. ಹೋಲಿಸಿದರೆ, ಕಾಂಗ್ರೆಸ್ 40 ರಿಂದ 42 ಸ್ಥಾನಗಳನ್ನು ಪಡೆಯಬಹುದೆಂದು ನಿರೀಕ್ಷಿಸಿತ್ತು. ಉತ್ತರಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾದರೂ ಬಿಜೆಪಿ 80 ಸ್ಥಾನಗಳಲ್ಲಿ 62 ರಿಂದ 65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ರಾಷ್ಟ್ರವ್ಯಾಪಿ ಕಾಂಗ್ರೆಸ್ 70–85 ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿ 280–290 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬೆಟ್ಟಿಂಗ್ ಮಾರುಕಟ್ಟೆ ಭವಿಷ್ಯ ನುಡಿದಿತ್ತು. ಫಲೋಡಿ ಸತ್ತಾ ಬಜಾರ್ ಮತ್ತು ಮಾಧ್ಯಮ ಮೂಲಗಳು ಬಿಜೆಪಿಯು ಒಟ್ಟಾರೆಯಾಗಿ 335 ರಿಂದ 340 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿದೆ ಎಂದು ಭವಿಷ್ಯ ನುಡಿದಿತ್ತು.

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading
Advertisement
SRH vs RR
ಕ್ರೀಡೆ5 mins ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ7 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್16 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ31 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ36 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ40 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ45 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ47 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ1 hour ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ1 hour ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌