CM Siddaramaiah: ವಿಪಕ್ಷದವರು ಗೂಂಡಾಗಳು ಎಂದು ಕರೆದ ಸಿಎಂ ಕ್ಷಮೆ ಕೇಳಲೇಬೇಕು; ಕೋಟ ಶ್ರೀನಿವಾಸ್‌ ಪೂಜಾರಿ - Vistara News

ರಾಜಕೀಯ

CM Siddaramaiah: ವಿಪಕ್ಷದವರು ಗೂಂಡಾಗಳು ಎಂದು ಕರೆದ ಸಿಎಂ ಕ್ಷಮೆ ಕೇಳಲೇಬೇಕು; ಕೋಟ ಶ್ರೀನಿವಾಸ್‌ ಪೂಜಾರಿ

CM Siddaramaiah: ಛೀ, ಛೀ ಎಂಬಿತ್ಯಾದಿ ಅತ್ಯಂತ ಕಠಿಣ ಕೆಟ್ಟ ಶಬ್ದಗಳನ್ನು ಸಿಎಂ ಸಿದ್ದರಾಮಯ್ಯ ಬಳಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಸದನದಲ್ಲಿ ಗೂಂಡಾಗಳು ಎಂಬ ಪದವನ್ನು ಬಳಸಿದ್ದನ್ನು ನಾನು ನೋಡಿಲ್ಲ. ಅವರು ಎರಡೂ ಶಬ್ದಗಳನ್ನು ವಾಪಸ್ ಪಡೆದು ಕ್ಷಮೆ ಕೇಳಲು ಆಗ್ರಹಿಸಿದ್ದೇವೆ. ಇದೆಲ್ಲವನ್ನೂ ಪ್ರತಿಭಟಿಸಿ ನಾವು ಮತ್ತು ನಮ್ಮ ಸಹಪಕ್ಷ ಜೆಡಿಎಸ್‍ನವರು ಸಭಾತ್ಯಾಗ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ್‌ ಪೂಜಾರಿ ಆಗ್ರಹಿಸಿದ್ದಾರೆ.

VISTARANEWS.COM


on

CM Siddaramaiah should apologise for calling opposition goondas says Kota Shrinivas Poojari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಸದನದಲ್ಲಿ (Karnataka Budget Session 2024) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು. ಅವರು ವಿಪಕ್ಷದವರನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಇದಕ್ಕೆ ಅವರು ಕ್ಷಮೆ ಕೇಳಲೇಬೇಕು. ಇವರಿಗೆ ರಾಜ್ಯದ ಜನರು ಸೂಕ್ತ ಸಮಯದಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಮಾತಿನಿಂದ ಸಿಟ್ಟಾದ ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡಿ ಹೊರಗೆ ಬಂದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ನಾಲ್ಕರಿಂದ ಐದು ನಿಮಿಷದ ಮಿತಿ ಉಳ್ಳ ಪ್ರಶ್ನೆಗೆ ಸಂಬಂಧಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಸುದೀರ್ಘವಾಗಿ ಟೀಕಿಸಿದ್ದಾರೆ. ಗಂಟೆಗಟ್ಟಲೇ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ನಾವು ಆಕ್ಷೇಪಿಸಿದ್ದೇವೆ. ಆದರೆ, ನಮ್ಮ ಆಕ್ಷೇಪಕ್ಕೆ ಉತ್ತರಿಸುವುದನ್ನು ಬಿಟ್ಟ ಸಿಎಂ ಅವರು ಸದನದಲ್ಲಿ ಇದ್ದ ಎಲ್ಲ ವಿಪಕ್ಷಗಳನ್ನು ಗೂಂಡಾಗಳು ಎಂದಿದ್ದಾರೆ ಎಂದು ಕಿಡಿಕಾರಿದರು.

ಛೀ, ಛೀ ಎಂಬಿತ್ಯಾದಿ ಅತ್ಯಂತ ಕಠಿಣ ಕೆಟ್ಟ ಶಬ್ದಗಳನ್ನು ಅವರು ಬಳಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಸದನದಲ್ಲಿ ಗೂಂಡಾಗಳು ಎಂಬ ಪದವನ್ನು ಬಳಸಿದ್ದನ್ನು ನಾನು ನೋಡಿಲ್ಲ. ಅವರು ಎರಡೂ ಶಬ್ದಗಳನ್ನು ವಾಪಸ್ ಪಡೆದು ಕ್ಷಮೆ ಕೇಳಲು ಆಗ್ರಹಿಸಿದ್ದೇವೆ. ಇದೆಲ್ಲವನ್ನೂ ಪ್ರತಿಭಟಿಸಿ ನಾವು ಮತ್ತು ನಮ್ಮ ಸಹಪಕ್ಷ ಜೆಡಿಎಸ್‍ನವರು ಸಭಾತ್ಯಾಗ ಮಾಡಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್‍ನ ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಉತ್ತರವನ್ನು ಸೌಜನ್ಯದಿಂದ ಕೇಳಿಸಿಕೊಳ್ಳುತ್ತಿದ್ದೆವು. ಪದೇ ಪದೆ ಅವರು ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ಆಗ ಆಕ್ಷೇಪಿಸಿದಾಗ ‘ನೀವು ವಿಪಕ್ಷ ಸದಸ್ಯರು ಗೂಂಡಾಗಳಾ? ಥೂ, ಛೀ ಎಂದು ನಮ್ಮನ್ನೆಲ್ಲ ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಟೀಕಿಸಿದರು.‌

ಆರೂವರೆ ಕೋಟಿ ಜನರನ್ನು ಪ್ರತಿನಿಧಿಯಾಗಿರುವ ಮುಖ್ಯಮಂತ್ರಿಗಳು ಅಸಾಂವಿಧಾನಿಕ ಪದವನ್ನು ಬಳಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪದ ಬಳಕೆಗೆ ವಿಷಾದ ಸೂಚಿಸಿಲ್ಲ. ಸಿಎಂ ಅವರ ವರ್ತನೆ, ಪದ ಪ್ರಯೋಗದಿಂದ ನಮಗೆ ಬಹಳ ನೋವಾಗಿದೆ. ಆದ್ದರಿಂದ ವಿಪಕ್ಷದ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ದೇವೆ ಎಂದು ಟಿ.ಎ. ಶರವಣ ತಿಳಿಸಿದರು.

ರಾಜ್ಯದ ಜನರು ಮುಖ್ಯಮಂತ್ರಿಗಳ ವರ್ತನೆಗೆ ತಕ್ಕ ಉತ್ತರವನ್ನು ಸೂಕ್ತ ಸಮಯದಲ್ಲಿ ನೀಡುತ್ತಾರೆ ಎಂದು ತಿಳಿಸಿದ ಅವರು, ಇವತ್ತು ಕಲಾಪವನ್ನು ಬಹಿಷ್ಕರಿಸಿದ್ದೇವೆ. ಮುಖ್ಯಮಂತ್ರಿಗಳು ಮಾತ್ರವಲ್ಲದೆ, ಸಚಿವರು ಕೂಡ ಪದೇ ಪದೆ ಎದ್ದುನಿಂತು ವಿಪಕ್ಷದವರಿಗೆ ಮಾತನಾಡಲು ಅವಕಾಶವನ್ನೇ ಕೊಟ್ಟಿಲ್ಲ ಎಂದು ಟಿ.ಎ. ಶರವಣ ಕಿಡಿಕಾರಿದರು. ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಇತರ ಸದಸ್ಯರು ಇದ್ದರು.

ಬಿಜೆಪಿಯವರು ಗೂಂಡಾಗಳು ಎಂದ ಸಿಎಂ

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದ ವ್ಯತ್ಯಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ವಿಪಕ್ಷಗಳ ಗದ್ದಲದಿಂದ ಆಕ್ರೋಶಗೊಂಡು, “ಏನು ಗೂಂಡಾಗಿರಿ ಮಾಡ್ತೀರಾ? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ಹೇಳಿರುವುದು ಈಗ ಗಲಾಟೆಗೆ ಕಾರಣವಾಗಿದೆ. ಈ ಸಂಬಂಧ ವಿಪಕ್ಷಗಳು ಕೆರಳಿದ್ದು ಗದ್ದಲ ಎಬ್ಬಿಸಿದ್ದಾರೆ. ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ 10 ನಿಮಿಷ ಕಾಲ ವಿಧಾನ ಪರಿಷತ್ ಕಲಾಪವನ್ನು ಸಭಾಪತಿಗಳು ಮುಂದೂಡಿದ್ದಾರೆ.

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದಲ್ಲಿನ ವ್ಯತ್ಯಾಸದ ಬಗ್ಗೆ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಈ ಗದ್ದಲಗಳು ನಡೆದಿವೆ. ಕರ್ನಾಟಕ ಇವತ್ತು ತೆರಿಗೆ ಪಾವತಿಸುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ, ನಮಗೆ ಬರುವ ತೆರಿಗೆ ಆದಾಯದ ಪಾಲು ಕಡಿಮೆ ಆಗುತ್ತಿದೆ ಎಂದು ಹೇಳಿದರು.

ಹದಿನಾಲ್ಕು ಮತ್ತು ಹದಿನೈದನೇ ಹಣಕಾಸು ಆಯೋಗ ಶಿಫಾರಸು ಮಾಡುವಾಗ 18-19ರ ಬಜೆಟ್ ಗ್ರಾತ್ರ ಇತ್ತು. ಬಳಿಕ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋಯಿತು. ಹೀಗಾಗಿ ಅದರ ಪಾಲು ಹೆಚ್ಚಾಗಬೇಕಿತ್ತು. ಈ ಹಿನ್ನೆಲೆಯಲ್ಲಿ 14ನೇ ಹಣಕಾಸು ಆಯೋಗವು ಶೇ. 42 ಕೊಡಲು ಹೇಳಿತ್ತು. ಆದರೆ, 15ನೇ ಆಯೋಗದಲ್ಲಿ ಇದರ ಪ್ರಮಾಣ ಕಡಿಮೆಯಾಗಿದೆ. ಈ ಎರಡೂ ಹಣಕಾಸು ಆಯೋಗದಲ್ಲಿ ವರ್ಷವಾರು ಕಡಿಮೆ ತೆರಿಗೆ ಪಾವತಿ ಆಗುತ್ತಿದೆ. ಮೊದಲ ವರದಿಯಲ್ಲಿ 5495 ಕೋಟಿ ಕೊಡಲು ಶಿಫಾರಸು ಆಗಿತ್ತು. ಅಂತಿಮ ವರದಿಯಲ್ಲಿ ಕೆರೆ ಹಾಗೂ ಫೆರಿಫರಲ್ ರಿಂಗ್ ರೋಡ್‌ಗಾಗಿ 6000 ಕೋಟಿ ರೂಪಾಯಿ ನೀಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಂಕಿ-ಅಂಶಗಳನ್ನು ತೆರೆದಿಟ್ಟರು.

ಕರ್ನಾಟಕಕ್ಕೆ 11 ಸಾವಿರ ಕೋಟಿ ರೂ. ಕೊಡಲು 15ನೇ ಹಣಕಾಸು ಆಯೋಗದಿಂದ ಶಿಫಾರಸು ಮಾಡಲಾಗಿತ್ತು. ಆದರೆ, ಈ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ. ಇದನ್ನೇ ಸೆಂಟ್ರಲ್ ಫೈನಾನ್ಸ್ ಮಿನಿಸ್ಟರ್ ವಾದ ಮಾಡಲು ಹೊರಟಿದ್ದಾರೆ. ಪ್ರಶ್ನೆ ಮಾಡಿದರೆ ಹಣಕಾಸು ಆಯೋಗ ಅಟಾನಮಸ್ ಬಾಡಿಯಾಗಿದೆ. ನಾವು ಅದರ ವರದಿಯನ್ನಷ್ಟೇ ಅನುಷ್ಠಾನ ಮಾಡುತ್ತೇವೆ ಎನ್ನುತ್ತಾರೆ.‌ ಅದರಂತೆ ಮಾಡಿದರೂ ನಮಗೆ ಹಣ ಬಿಡುಗಡೆ ಆಗಬೇಕಿತ್ತು. ಅದನ್ನಿನ್ನೂ ಅವರು ಮಾಡಿಲ್ಲ. ಈ ಹಿಂದಿನ ಸರ್ಕಾರದ ಗಮನಕ್ಕೆ ಈ ವಿಚಾರವನ್ನು ತಂದಿದ್ದೆ. ವಿಶೇಷ ಅನುದಾನ ಪಡೆಯಲು ಕ್ರಮ ವಹಿಸಿ ಎಂದು ಮನವಿ ಮಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ವಿಪಕ್ಷದವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ. ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ. ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದ್ದವರದ್ದೇನು ಮಾತು? ಎಂದು ಪ್ರಶ್ನೆ ಮಾಡಿದರು. ಆಗ ಮತ್ತೆ ವಿಪಕ್ಷದವರು ಗದ್ದಲ ಮಾಡಿದರು. ಆಗ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ಸದಸ್ಯರ ಮನವೊಲಿಕೆಗೆ ಪ್ರಯತ್ನಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಮ್ಮ ಫ್ಯಾಕ್ಟ್ ಉತ್ತರ ಸಹಿಸಲು ಸಾಧ್ಯ ಆಗುತ್ತಿಲ್ಲ. ನೀವು ಎಷ್ಟೇ ಕೂಗಾಡಿದರೂ ಅದು ಸತ್ಯವೇ. ನಿರ್ಮಲಾ ಸೀತಾರಾಂ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, “ಸಿಎಂ ಆನ್ಸರ್ ಬೇಡ” ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ; ನಿಜ ಕಾರಣ ಬಿಚ್ಚಿಟ್ಟ ಬಿ.ವೈ. ವಿಜಯೇಂದ್ರ

ಘೋಷಣೆ ನಡುವೆ ಸಿಎಂ ಉತ್ತರವನ್ನು ಮುಂದುವರಿಸಿದರು. “ಅವರೇ ಬಜೆಟ್‌ನಲ್ಲಿ ಒಪ್ಪಿಕೊಂಡಿದ್ದ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಆದರೆ, ನಾವು ಯೋಜನೆ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂಪಾಯಿಗಳ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದರು.

ನೀವು ಗೂಂಡಾಗಳು ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಉತ್ತರದಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ಗದ್ದಲ ನಡೆಸಿದರು. ಆಗ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಉತ್ತರ ಕೊಟ್ಟ ಮೇಲೆ ಹೇಳಿ. ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ. ಏಳು ಕೋಟಿ ಜನ ನೋಡುತ್ತಾ ಇದ್ದಾರೆ. ಎದ್ದು ನಿಂತಿದ್ದಾರೆ ಎಂದರೆ? ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ ಎಂದು ಹೇಳಿದರು. ಆಗ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎದ್ದುನಿಂತು, ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು, ನೀವಾ ನಾವಾ? ಈಗ ನಮಗೆ ಗೂಂಡಾಗಿರಿ ಎಂದು ಹೇಳುತ್ತೀರಾ? ಅಂದು ತೊಡೆ ತಟ್ಟಿದ್ದು ಯಾರು? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ, ನೀವು ಗೂಂಡಾಗಳು. ನಿಮ್ಮ ಗೂಂಡಾಗಿರಿಗೆ ನಾವು ಹೆದರಲ್ಲ. ನಾನು ಸತ್ಯವನ್ನೇ ಹೇಳುತ್ತಾ ಇದ್ದೇನೆ ಎಂದು ಹೇಳಿದರು. ಆಗ ಎದ್ದನಿಂತ ವಿಪಕ್ಷ ಬಿಜೆಪಿಯವರು ಗಲಾಟೆ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಜನ ಇವರಿಗೆ ಛೀ.. ಥೂ.. ಅಂತಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳಿದರು. ಆಗ ತೀವ್ರ ಗದ್ದಲವಾಗಿದ್ದರಿಂದ ಸಭಾಪತಿಯವರು ಪರಿಷತ್ ಕಲಾಪವನ್ನು ಮುಂದೂಡಿಕೆ ಮಾಡಿದರು. ಆಗ ವಿಪಕ್ಷ ಬಿಜೆಪಿಯವರು, ಗೂಂಡಾ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Raghupathi Bhat: ಬಂಡಾಯ ಸ್ಪರ್ಧೆ; ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

K Raghupathi Bhat: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.

VISTARANEWS.COM


on

K Raghupathi Bhat
Koo

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ (K Raghupathi Bhat) ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರಘುಪತಿ ಭಟ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವಂತೆ ಸೂಚಿಸಿದರೂ ಸ್ಪರ್ಧೆಗೆ ಮುಂದಾಗಿರುವುದರಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಜಿಲ್ಲಾ ಬಿಜೆಪಿ ಸೂಚಿಸಿತ್ತು. ಹಾಗೆಯೇ ಬಿಜೆಪಿ ಹಿರಿಯ ನಾಯಕರಿಂದಲೂ ಕೂಡ ಮನವರಿಸುವ ಯತ್ನ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ಸ್ಪರ್ಧೆಗೆ ರಘುಪತಿ ಭಟ್ ಇಳಿದಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಘುಪತಿ ಭಟ್ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಮನವಿ ಮಾಡಿತ್ತು. 24 ಗಂಟೆ ಒಳಗೆ ಪಕ್ಷದ ಪ್ರಮುಖರಿಗೆ ಉತ್ತರಿಸುವಂತೆ ತಿಳಿಸಲಾಗಿತ್ತು. ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಪಕ್ಷದಿಂದ ರಘಪತಿ ಭಟ್ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್‌ ಅವರಿಗೆ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್​ ಅವರಿಗೆ ಉಡುಪಿ ವಿಧಾನಸಭಾ ಚುನಾವಣೆ ಟಿಕೆಟ್ ಕೈತಪ್ಪಿತ್ತು. ಇದರ ಬೆನ್ನಲ್ಲೇ ಎಂಎಲ್‌ಸಿ ಟಿಕೆಟ್ ಕೂಡ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.

Continue Reading

ದಕ್ಷಿಣ ಕನ್ನಡ

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

CM Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದರು. ಅದಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಲಿನಲ್ಲಿ ನಿಂತು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

VISTARANEWS.COM


on

Devotees chant Jai Shri Ram as CM Siddaramaiah enters Dharmasthala temple
Koo

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಭೇಟಿ ನೀಡಿದ ವೇಳೆ ಭಕ್ತರು ಜೈಶ್ರೀರಾಮ್‌ (Jai Shreeram), ಮೋದಿ ಕೀ ಜೈ, ಅಬ್‌ ಕೀ ಬಾರ್‌ ಮೋದಿ ಸರ್ಕಾರ್‌, ಭಾರತ್‌ ಮಾತಾಕೀ ಜೈ ಘೋಷಣೆಯನ್ನು ಕೂಗಿದ್ದಾರೆ. ಏಕಾಏಕಿ ಭಕ್ತರು ಹೀಗೆ ಕೂಗಿದ್ದರಿಂದ ಸಿಎಂ ಹಾಗೂ ಡಿಸಿಎಂಗೆ ಕಸಿವಿಸಿಯಾದರೂ ತೋರಿಸಿಕೊಳ್ಳದೇ ಶಾಂತಚಿತ್ತದಿಂದ ಶ್ರೀ ಮಂಜುನಾಥನ ದರ್ಶನಕ್ಕೆ ತೆರಳಿದರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು.

ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದರು. ಅದಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಲಿನಲ್ಲಿ ನಿಂತು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಹೀಗಾಗಿ ಸಿಎಂ ಹಾಗೂ ಪೊಲೀಸ್ ಇಲಾಖೆ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

Devotees chant Jai Shri Ram as CM Siddaramaiah enters Dharmasthala temple

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ಜೈ ಶ್ರೀರಾಮ್‌ ಘೋಷಣೆ

ಈ ವೇಳೆ ಮುಖ್ಯ ದ್ವಾರದಿಂದ ನಡೆದುಕೊಂಡೇ ದೇವಸ್ಥಾನ ಪ್ರವೇಶಿಸಿದ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಕಂಡ ಭಕ್ತರು ತೀವ್ರ ಅಸಹನೆಯನ್ನು ಹೊಂದಿದ್ದರು. ಹೀಗಾಗಿ ಕೆಲವರು ಇದೇ ವೇಳೆ ಜೈ ಶ್ರೀರಾಮ್‌ ಘೋಷಣೆಯನ್ನು ಕೂಗಿದರು. ಇನ್ನೂ ಕೆಲವರು ಮೋದಿ ಕೀ ಜೈ, ಭಾರತ್‌ ಮಾತಾಕೀ ಜೈ, ಅಬ್‌ ಕೀ ಬಾರ್‌ ಮೋದಿ ಸರ್ಕಾರ್‌ ಘೋಷಣೆ ಕೂಗಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ; ಡಾ. ವೀರೇಂದ್ರ ಹೆಗ್ಗಡೆ ಹರ್ಷ: ಡಿಕೆ ಶಿವಕುಮಾರ್

“ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹ ಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂಬುದಾಗಿ ಡಿ.ಕೆ. ಶಿವಕುಮಾರ್‌ ಹೇಳಿದರು.

Continue Reading

ಕರ್ನಾಟಕ

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Bengaluru News: ಇಡೀ ದೇಶದಲ್ಲಿ ನಡೆಯುವ ಚುನಾವಣೆಗೆ ಕರ್ನಾಟಕ ಎಟಿಎಂ ಆಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪಂಚರಾಜ್ಯ ಚುನಾವಣೆಗೆ ದುಡ್ಡು ಕೊಟ್ಟಿದ್ದಾಯ್ತು. ಈಗ ಸಂಸತ್ ಚುನಾವಣೆಗೂ ದುಡ್ಡು ಕೊಟ್ಟಿದ್ದಾಯ್ತು. ನಮ್ಮ ಮೇಲೆ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ ನೀವು, ಈಗ ನಿಮ್ಮದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಉತ್ತರ ಕೊಡಿ ಎಂದು ಅವರು ಆಗ್ರಹಿಸಿದ್ದಾರೆ.

VISTARANEWS.COM


on

MLC Chalavadi Narayanaswamy latest statement
Koo

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಸರ್ಕಾರ (Congress Government) ಕೊಟ್ಟ ಬೆಲೆ ಏನು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Bengaluru News) ಪ್ರಶ್ನಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ, ವಿಪಕ್ಷದ ನಾಯಕರು ಒಂದು ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ ತಕ್ಷಣ ಎಚ್ಚೆತ್ತುಕೊಳ್ಳಬೇಕು, ಅದನ್ನು ಪರಿಹರಿಸಬೇಕು. ಆದರೆ ಈ ಸರ್ಕಾರ ಅತ್ತ ಗಮನ ಕೊಟ್ಟಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಕಾನೂನು ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟ ಕುರಿತು ತಿಂಗಳುಗಟ್ಟಲೆ ಕಾಲ ಬಿಜೆಪಿ ತಿಳಿಸಿದ್ದರೂ ಈ ಮಾನಗೇಡಿ ಸರ್ಕಾರ ಎಚ್ಚೆತ್ತುಕೊಂಡಿಲ್ಲ, ಅದನ್ನು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.

ಅತ್ಯಾಚಾರ, ಲವ್ ಜಿಹಾದ್ ವಿಚಾರದಲ್ಲಿ ಸರ್ಕಾರ ಗಮನ ಕೊಡುತ್ತಿಲ್ಲ. ಕೊಲೆಗಳೂ ಹೆಚ್ಚಾಗಿವೆ. ನಿನ್ನೆ ಕಸ್ಟಡಿ ಸಾವು ಸಂಭವಿಸಿದೆ. ಯಾರಾದರೂ ಇವುಗಳ ಕುರಿತು ಪ್ರಶ್ನಿಸಿದರೆ ಎಲ್ರೀ ಹದಗೆಟ್ಟಿದೆ ಎಂದು ಉಡಾಫೆ ಮಾತನಾಡುತ್ತಾರೆ ಎಂದು ದೂರಿದರು.

ಗುಲ್ಬರ್ಗಕ್ಕೆ ಪಿಎಚ್‍ಡಿ ಮಾಡಲೆಂದು ಹೋಗಿದ್ದ ದಲಿತ ಸಾಹಿತಿ ಆನಂದ್ ಸಾವನ್ನಪ್ಪಿದ್ದು ಯಾಕೆ? ಇದರ ಬಗ್ಗೆ ಜಿಲ್ಲಾ ಸಚಿವರು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ತಲೆಕೆಡಿಸಿಕೊಂಡಿಲ್ಲ. ಏನಾದರೂ ಕೇಳಿದರೆ ಬೇರೆ ಸರ್ಕಾರ ಇದ್ದಾಗ ಮರ್ಡರ್ ಆಗಿಲ್ವ? ಎಂದು ಕೇಳುತ್ತಾರೆ. ಇದು ಉಡಾಫೆ ಉತ್ತರವಲ್ಲವೇ ಎಂದು ಕೇಳಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ನೀವು ಕೇವಲ ಲೂಟಿ ಮಾಡಲೆಂದು ಬಂದಿದ್ದೀರಾ? ಎಂದರಲ್ಲದೆ, ಇಡೀ ದೇಶದಲ್ಲಿ ನಡೆಯುವ ಚುನಾವಣೆಗೆ ಕರ್ನಾಟಕ ಎಟಿಎಂ ಆಗಿದೆ ಎಂದು ಆರೋಪಿಸಿದ ಅವರು, ಪಂಚರಾಜ್ಯ ಚುನಾವಣೆಗೆ ದುಡ್ಡು ಕೊಟ್ಟಿದ್ದಾಯ್ತು. ಈಗ ಸಂಸತ್ ಚುನಾವಣೆಗೂ ದುಡ್ಡು ಕೊಟ್ಟಿದ್ದಾಯ್ತು. ನಮ್ಮ ಮೇಲೆ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ ನೀವು, ಈಗ ನಿಮ್ಮದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಉತ್ತರ ಕೊಡಿ ಎಂದು ಆಗ್ರಹಿಸಿದರು.

Continue Reading

ಕರ್ನಾಟಕ

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Bengaluru News: ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ಅವರು, ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ ಎಂದು ಅವರು ಖಂಡಿಸಿದ್ದಾರೆ.

VISTARANEWS.COM


on

BJP Raitha Morcha State President Former MLA A S Patil Nadahalli latest Statement
Koo

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು (State Congress Government) ರೈತರ ಪಾಲಿಗೆ ಸತ್ತು ಹೋಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ (Bengaluru News) ಟೀಕಿಸಿದರು.

ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ಸಾವಿರಾರು ಕೋಟಿ ರೂ. ಬರಗಾಲದ ಪರಿಹಾರ ಧನ ಕೊಟ್ಟಿದೆ. ಆದರೆ, ದೇವರು ಕೊಟ್ಟರೂ ಕೂಡ ಪೂಜಾರಿ ಕೊಡಲು ತಯಾರಿಲ್ಲ ಎಂಬಂತೆ ಕೇಂದ್ರ ಸರ್ಕಾರ, ನರೇಂದ್ರ ಮೋದಿಯವರು ಬರಗಾಲದ ಮೊತ್ತವನ್ನು ಕೊಟ್ಟಿದ್ದರೂ ಅದನ್ನು ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇಂದಿಗೂ ನೀಡಿಲ್ಲ. ಇದು ರೈತರ ಪಾಲಿಗೆ ಸತ್ತು ಹೋದ ಸರ್ಕಾರದಂತಿದೆ ಎಂದು ಆರೋಪಿಸಿಸಿದರು.

ಇದನ್ನೂ ಓದಿ: KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಬರಗಾಲದಿಂದ ಬೆಂದಿರುವ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಅವರು, ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ ಎಂದು ಖಂಡಿಸಿದರು.

ಉದ್ದು ಬೀಜ ಪ್ರತಿ ಕೆಜಿಗೆ 43 ರೂ, ತೊಗರಿಗೆ 48 ರೂ., ಮೆಕ್ಕೆಜೋಳ ಬೀಜ 5 ಕೆಜಿ ಪೊಟ್ಟಣಕ್ಕೆ 24 ರೂ. ಹೆಚ್ಚಿಸಿದ್ದಾರೆ. ಸರ್ಕಾರ ಈ ಹಿಂದಿನ ಬಿತ್ತನೆ ಬೀಜದ ದರವನ್ನೇ ಮುಂದುವರಿಸಬೇಕು. ಬಿತ್ತನೆ ಬೀಜ, ಗೊಬ್ಬರ ಸಮರ್ಪಕವಾಗಿ ಎಲ್ಲ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕೊಬ್ಬರಿಯನ್ನು ಎಂಎಸ್‍ಪಿ ಅಡಿ ಖರೀದಿ ಮಾಡಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾಗಿದೆ. ಪ್ರತಿ ಕ್ವಿಂಟಲ್‍ಗೆ ಸುಮಾರು 12 ಸಾವಿರ ರೂ. ಕೊಟ್ಟು ಖರೀದಿ ಅವಕಾಶ ನೀಡಿದ್ದು, ಈ ಸರ್ಕಾರ ಚೀಲ ಇಲ್ಲ ಎಂಬ ನೆಪ ಹೇಳುತ್ತಿದೆ. ಇದು ಅತ್ಯಂತ ನಾಚಿಕೆಗೇಡು ಎಂದು ಹೇಳಿದರು.

ಈಗಾಗಲೇ ಖರೀದಿಸಿದ 35 ಸಾವಿರ ಟನ್ ಕೊಬ್ಬರಿಗೆ ಹಣವನ್ನೂ ನೀಡಿಲ್ಲ ಎಂದು ದೂರಿದ ಅವರು. ರೈತರು ಹಣ ಕೇಳಿದರೆ ಕೊಬ್ಬರಿ ತೆಗೆದುಕೊಂಡು ಹೋಗುವಂತೆ ಅಧಿಕಾರಿಗಳು ದರ್ಪದಿಂದ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

ಹಿಂದೆ ಹೈನುಗಾರರಿಗೆ ನಮ್ಮ ಸರ್ಕಾರ ಹಾಲು ಉತ್ಪಾದನೆಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಈಗ ಹೈನುಗಾರಿಕೆಗೆ ಸಂಬಂಧಿಸಿ ಪ್ರತಿ ಲೀಟರ್‌ಗೆ 5 ರೂ. ಪ್ರೋತ್ಸಾಹಧನ ಸ್ಥಗಿತಗೊಂಡಿದೆ ಎಂದರಲ್ಲದೆ, ರೈತರಿಗೆ ಬಾಕಿ ಇರುವ 700 ರಿಂದ 800 ಕೋಟಿ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದರು.

Continue Reading
Advertisement
K Raghupathi Bhat
ಪ್ರಮುಖ ಸುದ್ದಿ1 min ago

K Raghupathi Bhat: ಬಂಡಾಯ ಸ್ಪರ್ಧೆ; ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

Indigo Flight
ದೇಶ24 mins ago

IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Labours fall sick
ಕರ್ನಾಟಕ47 mins ago

Workers Fall Sick: ಹಲ್ಲಿ ಬಿದ್ದ ಆಹಾರ ಸೇವಿಸಿ ಒಬ್ಬ ಕಾರ್ಮಿಕ ತೀವ್ರ ಅಸ್ವಸ್ಥ, ಹಲವರಿಗೆ ವಾಂತಿ-ಭೇದಿ

Natasa Stankovic
ಪ್ರಮುಖ ಸುದ್ದಿ52 mins ago

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ58 mins ago

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Devotees chant Jai Shri Ram as CM Siddaramaiah enters Dharmasthala temple
ದಕ್ಷಿಣ ಕನ್ನಡ1 hour ago

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

MLC Chalavadi Narayanaswamy latest statement
ಕರ್ನಾಟಕ1 hour ago

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

BJP Raitha Morcha State President Former MLA A S Patil Nadahalli latest Statement
ಕರ್ನಾಟಕ1 hour ago

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Former Minister Araga jnanendra latest statement in Shivamogga
ಶಿವಮೊಗ್ಗ1 hour ago

Araga jnanendra: ಠಾಣೆಗೇ ನುಗ್ಗಿ ಜನ ಪೊಲೀಸರಿಗೆ ಹೊಡೆಯುವಂತಾಗಿದೆ; ಆರಗ ಜ್ಞಾನೇಂದ್ರ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌