Congress Candidates List : ಕಾಂಗ್ರೆಸ್‌ನ 17 ಟಿಕೆಟ್‌ ಘೋಷಣೆ; ರಾಜ್ಯದ ಐವರು ಸಚಿವರ ಮಕ್ಕಳು ಲೋಕ ಕಣಕ್ಕೆ - Vistara News

ರಾಜಕೀಯ

Congress Candidates List : ಕಾಂಗ್ರೆಸ್‌ನ 17 ಟಿಕೆಟ್‌ ಘೋಷಣೆ; ರಾಜ್ಯದ ಐವರು ಸಚಿವರ ಮಕ್ಕಳು ಲೋಕ ಕಣಕ್ಕೆ

Congress Candidates List : ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ 17 ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಏಳು ಮಂದಿಯ ಹೆಸರಿತ್ತು.

VISTARANEWS.COM


on

Congress Candidates List women Candidates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಇದರಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್,‌ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಬೀದರ್‌ನಿಂದ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದಲ್ಲದೆ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌, ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್‌ 8ರಂದು ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ 17 ‌ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು ನಾಲ್ಕು ಕ್ಷೇತ್ರಗಳ ಟಿಕೆಟ್‌ ಪೆಂಡಿಂಗ್‌ ಇಡಲಾಗಿದೆ.

ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳ ಟಾರ್ಗೆಟ್‌ ಇಟ್ಟುಕೊಂಡು ಅಳೆದೂ ತೂಗಿ ಟಿಕೆಟ್‌ ಹಂಚಿಕೆ ನಡೆಸಿದೆ. ರಾಜ್ಯಮಟ್ಟದಲ್ಲಿ ತಲಾ ಎರಡು ಅಥವಾ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರೀಯ ಚುನಾವಣಾ ಸಮಿತಿಯನ್ನು ಮುಕ್ತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ. ಎಐಸಿಸಿ ಅಧ್ಯಕ್ಷ (AICC president) ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಇತರ ಹಿರಿಯ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಟಿಕೆಟ್‌ ಫೈನಲ್‌ ಮಾಡಲಾಗಿದೆ.

ಎರಡನೇ ಪಟ್ಟಿಯಲ್ಲಿರುವ 17 ಕ್ಷೇತ್ರಗಳ ಅಭ್ಯರ್ಥಿಗಳು ಯಾರ್ಯಾರು?

ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ (ರಾಮಲಿಂಗಾ ರೆಡ್ಡಿ ಪುತ್ರಿ)
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಮೈಸೂರು – ಕೊಡಗು – ಎಂ.ಲಕ್ಷ್ಮಣ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್ (ಶಿವಾನಂದ ಪಾಟೀಲ್‌ ಪುತ್ರಿ)
ರಾಯಚೂರು – ಕುಮಾರ್ ನಾಯಕ್
ಚಿತ್ರದುರ್ಗ – ಬಿ.ಎನ್‌. ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ (ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ)
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ (ಸತೀಶ್‌ ಜಾರಕಿಹೊಳಿ ಮಗಳು)
ಹುಬ್ಬಳ್ಳಿ-ಧಾರವಾಡ – ವಿನೋದ್ ಅಸೂಟಿ
ಬೀದರ್ – ಸಾಗರ್‌ ಖಂಡ್ರೆ (ಈಶ್ವರ್‌ ಖಂಡ್ರೆ ಪುತ್ರ)
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್ (ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ)
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ (ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ)

Congress Candidates List karnataka full

ಪೆಂಡಿಂಗ್ ಕ್ಷೇತ್ರಗಳು ಮತ್ತು ಅಲ್ಲಿ ಸ್ಪರ್ಧೆಯಲ್ಲಿರುವವರು

ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ – ಶಿವಶಂಕರ್‌ ರೆಡ್ಡಿ, ವೀರಪ್ಪ ಮೊಯ್ಲಿ
ಕೋಲಾರ – ಚಿಕ್ಕಪೆದ್ದಣ್ಣ, ಎಲ್‌.ಹನುಮಂತಯ್ಯ,
ಚಾಮರಾಜನಗರ – ಸುನೀಲ್ ಬೋಸ್, ದರ್ಶನ್ ಧ್ರುವ ನಾರಾಯಣ
ಬಳ್ಳಾರಿ – ಸೌಪರ್ಣಿಕಾ ತುಕಾರಾಂ, ವೆಂಕಟೇಶ್‌ ಪ್ರಸಾದ್, ವಿ.ಎಸ್. ಉಗ್ರಪ್ಪ

ಇದನ್ನೂ ಓದಿ : Lok Sabha Election 2024: ಕಾಂಗ್ರೆಸ್‌ ಅಧಿಕೃತ ಪಟ್ಟಿ ಬಿಡುಗಡೆ; ಜಯಪ್ರಕಾಶ್‌ ಹೆಗ್ಡೆ, ಚಂದ್ರಪ್ಪ ಮಿಸ್!

ಏಳು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಇವರು

  1. ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
  2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
  3. ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
  4. ವಿಜಯಪುರ – ರಾಜು ಆಲಗೂರು – ಎಸ್.ಸಿ
  5. ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
  6. ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ
  7. ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ

ಇದನ್ನೂ ಓದಿ: Lok Sabha Election 2024: 17 ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗಿದೆ: ಡಿಕೆಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನುಭವಿಸಿದರೂ ತಾನು ಮಾತ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಇಂದು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಾವು ಪಶ್ಚಿಮ ಬಂಗಾಳದಲ್ಲಿ ಸೋತಿಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಇವಿಎಂಗಳ ಲೂಟಿ ಮಾಡಲಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿಕೊಂಡಿದೆ. ಆದರೆ ನೈತಿಕವಾಗಿ ನಾವು ಗೆಲುವನ್ನು ಸಾಧಿಸಿದ್ದೇವೆ ಎಂದಿದ್ದಾರೆ.

Continue Reading

Latest

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ 206 ಸೀಟುಗಳನ್ನು ಗೆದ್ದಿದೆ. ಮೂರನೇ ಎರಡರಷ್ಟು ಬಹುಮತ ಪಕ್ಷಕ್ಕೆ ಸಿಕ್ಕಿದೆ. ಮಮತಾ ಬ್ಯಾನರ್ಜಿ ತನ್ನ ತವರು ಕ್ಷೇತ್ರ ಭವಾನಿಪುರದಲ್ಲೇ ಸೋತಿದ್ದಾರೆ. ಮಮತಾ ಬ್ಯಾನರ್ಜಿಯನ್ನೇ ಸೋಲಿಸಿ ಬಿಜೆಪಿಯ ಸುವೇಂದು ಅಧಿಕಾರಿ, ರಣಧೀರ ಅನ್ನಿಸಿಕೊಂಡಿದ್ದಾರೆ. ನಂದಿಗ್ರಾಮದಲ್ಲೂ ಸುವೇಂದು ಅಧಿಕಾರಿ ಜಯಭೇರಿ ಬಾರಿಸಿದ್ದಾರೆ. ಹಾಗಾದರೆ, ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾ?. ಬಿಜೆಪಿಯ ಯಾವತ್ತಿಗೂ ಅಚ್ಚರಿಯ ನಿರ್ಧಾರ ಪ್ರಕಟಿಸುವಲ್ಲಿ ಎತ್ತಿದ ಕೈ. ಹಾಗಾಗಿ, ಪಶ್ಚಿಮ ಬಂಗಾಳದ ಸಿಎಂ ಯಾರಾಗಬಹುದು? ರೇಸ್‌ನಲ್ಲಿ ಇರೋರು ಯಾರು?
1. ಸುವೇಂದು ಅಧಿಕಾರಿ:
ಸದ್ಯ ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ. ಒಂದು ಕಾಲದಲ್ಲಿ ಟಿಎಂಸಿಯಲ್ಲಿದ್ದಾಗ ಮಮತಾ ಬ್ಯಾನರ್ಜಿ ಪರಮಾಪ್ತ. ಬಿಜೆಪಿಗೆ ಬಂದ ನಂತರ ದೀದಿಯ ಪ್ರಥಮ ಎದುರಾಳಿ. ದೀದಿಯನ್ನು ಅವರ ಭದ್ರಕೋಟೆ ಭವಾನಿಪುರದಲ್ಲೇ ಸೋಲಿಸಿದ ಖ್ಯಾತಿ. ನಂದಿಗ್ರಾಮವನ್ನೂ ಸಹ ಗೆದ್ದಿದ್ದಾರೆ. ಬಿಜೆಪಿಯ ಚುನಾವಣಾ ಯಂತ್ರ ಮುನ್ನಡೆಸಿದ ನೇತಾರ. ಮಮತಾಗೆ ತಕ್ಕ ಟಕ್ಕರ್‌ ಕೊಡಬಲ್ಲ ಬಿಜೆಪಿಯ ಫೈರ್‌ಬ್ರಾಂಡ್‌ ನಾಯಕ. ಸದ್ಯ ರೇಸ್‌ನಲ್ಲಿ ಮುಂಚೂಣಿಯಲ್ಲಿರುವುದು ಸುವೇಂದು ಅಧಿಕಾರಿ.
2. ಶಮಿಕ್‌ ಭಟ್ಟಾಚಾರ್ಯ:
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ. ಬಿಜೆಪಿಯನ್ನು ತಳಮಟ್ಟದಲ್ಲಿ ಸಂಘಟಿಸಿದ ಲೀಡರ್‌. ಬೂತ್‌ ಮ್ಯಾನೇಜ್ಮೆಂಟ್‌, ಚುನಾವಣಾ ರಣತಂತ್ರ, ಕಾರ್ಯಕರ್ತರ ನಾಡಿ ಮಿಡಿತ ಅರಿಯಬಲ್ಲ ನಾಯಕ. ಗುಪ್ತಗಾಮಿನಿಯಾಗಿ ಬಿಜೆಪಿಯ ಪ್ರಚಾರ ತಂತ್ರ ನಿರ್ವಹಿಸಿದ್ದರು.
3. ದಿಲೀಪ್‌ ಘೋಷ್‌:
2019ರಿಂದ ಬಂಗಾಳದಲ್ಲಿ ಬಿಜೆಪಿಯನ್ನು ಸಂಘಟಿಸಿದ್ದವರು ದಿಲೀಪ್‌ ಘೋಷ್‌. ಬಿಜೆಪಿ ಬಂಗಾಳದಲ್ಲಿ ಮೂರು ಸ್ಥಾನಗಳಿಂದ 206 ಸ್ಥಾನಗಳಿಗೇರುವಲ್ಲಿ ದಿಲೀಪ್‌ ಘೋಷ್‌ ಪಾತ್ರ ದೊಡ್ಡದು. ಕಾರ್ಯಕರ್ತರಿಗೆ ಕನೆಕ್ಟ್‌ ಆಗುವ ಅನುಭವಿ ನಾಯಕ.
4. ರೂಪಾ ಗಂಗೂಲಿ:
ಮಹಾಭಾರತ ಧಾರಾವಾಹಿಯ “ದ್ರೌಪದಿ” ಪಾತ್ರಧಾರಿಯೇ ರೂಪಾ ಗಂಗೂಲಿ. ಕಿರುತೆರೆ ಧಾರಾವಾಹಿ ಕಾರಣದಿಂದ ಜನಮನದಲ್ಲಿರುವ ನಾಯಕಿ. ಮಮತಾಗೆ ಪರ್ಯಾಯವಾಗಿ ಮಹಿಳಾ ನಾಯಕಿಯನ್ನೇ ಬೆಳೆಸಬೇಕು ಎಂಬ ರಣತಂತ್ರ ಬಿಜೆಪಿಯಲ್ಲಿದ್ದರೆ, ರೂಪಾ ಗಂಗೂಲಿ ಹೆಸರು ಪ್ರಸ್ತಾಪವಾದರೆ ಅಚ್ಚರಿಯಿಲ್ಲ.
5. ಅಗ್ನಿಮಿತ್ರಾ ಪೌಲ್‌:
ಬಿಜೆಪಿಯ ಹೊಸ ತಲೆಮಾರಿನ ಫೈರ್‌ ಬ್ರಾಂಡ್‌ ನಾಯಕಿ. ಮಹಿಳಾ ವಿಷಯಗಳ ಬಗ್ಗೆ ಖಡಕ್‌ ಧ್ವನಿ ಎತ್ತುವ ಅಗ್ನಿಮಿತ್ರಾ, ಮಾಧ್ಯಮಗಳಲ್ಲಿ ಬಿಜೆಪಿ ಇಮೇಜ್‌ ಬೆಳೆಸುವಲ್ಲಿ ದೊಡ್ಡ ಹೆಸರು. ಮಹಿಳಾ ನಾಯಕಿ ಎಂಬ ಕೆಟಗರಿಯಲ್ಲಿ ಅಗ್ನಿಮಿತ್ರಾ ಪೌಲ್‌ ಸ್ಪರ್ಧೆಯಲ್ಲಿದ್ದಾರಂತೆ.

Continue Reading

Latest

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

VISTARANEWS.COM


on

ವಿಜಯ್‌ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ. ಇದು ನಿಚ್ಚಳವಾಗುತ್ತಿದೆ. ಸರ್ಕಾರ ರಚನೆಗೆ ಈಗಾಗಲೇ ಟಿವಿಕೆ ಹಕ್ಕು ಮಂಡಿಸಿದೆ. ಎರಡು ವಾರಗಳಲ್ಲಿ ಬಹುಮತ ಸಾಬೀತು ಪಡಿಸುವುದಾಗಿಯೂ ಹೇಳಿದೆ. 234 ಸದಸ್ಯ ಬಲದ ತಮಿಳುನಾಡಿನ ಅಸೆಂಬ್ಲಿಯಲ್ಲಿ ಟಿವಿಕೆಗೆ ಸಿಕ್ಕಿದ್ದು 108 ಕ್ಷೇತ್ರ ಮಾತ್ರ. ಸರಳ ಬಹುಮತದ ನಂಬರ್‌ 118 ತಲುಪಲು ವಿಜಯ್‌ಗೆ ಇನ್ನೂ 10 ಶಾಸಕರು ಬೇಕು. ಬಹುಮತ ಸಾಬೀತು ಪಡಿಸುವುದಷ್ಟೇ ಅಲ್ಲ, ಭವಿಷ್ಯದಲ್ಲಿ ಸರ್ಕಾರವೂ ಸುಭದ್ರವಾಗಿರಬೇಕು. ಈ ನಿಟ್ಟಿನಲ್ಲಿ ನಟ ವಿಜಯ್‌ ಮುಂದಿರುವ ಆಯ್ಕೆಗಳೇನು?
1. ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ:
ಹತ್ತು ಶಾಸಕರಿಗಾಗಿ ವಿಜಯ್‌ ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಕಾಂಗ್ರೆಸ್‌ 5, ಪಿಎಂಕೆ 4, ಮುಸ್ಲಿಂ ಲೀಗ್‌ 2, ಸಿಪಿಐ 2, ವಿಸಿಕೆ 2, ಸಿಪಿಐಎಂ 2, ಡಿಎಂಡಿಕೆ 1, AMMKMNKZ 1 ಗೆದ್ದಿವೆ. ಈ ಎಲ್ಲಾ ಸಣ್ಣ ಪಕ್ಷಗಳನ್ನು ಸೇರಿಸಿದರೆ, ವಿಜಯ್‌ಗೆ 19 ಶಾಸಕರ ಬೆಂಬಲ ಸಿಗಲಿದೆ. ಕಾಂಗ್ರೆಸ್‌ ಈಗಾಗಲೇ ಟಿವಿಕೆಗೆ ಬೆಂಬಲದ ಮಾತುಗಳನ್ನಾಡಿದೆ.
೨. ಎಐಎಡಿಎಂಕೆ ಜೊತೆ ಮೈತ್ರಿ:
ಎಐಎಡಿಎಂಕೆ ಜೊತೆ ಟಿವಿಕೆ ಮೈತ್ರಿಯ ಸಾಧ್ಯತೆಯೂ ಎರಡನೇ ಆಯ್ಕೆ. ಬಿಜೆಪಿ ಹೊರತುಪಡಿಸಿ ಮೈತ್ರಿಗೆ ಟಿವಿಕೆ ಷರತ್ತು ಹಾಕಬಹುದು. ಎಐಎಡಿಎಂಕೆ 47 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ-ಎಐಎಡಿಎಂಕೆ ಮೈತ್ರಿಯಾದರೆ ಸುಭದ್ರ ಸರ್ಕಾರ ನೀಡಬಹುದು.
೩. ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆ
ಸಣ್ಣ ಪಕ್ಷಗಳೂ ಸಿಗಲಿಲ್ಲ. ಎಐಎಡಿಎಂಕೆ ಜೊತೆ ಮೈತ್ರಿ ಕುದುರಲಿಲ್ಲ ಎಂದಾದರೆ, ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಎಐಎಡಿಎಂಕೆಯನ್ನು ಅಧಿಕಾರದಿಂದ ದೂರ ಇಡಲು, ಡಿಎಂಕೆ ಈ ನಿರ್ಧಾರಕ್ಕೆ ಬಂದರೂ ಬರಬಹುದು ಎನ್ನಲಾಗುತ್ತಿದೆ. ಆದರೆ, ಡಿಎಂಕೆ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಈಗಾಗಲೇ ಸ್ಟಾಲಿನ್‌ ಹೇಳಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

VISTARANEWS.COM


on

ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದೆ. ತಮಿಳುನಾಡಿನಲ್ಲಿ ಟಿವಿಕೆ ಅಚ್ಚರಿ ಮೂಡಿಸಿದ್ದು, ಅಧಿಕಾರದ ಸನಿಹದಲ್ಲಿದೆ. ಕೇರಳಂ ಸೋಲಿನೊಂದಿಗೆ ಭಾರತದಲ್ಲಿ ಎಡರಂಗದ ಅಧಿಕಾರ ಕೊನೆಗೊಂಡಿದೆ. ಮಲೆಯಾಳಿಗಳ ರಾಜ್ಯದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಆಡಳಿತವನ್ನು ಬಿಜೆಪಿ ಕೊನೆಗಾಣಿಸಿದೆ. ಪಶ್ಚಿಮ ಬಂಗಾಳ ಗೆಲುವಿಗಾಗಿ ಹಠವಿಡಿದ ಬಿಜೆಪಿ ಕೊನೆಗೂ ಯಶ ಸಾಧಿಸಿದೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ, ಬಿಜೆಪಿ ಮೂರನೇ ಎರಡು ಭಾಗದಷ್ಟು ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್‌, ಎಡರಂಗ ತಲಾ ಎರಡು ಸೀಟುಗಳಿಗೆ ತೃಪ್ತಿಪಡಬೇಕಾಗಿದೆ. ಇದು ಬಿಜೆಪಿಯ ಅತಿದೊಡ್ಡ ಗೆಲುವಾಗಿದೆ.
ನಟ ವಿಜಯ್‌ ಸುನಾಮಿಗೆ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಕೊಚ್ಚಿ ಹೋಗಿದೆ. ಸ್ಟಾಲಿನ್‌, ಉದಯನಿಧಿ ಸ್ಟಾಲಿನ್‌ ಸೇರಿದಂತೆ ಘಟಾನುಘಟಿ ನಾಯಕರು ನೆಲಕಚ್ಚಿದ್ದಾರೆ. ನಟ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಚುನಾವಣೆಯಲ್ಲೇ ಅಧಿಕಾರಕ್ಕೆ ಹತ್ತಿರದಲ್ಲಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಕ್ಷೇತ್ರಗಳನ್ನು ಗೆದ್ದಿದೆ. ಡಿಎಂಕೆ 79 ಮತ್ತು ಎಐಎಡಿಎಂಕೆ 54 ಕಡೆ ಗೆಲುವು ದಾಖಲಿಸಿವೆ. ದ್ರಾವಿಡ ನಾಡಲ್ಲಿ ನಟ ವಿಜಯ್‌ ಇತಿಹಾಸ ಸೃಷ್ಟಿಸಿದ್ದಾರೆ.
ಇನ್ನು ಕೇರಳಂನಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತಾರೂಢ ಲೆಫ್ಟ್‌ ಡೆಮಾಕ್ರಾಟಿಕ್‌ ಫ್ರಂಟ್‌ ನೆಲಕಚ್ಚಿದೆ. ಕೇರಳಂ ಫಲಿತಾಂಶ ಮಾತ್ರ ಕಾಂಗ್ರೆಸ್‌ ಖುಷಿಗೆ ಕಾರಣವಾಗಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಯುಡಿಎಫ್‌ 100 ಕ್ಷೇತ್ರಗಳನ್ನು ಗೆದ್ದಿದೆ. ಎಲ್‌ಡಿಎಫ್‌ 35ಕ್ಕೆ ಸ್ಥಾನಗಳಿಗೆ ಸೀಮಿತವಾಗಿದೆ. ಇದರೊಂದಿಗೆ ದೇಶದಲ್ಲಿ ಎಡರಂಗದ ಆಡಳಿತ ಅಂತ್ಯವಾಗಿದೆ.
ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ಹ್ಯಾಟ್ರಿಕ್‌ ಬಾರಿಸಿದೆ. ಹಿಮಂತ ಬಿಸ್ವ ಶರ್ಮಾ ನಾಯಕತ್ವದ ಮುಂದೆ ಗೌರವ್‌ ಗೊಗೊಯಿ ನೇತೃತ್ವದ ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. 126 ಸದಸ್ಯ ಬಲದ ಅಸ್ಸಾಂ ಅಸೆಂಬ್ಲಿಯಲ್ಲಿ ಬಿಜೆಪಿ 102 ಸ್ಥಾನಗಳಲ್ಲಿ ಜಯಭೇರಿ ದಾಖಲಿಸಿದೆ. ಕಾಂಗ್ರೆಸ್‌ 21 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಇನ್ನು ಪುದುಚೇರಿಯಲ್ಲಿ ಎನ್‌ಡಿಎ ಅಧಿಕಾರ ಉಳಿಸಿಕೊಂಡಿದೆ. 30 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎನ್‌ಡಿಎ 18 ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ ಮೈತ್ರಿಕೂಟ 7 ಹಾಗೂ ಟಿವಿಕೆಯ ಮೂವರು ಗೆಲುವಿನ ನಗೆ ಬೀರಿದ್ದಾರೆ.

Continue Reading
Advertisement
Latest16 hours ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest19 hours ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest19 hours ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ2 days ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest3 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌