Congress Protest: 'ಅಮ್ಮಾ, ತಾಯಿ ನಿರ್ಮಲಾ ನಮ್ಮ ದುಡ್ಡು ಕೊಡಮ್ಮಾ' ಎಂದ ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

Congress Protest: ‘ಅಮ್ಮಾ, ತಾಯಿ ನಿರ್ಮಲಾ ನಮ್ಮ ದುಡ್ಡು ಕೊಡಮ್ಮಾ’ ಎಂದ ಸಿಎಂ ಸಿದ್ದರಾಮಯ್ಯ

Congress Protest: ರಾಜ್ಯಗಳಿಗೆ ಜಿಎಸ್‌ಟಿ ವಿಚಾರವಾಗಿ ಅನ್ಯಾಯ ಆಗಿದೆ. ಅನ್ಯಾಯ ಆದ ಮೇಲೆ ಪ್ರತಿಭಟನೆ ಮಾಡಬೇಕಾ ಬೇಡವೇ? 11495 ಕೋಟಿ ರೂಪಾಯಿ ಹಣ ಬರಬೇಕು. ಹೀಗಾಗಿ ನಿರ್ಮಲಾ ಸೀತಾರಾಮನ್‌ ಅವರ ಬಳಿ ದುಡ್ಡು ಕೊಡಬೇಕು ಎಂದು ಕೇಳಿಕೊಂಡೆ. ಅದಕ್ಕೆ ಅವರು “ತಾವು ಫೈನಾನ್ಸ್ ಕಮಿಷನ್ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ” ಎಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

VISTARANEWS.COM


on

Cm Siddaramaiah in New Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸರ್ಕಾರದಿಂದ (Central Government) ಕರ್ನಾಟಕಕ್ಕೆ ಭಾರಿ ಅನ್ಯಾಯವಾಗಿದೆ. ಕನ್ನಡಿಗರಿಗೆ ಮೋಸವಾಗಿದ್ದಕ್ಕೆ ನಾವೀಗ ಧ್ವನಿ ಎತ್ತುತ್ತಿದ್ದೇವೆ. ಕಳೆದ 8-9 ವರ್ಷಗಳಲ್ಲಿ ಕರ್ನಾಟಕಕ್ಕೆ ತಾರತಮ್ಯವಾಗಿದೆ. ಸುಮಾರು 1,87,000 ಕೋಟಿ ರೂಪಾಯಿಯಷ್ಟು ದುಡ್ಡು ಕೊಡದೆ ನಷ್ಟ ಮಾಡಲಾಗಿದೆ. ನಮಗೆ ಈ ಬಾರಿ 15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ 11495 ಕೋಟಿ ರೂಪಾಯಿ ನೀಡಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Union Finance Minister Nirmala Sitharaman) ಅವರ ಬಳಿ ಕೇಳಿದೆ. ಅಮ್ಮಾ, ತಾಯಿ ನಿರ್ಮಲಾ ದುಡ್ಡು ಕೊಡಮ್ಮಾ ಎಂದು ಕೇಳಿಕೊಂಡೆ. ಆದರೆ, ಅವರು ಹೇಳಿದ್ದೇನು? ಫೈನಾನ್ಸ್ ಕಮಿಷನ್ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದ್ದಾರೆ. ಹಾಗಾದ್ರೆ ಈ ಹಣಕಾಸು ಆಯೋಗ ನೀಡಿದ ಶಿಫಾರಸನ್ನು ತಿರಸ್ಕಾರ ಮಾಡಿದ್ದು ತಾವೇ ಅಲ್ಲವೇ? ಹೀಗಾಗಿ ನಾವು ಪ್ರತಿಭಟನೆಯನ್ನು (Congress Protest) ಮಾಡಬೇಕಾ? ಬೇಡವಾ? ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರವು ಅನುದಾನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಗಳಿಗೆ ಜಿಎಸ್‌ಟಿ ವಿಚಾರವಾಗಿ ಅನ್ಯಾಯ ಆಗಿದೆ. ಅನ್ಯಾಯ ಆದ ಮೇಲೆ ಪ್ರತಿಭಟನೆ ಮಾಡಬೇಕಾ ಬೇಡವೇ? 11495 ಕೋಟಿ ರೂಪಾಯಿ ಹಣ ಬರಬೇಕು. ಹೀಗಾಗಿ ನಿರ್ಮಲಾ ಸೀತಾರಾಮನ್‌ ಅವರ ಬಳಿ ದುಡ್ಡು ಕೊಡಬೇಕು ಎಂದು ಕೇಳಿಕೊಂಡೆ. ಅದಕ್ಕೆ ಅವರು “ತಾವು ಫೈನಾನ್ಸ್ ಕಮಿಷನ್ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ” ಎಂದಿದ್ದಾರೆ. ಯು ಓನ್ಲಿ ರೆಪ್ರಸೆಂಟಿಂಗ್‌ (You only representing Karnataka). ಯಾಕೆ ಸುಳ್ಳು ಹೇಳ್ತೀರಾ? ಎಂದು ಆಕ್ರೋಶವನ್ನು ಹೊರಹಾಕಿದರು. ಆಗ ಅಲ್ಲಿ ಸೇರಿದ್ದ ಕಾಂಗ್ರೆಸ್‌ ಸಚಿವರು, ಶಾಸಕರು, ಪರಿಷತ್‌ ಸದಸ್ಯರು, “ಶೇಮ್‌ … ಶೇಮ್‌..” ಎಂದು ಕೂಗಿದರು.

ಇದನ್ನೂ ಓದಿ: Congress Protest: ಕಿವಿ ಇಲ್ಲದ ಕೇಂದ್ರಕ್ಕೆ ಧ್ವನಿ ಕೇಳಿಸಲು ದೆಹಲಿಗೆ ಬಂದು ಕೂಗುತ್ತಿದ್ದೇವೆ: ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದು ರಾಜಕೀಯ ಚಳವಳಿ ಅಲ್ಲ

ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ.

ಇದು ಐತಿಹಾಸಿಕವಾದ ಪ್ರತಿಭಟನೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸನ್ನೇ 15ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು. ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ಇದನ್ನೂ ಓದಿ: Kidwai Hospital : ಕಿದ್ವಾಯಿ ಆಸ್ಪತ್ರೆ ಅವ್ಯವಹಾರ; ನಿರ್ದೇಶಕ ಸ್ಥಾನದಿಂದ ಡಾ. ಲೋಕೇಶ್‌ ವಜಾ

ಜನಸಂಖ್ಯೆಯನ್ನು ನಿಯಂತ್ರಣ ಮಾಡಿ ತಪ್ಪು ಮಾಡಿದೆವಾ?

ಉತ್ತರ ಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ. ಉತ್ತರ ಭಾರತದಲ್ಲಿ ಯಾವುದೇ ರೀತಿಯ ಜನಸಂಖ್ಯೆ ನಿಯಂತ್ರಣ ಮಾಡಲಿಲ್ಲ. ಆದರೆ, ದಕ್ಷಿಣ ಭಾರತದವರು ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದೆವು. ಹೀಗಾಗಿ ಉತ್ತರ ಭಾರತದವರಿಗಿಂದ ದಕ್ಷಿಣ ಭಾರತದವರ ಸಂಖ್ಯೆ ಕಡಿಮೆಯಾಯಿತು. ಆದರೆ, ಈ ಅನುದಾನ ಹಂಚಿಕೆಯನ್ನು ನೋಡಿದರೆ ಜನಸಂಖ್ಯೆಯನ್ನು ನಿಯಂತ್ರಣ ಮಾಡಿ ನಾವು ತಪ್ಪು ಮಾಡಿದೆವಾ ಎಂಬುದಾಗಿ ಅನ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

Hassan Pen Drive Case: ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ಮೊದಲ ಬಾರಿ ಮಾಧ್ಯಮಗಳಿಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ (Hassan Pen Drive Case) ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ನಗರದಲ್ಲಿ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 4-5 ವರ್ಷದ ಹಿಂದೆ ಘಟನೆ ನಡೆದಿದೆ ಎಂದು ಈಗ ಕೇಸ್‌ ಹಾಕಿದ್ದಾರೆ. ಇದು ಯಾವ ತರಹದ್ದು ಎಂದು ಏನೂ ಮಾತನಾಡಲ್ಲ. ವಿಡಿಯೊ ಸೇರಿ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದು ತಿಳಿಸಿದ್ದಾರೆ.

ಪಕ್ಷದಿಂದ ಉಚ್ಚಾಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ನಿರ್ಧಾರ ಪಕ್ಷಕ್ಕೆ ಸೇರಿದ್ದು, ಎಸ್‌ಐಟಿ ರಚನೆ ಮಾಡಿರುವುದರಿಂದ ತನಿಖೆಗೆ ತೊಂದರೆ ಆಗಬಾರದೆಂದು ನಾನೇನೂ ಮಾತನಾಡಲ್ಲ. ಇದೆಲ್ಲಾ ರಾಜಕೀಯ. ಸರ್ಕಾರ ಅವರದು ಇದೆ, ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಕರಣದ ಬಗೆ ಕಾನೂನು ರೀತಿಯಲ್ಲಿ ತನಿಖೆ ಆಗಲಿ ಎಂದು ಹೇಳಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಿರುವ ವಿಚಾರಕ್ಕೆ ಸ್ಪಂದಿಸಿ, ಚುನಾವಣೆ ಮುಗಿದ ನಂತರ ಅವನು ಹೋಗಿದ್ದಾನೆ. ಯಾವುದೋ ಕೆಲಸಕ್ಕಾಗಿ ಹೋಗ್ಬೇಕಿತ್ತು ಹೋಗಿದ್ದಾನೆ. ಇವರು ಎಫ್‌ಐಆರ್‌ ಹಾಕುತ್ತಾರೆ ಅಂತ ಗೊತ್ತಿತ್ತಾ? ಎಸ್‌ಐಟಿ ತನಿಖೆ ಮಾಡುತ್ತಾರೆ ಅಂತ ಗೊತ್ತಿತ್ತಾ? ವಿಚಾರಣೆಗೆ ಕರೆದಾಗ ಬರುತ್ತಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

50 ವರ್ಷಗಳಿಂದ ನಾವು ತನಿಖೆ ಎದುರಿಸುತ್ತಿದ್ದೇವೆ. ದೇವೇಗೌಡರ ಮೇಲೆ ತನಿಖೆ ನಡೆಸಿದ್ದರು, ದೇವೆಗೌಡರ ಬಳಿ ಈ‌ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಆದರೂ ಕಾನೂನು ಕ್ರಮ ಏನು ಆಗುತ್ತೆ ಆಗಲಿ ಎಂದು ಅವರು ಹೇಳಿರುವುದಾಗಿ ತಿಳಿಸಿದರು.

ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

Continue Reading

ಹಾವೇರಿ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ ನಡೆಸಿದರು.

VISTARANEWS.COM


on

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
Koo

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ (Lok Sabha Election 2024) ನಡೆಸಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಜತೆ ಶಾಸಕ ಶ್ರೀನಿವಾಸ ಮಾನೆ, ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಗದಗನಲ್ಲಿ ಯುವ ಚೈತನ್ಯ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭಾರೀ‌ ಅನ್ಯಾಯವಾಗುತ್ತಿದೆ, ರೈತರಿಗೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬರ ಪರಿಹಾರ ವಿಚಾರದಲ್ಲಿ‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವಿದ್ದರೆ ಬಿಡುಗಡೆ ಮಾಡುತ್ತಿದ್ದೆವು ಎಂದು ಮಾಧ್ಯಮ ಮೂಲಕ ಬೆಂಗಳೂರು, ಹಾವೇರಿಯಲ್ಲಿ ಹೇಳಿದರೇ ವಿನಃ ಒಂದು ಬಾರಿಯು ಅಮಿತ್ ಶಾ ಹಾಗೂ‌ ಮೋದಿ ಅವರನ್ನು ಭೇಟಿಯಾಗಲಿಲ್ಲ ಎಂದು ಆರೋಪಿಸಿದ ಅವರು, ಆದರೆ ಕರ್ನಾಟಕಕ್ಕೆ ನ್ಯಾಯ ಸಿಗಲು ಅನಿವಾರ್ಯವಾಗಿ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾಯಿತು ಎಂದು ತಿಳಿಸಿದರು.

ದೇಶಾದ್ಯಂತ ಬಿಜೆಪಿ ವಿರೋಧಿ ಅಲೆಯಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಜಯವಾಗಲಿದೆ ಎಂದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading
Advertisement
Rameshwaram Cafe blast
ಕರ್ನಾಟಕ20 mins ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ35 mins ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ38 mins ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ58 mins ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು1 hour ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ1 hour ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್1 hour ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
ಹಾವೇರಿ2 hours ago

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Toyota Kirloskar Motor launched the Tgloss
ವಾಣಿಜ್ಯ2 hours ago

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Lok Sabha Election-2024
Lok Sabha Election 20242 hours ago

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20247 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20249 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌