Congress Karnataka: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್ - Vistara News

ಕರ್ನಾಟಕ

Congress Karnataka: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್

Congress Karnataka: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಪ್ರಸ್ತಾಪವು ಹೈಕಮಾಂಡ್ ಮುಂದೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ರಾಜ್ಯ ಸಚಿವರ ಹೇಳಿಕೆಗೆ ಪರೋಕ್ಷವಾಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

VISTARANEWS.COM


on

Mallikarjun Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ಆಂತರಿಕ ಭಿನ್ನಮತ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಇದ್ದರೂ, ಹೆಚ್ಚುವರಿ ಮೂವರು ಡಿಸಿಎಂ ಅಗತ್ಯವಿದೆ. ಸಮುದಾಯವಾರು ಪ್ರಾತಿನಿಧ್ಯ ಕೊಡಬೇಕು ಎಂದು ದಲಿತ ಹಾಗೂ ಸಿಎಂ ಆಪ್ತ ಸಚಿವರು ತಮ್ಮ ಬೇಡಿಕೆಯನ್ನು ಬಹಿರಂಗವಾಗಿ ಪ್ರಚುರಪಡಿಸಿದ್ದಲ್ಲದೆ, ಹೈಕಮಾಂಡ್‌ (Congress High Command) ಮುಂದೆಯೂ ಇಟ್ಟಿದ್ದರು. ಆದರೆ. ಈಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge), ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಪ್ರಸ್ತಾಪವು ಹೈಕಮಾಂಡ್ ಮುಂದೆ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ರಾಜ್ಯ ಸಚಿವರ ಹೇಳಿಕೆಗೆ ಪರೋಕ್ಷವಾಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಕಳೆದ ವಾರ ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಕೆಲವು ಸಚಿವರು ಬಹಿರಂಗ ಹೇಳಿಕೆ ನೀಡಿದ್ದರು. ಬಳಿಕ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾಲಿಟಿಕ್ಸ್ ಸಹ ನಡೆದಿತ್ತು. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಅವರ ಮತ್ತೊಂದು ಬಣವು ಹೈಕಮಾಂಡ್ ಗಮನಕ್ಕೆ ತಂದಿತ್ತು. ಅಲ್ಲದೆ, ಸಮರ್ಪಕ ಕ್ರಮ ತೆಗೆದುಕೊಳ್ಳುವಂತೆ ದೂರು ಸಲ್ಲಿಸಿದ್ದರು.

ದೂರು ನೀಡಿದ ಬೆನ್ನಲ್ಲೇ ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಎಂಟ್ರಿ ಕೊಟ್ಟಿದ್ದರು. ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಎನ್‌. ರಾಜಣ್ಣ, ಎಂ.ಬಿ. ಪಾಟೀಲ್ ಸೇರಿ ಕೆಲವರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಲ್ಲಿ ವಾರ್ನಿಂಗ್ ಕೊಟ್ಟಿದ್ದಾರೆ.

3 ಡಿಸಿಎಂ ಹುದ್ದೆ ಬೇಕು ಎಂದಿದ್ದ ಸಚಿವರು

ದಲಿತ ಹಾಗೂ ಸಿಎಂ ಆಪ್ತ ಸಚಿವರ ಅಹವಾಲನ್ನು ಹೈಕಮಾಂಡ್‌ ಆಲಿಸಿದೆ. ಸೋಮವಾರ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಅಸಮಾಧಾನಿತ ಸಚಿವರ ತಂಡದ ಸಚಿವರ ಜತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ (Randeep Singh Surjewala) ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು ಎಂಬ ಬೇಡಿಕೆ ಇಟ್ಟಿರುವ ಈ ಗುಂಪು, ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಡಾ. ಜಿ‌. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಎಂ.ಬಿ. ಪಾಟೀಲ್ ಜತೆಗೆ ಸುರ್ಜೇವಾಲ ಸಭೆ ನಡೆಸಿ ಅಸಮಾಧಾನ ತಣಿಸಲು ಯತ್ನಿಸಿದ್ದಾರೆ. ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ನಡೆಸಿದ್ದ ಕೆಲವು ಅಸಮಧಾನಿತ ಸಚಿವರು, ಸುರ್ಜೇವಾಲರನ್ನು ಭೇಟಿ ಮಾಡುವ ನಿರ್ಧಾರಕ್ಕೆ ಬಂದಿದ್ದರು. ಅದರಂತೆ ಸಮಯವನ್ನೂ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಮಾತುಕತೆ ನಡೆದಿದೆ ಎನ್ನಲಾಗಿದೆ.

ಡಿಸಿಎಂ ಹುದ್ದೆ ಸೃಷ್ಟಿಗೆ ಸಚಿವರ ಪಟ್ಟು

ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಮುದಾಯವಾರು ಡಿಸಿಎಂ ಹುದ್ದೆ ನೀಡಬೇಕು ಎಂದು ದಲಿತ ಹಾಗೂ ಸಿಎಂ ಆಪ್ತ ಸಚಿವರು ಈ ವೇಳೆ ಪಟ್ಟು ಹಿಡಿದು ಕುಳಿತರು ಎನ್ನಲಾಗಿದೆ. ವಿಧಾನಸಭೆಯಲ್ಲಿ ಪಕ್ಷದ ಪರವಾಗಿ ದಲಿತ, ಲಿಂಗಾಯತ, ಅಲ್ಪಸಂಖ್ಯಾತ ಮತಗಳು ಬಂದಿವೆ. ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಹೊರ ರಾಜ್ಯಗಳಲ್ಲಿ ಬಿಜೆಪಿ ಡಿಸಿಎಂ ಹುದ್ದೆಗಳ ಸೃಷ್ಟಿ ಮೂಲಕ ಸಮುದಾಯಗಳನ್ನು ವಿಶ್ವಾಸ ಪಡೆಯಲು ಮುಂದಾಗಿದೆ. ಹಾಗಾಗಿ ಡಿಸಿಎಂ ಹುದ್ದೆ ನೀಡಿ ಪಕ್ಷದ ಪರ ನಿಂತ ಸಮುದಾಯಗಳನ್ನು ಪರಿಗಣಿಸಿದ್ದೇವೆ ಎಂಬ ಸಂದೇಶ ನೀಡಬೇಕಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಆದ್ದರಿಂದ ದಲಿತ, ಲಿಂಗಾಯತ, ಅಲ್ಪಸಂಖ್ಯಾತರನ್ನು ಪಕ್ಷ ಪರಿಗಣಿಸಬೇಕು ಎಂಬ ಎಂಬ ಬೇಡಿಕಯನ್ನು ಈ ತಂಡ ಈ ವೇಳೆ ಮುಂದಿಟ್ಟಿದೆ ಎನ್ನಲಾಗಿದೆ.

ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟ ಸಚಿವರು!

ಸಮುದಾಯವಾರು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿರುವ ಸಚಿವರು, ಕೊನೆಯಲ್ಲಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆಯೂ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ನಾವು ಅಭಿಪ್ರಾಯವನ್ನು ಹೇಳಿದ್ದೇವೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡಬೇಕು. ಒಂದು ವೇಳೆ ಲೋಕಸಭೆಯಲ್ಲಿ ಹಿನ್ನಡೆಯಾದರೆ ನಮ್ಮನ್ನು ದೂರಬೇಡಿ ಎಂದು ಸಚಿವರು ಹೇಳಿದರು.

ಹೈಕಮಾಂಡ್‌ ಗಮನಕ್ಕೆ ತರುವುದಾಗಿ ಸುರ್ಜೇವಾಲ ತೀರ್ಮಾನ

ಡಿಸಿಎಂ ಹುದ್ದೆ ಒಂದೇ ಇರಬೇಕು ಎಂದು ಡಿ.ಕೆ ಶಿವಕುಮಾರ್ ಪ್ರತಿಪಾದನೆ ಮಾಡಿದ್ದಾರೆ‌. ಆದರೆ, ನಿಮ್ಮ ಅಭಿಪ್ರಾಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗಮನಕ್ಕೆ ತರುತ್ತೇನೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಲೋಕಸಭೆಗೆ ಸಚಿವರ ಸ್ಪರ್ಧೆ ಬಗ್ಗೆ ಚರ್ಚೆ

ಸಭೆಯಲ್ಲಿ ಮುಂದಿನ ಲೋಕಸಭೆಗೆ 11 ಸಚಿವರ ಸ್ಪರ್ಧೆ ಬಗ್ಗೆಯೂ ಮಾತುಕತೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಈ ಸಚಿವರಿಂದ ಸುರ್ಜೆವಾಲಾ ಅಭಿಪ್ರಾಯ ಪಡೆದಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆಯಿದೆ ಎಂದು ರಣದೀಪ್‌ ಸಿಂಗ್ ಸುರ್ಜೇವಾಲ‌ ಹೇಳಿದ್ದಾರೆ.

ಸ್ಪರ್ಧೆಗೆ ಸಚಿವರ ಹಿಂದೇಟು

ನಾವು ಸ್ಪರ್ಧೆಗೆ ರೆಡಿಯಿಲ್ಲ, ನಾವು ಹೇಳಿದವರಿಗೆ ಟಿಕೆಟ್ ಕೊಡಿ. ನೀವು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ. ಆದರೆ ಅಭ್ಯರ್ಥಿಗಳನ್ನು ಬೇಗ ಘೋಷಣೆ ಮಾಡಬೇಕು. ನಮಗೆ ಗೆಲ್ಲಬೇಕಾದರೆ ಕನಿಷ್ಠ ಮೂರು ತಿಂಗಳಾದರೂ ಸಮಯಾವಕಾಶ ಬೇಕು ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ಬಹುತೇಕ ಜನವರಿ 11ರಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾವು ಏನು ಹೇಳಬೇಕೋ ಅದನ್ನು ಹೇಳಿದ್ದೇವೆ: ಸತೀಶ್‌ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಸಭೆಯ ಪ್ರತಿಫಲ ಸಿಗೋದು ಸ್ವಲ್ಪ ಸಮಯ ಆಗುತ್ತದೆ. ನಾವು ಅವರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಎಂಪಿ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದೇವೆ. ಟಿಕೆಟ್‌ಗೆ ಒಂದಿಷ್ಟು ಮಾನದಂಡ ಕೊಡುವ ಬಗ್ಗೆ ಮಾತನಾಡಿದ್ದೇವೆ. ಡಿಸಿಎಂ ವಿಚಾರ ಕೂಡ ಚರ್ಚೆ ಆಗಿದೆ. ಪ್ರಬಲ ಜಾತಿ ಸಮುದಾಯಗಳಿಗೂ ಡಿಸಿಎಂ ಕೊಡಬೇಕು ಅಂತ ಒತ್ತಾಯ ಮಾಡಿದ್ದೇವೆ. ಎಷ್ಟು ಡಿಸಿಎಂ ಅನ್ನೋದು ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ.

ಡಿ.ಕೆ. ಶಿವಕುಮಾರ್‌ ಅವರು ಡಿಸಿಎಂ ಆಗಿ ಇದ್ದೇ ಇರ್ತಾರೆ. ಉಳಿದ ಸಮುದಾಯವಾರು ಮಾಡಿ ಅಂಥ ನಾವು ಹೇಳುತ್ತಲಿದ್ದೇವೆ. ಅವರನ್ನು ಡಿಸ್ಟರ್ಬ್ ಮಾಡೋಕೆ ನಾವು ಹೋಗಲ್ಲ. ಯಾವುದೇ ನಿರ್ಧಾರವೂ ಹೈಕಮಾಂಡ್‌ಗೆ ಬಿಟ್ಟಿದ್ದಾಗಿದೆ. ನಾವು ಇಟ್ಟ ಬೇಡಿಕೆಗೆ ಅವರು ಸ್ಪಂದಿಸುವ ಭರವಸೆ ಇದೆ. ಇದು ಡಿಮ್ಯಾಂಡ್ ಕೂಡ ಹೌದು, ಮನವಿ ಕೂಡ ಹೌದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: BJP Karnataka: ಬಿಜೆಪಿ ಮಾಧ್ಯಮ ಕಾರ್ಯಾಗಾರ; ಲೋಕಸಭೆ ಚುನಾವಣೆಗೆ ಬಿ.ವೈ. ವಿಜಯೇಂದ್ರ ರಣತಂತ್ರ

ಸಚಿವರ ಸ್ಪರ್ಧೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸತೀಶ್‌ ಜಾರಕಿಹೊಳಿ, ಸಚಿವರ ಸ್ಪರ್ಧೆ ಬಗ್ಗೆ ಜನವರಿ 11ರಂದು ಸ್ಪಷ್ಟ ಚಿತ್ರಣ ಸಿಗಬಹುದು. ನಾನು ಸ್ಪರ್ಧೆ ಮಾಡಲ್ಲ ಅಂದಿದ್ದೇನೆ. ನಾನು ಈಗ ಇಲ್ಲಿ ಸಚಿವನಾಗಿದ್ದೇನೆ. ಕೆಲಸ ಮಾಡಬೇಕಾಗುತ್ತದೆ. ಎಂ.ಬಿ. ಪಾಟೀಲ್ ನಾವು ಜತೆಯಲ್ಲೇ ಇದ್ದೇವೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

ಕರ್ನಾಟಕ

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

Road Accident: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ (50) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ. ಕರ್ತವ್ಯ ನಿಮಿತ್ತ ಬುಧವಾರ ಸಂಜೆ ಯಡಿಯೂರಿಗೆ ಹೋಗಿ ಬೈಕ್‌ನಲ್ಲಿ ಕುಣಿಗಲ್‌ಗೆ ವಾಪಸ್ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ. ರಸ್ತೆ ಆಲಪ್ಪನಗುಡ್ಡೆ ಸಮೀಪ ಯಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ವೆಂಕಟೇಶ್ ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಳ್ಳೂರು ಕ್ರಾಸ್‌ನ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

VISTARANEWS.COM


on

ASI who was injured in a road accident died in kunigal
Koo

ಕುಣಿಗಲ್: ರಸ್ತೆ ಅಪಘಾತದಲ್ಲಿ (Road Accident) ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ (50) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ ಕರ್ತವ್ಯ ನಿಮಿತ್ತ ಬುಧವಾರ ಸಂಜೆ ಯಡಿಯೂರಿಗೆ ಹೋಗಿ ಬೈಕ್‌ನಲ್ಲಿ ಕುಣಿಗಲ್‌ಗೆ ವಾಪಸ್ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ. ರಸ್ತೆ ಆಲಪ್ಪನಗುಡ್ಡೆ ಸಮೀಪ ಯಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ವೆಂಕಟೇಶ್ ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಳ್ಳೂರು ಕ್ರಾಸ್‌ನ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

ಶಿರಾ ತಾಲೂಕಿನ ಎಮ್ಮೆರಹಳ್ಳಿತಾಂಡ ನಿವಾಸಿಯಾದ ವೆಂಕಟೇಶ್, ಕಳೆದ ಇಪ್ಪತ್ತು ವರ್ಷಗಳಿಂದ ತಾಲೂಕಿನ ಹುಲಿಯೂರುದುರ್ಗ,ಅಮೃತೂರು ಹಾಗೂ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೆ ಎಎಸ್‌ಐ ಆಗಿ ಬಡ್ತಿ ಹೊಂದಿ ಕುಣಿಗಲ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

ವೆಂಕಟೇಶ್ ಅವರ ಮೃತದೇಹವನ್ನು ಗುರುವಾರ ಮಧ್ಯಾಹ್ನ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು ಈ ವೇಳೆ ಕುಣಿಗಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಪಟ್ಟಣದ ನಾಗರೀಕರು ಅಂತಿಮ ನಮನ ಸಲ್ಲಿಸಿದರು ಬಳಿಕ ಮೃತ ದೇಹವನ್ನು ಕುಟುಂಬಸ್ಥರು ಸ್ವ ಗ್ರಾಮಕ್ಕೆ ಕೊಂಡೊಯ್ದರು.

Continue Reading

ಕ್ರೈಂ

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Prajwal Revanna Case: ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

VISTARANEWS.COM


on

Prajwal Revanna Case KR Nagar victim kidnapping case Satish sent to judicial custody
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಗುರುವಾರ ಮಧ್ಯಾಹ್ನ ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ವಿಚಾರಣೆ ನಡೆಯುತ್ತಿದ್ದ ವೇಳೆಯೇ ಇಬ್ಬರು ಆರೋಪಿಗಳನ್ನು ಕೋರ್ಟ್‌ ಎದುರು ಹಾಜರುಪಡಿಸಲಾಗಿತ್ತು.

ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು A2 ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿದರೆ, ಮತ್ತೊಬ್ಬ ಆರೋಪಿ ಹೊಸೂರು ಕೀರ್ತಿಯನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಮುಗಿದಿಲ್ಲ ಟೆನ್ಶನ್‌!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

Continue Reading
Advertisement
BJP district president N S Hegde pressmeet in Yallapur
ಉತ್ತರ ಕನ್ನಡ1 min ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ4 mins ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ1 hour ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 20242 hours ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ2 hours ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ2 hours ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ3 hours ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ3 hours ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ3 hours ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್3 hours ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ9 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು12 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌