Congress Politics : ಮುಗಿಯದ 3 ಡಿಸಿಎಂ ಡ್ರಾಮಾ; ತೆವಲಿಗೆ ಮಾತಾಡ್ಬೇಡಿ ರಾಜಣ್ಣ ಎಂದು ಮಾಗಡಿ ಬಾಲಕೃಷ್ಣ ನೇರ ವಾಗ್ದಾಳಿ Vistara News

ಕರ್ನಾಟಕ

Congress Politics : ಮುಗಿಯದ 3 ಡಿಸಿಎಂ ಡ್ರಾಮಾ; ತೆವಲಿಗೆ ಮಾತಾಡ್ಬೇಡಿ ರಾಜಣ್ಣ ಎಂದು ಮಾಗಡಿ ಬಾಲಕೃಷ್ಣ ನೇರ ವಾಗ್ದಾಳಿ

Congress Politics : ಮೂರು ಡಿಸಿಎಂ ಬೇಡಿಕೆ ಇಟ್ಟ ಕೆ.ಎನ್‌. ರಾಜಣ್ಣ ಅವರನ್ನು ಮಾಗಡಿ ಶಾಸಕ ಬಾಲಕೃಷ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಬಾಯಿ ತೆವಲಿಗೆ ಮಾತನಾಡಬೇಡಿ ಎಂದಿದ್ದಾರೆ.

VISTARANEWS.COM


on

Magadi Balakrishna and KN Rajanna
ಮಾಗಡಿ ಬಾಲಕೃಷ್ಣ ಮತ್ತು ಕೆ.ಎನ್‌. ರಾಜಣ್ಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್‌‌ (DK Shivakumar) ಹೊರತುಪಡಿಸಿ ಮತ್ತೆ ಮೂವರು ಉಪಮುಖ್ಯಮಂತ್ರಿಗಳನ್ನು (Three Deputy Chief ministers) ನೇಮಕ ಮಾಡಬೇಕು ಎಂಬ ಸಹಕಾರ ಸಚಿವ ಕೆ.ಎನ್‌. ರಾಜಣ್ಣ (KN Rajanna) ಅವರ ಹೇಳಿಕೆಯಿಂದಾಗಿ ಹುಟ್ಟಿಕೊಂಡ ಚರ್ಚೆ ಇನ್ನಷ್ಟು ಜೋರಾಗಿದೆ. ಒಂದು ಕಡೆ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಅವರು ಹೇಳಿಕೆಯನ್ನು ಸಮರ್ಥಿಸಿದ್ದರೆ (Congress Politics), ಅತ್ತ ಮಾಗಡಿ ಶಾಸಕ ಬಾಲಕೃಷ್ಣ (MLA Magadi Balakrishna) ಚೆನ್ನಾಗಿ ಬೆವರಿಳಿಸಿದ್ದಾರೆ.

ಡಿಸಿಎಂ ಹುದ್ದೆ ಮುಗಿದ ಅಧ್ಯಾಯ, ತೆವಲಿಗೆ ಮಾತಾಡ್ಬೇಡಿ ಎಂದ ಬಾಲಕೃಷ್ಣ

ʻʻರಾಜಣ್ಣ ಅವರಿಗೆ ಹೇಳಲು ಬಯಸುತ್ತೇನೆ. ಡಿಸಿಎಂ ಹುದ್ದೆ ಮುಗಿದ ಅಧ್ಯಾಯ. ವೈಯಕ್ತಿಕ ತೆವಲುಗಳನ್ನು ತೀರಿಸಿಕೊಳ್ಳಲು ಹೇಳಿಕೆ ಕೊಡುವುದನ್ನು ಬಿಡಬೇಕುʼʼ ಎಂದು ಸಚಿವ ಕೆ.ಎನ್ ರಾಜಣ್ಣಗೆ ಮಾಗಡಿ ಶಾಸಕ ಬಾಲಕೃಷ್ಣ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ʻʻನಾವು ಈಗ ಒಗ್ಗಟ್ಟಾಗಿ ಬರ ಎದುರಿಸಬೇಕು. ನಾಯಕರೂ ಕೂಡ ಪಕ್ಷ ಸಂಘಟನೆ ಮುಂದಿನ ಲೋಕಸಭೆ ಬಗ್ಗೆ ಯೋಚನೆ ಮಾಡಬೇಕು. ಅದು ಬಿಟ್ಟು ಈಗ ಅಪ್ರಸ್ತುತ ವಿಚಾರ ಎತ್ತುವುದು ಬೇಡ. 15 ಜನ ಡಿಸಿಎಂ ಮಾಡಿದ್ರೂ ಏನಾದ್ರೂ ಬದಲಾಗತ್ತಾ? ಡಿಸಿಎಂ ಹುದ್ದೆ ಇವತ್ತಿನ ಚರ್ಚೆಯಾಗಬಾರದು. ಈ ಸಂದರ್ಭದಲ್ಲಿ ಅಪ್ರಸ್ತುತʼʼ ಎಂದು ಮಾಗಡಿ ಬಾಲಕೃಷ್ಣ ಹೇಳಿದರು.

ʻʻಇವರು ಡಿಸಿಎಂ ಹುದ್ದೆಗಾಗಿ ಬಡಿದಾಡ್ತಿದ್ದಾರಲ್ಲ, ಕಾರ್ಯಕರ್ತರಿಗೆ ಏನು ಕೊಟ್ಟಿದ್ದಾರೆ? ನಿಗಮ ಮಂಡಳಿಗಳು ಇನ್ನೂ ಹಂಚಿಕೆ ಆಗಿಲ್ಲ. ಅದರ ಬಗ್ಗೆ ಏನು ಹೇಳೋಣ. ನಾನು ಮಂತ್ರಿ ಆಗಬೇಕಿತ್ತು, ಆಗಲಿಲ್ಲ. ನಾನೂ ರಾಜಣ್ಣನಿಗಿಂತ ಸೀನಿಯರ್. ಆದ್ರೂ ಮಂತ್ರಿ ಮಾಡಲಿಲ್ಲ. ನಾನು ಮಂತ್ರಿ ಆಗಲಿಲ್ಲ ಅಂತ ಜಗಳ ಮಾಡ್ಲಾ ಕುಸ್ತಿ ಮಾಡ್ಲಾ?ʼʼ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ʻʻಸೀನಿಯರ್ ಲೀಡರ್ ಗಳು ಮಂತ್ರಿ ಆಗಲಿಲ್ಲ ಸಿಎಂ ಆಗಲಿಲ್ಲ ಡಿಸಿಎಂ ಆಗಲಿಲ್ಲ ಅಂತ ಹೊರಟ್ರೆ, ಎಲ್ಲ ವರ್ಗಕ್ಕೂ ಡಿಸಿಎಂ ಮಾಡಬೇಕು ಅಂದ್ರೆ 15 ಜನ ಡಿಸಿಎಂ ಮಾಡಬೇಕಾಗುತ್ತದೆ. ಮೂರು ಜನ ಸಿಎಂ ಮಾಡಬೇಕಾಗುತ್ತದೆʼʼ ಎಂದು ಹೇಳಿದ ಮಾಗಡಿ ಬಾಲಕೃಷ್ಣ, ಏನೇ ಬೇಡಿಕೆ ಇದ್ರೂ ರಾಜಣ್ಣ ಇರಲಿ ಯಾರೇ ಇರಲಿ ನಾಲ್ಕು ಗೋಡೆ ಮಧ್ಯೆ ಹೇಳಲಿ. ಬೀದಿಲಿ ಬಂದು ಹೇಳಿಕೆ ಕೊಟ್ಟು ಗೊಂದಲ ಸೃಷ್ಟಿ ಮಾಡೋದು ಬೇಡ ಎಂದರು.

ʻʻಕಾರ್ಯಕರ್ತರಿಗಾದರೂ ನಿಗಮ ಮಂಡಳಿ ಮಾಡಲಿ. ಅದರ ಬಗ್ಗೆ ಯಾವ ಮಂತ್ರಿಗಳೂ ಮಾತಾಡ್ತಿಲ್ಲ. ಮಂತ್ರಿಗಳಾದವರು ಮಜಾ ಮಾಡಿಕೊಂಡು ಇದ್ದಾರೆ. ಯಾರನ್ನೋ ಮೆಚ್ಚಿಸುವುದಕ್ಕೆ ಹೇಳಿಕೆ ಕೊಡುವುದು ಬೇಡʼʼ ಎಂದು ನೇರವಾಗಿ ಹೇಳಿದರು.

ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದ ಪರಮೇಶ್ವರ್‌

ʻʻಡಿಸಿಎಂ ವಿಚಾರದಲ್ಲಿ ರಾಜಣ್ಣ ಹೇಳೋದರಲ್ಲಿ ತಪ್ಪಿಲ್ಲ. ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಹೇಳಿದ್ದಾರೆ. ಪಕ್ಷ ಇನ್ನಷ್ಟು ಸದೃಢವಾಗಬೇಕು. ಆ‌ ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಎಂಬ ದೃಷ್ಟಿಯಿಂದ ಹೇಳಿದ್ದಾರೆ. ಒಂದು ಸಂದೇಶ ಹೋಗಲಿ ಎಂದು ಅವರು ಹೇಳಿದ್ದಾರೆʼʼ ಎಂದು ಜಿ. ಪರಮೇಶ್ವರ್‌ ಸಮರ್ಥಿಸಿದರು.

ʻʻರಾಜಣ್ಣ ಅವರು ತಪ್ಪು ಮಾಡಿದರು, ತಪ್ಪು ಹೇಳಿದರು ಅನ್ನೋದು ತಪ್ಪು. ರಾಜಣ್ಣ ಅವರು ವೈಯುಕ್ತಿ ಹೇಳಿಕೆ ಕೊಟ್ಟಿದ್ದಾರೆ. ನಾನು ವೈಯುಕ್ತಿಕ ಹೇಳಿಕೆ ಕೊಡುತ್ತೇನೆ. ಆದರೆ ಅವರು ಯಾವ ಅರ್ಥದಲ್ಲಿ ಕೊಟ್ಟಿದ್ದಾರೆ ಅನ್ನೋದು ಮುಖ್ಯ. ಅವರು ಏನು ಹೇಳಿದರೂ ಸಂಪೂರ್ಣವಾಗಿ ಎಲ್ಲವೂ ಹೈಕಮಾಂಡ್‌ಗೆ ಬಿಟ್ಟಿರುವುದು. ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆʼʼ ಎಂದು ಪರಮೇಶ್ವರ್‌ ಹೇಳಿದರು.

ಕಡಿಮೆ ಸೀಟು ಬಂದರೆ ಸರಕಾರಕ್ಕೆ ಡೇಂಜರ್‌ ಎಂದಿದ್ದ ರಾಜಣ್ಣ

ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸೀಟು ಬಂದರೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತದೆ. ಹೀಗಾಗಿ ಅದನ್ನು ವಿಫಲಗೊಳಿಸಲು ನಾವು ಹೆಚ್ಚು ಸ್ಥಾನ ಗಳಿಸಲೇಬೇಕು. ಹೀಗಾಗಿ ಕೆಲವೊಂದು ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೆ.ಎನ್‌. ರಾಜಣ್ಣ ಹೇಳಿದ್ದರು. ಅದನ್ನು ಪರಮೇಶ್ವರ್‌ ಭಾಗಶಃ ಒಪ್ಪಿಕೊಂಡರು.

ಲೋಕಸಭೆಯಲ್ಲಿ ಸೋತರೆ ಜನಾದೇಶ ಇಲ್ಲ ಎಂದು ಸರ್ಕಾರ ವಿಸರ್ಜಸಿದ ಘಟನೆ ನಡೆದಿದೆ ಎಂಬ ರಾಜಣ್ಣ ಹೇಳಿಕೆಗೆ, ಇದ್ದರೆ ಇರಬಹುದು. ಹಿಂದೆ ಅಂತಹ ಘಟನೆಗಳು ನಡೆದಿದ್ದಾವಲ್ಲ. ಹಿಂದೆ ರಾಮಕೃಷ್ಣ ಹೆಗ್ಡೆ ಅವರ ಕಾಲದಲ್ಲಿ ಬೇರೆ ಬೇರೆ ಸಂದರ್ಭದಲ್ಲಿ ನಡೆದಿದೆ. ಆದರೆ ಈ ಬಾರಿ ಹಾಗೆ ಆಗಬಾರದು ಎಂದು ಎಚ್ಚರಿಕೆ ಕೊಟ್ಟಿರಬಹುದು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಬಂದರೆ ನಮಗೆ ಅನುಕೂಲ ಅಲ್ವಾ ಅದಕ್ಕೆ ಇದೆಲ್ಲಾ ಸರ್ಕಸ್ ನಡೆಯುತ್ತಿರುವುದು ಎಂದರು ಜಿ. ಪರಮೇಶ್ವರ್‌.

ಹೊಸ ಡಿಸಿಎಂ ಅಗತ್ಯವಿಲ್ಲ ಎಂದ ಸಚಿವ ನಾಗೇಂದ್ರ

ʻʻರಾಜಣ್ಣ ಅವರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕವಾರು ಅಲ್ಲ, ಜಾತಿವಾರು ಕೇಳಿದ್ದಾರೆ, ತಪ್ಪೇನಿಲ್ಲ. ಇದು ನಮ್ಮ ಆತಂರಿಕ ವಿಚಾರ, ಪಕ್ಚದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾದ ವಿಚಾರ. ಸಿಎಂ ಹಾಗೂ ಡಿಸಿಎಂ ಒಳ್ಳೆ ಕೆಲಸ ಮಾಡ್ತಾ ಇದ್ದಾರೆ. ಅಂತ ಅನಿವಾರ್ಯತೆ ಇದ್ದರೆ ಜಾತಿವಾರು ಡಿಸಿಎಂ ಮಾಡಬಹುದು. ಇಲ್ಲ ಚೆನ್ನಾಗಿ ಆಡಳಿತ ಆಗ್ತಿದೆ ಅಂದ್ರೆ ಏನು ಅವಶ್ಯಕತೆ ಇರೋದಿಲ್ಲʼʼ ಎಂದು ಸಚಿವ ನಾಗೇಂದ್ರ ಹೇಳಿಕೆ ನೀಡಿದ್ದಾರೆ.

ʻʻಡಿಸಿಎಂ ನೇಮಕವೇ ಮುಖ್ಯ ವಿಚಾರ ಆಗುವುದಿಲ್ಲ. ಐದು ಜನ ಡಿಸಿಎಂ ಇದ್ದ ರಾಜ್ಯಗಳೂ ಚುನಾವಣೆಯಲ್ಲಿ ಸೋತಿವೆ. ಅಂತಹ ಸನ್ನಿವೇಶ ಇಲ್ಲಿ ಇಲ್ಲ. ನಮ್ಮ ಮೂಲ ಉದ್ದೇಶ ಉತ್ತಮ ಆಡಳಿತ ಕೊಡೋದು, ರೈತರ ಹಿತ ಕಾಯೋದುʼʼ ಎಂದರು.

ರಾಜಣ್ಣ ಹೇಳಿಕೆ ಕುರಿತು ಹೈಕಮಾಂಡ್ ತೀರ್ಮಾನ ಎಂದ ಎಂ.ಬಿ ಪಾಟೀಲ್

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಮೂವರು ಡಿಸಿಎಂಗಳು ಇರಬೇಕು ಎಂದು ಹೇಳಿರುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಹೈಕಮಾಂಡ್ ಮನಸ್ಸು ಮಾಡಿದರೆ ಮೂವರಷ್ಟೇ ಅಲ್ಲ, ನಾಲ್ವರು ಡಿಸಿಎಂ ಬೇಕಾದರೂ ಮಾಡಬಹುದು ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

ಅನೇಕ ಸಮುದಾಯಗಳಿಗೆ ಇನ್ನೂ ರಾಜಕೀಯ ಅಧಿಕಾರ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜಣ್ಣ ಮೂರು ಡಿಸಿಎಂ ಬಗ್ಗೆ ಮಾತನಾಡಿರಬಹುದು. ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಆದರೆ ದುರಾಸೆ ಇರಬಾರದು ಅಷ್ಟೆ. ಬೇಕು-ಬೇಡಗಳ ಬಗ್ಗೆ ಬಹಿರಂಗವಾಗಿ ಏನೂ ಹೇಳಲ್ಲ; ಬದಲಿಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಮಾಡುತ್ತೇನೆ ಎಂದು ಅವರು ಅಭಿಪ್ರಾಯಪಟ್ಟರು.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ಸಿಗೆ ಲಾಭವಾಗಲಿದೆ. ಇದರಿಂದ ಜೆಡಿಎಸ್ ಬಣ್ಣ ಬಯಲಾಗಿದೆ. ನಮ್ಮ ಪಕ್ಷವು ಏನಿಲ್ಲವೆಂದರೂ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಪಾಟೀಲ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news
Koo

1. ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ
ಡೆಹ್ರಾಡೂನ್:‌ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi Tunnel Collapse) ಜಿಲ್ಲೆಯಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರ ತರಲಾಗಿದೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ಒಬ್ಬೊಬ್ಬರಾಗಿ ಸುರಂಗದೊಳಿಗಿಂದ ಕಾರ್ಮಿಕರನ್ನು ಹೊರ ಕರೆ ತರಲಾಯಿತು(rescue operation). ಅಂತಿಮ ಹಂತದ ಕಾರ್ಯಾಚರಣೆ ಆರಂಭವಾದ ಅರ್ಧ ಗಂಟೆಯಲ್ಲಿ ಎಲ್ಲ 41 ಕಾರ್ಮಿಕರು ಸುರಂಗದ ಅವಶೇಷಗಳಿಂದ ಹೊರ ಬಂದಿದ್ದಾರೆ. ಅಂತೂ, ಸುರಂಗದ ಅವಶೇಷಗಳಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಕೈಗೊಂಡ ಕಾರ್ಯಾಚರಣೆಯು ಮಂಗಳವಾರ (ನವೆಂಬರ್‌ 28) ಫಲ ಕೊಟ್ಟಿದೆ (Uttarkashi Tunnel Rescue). ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂದು ಶತಕೋಟಿ ಭಾರತೀಯರು ಮಾಡಿದ ಪ್ರಯತ್ನವು ಯಶಸ್ವಿಯಾಗಿದೆ. ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು ಸುರಕ್ಷಿತವಾಗಿದ್ದು, ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

2. ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಭ್ರೂಣ ಹತ್ಯೆ ಜಾಲದ (feticide scam) ಭಯಾನಕ ಮುಖಗಳು ಒಂದೊಂದಾಗಿ ಹೊರಬರುತ್ತಿರುವ ನಡುವೆಯೇ ಬೆಂಗಳೂರಿನಲ್ಲಿ ಇನ್ನೊಂದು ಆತಂಕಕಾರಿ ದಂಧೆ ಬಯಲಾಗಿದೆ. ಇದು ಹಸುಗೂಸುಗಳನ್ನೇ (Newborn Child Market) ಮಾರಾಟ ಮಾಡುವ ಕ್ರಿಮಿನಲ್‌ ದಂಧೆ. ಸಾಮಾನ್ಯವಾಗಿ ಮಕ್ಕಳ ಮಾರಾಟ ಜಾಲ ಎಂದರೆ ಮಕ್ಕಳನ್ನು ಅಪಹರಣ (Children kidnap) ಮಾಡಿ ಮಾರಾಟ ಮಾಡುವುದು ಅಥವಾ ಹೆತ್ತವರೇ ತಮ್ಮ ಮಕ್ಕಳನ್ನು ಮಾರಾಟ ಮಾಡುವುದು ಎಂದು ಅಂದುಕೊಳ್ಳುತ್ತೇವೆ. ಆದರೆ, ಇಲ್ಲಿ ಬಯಲಾಗಿರುವುದು ಅದನ್ನೂ ಮೀರಿದ ದಂಧೆ. ಅದೇನೆಂದರೆ ಮಕ್ಕಳನ್ನು ಮಾರಾಟಕ್ಕಾಗಿಯೇ ಹುಟ್ಟಿಸಿ ಬಳಿಕ ಮಾರಾಟ ಮಾಡುವ ದಂಧೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : Child Trade : ಒಂದು ಮಗು ಹೆತ್ತು ಕೊಟ್ರೆ ತಾಯಿಗೆ 3 ಲಕ್ಷ, ಏಜೆಂಟ್‌ಗೆ 5 ಲಕ್ಷ ರೂ.!

3. ನಿಗಮ-ಮಂಡಳಿ ಲಿಸ್ಟ್‌ ಡೆಲ್ಲಿಗೆ ರವಾನೆ;‌ ಶಾಸಕರಿಗೆ ಮಾತ್ರ ಅವಕಾಶವೆಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ (Congress Karnataka) ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದ ಬಳಿಕ ನಿಗಮ – ಮಂಡಳಿಗಳ ಅಧ್ಯಕ್ಷರ ಆಯ್ಕೆ ಫೈನಲ್‌ ಆಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ನಡುವಿನ ಮುಸುಕಿನ ಗುದ್ದಾಟದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಮೇಲುಗೈ ಸಾಧಿಸಿದ್ದಾರೆ. ಕಾರ್ಯಕರ್ತರಿಗೂ ಈ ಬಾರಿ ಅವಕಾಶ ನೀಡಬೇಕು ಎಂಬ ಡಿಕೆಶಿ ಬೇಡಿಕೆಗೆ ಈ ಬಾರಿ ಬೆಲೆ ಸಿಕ್ಕಿಲ್ಲ. ಹೀಗಾಗಿ ಮೊದಲ ಹಂತದ ಲಿಸ್ಟ್‌ನಲ್ಲಿ ಶಾಸಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

4. ಡಿಕೆಶಿ ವಿರುದ್ಧದ ಸಿಬಿಐ ಕೇಸ್‌ ವಾಪಸ್‌ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ವಿರುದ್ಧ ಸಿಬಿಐ ದಾಖಲಿಸಿಕೊಂಡಿರುವ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು (CBI Case against DK Shivakumar) ಹಿಂದಕ್ಕೆ ಪಡೆಯುವ ರಾಜ್ಯ ಸಚಿವ ಸಂಪುಟದ (State Cabinet meeting) ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನ ಗೌಡ ಪಾಟೀಲ್‌ ಯತ್ನಾಳ್‌ (Basanagowda pateel Yatnal) ಅವರು ಹೈಕೋರ್ಟ್‌ (Karnataka High court) ಮೆಟ್ಟಿಲೇರಿದ್ದಾರೆ. ಸರ್ಕಾರದ ಈ ನಡೆ ಕಾನೂನುಬಾಹಿರವಾಗಿದ್ದು, ಇದನ್ನು ತಡೆಯಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದಾವೆಯಲ್ಲಿ ಮನವಿ ಮಾಡಲಾಗಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

5. ಸಿಎಂ, ಡಿಸಿಎಂ ನಡೆಗೆ ಹಿರಿಯ ಸಚಿವರ ಮುನಿಸು; ಅಭಿಪ್ರಾಯ ಕೇಳುತ್ತಿಲ್ಲವೆಂದ ಪರಮೇಶ್ವರ್!
ಬೆಂಗಳೂರು: ಪೂರ್ಣ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ಒಂದಲ್ಲ ಒಂದು ಸಮಸ್ಯೆ ಕಾಣಿಸಿಕೊಳ್ಳುತ್ತಲೇ ಇದೆ. ಒಂದನ್ನು ಬಗೆಹರಿಸುವ ಹೊತ್ತಿಗೆ ಮತ್ತೊಂದು ಶುರು ಎಂಬಂತೆ ಆಗುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅವರ ನಡೆಗೆ ಹಿರಿಯ ಸಚಿವರು ಅಸಮಾಧಾನಗೊಂಡಿದ್ದಾರೆ. ಜತೆಗೆ ಹೈಕಮಾಂಡ್‌ (Congress High Command) ಬಗ್ಗೆಯೂ ತಮ್ಮ ಬೇಸರವನ್ನು ಹೊರಹಾಕುತ್ತಿದ್ದಾರೆ. ಯಾವುದೇ ಪ್ರಮುಖ ನಿರ್ಣಯವನ್ನು ತೆಗೆದುಕೊಳ್ಳಬೇಕಿದ್ದರೂ ಸಲಹೆಗಳನ್ನು ಸಹ ಕೇಳುತ್ತಿಲ್ಲ. ಅವರಿಬ್ಬರೇ ಫೈನಲ್‌ ಮಾಡುತ್ತಿದ್ದಾರೆ. ಅವರ ಮಾತುಗಳಿಗೆ ಹೈಕಮಾಂಡ್‌ ಕೂಡಾ ಮಣೆ ಹಾಕುತ್ತಿದೆ ಎಂಬ ಅಸಮಾಧಾನವನ್ನು ಹೊರಹಾಕಲಾಗುತ್ತಿದೆ. ಈಗ ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Home Minister Dr G Parameshwara) ಸ್ವತಃ ಆಕ್ರೋಶ ಹೊರಹಾಕಿದ್ದಾರೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

6. ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?
ಬೆಂಗಳೂರು: ಕಳೆದ ವರ್ಷ ತೆರೆಕಂಡ ʼಕಾಂತಾರʼ ಚಿತ್ರ (Kantara Movie) ಸೂಪರ್‌ ಹಿಟ್‌ ಆಗಿತ್ತು. ಕನ್ನಡ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಎರಡನೇ ಭಾಗ ಬರುತ್ತದೆ ಎನ್ನುವಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಅದರಂತೆ ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

7. ಗೂಳಿ’ಯಂತೆ ಜಿಗಿದ ಅದಾನಿ ಗ್ರೂಪ್‌ ಷೇರುಗಳ ಮೌಲ್ಯ, 20% ಏರಿಕೆಗೆ ಏನು ಕಾರಣ?
ಮುಂಬೈ: ಗೌತಮ್‌ ಅದಾನಿ (Gautam Adani) ನೇತೃತ್ವದ ಅದಾನಿ ಗ್ರೂಪ್‌ ಷೇರುಗಳ (Adani Stocks) ಮೌಲ್ಯವು ಮಂಗಳವಾರ (ನವೆಂಬರ್‌ 18) ದಿಢೀರನೇ ಏರಿಕೆಯಾಗಿದೆ. ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ ವಹಿವಾಟು (Share Market) ಆರಂಭವಾಗುತ್ತಲೇ ಅದಾನಿ ಗ್ರೂಪ್‌ ಷೇರುಗಳ ಮೌಲ್ಯದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದಾನಿ ಗ್ರೂಪ್‌ ಷೇರುಗಳ ಮೌಲ್ಯವು ಶೇ.20ರಷ್ಟು ಏರಿಕೆಯಾಗಿದ್ದು, ಹೂಡಿಕೆದಾರರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

8. ಆಧಾರ್‌ ಮಾಹಿತಿ ಪಕ್ಕಾ ಪರ್ಸನಲ್‌, ಹೆಂಡತಿಗೂ ಕೊಡುವಂತಿಲ್ಲ!
ಬೆಂಗಳೂರು: ಆಧಾರ್‌ ಕಾರ್ಡ್‌ಗೆ (Aadhaar Card) ಸಂಬಂಧಿಸಿದ ಮಾಹಿತಿಗಳು ಖಾಸಗಿಯಾಗಿದ್ದು, ಅದನ್ನು ಹೆಂಡತಿಗೂ ಕೊಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ (Karnataka High court) ಮಹತ್ವದ ತೀರ್ಪೊಂದರಲ್ಲಿ ಹೇಳಿದೆ. ಗಂಡ-ಹೆಂಡತಿ ಮಧ್ಯೆ ಏನು ಗೌಪ್ಯತೆ, ಹೆಂಡತಿಯ ಮಾಹಿತಿಯನ್ನು ಗಂಡನಿಗೆ, ಗಂಡನ ಮಾಹಿತಿಯನ್ನು ಹೆಂಡತಿಗೆ ನೀಡಬಹುದಲ್ಲವೇ ಎಂಬ ಪ್ರಶ್ನೆಗೆ ಕೋರ್ಟ್‌ ಕಾನೂನಿನ ಉತ್ತರ ನೀಡಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

9. ದುಡ್ಡು ಖಾಲಿಯಾಗಿದ್ದು ಆರ್​ಸಿಬಿಯದ್ದು, ಲಾಭ ಆಗುತ್ತಿರುವುದು ಮುಂಬೈಗೆ!
ಬೆಂಗಳೂರು: ಗುಜರಾತ್ ಟೈಟಾನ್ಸ್ ತಂಡದ ಮಾಜಿ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ರಲ್ಲಿ ಆಡಲು ಮುಂಬೈ ಇಂಡಿಯನ್ಸ್ ಸೇರಲು ನಿರ್ಧರಿಸಿದಾಗಿನಿಂದ ಐಪಿಎಲ್​ 2024ನೇ ಆವೃತ್ತಿಯು ಕಳೆಗಟ್ಟುತ್ತಿದೆ. ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ್ಪರ ನಾಯಕನಾಗಿ ಮತ್ತು ಆಟಗಾರನಾಗಿ ಒಂದೆರಡು ಯಶಸ್ವಿ ವರ್ಷಗಳ ಕಳೆದ ನಂತರ ಅವರು ಮುಂಬೈಗೆ ವಾಪಸಾಗಿದ್ದಾರೆ. ಅವರೀಗ , ರೋಹಿತ್ ಶರ್ಮಾ ನೇತೃತ್ವದ ತಂಡದ ಜತೆ ಹೊಸ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದ ಅವರು ಈ ಫ್ರಾಂಚೈಸಿಯ ಭವಿಷ್ಯದ ನಾಯಕ ಎಂದೇ ಹೇಳಲಾಗುತ್ತಿದೆ. ಆದರೆ, ಈ ಟ್ರೇಡಿಂಗ್ ಡೀಲ್ ಅತ್ಯಂತ ಕುತೂಹಲಕಾರಿಯಾಗಿತ್ತು. ಅವರಿಗೆ ನೀಡಬೇಕಾದ 15 ಕೋಟಿ ರೂಪಾಯಿ ಮೊತ್ತವನ್ನು ಸಜ್ಜುಗೊಳಿಸಲು ಮುಂಬಯಿ ಇಂಡಿಯನ್ಸ್​ ತಂಡ ಹೊಸ ಐಡಿಯಾ ಮಾಡಿತ್ತು. ತನ್ನ ತಂಡದಲ್ಲಿರುವ 17.5 ಕೋಟಿ ರೂಪಾಯಿ ಮೌಲ್ಯದ ಆಸ್ಟ್ರೇಲಿಯನ್​ ಆಲ್​ರೌಂಡರ್ ಕ್ಯಾಮೆರೂನ್ ಗ್ರೀನ್ ಅವರನ್ನು ಬೆಂಗಳೂರು ತಂಡಕ್ಕೆ ಮಾರಿತು. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

10. `ಗೇ’ ಆ್ಯಪ್‌ನಲ್ಲಿ ಸಿಕ್ಕ ಮಹಾಶೂರ; ಮೀಟ್‌ ಮಾಡಲು ಬಂದವ ಲೂಟ್‌ ಮಾಡಿದ!
ಬೆಂಗಳೂರು: ಈಗಂತೂ ಆನ್‌ಲೈನ್‌ನಲ್ಲಿ ನೂರಾರು ಡೇಟಿಂಗ್‌ ಆ್ಯಪ್‌ಗಳು (Dating App) ಸಿಗುತ್ತವೆ. ಇದರ ಹಿಂದೆ ಬಿದ್ದ ಯುವಜನತೆ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಸದ್ಯ ಆಡುಗೋಡಿಯಲ್ಲಿ ಗ್ರೈಂಡರ್ (GRINDR) ಎಂಬ ಗೇ ಡೇಟಿಂಗ್‌ ಆ್ಯಪ್‌ (Gay App) ಮೂಲಕ ಪರಿಚಯ ಆದವನೇ ದರೋಡೆಕೋರನಾಗಿ ಎಲ್ಲವನ್ನೂ (Robbery Case) ದೋಚಿ ಹೋಗಿದ್ದಾನೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

Child trade : ಬೆಂಗಳೂರಿನ ಸಿಸಿಬಿ ಪೊಲೀಸರು ದೊಡ್ಡದೊಂದು ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದಾರೆ. ಈ ಜಾಲವು ಮಕ್ಕಳನ್ನು ಕೃತಕ ಗರ್ಭಧಾರಣೆ ಮೂಲಕ ಸೃಷ್ಟಿಸಿ ಮಾರಾಟ ಮಾಡುತ್ತಿತ್ತು!

VISTARANEWS.COM


on

Child trade in Bangalore
ಬಂಧಿತರ ಮಕ್ಕಳ ಮಾರಾಟ ಜಾಲದ ಆರೋಪಿಗಳು
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಯಲಾಗಿರುವ ಮಕ್ಕಳ ಮಾರಾಟ ಜಾಲದ (Child trade) ಭಯಾನಕ ಕೃತ್ಯಗಳು ಒಂದರ ಹಿಂದೊಂದರಂತೆ ಬಯಲಾಗುತ್ತಿವೆ. ಕಳೆದ ಹಲವು ವರ್ಷಗಳಿಂದ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರದಲ್ಲಿ ಮಕ್ಕಳನ್ನು ಮಾರಾಟ ಮಾಡುವ ಜಾಲ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದ್ದು, ಇವರ ಪೈಕಿ ಎಂಟು ಮಂದಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರ ಪೈಕಿ ಒಬ್ಬಾಕೆ ಮಗುವನ್ನು ಮಾರಾಟ ಮಾಡಿದವಳಾಗಿದ್ದರೆ, ಉಳಿದವರು ಮಾರಾಟ ಜಾಲದವರು.

ಈ ಗ್ಯಾಂಗ್‌ ಮಕ್ಕಳ ಬೇಡಿಕೆ ಇಡುವ ಗ್ರಾಹಕರು ಮತ್ತು ಮಕ್ಕಳನ್ನು ಹೆತ್ತು ಮಾರಾಟ ಮಾಡುವ ಬಡವರ ನಡುವೆ ಆಪರೇಷನ್‌ ನಡೆಸುತ್ತಿತ್ತು. ಅದರ ನಡುವೆ, ತಾನೇ ಕೃತಕ ಗರ್ಭಧಾರಣೆ (ಐವಿಎಫ್‌) ಮೂಲಕವೂ ಮಕ್ಕಳನ್ನು ಪಡೆಯುವ ತಂತ್ರಗಳನ್ನು ಮಾಡುತ್ತಿತ್ತು. ಇದಕ್ಕೆ ಗಾರ್ಮೆಂಟ್ಸ್‌ ಯುವತಿಯರನ್ನೂ ಬಳಸಿಕೊಳ್ಳಲಾಗುತ್ತಿದೆ ಎಂದೂ ಹೇಳಲಾಗಿದೆ.

ಸಾಮಾನ್ಯವಾಗಿ ಆಗಲೇ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದು, ಬಳಿಕ ಗರ್ಭಧಾರಣೆಯಾದ ಹಂತದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಗರ್ಭಪಾತ ಮಾಡಿಸಲು ಮುಂದಾಗುವ ಬಡವರನ್ನೇ ಟಾರ್ಗೆಟ್‌ ಮಾಡುತ್ತಿತ್ತು ಈ ತಂಡ. ಅವರ ಮನವೊಲಿಸಿ ಅವರಿಗೆ ಹಣ ಕೊಡುವ ಆಮಿಷ ಒಡ್ಡಿ, ಮಕ್ಕಳನ್ನು ಹೆತ್ತು ತಮಗೆ ನೀಡುವಂತೆ ಮಾಡುತ್ತಿದ್ದರು.

ಈ ನಡುವೆ, ಐವಿಎಫ್‌ ತಂತ್ರಜ್ಞಾನದ ಮೂಲಕ ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯುವ ತಂತ್ರವೂ ಇವರಲ್ಲಿತ್ತು. ಇದಕ್ಕಾಗಿ ಹದಿಹರೆಯದ ಯುವತಿಯರ ಅಂಡಾಣುಗಳನ್ನು ಬಳಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಅದರಲ್ಲೂ ಮುಖ್ಯವಾಗಿ ಬಡತನದ ಕಾರಣಕ್ಕಾಗಿ ಅಂಡಾಣು ಮಾರಾಟಕ್ಕೆ ಮುಂದಾಗುವ ಗಾರ್ಮೆಂಟ್ಸ್‌ ಕಾರ್ಮಿಕ ಯುವತಿಯರನ್ನು ಈ ಟೀಮ್‌ ಟಾರ್ಗೆಟ್‌ ಮಾಡಿತ್ತು ಎನ್ನಲಾಗಿದೆ. ಸಣ್ಣ ವಯಸ್ಸಿನ ಹೆಣ್ಮಕ್ಕಳಲ್ಲಿ ಹೆಚ್ಚು ಫಲವಂತಿಕೆ ಇರುವ ಅಂಡಾಣುಗಳು ಇರುತ್ತವೆ. ಅವರ ಅಂಡಾಣುಗಳನ್ನು ಬಳಸಿಕೊಂಡು ಪುರುಷನೊಬ್ಬನ ವೀರ್ಯಾಣು ಬಳಸಿ ಭ್ರೂಣಗಳನ್ನು ಕೃತಕವಾಗಿ ಸೃಷ್ಟಿಸಿ ಅದನ್ನು ಬೇರೊಬ್ಬ ಹೆಣ್ಣಿನ ಹೊಟ್ಟೆಯಲ್ಲಿ ಬೆಳೆಸಲಾಗುತ್ತಿತ್ತು. ಇದೆಲ್ಲವೂ ಒಬ್ಬ ನುರಿತ ವೈದ್ಯರು ಮತ್ತು ತಂತ್ರಜ್ಞರ ಸಹಕಾರದಿಂದಲೇ ನಡೆಯುತ್ತಿತ್ತು ಎನ್ನಲಾಗಿದೆ. ಈ ರೀತಿ ಅಂಡಾಣು ಮಾರಾಟ ಮಾಡುವ ಯುವತಿಯರಿಗೆ ಒಳ್ಳೆಯ ಹಣ ಕೂಡಾ ನೀಡಲಾಗುತ್ತಿತ್ತು ಎನ್ನುವುದು ಸಿಸಿಬಿ ತನಿಖೆಯಿಂದ ಬಯಲಾಗಿದೆ.

ತಮಿಳುನಾಡಿನಿಂದ ಆಪರೇಟ್‌ ಮಾಡುತ್ತಿದ್ದ ತಂಡ

ಈಗ ಸಿಕ್ಕಿಬಿದ್ದಿರುವ ಎಂಟು ಮಂದಿಯ ತಂಡ, ತಮಿಳುನಾಡಿನಿಂದ ಪ್ರಮುಖವಾಗಿ ಕಾರ್ಯಾಚರಣೆ ಮಾಡುತ್ತಿತ್ತು. ಈ ತಂಡದಲ್ಲಿರುವ ರಾಧಾ ಎಂಬಾಕೆ ಈ ಹಿಂದೆ ತಮಿಳುನಾಡಿನ ಆಸ್ಪತ್ರೆಯಲ್ಲಿ ಬಾಡಿಗೆ ತಾಯ್ತನದ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಯಾರು ಮಗು ಬೇಕು ಅನ್ನುತ್ತಾರೆ, ಯಾರಿಗೆ ಬಾಡಿಗೆ ತಾಯ್ತನದ ಮೂಲಕ ಮಗು ಬೇಕು ಎನ್ನುವುದರ ಅರಿವು ಆಕೆಗೆ ಚೆನ್ನಾಗಿತ್ತು ಎನ್ನಲಾಗಿದೆ. ಮಹಾಲಕ್ಷ್ಮಿ ಎಂಬಾಕೆ ಕರ್ನಾಟಕದಲ್ಲಿ ಏಜೆಂಟ್‌ ಆಗಿದ್ದು, ತಮಿಳುನಾಡಿನ ಕೊಂಡಿಯಾಗಿದ್ದಾಳೆ.

ಈ ಟೀಮ್‌ ಮಕ್ಕಳ ಮಾರಾಟದಲ್ಲಿ ಬಣ್ಣ, ಲಿಂಗದ ಆಧಾರದಲ್ಲಿ ದರ ನಿರ್ಣಯ ಮಾಡುತ್ತಿದೆ. ತುಂಬ ಬೆಳ್ಳಗಿರುವ ಮಕ್ಕಳಾದರೆ, ಗಂಡು ಮಕ್ಕಳಾದರೆ ಹೆಚ್ಚು ಹಣ ಕೇಳಿದರೆ, ಹೆಣ್ಣು ಮಕ್ಕಳಿಗೆ ಸ್ವಲ್ಪ ಕಡಿಮೆ ದರ ಇರುತ್ತದೆ ಎನ್ನಲಾಗಿದೆ. ಗಂಡು ಮಕ್ಕಳನ್ನು ಐದರಿಂದ ಹತ್ತು ಲಕ್ಷಕ್ಕೆ ಮಾರಾಟ ಮಾಡಿದರೆ ಹೆಣ್ಣು ಮಕ್ಕಳಿಗೆ ನಾಲ್ಕುರಿಂದ ಐದು ಲಕ್ಷ ರೂ. ಇರುತ್ತದೆಯಂತೆ. ಮಗುವನ್ನು ಹೆತ್ತು ಕೊಡುವ ಮಹಿಳೆಯರಿಗೆ ಒಂದುವರೆಯಿಂದ ಎರಡು ಲಕ್ಷ ರೂ ನೀಡುತ್ತಾರೆ ಎನ್ನುವುದು ಸಿಸಿಬಿ ತನಿಖೆಯ ವೇಳೆ ಬಯಲಾಗಿದೆ.

Continue Reading

ಕೊಪ್ಪಳ

Koppala News: ಗಂಗಾವತಿಯ ವಸತಿ ನಿಲಯಕ್ಕೆ ನಾಲ್ವರು ನ್ಯಾಯಾಧೀಶರ ದಿಢೀರ್ ಭೇಟಿ, ಪರಿಶೀಲನೆ

Koppala News: ಗಂಗಾವತಿಯ ಆನೆಗೊಂದಿ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಡಾ. ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

surprise visit by four judges to the Gangavathi boys hostel inspection
ಗಂಗಾವತಿಯ ಮೆಟ್ರಿಕ್ ನಂತರದ ಬಾಲಕರ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Koo

ಗಂಗಾವತಿ: ಇಲ್ಲಿನ ಆನೆಗೊಂದಿ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು, ದಿಢೀರ್ ಭೇಟಿ ನೀಡಿ, ಪರಿಶೀಲನೆ (Inspection) ನಡೆಸಿದರು.

ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸದಾನಂದ ನಾಯಕ್, ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ ಗಾಣಿಗೇರ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ದರ್ಬಾರೆ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ್ ಅವರು ವಸತಿ ನಿಲಯಕ್ಕೆ ಭೇಟಿ ನೀಡಿದರು.

ವಸತಿ ನಿಲಯದಲ್ಲಿ ಕಲ್ಪಿಸಲಾದ ಸೌಲಭ್ಯ, ಕುಡಿಯುವ ನೀರು, ಊಟ, ಶೌಚಾಲಯ ಸೇರಿದಂತೆ ನಾನಾ ಸವಲತ್ತುಗಳನ್ನು ಪರಿಶೀಲಿಸಿದರು. ವಸತಿ ನಿಲಯದಲ್ಲಿನ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಕ್ಕಳು ಹಲವು ಸಮಸ್ಯೆ, ಕೊರತೆಗಳನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ

ಕುಡಿಯುವ ನೀರು ಸಂಗ್ರಹಿಸುವ ಸ್ಥಳಕ್ಕೆ ತೆರಳಿದ ನ್ಯಾಯಾಧೀಶರು, ಅಲ್ಲಿನ ಕೊಳಕು ಪರಿಸರ ಕಂಡು ವಸತಿ ನಿಲಯದ ಮೇಲ್ವಿಚಾರಕ ಸಂಗಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮ ಮನೆಯಲ್ಲಿ ಇದೇ ವ್ಯವಸ್ಥೆಯಲ್ಲಿಟ್ಟು ನೀರು ಕುಡಿಯುತ್ತೀರಾ ಎಂದು ಪ್ರಶ್ನಿಸಿದರು.

ಅಲ್ಲದೇ ಶೌಚಾಲಯ, ವಸತಿ ನಿಲಯದ ಹೊರ ಮತ್ತು ಒಳ ಆವರಣ ಪರಿಶೀಲಿಸಿದ ನ್ಯಾಯಾಧೀಶರು, ಸೂಕ್ತ ಬೆಳಕಿನ ವ್ಯವಸ್ಥೆ, ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು. ಅಲ್ಲದೇ ಮಕ್ಕಳಿಗೆ ಓದಲು ಸಾಕಷ್ಟು ಪುಸ್ತಕ, ದಿನಪತ್ರಿಕೆಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ವಸತಿ ನಿಲಯದ ಮಕ್ಕಳಿಗೆ ನೀಡುವ ಊಟವನ್ನು ಸ್ವತಃ ನಾಲ್ಕು ಜನ ನ್ಯಾಯಾಧೀಶರು ಊಟ ಮಾಡುವ ಮೂಲಕ ರುಚಿ, ಗುಣಮಟ್ಟ ಪರೀಕ್ಷಿಸಿದರು. ಊಟದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರ ಮತ್ತೊಮ್ಮೆ ಭೇಟಿ ನೀಡಲಿದ್ದು, ಸೂಚನೆ ನೀಡಿದ ಎಲ್ಲವೂ ಸರಿ ಮಾಡುವಂತೆ ವಸತಿ ನಿಲಯದ ಮೇಲ್ವಿಚಾರಕ ಸಂಗಪ್ಪಗೆ ಸೂಚನೆ ನೀಡಿದರು.

ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?

ಈ ವೇಳೆ ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶರಣಪ್ಪ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಸೌಲಭ್ಯ ನೀಡಲು ಇಲಾಖೆ ಶಕ್ತಿ ಮೀರಿ ಯತ್ನಿಸುತ್ತಿದೆ. ನಿಮ್ಮ ಸಲಹೆ-ಸೂಚನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ನ್ಯಾಯಾಧೀಶರಿಗೆ ಭರವಸೆ ನೀಡಿದರು.

Continue Reading

ಶಿವಮೊಗ್ಗ

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Shivamogga News: ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾ.ಪಂ. ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

VISTARANEWS.COM


on

MLA Gopalakrishna Belur Bhumi Pooja for drinking water work in Halugudde village
ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.
Koo

ರಿಪ್ಪನ್‌ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ (Drinking Water) ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

ಬಳಿಕ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ 45 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು.

ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ

ಸ್ಥಳೀಯಾಡಳಿತವು ಕಾಮಗಾರಿ ಕುರಿತು ಚರ್ಚಿಸಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸುವುದರ ಬಗ್ಗೆ ಅಗಾಗ ಮಾಹಿತಿ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಾಳೂರು ಗ್ರಾಮ ಪಂಚಾಯಿತಿ ಆಧ್ಯಕ್ಷ ಶ್ರೀನಿವಾಸ್ ಆಚಾರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಗಣಪತಿ, ಮಧುಸೂದನ್‌, ಆಶೀಫ್‌ಭಾಷಾ, ಪ್ರಕಾಶ ಪಾಲೇಕರ್, ಲೀಲಾವತಿ ದೊಡ್ಡಯ್ಯ, ರವೀಂದ್ರ ಕೆರೆಹಳ್ಳಿ,ಸಣ್ಣಕ್ಕಿ ಮಂಜ ಹೊಸನಗರ, ಶಶಿಕಲಾ, ರೇಖಾ, ರಾಜಪ್ಪ, ಪಿಡಿಒ ಭರತ್ ಸೇರಿದಂತೆ ಗ್ರಾಮಸ್ಥರು, ಪಕ್ಷದ ಮುಖಂಡರು, ಇತರರು ಉಪಸ್ಥಿತರಿದ್ದರು.

Continue Reading
Advertisement
Uttarkashi Tunnel Rescue and Makeshift hospital
ದೇಶ1 min ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ18 mins ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER44 mins ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ1 hour ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್1 hour ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Child trade in Bangalore
ಕರ್ನಾಟಕ1 hour ago

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

surprise visit by four judges to the Gangavathi boys hostel inspection
ಕೊಪ್ಪಳ1 hour ago

Koppala News: ಗಂಗಾವತಿಯ ವಸತಿ ನಿಲಯಕ್ಕೆ ನಾಲ್ವರು ನ್ಯಾಯಾಧೀಶರ ದಿಢೀರ್ ಭೇಟಿ, ಪರಿಶೀಲನೆ

MLA Gopalakrishna Belur Bhumi Pooja for drinking water work in Halugudde village
ಶಿವಮೊಗ್ಗ2 hours ago

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Uttarkashi Tunnel Rescue, All trapped labor rescued and sent them to makeshift hospital
ದೇಶ2 hours ago

ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Protest by villagers in Kolikeri demanding bus stop
ಉತ್ತರ ಕನ್ನಡ2 hours ago

Uttara Kannada News: ಬಸ್‌ಗಾಗಿ ಕೋಳಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌