Congress Protest: ಕೇಂದ್ರದಿಂದ ಅನ್ಯಾಯ; ಬಜೆಟ್‌ ಬಳಿಕ ಶ್ವೇತಪತ್ರ ಹೊರಡಿಸುವೆ ಎಂದ ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

Congress Protest: ಕೇಂದ್ರದಿಂದ ಅನ್ಯಾಯ; ಬಜೆಟ್‌ ಬಳಿಕ ಶ್ವೇತಪತ್ರ ಹೊರಡಿಸುವೆ ಎಂದ ಸಿಎಂ ಸಿದ್ದರಾಮಯ್ಯ

Congress Protest: ನವ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಈಗಿನ ಕೇಂದ್ರ ಸರ್ಕಾರದ ನೀತಿಯಿಂದ ಕರ್ನಾಟಕಕ್ಕೆ ಬಹಳವೇ ಅನ್ಯಾಯವಾಗಿದೆ ಎಂದು ಹೇಳಿ, ಅಂಕಿ-ಅಂಶಗಳನ್ನು ತೆರೆದಿಟ್ಟರು.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಇದು ರಾಜಕೀಯ ಚಳವಳಿ ಅಲ್ಲ. ಕನ್ನಡಿಗರ ಹಿತ ಕಾಯಲು ಈ ಹೋರಾಟವನ್ನು ನಡೆಸುತ್ತಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಲಾಗಿದೆ. 1 ಲಕ್ಷ 77 ಸಾವಿರ ಕೋಟಿ ರೂಪಾಯಿ ಅನ್ಯಾಯ ಆಗಿದೆ. ಈ ಅನ್ಯಾಯದ ವಿರುದ್ಧ ನಮ್ಮ (Congress Protest) ಪ್ರತಿಭಟನೆಯಾಗಿದೆ. ನಮಗೆ ಪಾಲು ಕೊಟ್ಟಿದ್ದರೆ ಸರಿಸುಮಾರು 52,000 ಕೋಟಿ ರೂಪಾಯಿಯಷ್ಟು ನಮಗೆ ಬರುತ್ತಿತ್ತು. ಆದರೆ, ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಬರ ಪರಿಹಾರವಾಗಿ 17,901 ಕೋಟಿ ರೂಪಾಯಿ ನಮಗೆ ಪರಿಹಾರ ಕೊಡಿ ಎಂದು ಕೇಳಿದ್ದೇವೆ. ಇನ್ನೂ ಕೊಟ್ಟಿಲ್ಲ. ಈಗ ಶ್ವೇತಪತ್ರ ಕೇಳುತ್ತಿದ್ದಾರೆ. ಹೀಗಾಗಿ ಬಜೆಟ್‌ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ನವ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಈಗಿನ ಕೇಂದ್ರ ಸರ್ಕಾರದ ನೀತಿಯಿಂದ ಕರ್ನಾಟಕಕ್ಕೆ ಬಹಳವೇ ಅನ್ಯಾಯವಾಗಿದೆ ಎಂದು ಹೇಳಿ, ಅಂಕಿ-ಅಂಶಗಳನ್ನು ತೆರೆದಿಟ್ಟರು.

15ನೇ ಆರ್ಥಿಕ ಆಯೋಗವನ್ನು ರಚನೆ ಮಾಡಿದ್ದು ಇದೇ ಪಿಎಂ ನರೇಂದ್ರ ಮೋದಿ. ನಾವು ಸಮರ್ಥ ವಾದ ಮಂಡನೆ ಮಾಡಿದರೂ ಕೇಳಲಿಲ್ಲ. ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಅಂತ ನಮ್ಮ ಸಂಸದರು ಒಂದು ದಿನವೂ ಮಾತನಾಡಿಲ್ಲ. ಉತ್ತರ ಪ್ರದೇಶ ರಾಜ್ಯಗಳಿಗೆ ಹೆಚ್ಚು ಕೊಡುತ್ತಿದ್ದಾರೆ. ಮಾನದಂಡಗಳ ಮೇಲೆ ಪರಿಹಾರ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. 2011ರ ಜನಗಣತಿ ಪ್ರಕಾರ ಹಂಚಿಕೆ ಮಾಡಿದ್ದಾರೆ. ಇದು ತಪ್ಪು. 1972ರ ಅಂಕಿ-ಅಂಶಗಳ ಪ್ರಕಾರ ಹಂಚಿಕೆ ಮಾಡಬೇಕಿತ್ತು. ಬಜೆಟ್ ಬಳಿಕ ಶ್ವೇತ ಪತ್ರ ಹೊರಡಿಸುತ್ತೇವೆ. ಇನ್ನು
ಬಜೆಟ್ ಕೂಡಾ ಒಂದು ಶ್ವೇತ ಪತ್ರ ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

17,901 ಕೋಟಿ ನಮಗೆ ಪರಿಹಾರ ಕೊಡಿ

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳು ಕಳೆದಿದೆ. ಕೇಂದ್ರ ಸರ್ಕಾರದ ಟೀಮ್ ಬಂದರೂ ಪರಿಹಾರ ಕೊಡುವ ಸಂಬಂಧ ಒಂದು ಮೀಟಿಂಗ್ ಮಾಡಲಿಲ್ಲ. ನಮ್ಮ ಸಚಿವರು ನಮ್ಮ ಮಂತ್ರಿಗಳು ಭೇಟಿ ಮಾಡಿದರೂ ಪರಿಹಾರ ಕೊಡಲಿಲ್ಲ. ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಒಂದು ವಾರದಲ್ಲಿ ಮಾಡುತ್ತೇವೆ ಎಂದು ಹೇಳಿದರು. ಇವತ್ತಿನ ವರೆಗೂ ಯಾವುದೇ ಪರಿಹಾರ ಕೊಟ್ಟಿಲ್ಲ. 17,901 ಕೋಟಿ ನಮಗೆ ಪರಿಹಾರ ಕೊಡಿ ಎಂದು ಕೇಳಿದ್ದೇವೆ. ಬರಗಾಲ ಘೋಷಣೆ ಮಾಡಿದ ಮೇಲೆ ಮನರೇಗಾದಲ್ಲಿ 150 ದಿನ ಕೆಲಸ ಕೊಡಬೇಕು ಎಂದೂ ಆಗ್ರಹಿಸಿದ್ದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಇವತ್ತು ಅನಿವಾರ್ಯವಾಗಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. 34 ಸಚಿವರು ಮತ್ತು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುತ್ತಿದ್ದಾರೆ. ಇದು ರಾಜಕೀಯ ಚಳವಳಿಯಲ್ಲ. ಕನ್ನಡಿಗರ ಹಿತ ಕಾಯಲು ಈ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ. 1 ಲಕ್ಷ 77 ಸಾವಿರ ಕೋಟಿ ರೂಪಾಯಿ ಅನ್ಯಾಯ ಆಗಿದೆ. ಈ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಸಂಸದರಿಗೆ ಸಹ ಮನವಿ ಮಾಡಿದ್ದೇನೆ. ಅವರು ಸಹ ಬರ್ತಾರೆ ಅಂತ ಅಂದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

50253 ಕೋಟಿ ರೂಪಾಯಿ ಬರಬೇಕು

14ನೇ ಹಣಕಾಸು ಆಯೋಗದಲ್ಲಿ ಶೇಕಡಾ 4.71 ಹಾಗೂ 15ನೇ ಹಣಕಾಸು ಆಯೋಗದಲ್ಲಿ ಶೇ. 3ಕ್ಕೆ ಇಳಿಕೆ ಕಂಡಿತು. 62,098 ಕೋಟಿ ಹೆಚ್ಚು ಆಗಬೇಕಿತ್ತು. ಅದು ನಮಗೆ ನಷ್ಟ ಆಗಿದೆ. 4 ಲಕ್ಷ 30 ಸಾವಿರ ಕೋಟಿ ರೂಪಾಯಿ ಪ್ರತಿ ವರ್ಷ ತೆರಿಗೆ ಹಣ ರಾಜ್ಯದಿಂದ ಬರುತ್ತಿದೆ. ನೂರು ರೂಪಾಯಿ ತೆರಿಗೆ ಕೊಟ್ಟರೆ ನಮಗೆ 13 ರೂಪಾಯಿ ಕೊಡುತ್ತಾರೆ. 2023-24 ರಲ್ಲಿ 37250 ಕೋಟಿ ಕೊಡುತ್ತೇವೆಂದು ಹೇಳಿದ್ದಾರೆ. ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ 13005 ಕೋಟಿ ಬಂದಿದೆ. ಒಟ್ಟು 50253 ಕೋಟಿ ರೂಪಾಯಿ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಜೆಟ್ ಗಾತ್ರ ಹೆಚ್ಚಿದ ಮೇಲೆ ನಮಗೆ ಹೆಚ್ಚು ಬರಬೇಕು

2018-19ರ ಬಜೆಟ್ ಗಾತ್ರವು 24,42,000 ಸಾವಿರ ಕೋಟಿ ರೂಪಾಯಿ ಇತ್ತು. ಆಗ ನಮ್ಮ ರಾಜ್ಯಕ್ಕೆ 51000 ಕೋಟಿ ಬರಬೇಕಿತ್ತು. 2023-24ರಲ್ಲಿ 45,00000 ಕೋಟಿ ರೂಪಾಯಿ ಆಗಿದೆ. ಈಗ ನಮಗೆ 57,251 ಕೋಟಿ ಸುಮಾರು ಬರುತ್ತಿದೆ. ಬಜೆಟ್ ಗಾತ್ರ ಹೆಚ್ಚಿದ ಮೇಲೆ ನಮಗೆ ಹೆಚ್ಚು ಬರಬೇಕು. ಒಂದು ಲಕ್ಷ ಕೋಟಿ ರೂಪಾಯಿ ಬರಬೇಕು. ಹಾಗಾಗಿ ರಾಜ್ಯಕ್ಕೆ ನಮಗೆ ಅನ್ಯಾಯ ಆಗಿದೆ. ಸೆಸ್ ಮತ್ತು ಸರ್ಜ್ ಚಾರ್ಜ್ – 1,40,000 ಸಾವಿರ ಮನಮೋಹನ್ ಸಿಂಗ್ ಇದ್ದಾಗ ಇತ್ತು. 2023-24ರ ಸಾಲಿನಲ್ಲಿ 5,52,000 ಕೋಟಿ ರೂಪಾಯಿಗಳು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೆಹರು-ಗಾಂಧಿ ಸಂಕೋಲೆಯಿಂದ ಕಾಂಗ್ರೆಸ್‌ ಹೊರಬರಲಿ; ಪ್ರಣಬ್‌ ಮುಖರ್ಜಿ ಪುತ್ರಿ ಆಗ್ರಹ

ಬಿಎಸ್‌ವೈ ಅವರಿಂದ ಪೆದ್ದು ರಾಜಕೀಯ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಲಿಲ್ಲ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಮ್ಮೆಯೂ ಕೇಂದ್ರದ ಬಳಿ ಹಣವನ್ನು ಕೇಳಿಲ್ಲ. ಮಹದಾಯಿ, ಮೇಕೆದಾಟು ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಇವೆಲ್ಲ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ಯಡಿಯೂರಪ್ಪ, ಬೊಮ್ಮಾಯಿ ಪೆದ್ದು ಪೆದ್ದಾಗಿ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

VISTARANEWS.COM


on

ರಾಜ್ಯಸಭೆ

ರಾಜ್ಯಸಭೆಗೆ ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿತ್ತು. ನಾಮಪತ್ರ ಸಲ್ಲಿಸಿರುವ ಯಾವ ಅಭ್ಯರ್ಥಿಯೂ ತಮ್ಮ ನಾಮಪತ್ರ ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಕೆ.ಎಂ. ವಿಶಾಲಾಕ್ಷಿ ನಾಲ್ವರನ್ನು ಅವಿರೋಧವಾಗಿದ್ದಾರೆಂದು ಘೋಷಿಸಿದ್ದಾರೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ, ಮನ್ಸೂರ್‌ ಅಲಿ ಖಾನ್‌ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಗೊಂಡ ಬಳಿಕ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.

Also Read: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

VISTARANEWS.COM


on

ನರೇಂದ್ರ ಮೋದಿ

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರು ದೇಶದ ಮೊದಲ ಪ್ರಧಾನಿ ಜವಹರ್‌ ಲಾಲ್‌ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮೋದಿ, ಇಂದಿಗೆ ( ಜೂನ್ 10)ರ ವೇಳೆಗೆ ನಿರಂತರವಾಗಿ 4,399 ದಿನಗಳ ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.
ನೆಹರೂ ಅವರು 1947ರಿಂದ ಪ್ರಧಾನಿಯಾಗಿದ್ದರೂ, ಭಾರತದಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ 1951-52ರಲ್ಲಿ ನಡೆದ ಕಾರಣ, ಚುನಾವಣೆಯ ಮೂಲಕ ಆಯ್ಕೆಯಾದ ಪ್ರಧಾನಿಯಾಗಿ ಅವರ ಅವಧಿಯನ್ನು 1952ರಿಂದ ಲೆಕ್ಕಿಸಲಾಗುತ್ತದೆ. ಇದೇ ಮಾನದಂಡದ ಪ್ರಕಾರ ಮೋದಿ ಇದೀಗ ಹೊಸ ದಾಖಲೆ ನಿರ್ಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest1 day ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest1 day ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest5 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌