Nisha Yogeshwar : ಮತ್ತೆ ಕಾಂಗ್ರೆಸ್‌ ಪಾಳಯದಲ್ಲಿ ಕಾಣಿಸಿಕೊಂಡ ಸಿ.ಪಿ ಯೋಗೇಶ್ವರ್‌ ಪುತ್ರಿ - Vistara News

ರಾಜಕೀಯ

Nisha Yogeshwar : ಮತ್ತೆ ಕಾಂಗ್ರೆಸ್‌ ಪಾಳಯದಲ್ಲಿ ಕಾಣಿಸಿಕೊಂಡ ಸಿ.ಪಿ ಯೋಗೇಶ್ವರ್‌ ಪುತ್ರಿ

Nisha Yogeshwar : ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಮತ್ತೊಮ್ಮೆ ಕಾಂಗ್ರೆಸ್‌ ನಾಯಕರ ಜತೆ ಕಾಣಿಸಿಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Nisha Yogeshwar Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಕಳೆದ 2023ರ ಜುಲೈ ತಿಂಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರನ್ನು ಭೇಟಿಯಾಗಿ ಕೌಟುಂಬಿಕ ಸಮಸ್ಯೆಯನ್ನು (Family Problem) ಹೇಳಿಕೊಂಡಿದ್ದ ನಿಶಾ ಯೋಗೇಶ್ವರ್‌ (Nisha Yogeshwar) ಇದೀಗ ಮತ್ತೊಮ್ಮೆ ಕಾಂಗ್ರೆಸ್‌ ಪಾಳಯದಲ್ಲಿ (Congress Politics) ಕಾಣಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ (Parliament Election 2024) ಹೊತ್ತಲ್ಲಿ ನಡೆಸಿರುವ ಈ ಘಟನೆಯ ಬಗ್ಗೆ ಹಲವಾರು ಊಹಾಪೋಹಗಳ ಚರ್ಚೆ ನಡೆಯುತ್ತಿವೆ.

ನಿಶಾ ಯೋಗೇಶ್ವರ್‌ ರಾಜ್ಯದ ಪ್ರಮುಖ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್‌ ಅವರ ಪುತ್ರಿ. ಸಾಕಷ್ಟು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಸೋಮವಾರ ಬೆಂಗಳೂರಿನಲ್ಲಿ ಚನ್ನಪಟ್ಟಣ ಮೂಲದ ಕಾಂಗ್ರೆಸ್ ನಾಯಕ ರಘುನಂದನ್ ರಾಮಣ್ಣ (Raghunandan Ramanna) ಬೆಂಗಳೂರು ಮೈಸೂರು ಇನ್ಸ್ಫಾಸ್ಟ್ರಕ್ಚರ್‌ ಕಾರಿಡಾರ್ ಪ್ರದೇಶ ಪ್ರಾಧಿಕಾರದ (BMICAPA) ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುತೂಹಲ ಮೂಡಿಸಿದರು.

ಈ ವೇಳೆ ಅವರು ತಮ್ಮ ತಂದೆ ಸಿಪಿ ಯೋಗೇಶ್ವರ್ ರಾಜಕೀಯ ಬದ್ಧ ವೈರಿ ಸಂಸದ ಡಿ.ಕೆ. ಸುರೇಶ್‌ ಜತೆಗೂ ತುಂಬಾ ಆತ್ಮೀಯವಾಗಿ ಹರಟಿದ್ದು ಪಕ್ಕದಲ್ಲಿ ನಿಂತು ಫೋಟೊ ತೆಗೆಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ. ರಘುನಂದನ್ ರಾಮಣ್ಣ ಅವರಿಗೆಗೆ ಶುಭಾಶಯ ಕೋರಿದ ನಿಶಾ ಅವರು ಡಿ.ಕೆ.ಸುರೇಶ್ ಜೊತೆಗೆ ರಾಜಕೀಯ ಬೆಳವಣಿಗೆಗಳ ಬಗೆಗೂ ಹರಟಿದ್ದು ಕಂಡುಬಂತು.

Nisha Yogeshwar Congress (1)

ನಿಶಾ ಯೋಗೇಶ್ವರ್‌ ಅವರು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕೂಡಾ ಫುಲ್ ಆಕ್ಟೀವ್ ಆಗಿದ್ದಾರೆ. ಇದರ ಜತೆಗೆ ಈಗ ಕಾಂಗ್ರೆಸ್‌ ನಾಯಕರ ಜತೆ ಕಾಣಿಸಿಕೊಂಡಿದ್ದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ : Nisha Yogeshwar : ಡಿ.ಕೆ ಶಿವಕುಮಾರ್‌ ಭೇಟಿಯಾದ ನಿಶಾ ಯೋಗೇಶ್ವರ್‌; ಏನಿದು ರಾಜಕೀಯ ಕಾರ್ಯತಂತ್ರ?

ಇದರ ಹಿಂದೆ ಇದೆಯಾ ರಾಜಕೀಯ ತಂತ್ರಗಾರಿಕೆ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಕುತೂಹಲ ಕೆರಳಿಸಿರುವುದು ಬೆಂಗಳೂರು ಗ್ರಾಮಾಂತರ ಕ್ಷೇತ್ರ. ಕಳೆದ ಬಾರಿ ಕಾಂಗ್ರೆಸ್‌ ಗೆಲ್ಲಲು ಶಕ್ತವಾದ ಏಕೈಕ ಕ್ಷೇತ್ರವಿದು. ಈ ಬಾರಿ ಬಿಜೆಪಿ ಈ ಕ್ಷೇತ್ರವನ್ನೂ ಕಾಂಗ್ರೆಸ್‌ನಿಂದ ಕಿತ್ತುಕೊಳ್ಳಬೇಕು ಎಂಬ ಪ್ರಯತ್ನದಲ್ಲಿದೆ. ಆದರೆ, ಇಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಇನ್ನೂ ಗೊಂದಲವಿದೆ. ಡಿ.ಕೆ. ಸುರೇಶ್‌ ಅವರ ವಿರುದ್ಧ ಮೈತ್ರಿ ಅಭ್ಯರ್ಥಿಗಳಾಗಿ ಹಂತ ಹಂತವಾಗಿ ಸಿ.ಪಿ. ಯೋಗೇಶ್ವರ್‌, ಎಚ್.‌ಡಿ ಕುಮಾರಸ್ವಾಮಿ ಮತ್ತು ಡಾ.ಸಿ.ಎನ್‌. ಮಂಜುನಾಥ್‌ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ, ಯಾವುದೂ ಸ್ಪಷ್ಟವಾಗಿಲ್ಲ.

ಇತ್ತ ಕಾಂಗ್ರೆಸ್‌ನಲ್ಲಿ ಡಿ.ಕೆ ಸುರೇಶ್‌ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸಹಜ ಸುದ್ದಿ ಇದೆ. ಇವರ ಬದಲಿಗೆ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್‌ ಕೊಡಲಾಗುತ್ತದೆ ಎಂಬ ಸುದ್ದಿಯೂ ಇದೆ. ಅದರ ನಡುವೆ ನಿಶಾ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಜತೆಗೆ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು ಯಾಕೆ?

ಕಳೆದ 2023ರ ಜುಲೈ 23ರಂದು ನಿಶಾ ಯೋಗೇಶ್ವರ್‌ ಅವರು ತಮ್ಮ ಸ್ನೇಹಿತೆಯ ಜತೆ ಬಂದು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು. ಈ ವೇಳೆ ತನ್ನ ತಂದೆಯ ವಿರುದ್ಧವೇ ದೂರು ಹೇಳಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ವಿಚಾರದಲ್ಲಿ ನಾನು ಎಂಟ್ರಿ ಆಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದರು.

Nisha Yogeshwar DK Shivakumar

ಹೀಗೇ ಮಾತನಾಡುತ್ತಾ ಬಂದ ನಿಶಾ ಒಮ್ಮೆಗೆ ತನ್ನ ತಂದೆ ಸಿ.ಪಿ. ಯೋಗೇಶ್ವರ್‌ ವಿರುದ್ಧ ಡಿ.ಕೆ. ಶಿವಕುಮಾರ್‌ ಬಳಿ ದೂರು ಹೇಳಿದ್ದಾರೆ. ನನಗೆ ರಕ್ಷಣೆ ಬೇಕು ಎಂದ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ತಮ್ಮ ತಂದೆಯಿಂದ ನಮಗೆ ಕಿರುಕುಳ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನೀವು ನಮಗೆ ರಕ್ಷಣೆ ಕೊಡಬೇಕು. ನಮ್ಮನ್ನು ಈ ಅಪಾಯದಿಂದ ಪಾರು ಮಾಡಬೇಕು ಎಂದು ಕೋರಿಕೊಂಡಿದ್ದರು ಎನ್ನಲಾಗಿದೆ.

ನಿಶಾ ಯೋಗೇಶ್ವರ್ ಅವರು ಸಿ.ಪಿ. ಯೋಗೇಶ್ವರ್‌ ಅವರ ಮೊದಲ ಪತ್ನಿ ಮಗಳು. ಹೀಗಾಗಿ ಕೌಟುಂಬಿಕವಾಗಿ ಅವರ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನಲಾಗಿದೆ. ಜತೆಗೆ ಆಸ್ತಿ ವಿಚಾರದಲ್ಲಿ ಸಿಪಿವೈ ಮತ್ತು ನಿಶಾ ನಡುವೆ ಜಗಳ ನಡೆದಿದೆ ಎನ್ನಲಾಗಿದೆ. ಹೀಗಾಗಿ ರಕ್ಷಣೆ ಕೋರಿ ಆಕೆ ಡಿ.ಕೆ. ಶಿವಕುಮಾರ್‌ ಬಳಿ ಬಂದಿದ್ದರೆನ್ನಲಾಗಿದೆ. ಆದರೆ, ನಿಮ್ಮ ಕುಟುಂಬದ ಜಗಳಕ್ಕೆ ನಾವು ಬರುವುದಿಲ್ಲ. ಆದರೆ, ಒಂದು ವೇಳೆ ನೀವು ರಾಜಕೀಯಕ್ಕೆ ಬರುವುದಾದರೆ ನಮ್ಮ ಸಹಕಾರ ಇರುತ್ತದೆ. ನಿಮಗೆ ರಾಜಕೀಯವಾಗಿ ಏನು ಬೆಂಬಲ ಬೇಕೋ ಅದನ್ನು ಮಾಡಬಹುದು ಎಂದು ಹೇಳಿದ್ದರು.

ಹಾಗಿದ್ದರೆ ಈಗ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಜತೆಗೆ ಕಾಣಿಸಿಕೊಳ್ಳುವುದಕ್ಕೂ ರಾಜಕೀಯ ಆಶ್ರಯಕ್ಕೂ ಸಂಬಂಧವಿದೆಯಾ? ನಿಶಾ ಯೋಗೇಶ್ವರ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗುತ್ತಾರಾ ಎಂಬ ಚರ್ಚೆಯೂ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

Prajwal Revanna Case: ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

VISTARANEWS.COM


on

Prajwal Revanna Case Victim found at relative house Not in a farmhouse Sa Ra Mahesh Explosive Information
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಅಪಹರಣ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಸಂತ್ರಸ್ತ ಮಹಿಳೆ ಸಿಕ್ಕಿದ್ದು ತೋಟದ ಮನೆಯಲ್ಲಿ ಅಲ್ಲ. ಹುಣಸೂರಿನ ಸಂಬಂಧಿಕರ ಮನೆಯಲ್ಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಈ ಮೂಲಕ ತನಿಖೆಯ ಸತ್ಯಾಂಶದ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಹಾಗೂ ಎಚ್‌.ಡಿ. ರೇವಣ್ಣ ಕಿಡ್ನ್ಯಾಪ್‌ ಕೇಸ್‌ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಾ.ರಾ. ಮಹೇಶ್‌, ಕೇಸ್ ರಿಜಿಸ್ಟರ್ ಆಗುವುದಕ್ಕೂ ಮುಂಚೆಯೇ ನ್ಯಾಷನಲ್ ಮೀಡಿಯಾದಲ್ಲಿ ಸುದ್ದಿ ಬರುತ್ತದೆ. ಹಾಗಾದರೆ ಇದರ ರೂವಾರಿ ಯಾರು? ರಾಜಗೋಪಾಲ್ ಅವರು ತೋಟದಲ್ಲಿ ಇದ್ದ ಬಗ್ಗೆ ವಿಡಿಯೊ ಯಾಕೆ ಆಚೆ ಬಂದಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಚ್‌ಡಿಕೆ ಪ್ರಶ್ನೆ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading

ಕರ್ನಾಟಕ

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೆ ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

VISTARANEWS.COM


on

Lok Sabha Election 2024
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕುರ್ವೆಯ ಮೋಹನ್ ಮತ್ತು ಸವಿತಾ ದಂಪತಿ ಸ್ವಂತ ದೋಣಿಯ ಮೂಲಕ ದಂಡೆಭಾಗದ ಶಾಲೆ ಮತಗಟ್ಟೆಗೆ ತೆರಳಿ ಸಂತಸದಿಂದ ಮತ ಚಲಾಯಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಬೆಳಗಾವಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಾಹ್ನ 3ಗಂಟೆವರೆಗೆ ಅಂದಾಜು ಶೇ.54.20 ಮತದಾರರು (Voter Turnout) ಹಕ್ಕು ಚಲಾಯಿಸಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ.

14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 6ಗಂಟೆವರೆಗೆ ನಡೆಯಲಿದೆ. ಬೆಳಗ್ಗೆ ಮೊದಲ ಎರಡು ಗಂಟೆಗಳಲ್ಲಿ ಅಂದರೆ 9 ಗಂಟೆವರೆಗೆ ಶೇ.9.45% ಮತದಾನ ದಾಖಲಾಗಿತ್ತು. ಬಳಿಕ 11 ಗಂಟೆಗೆ ಶೇ.24.48 ಹಾಗೂ 1 ಗಂಟೆವರೆಗೆ ಶೇ.41.59 ಮತದಾನ ವರದಿಯಾಗಿತ್ತು. ಅದೇ ರೀತಿ ಮಧ್ಯಾಹ್ನ 3ಗಂಟೆವರೆಗೆ ಶೇ.54.20 ವೋಟಿಂಗ್‌ ನಡೆದಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

ಕ್ಷೇತ್ರವಾರು ಮತದಾನ ಮಾಹಿತಿ

ಬಾಗಲಕೋಟೆ- ಶೇ. 54.95
ಬೆಳಗಾವಿ- ಶೇ.53.85
ಬಳ್ಳಾರಿ-ಶೇ.56.76
ಬೀದರ್-‌ ಶೇ. 49.89
ವಿಜಯಪುರ-ಶೇ.49.88
ಚಿಕ್ಕೋಡಿ-ಶೇ. 59.65
ದಾವಣಗೆರೆ- ಶೇ. 57.31
ಧಾರವಾಡ- ಶೇ. 55
ಕಲಬುರಗಿ-ಶೇ.47.67
ಹಾವೇರಿ-ಶೇ. 58.45
ಕೊಪ್ಪಳ- ಶೇ. 55.06
ರಾಯಚೂರು-ಶೇ.49.49
ಶಿವಮೊಗ್ಗ-ಶೇ.57.96
ಉತ್ತರ ಕನ್ನಡ-ಶೇ.55.98

ಇದನ್ನೂ ಓದಿ | Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Continue Reading

ರಾಜಕೀಯ

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

VISTARANEWS.COM


on

Prajwal Revanna Case Government work against Revanna HD Kumaraswamy gives details of the case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ (Hassan Pen Drive Case) ಅನ್ನು ನಾನು ವೀಕ್ಷಣೆ ಮಾಡಿಲ್ಲ. ಆ ಪೆನ್‌ಡ್ರೈವ್‌ಗಳಲ್ಲಿರುವ ಅಶ್ಲೀಲ ವಿಡಿಯೊಗಳನ್ನು ನಾನು ನೋಡಿಲ್ಲ. ಈ ವಿಷಯ ಗೊತ್ತಿದ್ದರೆ ನಾನು ಪ್ರಜ್ವಲ್‌ಗೆ ಎಂಪಿ ಟಿಕೆಟ್‌ ಕೊಡುತ್ತಿರಲಿಲ್ಲ. ಇದು ದೇವೇಗೌಡರ ಕುಟುಂಬ ಸರ್ವನಾಶ ಮಾಡಬೇಕೆಂದು ವ್ಯವಸ್ಥಿತ ಸಂಚಾಗಿದೆ. ಈ ಇಡೀ ಪ್ರಕರಣದಲ್ಲಿ ಸರ್ಕಾರ ವ್ಯವಸ್ಥಿತವಾಗಿ ಸಂಚು ರೂಪಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಬಂದಿದ್ದರೆ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಪ್ರಜ್ವಲ್‌ ರೇವಣ್ಣನಿಗೆ ಟಿಕೆಟ್‌ ಕೊಡುವ ಪ್ರಶ್ನೆಯೇ ಉದ್ಭವ ಆಗುತ್ತಿರಲಿಲ್ಲ. ಆಗ ನಾನು ಟಿಕೆಟ್‌ ನಿರಾಕರಣೆ ಮಾಡಿದ್ದು, ಸ್ಥಳೀಯ ಕಾರ್ಯಕರ್ತರಿಗೆ ಪ್ರಜ್ವಲ್‌ ಸ್ಪಂದಿಸುತ್ತಿರಲಿಲ್ಲ ಎಂಬ ದೂರು ಬಂದಿತ್ತು. ಹಾಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂದು ಹೇಳಿದ್ದೆ ಎಂಬುದಾಗಿ ಸ್ಪಷ್ಟನೆ ನೀಡಿದರು.

ಪೆನ್‌ಡ್ರೈವ್‌ಗಳು ಮಾರ್ಫಿಂಗ್ ಮಾಡಿರೋದಾ? ನಕಲಿಯೋ ನನಗೆ ಗೊತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಬೇಕೆಂಬ ವ್ಯವಸ್ಥಿತ ಸಂಚು ಇಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ನರೇಂದ್ರ ಮೋದಿ ಆಡಳಿತ ತೆಗೆದು ದೆಹಲಿ ಗದ್ದುಗೆ ಹಿಡಿಯಲು ಷಡ್ಯಂತ್ರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಚಾಗಿದೆ. ಎಸ್‌ಐಟಿಯು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತಿದೆ. ಈಗಲೂ ಹೇಳುತ್ತೇನೆ, ಇಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಇದೇ ನಮ್ಮ ಪಕ್ಷದ ನಿರ್ಧಾರವಾಗಿದೆ. ವಕೀಲ ದೇವರಾಜೇಗೌಡ ಏನೆಲ್ಲ ಹೇಳಿದರು. ಏನು ನಡೆಯುತ್ತಾ ಇದೆ ಇಲ್ಲಿ. ಆ ಬಗ್ಗೆ ತನಿಖೆ ಆಗಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಟಿಗೆ ಎಚ್‌ಡಿಕೆ ವಾರ್ನಿಂಗ್‌

ಎಸ್‌ಐಟಿ ತನಿಖೆ ಹಾಗೂ ಕಾರ್ಯವೈಖರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ನಡೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಕಾಲ ಚಕ್ರ ಉರುಳುತ್ತದೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಾರ್ನ್‌ ಮಾಡಿದ್ದಾರೆ.

ಡಿಕೆಶಿಯನ್ನು ವಜಾ ಮಾಡಿ

ಮಹಾನುಭಾವ ಡಿ.ಕೆ.ಶಿವಕುಮಾರ್ ಹಿಸ್ಟರಿ ತೆಗೆದರೆ ಈ ರೀತಿ ಕೇಸಲ್ಲಿ ಎಕ್ಸ್‌ಪರ್ಟ್ ಎಂಬುದು ಗೊತ್ತಾಗುತ್ತದೆ. ಇಂತಹವರನ್ನು ಇಟ್ಕೊಂಡು ಎಸ್‌ಐಟಿ ಮೂಲಕ ಯಾವ ಪಾರದರ್ಶಕ ತನಿಖೆ ಆಗುತ್ತದೆ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ಸಂತ್ರಸ್ತೆಯರಿಗೂ ನ್ಯಾಯ ಕೊಡಬೇಕು, ಸತ್ಯ ಗೊತ್ತಾಗಬೇಕು. ಈ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಸಂಚು ಕಾಣುತ್ತಿದೆ. ಮೊದಲು ಅವರನ್ನು ಕ್ಯಾಬಿನೆಟ್‌ನಿಂದ ಸಸ್ಪೆಂಡ್ ಮಾಡಬೇಕು. ಈ ಪ್ರಕರಣದಲ್ಲಿ ಡಿಕೆಶಿ ಸಂಚು ಏನಿದೆ? ಆ ಬಗ್ಗೆ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಅಲ್ಲದೆ, ಡಿಸಿಎಂ ಡಿಕೆಶಿ ಮುಖ ನೋಡಿದರೆ ಬಾಲ ಸುಟ್ಟ ಬೆಕ್ಕಿನಂತೆಯೇ ಆಗಿದೆ. ದೇವರಾಜೇಗೌಡ ಸ್ಫೋಟಕ ಸುದ್ದಿಗೋಷ್ಠಿ ನಂತರ ಅವರ ಮುಖ ನೋಡಿ ಎಂದು ವ್ಯಂಗ್ಯವಾಡಿದರು.

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ ವಿವೇಕ್ ರೆಡ್ಡಿ ಆಗ್ರಹಿಸಿದ್ದಾರೆ. ನ್ಯಾಯಯುತ ತನಿಖೆ ನಡೆಯಬೇಕಾದರೆ ನ್ಯಾಯಾಂಗ ತನಿಖೆಗೆ ಈ ಪ್ರಕರಣವನ್ನು ವಹಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಳಗಾವಿ ಸಾಹುಕಾರ್ ರಮೇಶ್‌ ಜಾರಕಿಹೊಳಿ ಪ್ರಕರಣ ಏನಾಯಿತು ಈಗ ಎಂಬುದು ಗೊತ್ತಾ? ಮೂವತ್ತು, ನಲವತ್ತು ಕೋಟಿ ರೂಪಾಯಿ ಖರ್ಚು ಮಾಡಿ ಜಾರಕಿಹೊಳಿ ಅವರ ಹೆಸರನ್ನು ಹಾಳು ಮಾಡಿದರು. ಆ ಆಡಿಯೊ ಈಗಲೂ ಓಡಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ. 2900 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬುದಾಗಿ ಸಿಂಗಾಪುರದಲ್ಲೂ ಸುದ್ದಿ ಅಂತೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಸನ ಡಿಸಿ ವಿರುದ್ಧ ಎಚ್‌ಡಿಕೆ ಗರಂ

ಇದೇ ವೇಳೆ ಶಿಶುಪಾಲ ಹಾಗೂ ಪಾಪದ ಕಥೆ ಹೇಳಿದ್ದ ಹಾಸನ ಡಿಸಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೋಲಾರದಲ್ಲಿದ್ದಾಗ ಗಂಡ, ಹೆಂಡತಿ ಏನ್ ಮಾಡಿದ್ದೀರಾ ಅಂತಾ ಗೊತ್ತಿದೆ. ಯಾವುದೋ ಸಮಿತಿಯವರ ಮನವಿ ಪಡೆದು ವ್ಯಂಗ್ಯ ಮಾಡ್ತೀರಾ ಡಿಸಿ ಅವರೇ? ನಿಮ್ಮ ಯೋಗ್ಯತೆ ನನಗೆ ಚೆನ್ನಾಗಿ ಗೊತ್ತು ಕಿಡಿಕಾರಿದರು.

15 ದಿನಗಳಿಂದ ತಲೆಮರೆಸಿಕೊಂಡಿದ್ದಾನಲ್ಲ ಆ ಕಾರ್ತಿಕ್‌ಗೆ ಯಾವ ನೋಟಿಸ್ ಕೊಟ್ಟಿರಿ? ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೀರಾ? ಲುಕ್‌ ಔಟ್‌ ನೋಟಿಸ್‌ ಕೊಟ್ಟಿರಾ? ಏನು ನಡೆಯುತ್ತಿದೆ ಇಲ್ಲಿ ಎಂದು ಕಿಡಿಕಾರಿದರು.

ಎಚ್.ಡಿ.ರೇವಣ್ಣ ಎಲ್ಲಿಗೂ ಓಡಿ ಹೋಗಿರಲಿಲ್ಲ. ದೇವರಿಗೆ ಕೈಮುಗಿದುಕೊಂಡು ಓಡಾಡಿಕೊಂಡಿದ್ದ. ಅಯ್ಯೋ ದೇವರೇ ಕಾಪಾಡಪ್ಪ ಅಂತಿದ್ದ. ಆದರೆ, ಬೇಕೆಂದೇ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಂಪ್ಲೇಂಟ್ ತೆಗೆದುಕೊಳ್ಳಲು ಸಂತ್ರಸ್ತೆಯರನ್ನು ಹುಡುಕುತ್ತಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾರಿಗೆಲ್ಲ ಹೇಗೆ ಹೆದರಿಸಿ ಕಂಪ್ಲೇಂಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇವಣ್ಣ ಪಾತ್ರ ಎಷ್ಟಿದೆ?

ಯಾರೂ ನೇರವಾಗಿ ಎಚ್.ಡಿ.ರೇವಣ್ಣ ಮೇಲೆ ಕಂಪ್ಲೇಂಟ್‌ ಕೊಟ್ಟಿಲ್ಲ. ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಪಾತ್ರ ಎಷ್ಟಿದೆ ಗೊತ್ತಿದೆಯಾ? ಬೇಲ್ ವಿಚಾರಣೆ ವೇಳೆ ಆ ಹೆಣ್ಣು ಮಗಳ ಕುರಿತು ಎಸ್‌ಪಿಪಿಯ ಮಾತು ಏನು? ಕಿಡ್ನ್ಯಾಪ್ ಆಗಿದ್ದ ಹೆಣ್ಣು ಮಗಳು ಬದುಕಿದ್ದಾಳೆ, ಸತ್ತಿದ್ದಾಳಾ ಅಂದಿದ್ದರು. ಕೊನೆಗೆ ಮೈಸೂರಿನ ಕಾಳೇನಹಳ್ಳಿ ತೋಟದ ಮನೆಯಿಂದ ಕರೆತಂದಿದ್ದರು. ಆ ತೋಟದ ಮನೆಗೆ ಹೋಗಿ ಕರೆತಂದದ್ರಲ್ಲ, ಮಹಜರು ಮಾಡಿದ್ರಾ? ಒಂದೂವರೆ ದಿವಸ ಆದರೂ ಆ ಹೆಣ್ಣು ಮಗಳು ಹೇಳಿಕೆ ಕೊಟ್ಟಿಲ್ಲವಾ? 2 ದಿನವಾದರೂ ಆ ಹೆಣ್ಣು ಮಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಏಕೆ? ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಕೆಲಸ ಮಾಡಿದವರು ರೇವಣ್ಣ. ನೀವು ಬರೆಸಿಕೊಂಡ ಹೇಳಿಕೆಗೆ ಎಚ್.ಡಿ.ರೇವಣ್ಣ ಸೈನ್‌ ಮಾಡಬೇಕಾ? ಇದೇನು ಡಿಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಂ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರು ಇಲ್ಲ. ಪ್ರಜ್ವಲ್ ಆಗಲಿ, ರೇವಣ್ಣ ಹೆಸರಾಗಲಿ ಆಯೋಗದ ಪತ್ರದಲ್ಲಿ ಇರಲಿಲ್ಲ. ಆದರೆ, ಸಿಎಂ ತಮ್ಮ ಪತ್ರದಲ್ಲಿ ಪ್ರಜ್ವಲ್ ಹೆಸರನ್ನು ಉಲ್ಲೇಖಿಸುತ್ತಾರೆ. ಏಪ್ರಿಲ್ 28ಕ್ಕೆ ಪೆನ್‌ಡ್ರೈವ್ ಪ್ರಕರಣ ತನಿಖೆಗೆ SIT ರಚನೆ ಮಾಡಿದ್ದರು. ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಸಂತ್ರಸ್ತೆಯಿಂದ ಕಂಪ್ಲೇಂಟ್ ಬರೆಸಿದ್ದರು. ಗಣಕಯಂತ್ರದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ದೂರು ಬರೆಸಿದರು. ಹೊಳೆನರಸೀಪುರದ ಪೊಲೀಸ್‌ ಠಾಣೆಗೆ ಬೆಂಗಳೂರಿನಿಂದ ಕಂಪ್ಲೇಂಟ್ ಬರೆಸಿ ನೀಡಿದರು. ರಾಜ್ಯದ ಗೌರವವನ್ನು ಉಳಿಸಲು SIT ಮಾಡಿದ್ರು ಅಂತ ಖುಷಿ ಇತ್ತು. ಆದರೆ, ಕೊನೆಗೆ ಮಾಡಿದ್ದೇನು? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

ಪತ್ರದಲ್ಲಿ ಪ್ರಜ್ವಲ್‌, ರೇವಣ್ಣ ಹೆಸರೇ ಇಲ್ಲ

ಏಪ್ರಿಲ್ 25ರಂದು ಮಹಿಳಾ ಆಯೋಗದ ಅಧ್ಯಕ್ಷರಿಂದಲೇ ಸಿಎಂಗೆ ಪತ್ರ ಬರೆಯಲಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಗಳಿಂದ ಲೈಂಗಿಕ ದೌರ್ಜನ್ಯ ಅಂತಾ ಬರೆದಿದ್ದರು. ಮಹಿಳಾ ಆಯೋಗದ ಪತ್ರದಲ್ಲಿ ರಾಜಕಾರಣಿ ಯಾರೆಂದು ಹೇಳಿರಲಿಲ್ಲ. ಒಬ್ಬ ಅಲ್ಲ ಎಷ್ಟೋ ರಾಜಕಾರಣಿಗಳು ಎನ್ನುವ ಅರ್ಥದಲ್ಲಿತ್ತು ಆ ಪತ್ರ. ಆ ಬಳಿಕ ಏಪ್ರಿಲ್ 27ರಂದು ಮುಖ್ಯಮಂತ್ರಿಗಳಿಂದ ತನಿಖಾ ತಂಡ ರಚನೆ ಆಗುತ್ತದೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ತನಿಖಾ ತಂಡ ರಚಿಸುತ್ತೇನೆ ಎಂಬುದಾಗಿ ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದರು.

Continue Reading

ಬಳ್ಳಾರಿ

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

Lok Sabha Election 2024: ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮಂಗಳವಾರ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಟುಂಬ ಸದಸ್ಯರ ಜತೆ ಆಗಮಿಸಿ, ಮತದಾನ ಮಾಡಿದರು.

VISTARANEWS.COM


on

Ballari Lok Sabha constituency Congress candidate e Tukaram voting in Sandur
Koo

ಸಂಡೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರು ಮಂಗಳವಾರ ಸಂಡೂರಿನಲ್ಲಿ ಮತದಾನ (Lok Sabha Election 2024) ಮಾಡಿದರು.

ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರ ಜತೆ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮಾತನಾಡಿ, ಮತ ಚಲಾಯಿಸಿದ್ದು ಖುಷಿ ನೀಡಿದೆ. ಭವ್ಯ ಭಾರತದ ಭವಿಷ್ಯ ನಿರ್ಧಾರ ಮಾಡುವ ಈ ಚುನಾವಣೆ ಮಹತ್ವದಾಗಿದೆ. ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಮತ್ತೊಂದು ಹೊಸ ಇತಿಹಾಸ ಬರೆಯಲಿದೆ ಎಂದು ಅವರು ತಿಳಿಸಿದರು.

Continue Reading
Advertisement
Prajwal Revanna Case Victim found at relative house Not in a farmhouse Sa Ra Mahesh Explosive Information
ರಾಜಕೀಯ2 mins ago

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

MS Dhoni
ಪ್ರಮುಖ ಸುದ್ದಿ25 mins ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Lok sabha Election 2024
Lok Sabha Election 202428 mins ago

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024
ಕರ್ನಾಟಕ29 mins ago

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

viral news
ಕ್ರೀಡೆ32 mins ago

Viral News: ದೆಹಲಿ To ಗೋವಾ ವಿಮಾನ ಟಿಕೆಟ್​​ ಬೆಲೆಗಿಂತ ದುಬಾರಿ ಟೀಮ್​ ಇಂಡಿಯಾದ ಟಿ20 ವಿಶ್ವಕಪ್​ ಜೆರ್ಸಿ

Met Gala Fashion
ಫ್ಯಾಷನ್32 mins ago

Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

Lalu Prasad Yadav
ದೇಶ32 mins ago

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

IPL 2024
ಕ್ರೀಡೆ47 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202451 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ1 hour ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ23 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ4 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌