CV Ananda Bose: ಉಪಚುನಾವಣೆ ವೇಳೆ ವೋಟಿಂಗ್‌ ಹಕ್ಕು ಕಸಿದ ಟಿಎಂಸಿ ಕಾರ್ಯಕರ್ತರು; ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಮತದಾರರು - Vistara News

ರಾಜಕೀಯ

CV Ananda Bose: ಉಪಚುನಾವಣೆ ವೇಳೆ ವೋಟಿಂಗ್‌ ಹಕ್ಕು ಕಸಿದ ಟಿಎಂಸಿ ಕಾರ್ಯಕರ್ತರು; ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಮತದಾರರು

CV Ananda Bose: ಉಪಚುನಾವಣೆಯ ವೇಳೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಸುಮಾರು 100 ಮತದಾರರು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರನ್ನು ಭೇಟಿಯಾಗಿ ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ 100 ಮಂದಿ, ಉಪಚುನಾವಣೆ ಮತ್ತು ಲೋಕಸಭಾ ಚುನಾವಣೆಯ ವೇಳೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ದೂರಿದ್ದಾರೆ.

VISTARANEWS.COM


on

CV Ananda Bose
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ವೇಳೆ ಪಶ್ಚಿಮ ಬಂಗಾಳದಲ್ಲಿ ಸುಮಾರು 2 ಲಕ್ಷ ಹಿಂದುಗಳ ಮತದಾನದ ಹಕ್ಕನ್ನು ಕಸಿಯಲಾಗಿತ್ತು ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ (Suvendu Adhikari) ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್ (Trinamool Congress) ಕಾರ್ಯಕರ್ತರು ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಸುಮಾರು 100 ಮತದಾರರು ರಾಜ್ಯಪಾಲ ಸಿ.ವಿ.ಆನಂದ ಬೋಸ್ (CV Ananda Bose) ಅವರನ್ನು ಭೇಟಿಯಾಗಿ ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕರೂ ಆದ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ 100 ಮಂದಿ, ಉಪಚುನಾವಣೆ ಮತ್ತು ಲೋಕಸಭಾ ಚುನಾವಣೆಯ ವೇಳೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ಅವಕಾಶ ವಂಚಿತರೊಂದಿಗೆ ಮಾತುಕತೆ ನಡೆಸಿದ ಸಿ.ವಿ.ಆನಂದ ಬೋಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ʼʼಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ಸಮಯ ಕೋರುತ್ತೇನೆ ಮತ್ತು ಈ ಮತದಾರರನ್ನು ಅವರ ಬಳಿಗೆ ಕರೆದೊಯ್ಯುತ್ತೇನೆ. ಈ ದೌರ್ಜನ್ಯವನ್ನು ಸುಮ್ಮನೆ ಬಿಡುವುದಿಲ್ಲʼʼ ಎಂದು ತಿಳಿಸಿದ್ದಾರೆ.

“ರಾಷ್ಟ್ರಪತಿ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಮನವರಿಕೆ ಮಾಡುತ್ತೇವೆ. ಈ ರೀತಿಯ ಅನ್ಯಾಯ ಮುಂದುವರಿಯಲು ಬಿಡಬಾರದು. ಅವಕಾಶ ವಂಚಿತರ ಪೈಕಿ ಪ್ರತಿನಿಧಿಗಳಾಗಿ ಐವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾರೆ.

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜತೆಗೆ ಮಾತನಾಡಿದ ಸುವೇಂದು ಅಧಿಕಾರಿ ʼʼಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ. ಲೋಕಸಭಾ ಚುನಾವಣೆಯ ವೇಳೆ ಟಿಎಂಸಿ ಸುಮಾರು 50 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ. ಇನ್ನು ಇತ್ತೀಚೆಗೆ ನಡೆದ 4 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 2 ಲಕ್ಷಕ್ಕಿಂತ ಅಧಿಕ ಹಿಂದುಗಳ ಹಕ್ಕನ್ನು ಹತ್ತಿಕ್ಕಲಾಯಿತುʼʼ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

ಉಪಚುನಾವಣೆಯ ಫಲಿತಾಂಶ

ಜುಲೈ 13ರಂದು 7 ರಾಜ್ಯಗಳ 13 ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದಿದ್ದರೆ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಇನ್ನು ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಟಿಎಂಸಿ ಗೆಲುವಿನ ನಗೆ ಬೀರಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

Assembly Session: ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ (Assembly Session) ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?, ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಎಂಎಲ್‌ಸಿ ಸಿ.ಟಿ. ರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ ವಿಚಾರ ಪ್ರಸ್ತಾಪಿಸಿದ್ದಾರೆ. ಅಕ್ರಮವಾಗಿ ಬ್ಯಾಂಕಿಗೆ ವರ್ಗಾವಣೆಯಾದ ಹಣದ ಮೇಲೆ ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿದರು, ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಬಿಡಿಸಿಕೊಂಡರು ಎಂದೆಲ್ಲ ವಿವರಿಸಿದ್ದಾರೆ. ಬ್ಯಾಂಕಿನಲ್ಲಿ ಒಂದೇ ದಿನದಲ್ಲಿ ಇಷ್ಟೆಲ್ಲಾ ಆಗಿದೆ ಎಂದರೆ ಇಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಹ ಭಾಗಿಯಾಗಿದೆ ಎಂದು ಅರ್ಥವಲ್ಲವೇ? ಹೀಗಾಗಿ ನಾನು ಇದರಲ್ಲಿ ದೆಹಲಿಯ ಸನ್ಮಾನ್ಯ ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗುತ್ತದೆಯೇ?” ಎಂದು ಪ್ರಶ್ನೆಸಿದರು.

ಇದನ್ನೂ ಓದಿ | Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

“ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ನಡೆದುಕೊಂಡು, ತನಿಖಾ ತಂಡ ರಚನೆ ಮಾಡಿದೆ. ತನಿಖಾ ತಂಡವು ಹಣವನ್ನು ಮರಳಿ ಪಡೆದಿದೆ. ಮಾಜಿ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ನೋಟಿಸ್ ನೀಡಿದೆ. ಎಸ್ ಐಟಿ ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಸಿಬಿಐ ಸೇರಿದಂತೆ ಯಾರು ಬೇಕಾದರೂ ಬಂದು ತನಿಖೆ ಮಾಡಲಿ. ಆದರೆ ನೀವು ಅದಕ್ಕಿಂತ ಮುಂಚಿತವಾಗಿ ಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿಸಿದರೆ ಹೇಗೆ? ನೀವು ಯಾವ ದೃಷ್ಟಿಕೋನದಲ್ಲಿ ಸರಕಾರ ಆರೋಪಿಗಳ ರಕ್ಷಣೆ ಮಾಡುತ್ತಾ ಇದೆ ಎಂದು ಹೇಳಲು ಹೊರಟಿದ್ದೀರಿ ಎಂದು ನನಗೆ ತಿಳಿದಿದೆ. ನೀವು ಅವರ ಹೆಸರು ಹೇಳಿ. ನಾನು ಸಹ ನನಗೆ ಗೊತ್ತಿರುವ ಹೆಸರುಗಳನ್ನು ಹೇಳುತ್ತೇನೆ” ಎಂದು ಸಿ.ಟಿ.ರವಿ ಅವರಿಗೆ ಕುಟುಕಿದರು.

ಕಲಾಪದ ನಡುವೆ ವಿರೋಧ ಪಕ್ಷದವರ ದೋಷಗಳನ್ನು ಕುಳಿತಲ್ಲೇ ತಿದ್ದಿದ ಸಿಎಂ

7th Pay Commission

ಬೆಂಗಳೂರು: 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿಸಿಕೊಂಡರು.

ಸೋಮವಾರ ಮಧ್ಯಾಹ್ನ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರಿಂದ ಮಂಗಳವಾರ ರಾತ್ರಿ ಜೆಡಿಎಸ್ ನ ಶಾರದಾ ಪೂರ್ಯಾನಾಯ್ಕ್ ಮತ್ತು ಬಿಜೆಪಿಯ ಅರವಿಂದ್ ಬೆಲ್ಲದ್ ಅವರು ಮಾತನಾಡುವವರೆಗೂ ಪ್ರತಿಯೊಬ್ಬರ ಮಾತನ್ನೂ ಕೇಳಿಸಿಕೊಂಡರು.

ಎರಡೂ ದಿನದಲ್ಲಿ ಆರ್.ಅಶೋಕ್ ಅವರ ಸುದೀರ್ಘ ನಾಲ್ಕು ಗಂಟೆಗಳ ಮಾತಿನ ಸಮೇತ ಸ್ವಪಕ್ಷದವರ ಮತ್ತು ವಿರೋಧ ಪಕ್ಷದವರ ಮಾತುಗಳನ್ನು ಕೇಳಿಸಿಕೊಂಡರು. ಕುಳಿತ ಜಾಗದಿಂದ ಕದಲದಂತೆ ಶಾಂತಚಿತ್ತವಾಗಿ ಪ್ರತಿಯೊಬ್ಬರ ಮಾತನ್ನೂ ‘ಪಿನ್ ಟು ಪಿನ್’ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು, ಕಲಾಪದ ನಡುವೆ ವಿರೋಧ ಪಕ್ಷದವರ factual errors ಗಳನ್ನು ಕುಳಿತಲ್ಲೇ ತಿದ್ದುತ್ತಾ ಮುತ್ಸದ್ದಿತನ‌ ಮೆರೆದರು.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಹೆಚ್ಚಿನ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿ ಸದನದ ಘನತೆ ಹೆಚ್ಚಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

Continue Reading

ಕರ್ನಾಟಕ

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

Assembly Session: ಲಾರ್ವಾ ಸಮೀಕ್ಷೆಯ ಜಿಪಿಎಸ್ ಇಲ್ಲದ ಹಳೇ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ. ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ. ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

VISTARANEWS.COM


on

Larva survey Show the old photo without GPS and get crores of rupees to the government Cheating Alleged by MLC TA Sharavana
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ (Assembly Session) ಪ್ರಸ್ತಾಪಿಸಿದರು.

ಇತ್ತೀಚಿಗೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಜನರಲ್ಲಿ ಭಯ ಹುಟ್ಟಿಸುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚುವುದರಿಂದ ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾದಂತಹ ರೋಗಗಳು ಜಾಸ್ತಿಯಾಗುತ್ತವೆ. ಈ ರೋಗಗಳ ನಿಯಂತ್ರಣಕ್ಕೆ ಪ್ರತಿ ವರ್ಷ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಸರ್ಕಾರಕ್ಕೆ ಕೋಟ್ಯಂತರ ರೂ. ಮೋಸ

ಈ ಸಮೀಕ್ಷೆ ಮಾಡಲು ಪ್ರತಿ ಮಳೆಗಾಲದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಈ ಸಂಬಂಧ ನಗರ ಪ್ರದೇಶಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಆರೋಗ್ಯ ನಿರೀಕ್ಷಣಾಧಿಕಾರಿಗಳು (HIO) ಮತ್ತು ಆರೋಗ್ಯ ಸುರಕ್ಷತಾಧಿಕಾರಿಗಳು (PHCO) ಲಾರ್ವಾ ಸಮೀಕ್ಷೆ ನಡೆಸುತ್ತಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಈ ಸಮೀಕ್ಷೆಯ ಮೂಲ ಉದ್ದೇಶ. ಆದರೆ ಇವರಿಗೆ ಒಂದು ದಿನಕ್ಕೆ ತಲಾ ತಿಂಗಳಿಗೆ 300 ರೂ. ಗಳನ್ನು ಕೊಡಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಪಿಎಸ್ ಇಲ್ಲದ ಹಳೆಯ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ ಎಂದು ಟಿ. ಎ. ಶರವಣ ಆರೋಪಿಸಿದರು.

ಇದನ್ನೂ ಓದಿ: Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ, ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ಭೀಕರ ಅಪಘಾತ ನಡೆದಿದೆ.

VISTARANEWS.COM


on

Road Accident
Koo

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್‌ರಿಂದ ಲಾಠಿ ಚಾರ್ಜ್

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

Continue Reading

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Assembly Session: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading
Advertisement
Chandipura Virus
ಆರೋಗ್ಯ3 mins ago

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Double-Decker Flyover
ಪ್ರಮುಖ ಸುದ್ದಿ6 mins ago

Double-Decker Flyover: ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ; ದಕ್ಷಿಣ ಭಾರತದ ಪ್ರಥಮ ಮೆಟ್ರೋ ಕಂ ಮೇಲ್ಸೇತುವೆ

WOMEN'S T20 RANKINGS
ಕ್ರೀಡೆ9 mins ago

WOMEN’S T20 RANKINGS: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಪ್ರಗತಿ ಸಾಧಿಸಿದ ಹರ್ಮನ್‌ಪ್ರೀತ್‌, ಶಫಾಲಿ

Kichcha Sudeep Really Invited By Mukesh Ambani Wedding
ಸಿನಿಮಾ18 mins ago

Kichcha Sudeep: ಅಂಬಾನಿ ಮದುವೆಗೆ ಸುದೀಪ್‌ಗೆ ಆಹ್ವಾನ ಬಂದಿತ್ತ? ಅಸಲಿ ಸತ್ಯ ಏನು?

Muharram 2024
ಪ್ರಮುಖ ಸುದ್ದಿ34 mins ago

Muharram 2024: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ

landslide Karnataka Rain
ಉತ್ತರ ಕನ್ನಡ37 mins ago

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

CV Ananda Bose
ರಾಜಕೀಯ57 mins ago

CV Ananda Bose: ಉಪಚುನಾವಣೆ ವೇಳೆ ವೋಟಿಂಗ್‌ ಹಕ್ಕು ಕಸಿದ ಟಿಎಂಸಿ ಕಾರ್ಯಕರ್ತರು; ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಮತದಾರರು

Anant Radhika Wedding
ವಾಣಿಜ್ಯ1 hour ago

Anant Radhika Wedding: ಅನಂತ್ ಅಂಬಾನಿ ಟರ್ಬನ್‌ನಲ್ಲಿದ್ದ ಡೈಮಂಡ್ ಬ್ರೋಚ್‌ ಮೌಲ್ಯ 150 ಫ್ಲಾಟ್‌ಗಳ ಬೆಲೆಗೆ ಸಮಾನ!

Tulsi Tea Benefits
ಆರೋಗ್ಯ1 hour ago

Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

world emoji day ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಈ ಚಿತ್ರಾಕ್ಷರಗಳಿಗೆ ಇಂದು 25 ವರ್ಷ ತುಂಬಿತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌