ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ - Vistara News

ರಾಜಕೀಯ

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗ ಒಂದು ಬಗೆಯ ಮಾರಣ ಯಾಗವಾಗಿದೆ. ಇದರಲ್ಲಿ ಅಘೋರಿಗಳು, ಕಾಪಾಲಿಕರು, ಮಾಂತ್ರಿಕರು ಭಾಗವಹಿಸುತ್ತಿದ್ದಾರೆ.

VISTARANEWS.COM


on

Shatru Bhairavi yaga ಶತ್ರು ಭೈರವಿ ಯಾಗ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ- ಮಂತ್ರ (Black Magic) ಪಾಲಿಟಿಕ್ಸ್ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರಿಗೆ ʼರಾಜಕಂಟಕʼ ತರಲು ಉದ್ದೇಶಿಸಿ ಕೇರಳದಲ್ಲಿ ʼಶತ್ರು ಭೈರವಿ ಯಾಗ’ (Shatru Bhairavi yaga) ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್‌ ನಿನ್ನೆ ಆರೋಪಿಸಿದ್ದರು. ಇದೀಗ ಪುರೋಹಿತರ ಸೂಚನೆಯಂತೆ, ಈ ಯಾಗದಿಂದ ಉಂಟಾಗಬಹುದಾದ ಹಾನಿಗೆ ರಕ್ಷಣಾ ಕವಚ ಮಾಡಿಸಲು ಡಿಕೆಶಿ ಮುಂದಾಗಿದ್ದಾರೆ.

ಡಿಸಿಎಂ ಅವರಿಂದ ಕೇರಳದಲ್ಲಿ ನಡೆಯುತ್ತಿರುವ ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಸುಳಿವು ದೊರೆತಿತ್ತು. ʼʼನನ್ನ ಮತ್ತು ಸಿಎಂ ವಿರುದ್ಧ ದೊಡ್ಡ ವಾಮಾಚಾರ ಪ್ರಯೋಗ ನಡೆಯುತ್ತಿದೆ” ಎಂದು ಡಿಕೆಶಿ ಹೇಳಿದ್ದರು. ಡಿಸಿಎಂ ಹಾಗೂ ಸಿಎಂ ವಿರುದ್ಧ ಶತ್ರು ಭೈರವಿ ಯಾಗ ಕೇರಳದ ಯಾವುದೋ ಊರಿನ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸೇರಿದ ನಿರ್ಜನ ಪ್ರದೇಶದಲ್ಲಿ ನಡೆಯುತ್ತಿದೆ. ಆಘೋರಿಗಳ ಮೊರೆ ಹೋಗಿ ಈ ಯಾಗ ಮಾಡಿಸಲಾಗುತ್ತಿದೆ. ನನ್ನ ವಿರುದ್ಧ ಕೆಲವು ರಾಜಕಾರಣಿಗಳೇ ಮಾಡಿಸುತ್ತಿದ್ದಾರೆ ಎಂದಿದ್ದರು ಡಿಸಿಎಂ.

“ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದು ಶತ್ರು ನಾಶಕ್ಕಾಗಿಯೇ ಮಾಡುವ ಯಾಗ!

ಯಜ್ಞಕಾಂಡ ಹಾಗೂ ಪುರಾಣಗಳಲ್ಲಿ ಹಲವು ಬಗೆಯ ಯಾಗಗಳ ಉಲ್ಲೇಖವಿದೆ. ಒಳ್ಳೆಯ ಉದ್ದೇಶದಿಂದ ಹಾಗೂ ಕೆಟ್ಟ ಉದ್ದೇಶದಿಂದ ನಡೆಯುವ ಯಾಗಗಳೆಂದು ಎರಡು ವಿಧಗಳಿವೆ. ದುಷ್ಟ ಉದ್ದೇಶದ ಯಾಗಗಳಲ್ಲಿ ಸ್ತಂಭನ ಹಾಗೂ ಮಾರಣ ಯಾಗಗಳು ಪ್ರಮುಖವಾಗಿವೆ. ಸ್ತಂಭನ ಯಾಗಗಳು ವಾಮಾಚಾರದ ಭಾಗವಾಗಿದ್ದು, ಶತ್ರುಗಳಿಗೆ ಸಂಕಷ್ಟ ನೀಡುವ ಉದ್ದೇಶದಿಂದ ನಡೆಯುತ್ತವೆ. ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗವು ಒಂದು ಬಗೆಯ ಮಾರಣ ಯಾಗವಾಗಿದೆ.

ಮೂರು ಪ್ರಯೋಗಗಳು, ಪಂಚಬಲಿ

ತ್ರು ಭೈರವಿ ಎಂಬ ಶಕ್ತಿಯನ್ನು ಪ್ರಸನ್ನಗೊಳಿಸಲು ಈ ಮಾರಣ ಯಾಗ ನಡೆಯುತ್ತದೆ. ಶತ್ರು ಭೈರವಿಯನ್ನು ಬಲಿಗಳಿಂದ ಪ್ರಸನ್ನಗೊಳಿಸಿ, ವೈರಿ ನಾಶಕ್ಕಾಗಿ ಕಳಿಸಿಕೊಡಲಾಗುತ್ತದೆ. ಶತ್ರು ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ನಡೆದಿವೆ. ಮಾರಣ, ಮೋಹನ, ಸ್ತಂಭನ ಎಂಬ ಮೂರು ಪ್ರಯೋಗಗಳು ಇವೆ. ರಾಜಕಂಟಕ ತರಲು ಈ ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ಇರುತ್ತವೆ. ಮೂರು ಪ್ರಯೋಗಕ್ಕೆ 50 ಪ್ರಾಣಿಗಳ ಬಲಿ ಕೊಡಲಾಗಿದೆ.

21 ಕೆಂಪು ಬಣ್ಣದ ಮೇಕೆಗಳು, 3 ಎಮ್ಮೆಗಳು, 21 ಕಪ್ಪು ಬಣ್ಣದ ಕುರಿಗಳು, 5 ಹಂದಿಗಳನ್ನು ಬಲಿ ಕೊಡಲಾಗಿದೆ. ಈ ಯಾಗದಲ್ಲಿ ಎಂಟು ಮಂದಿ ವಾಮಾಚಾರ- ಅಭಿಚಾರ ಕರ್ಮಗಳನ್ನು ಬಲ್ಲ ಜ್ಯೋತಿಷಿಗಳು ಭಾಗವಹಿಸುತ್ತಿದ್ದಾರೆ. ಮದ್ಯ ಮಾಂಸಗಳನ್ನು ಯಥೇಚ್ಛವಾಗಿ ದೇವತೆಗೆ ಕೊಡಲಾಗುತ್ತಿದ್ದು, ದೇವತೆಯನ್ನು ರೊಚ್ಚಿಗೆಬ್ಬಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೇರಳದಲ್ಲಿ ಜ್ಯೋತಿಷಿಗಳ ಸ್ವರೂಪದಲ್ಲಿರುವ ಹಲವು ಮಂದಿ ಅಘೋರಿಗಳಿದ್ದು, ಇದನ್ನು ನೆರವೇರಿಸುವಲ್ಲಿ ಪಳಗಿದ್ದಾರೆ. ಇವರು ಅನೇಕ ಯಾಗಗಳನ್ನು ಈ ಹಿಂದೆ ನೆರವೇರಿಸಿದ ನಿದರ್ಶನಗಳಿವೆ.

ಅಘೋರಿಗಳು, ಕಾಪಾಲಿಕರು ಮಾತ್ರ ಮಾಡುತ್ತಾರೆ

ಈ ಯಾಗವನ್ನು ಸಾಮಾನ್ಯ ಪುರೋಹಿತರಿಂದ ಮಾಡಲು ಸಾಧ್ಯವಿಲ್ಲ. ಅಘೋರಿಗಳನ್ನು ಕರೆಸಿ ಸ್ಮಶಾನದಲ್ಲಿ ಯಾಗ ನಡೆಸಲಾಗುತ್ತದೆ. ಸ್ಮಶಾನ ಕಾಳಿಯನ್ನು ಪ್ರಧಾನವಾಗಿಟ್ಟು ಅಷ್ಟ ಭೈರವಿಯನ್ನು ಕರೆದು ಯಾಗ ಮಾಡಿಸಲಾಗುತ್ತದೆ. ಮೊದಲು ಪ್ರಾಣಿಯ ಮೇಲೆ ನಡೆಯುತ್ತದೆ. ಪ್ರಾಣಿ ಸತ್ತು ಬೀಳುತ್ತದೆ. ಇದಕ್ಕೆ ಮಾಮೂಲಿ ತುಪ್ಪ, ಸಮಿತ್ತುಗಳನ್ನು ಬಳಸುವುದಿಲ್ಲ. ಹಂದಿ, ಎಮ್ಮೆ ತುಪ್ಪ ಬಳಕೆ ಮಾಡಲಾಗುತ್ತದೆ. ವಿಷಯುಕ್ತ ಮರದ ಚಕ್ಕೆಗಳನ್ನು ಹೋಮಕ್ಕೆ ಹಾಕಲಾಗುತ್ತದೆ. ಮಣ್ಣಿನ ದೇವಿ ಮೂರ್ತಿಗೆ ರಕ್ತ ನೀಡಿದಾಗ ರಕ್ತ ಹೀರುತ್ತದೆ. ಈ ಯಾಗ 9 ದಿನಗಳ ಕಾಲ ಪ್ರತಿ ರಾತ್ರಿ ನಡೆಯುತ್ತದೆ. ಕಾಪಾಲಿಕರು, ಅಘೋರಿಗಳು ನಡೆಸುವ ಈ ಯಾಗದಲ್ಲಿ ಶ್ರದ್ಧೆ ಅಥವಾ ಪ್ರಯೋಗದಲ್ಲಿ ಸ್ವಲ್ಪ ವ್ಯತ್ಯಾಸವಾದ್ರೂ ಮಾಡಿಸುವ ಕರ್ತೃ ಹಾಗೂ ಮಾಂತ್ರಿಕ ಇಬ್ಬರಿಗೂ ಮಾರಣಾಂತಿಕ ಹಾನಿ ಸಂಭವಿಸಬಹುದು. ಉನ್ನತ ತಂತ್ರ ವಿದ್ಯೆ ಗೊತ್ತಿರುವ ಮಂದಿಗೆ ಮಾತ್ರ ಈ ಯಾಗ ಮಾಡುವ ಕ್ರಮ ಗೊತ್ತಿದ್ದು, ಅದರ ಅರ್ಹತೆ- ಅಧಿಕಾರ ಪಡೆದಿದ್ದಾರೆ.

ಯಾಗದಲ್ಲಿ ಭಾಗಿಯಾದವರಿಂದಲೇ ಡಿಸಿಎಂ ಡಿಕೆಶಿಗೆ ಈ ಬಗ್ಗೆ ಮಾಹಿತಿ ದೊರೆತಿದೆ ಎಂದು ಅವರು ಹೇಳಿದ್ದಾರೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್ ಪುರೋಹಿತರ ಮೊರೆ ಹೋಗಿದ್ದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸೂಕ್ತ ದಿಗ್ಬಂಧನಗಳನ್ನು ಮಾಡಿಸಿಕೊಳ್ಳುವುದು ಸೇರಿದಂತೆ ಒಂದಷ್ಟು ಮಹತ್ವದ ಸಲಹೆಗಳನ್ನು ಜ್ಯೋತಿಷಿಗಳು ಅವರಿಗೆ ನೀಡಿದ್ದಾರೆ. “ನನ್ನ ರಕ್ಷಣೆಗೆ ನನ್ನ ಶಕ್ತಿ ಇದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದು, ಈ ಶಕ್ತಿ ಹಾಗೂ ತಾವು ಕೈಗೊಳ್ಳುತ್ತಿರುವ ರಕ್ಷಣಾ ಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ; ಸಿದ್ದರಾಮಯ್ಯ ಉತ್ತರ ಏನಿತ್ತು?

CM Siddaramaiah: ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

VISTARANEWS.COM


on

cm siddaramaiah kempegowda jayanthi
Koo

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಕೇಳಿಕೊಂಡರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರು ಕೂಡಾ ಉಪಸ್ಥಿತರಿದ್ದರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.

ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದು ಹೇಳಿದರು. ಈ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶ ರವಾನೆ ಮಾಡಿದರು. ಡಿಕೆಶಿ ಸಿಎಂ ಆಗೋದು ಹೈಕಮಾಂಡ್ ಕೈಯಲ್ಲಿ ಇದೆ ಅನ್ನುವುದನ್ನು ಸ್ಪಷ್ಟಪಡಿಸಿದರು.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

ಡಿಸಿಎಂ ಕೂಗು ಎಬ್ಬಿಸಿದ್ದ ಸಿದ್ದರಾಮಯ್ಯ ಬಣಕ್ಕೆ ಮಾಸ್ಟರ್ ಸ್ಟ್ರೋಕ್ ಕೊಡಲು ಡಿಕೆ ಶಿವಕುಮಾರ್ ಈ ಮೂಲಕ ಮುಂದಾದರೇ ಎಂಬ ಅನುಮಾನವೂ ಮೂಡಿದೆ. ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದು ಸಿಎಂ ಆಪ್ತ ಸಚಿವರು ಹೇಳಿದ್ದರು. ನಿನ್ನೆ ಡಿಕೆಶಿ ಬಣದ ಶಾಸಕರಿಂದ, ಡಿಕೆ ಶಿವಕುಮಾರ್ ಸಿಎಂ ಮಾಡಿ ಎಂಬ ಹಕ್ಕೊತ್ತಾಯ ಬಂದಿತ್ತು. ಹತ್ತು ಜನರನ್ನು ಡಿಸಿಎಂ ಮಾಡಿ ಅಂತ ಹೇಳಿಕೆಯೂ ಬಂದಿತ್ತು. ಅದರ ಬೆನ್ನಲ್ಲೇ ಸ್ವಾಮೀಜಿಯಿಂದಲೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಅಂತ ಸಲಹೆ ಬಂದಿದೆ. ಆ ಮೂಲಕ ಸಿಎಂ ಬಣದ ಏಟಿಗೆ ಡಿಕೆಶಿ ಬಣ ಎದಿರೇಟು ನೀಡಲಾಗಿದೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

Continue Reading

ದೇಶ

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Parliament Sessions: ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

VISTARANEWS.COM


on

Parliament Sessions
Koo

ಹೊಸದಿಲ್ಲಿ: 18ನೇ ಲೋಕಸಭಾ ಅಧಿವೇಶನ(Parliament Sessions)ದಲ್ಲಿ ಇಂದು ಸಭಾಧ್ಯಕ್ಷರ ಪೀಠದ ಬಳಿ ಇರುವ ಸೆಂಗೋಲ್‌(Sengol) ರಾಜದಂಡ ವಿಚಾರ ಚರ್ಚೆಗೆ ಗ್ರಾಸವಾಯಿತು. ಸೆಂಗೋಲ್‌(Sengol) ಅನ್ನು ಬದಲಿಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಸಮಾಜವಾದಿ ಪಕ್ಷದ ಸಂಸದ ಆರ್‌.ಕೆ. ಚೌಧರಿ ಈ ಬಗ್ಗೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸೆಂಗೋಲ್‌ ಬದಲಾಗಿ ಸಂವಿಧಾನದ ಪ್ರತಿಯನ್ನು ಇಡುವಂತೆ ಒತ್ತಾಯಿಸಿದ್ದಾರೆ.

ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿತು ಮತ್ತು ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರ ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೊಲ್’ ಅನ್ನು ಸ್ಥಾಪಿಸಿತು. ಸೆಂಗೋಲ್ ಎಂಬುದು ತಮಿಳು ಪದವಾಗಿದ್ದು, ಇದರ ಅರ್ಥ ರಾಜದಂಡ. ರಾಜದಂಡ ಎಂದರೆ ರಾಜನ ಕೋಲು ಎಂದೂ ಅರ್ಥ. ರಾಜಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ. ಈಗ, ಅರ್ಹ ಮತದಾರರಾಗಿರುವ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ಈ ದೇಶವನ್ನು ನಡೆಸಲು ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಹಾಗಾದರೆ ದೇಶವು ಸಂವಿಧಾನದಿಂದ ನಡೆಯುತ್ತದೋ? ಅಥವಾ ರಾಜದಂಡದಿಂದ ನಡೆಸಲ್ಪಡುತ್ತದೆಯೇ? ‘ಸೆಂಗೊಲ್’ ಬದಲಿಗೆ ಪ್ರಜಾಪ್ರಭುತ್ವವನ್ನು ಉಳಿಸಲು ಸಂವಿಧಾನದ ಪ್ರತಿಯನ್ನು ಇರಿಸಬೇಕೆಂದು ಒತ್ತಾಯಿಸಿದರು.

ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ತಿರುಗೇಟು

ಪ್ರತಿಪಕ್ಷಗಳ ಆರೋಪಕ್ಕೆ ಬಿಜೆಪಿ ಸೇರಿದಂತೆ ಎನ್‌ಡಿಎ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಸಮಾಜವಾದಿ ಪಕ್ಷವು ಮೊದಲು ರಾಮಚರಿತಮಾನಸ್ ಮತ್ತು ಈಗ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಮತ್ತು ವಿಶೇಷವಾಗಿ ತಮಿಳು ಸಂಸ್ಕೃತಿಯ ಭಾಗವಾಗಿರುವ ಸೆಂಗೋಲ್ ಮೇಲೆ ದಾಳಿ ಮತ್ತು ನಿಂದನೆ ಮಾಡಿದೆ. ಸೆಂಗೋಲ್‌ನ ಈ ಅವಮಾನವನ್ನು ಅವರು ಬೆಂಬಲಿಸುತ್ತಾರೆಯೇ ಎಂಬುದನ್ನು ಡಿಎಂಕೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ದೇಶ

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Droupadi Murmu: ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ಅವರು ಮಾತನಾಡಿ ಈ ಭರವಸೆ ನೀಡಿದ್ದಾರೆ.

VISTARANEWS.COM


on

Droupadi Murmu
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಮಾತನಾಡಿದ್ದಾರೆ. ಈ ವೇಳೆ ಅವರು ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೆಸ್‌ ಮಾರ್ಕ್‌ ನೀಡುವ ಮೂಲಕ ವಿವಾದ ಎಬ್ಬಿಸಿದ ನೀಟ್‌ (NEET) ಪರೀಕ್ಷೆ ಬಗ್ಗೆ ಪ್ರಸ್ತಾವಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ” ಎಂದು ರಾಷ್ಟ್ರಪತಿ ತಿಳಿಸಿದ್ದಾರೆ. ʼʼಪ್ರಶ್ನೆ ಪತ್ರಿಕೆ ಸೋರಿಕೆ ಹಲವು ರಾಜ್ಯಗಳಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದುʼʼ ಎಂದು ಹೇಳಿದ್ದಾರೆ.

“ಸರ್ಕಾರಿ ನೇಮಕಾತಿಗಳು ಮತ್ತು ಪರೀಕ್ಷೆಗಳಲ್ಲಿ ಪಾವಿತ್ರ್ಯತೆ, ಪಾರದರ್ಶಕತೆ ಅತ್ಯಗತ್ಯ. ನ್ಯಾಯಯುತ ತನಿಖೆ ನಡೆಸಲು ಮತ್ತು ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳಲ್ಲಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

ಇತ್ತೀಚೆಗೆ ಕೇಂದ್ರ ಸರ್ಕಾರ ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿರುವ ಬಗ್ಗೆ ಪ್ರಸ್ತಾವಿಸಿದ ದ್ರೌಪದಿ ಮುರ್ಮು ಅವರು, ʼʼಪ್ರಸ್ತುತ ದಿನಗಳಲ್ಲಿ ಸಾವಯವ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿಸುತ್ತಿದೆ. ಈ ಬೇಡಿಕೆಯನ್ನು ಪೂರೈಸಲು ಭಾರತೀಯ ರೈತರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ. ಸರ್ಕಾರ ಖಾರಿಫ್ ಬೆಳೆಗಳ ಬೆಂಬಲ ಬೆಲೆಯನ್ನೂ ಹೆಚ್ಚಿಸಿದೆ. ನಾವು ಹೆಚ್ಚು ಹೆಚ್ಚು ಸ್ವಾವಲಂಬಿಗಳಾಗಬೇಕು ಎಂಬ ಕಲ್ಪನೆಯನ್ನು ಇಟ್ಟುಕೊಂಡು ನೀತಿಯನ್ನು ರೂಪಿಸಲಾಗಿದೆʼʼ ಎಂದು ಹೇಳಿದ್ದಾರೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಮತ್ತು ಆರ್ಥಿಕತೆಯ ಗಾತ್ರದ ದೃಷ್ಟಿಯಿಂದ 2014ರ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದೆ ಎಂದ ಅವರು ʼʼಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯತ್ತ ಸರ್ಕಾರ ಈಗ ಗಮನ ಹರಿಸಿದೆ. ಉತ್ಪಾದನೆ, ಸೇವೆ ಮತ್ತು ಕೃಷಿ ಈ ಮೂರೂ ವಿಭಾಗಗಳಿಗೆ ಸರ್ಕಾರ ಸಮಾನ ಆದ್ಯತೆ ನೀಡುತ್ತಿದೆ. ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ತ್ವರಿತಗತಿಯಲ್ಲಿ ಆತ್ಮನಿರ್ಭರವಾಗುತ್ತಿದೆʼʼ ಎಂದು ನುಡಿದಿದ್ದಾರೆ.

ಸಂಸತ್ತು ಸುಗಮವಾಗಿ ನಡೆಯುವ ಅಗತ್ಯವನ್ನು ಒತ್ತಿ ಹೇಳಿದ ಅವರು, “ಸಂಸತ್ತು ತನ್ನ ವ್ಯವಹಾರವನ್ನು ಸುಗಮವಾಗಿ ನಡೆಸಿದಾಗ, ಇಲ್ಲಿ ಆರೋಗ್ಯಕರ ಚರ್ಚೆಗಳು ನಡೆದಾಗ, ದೂರಗಾಮಿ ನಿರ್ಧಾರಗಳನ್ನು ತೆಗೆದುಕೊಂಡಾಗ, ಜನರು ಸರ್ಕಾರದ ಮೇಲೆ ಮಾತ್ರವಲ್ಲದೆ ಇಡೀ ವ್ಯವಸ್ಥೆಯ ಮೇಲೆ ವಿಶ್ವಾಸವನ್ನು ಇಡುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಸಂಸತ್ತಿನ ಪ್ರತಿ ಕ್ಷಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಾರೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡುತ್ತಾರೆ ಎನ್ನುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading
Advertisement
Viral video
ವೈರಲ್ ನ್ಯೂಸ್7 mins ago

Viral Video : ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಂಕ್‌ ಮ್ಯಾನೇಜರ್‌- ವಿಡಿಯೋ ಇದೆ

Fake Complaint
ಕೋರ್ಟ್11 mins ago

Fake Complaint : ಹೆಸ್ಕಾಂ ಎಂಜಿನಿಯರ್‌ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್‌; ದೂರುದಾರೆ ಸೇರಿ 13 ಮಂದಿ ಜೈಲುಪಾಲು

cm siddaramaiah kempegowda jayanthi
ಪ್ರಮುಖ ಸುದ್ದಿ18 mins ago

CM Siddaramaiah: ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ; ಸಿದ್ದರಾಮಯ್ಯ ಉತ್ತರ ಏನಿತ್ತು?

IND vs ENG
ಕ್ರೀಡೆ29 mins ago

IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

Parliament Sessions
ದೇಶ42 mins ago

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Bengaluru Metro
Latest43 mins ago

Bengaluru Metro: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

Nitin Gadkari
ಪ್ರಮುಖ ಸುದ್ದಿ47 mins ago

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

IND vs ENG Semi Final
ಕ್ರೀಡೆ1 hour ago

IND vs ENG Semi Final: ಮೀಸಲು ದಿನ ಇರದ ಭಾರತ-ಇಂಗ್ಲೆಂಡ್​ ಸೆಮಿ ಪಂದ್ಯದ ಮಳೆ ನಿಯಮ ಹೇಗಿದೆ?

Droupadi Murmu
ದೇಶ1 hour ago

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Fazalhaq Farooqi
ಕ್ರೀಡೆ1 hour ago

Fazalhaq Farooqi : ವಿಶ್ವ ಕಪ್​ 2024ರಲ್ಲಿ ಹೊಸ ದಾಖಲೆ ಬರೆದ ಆಪ್ಘನ್ ಬೌಲರ್​ ಫಜಲ್ಹಾಕ್​ ಫಾರೂಕಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ3 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌