Dr CN Manjunath : ಡಾ. ಸಿ.ಎನ್‌ ಮಂಜುನಾಥ್‌ ರಾಜಕೀಯ ಪ್ರವೇಶ ಇಲ್ಲ; ವದಂತಿಗೆ ತೆರೆ ಎಳೆದ ದೇವೇಗೌಡ್ರು - Vistara News

ರಾಜಕೀಯ

Dr CN Manjunath : ಡಾ. ಸಿ.ಎನ್‌ ಮಂಜುನಾಥ್‌ ರಾಜಕೀಯ ಪ್ರವೇಶ ಇಲ್ಲ; ವದಂತಿಗೆ ತೆರೆ ಎಳೆದ ದೇವೇಗೌಡ್ರು

Dr CN Manjunath : ನನ್ನ ಅಳಿಯ ಡಾ. ಮಂಜುನಾಥ್‌ ರಾಜಕೀಯ ಪ್ರವೇಶ ಮಾಡಲ್ಲ, ಚುನಾವಣೆ ಕಣಕ್ಕೆ ಇಳಿಯಲ್ಲ, ಅವರ ವ್ಯಕ್ತಿತ್ವಕ್ಕೆ ಕಳಂಕ ಹಚ್ಚುವ ತೀರ್ಮಾನ ಮಾಡಲ್ಲ ಎಂದಿದ್ದಾರೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು.

VISTARANEWS.COM


on

Dr CN Manjunath HD Devegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಚಿಕಿತ್ಸಾ ಸಂಸ್ಥೆಯನ್ನು (Jayadeva Hospital) ಖಾಸಗಿ ಆಸ್ಪತ್ರೆಗಿಂತಲೂ ಅದ್ಭುತವಾಗಿ ಕಟ್ಟಿ ಬೆಳೆಸಿದ, ಅದರ ನಿರ್ದೇಶಕರಾಗಿ ನಿವೃತ್ತರಾದ ಡಾ. ಸಿ.ಎನ್‌. ಮಂಜುನಾಥ್‌ (Dr CN Manjunath) ಅವರು ರಾಜಕೀಯ ಪ್ರವೇಶ ಮಾಡುವುದಿಲ್ಲ, ಅವರು ಲೋಕಸಭಾ ಚುನಾವಣೆಯಲ್ಲಿ (Parliament Election 2024) ಸ್ಪರ್ಧೆ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Devegowda).

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಂಜುನಾಥ್‌ ಅವರು ಬಿಜೆಪಿ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗೆ ತೆರೆ ಎಳೆದರು.

ಜಯದೇವ ಸಂಸ್ಥೆಯಿಂದ ನಿವೃತ್ತರಾದ ಬಳಿಕ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಅವರ ಸೇವೆಯನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ ಬಿಜೆಪಿ ಕೂಡಾ ಅವರ ಸ್ಪರ್ಧೆಗೆ ಒತ್ತು ನೀಡಲಿದೆ. ಸ್ವತಃ ಅಮಿತ್‌ ಶಾ ಮತ್ತು ಮೋದಿ ಅವರೇ ಈ ವಿಚಾರದಲ್ಲಿ ಉತ್ಸುಕರಾಗಿದ್ದಾರೆ. ಅವರು ಮುಂದೆ ದೇಶದ ಆರೋಗ್ಯ ಸಚಿವರಾಗಲೂಬಹುದು ಎಂಬವರೆಗೆ ಮಾತುಗಳು ಹರಿದಾಡಿದ್ದವು.

ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬಹುದು, ಇದು ಸುಮಲತಾ ಅವರನ್ನು ಸಮಾಧಾನ ಮಾಡಲು ಒಂದು ಸಕಾರಣವೂ ಆದೀತು. ಆವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಕಾಂಗ್ರೆಸ್‌ನ ಹಾಲಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಪ್ರಬಲ ಪ್ರತಿಸ್ಪರ್ಧಿ ಆದಾರು ಎಂಬ ಚರ್ಚೆಯೂ ನಡೆದಿತ್ತು.

ಇದೆಲ್ಲದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಎಲ್ಲ ಕಡೆಯಿಂದ ಚರ್ಚೆ ನಡೆಯುತ್ತಿದೆ. ಆದರೆ, ನಾನು ಈ ಬಗ್ಗೆ ತೀರ್ಮಾನ ಮಾಡಿಲ್ಲ ಎಂದಿದ್ದರು. ಇದೀಗ ಮಾಜಿ ಪ್ರಧಾನಿ ದೇವೇಗೌಡರು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಹಾಗಿದ್ದರೆ ದೇವೇಗೌಡರು ಹೇಳಿದ್ದೇನು?

  1. ಮಂಜುನಾಥ್‌ ಅವರು ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿದವರು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂತವರು ಬರೋದು ಸರಿಯಲ್ಲ.
  2. ಅವರಿಗೆ ಒಂದು ಒಳ್ಳೆಯ ಸ್ಥಾನವಿದೆ. ಮುಗಿಲೆತ್ತರದ ಹೆಸರಿದೆ. ಇಂತಹ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಅಂತ ನಾವು ಒತ್ತಾಯಿಸುವುದಿಲ್ಲ.
  3. ಡಾ. ಸಿ.ಎನ್‌ ಮಂಜುನಾಥ್‌ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ. ಹಾಗಾಗಿ ಸ್ಪರ್ಧೆ ಮಾಡಲ್ಲ.

ಇದನ್ನೂ ಓದಿ : Dr. CN Manjunath : ಲೋಕಸಭೆ ಸ್ಪರ್ಧೆಗೆ ನಿರ್ಧಾರ ಮಾಡಿಲ್ಲ, ಆಲೋಚನೆಯಲ್ಲಿದ್ದೇನೆ ಎಂದ ಡಾ. ಮಂಜುನಾಥ್‌

ಎಚ್‌.ಡಿ ಕುಮಾರಸ್ವಾಮಿ ಸ್ವರ್ಧೆ ಮಾಡ್ತಾರಾ?

ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಮ್ತು ಮಾಜಿ ಪ್ರಧಾನಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕೇಳಿದಾಗ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಯಾವ್ಯಾವ ಕ್ಷೇತ್ರ ಅನ್ನೋದನ್ನು ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ತೀರ್ಮಾನ ಮಾಡ್ತಾರೆ. ಕುಮಾರಸ್ವಾಮಿ ಸ್ಪರ್ದೆ ವಿಚಾರವನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂತು ಚರ್ಚೆ ಮಾಡ್ತಾರೆ ಎಂದರು.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಮತ್ತು ಗೃಹ ಸಚಿವರಿಬ್ಬರ ಹೇಳಿಕೆಯನ್ನೂ ಗಮನಿಸಿದ್ದೇನೆ. ಈ ವಿಚಾರದಲ್ಲಿ ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಅಭಿಪ್ರಾಯಪಟ್ಟರು. ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದರು ದೇವೇಗೌಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

ಆರ್‌ಎಸ್‌ಎಸ್ ಮತ್ತು ಬಿಜೆಪಿ (RSS V/S BJP) ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ ಎಂದು ಆರ್‌ಎಸ್‌ಎಸ್‌ ಹೇಳಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಆರ್‌ಎಸ್‌ಎಸ್‌ ಹೇಳಿದೆ.

VISTARANEWS.COM


on

By

RSS V/S BJP
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (loksabha election) ಕೇಸರಿ ಪಕ್ಷವು (BJP) ಸ್ಪಷ್ಟ ಬಹುಮತದ ಕೊರತೆಯನ್ನು ಅನುಭವಿಸಿದ ಅನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸೇರಿದಂತೆ ಹಲವು ಆರ್ ಎಸ್ ಎಸ್ ನಾಯಕರು ನೀಡಿರುವ ಹೇಳಿಕೆಗಳು ಪ್ರಧಾನಿ (PM) ನರೇಂದ್ರ ಮೋದಿ (narendra modi) ಅಥವಾ ಬಿಜೆಪಿಯನ್ನು ಗುರಿಯಾಗಿಸಿಕೊಂಡಿವೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆ, ಈ ಚರ್ಚೆಗಳಿಗೆ ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಆರ್ ಆರ್ ಎಸ್ ಎಸ್ ನಡುವೆ ಉಂಟಾಗಬಹುದಾದ ಬಿರುಕುಗಳ ಸಂಭಾವ್ಯತೆಯನ್ನು ಹೋಗಲಾಡಿಸುವ ಪ್ರಯತ್ನವನ್ನು ಆರ್‌ಎಸ್‌ಎಸ್ ಮಾಡಿದೆ. ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಗಸ್ಟ್ 31ರಿಂದ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್ ಎಸ್ ಎಸ್ ತನ್ನ ಅಂಗಸಂಸ್ಥೆಗಳಾದ ಸಂಘಟನೆಯೊಂದಿಗೆ ನಡೆಸುವ ಮೂರು ದಿನಗಳ ವಾರ್ಷಿಕ ಸಮನ್ವಯ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಭೆಗೆ ಹಾಜರಾಗುವ ನಿರೀಕ್ಷೆಯಿದೆ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ. ಯಾವುದೇ ಸಂದರ್ಭವಾಗಿರಲಿ ಅದು ರಾಷ್ಟ್ರೀಯ ಚುನಾವಣೆಯಂತಹ ಪ್ರಮುಖ ಘಟನೆಯನ್ನು ಉಲ್ಲೇಖಿಸುತ್ತದೆ. ಗೊಂದಲವನ್ನು ಸೃಷ್ಟಿಸಲು ಅದನ್ನು ತಪ್ಪಾಗಿ ಅರ್ಥೈಸಲಾಗಿದೆ. ಭಾಗವತ್ ಅವರು ನೀಡಿರುವ ʼದುರಹಂಕಾರʼ ಕುರಿತ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿ ಅಥವಾ ಯಾವುದೇ ಬಿಜೆಪಿ ನಾಯಕರನ್ನು ಉದ್ದೇಶಿಸಿಲ್ಲ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ತಮ್ಮ ಭಾಷಣದಲ್ಲಿ ಭಾಗವತ್ ಅವರು ಒಂದು ವರ್ಷದ ಅನಂತರವೂ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಆಗದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಫಲಿತಾಂಶಗಳು ಪ್ರಕಟವಾದ ಅನಂತರ ಚುನಾವಣಾ ಪ್ರಕ್ರಿಯೆಗಳ ಮೇಲೆ ಅನಗತ್ಯವಾಗಿ ಚಿಂತಿಸುವ ಬದಲು ಮುಂದುವರಿಯುವತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದರು.

ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನು ಟೀಕಿಸಲು ವಿರೋಧ ಪಕ್ಷದ ನಾಯಕರು ಅವರ ಈ ಹೇಳಿಕೆಗಳನ್ನು ಬಳಸಿಕೊಂಡರು. ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರತಿಕ್ರಿಯಿಸಿ ಪ್ರಧಾನ ಮಂತ್ರಿಯವರಿಗೆ ಆತ್ಮಸಾಕ್ಷಿ ಇದ್ದಿದ್ದರೆ ಮಣಿಪುರದ ಜನರ ಬೇಡಿಕೆಗಳನ್ನು ಆಲಿಸಲು ಹೋಗುತ್ತಿದ್ದರು ಎಂದು ಹೇಳಿದ್ದಾರೆ. ಈ ಟೀಕೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್, ಗೊಂದಲವನ್ನು ಬಿತ್ತುವ ರಾಜಕೀಯ ಪ್ರೇರಿತ ಪ್ರಯತ್ನ ಇದು ಎಂದು ಹೇಳಿ ತಳ್ಳಿಹಾಕಿವೆ.

ಬಿಜೆಪಿಯ ಚುನಾವಣಾ ಕಾರ್ಯವೈಖರಿಯನ್ನು ಟೀಕಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, “ಸೊಕ್ಕಿನವರನ್ನು ಭಗವಾನ್‌ ಶ್ರೀರಾಮ 241 ಸ್ಥಾನಗಳಲ್ಲಿ ನಿಲ್ಲಿಸಿದ್ದಾನೆ” ಎಂದು ಹೇಳಿದ್ದು ಮತ್ತಷ್ಟು ವಿವಾದ ಹೆಚ್ಚಿಸಿತ್ತು. ಬಳಿಕ ಅವರು ಬಿಜೆಪಿಯ ಚುನಾವಣಾ ಯಶಸ್ಸು ಮತ್ತು ಪ್ರಧಾನಿ ಮೋದಿಯವರ ಮರುಚುನಾವಣೆಯಿಂದ ದೇಶವು ಸಂತೃಪ್ತವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡರು.

ಭಾಗವತ್ ಅವರ ಭಾಷಣದ ಮೇಲಿನ ಚರ್ಚೆಗೆ ಸಂಬಂಧಿಸಿ ಸ್ಪಷ್ಟೀಕರಣಕ್ಕಾಗಿ ಅಧಿಕೃತ ಸಂಘದ ಪದಾಧಿಕಾರಿಗಳನ್ನು ಉಲ್ಲೇಖಿಸಲು ಕುಮಾರ್ ಸಲಹೆ ನೀಡಿದ್ದಾರೆ. ಕುಮಾರ್ ಅವರ ಅಭಿಪ್ರಾಯಗಳು ವೈಯಕ್ತಿಕ ಮತ್ತು ಸಾಂಸ್ಥಿಕ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಪುನರುಚ್ಚರಿಸಿದೆ.

ಬಿಜೆಪಿಯ ಚುನಾವಣಾ ಕಾರ್ಯತಂತ್ರದಲ್ಲಿ ಆರ್‌ಎಸ್‌ಎಸ್ ತೊಡಗಿಸಿಕೊಂಡಿರುವ ಕುರಿತು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್ ಅಧಿಕಾರಿಯೊಬ್ಬರು, ನೇರ ಪ್ರಚಾರಕ್ಕಿಂತ ಜಾಗೃತಿ ಮೂಡಿಸುವಲ್ಲಿ ತಮ್ಮ ಪಾತ್ರವನ್ನು ಒತ್ತಿ ಹೇಳಿದರು. ದೇಶದಾದ್ಯಂತ ನಾವು ದೆಹಲಿಯಲ್ಲಿಯೇ ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಗುಂಪು ಸಭೆಗಳನ್ನು ಒಳಗೊಂಡಂತೆ ಹಲವಾರು ಸಭೆಗಳನ್ನು ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಕೇಂದ್ರ ಸಚಿವ ಸಂಪುಟಕ್ಕೆ ಜೆ.ಪಿ. ನಡ್ಡಾ ಸೇರ್ಪಡೆಗೊಂಡ ಅನಂತರ ಹೊಸ ಬಿಜೆಪಿ ಅಧ್ಯಕ್ಷರನ್ನು ನೇಮಿಸಬೇಕಿದೆ. ಆರ್‌ಎಸ್‌ಎಸ್ ಸಮಾಲೋಚನಾ ಪ್ರಕ್ರಿಯೆಯಲ್ಲಿ ತಮ್ಮ ನಿರಂತರ ಪಾಲ್ಗೊಳ್ಳುವಿಕೆಯನ್ನು ಬಿಜೆಪಿ ದೃಢಪಡಿಸಿವೆ.

Continue Reading

ಕರ್ನಾಟಕ

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯ; ನೀಟ್ ಮರು ಪರೀಕ್ಷೆ, ತನಿಖೆಗೆ ಸಿಎಂ ಆಗ್ರಹ

NEET UG 2024: ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್‌ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

NEET UG 2024
Koo

ಮೈಸೂರು: ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ಹಾಗೂ ನಿರಂತರ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ (NEET UG 2024) ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್‌ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬರ ಪರಿಹಾರದ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಉತ್ತರಿಸಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ

ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್‌ಎಸ್‌ಎಸ್‌ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

ಅರುಂಧತಿ ರಾಯ್ ವಿರುದ್ಧ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

ದ್ವೇಷದ ರಾಜಕಾರಣ ಬಿಜೆಪಿ ಕೆಲಸ

ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ, ಪ್ರೀತಿಯ ರಾಜಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು, ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

ದ್ವೇಷದ ರಾಜಕಾರಣವನ್ನು ಯಾರ ಮೇಲೂ ಮಾಡಿಲ್ಲ

ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.

ಎಸ್‌ಸಿ- ಎಸ್‌ಟಿ ವಿದ್ಯಾರ್ಥಿ ವೇತನದ ಸೀಲಿಂಗ್ ಬಗ್ಗೆ ಚರ್ಚೆ

ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿ ವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು.

ಶೀಘ್ರದಲ್ಲೇ ಜಿ.ಪಂ, ತಾ.ಪಂ ಚುನಾವಣೆ

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದರು.

Continue Reading

Lok Sabha Election 2024

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಜೈಪುರದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಅವರು, ಬಿಜೆಪಿಯ ದುರಹಂಕಾರದಿಂದ ಅದಕ್ಕೆ 240 ಸ್ಥಾನಗಳು ಸಿಕ್ಕಿತು ಎಂದು (Indresh Kumar) ಹೇಳಿದ್ದು ಚರ್ಚೆಗೆ ಕಾರಣವಾಗಿತ್ತು. ಇದು ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಮತದ ಬಗ್ಗೆ ವದಂತಿಗಳನ್ನು ಹುಟ್ಟು ಹಾಕಿತ್ತು. ಇದೀಗ ಇಂದ್ರೇಶ್ ಅವರು ಹೊಸ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Indresh Kumar
Koo

ರಾಮನನ್ನು (ram) ವಿರೋಧಿಸಿದವರು ಅಧಿಕಾರದಿಂದ ಹೊರಗೆ ಉಳಿದಿದ್ದಾರೆ. ರಾಮ ಭಕ್ತಿ ಪ್ರತಿಜ್ಞೆ ಮಾಡಿದವರು ಅಧಿಕಾರದಲ್ಲಿದ್ದಾರೆ. ನರೇಂದ್ರ ಮೋದಿ (narendra modi) ನೇತೃತ್ವದಲ್ಲಿ ಮೂರನೇ ಬಾರಿಗೆ ಸರ್ಕಾರ ರಚನೆಯಾಗಿದೆ ಎಂದು ಆರ್ ಎಸ್ ಎಸ್ ನಾಯಕ (RSS Leader) ಇಂದ್ರೇಶ್ ಕುಮಾರ್ (Indresh Kumar) ಹೇಳಿದ್ದಾರೆ. ಬಿಜೆಪಿಯ ದುರಂಹಕಾರ (BJP’s Arrogance) ಕುರಿತು ಇವರು ಈ ಹಿಂದೆ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಒಳಗಾಗಿತ್ತು. ಇವರ ಹೇಳಿಕೆ ಮೋದಿ ವಿರುದ್ಧ ಮತ್ತು ಬಿಜೆಪಿ ವಿರುದ್ಧ ಎಂಬ ವ್ಯಾಖ್ಯಾನ ಕೇಳಿ ಬಂದಿತ್ತು. ಇದೀಗ ಇಂದ್ರೇಶ್‌ ಕುಮಾರ್‌ ಯುಟರ್ನ್‌ ಹೊಡೆದಿದ್ದಾರೆ. ಮೋದಿ ಮತ್ತು ಬಿಜೆಪಿ ಪರ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 240 ಸ್ಥಾನಗಳಿಗೆ ಸೀಮಿತವಾಗಿದೆ. ಬಿಜೆಪಿ ನಾಯಕರ “ಅಹಂಕಾರ”ದಿಂದ ಪಕ್ಷವು ಬಹುಮತದ ಅಂಕವನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದು ಸಂಚಲನ ಸೃಷ್ಟಿಸಿತ್ತು.

ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕುರಿತು ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮಾರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿ ಮಾಡಿದ ಸೊಕ್ಕಿನ ಪಕ್ಷವನ್ನು 241ಕ್ಕೆ ನಿಲ್ಲಿಸಲಾಯಿತು. ಆದರೆ ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಟೀಕಿಸಿದ್ದರು.


ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದ್ದರು ಹಾಗೂ ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಎತ್ತಿ ಹಿಡಿದು ವಿವಾದವನ್ನು ಹುಟ್ಟು ಹಾಕಿತ್ತು. ಇಂತಹ ಹೇಳಿಕೆಗಳು ಗೊಂದಲವನ್ನು ಬಿತ್ತುವ ಉದ್ದೇಶದಿಂದ ಮಾಡಲಾಗಿದೆ. ಇದು ಕೇವಲ ಊಹಾಪೋಹ ಎಂದು ಆರ್ ಎಸ್ ಎಸ್ ಸ್ಪಷ್ಟಪಡಿಸಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿತ್ತು. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿತ್ತು. ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿತ್ತು.

VISTARANEWS.COM


on

Actor Darshan continue as Agriculture Department ambassador What MB Patil said
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿ ಪಾಲಾಗಿರುವ ನಟ ದರ್ಶನ್  (Actor Darshan) ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದರು. ದರ್ಶನ್‌ 2021ರ ಫೆಬ್ರವರಿಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಕೃಷಿ ಇಲಾಖೆಯ ರಾಯಭಾರಿಯಾಗಿದ್ದರು. ಇದೀಗ ರೇಣುಕಾಚಾರ್ಯ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದೆ. ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ (Darshan) ಅವರು ಕೃಷಿ ಇಲಾಖೆಯ ರಾಯಭಾರಿ ಹುದ್ದೆಯಿಂದ ವಜಾ ಮಾಡುವುದು ಖಚಿತವಾಗಿದೆ. ದರ್ಶನ್‌ ಇನ್ನು ಕೃಷಿ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಎಂ.ಬಿ ಪಾಟೀಲ್ ಮಾತನಾಡಿ ʻʻದರ್ಶನ್‌ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ. ಈ ರೀತಿಯ ಘಟನೆ ಆದ ಬಳಿಕ ರಾಯಭಾರಿಯಾಗಿ ಮುಂದುವರಿಸಲು ಆಗುವುದಿಲ್ಲʼʼ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿತ್ತು. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿತ್ತು. ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿತ್ತು. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿದ್ದವು.

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದರು. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading
Advertisement
Kannappa Teaser Kannada Vishnu Manchu Mohan Babu
ಟಾಲಿವುಡ್6 mins ago

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

RSS V/S BJP
Lok Sabha Election 20249 mins ago

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Electric shock
ಚಿಕ್ಕಮಗಳೂರು18 mins ago

Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

NEET UG 2024
ಕರ್ನಾಟಕ29 mins ago

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯ; ನೀಟ್ ಮರು ಪರೀಕ್ಷೆ, ತನಿಖೆಗೆ ಸಿಎಂ ಆಗ್ರಹ

Paris Olympics 2024
ಕ್ರೀಡೆ39 mins ago

Paris Olympics 2024: ಒಲಿಂಪಿಕ್ಸ್ ಆಯೋಜನೆ; ಫ್ರಾನ್ಸ್​ ಅಧ್ಯಕ್ಷರಿಗೆ ಶುಭ ಕೋರಿದ ಪ್ರಧಾನಿ ಮೋದಿ

Maoists Killed
ದೇಶ41 mins ago

Maoists Killed: ಛತ್ತೀಸ್‌ಗಢದಲ್ಲಿ 8 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಓರ್ವ ಯೋಧ ಹುತಾತ್ಮ

Progress Review Meeting by Safai Karmachari National Commission Chairman M Venkatesan at hosapete
ವಿಜಯನಗರ44 mins ago

Vijayanagara News: ಪೌರ ಕಾರ್ಮಿಕರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಶಿಬಿರ ನಡೆಸಲು ಸೂಚನೆ

Viral News
Latest46 mins ago

Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

James Wan
ಸಿನಿಮಾ51 mins ago

James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

Bhandara Fair
ಬಾಗಲಕೋಟೆ54 mins ago

Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ19 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು21 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ21 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌