DV Sadananda Gowda : ಮತದಾರರಿಗೆ ಧನ್ಯವಾದ ಸಮರ್ಪಿಸಿದ ಡಿವಿಎಸ್‌; ಟಿಕೆಟ್‌ ಮಿಸ್‌ ಗ್ಯಾರಂಟಿ! - Vistara News

ರಾಜಕೀಯ

DV Sadananda Gowda : ಮತದಾರರಿಗೆ ಧನ್ಯವಾದ ಸಮರ್ಪಿಸಿದ ಡಿವಿಎಸ್‌; ಟಿಕೆಟ್‌ ಮಿಸ್‌ ಗ್ಯಾರಂಟಿ!

DV Sadanand Gowda : ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡರಿಗೆ ಬಿಜೆಪಿ ಟಿಕೆಟ್‌ ಮಿಸ್‌ ಆಗಿರುವುದು ಖಾತ್ರಿಯಾಗಿದೆ. ಇದು ಅವರು ಪೋಸ್ಟ್‌ ಮಾಡಿದ ಕೃತಜ್ಞತಾ ಹೇಳಿಕೆಯಲ್ಲಿ ಸ್ಪಷ್ಟಗೊಂಡಿದೆ.

VISTARANEWS.COM


on

DV-Sadananda-Gowda11
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರಿ ಚರ್ಚೆಗೆ ಕಾರಣವಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ (Bangalore North Constituency) ಸಂಸದ ಡಿ.ವಿ. ಸದಾನಂದ ಗೌಡ (DV Sadananda Gowda) ಅವರಿಗೆ ಬಿಜೆಪಿ ಟಿಕೆಟ್‌ ಮಿಸ್‌ (DVS may Miss ticket) ಆಗಿರುವುದು ಖಚಿತವಾಗಿದೆ. ಇದನ್ನು ಸ್ವತಃ ಡಿ.ವಿ. ಸದಾನಂದ ಗೌಡ ಅವರೇ ಪರೋಕ್ಷವಾಗಿ (Parliament Election) ಘೋಷಿಸಿಕೊಂಡಿದ್ದಾರೆ.

ಕಳೆದ ಎರಡು ಅವಧಿಯಲ್ಲಿ ಬೆಂಗಳೂರು ಉತ್ತರದ ಸಂಸದರಾಗಿರುವ ಡಿ.ವಿ. ಸದಾನಂದ ಗೌಡ ಅವರು ಕೆಲವು ತಿಂಗಳ ಹಿಂದೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಆದರೆ, ಕೆಲವೇ ವಾರದಲ್ಲಿ ಆ ಹೇಳಿಕೆಯನ್ನು ವಾಪಸ್‌ ಪಡೆದಿದ್ದರು. ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ತಮಗೇ ಟಿಕೆಟ್‌ ಬೇಕು ಎಂದು ಹಠ ಹಿಡಿದಿದ್ದರು.

ಈ ನಡುವೆ, ಬಿಜೆಪಿ ಹೈಕಮಾಂಡ್‌ ಬೆಂಗಳೂರು ಉತ್ತರದಲ್ಲಿ ಅಭ್ಯರ್ಥಿಯನ್ನು ಬದಲಾಯಿಸುವ ತೀರ್ಮಾನಕ್ಕೆ ಬಂದಿತ್ತು. ಅಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್‌ ಅಭಿಯಾನ ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಇಲ್ಲವೇ ಮಂಡ್ಯ ಕ್ಷೇತ್ರದಲ್ಲಿ ಅತಂತ್ರರಾಗಿರುವ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸುವ ಚರ್ಚೆ ನಡೆದಿತ್ತು.

ಆದರೆ, ಅಷ್ಟು ಹೊತ್ತಿಗೆ ಸದಾನಂದ ಗೌಡ ಕನಲಿ ಕೆಂಡಾಮಂಡಲರಾಗಿದ್ದರು. ಬೆಂಗಳೂರು ಉತ್ತರದಲ್ಲಿ ನನ್ನ ಹೆಸರನ್ನೇ ಸರ್ವೇ ಮೂಲಕ ಅಂತಿಮಗೊಳಿಸಲಾಗಿತ್ತು. ಯಾವ ಕಾರಣಕ್ಕೆ ನನಗೆ ಟಿಕೆಟ್‌ ನಿರಾಕರಿಸುತ್ತಾರೆ ಎಂದೆಲ್ಲ ಅವರು ಆಕ್ರೋಶಿತರಾಗಿ ಮಾತನಾಡಿದ್ದರು. ಇದರ ಹಿಂದೆ ಕೆಲವೊಂದು ಶಕ್ತಿಗಳ ಕೈವಾಡದ ಬಗ್ಗೆ ಮಾತನಾಡಿದ್ದರು. ಒಂದು ಹಂತದಲ್ಲಿ ಸದಾನಂದ ಗೌಡ ಅವರು ಬಂಡಾಯವಾಗಿ ಕಣಕ್ಕಿಳಿಯಬಹುದು ಎಂಬ ಸುದ್ದಿ ಹರಡಿತ್ತು. ಕಾಂಗ್ರೆಸ್‌ ನಾಯಕರು ಡಿ.ವಿ.ಎಸ್‌ ಅವರನ್ನು ಸಂಪರ್ಕಿಸಿದ್ದರು ಎಂದೂ ಹೇಳಲಾಗುತ್ತಿದೆ.

ಇದೆಲ್ಲದರ ನಡುವೆ ಡಿ.ವಿ. ಸದಾನಂದ ಗೌಡ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ ಮತ್ತು ಫೇಸ್‌ಬುಕ್‌ನಲ್ಲಿ ಒಂದು ಪತ್ರ ಬರೆಯುವ ಮೂಲಕ ತನಗೆ ಟಿಕೆಟ್‌ ಮಿಸ್‌ ಆಗಿರುವುದನ್ನು ಸೂಚ್ಯವಾಗಿ ಹೇಳಿದ್ದಾರೆ. ಜತೆಗೆ ಯಾವುದೇ ಬಂಡಾಯ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ : DV Sadananda Gowda: ನಿವೃತ್ತಿ ಘೋಷಣೆ ಬೆನ್ನಲ್ಲೇ ವರಿಷ್ಠರ ವಿರುದ್ಧ ಡಿವಿಎಸ್‌ ಗರಂ; ರೆಬೆಲ್‌ ಆಗ್ತಾರಾ?

ಡಿ.ವಿ.ಎಸ್‌ ಅವರು ಬರೆದಿರುವ ಪತ್ರದಲ್ಲಿ ಏನಿದೆ?

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .

ಇಂತಿ ನಿಮ್ಮವನೇ ಆದ ಡಿ.ವಿ. ಸದಾನಂದ ಗೌಡ

ಈ ಪತ್ರ ಡಿ.ವಿ. ಸದಾನಂದ ಗೌಡ ಅವರು ಹೈಕಮಾಂಡ್‌ ಸೂಚನೆಗೆ ಶರಣಾಗತರಾಗಿರುವುದನ್ನು ತೋರಿಸುತ್ತಿದೆ. ಇದರ ನಡುವೆ ಬಿಜೆಪಿ ಹಿರಿಯ ನಾಯಕ ಅಮಿತ್‌ ಶಾ ಅವರು ಡಿ.ವಿ. ಸದಾನಂದ ಗೌಡ ಅವರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾವೇರಿ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ ನಡೆಸಿದರು.

VISTARANEWS.COM


on

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
Koo

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ (Lok Sabha Election 2024) ನಡೆಸಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಜತೆ ಶಾಸಕ ಶ್ರೀನಿವಾಸ ಮಾನೆ, ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಗದಗನಲ್ಲಿ ಯುವ ಚೈತನ್ಯ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭಾರೀ‌ ಅನ್ಯಾಯವಾಗುತ್ತಿದೆ, ರೈತರಿಗೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬರ ಪರಿಹಾರ ವಿಚಾರದಲ್ಲಿ‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವಿದ್ದರೆ ಬಿಡುಗಡೆ ಮಾಡುತ್ತಿದ್ದೆವು ಎಂದು ಮಾಧ್ಯಮ ಮೂಲಕ ಬೆಂಗಳೂರು, ಹಾವೇರಿಯಲ್ಲಿ ಹೇಳಿದರೇ ವಿನಃ ಒಂದು ಬಾರಿಯು ಅಮಿತ್ ಶಾ ಹಾಗೂ‌ ಮೋದಿ ಅವರನ್ನು ಭೇಟಿಯಾಗಲಿಲ್ಲ ಎಂದು ಆರೋಪಿಸಿದ ಅವರು, ಆದರೆ ಕರ್ನಾಟಕಕ್ಕೆ ನ್ಯಾಯ ಸಿಗಲು ಅನಿವಾರ್ಯವಾಗಿ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾಯಿತು ಎಂದು ತಿಳಿಸಿದರು.

ದೇಶಾದ್ಯಂತ ಬಿಜೆಪಿ ವಿರೋಧಿ ಅಲೆಯಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಜಯವಾಗಲಿದೆ ಎಂದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case: ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬಗ್ಗೆ ನೆನ್ನೆ ರಾತ್ರಿಯೇ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen drive case

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Continue Reading
Advertisement
MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
ಹಾವೇರಿ10 mins ago

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Toyota Kirloskar Motor launched the Tgloss
ವಾಣಿಜ್ಯ11 mins ago

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Lok Sabha Election-2024
Lok Sabha Election 202414 mins ago

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Arvind Kejriwal
ದೇಶ17 mins ago

ಸಿಎಂ ಸ್ಥಾನ ಔಪಚಾರಿಕ ಅಲ್ಲ, 24 ಗಂಟೆ ಸಿಗಬೇಕು; ರಾಜೀನಾಮೆ ನೀಡದ ಕೇಜ್ರಿವಾಲ್‌ಗೆ ಕೋರ್ಟ್‌ ಚಾಟಿ

LSG vs MI
ಕ್ರೀಡೆ18 mins ago

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

Tumkur News 10 huts burnt down in Chimpuganahalli Minister Dr G Parameshwar visited the place
ತುಮಕೂರು20 mins ago

Tumkur News: ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲು ಭಸ್ಮ; ಸ್ಥಳಕ್ಕೆ ಪರಮೇಶ್ವರ್‌ ಭೇಟಿ

PM Narendra Modi met four special people in Sirsi visit
Lok Sabha Election 202420 mins ago

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Tears Of Joy
ಆರೋಗ್ಯ32 mins ago

Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

Murugha Seer
ಕರ್ನಾಟಕ42 mins ago

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Season Hairstyle
ಫ್ಯಾಷನ್49 mins ago

Season Hairstyle: ವೆಸ್ಟರ್ನ್‌ ಲುಕ್‌ಗೆ ಎಂಟ್ರಿ ಕೊಟ್ಟ ಟ್ರೆಡಿಷನಲ್‌ ಲುಕ್‌ನ ಎರಡು ಜಡೆಯ 3 ರೂಪ ಹೇಗಿದೆ ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20246 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20247 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌