H D Deve Gowda: ಎಚ್.ಡಿ.ದೇವೇಗೌಡರಿಗೆ 'ಮಣ್ಣಿನ ಮಗ' ಕೃತಿಯ ಪ್ರಥಮ ಪ್ರತಿ; ಫೆ.29ರಂದು ಬಿಡುಗಡೆ - Vistara News

ರಾಜಕೀಯ

H D Deve Gowda: ಎಚ್.ಡಿ.ದೇವೇಗೌಡರಿಗೆ ‘ಮಣ್ಣಿನ ಮಗ’ ಕೃತಿಯ ಪ್ರಥಮ ಪ್ರತಿ; ಫೆ.29ರಂದು ಬಿಡುಗಡೆ

H D Deve Gowda: ಸ್ನೇಹ ಬುಕ್‌ ಹೌಸ್‌ನಿಂದ ಪ್ರಕಟಿಸಿರುವ, ಕಸಾಪ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಅವರು ರಚಿಸಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತಾದ ʼಮಣ್ಣಿನ ಮಗʼ ಕೃತಿಯು ಫೆ. 29ರಂದು ಬಿಡುಗಡೆಯಾಗಲಿದೆ.

VISTARANEWS.COM


on

HD Devegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ನೇಹ ಬುಕ್‌ ಹೌಸ್‌ನಿಂದ ಪ್ರಕಟಿಸಿರುವ, ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಅವರು ರಚಿಸಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತಾದ ʼಮಣ್ಣಿನ ಮಗʼ ಕೃತಿಯ ಪ್ರಥಮ ಪ್ರತಿಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಎಚ್‌.ಡಿ. ದೇವೇಗೌಡರಿಗೆ (H D Deve Gowda) ನೀಡಿದರು.

ಪುಸ್ತಕ ಸ್ವೀಕರಿಸಿ ಮಾತನಾಡಿದ ಎಚ್‌.ಡಿ. ದೇವೇಗೌಡರು, ನಮ್ಮ ಸಾಹಿತ್ಯವು ದೇಶದ ಸಾಹಿತ್ಯಕ್ಕೆ ಸರಿಸಾಟಿಯಾಗಿ ಬೆಳೆಯುತ್ತಾ ಬಂದಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಯುವ ಸಮುದಾಯವು ಓದುವ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು, ಜತೆಜತೆಗೆ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸಿಕೊಂಡು ಜ್ಞಾನವರ್ಧನೆ ಮಾಡಿಕೊಳ್ಳುವತ್ತ ಸಾಗಬೇಕು. ಸಮಾಜದ ಅಭಿವೃದ್ಧಿಗೆ ಈ ಮೂಲಕವಾಗಿ ಯುವ ಸಮುದಾಯ ಕಾರಣವಾಗಬೇಕು ಸಲಹೆ ನೀಡಿದರು.

ಈ ಕೃತಿ ರಚನೆಗೆ ಅನೇಕ ಮಂದಿಯನ್ನು ಭೇಟಿಮಾಡಿ ಲೇಖನ, ವಿಷಯಸಂಗ್ರಹಣೆಯನ್ನು ಮಾಡಿರುವ ರಾಮಲಿಂಗಶೆಟ್ಟರ ಪರಿಶ್ರಮವನ್ನು ಶ್ಲಾಘಿಸಿದರಲ್ಲದೇ, ಫೆಬ್ರವರಿ 29ರಂದು ನಡೆಯಲಿರುವ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಮಾತನಾಡಿ, ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಜತೆಜತೆಗೆ ಈ ಕೃತಿರಚನೆ ಮಾಡುವುದಕ್ಕೆ ಶ್ರಮವಹಿಸಿದ ರಾಮಲಿಂಗಶೆಟ್ಟರ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಕೃತಿಕಾರ ರಾಮಲಿಂಗ ಶೆಟ್ಟರು ಮಾತನಾಡಿ, ದೇವೇಗೌಡರ ಕುರಿತಾದ ಹತ್ತು ಹಲವು ಮಾಹಿತಿಗಳು, ಅವರು ಮಾಡಿರುವ ಜನಪರ ಕೆಲಸಗಳು, ನೀರಾವರಿ ಯೋಜನೆಗಳ ಮಾಹಿತಿ ಸಂಗ್ರಹಣೆಗೆ ಕಳೆದ ನಾಲ್ಕು ವರುಷಗಳಿಂದ ಪಟ್ಟ ಶ್ರಮ ಮತ್ತು ಅದರ ಹಿಂದಿನ ಅನುಭವಗಳನ್ನು ಹಂಚಿಕೊಂಡರು.

ಇದನ್ನೂ ಓದಿ | National Horticulture Fair 2024: ಹೆಸರಘಟ್ಟದಲ್ಲಿ ಮಾ. 5 ರಿಂದ 7 ರವರೆಗೆ ರಾಷ್ಟ್ರೀಯ ತೋಟಗಾರಿಕೆ ಮೇಳ

ಈ ಸಂದರ್ಭದಲ್ಲಿ ಸ್ನೇಹ ಬುಕ್ ಹೌಸ್ ಮಾಲೀಕ, ಪ್ರಕಾಶಕ ಕೆ.ಬಿ.ಪರಶಿವಪ್ಪ ಅವರು, ತಮ್ಮ ಪ್ರಕಾಶನದಿಂದ “ಮಣ್ಣಿನ ಮಗ” ಕೃತಿ ಪ್ರಕಟವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಇದಕ್ಕೆ ಕಾರಣಕರ್ತರಾದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸಿದರು.

ಪುಸ್ತಕದ ಪ್ರತಿಗಳನ್ನು ಮುಂಗಡ ಕಾಯ್ದಿರಿಸಲು ಸಾಹಿತ್ಯಾಸಕ್ತರು ‌ ಸ್ನೇಹ ಬುಕ್ ಹೌಸ್ 9845031335 ಇವರನ್ನು ಸಂಪರ್ಕಿಸಬಹುದಾಗಿದೆ.

ಫೆ.29ರಂದು ಎಚ್‌.ಡಿ.ದೇವೇಗೌಡರ ಕುರಿತ ʼಮಣ್ಣಿನ ಮಗʼ ಕೃತಿ ಲೋಕಾರ್ಪಣೆ

HD Deve Gowda

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುರಿತು ನೇ.ಭ.ರಾಮಲಿಂಗ ಶೆಟ್ಟಿ ಅವರು ಬರೆದಿರುವ ಹಾಗೂ ಸ್ನೇಹ ಬುಕ್‌ ಹೌಸ್‌ ಪ್ರಕಟಿಸಿರುವ ʼಮಣ್ಣಿನ ಮಗʼ ಕೃತಿಯ (Book Release) ಲೋಕಾರ್ಪಣೆ ಕಾರ್ಯಕ್ರಮವನ್ನು ಫೆ.29ರಂದು ಸಂಜೆ 5 ಗಂಟೆಗೆ ನಗರದ ಚಾಮರಾಜಪೇಟೆಯ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ನಾಡೋಜ ಡಾ.ಮಹೇಶ ಜೋಶಿ ಅವರು ʼಮಣ್ಣಿನ ಮಗʼ ಕೃತಿ ಬಿಡುಗಡೆ ಮಾಡಲಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ನಾಡೋಜ ಹಂ.ಪ.ನಾಗರಾಜಯ್ಯ ಅವರು ಕೃತಿ ಬಗ್ಗೆ ಶುಭನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಡಾ.ಸಿ.ಎನ್‌.ಮಂಜುನಾಥ್‌, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಭಾಗವಹಿಸಲಿದ್ದು, ಕೃತಿಯ ಲೇಖಕ ನೇ.ಭ.ರಾಮಲಿಂಗಾರೆಡ್ಡಿ, ಸ್ನೇಹ ಬುಕ್‌ ಹೌಸ್‌ ಪ್ರಕಾಶಕ ಕೆ.ಬಿ.ಪರಶಿವಪ್ಪ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಶತಮಾನದಾಚೆಗೆ ವಿಸ್ತರಿಸಿದ ಪ್ರತಿಭೆ ಪ್ರೊ || ಎಲ್.ಎಸ್. ಶೇಷಗಿರಿರಾವ್

ʼಮಣ್ಣಿನ ಮಗʼ ಎಚ್.ಡಿ. ದೇವೇಗೌಡರು: ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಪುಸ್ತಕ ಬಿಡುಗಡೆಯಾಗುತ್ತಿರುವುದಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಂತಸ ವ್ಯಕ್ತಪಡಿಸಿದ್ದು, ʼಮಣ್ಣಿನ ಮಗʼ ಕೃತಿಗಾಗಿ ಶ್ರೀಗಳು ಬರೆದ ಶುಭನುಡಿ ಲೇಖನದ ಆಯ್ದ ಭಾಗ ಇಲ್ಲಿ ನೀಡಲಾಗಿದೆ.

ಎಚ್.ಡಿ. ದೇವೇಗೌಡರು ನಾಡಷ್ಟೇ ಅಲ್ಲ, ದೇಶ ಕಂಡ ಅಪರೂಪದ ರಾಜಕಾರಣಿ. ಸಾಮಾಜಿಕ ಬದ್ಧತೆ ಹೊಂದಿರುವ ರಾಜಕೀಯ ಮುತ್ಸದ್ದಿ. ರಾಜ್ಯದ ಜನಪ್ರಿಯ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನ ಮಂತ್ರಿಯಾಗಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವುದು ಕರ್ನಾಟಕದ ಹೆಮ್ಮೆ. ದೇಶದ ಪ್ರಧಾನ ಮಂತ್ರಿಯಾಗಿ ಸಮರ್ಥವಾಗಿ ಹಾಗೂ ದಕ್ಷತೆಯಿಂದ ಆಡಳಿತ ನಡೆಸಿ ಹತ್ತಾರು ವರ್ಷಗಳಲ್ಲಿ ಸಾಧಿಸಬೇಕಾದ್ದನ್ನು ಕೇವಲ ಹತ್ತು ತಿಂಗಳಲ್ಲಿ ಸಾಧಿಸಿದ ಖ್ಯಾತಿ ಇವರದು. ಜಾತಿ ಮತಗಳ ಎಲ್ಲೆಯನ್ನು ಮೀರಿ ಸರ್ವಜನರ ಕಲ್ಯಾಣಕ್ಕೆ ದುಡಿದವರು. ನಿಸ್ಪೃಹತೆ ಹಾಗೂ ಪ್ರಾಮಾಣಿಕತೆಯಿಂದ ತಾವು ನಿರ್ವಹಿಸಿದ ಹುದ್ದೆಗೆ ಮೆರುಗನ್ನು ತಂದವರು. ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಚಿವರಾಗಿ, ಮುಖ್ಯಮಂತ್ರಿಗಳಾಗಿ, ಪ್ರಧಾನಮಂತ್ರಿಗಳಾಗಿ ಸಮಷ್ಟಿಯ ಹಿತಕ್ಕಾಗಿ ಅವರು ಸಾಧಿಸಿದ್ದು ಅಪಾರ, ವಿರೋಧಿಗಳು ಬೆರಗಾಗುವಂತೆ ಆಡಳಿತ ನಡೆಸಿ ದಕ್ಷ ಆಡಳಿತಗಾರ ಎಂಬ ಹಿರಿಮೆಗೆ ಪಾತ್ರರಾದವರು.

ಗೌಡರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ದೇವತೆಗಳಲ್ಲಿ ಅಪಾರ ಶ್ರದ್ಧೆ ಹಾಗೂ ಭಕ್ತಿ. ಇಂದಿಗೂ ನಮ್ಮ ಶ್ರೀಮಠದ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಮಠವು ಕೈಗೊಳ್ಳುವ ಲೋಕಸೇವಾ ಕೈಂಕರ್ಯಗಳಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಜೊತೆಗೆ ಶ್ರೀಮಠವು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತಿರುವುದು ನಮಗೆ ಬಹಳ ಸಂತಸವನ್ನುಂಟು ಮಾಡಿದೆ.

ಗೌಡರು ಸರಳತೆ, ಸೌಜನ್ಯ, ಕ್ರಿಯಾಶೀಲತೆಗೆ ಹಾಗೂ ದೃಢ ನಿಲುವಿಗೆ ಖ್ಯಾತನಾಮರು. ಜನಸಾಮಾನ್ಯರ ಬದುಕುಬವಣೆಗಳನ್ನು ಸ್ವತಃ ಅನುಭವಿಸಿ ಜೀವನಾನುಭವ ಹೊಂದಿರುವ ಗೌಡರು ಜನಸಾಮಾನ್ಯರ ಕ್ಷೇಮಕ್ಕಾಗಿಯೇ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಜನನಾಯಕರೆನಿಸಿಕೊಂಡರು. ನಾಡು, ನುಡಿ, ನೆಲ, ಜಲ ರಕ್ಷಣೆಯ ವಿಷಯದಲ್ಲಿ ಗೌಡರದು ನಿಲ್ಲದ ಪಯಣ. ಮೊದಲ ಬಾರಿಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದ ಕೀರ್ತಿ ದೇವೇಗೌಡರದು.

ಇದನ್ನೂ ಓದಿ | Raja Marga Column : ಮರೆಯಾದ ಗೋಲ್ಡನ್ ವಾಯ್ಸ್ : ಬಿನಾಕಾ ಗೀತಮಾಲಾದ ಅಮೀನ್ ಸಯಾನಿ

ದೇವೇಗೌಡರನ್ನು ಕುರಿತು ಈಗಾಗಲೇ ಹಲವು ಕೃತಿಗಳು, ಅಭಿನಂದನಾ ಗ್ರಂಥಗಳು ಪ್ರಕಟನೆಗೊಂಡಿವೆ. ಪ್ರಸ್ತುತ ವಿವಿಧ ಸಂಘಸಂಸ್ಥೆಗಳಲ್ಲಿ ಹಾಗೂ ಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಲೇಖಕರಾದ ನೇ.ಭ. ರಾಮಲಿಂಗಶೆಟ್ಟಿ ಅವರು ಎಚ್.ಡಿ. ದೇವೇಗೌಡರ ಜೀವನ ಹಾಗೂ ಸಾಧನೆಯನ್ನು ದಾಖಲಿಸುವ ನಿಟ್ಟಿನಲ್ಲಿ ‘ಮಣ್ಣಿನ ಮಗ’ ಎಂಬ ಕೃತಿಯನ್ನು ರಚಿಸಿರುವುದು ಸ್ತುತ್ಯಾರ್ಹ. ಗೌಡರ ಬದುಕಿನ ಸಾರವನ್ನು ಹಾಗೂ ಅವರ ಸಾಧನೆಗಳನ್ನು ತನ್ನೊಡಲಿನೊಳಗೆ ಇರಿಸಿಕೊಂಡಿರುವ ಈ ಕೃತಿಯು ಮುಂದಿನ ತಲೆಮಾರಿನ ಹೃನ್ಮನದಲ್ಲಿ ಗೌಡರ ಜೀವನಾದರ್ಶವನ್ನು ಬಿತ್ತಲು ಸಹಕಾರಿಯಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವನ್ಣಗೆ ನೋಟಿಸ್‌ ನೀಡಿದ್ದಾರೆ.

VISTARANEWS.COM


on

Hassan Pen Drive case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading

ಪ್ರಮುಖ ಸುದ್ದಿ

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

ಕ್ಲಿಪ್​ನಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ, “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ನೀಡುತ್ತಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಓಡಾಡಿದೆ. “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

Fact check
Koo

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಳುಗಳ ಭರಾಟೆ ಜೋರಾಗಿದೆ. ಡೀಪ್​ಫೇಕ್​ ಸೇರಿದಂತೆ ಎಡಿಟಿಂಗ್​ ತಾಂತ್ರಿಕತೆ ಮಿತಿಮೀರಿ ಅಭಿವೃದ್ಧಿಯಾಗಿರುವ ಕಾರಣ ಸತ್ಯ ಯಾವುದು ಸುಳ್ಳು ಯಾವುದು ಎಂದು ಒಂದೇ ನೋಟಕ್ಕೆ ತಿಳಿದುಕೊಳ್ಳುವುದು ಕೂಡ ಕಷ್ಟವಾಗಿದೆ. ಇದೇ ಮಾದರಿಯಲ್ಲಿ ರೀತಿ ಪ್ರಧಾನಿ ಮೋದಿ (Narendra Modi) ಕರ್ನಾಟಕದ ಜನತೆಯನ್ನು ಪಾಪಿಗಳು ಎಂದು ಕರೆದಿದ್ದಾರೆ ಎಂಬ ವಿಡಿಯೊವೊಂದು ವೈರಲ್​ ಆಗಿದೆ. ಪ್ರಧಾನಿ ಆ ರೀತಿ ಹೇಳಿದ್ದಾರೆ ಎಂಬುದಾಗಿ ಕೇರಳ ಕಾಂಗ್ರೆಸ್​ ಸೇರಿದಂತೆ ಪ್ರತಿಪಕ್ಷಗಳ ಹಲವರ ಎಕ್ಸ್​ ಹ್ಯಾಂಡಲ್​ನಲ್ಲಿ ವಿಡಿಯೊ ಶೇರ್​ ಆಗಿದೆ. ಹಾಗಾದರೆ ಮೋದಿ ಕನ್ನಡದ ಮಂದಿಯನ್ನು ಪಾಪಿಗಳು ಅಂಥ ಹೇಳಿದ್ದು ಹೌದಾ? ಕಾಂಗ್ರೆಸ್​ ಪೋಸ್ಟ್​ ಮಾಡಿದ ವಿಡಿಯೊದ ಸಾಚಾತನವೇನು (Fact Check) ಎಂಬುದನ್ನು ಗಮನಿಸೋಣ.

2024 ರ ಲೋಕಸಭಾ ಚುನಾವಣೆಯ (Lok Sabha Election) ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29, 2024 ರಂದು ದಾವಣಗೆರೆ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ್ದರು. ಈ ಸಭೆಗಳಲ್ಲಿ ಅವರು ಮಾಡಿದ ಭಾಷಣದ ಕ್ಲಿಪ್​ಗಳೇ ಚರ್ಚೆಯ ವಿಷಯವಾಗಿರುವುದು. ಹಿಂದಿನ ಚುನಾವಣೆಯಲ್ಲಿ ಮತದಾನ ಮಾಡಿದ ಕರ್ನಾಟಕದ ಜನ ಪಾಪಿಗಳು. ಅವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ ಎನ್ನಲಾದ ವಿಡಿಯೊ ವೈರಲ್​ ಆಗಿದೆ.

ಪ್ರತ್ಯೇಕ ಮಾಡಿ ಹಂಚಲಾದ ವಿಡಿಯೊದಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ; “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ಕೊಡುತ್ತಾರೆ. ಇದನ್ನೇ ಎತ್ತಿಕೊಂಡು “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಿ ಪ್ರತಿಪಕ್ಷಗಳು ಪೋಸ್ಟ್​ಹಾಕಿಕೊಂಡಿವೆ.

ಕೇರಳ ಕಾಂಗ್ರೆಸ್​ನ ಅಧಿಕೃತ ಎಕ್ಸ್ ಖಾತೆಯಲ್ಲೂ ಇದನ್ನು ಪೋಸ್ಟ್ ಮಾಡಲಾಗಿದೆ “ಮೋದಿ ಸರ್ವಸ್ಸ ಕಳೆದುಕೊಂಡಿದ್ದಾರೆ. ಅವರು ತಮ್ಮ ಸ್ವಯಂ ಗೋಲ್ ಹೊಡೆಯುತ್ತಿದ್ದಾರೆ. ಅವರು ಈಗ ಕರ್ನಾಟಕದ ಜನರನ್ನು ಪಾಪಿಗಳು ಎಂದು ಕರೆದಿದ್ದಾರೆ. ಇಂತಹ ಅವಮಾನಗಳಿಗೆ ಕರ್ನಾಟಕದ ಜನರು ಕಪಾಳಮೋಕ್ಷ ಮಾಡದೇ ಬಿಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಿರ್ನಾಮವಾಗಲಿದೆ’ ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಸಂಯೋಜಕ ಗೌರವ್ ಪಾಂಧಿ ಅವರು ಈ ವೀಡಿಯೊಗೆ “ಕರ್ನಾಟಕದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ ಮಾತ್ರಕ್ಕೆ, ಅವರು ಪಾಪಿಗಳು ಎಂದು ಪ್ರಧಾನಿ ಮೋದಿ ಭಾವಿಸುತ್ತಾರೆ.” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಹತಾಶೆಯೇ? ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎಂಬ ಭಯವೇ? ಎಂದು ಟ್ವೀಟ್​ ಮಾಡಿದ್ದಾರೆ.

ವಾಸ್ತವಾಂಶಗಳು ಯಾವುವು?

ಪ್ರಧಾನಿ ಮೋದಿ ಅವರ ಅಧಿಕೃತ ಯೂಟ್ಯೂಬ್​ ಪೇಜ್​ನಲ್ಲಿ ಭಾಷಣ ನೇರ ಪ್ರಸಾರ ವಿಡಿಯೊ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಸುಮಾರು 29:00 ರಿಂದ 31:04 ನಿಮಿಷ ತನಕ ಪಿಎಂ ಮೋದಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಾರೆ. ಬಿಜೆಪಿ ಆಡಳಿತದಲ್ಲಿ ಭಾರತೀಯ ರೈತರು ಅನುಭವಿಸಿದ ವಿವಿಧ ಪ್ರಯೋಜನಗಳ ಬಗ್ಗೆ ಮಾತನಾಡಿದ ಮೋದಿ “ಕಾಂಗ್ರೆಸ್ ಇಲ್ಲಿನ ರೈತರಿಗೆ ಮಾಡಿದ ದ್ರೋಹವು ದೊಡ್ಡ ಪಾಪ” ಎಂದು ಹೇಳುತ್ತಾರೆ. ‘ಇಲ್ಲಿ’ ಎಂಬುದು ಕರ್ನಾಟಕ ಎಂಬರ್ಥವಾಗಿದೆ.

“ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಖಾತೆಗಳಿಗೆ 10,000 ರೂ.ಗಳನ್ನು ಜಮಾ ಮಾಡಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ₹ 4,000 ನೀಡುವುದನ್ನು ನಿಲ್ಲಿಸಿತು. ಅವರು ತಮ್ಮ ಮತವನ್ನು ಪಡೆಯುವಲ್ಲಿ ಯಶಸ್ವಿಯಾದ ನಂತರ, ಅವರು ರೈತರು ಮತ್ತು ಅವರ ಕೆಲಸದ ಬಗ್ಗೆ ಕಾಳಜಿ ವಹಿಸುವುದನ್ನು ನಿಲ್ಲಿಸಿದರು. ಉಳಿದ 6,000 ರೂ.ಗಳನ್ನು ಮೋದಿ ಸರ್ಕಾರ ಕಳುಹಿಸುತ್ತದೆ. ಅದನ್ನು ರೈತರು ಪಡೆಯುತ್ತಾರೆ. ಅವರು ಇಲ್ಲಿ ನೀಡಿದ ಹಣದ ಒಂದು ಭಾಗವನ್ನು ಕಡಿತಗೊಳಿಸಿದರು.” ಎಂದು ಟೀಕಿಸಿದ್ದಾರೆ.

ಮುಂದುವರಿದ ಅವರು “ಈ ಚುನಾವಣೆಯಲ್ಲಿ ಅವರು ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರು ಶಿಕ್ಷಿಸಬೇಕು. ದೆಹಲಿಯಿಂದ ಕಳುಹಿಸಿದ ಎಲ್ಲವೂ ಮುಂದಿನ ವರ್ಷಗಳಲ್ಲಿ ಮುಂದುವರಿಯುತ್ತದೆ ಎಂಬುದು ಮೋದಿಯ ಭರವಸೆ ” ಎಂದು ಅವರು ಹೇಳಿದ್ದಾರೆ. 31:00ರ ನಿಮಿಷದ ನಂತರ ನೋಡಿದಾಗ ಇದು ಕರ್ನಾಟಕ ಸರ್ಕಾರದ ವಿರುದ್ಧದ ಟೀಕೆ ಎಂಬುದು ಖಾತರಿಯಾಗುತ್ತದೆ.

ಪ್ರಧಾನಿ ಮೋದಿಯವರ ವೆಬೆ್​ಸೈಟ್​ನಲ್ಲಿ ಲಭ್ಯವಿರುವ ಭಾಷಣದ ಟ್ರಾನ್​ಸ್ಕ್ರಿಪ್ಟ್​​ ಈ ಮಾಹಿತಿಯನ್ನು ದೃಢಪಡಿಸುತ್ತದೆ. “ಈ ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ಈ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು” ಎಂದು ಅಲ್ಲಿ ಬರೆಯಲಾಗಿದೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಈ ಕ್ಲಿಪ್ ಅನ್ನು ಆಯ್ದು ಎಡಿಟ್ ಮಾಡಲಾಗಿದೆ ಮತ್ತು ಹಿಂದೆ ಮುಂದೆ ಏನೂ ಇಲ್ಲದೆ ಪ್ರಸಾರ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತಿದೆ. ಪಿಎಂ ಮೋದಿ ನಿಖರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ಹೇಳಿದ್ದರೂ ಕರ್ನಾಟಕದ ಜನರು ಎಂದು ತಪ್ಪುದಾರಿಗೆಳೆಯುವ ವ್ಯಾಖ್ಯಾನ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.

Continue Reading

ಕರ್ನಾಟಕ

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Sharavathi Project: ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆ ಟೆಂಡರ್ ಪ್ರಕ್ರಿಯೆ ರದ್ದು ಕೋರಿ ಎಲ್ & ಟಿ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇತ್ತೀಚೆಗೆ ಹೈಕೋರ್ಟ್‌ ವಜಾ ಮಾಡಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಂಪನಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ವಿಚಾರಣೆ ಬಳಿಕ ಅಲ್ಲಿಯೂ ಅರ್ಜಿ ವಜಾಗೊಂಡಿದೆ.

VISTARANEWS.COM


on

Sharavathi Project
Koo

ನವದೆಹಲಿ/ಬೆಂಗಳೂರು: ಕರ್ನಾಟಕದ ಪ್ರತಿಷ್ಠಿತ ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್‌ (Sharavathi Project) ಟೆಂಡರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಎಲ್ & ಟಿ (L&T) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಸುದೀರ್ಘ ವಿಚಾರಣೆಯ ನಂತರ ಎಸ್‌ಎಲ್‌ಪಿಯನ್ನು ವಜಾಗೊಳಿಸಿತು.

ರಾಜ್ಯವು ಸಾಕಷ್ಟು ಸಮಯವನ್ನು ನೀಡಿದೆ ಮತ್ತು ಇನ್ನೂ ಎಲ್ ಆ್ಯಂಡ್‌ ಟಿ ಬಿಡ್ ಸಲ್ಲಿಸಲು ಸಾಧ್ಯವಾಗಲಿಲ್ಲ. ಎಲ್ & ಟಿ ಭಾಗವಹಿಸಲು ಅರ್ಹತೆ ಹೊಂದಿಲ್ಲ. ಎಲೆಕ್ಟ್ರೋ-ಮೆಕ್ಯಾನಿಕಲ್ ಮತ್ತು ಹೈಡ್ರೋ-ಮೆಕ್ಯಾನಿಕಲ್ ಕೆಲಸಗಳಲ್ಲಿ ಅನುಭವದ ಕೊರತೆಯಿದೆ ಎಂದು ಪ್ರಕರಣದಲ್ಲಿ ವಿವರಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಆದೇಶವನ್ನು ಎಲ್ & ಟಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಉಚ್ಚ ನ್ಯಾಯಾಲಯವು ಎಲ್ & ಟಿ ಅರ್ಜಿಯಲ್ಲಿ ವಾಣಿಜ್ಯ ಹಿತಾಸಕ್ತಿ ಹೊಂದಿದೆ ಎಂದು ತಿಳಿಸಿ ಸಲ್ಲಿಕೆಯಾದ ಮೇಲ್ಮನವಿಯನ್ನು ವಜಾಗೊಳಿಸಿತ್ತು.

ಪ್ರಸ್ತುತ ಕೆಪಿಸಿಎಲ್ ಕೈಗೊಂಡಿರುವ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ (Sharavathi Pumped Storage power Project) ಟೆಂಡರ್‌ನ್ನು ಎಂಇಐಎಲ್ ಕಡಿಮೆ ದರ ನಮೂದಿಸುವ ಮೂಲಕ ತನ್ನದಾಗಿಸಿಕೊಂಡಿದೆ.

8 ಸಾವಿರ ಕೋಟಿ ರೂ. ಯೋಜನೆ ಟೆಂಡರ್‌ ಊರ್ಜಿತ

ರಾಜ್ಯದ ವಿದ್ಯುತ್ ಸಮಸ್ಯೆ ನೀಗಲು ಸರ್ಕಾರವು 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲು ಮುಂದಾಗಿರುವ ‘ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಗೆ ಸಂಬಂಧಿಸಿರುವ ಟೆಂಡರ್ ಪ್ರಕ್ರಿಯೆಯನ್ನು ಏ.25ರಂದು ಹೈಕೋರ್ಟ್ ಊರ್ಜಿತಗೊಳಿಸಿತ್ತು.

ಯೋಜನೆಗೆ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಎಲ್ & ಟಿ ಕಂಪನಿಯು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಅರ್ಜಿ ವಿಚಾರಣೆ ನಡೆಸಿ‌, ಮೇಲ್ಮನವಿ ವಜಾಗೊಳಿಸಿದ್ದರು.

ಟೆಂಡರ್‌ಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಕೇವಲ 21 ದಿನ ನೀಡಲಾಗಿದೆ. ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎ) ಕೆಲ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ರೂಪಿಸಿದೆ ಎಂದು ಅರ್ಜಿದಾರರು ವಾದ ಮಂಡಿಸಿದ್ದರು. ಅಲ್ಲದೆ, 5 ವರ್ಷ ಯೋಜನಾ ಅವಧಿಯ 8,000 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗೆ ಕೇವಲ 21 ದಿನಗಳ ಟೆಂಡ‌ರ್ ಕೊನೆಗೊಳಿಸಲಾಗಿದೆ. ನೀತಿಸಂಹಿತೆಯಿಂದ ಪಾರಾಗಲು ತರಾತುರಿಯಲ್ಲಿ ಟೆಂಡರ್ ಕರೆಯಲಾಗಿದೆ. ತಮಗೆ ಟೆಂಡ‌ರ್ ಸಲ್ಲಿಕೆಗೆ 90 ದಿನ ಬೇಕಿತ್ತು. ಹೀಗಾಗಿ ಟೆಂಡರ್ ಅನೂರ್ಜಿತಗೊಳಿಸಬೇಕು ಎಂದು ಎಲ್ & ಟಿ ಕೋರಿತ್ತು.

ಇದನ್ನೂ ಓದಿ | Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

30 ದಿನಗಳ ಟೆಂಡರ್ ಅವಧಿಯನ್ನು ಕಡಿತಗೊಳಿಸಲು ಪ್ರಾಧಿಕಾರಕ್ಕೆ ಅಧಿಕಾರವಿದೆ. ಈಗಾಗಲೇ ಬಿಡ್ ತೆರೆಯಲಾಗಿದ್ದು, ಲೆಟರ್ ಆಫ್ ಅವಾರ್ಡ್ ಕೂಡ ನೀಡಲಾಗಿದೆ. ಪ್ರಕ್ರಿಯೆಗೆ ತಡೆ ನೀಡಬಾರದು ಎಂದು ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು. ಹೀಗಾಗಿ ಟೆಂಡ‌ರ್ ಪ್ರಕ್ರಿಯೆಯನ್ನು ಹೈಕೋರ್ಟ್ ಊರ್ಜಿತಗೊಳಿಸುವ ಮೂಲಕ ಸರ್ಕಾರದ ಆದೇಶ ಎತ್ತಿ ಹಿಡಿದು, ಮೇಲ್ಮನವಿಯನ್ನು ವಜಾಗೊಳಿಸಿತ್ತು. ಪ್ರಸ್ತುತ ಟೆಂಡರ್ ಅನ್ನು ಕಡಿಮೆ ದರ ನಮೂದಿಸಿದ್ದ ಮೇಘ ಎಂಜಿನಿಯರಿಂಗ್ ಆ್ಯಂಡ್‌ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಪಡೆದುಕೊಂಡಿದೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case: ಈ ವಿಡಿಯೊಗಳ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ವಿಡಿಯೊ ಪ್ಲೇ ಮಾಡಲು ಕಾರ್ತಿಕ್‌ ಚಿಂತನೆ ನಡೆಸಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಅಲ್ಲದೆ, 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Hassan Pen Drive Case Did Karthik offer to display Prajwal videos on LED wall in Public
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಆ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಸಾರ್ವಜನಿಕ ಪ್ರದರ್ಶನಕ್ಕಿಡುತ್ತಿದ್ದನಂತೆ ಎಂಬ ಸ್ಫೋಟಕ ಮಾಹಿತಿಯನ್ನು ವಕೀಲ ದೇವರಾಜೇಗೌಡ ಹೊರಹಾಕಿದ್ದಾರೆ.

ವಿಡಿಯೊ ಲೀಕ್‌ ಬಗ್ಗೆ ತಮ್ಮ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಸ್ಪಷ್ಟೀಕರಣ ನೀಡಿದ ದೇವರಾಜೇಗೌಡ, ಈ ವಿಡಿಯೊ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ಹಾಗೂ ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಲ ವಿಡಿಯೊಗಳನ್ನು ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ನನ್ನ ಬಳಿ ಹೇಳಿಕೊಂಡಿದ್ದ ಎಂದು ತಿಳಿಸಿದರು.

ಕಾಂಗ್ರೆಸ್‌ನ ಶ್ರೇಯಸ್ ಜತೆ ಇದ್ದ ಕಾರ್ತಿಕ್

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

ಕಾರ್ತಿಕ್‌ ನನಗೆ ಪೆನ್‌ ಡ್ರೈವ್‌ ಕೊಟ್ಟಿದ್ದ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

Continue Reading
Advertisement
Hassan Pen Drive case
ಪ್ರಮುಖ ಸುದ್ದಿ2 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ6 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್30 mins ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ33 mins ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ38 mins ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Hassan Pen Drive Case Did Karthik offer to display Prajwal videos on LED wall in Public
ಕ್ರೈಂ47 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case How did Karthik get Prajwal video Devaraje Gowda questions
ರಾಜಕೀಯ1 hour ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ1 hour ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ14 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌