CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ - Vistara News

ರಾಜಕೀಯ

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

CM Siddaramaiah: ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Karnataka election results 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನನ್ನ ಮಗ ರಾಕೇಶ್‌ (Rakesh Siddaramaiah) ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಬೇರೆ ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್‌ ವಿಚಾರಕ್ಕೂ ಏನು ಸಂಬಂಧ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದಿಂದ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವ ಜೈಶಂಕರ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು‌ 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ರಿಪ್ಲೈ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ, ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ? ಸುಮ್ಮನೆ ಕಾಲ ಕಳೆಯುವುದನ್ನು ಬಿಡಬೇಕು ಎಂದು ಹೇಳಿದರು.

ರೇಪ್‌ಗಿಂತ ಅದರ ವಿಡಿಯೊನ ಹಂಚಿದ್ದು ದೊಡ್ಡ ಅಪರಾಧ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಚನ್ನಗಿರಿ ಕೇಸ್‌ ಲಾಕಪ್‌ ಡೆತ್‌ ಅಲ್ಲ

ದಾವಣಗೆರೆಯ ಚನ್ನಗಿರಿ ಯುವಕನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ ಮಾಡಿದ್ದೇನೆ. ಆದರೆ, ಈ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟ ಪಡಿಸುತ್ತೇನೆ ಎಂದು ತಿಳಿಸಿದರು.

ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದವರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣವನ್ನು (Prajwal Revanna Case) ಜೀವಂತವಾಗಿ ಇಡಬೇಕು ಎಂಬುದನ್ನು ಹೊರತುಪಡಿಸಿದರೆ, ಇದರಲ್ಲಿನ ಸತ್ಯಾಂಶ ಮತ್ತು ವಾಸ್ತವಾಂಶವನ್ನು ಹೊರತರಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಯಾರಿಗೂ ಆಸಕ್ತಿ ಇಲ್ಲ. ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡರನ್ನೇ (Devarajegowda) ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಹ ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಮಗ ರಾಕೇಶ್‌ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತಲ್ಲವೇ? ಅಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಿದ್ದರು? ಹಾಗೆ ಹೋಗಲು ನಿಮ್ಮ ಅನುಮತಿಯನ್ನು ಪಡೆದುಕೊಂಡಿದ್ದರಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಮೊಮ್ಮಗ ಪ್ರಜ್ವಲ್‌ ರೇವಣ್ಣ ವಾಪಸ್‌ ಬರುವಂತೆ ಏಕೆ ಪತ್ರ ಬರೆದರು? ಎಂಬ ಬಗ್ಗೆಯೂ ಎಚ್‌ಡಿಕೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಕೇಶ್‌ ವಿದೇಶಕ್ಕೆ ಹೋಗಿದ್ದಾಗ ನಿಮ್ಮ ಮಗನ ಜತೆಗೆ ಯಾರು? ಎಷ್ಟು ಜನ ಇದ್ದರು? ಅಲ್ಲಿ ನಡೆದಿದ್ದಂತಹ ಘಟನೆ ಬಗ್ಗೆ ತನಿಖೆಯನ್ನು ಏಕೆ ಮಾಡಲಿಲ್ಲ. ಆ ವಿಷಯವನ್ನು ಏಕೆ ಮುಚ್ಚಿಟ್ಟಿರಿ? ಹಾಗಿದ್ದರೆ ನೀವೇ ಅನುಮತಿಯನ್ನು ಕೊಟ್ಟಿದ್ದೀರಾ? ಬೆಳೆದಂತಹ ಮಕ್ಕಳು ಪ್ರತಿಯೊಂದು ವಿಚಾರವನ್ನು ತಂದೆ – ತಾಯಿಯನ್ನು ಕೇಳಿ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಪತ್ರ ಬರೆದಿದ್ದು ಯಾಕೆ?

ರಾಜತಾಂತ್ರಿಕ ಪಾಸ್‌ ಪೋರ್ಟ್ ಬಗ್ಗೆ ಹೇಳುತ್ತೀರಲ್ಲವಾ? ಅದರ ಕಾನೂನು ಗೊತ್ತಾ ನಿಮಗೆ? ಈಗ ಪ್ರಜ್ವಲ್‌ನನ್ನು ಕರೆದುಕೊಂಡು ಬರುವುದಕ್ಕೆ ಪತ್ರ ಬರೆದಿದ್ದೀರಲ್ಲವೇ? ಅದು ಸದ್ಯಕ್ಕೆ ಏನೂ ಆಗಲ್ಲ. ಆದರೆ, ಈ ಪ್ರೊಸೆಸ್‌ ಸಾಕಷ್ಟು ದಿನ ಹಿಡಿಯುತ್ತದೆ ಎಂದೇ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಷ್ಟು ವರ್ಷ ಅವರ ಜತೆ ಕೆಲಸ ಮಾಡಿದ್ದಾರಾ? ಅವರ ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ಇಲ್ವಾ? ನಿಮ್ಮ ಕುಟುಂಬದಲ್ಲಿ ನಡೆದಿರುವುದು ಏನು? ವಿದೇಶಕ್ಕೆ ನಿಮ್ಮ ಮಗನನ್ನು ನೀವೆ ಕಳಿಸಿದ್ದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪೆನ್‌ಡ್ರೈವ್‌ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ?

ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವುಳ್ಳ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂಬುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗ ಪೆನ್‌ಡ್ರೈವ್‌ ವಿತರಣೆ ಮಾಡಿರುವುದು ಅಪರಾಧ ಅಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡದೇ ಹೊರಗಡೆ ಬಿಟ್ಟಿದ್ದೀರಲ್ಲವೇ ಅವರಿಗೆ ಏನು ನ್ಯಾಯ ಕೊಡಿಸುತ್ತೀರಿ? ಸರ್ಕಾರದಿಂದ ಏನು ನ್ಯಾಯ ಕೊಡಲು ಸಾಧ್ಯ? ಇದನ್ನೆಲ್ಲ ಸರಿ ಮಾಡುತ್ತೀರಾ ನೀವು? ನಾಲ್ಕು ಗೋಡೆಗಳ ಮಧ್ಯೆ ನಡೆದದ್ದು ಬೇರೆ, ಆದರೆ ಇದನ್ನು ಬೀದಿಗೆ ತಂದಿದ್ದು ನೀವೆ ತಾನೇ? ಇದರಲ್ಲಿ ಏನು ಮಾಹಿತಿ ಸಿಕ್ಕಿತ್ತೋ ಅದನ್ನು ಇಟ್ಟುಕೊಂಡು ಸಂತ್ರಸ್ತೆಯ ಕುಟುಂಬಕ್ಕೆ ಸಮಸ್ಯೆ ಆಗದಂತೆ ವಿಚಾರಣೆ ನಡೆಸಬೇಕಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾರ್ತಿಕ್‌ಗೆ ಎಸ್‌ಐಟಿಯಲ್ಲಿ ರಾಜಾತಿತ್ಯ

ಮಾತು ಎತ್ತಿದ್ದರೆ ಅದೇನೋ ಹೊಸ ಹೆಸರಿಟ್ಟುಕೊಂಡಿದ್ದಾರೆ, ಬ್ರದರ್‌ ಸ್ವಾಮಿ ಅಂತೆ. ನಿಮ್ಮ ಯೋಗ್ಯತೆಗೆ ಇಷ್ಟು. ನಿಮಗೆ ಮಾನ, ಮರ್ಯಾದೆ ಇದ್ದರೆ? ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ನಿಮ್ಮ ಪಾರ್ಟಿ ಅಧ್ಯಕ್ಷ ಯಾವ ರೀತಿ ನಡೆದುಕೊಂಡು ಬಂದಿದ್ದಾರೆ ಅಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಎಸ್‌ಐಟಿಯಲ್ಲಿ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ರಾಜಾತಿತ್ಯ ಸಿಗುತ್ತಿದೆ. ಎಲ್ಲಿದ್ದಾನೆ ಅವನು? ಮಾವನ ಮನೆಗೆ ಹೋದಂತೆ ಹೋಗಿ ಬರುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ವಿಧಾನಸೌಧದ ಒಳಗಡೆ ಕ್ಯಾಸೆಟ್ ಸರ್ಕ್ಯುಲೇಷನ್ ಮಾಡಿದವರು ಓಡಾಡಿಕೊಂಡು ಇದ್ದಾರೆ. ಏನು ತನಿಖೆ ನಡೆಸುತ್ತೀರಿ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ಇದೊಂದು ಕಾಂಗ್ರೆಸ್ ಪಕ್ಷವಾ?

ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ನಾನು ಮಾಡಿದ್ದೇನಾ? ಇದೊಂದು ಕಾಂಗ್ರೆಸ್ ಪಕ್ಷವಾ? ಗೌರವ ಇದೆಯಾ? ಮಾನ, ಮರ್ಯಾದೆ ಇದೆಯಾ? ನಿಮ್ಮ ಡಿಸಿಎಂ ಡಿ.ಕೆ. ಶಿವಕುಮಾರ್, ಅದೇ ಸಿಡಿ ಶಿವು ಅವರು ಯಾಕಪ್ಪಾ ಶಿವರಾಮೇಗೌಡರ ಜತೆ ಮಾತನಾಡಿದರು? ಇವರದ್ದು ಹಸ್ತಕ್ಷೇಪ ಇಲ್ಲವೆಂದಾದರೆ ಏಕೆ ಮಾತನಾಡಬೇಕಿತ್ತು? ಇನ್ನೂ ಏನಾದರೂ ಸಾಕ್ಷಿ ಇದ್ದರೆ ಕೊಡು ಅಂತ ಕೇಳಿದ್ದು ಯಾಕೆ? ಬ್ರೋಕರ್‌, ತಲೆ ಹಿಡಿಯುವ ಕೆಲಸವನ್ನು ಮಾಡುತ್ತಿರುವವರು ಇವರು. ನನ್ನ ಬಗ್ಗೆ ಪಕ್ಷದಿಂದ ಟ್ವೀಟ್‌ ಮಾಡಿಸುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ? ಗೃಹ ಸಚಿವರೇ ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ. ನಿಮಗೆ ತಂದೆ – ತಾಯಿ ಜನ್ಮ ಕೊಟ್ಟು ಭೂಮಿಗೆ ಬಂದಿದ್ದೀರಿ. ಒಡಹುಟ್ಟಿದ ಅಕ್ಕ – ತಂಗಿಯರು ಇದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ

ಚನ್ನಗಿರಿಯ ಪ್ರಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ. ಏಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಈ ಸರ್ಕಾರದವರು ಹಾಗೆ ಬಳಕೆ ಮಾಡಿಕೊಂಡಿದ್ದಾರೆ. ಅದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿಯಾಗಿದೆ. ಅವರೇ ಮಾಡಿಕೊಂಡ ಕೆಲಸ ಇದು. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Petrol Diesel Price: ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯೇ ಇದೆ. ಚುನಾವಣಾ ಫಲಿತಾಂಶಕ್ಕೂ‌ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ (Petrol Diesel Price) ಚುನಾವಣಾ ಫಲಿತಾಂಶಕ್ಕೂ‌ ಯಾವುದೇ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲೂ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಬತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದದ್ದು ಈ ಬಾರಿ 19 ಕ್ಕೆ ಇಳಿದಿದೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ? ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ

ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೇರೆ ಕಡೆಗಿಂತ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆಯೇ ಇದೆ

ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 2021ರ ಏಪ್ರಿಲ್ 11ರಂದು ಪೆಟ್ರೋಲ್ ಮೇಲೆ ಶೇ.35 ತೆರಿಗೆ ಹಾಗೂ ಡೀಸೆಲ್ ಮೇಲೆ ಶೇ.24 ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸೆಲ್ ಮೇಲೆ 14.34ಕ್ಕೆ ಇಳಿಸಿದರು. ಶೇ.7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ.ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್‌ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಈ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ. ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಗಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಈಗ ಸ್ವಲ್ಪ ಏರಿಕೆಯಾಗಿದೆ, ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ

ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ಅನುದಾನವನ್ನು ನೀಡಲಾಗಿದೆ. ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಲಾಗಿದೆ, ಚುನಾವಣೆಗಾಗಿ ಅಲ್ಲ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Petrol Diesel Price: ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು (Petrol Diesel Price) ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್ ಮತ್ತು ಮಧ್ಯಪ್ರವೇಶಕ್ಕಿಂತಲ್ಲೂ ನಮ್ಮಲ್ಲೇ ಕಡಿಮೆ. ಅಗಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲಗಳನ್ನ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ವ್ಯಾಟ್ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಳ (Price Hike) ಮಾಡಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ಈ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ತಲಾ 9.48 ರೂಪಾಯಿ ಮತ್ತು 3.56 ರೂಪಾಯಿ ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆಯ ತೆರಿಗೆ ಹೆಚ್ಚಳವಾಗಿ ಪೆಟ್ರೋಲ್‌ಗೆ 32.98 ರೂ., ಡೀಸೆಲ್‌ಗೆ 31.83 ರೂ. ಹೆಚ್ಚಳವಾಗಿತ್ತು. 2021-22 ರಲ್ಲಿ ಅಬಕಾರಿ ತೆರಿಗೆಯನ್ನು ಪೆಟ್ರೋಲ್ ಮೇಲೆ 13 ರೂಪಾಯಿ ಮತ್ತು ಡಿಸೇಲ್ ಮೇಲೆ 16 ಕಡಿಮೆ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲಿನ ಕೇಂದ್ರ ತೆರಿಗೆ 19.9 ರೂ., ಡೀಸೆಲ್ ಮೇಲೆ 18.8 ರೂಪಾಯಿ ಇದೆ. ಇದನ್ನು ಕೇಂದ್ರ ಸರ್ಕಾರ ಜನರ ಒಳಿತಿಗೊಸ್ಕರ ಕಡಿಮೆ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ರಾಜ್ಯದ ವ್ಯಾಟ್ ಹೆಚ್ಚಳದಿಂದ ಜನರ ಸೇವೆಗಳು, ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಹಣ ನೀಡಲಿದ್ದೇವೆ. ನಾವು ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತ ನೀಡಲು ಬದ್ಧರಾಗಿದ್ದೇವೆ ಎಂದು ತೈಲ ಬೆಲೆ ಏರಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Continue Reading

ಕ್ರೈಂ

Renuka swamy Murder : ಟೀಕೆಗೆಲ್ಲ ಕೊಲೆ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು- ಸಿಟಿ ರವಿ

Renuka swamy Murder case : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಆ್ಯಂಡ್‌ ಗ್ಯಾಂಗ್‌ ಅರೆಸ್ಟ್‌ ಆಗಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಮೈಸೂರಿನಲ್ಲಿ ನಟ ದರ್ಶನ್‌ನನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವಂತೆ ಪ್ರತಿಭಟಿಸಲಾಗಿದೆ.

VISTARANEWS.COM


on

By

Renuka swamy murder case
Koo

ಚಿಕ್ಕಮಗಳೂರು/ಮೈಸೂರು/ಹುಬ್ಬಳ್ಳಿ: ರೇಣುಕಾಸ್ವಾಮಿ ಎಂಬಾತ (Renuka swamy Murder) ಕೊಲೆ ಕೇಸ್‌ನಲ್ಲಿ ಸೆರೆಯಾಗಿರುವ ನಟ ದರ್ಶನ್ (Actor Darshan) ಪ್ರಕರಣದ ಸುದ್ದಿ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಪ್ರತಿಕ್ರಿಯಿಸಿದ್ದರು. ಸಿನಿಮಾದಲ್ಲಿ ಹೀರೋ ಆದವರೆಲ್ಲ ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ. ದರ್ಶನ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ದರು ಅನ್ನಿಸುತ್ತದೆ.

ನಮ್ಮ ಪಕ್ಷದವರು ರೇಣುಕಾಸ್ವಾಮಿ ಕುಟುಂಬದ ಜತೆ ಇದೆ, ಅವರಿಗೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆಲ್ಲ ಆ ರೀತಿಯೇ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಆ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು.

ನಟ ದರ್ಶನ್‌ಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡುತ್ತಿದ್ದಾರೆ ಎನ್ನುವ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ದರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಇದನ್ನೂ ಓದಿ: Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

ಅವನು ಮನುಷ್ಯನೋ.. ರಾಕ್ಷಸನೋ – ಶಾಸಕ ಅರವಿಂದ ಬೆಲ್ಲದ್‌ ವಾಗ್ದಾಳಿ

ದರ್ಶನ ವಿರುದ್ಧ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ವಾಗ್ದಾಳಿ ನಡೆಸಿದರು. ನಟ ದರ್ಶನ್‌ ಮಾಡಿರುವ ಕೆಲಸ ನೋಡಿದರೆ, ಅವನು ಮನುಷ್ಯನೋ ಅಥವಾ ರಾಕ್ಷಸನೋ ಎಂಬುದು ತಿಳಿಯುತ್ತಿಲ್ಲ. ದರ್ಶನ್‌ನನ್ನು ಕೃಷಿ ರಾಯಭಾರಿ‌ಯನ್ನಾಗಿ ಮಾಡಲಾಗಿತ್ತು. ಈ ಸರ್ಕಾರ ಮಾಡುತ್ತಿರುವ ತಪ್ಪು ಒಂದಲ್ಲ ಎರಡಲ್ಲ. ಸಮಾಜ ವಿರೋಧಿ, ಕ್ರಿಮಿನಲ್ ಕೆಲಸ ಮಾಡುತ್ತಿರುವವರಿಗೆ ರಾಜಾತಿಥ್ಯ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ – ಜಗದೀಶ್‌ ಶೆಟ್ಟರ್‌

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ಸಹಚರರು ಸೆರೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಸಂಬಂಧ ಪ್ರತಿಕ್ರಿಯಿಸಿದ್ದು, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಾನೂನುನನ್ನು ಯಾರು ಕೈಗೆ ತೆಗೆದುಕೊಳ್ಳಬಾರದು ಎಂದರು.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌ ಕಳಿಸಿದ್ದಕ್ಕೆ ಕೊಲೆ ಯಾಕೆ ಮಾಡಬೇಕು . ಅದಕ್ಕಾಗಿಯೇ ಸೈಬರ್ ಕ್ರೈಂ ಇದೆ, ಅಲ್ಲಿ ದೂರು ಕೊಡಬಹುದಿತ್ತು. ಒಬ್ಬ ಸಿನಿಮಾ ನಟ ಆ ವ್ಯಕ್ತಿಯನ್ನು ಕೊಲೆ ಮಾಡಬಾರದಿತ್ತು. ನಟ ಆಗಲಿ ಸಾಮಾನ್ಯ ಜನರಾಗಲಿ ಅಪರಾಧ ಮಾಡಿದಾಗ ತಾರತಮ್ಯ ಮಾಡಬಾರದು ಎಂದರು.

ನಟರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು- ಜಯ ಮೃತ್ಯುಂಜಯ ಸ್ವಾಮೀಜಿ

ಕಲಾವಿದರ ಬದುಕು ಮತ್ತು ಬರಹ ಒಂದೆ ಆಗಿರಬೇಕು. ಪರದೆ ಮೇಲಿನ ನಟನೆಗೂ ಬದುಕಿಗೂ ಸಾಮೀಪ್ಯವಾಗುವಂತೆ ಬದಕುವ ಪ್ರಯತ್ನ ಮಾಡಬೇಕು. ಪರದೇ ಮೇಲೆ ಒಂದು ನಟನೆ, ಪರದೇ ಹಿಂದೆ ಒಂದು ನಟನೆ ಮಾಡಿದಾಗ ಇಂತಹ ಅವಘಡ ಆಗುತ್ತವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಅವಘಡಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬ ನಟರು ತಮ್ಮ ವ್ಯಕ್ತಿತ್ವ ರೂಪಿಸಿಕೋಳ್ಳಬೇಕು. ಡಾ ರಾಜಕುಮಾರ, ಡಾ ವಿಷ್ಣುವರ್ಧನ್‌ ಆದರ್ಶವಾಗಿದ್ದಾರೆ. ಅಂತಹ ಮಹಾನ್‌ ನಟರಂತೆ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ಇದನ್ನೂ ಓದಿ: Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

ಚಿತ್ರರಂಗದಿಂದ ಬ್ಯಾನ್‌ ಮಾಡಿ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಮೈಸೂರಿನ ತಿ.ನರಸೀಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟ ಪ್ರತಿಭಟಿಸಿದೆ. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ನಟ ದರ್ಶನ್‌ ಚಿತ್ರರಂಗದಿಂದ ಬ್ಯಾನ್ ಆಗಬೇಕು ಎಂದು ಒತ್ತಾಯಿಸಿದರು.

ನಟ ದರ್ಶನ್‌ ಚಿತ್ರಗಳು ತೆರೆಯ ಮೇಲೆ ಬರದಂತೆ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Petrol Diesel Price: ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ‌ ಭಾಗ್ಯ ನೀಡಿದೆ: ಅಶೋಕ್

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Continue Reading
Advertisement
Karnataka weather Forecast
ಮಳೆ11 mins ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ8 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ10 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ10 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ10 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ11 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ11 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ11 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ12 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ12 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ13 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ19 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌