Free Electricity: ಯಂತ್ರಗಳ ಅಡವಿಟ್ಟು ಈ ವರ್ಷ 33 ಕೋಟಿ ರೂ. ಸಾಲ ಪಡೆದ ಕರ್ನಾಟಕ ವಿದ್ಯುತ್ ನಿಗಮ! - Vistara News

ರಾಜಕೀಯ

Free Electricity: ಯಂತ್ರಗಳ ಅಡವಿಟ್ಟು ಈ ವರ್ಷ 33 ಕೋಟಿ ರೂ. ಸಾಲ ಪಡೆದ ಕರ್ನಾಟಕ ವಿದ್ಯುತ್ ನಿಗಮ!

Free Electricity: ರ್ನಾಟಕ ವಿದ್ಯುತ್ ನಿಗಮ ನಿಯಮಿತ ಭಾರಿ ನಷ್ಟದಲ್ಲಿದೆ. ಅಲ್ಲದೆ, ತನ್ನು ಖರ್ಚು ನಿಭಾಯಿಸಲು ಯಂತ್ರೋಪಕರಣಗಳನ್ನೇ ಅಡವಿಟ್ಟು ಕೋಟಿ ಕೋಟಿ ಸಾಲವನ್ನು ಪಡೆದುಕೊಂಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

VISTARANEWS.COM


on

Karnataka Power Corporation Limited and CM Siddaramaiah, Power Grid prolem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದು ವಿದ್ಯುತ್‌ ಫ್ರೀ (Free Electricity) ಪಡೆಯುವ ರಾಜ್ಯದ ಜನರು ತಿಳಿದುಕೊಳ್ಳಲೇಬೇಕಾದ ಸುದ್ದಿ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ (Congress Guarantee Scheme) ದುಡ್ಡು ಹೊಂದಾಣಿಕೆ ಮಾಡಲಾಗುತ್ತಿದೆ. ಈ ನಡುವೆ ಗೃಹ ಜ್ಯೋತಿ ಯೋಜನೆ (Gruha Jyoti Scheme) ಮೂಲಕ ಪ್ರತಿ ಮನೆ ಮನೆಗೆ 200 ಯೂನಿಟ್‌ವರೆಗೆ (ಸರಾಸರಿ ಬಳಕೆ ಆಧಾರದ ಮೇಲೆ) ಬಳಕೆಗೆ ಅವಕಾಶವನ್ನು ಕೊಡಲಾಗುತ್ತಿದೆ. ಆದರೆ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (Karnataka Power Corporation Limited) ಭಾರಿ ನಷ್ಟದಲ್ಲಿದೆ ಎಂಬ ಸಂಗತಿ ಈಗ ಹೊರಬಿದ್ದಿದೆ. ಅದಲ್ಲದೆ, ತನ್ನ ಯಂತ್ರೋಪಕರಣಗಳನ್ನೇ ಅಡವಿಟ್ಟು ಈವರೆಗೆ ಕೋಟಿ ಕೋಟಿ ಹಣವನ್ನು ಪಡೆಯಲಾಗಿದೆ. ಈ ವರ್ಷವೊಂದರಲ್ಲಿಯೇ ಬರೋಬ್ಬರಿ 33 ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆಯಲಾಗಿದೆ.

ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ ಪಡೆದ ಸಂಗತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಸರ್ಕಾರದ ಫ್ರೀ ಯೋಜನೆಯ (Free Scheme) ವೆಚ್ಚವನ್ನು ಸರಿದೂಗಿಸಲು ಸಾಲ ಮಾಡಲಾಗುತ್ತಿದೆಯೇ? ಎಂಬ ಪ್ರಶ್ನೆಯೂ ಮೂಡಿದೆ. ಆದರೆ, 2018ರಿಂದಲೇ ಸಾಲವನ್ನು ಪಡೆಯುತ್ತಿರುವುದರಿಂದ ಕರ್ನಾಟಕ ವಿದ್ಯುತ್ ನಿಗಮವು ಭಾರಿ ನಷ್ಟದಲ್ಲಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಮೊದಲೇ ನಷ್ಟದಲ್ಲಿರುವ ವಿದ್ಯುತ್‌ ನಿಗಮವನ್ನು ಈಗ ಮತ್ತೆ ಸಾಲದ ಶೂಲಕ್ಕೆ ತಳ್ಳುವುದು ಸರಿಯೇ ಎಂಬ ಪ್ರಶ್ನೆ ಎದುರಾಗಿದೆ.

33,345 ಕೋಟಿ ರೂಪಾಯಿ ಸಾಲ

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮತ್ತು ವಿದ್ಯುತ್ ಸರಬರಾಜಿಗೆ ಸಂಬಂಧಪಟ್ಟಂತೆ ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಡಲಾಗಿದೆ. ಈ ಸಂಬಂಧ 2023-24ರಲ್ಲಿ ಬರೋಬ್ಬರಿ 33,345 ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆದುಕೊಳ್ಳಲಾಗಿದೆ.

ಕಾರ್ಯಾಚರಣೆ ವೆಚ್ಚಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ಸಾಲ ಪಡೆಯಲಾಗಿದೆ. ಹೀಗಾಗಿ 2023-24ನೇ ಸಾಲಿನಲ್ಲಿ 33,345 ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆಯಲಾಗಿದೆ. ನಿಗಮದ ಬಂಡವಾಳ ವೆಚ್ಚಕ್ಕಾಗಿ ಈ ಸಾಲ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವರ್ಷದಿಂದ ವರ್ಷಕ್ಕೆ ಸಾಲದ ಮೊತ್ತ ಹೆಚ್ಚಳವಾಗುತ್ತಲೇ ಇರುವುದು ಆತಂಕವನ್ನು ಹೆಚ್ಚಿಸಿದೆ. ಪಿಎಸ್‌ಸಿ, ಆರ್‌ಎಫ್‌ಸಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಚುನಾವಣೆ ಘೋಷಣೆ ಬೆನ್ನಲ್ಲೇ ಕುರುಡು ಕಾಂಚಾಣದ ಕುಣಿತ; ಬೆಂಗಳೂರಲ್ಲಿ 13 ಲಕ್ಷ ರೂ. ಜಪ್ತಿ

ಯಾವ ವರ್ಷ ಎಷ್ಟು ಸಾಲ?

  • 2018-19 ರಲ್ಲಿ 21,821 ಕೋಟಿ ರೂ.
  • 2019-20 ರಲ್ಲಿ -26,461 ಕೋಟಿ ರೂ.
  • 2020-21 ರಲ್ಲಿ 28,097 ಕೋಟಿ ರೂ.
  • 2021-22 ರಲ್ಲಿ 29,433 ಕೋಟಿ ರೂ.
  • 2022-23 ರಲ್ಲಿ 31,258 ಕೋಟಿ ರೂ.
  • 2023-24 ರಲ್ಲಿ 33, 345 ಕೋಟಿ ರೂ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Mani Shankar Aiyar: ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ ಎಂದರು.

VISTARANEWS.COM


on

mani shankar iyer
Koo

ನವದೆಹಲಿ: ಕಾಂಗ್ರೆಸ್‌ ಪಾಕಿಸ್ತಾನದ ಫಾಲೋವರ್‌ ಪಕ್ಷ ಎಂದು ಪದೇ ಪದೇ ಬಿಜೆಪಿ ಜಡಿಯುತ್ತಿದ್ದರೂ ಒಂದಿಲ್ಲೊಂದು ಒಂದು ಪಾಕ್‌(Pakistan) ಪರ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕರು ಪಕ್ಷಕ್ಕೆ ಮುಜುಗರ ತರುತ್ತಲೇ ಇದ್ದಾರೆ. ಅಲ್ಲದೇ ಬಿಜೆಪಿ ಆರೋಪಕ್ಕೆ ಆಹಾರವಾಗುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ನಾಯಕರು ಪಾಕ್‌ ಪರವಾಗಿ ಬ್ಯಾಟಿಂಗ್‌ ಬೀಸಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದೀಗ ಕಾಂಗ್ರೆಸ್ (Congress) ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ (Mani Shankar Aiyar) ಅವರು ಪಾಕ್‌ ಪರ ಹೇಳಿಕೆ ನೀಡಿ ವಿವಾದಕ್ಕಿಡಾಗಿದ್ದಾರೆ. ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜೊತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ.. ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ. ಒಂದು ವೇಳೆ ಅವರನ್ನು ದ್ವೇಷಿಸಿದರೆ ಹುಚ್ಚನೊಬ್ಬ ಬಂದು ಬಾಂಬ್‌ ಸ್ಫೋಟಿಸುತ್ತಾನೆ ಎಂದು ಹೇಳಿದರು. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಈ ಹಿಂದೆಯೂ ಒಮ್ಮೆ ಮಣಿಶಂಕರ್‌ ಅಯ್ಯರ್‌ ಪಾಕ್‌ ಪರ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಪಾಕಿಸ್ತಾನೀಯರನ್ನು ಅವರು “ಭಾರತದ ಅತಿದೊಡ್ಡ ಆಸ್ತಿ” ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. “ನನ್ನ ಅನುಭವದ ಪ್ರಕಾರ, ಪಾಕಿಸ್ತಾನಿಯರು ಬಹುಶಃ ಎದುರಿನವರಿಗೆ ಅತಿ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸುವ ಜನರು. ನಾವು ಸ್ನೇಹಪರರಾಗಿದ್ದರೆ ಅವರು ಅತಿಯಾದ ಸ್ನೇಹಪರರಾಗಿರುತ್ತಾರೆ ಮತ್ತು ನಾವು ದ್ವೇಷಿಸಿದರೆ ಅವರು ತುಂಬಾ ದ್ವೇಷಿಸಬಲ್ಲರು. ಪಾಕಿಸ್ತಾನದಂತೆ ನನ್ನನ್ನು ತೆರೆದ ತೋಳುಗಳಿಂದ ಸ್ವಾಗತಿಸಿದ ಇನ್ನೊಂದು ದೇಶಕ್ಕೆ ನಾನು ಯಾವತ್ತೂ ಹೋಗಿಲ್ಲ” ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದರು.

ಇದನ್ನೂ ಓದಿ: Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

ಎರಡು ದಿನಗಳ ಹಿಂದೆ ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದರು.

Continue Reading

ಕ್ರೈಂ

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

VISTARANEWS.COM


on

Prajwal Revanna case Revanna bail plea to be heard on Monday Advocate Nagesh argument was as follows
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಇಂದೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಮಾನ ಹೈಜಾಕ್ ಪ್ರಕರಣದ ಉಲ್ಲೇಖ

ಈ ವೇಳೆ ವಿಮಾನ ಹೈಜಾಕ್ ಪ್ರಕರಣವನ್ನು ಉಲ್ಲೆಖಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಈ ಹಿಂದೆ ವಿಮಾನ ಹೈಜಾಕ್ ಮಾಡಿ ಉಗ್ರನ ಬಿಡುಗಡೆಗೆ ಕೋರಿದ್ದರು. ವಿಮಾನ ಹೈಜಾಕ್ ಸಮಯದಲ್ಲಿ ಜಸ್ವಂತ್ ಸಿಂಗ್ ಮಂತ್ರಿ ಆಗಿದ್ದರು. ಆಗ ಉಗ್ರರನ್ನು ಬಿಟ್ಟು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬಿಡಿಸಿದ್ದರು. ಇದಾದ ಬಳಿಕವೇ ಸೆಕ್ಷನ್ 364(a) ಸೇರಿಸಲಾಯಿತು. ಇಲ್ಲಿ ಇಂತಹ ಘಟನೆ ನಡೆದಿಲ್ಲವಾದರೂ ಸೆಕ್ಷನ್ 364(a) ಸೇರಿಸಲಾಗಿದೆ. ನಮ್ಮ ಕಕ್ಷಿದಾರ ರೇವಣ್ಣ ವಿರುದ್ಧ 364(a) ದಾಖಲು ಮಾಡಿದ್ದಾರೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ 21 ವರ್ಷದ ಮಗ ದೂರು ನೀಡಿದ್ದಾನೆ ಎಂದು ವಾದ ಮಂಡಿಸಿದರು.

ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ?

ಮಹಿಳೆಯನ್ನು ಅಪಹರಿಸಿ ವಿದೇಶಕ್ಕೆ ಕರೆದೊಯ್ದರೆ ಈ ಸೆಕ್ಷನ್‌ಗಳು ಅಪ್ಲೇ ಆಗುತ್ತವೆ. ಪ್ರಕರಣದಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಾರಾಂಶ ಉಲ್ಲೇಖಿಸಿದ ನಾಗೇಶ್‌, ದೂರುದಾರ ಮಗನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ. ದೂರುದಾರನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ದೂರಿನಲ್ಲಿ ಇರುವ ಸತೀಶ್ ಬಾಬು ಹೇಳಿಕೆಯನ್ನು ಗಮನಿಸೋಣ. ಅದರಲ್ಲಿ “ನಿನ್ನ ತಾಯಿ ಮೇಲೆ ಪೊಲೀಸ್ ಕೇಸ್ ಆಗುತ್ತದೆ. ರೇವಣ್ಣ ಕರೆದಿದ್ದಾರೆಂದು ಹೇಳಿ ಕರೆದುಕೊಂಡು ಹೋದರು” ಎಂದು ಆರೋಪ ಮಾಡಲಾಗಿದೆ. ಹಾಗಾದರೆ, ಸಿಎಂ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ? ರೇವಣ್ಣ ಸಾಹೇಬರು ಹೇಳಿದ್ದಾರೆ ಎಂದು ಕರೆದೊಯ್ದರೆ ಅದು ಅಪಹರಣವೇ? ಇದರಲ್ಲಿ ಮೋಸವಿದೆಯೇ? ಬಲ ಪ್ರಯೋಗವಿದೆಯೇ? ಹೀಗಾಗಿ ಇಲ್ಲಿ ಅಪಹರಣದ ಯಾವುದೇ ಅಂಶಗಳು ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದರು.

ಪೊಲೀಸರು ಹಲ್ಲಿಲ್ಲದ ಹಾವುಗಳು

ಈ ಪ್ರಕರಣದಲ್ಲಿ ಅಪಹರಣಕ್ಕೊಳಗಾದವರೇ ಆಕ್ಷೇಪಣೆ ಸಲ್ಲಿಸಬೇಕು. ಬೇರೆ ಯಾರೂ ಆಕ್ಷೇಪಣೆ ಸಲ್ಲಿಸಲಾಗುವುದಿಲ್ಲ. 365 ಅಕ್ರಮ ಬಂಧನ‌ ಸೆಕ್ಷನ್ ಕೂಡ ಅನ್ವಯ ಆಗುವುದಿಲ್ಲ. ಇಲ್ಲಿ ಏನು ಡಿಮ್ಯಾಂಡ್ ಇದೆ? ಅಪಹರಣವೂ ಇಲ್ಲ,‌ ಅಕ್ರಮ ಬಂಧನವೂ ಇಲ್ಲ. ನಾಳೆ‌ ಯಾರಿಂದಲಾದರೂ ಹೇಳಿಕೆ ಪಡೆದು ಸಾಕ್ಷ್ಯ ಸೃಷ್ಟಿಸಬಹುದು. ಏಕೆಂದರೆ ಪೊಲೀಸರು ಹಲ್ಲಿಲ್ಲದ ಹಾವುಗಳು. ಪೊಲೀಸರಿಗೆ ಸೆಕ್ಷನ್ 161 ಹೇಳಿಕೆ ಎಂಬ ಅಸ್ತ್ರ ಇದೆ. ಇನ್ನು ಎಚ್.ಡಿ.ರೇವಣ್ಣ ರಾಜಕೀಯ ಪಕ್ಷದಲ್ಲಿದ್ದಾರೆ ಎಂದು ನಾಗೇಶ್‌ ವಾದಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಪ್ರಚೋದನೆಯಿಂದ ಕೂಡಿದ ಕೇಸ್‌ ಇದು

ಏಪ್ರಿಲ್ 29ರಂದು ಕಿಡ್ನ್ಯಾಪ್ ಆಗುತ್ತೆ, 4 ದಿನ ಬಿಟ್ಟು ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಏ.29ಕ್ಕೆ ಘಟನೆ ನಡೆದಿದೆ ಎಂದು ಉಲ್ಲೇಖಿಸಿದ್ದು, ಮೇ 2ರಂದು ಕೇಸ್ ದಾಖಲು ಮಾಡಲಾಗಿದೆ. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ‌ಕೇಸ್ ದಾಖಲಾಗಿತ್ತು. ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇತ್ತು. ನಂತರ ಪೊಲೀಸರು 41A ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಮೇ 3ರಂದು ನೋಟಿಸ್ ನೀಡಿ ಮೇ 4ರಂದು ವಿಚಾರಣೆಗೆ ಬರಲು ಹೇಳಿದ್ದಾರೆ. ರೇವಣ್ಣ ವಿರುದ್ಧ ದಾಖಲಾದ ಕೇಸ್ ಪ್ರಚೋದನೆಯಿಂದ ಆಗಿದೆ. ಪ್ರಚೋದನೆಯಿಂದ ಕೇಸ್ ಹಾಕಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರೇವಣ್ಣಗೆ ಜಾಮೀನು ನೀಡಬೇಕೆಂದು ಸಿ.ವಿ.ನಾಗೇಶ್ ಬಲವಾಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?

ತನಿಖೆಗೆ ಸಹಕರಿಸುತ್ತಿಲ್ಲ ಅಂತಾರೆ, ಯಾವ ರೀತಿ ಸಹಕರಿಸಬೇಕು. ಎಚ್.ಡಿ. ರೇವಣ್ಣ ಅವರ ತನಿಖೆ ಬಹುತೇಕ ಮುಗಿದಿದೆ. ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶವನ್ನು ನೀಡಿದೆ. ಕಸ್ಟಡಿಯಲ್ಲಿದ್ದಾಗ ತನಿಖೆ ಮುಗಿದಿದ್ದರೆ ಬೇಲ್ ನೀಡಬಹುದೆಂದು ಹೇಳಿದೆ. ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ಹೇಳಿಕೆ ಪಡೆದಿದ್ದಾರೆ. ಎಸ್‌ಐಟಿ ಏನೆಲ್ಲ ಸಾಕ್ಷಿ ಸಂಗ್ರಹಿಸಿದೆ ಎಂದು ಹೇಳಬೇಕು.

ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಯಾವುದನ್ನು ನಂಬಬೇಕು?

ಕಿಡ್ನ್ಯಾಪ್ ಸಂತ್ರಸ್ತೆಗೆ ಏನಾದರೂ ಗಾಯಗಳಾಗಿವೆಯಾ? ಕಿಡ್ನ್ಯಾಪ್ ಸಂತ್ರಸ್ತೆಗೆ ಯಾವುದೇ ಚಿಕಿತ್ಸೆಯನ್ನು ಕೊಡಿಸಿಲ್ಲ. ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿಲ್ಲ. 164 ಅಡಿಯಲ್ಲಿ ಹೇಳಿಕೆಯೂ ದಾಖಲಿಸಿಲ್ಲ. ಇಷ್ಟು ದಿನವಾದ್ರು ಯಾಕೆ 164 ಸ್ಟೇಟ್ಮೆಂಟ್ ಮಾಡಿಸಿಲ್ಲ. ಎಸ್‌ಐಟಿಯವರು ಕಳೆದ 6 ದಿನಗಳಿಂದ ಏನ್ ಮಾಡುತ್ತಿದ್ದಾರೆ? ಸಂತ್ರಸ್ತೆ ಪತ್ತೆಯಾದ ಸ್ಥಳದ ಕಂದಾಯ ದಾಖಲೆ ಪಡೆಯಬೇಕಂತಾರೆ. ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳುತ್ತಾರೆ, ಇದರರ್ಥವೇನು? ಸಂತ್ರಸ್ತೆ ಕೂಡಿಹಾಕಿದ್ದ ಸ್ಥಳ ಪರಿಶೀಲಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಇವರು ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಸಂತ್ರಸ್ತೆಯನ್ನು ಕರೆದೊಯ್ದ ವಾಹನ ಪತ್ತೆ ಹಚ್ಚಬೇಕು ಎಂದು ಹೇಳುತ್ತಾರೆ. ವಾಹನ ಸೀಜ್ ಮಾಡಬೇಕಿದೆ ಎಂದು ಕೂಡ ಹೇಳಿದ್ದಾರೆ. ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಗಾಡಿ ಸೀಜ್ ಬಗ್ಗೆ ತಿಳಿಸಿದ್ದಾರೆ. ಇವರು ಎಷ್ಟು ವಾಹನಗಳನ್ನು ಸೀಜ್ ಮಾಡಬೇಕು? ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್, ಮೊಬೈಲ್ ಸೀಜ್ ಆಗಿದೆ ಎಂದು ಎಸ್‌ಐಟಿಯವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಒಂದು ಕಡೆ ಸೀಜ್ ಮಾಡಬೇಕು ಎಂದು ಹೇಳಿಕೆ ಕೊಡುತ್ತಾರೆ. ಮತ್ತೊಂದು ಕಡೆ ವಾಹನ ಸೀಜ್ ಮಾಡಿರುವುದಾಗಿ ಅವರು ಹೇಳುತ್ತಾರೆ. ಯಾವುದನ್ನು ನಂಬಬೇಕು ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಈ ವಿಷಯದಲ್ಲಿ ರೇವಣ್ಣ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೂ ಒಂದು ಮಿತಿ ಇರಬೇಕು. ತನಿಖಾಧಿಕಾರಿಗಳು ನಾಲ್ಕು ದಿನಗಳಿಂದ ಏನು ಮಾಡುತ್ತಿದ್ದಾರೆ. ಎಸ್‌ಐಟಿಯವರು ಸ್ಥಳ ಮಹಜರು ಮಾಡಬೇಕು ಎಂದು ಹೇಳುತ್ತಾರೆ. ಆರೋಪಿ ಸತೀಶ್ ಬಾಬಣ್ಣ ಸಂತ್ರಸ್ತೆಯನ್ನು ಕರೆದೊಯ್ದ ಸ್ಥಳ, ಸಂತ್ರಸ್ತೆಯನ್ನ ಕೂಡಿಹಾಕಿದ ಸ್ಥಳ ಮಹಜರು ಮಾಡಬೇಕಂತಾರೆ. ಹಾಗಾದರೆ ಸ್ಥಳೀಯ ಪೊಲೀಸರು ಏನು ಮಾಡುತ್ತಾರೆ? ಸ್ಥಳೀಯ ಪೊಲೀಸರಿಂದ ಒಂದು ಸಲ ಸ್ಥಳ ಮಹಜರು, ಎಸ್‌ಐಟಿ ಒಂದು ಸಲ ಸ್ಥಳ ಮಹಜರು ಮಾಡಬೇಕಾ? ಎಸ್ಐಟಿ ಯಾವ ಕಾರಣಕ್ಕೆ ಪೊಲೀಸ್ ಕಸ್ಟಡಿಗೆ ಕೇಳಿತ್ತು ಎಂದು ರಿಮ್ಯಾಂಡ್ ಅರ್ಜಿಯನ್ನು ವಕೀಲ ಸಿ.ವಿ.ನಾಗೇಶ್ ಓದಿ ಹೇಳಿದರು. ಪೊಲೀಸರು ನೀಡಿದ್ದ ಕಾರಣಗಳನ್ನು ಇದೇ ವೇಳೆ ಪ್ರಶ್ನಿಸಿದರು.

ಸಂತ್ರಸ್ತೆಯಿಂದ‌ 164 ಹೇಳಿಕೆ‌ ದಾಖಲಿಸಬೇಕಿದೆ ಎಂದು ಎಸ್ಐಟಿ ಹೇಳಿದೆ. ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ಇಷ್ಟು ದಿನ ಏನು ಮಾಡುತ್ತಲಿದೆ? ಎಂದು ನಾಗೇಶ್‌ ಪ್ರಶ್ನೆ ಮಾಡಿದರು.

ಇಡೀ ಪ್ರಕರಣದ ಟೈಂ ಲೈನ್‌ ಹೇಳಿದ ಜಯ್ನಾ ಕೊಠಾರಿ

ಆಗ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ಎಚ್‌.ಡಿ. ರೇವಣ್ಣಗೆ ಜಾಮೀನು ನೀಡಲು ಎಸ್‌ಪಿಪಿಯಿಂದ ಆಕ್ಷೇಪವಿದೆ. ಸಂತ್ರಸ್ತೆ ಪುತ್ರನಿಗೆ ಮೊದಲು ಸಂತ್ರಸ್ತೆ ವಿಡಿಯೊ ಬಗ್ಗೆ ತಿಳಿಯುತ್ತದೆ. ಸಾಕಷ್ಟು ಮಹಿಳೆಯರೊಂದಿಗಿರುವ ಅಶ್ಲೀಲ ವಿಡಿಯೊಗಳೂ ಕಾಣುತ್ತದೆ. ಅದಾದ ಬಳಿಕ ‌ಮಹಿಳಾ ‌ಆಯೋಗಕ್ಕೆ ದೂರು ನೀಡುತ್ತಾರೆ. ಹೊಳೆನರಸೀಪುರ ಠಾಣೆಯಲ್ಲಿ ಒಂದು ‌ಪ್ರಕರಣ ದಾಖಲಾಗುತ್ತದೆ. ಬಳಿಕ ಸರ್ಕಾರದಿಂದ ಎಸ್‌ಐಟಿ ರಚನೆಯಾಗಿದೆ ಎಂದು ಇಡೀ ಪ್ರಕರಣದ ಟೈಂ ಲೈನ್‌ ಅನ್ನು ಹೇಳಿದರು.

ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ

ಸಂತ್ರಸ್ತೆ ಆರೋಪಿ ಮನೆಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದರು. ಏಪ್ರಿಲ್ 28ರ ರಾತ್ರಿ ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಅದಾದ ಬಳಿಕ ಆಕೆ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ಪುತ್ರ ಹಲವರಿಗೆ ಕರೆ ಮಾಡಿ ತಾಯಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಬಳಿಕ‌ ತನ್ನ ತಾಯಿ‌ ‌ತೊಂದರೆಯಲ್ಲಿದ್ದಾಳೆಂದು ದೂರು ನೀಡಿದ್ದಾರೆ. ಅಶ್ಲೀಲ‌ ವಿಡಿಯೋಗಳಲ್ಲಿ ಸಂತ್ರಸ್ತೆ ಗುರುತು ಸಿಗುವಂತೆ ರೆಕಾರ್ಡ್ ಆಗಿದೆ. ಬಳಿಕ ತನಿಖೆ ಕೈಗೊಂಡ ಬಳಿಕ ಎಸ್‌ಐಟಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿ 40 ಕಿ.ಮೀ. ದೂರದಲ್ಲಿ ಕೂಡಿ ಹಾಕಲಾಗಿತ್ತು. ಸಂತ್ರಸ್ತೆಯನ್ನು ಕೂಡಿಹಾಕಿದ್ದ ಸ್ಥಳ ಆರೋಪಿ ಸಂಬಂಧಿಗೆ ಸೇರಿದ್ದಾಗಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು

ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲೂ ರೇವಣ್ಣ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಕಿಡ್ನ್ಯಾಪ್, ಒತ್ತೆಯಾಳಾಗಿಟ್ಟುಕೊಂಡ ಪ್ರಕರಣವಾಗಿದೆ. ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ಹೇಳಿರೋದು ಸತ್ಯ. ಎಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 364(a) ಅನ್ವಯವಾಗುತ್ತದೆ. 364(a) ಅಡಿಯಲ್ಲಿ ದಾಖಲಾಗಿರೋ ಕೆಲ‌ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹೀಗಾಗಿ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ತೀವ್ರತೆಯೂ ಜಾಸ್ತಿ ಇದೆ. ಆರೋಪಿಯ ತಪ್ಪು ಕಂಡುಬಂದಾಗ ಬಹುತೇಕ ಈ ಸೆಕ್ಷನ್‌ಗಳನ್ನೇ ಹಾಕಲಾಗುತ್ತದೆ ಎಂದು ಜಯಾ ಕೊಠಾರಿ ಹೇಳಿದರು.

ರೇವಣ್ಣ ನಾಪತ್ತೆಯಾದರೆ? ಸಂತ್ರಸ್ತೆಯರ ಕಿಡ್ನ್ಯಾಪ್‌ ಮಾಡಿಸಿದರೆ?

ಆರೋಪಿಯ ಪುತ್ರ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದಾರೆ. ಆರೋಪಿ ಪುತ್ರನ ಪತ್ತೆಗೆ ಬ್ಲೂಕಾರ್ನರ್ ನೋಟಿಸ್ ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಆರೋಪಿ ಪುತ್ರ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಈವರೆಗೆ ವಾಪಸ್ ಕೂಡ ಬಂದಿಲ್ಲ. ಈ ಆರೋಪಿಯೂ ನಾಪತ್ತೆಯಾದರೆ ಏನು ಮಾಡುವುದು? ಅದಲ್ಲದೆ, ಆರೋಪಿ‌ ರೇವಣ್ಣ ತುಂಬಾನೇ ಪ್ರಭಾವಿಯಾಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ಹಾಳು‌ ಮಾಡುತ್ತಾರೆ. ಜಾಮೀನು‌ ನೀಡಿದರೆ ಸಂತ್ರಸ್ತೆ ಜೀವಕ್ಕೆ ಯಾರು ಗ್ಯಾರಂಟಿ ನೀಡ್ತಾರೆ? ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನ್ಯಾಪ್‌ ಮಾಡಬಹುದು ಎಂದು ಜಯಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ತನ್ನ ತಾಯಿಯನ್ನು ಕಾಪಾಡುವಂತೆ ಸಂತ್ರಸ್ತೆ ಮಗ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ನೀಡಬಾರದು. ಎಚ್.ಡಿ.ರೇವಣ್ಣ ವಿರುದ್ದ ಎರುಡು ಎಫ್ಐಆರ್ ದಾಖಲಾಗಿವೆ. ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯವೆಸಗಿರುವ ಆರೋಪವೂ ಇದೆ. ಲೈಂಗಿಕ‌ ದೌರ್ಜನ್ಯವೆಸಗುವ ಆರೋಪಿಗಳಿಗೆ ಸಂದೇಶ ರವಾನೆಯಾಗಬೇಕು. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು. ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಯಾ ಕೊಠಾರಿ ಮನವಿ ಮಾಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೋಮವಾರ ವರದಿ ಸಲ್ಲಿಸಲು ಸೂಚಿಸಿದ್ದಲ್ಲದೆ, ಮತ್ತೆ ಸಮಯ ವ್ಯರ್ಥ ಮಾಡದಂತೆ ಸೂಚಿಸಿ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ರಾಜಕೀಯ

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಸಂಬಂಧ ಇಲ್ಲ ಅಂದ್ಮೇಲೆ ಡಿಕೆಶಿ ಹೆಸರು ಏಕೆ ಬಂತು?‌ ಮಾಡೋದೆಲ್ಲ ಮಾಡಿ, ನನಗೆ ಒರೆಸಲು ಹೊರಟಿದ್ದೀರಾ? ಇದಕ್ಕೆಲ್ಲಾ ಸಿದ್ದರಾಮಯ್ಯ ಮಂತ್ರಿ ಮಂಡಲ‌ವೇ ಕಾರಣ. ಮಂತ್ರಿ ಮಂಡಲದಲ್ಲಿ ತಾವೂ ಇದ್ದೀರಿ ಕೃಷ್ಣಬೈರೇಗೌಡರೇ. ನಿಮ್ಮಲ್ಲಿ ಅಲ್ಪ ಸ್ವಲ್ಪ ಇದ್ದಿದ್ದರೆ ಇದೆನ್ನೆಲ್ಲ ಮಾಡೋಕೆ‌ ಬಿಡುತ್ತಿರಲಿಲ್ಲ. ನಮಗೆ ವಿಷ ಹಾಕಿದ್ದಾರೆ ಅಂತ‌ ಕೃಷ್ಣಬೈರೇಗೌಡ ಹೇಳಿದ್ದಾರೆ. ಅವರು ಹಾಸನಾಂಬೆ ಮುಂದೆ ಬರಲಿ ಎಂಬುದಾಗಿ ಎಚ್‌‌ಡಿಕೆ ಸವಾಲು ಹಾಕಿದರು. ಸರ್ಕಾರವನ್ನು ಹಾಸನಾಂಬೆ ಕೆಲವೇ ದಿನಗಳಲ್ಲಿ ಧ್ವಂಸ ಮಾಡಳಿದ್ದಾಳೆ ಎಂದು ಎಚ್.ಡಿ. ಕುಮಾರಸ್ವಾಮಿ ಶಾಪ ಹಾಕಿದ್ದಾರೆ.

VISTARANEWS.COM


on

Prajwal Revanna Case Hasanambe is going to destroy this government HD Kumaraswamy curse
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮಾತಿನ ಸಮರಕ್ಕೆ ಬಿದ್ದಿದ್ದಾರೆ. ಇದರ ಜತೆಗೆ ಎಚ್‌ಡಿಕೆ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. ಅಲ್ಲದೆ, ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ ಎಂದು ಎಚ್‌ಡಿಕೆ ಶಾಪ ಹಾಕಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಲೈಂಗಿಕ ಹಗರಣ ಆಗಿರುವುದನ್ನು ನಾನು ಒಪ್ಪುತ್ತೇನೆ. ಆದರೆ, ಕೃಷ್ಣಬೈರೇಗೌಡ ಸಂತ್ರಸ್ತರಿಗೆ ನ್ಯಾಯ ಹರಣ ಅಂದಿದ್ದಾರೆ. ನಾವು ಯಾರಿಗೆ ನ್ಯಾಯ ಹರಣ ಮಾಡಿದ್ದೇವೆ? ನೀವು ಸಂತ್ರಸ್ತರಿಗೆ ಯಾವ ನ್ಯಾಯ ಕೊಡಿಸಿದ್ದೀರಿ ಹೇಳಿ? ಹೆಣ್ಣು ಮಕ್ಕಳನ್ನು ಹೆದರಿಸಿ ಹೇಳಿಕೆ ಪಡೆಯಲು ಸಜ್ಜಾಗಿದ್ದಾರೆ. ತನಿಖೆ ಸರಿಯಾಗಿ ನಡೆದಿದ್ದರೆ ಇನ್ನೂ ಎಲ್ಲೆಲ್ಲಿಗೋ ಹೋಗಲಿದೆ. ಕೇಸ್‌ನಲ್ಲಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ ಅಂತಾರೆ. ಪೆನ್‌ಡ್ರೈವ್‌ ಎ.ಡಿ. ಕುಮಾರಸ್ವಾಮಿ ಜೇಬಲ್ಲಿದೆ ಅಂತಾರೆ. ನನ್ನ ಬಳಿ ಇರೋದು ಅಶ್ಲೀಲ ಪೆನ್‌ಡ್ರೈವ್‌ ಅಲ್ಲ. ನನ್ನ ಬಳಿಯಿರುವ ಪೆನ್‌ಡ್ರೈವ್‌ ಕೂಡ ಬಿಡುಗಡೆ ಮಾಡುತ್ತೇನೆ. ಒಂದು ಪೆನ್‌ಡ್ರೈವ್‌ ಇಟ್ಟುಕೊಂಡು ರಸ್ತೆಯಲ್ಲಿ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಕಿಡಿಕಾರಿದರು.

ಕಾರ್ತಿಕ್ ಗೌಡ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿದೆ. ಎಸ್‌ಐಟಿ ಇನ್ನೂ ಯಾಕೆ ಕಾರ್ತಿಕ್ ಗೌಡನನ್ನು ಬಂಧನ ಮಾಡಿಲ್ಲ? ರಾಮನಗರ ಶಾಸಕರ ತುಣುಕುವೊಂದನ್ನು ಬಿಟ್ಟಿದ್ದರು. ಶಾಸಕರ ತುಣುಕನ್ನು ಬಿಟ್ಟರು ಎಂದು ಮೂವರನ್ನು ಬಂಧಿಸಿದ್ದಾರೆ. ಈ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾಕಪ್ಪ ಏನೂ ಆಗಿಲ್ಲ? ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ವಕೀಲ ದೇವರಾಜೇಗೌಡ ಮಾತಾಡಿದ್ದಾರೆ. ಸಂಬಂಧ ಇಲ್ಲ ಅಂದ್ಮೇಲೆ ಡಿಕೆಶಿ ಹೆಸರು ಏಕೆ ಬಂತು?‌ ಮಾಡೋದೆಲ್ಲ ಮಾಡಿ, ನನಗೆ ಒರೆಸಲು ಹೊರಟಿದ್ದೀರಾ? ಇದಕ್ಕೆಲ್ಲಾ ಸಿದ್ದರಾಮಯ್ಯ ಮಂತ್ರಿ ಮಂಡಲ‌ವೇ ಕಾರಣ. ಮಂತ್ರಿ ಮಂಡಲದಲ್ಲಿ ತಾವೂ ಇದ್ದೀರಿ ಕೃಷ್ಣಬೈರೇಗೌಡರೇ. ನಿಮ್ಮಲ್ಲಿ ಅಲ್ಪ ಸ್ವಲ್ಪ ಇದ್ದಿದ್ದರೆ ಇದೆನ್ನೆಲ್ಲ ಮಾಡೋಕೆ‌ ಬಿಡುತ್ತಿರಲಿಲ್ಲ. ನಮಗೆ ವಿಷ ಹಾಕಿದ್ದಾರೆ ಅಂತ‌ ಕೃಷ್ಣಬೈರೇಗೌಡ ಹೇಳಿದ್ದಾರೆ. ಅವರು ಹಾಸನಾಂಬೆ ಮುಂದೆ ಬರಲಿ ಎಂಬುದಾಗಿ ಎಚ್‌‌ಡಿಕೆ ಸವಾಲು ಹಾಕಿದರು. ಸರ್ಕಾರವನ್ನು ಹಾಸನಾಂಬೆ ಕೆಲವೇ ದಿನಗಳಲ್ಲಿ ಧ್ವಂಸ ಮಾಡಳಿದ್ದಾಳೆ ಎಂದು ಎಚ್.ಡಿ. ಕುಮಾರಸ್ವಾಮಿ ಶಾಪ ಹಾಕಿದರು.

ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ನೀಡಲು ಆಗ್ರಹ

ಪ್ರಕರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಸಿಬಿಐ ತನಿಖೆಗೆ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ ಮಾಡಿದ್ದೇನೆ. ಇದನ್ನು ರಾಜ್ಯಪಾಲರು ಅಥವಾ ಕೇಂದ್ರ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ನ್ಯಾಯಯುತವಾಗಿ ಈ ಪ್ರಕರಣದ ತನಿಖೆ ನಡೆಯಬೇಕು. ನಮ್ಮ ವಕೀಲರ ಮೂಲಕ ನಾವು ವಾದ ಮಾಡುತ್ತೇವೆ. ಎಲ್ಲವನ್ನೂ ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

4 ಗೋಡೆ ಮಧ್ಯೆ ಇರುವುದನ್ನು ವಿಶ್ವಕ್ಕೆ ಹಬ್ಬಿಸಿರುವುದು ನೀವು

ಮಾನ ಹರಣ, ಶೀಲ ಹರಣ ಎಂದೆಲ್ಲ ದೊಡ್ಡದಾಗಿ ಹೇಳಿದ್ದೀರಿ. ಪ್ರಜ್ವಲ್ ಕೇಸ್‌ನಲ್ಲಿ ಸರ್ಕಾರದ ನಡಾವಳಿಗಳು ಏನು ಇದೆಯೋ ಗೊತ್ತಾ? ಹಾಸನದಲ್ಲಿ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿ ಆದೇಶ ಮಾಡಿದ್ದೀರಿ. ಮಹಿಳೆಯರ ಮಾನಹರಣ ಆಗಿದ್ದು ನಾಲ್ಕು ಗೋಡೆ ಮಧ್ಯೆ ಇತ್ತು. ಅದನ್ನು ವಿಶ್ವಕ್ಕೆ ಹಬ್ಬುವಂತೆ ಮಾಡಿದ್ದು ಯಾರಪ್ಪ ಕೃಷ್ಣಬೈರೇಗೌಡ? 4 ಗೋಡೆ ಮಧ್ಯೆ ಇರುವುದನ್ನು ವಿಶ್ವಕ್ಕೆ ಹಬ್ಬಿಸಿರುವುದು ನೀವು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಲೈಂಗಿಕ ದೌರ್ಜನ್ಯವೆಸಗಿದವರನ್ನು ಬಚಾವ್‌ ಮಾಡಲು ಯತ್ನ ಅಂದಿದ್ದೀರಿ. ನಿಮ್ಮ ಸರ್ಕಾರ ಏನು ಮಾಡುತ್ತಿದೆಯಪ್ಪಾ? ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರೆ ನೀವು ಏನು ಮಾಡುತ್ತಿದ್ದೀರಿ? ನಿಮ್ಮ ಸರ್ಕಾರದಲ್ಲಿರುವುದು ಘಟಾನುಘಟಿ ನಾಯಕರಲ್ಲವಾ? ನಿಮ್ಮ ಮುಖ್ಯಮಂತ್ರಿ ಲಾಯರ್ ಆಗಿದ್ದಾರೆ. ಹೊಳೆನರಸೀಪುರ ಪ್ರಕರಣದಲ್ಲಿ ಬೇಲಬಲ್ ಸೆಕ್ಷನ್ ಹಾಕಿದ್ದೀರಿ. ನಂತರ ಎಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಸಂತ್ರಸ್ತೆ ಸರ್ಕಾರದ ಸುಪರ್ದಿಯಲ್ಲೇ ಇದ್ದಾರೆ. ಎಸ್‌ಐಟಿ ವಶದಲ್ಲಿದ್ದರೂ 5 ದಿನದಿಂದ ಏನು ಮಾಡುತ್ತಿದ್ದೀರಿ? ಸಂತ್ರಸ್ತೆ ಕುಟುಂಬಸ್ಥರನ್ನು ಕೂಡ ಕರೆತಂದಿದ್ದೀರಿ. ಬೇಲ್ ಕೊಡಿಸಲು ಹೋದ ಲಾಯರ್‌ರನ್ನು ಕೂಡ ವಶಕ್ಕೆ ಪಡೆದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪೆನ್‌ಡ್ರೈವ್ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಗೆ ಬರಲೇಬೇಕು. ಸತ್ಯ ಹೊರಬರಬೇಕೆಂದು ನಿಮಗಿಂದ ನಾನೇ ಹೆಚ್ಚಿನ ಧ್ವನಿ ಎತ್ತುತ್ತೇನೆ. ಡಿಕೆಶಿಯವರೇ ನಾನು ಡೈರೆಕ್ಟರೂ ಇದ್ದೇನೆ, ನಿರ್ಮಾಪಕ ಇದ್ದೇನೆ. ನಾನು ಎಂದಿಗೂ ಆ್ಯಕ್ಟ್ ಮಾಡಿಲ್ಲ. ಆದರೆ, ಆ್ಯಕ್ಟ್ ಮಾಡಿಸಿದ್ದೇನೆ. ನನ್ನನ್ನು ಕಥಾನಾಯಕನನ್ನಾಗಿ ಮಾಡಿದ್ದೀರಿ ಎಂದ ಕುಮಾರಸ್ವಾಮಿ ಆಕ್ರೋಶವನ್ನ ಹೊರಹಾಕಿದರು.

‘ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ’ ಎಂದು ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಈ ಮಾತನ್ನು ಹೇಳಿದ್ದಾರೆ. ಈ ಪ್ರಕರಣದ ಪ್ರಾಮುಖ್ಯತೆಯನ್ನು ಹಾಳು ಮಾಡುತ್ತಿರುವುದು ಯಾರು? ಚುನಾವಣೆಗೂ ಮುನ್ನ ಪೆನ್‌ಡ್ರೈವ್ ರಿಲೀಸ್ ಮಾಡಿದ್ದು ಯಾರಪ್ಪ? ದೇಶಾದ್ಯಂತ ಸುದ್ದಿಯಾಗುವಂತೆ ಮಾಡಿದವರು ಯಾರಪ್ಪ? ಪೆನ್‌ಡ್ರೈವ್ ಸಂಬಂಧ ಅಮಿತ್ ಶಾ ಅವರನ್ನು ಪ್ರಶ್ನಿಸಿದ್ರಲ್ಲಪ್ಪಾ? ಬಿಜೆಪಿ, ಜೆಡಿಎಸ್ ಮೈತ್ರಿಯ ಬಗ್ಗೆ ಪ್ರಶ್ನಿಸಿ ನಿಲುವು ಕೇಳಿದಿರಿ? ನಿಮಗೆ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಬೇಕಾಗಿಲ್ಲ. ನಿಮಗೆ ಬೇಕಾಗಿರುವುದು ಬಿಜೆಪಿ, ಜೆಡಿಎಸ್ ಪಕ್ಷದ ವಿಚಾರವಾಗಿದೆ. ಜೆಡಿಎಸ್ ಪಕ್ಷ ಯಾರ ದಯೆಯೂ ಇಲ್ಲ. ನಿಮ್ಮಂತೆ ನಾವು ಎಲ್ಲಿಯೂ ಹೋಗಿ ಕೇಳಿಕೊಂಡಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಪೆನ್‌ಡ್ರೈವ್ ಬಿಡುಗಡೆಯಿಂದ ಯಾರಿಗೆ ಅನ್ಯಾಯವಾಗಿದೆ ಗೊತ್ತಾ? ಕೃಷ್ಣ ಬೈರೇಗೌಡರೇ ನಿಮಗೆ ನಮಸ್ಕಾರ. ನೀವು ರಾಹುಲ್‌ರಂತೆ 400 ಎಂಬ ಸಂಖ್ಯೆಯನ್ನು ಹೇಳಿಲ್ಲ. ಭಾರಿ ಸಂಖ್ಯೆಯಲ್ಲಿ ಎಂಬ ಪದವನ್ನು ಬಳಕೆ ಮಾಡಿದ್ದೀರಿ. ಮೈಸೂರು ಕಾಂಗ್ರೆಸ್‌ ಅಭ್ಯರ್ಥಿ 2,900 ಎಂದು ಮಾತನಾಡಿದ್ದಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಮಾಧ್ಯಮಗಳ ಮೂಲಕ ಸರ್ಕಾರಕ್ಕೆ ಸಂದೇಶ ಕಳಿಸುವಂತಾಗಿದೆ. ನಿನ್ನೆ ಹಲವು ನಾಯಕರು ಒಕ್ಕಲಿಗ ‘ಕೈ’ ನಾಯಕರಿಂದ ಸುದ್ದಿಗೋಷ್ಠಿ ನಡೆಸಲಾಗಿದೆ. ನಾವು ದಾರಿ ತಪ್ಪಿಸುತ್ತಿದ್ದೇವೆ ಎಂಬಂತೆ ಮಾತನಾಡಿದ್ದಾರೆ. ಈ ಘಟನೆಗೆ ನಾನು ಜಾತಿಯ ರಕ್ಷಣೆ ಪಡೆಯುವುದಕ್ಕೆ ಹೋಗಲ್ಲ. ಪ್ರಜ್ವಲ್‌ ಕೇಸಲ್ಲಿ ನಾನು ಜಾತಿ ರಕ್ಷಣೆ ಪಡೆಯುವುದಕ್ಕೆ ಹೋಗಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಾನು ಒಕ್ಕಲಿಗ ನಾಯಕನೆಂದು ಎಲ್ಲೂ ಹೇಳಿಕೊಂಡಿಲ್ಲ. ಒಕ್ಕಲಿಗ ನಾಯಕತ್ವಕ್ಕಾಗಿ ನಾನು ಪೈಪೋಟಿಯನ್ನು ಮಾಡಿಲ್ಲ. ಏನೋ ಡಿ.ಕೆ. ಶಿವಕುಮಾರ್‌ ಜತೆ ಪೈಪೋಟಿ ಎಂದು ಹೇಳಿದ್ದಾರೆ. ನನ್ನ ವಿರುದ್ಧ 150 ಕೋಟಿ ರೂಪಾಯಿಯ ಹಗರಣದ ಆರೋಪ ಮಾಡಿದ್ದರು. ನನ್ನ ವಿರುದ್ಧ ಆರೋಪ ಬಂದಾಗಲೂ ನಾನು ಸದನದಲ್ಲೇ ಹೇಳಿದ್ದೆ. ಶಾಸಕರ ಸಂಖ್ಯಾಬಲವನ್ನು ಬಳಸಿಕೊಳ್ಳುವುದಿಲ್ಲ ಎಂದು ಹೇಳಿದ್ದೆ. ನಾನು ಏಕಾಂಗಿಯಾಗಿ ಹೋರಾಡುವುದಾಗಿ ಹೇಳಿದ್ದೆ. ನಾನು ಹಿಟ್ ಆ್ಯಂಡ್ ರನ್ ಮಾಡುವ ವ್ಯಕ್ತಿಯಲ್ಲ. ಆಗ ಎಲ್ಲರೂ ನನ್ನ ದಾಖಲೆಗಾಗಿ ಕಾಯುತ್ತಿದ್ದರು. ನಾನು ದಾಖಲೆ ಬಿಟ್ಟಾಗ ನನ್ನ ಮೇಲೆ ಒಕ್ಕಲಿಗರನ್ನು ಬಿಟ್ಟಿದ್ದರು. ನಾನು ಆ ದಿನವೂ ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ. ಈಗಲೂ ನಾನು ಏಕಾಂಗಿಯಾಗಿಯೇ ಹೋರಾಟ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ಹಾಸನ ರಾಜಕೀಯದಲ್ಲಿ ಇನ್ವಾಲ್ವ್ ಆಗಿಲ್ಲ

ಪ್ರಜ್ವಲ್ ಪ್ರಕರಣದಲ್ಲಿ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಈ ನೆಲದ ಕಾನೂನಿಗೆ ಪ್ರತಿಯೊಬ್ಬರೂ ತಲೆಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ನನ್ನ ಹೇಳಿಕೆಯ ಬಗ್ಗೆ ಡಿ.ಕೆ. ಶಿವಕುಮಾರ್‌ ಅವರು ಕೂಡ ಮಾತನಾಡಿದ್ದಾರೆ. ರೇವಣ್ಣ ಕುಟುಂಬ ಬೇರೆ, ಎಚ್‌ಡಿಕೆ ಕುಟುಂಬ ಬೇರೆ ಅಂದಿದ್ದಾರೆ. ನಾನು ಹೇಳಿಕೆ ನೀಡಿದಂತೆ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ದೇವೇಗೌಡರ ಮಕ್ಕಳು ಎಲ್ಲರೂ ಬೇರೆ ಬೇರೆಯಾಗಿ ಇದ್ದೇವೆ. ನಾನು ಎಂದಿಗೂ ಹಾಸನ ರಾಜಕೀಯದಲ್ಲಿ ಇನ್ವಾಲ್ವ್ ಆಗಿಲ್ಲ. ಒಮ್ಮೆ ಮಾತ್ರ ಹಾಸನ ಚುನಾವಣೆ ವೇಳೆ ಇನ್ವಾಲ್ವ್ ಆಗಿದ್ದೆ. ನಮ್ಮ ಕಾರ್ಯಕರ್ತನಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಆ ದಿನವೂ ನನ್ನ ಮೇಲೆಯೇ ಗೂಬೆ ಕೂರಿಸಿದ್ದರು. ರೇವಣ್ಣ ಕುಟುಂಬ ಮುಗಿಸಲು ಕುಮಾರಣ್ಣ ಹೊರಟಿದ್ದಾರೆಂದಿದ್ದಾರೆ ಎಂದು ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಪ್ರಮುಖ ಸುದ್ದಿ

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

Racist Comment: ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

VISTARANEWS.COM


on

Racial Comments
Koo

ನವದೆಹಲಿ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಗುರುವಾರ ಸ್ಯಾಮ್ ಪಿತ್ರೋಡಾ (Sam Pitroda) ಅವರ “ಜನಾಂಗೀಯ” ಹೇಳಿಕೆಯನ್ನು (Racist Comment) ಸಮರ್ಥಿಸಿಕೊಂಡಿದ್ದು, ಭಾರತದಲ್ಲೂ ಕಪ್ಪು ಚರ್ಮದವರನ್ನು (ನಿಗ್ರೊಗಳು) ಹೋಲುವ ಜನರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಇನ್ನಷ್ಟು ತುಪ್ಪ ಸುರಿದಿದೆ. ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಎಂಬ ಸ್ಯಾಮ್​ ಪಿತ್ರೊಡಾ ಹೇಳಿಕೆಯು ಬಿಜೆಪಿಯಿಂದ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಚರ್ಮದ ಬಣ್ಣವನ್ನು ಆಧರಿಸಿ ಭಾರತೀಯರಿಗೆ ಅಗೌರವ ತೋರಿದೆ ಎಂಬ ಆರೋಪ ಮಾಡಿತ್ತು. ಅದರ ಬೆನ್ನಲ್ಲೇ ಚೌಧರಿ ತನ್ನ ಹೇಳಿಕೆ ನೀಡಿದ್ದಾರೆ.

“ನಮ್ಮಲ್ಲಿ ಪ್ರೋಟೋ ಆಸ್ಟ್ರಲಾಯ್ಡ್ಗಳು, ಮಂಗೋಲಾಯ್ಡ್ಗಳು ಮತ್ತು ನೆಗ್ರಿಟೊ ವರ್ಗದ ಜನರಿದ್ದಾರೆ. ನಮ್ಮ ದೇಶದ ಜನರ ಪ್ರಾದೇಶಿಕ ಲಕ್ಷಣಗಳು ವಿಭಿನ್ನವಾಗಿವೆ. ಪಿತ್ರೋಡಾ ಅವರು ನೀಡಿರುವುದು ವೈಯಕ್ತಿಕ ಅಭಿಪ್ರಾಯ. ಅದರ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ” ಎಂದು ಚೌಧರಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಚೌಧರಿ ಹೇಳಿಕೆಗೆ ಕಾಂಗ್ರೆಸ್ ಇನ್ನೂ ಪ್ರತಿಕ್ರಿಯಿಸಿಲ್ಲ.

ದಿ ಸ್ಟೇಟ್ಸ್​ಮನ್​​ಗೆ ಪಿತ್ರೋಡಾ ನೀಡಿದ್ದ ಸಂದರ್ಶನದ ಆಯ್ದ ಭಾಗವನ್ನು ಬುಧವಾರ ಪ್ರಸಾರ ಮಾಡಲಾಗಿತ್ತು. ಅದರಲ್ಲಿ ಅವರು ಭಾರತವನ್ನು ವೈವಿಧ್ಯಮಯ ದೇಶ. ಪೂರ್ವದ ಜನರು ಚೀನೀಯರಂತೆ ಕಾಣುತ್ತಾರೆ. ಉತ್ತರದ ಜನರು ಬಿಳಿಯರಂತೆ ಕಾಣುತ್ತಾರೆ ಮತ್ತು ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು. ಪಿತ್ರೊಡಾ ಅವರ ವಿವಾದಾತ್ಮಕ ಹೇಳಿಕೆಯ ನಂತರ ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಮದ ಬಣ್ಣದ ಆಧಾರದ ಮೇಲೆ ಅಗೌರವವನ್ನು ಸಹಿಸುವುದಿಲ್ಲ ಎಂದು ಟೀಕಿಸಿದ್ದರು.

ಈ ಹೇಳಿಕೆಯ ಕೆಲವೇ ಗಂಟೆಗಳ ನಂತರ ಪಿತ್ರೋಡಾ ಅವರು ಕಾಂಗ್ರೆಸ್ ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಿತ್ರೋಡಾ ಅವರ ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

Continue Reading
Advertisement
murder case kalaburagi
ಕಲಬುರಗಿ5 mins ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

gold rate today
ಚಿನ್ನದ ದರ18 mins ago

Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

Yogi Adityanath
ದೇಶ18 mins ago

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

mani shankar iyer
ದೇಶ22 mins ago

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ICMR Dietary Guidelines
ಆರೋಗ್ಯ36 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು39 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ1 hour ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ1 hour ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ1 hour ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ17 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ24 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ24 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌