Chaitra Kundapura : ಗೋವಿಂದ ಪೂಜಾರಿಗೆ ಇದೆ ಹೈಲೆವೆಲ್‌ ಸಂಪರ್ಕ; ಆದರೂ ಚೈತ್ರಾ ಹಿಂದೆ ಬಿದ್ದಿದ್ದೇಕೆ? TRAP ಮಾಡಿದ್ರಾ? - Vistara News

ಉಡುಪಿ

Chaitra Kundapura : ಗೋವಿಂದ ಪೂಜಾರಿಗೆ ಇದೆ ಹೈಲೆವೆಲ್‌ ಸಂಪರ್ಕ; ಆದರೂ ಚೈತ್ರಾ ಹಿಂದೆ ಬಿದ್ದಿದ್ದೇಕೆ? TRAP ಮಾಡಿದ್ರಾ?

Chaitra Kundapura : ಗೋವಿಂದ ಪೂಜಾರಿ ರಾಜಕೀಯವಾಗಿ ಅಮಾಯಕರಲ್ಲ. ಅವರಿಗೆ ಬಿಜೆಪಿ ನಾಯಕರ ಜತೆ ಸಂಪರ್ಕ ಇತ್ತು. ಹಾಗಿದ್ದರೂ ಅವರು ಟಿಕೆಟ್‌ಗಾಗಿ ಚೈತ್ರಾ ಕುಂದಾಪುರ ಬೆನ್ನು ಬಿದ್ದಿದ್ದು ಯಾಕೆ?

VISTARANEWS.COM


on

govinda poojari with amit shah
ಕಾರ್ಯಕ್ರಮವೊಂದಲ್ಲಿ ಅಮಿತ್‌ ಶಾ ಅವರನ್ನು ಸ್ವಾಗರಿಸುತ್ತಿರುವ ಗೋವಿಂದ ಪೂಜಾರಿ. ಉನ್ನತ ಸಂಪರ್ಕ, ಪಕ್ಷದಲ್ಲಿ ಸಕ್ರಿಯರಾಗಿಲ್ಲದೆ ಇದ್ದರೆ ಇಂಥ ಅವಕಾಶ ಸಿಗುತ್ತದಾ?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೈಂದೂರಿನ ಬಿಜೆಪಿ ಟಿಕೆಟ್‌ಗಾಗಿ (Bynduru BJP ticket) ಐದು ಕೋಟಿ ರೂ. ಕಳೆದುಕೊಂಡಿರುವ (Five crore Fraud case) ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಸಂಪರ್ಕಗಳಿವೆ. ಆದರೂ ಅವರು ಅದೆಲ್ಲವನ್ನೂ ಬಿಟ್ಟು ಭಾಷಣ ಮಾಡುತ್ತಾ ಬೆಂಕಿಯುಗುಳುತ್ತಾ ಕಾಲ ಕಳೆಯುತ್ತಿದ್ದ ಚೈತ್ರಾ ಕುಂದಾಪುರ (Chaitra Kundapura) ಬೆನ್ನು ಬಿದ್ದಿದ್ದೇಕೆ? ಇವರೆಲ್ಲರನ್ನೂ ಮೀರಿಸಿ ಆಕೆಯೇ ತನಗೆ ಟಿಕೆಟ್‌ ಕೊಡಿಸಬಲ್ಲಳು ಎಂದು ಅವರಿಗೆ ಅನಿಸಿದ್ದು ಯಾಕೆ? ಎನ್ನುವ ದೊಡ್ಡ ಪ್ರಶ್ನೆಯೊಂದು ಈಗ ಎದ್ದು ನಿಂತಿದೆ. ಸಿಸಿಬಿ ಕೂಡಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಗೋವಿಂದ ಪೂಜಾರಿಯನ್ನು ಜಾಲಾಡಲು ಸಿದ್ಧವಾಗುತ್ತಿದೆ.

ನಾನೊಬ್ಬ ಉದ್ಯಮಿ, ನನಗೆ ರಾಜಕೀಯದ ಗಂಧ ಗಾಳಿ ಗೊತ್ತಿಲ್ಲ ಎನ್ನುತ್ತಿದ್ದ ಗೋವಿಂದ ಪೂಜಾರಿ ಅವರಿಗೆ ಯಾವ್ಯಾವ ರಾಜಕಾರಣಿಗಳ ಜತೆ ಆತ್ಮೀಯ ಒಡನಾಟ ಇತ್ತು ಎನ್ನುವುದನ್ನು ಈಗ ಸಿಸಿಬಿ ಮಾಹಿತಿ ಕಲೆ ಹಾಕಿದೆ. ಟಿಕೆಟ್‌ ಬೇಕೇ ಬೇಕು ಎಂದರೆ ಬಿಜೆಪಿಯ ಉನ್ನತ ನಾಯಕರ ಜತೆ ಸಂಪರ್ಕ ಸಾಧಿಸುವಷ್ಟು ಶಕ್ತಿ ಇದ್ದ ಗೋವಿಂದ ಪೂಜಾರಿ ಚೈತ್ರಾ ಕುಂದಾಪುರಳ ಬಳಿ ಟಿಕೆಟ್‌ ಭಿಕ್ಷೆ ಕೇಳಿದ್ದೇಕೆ? ಆಕೆ ಕೇಳಿದಂತೆ ಕೇಳಿದಂತೆ ಹಣ ಕೊಟ್ಟಿದ್ದು ಯಾಕೆ ಎನ್ನುವುದನ್ನು ಬೆನ್ನಟ್ಟಿ ಹೋದಾಗ ಗೋವಿಂದ ಪೂಜಾರಿ ಅವರ ನಡೆಗಳ ಮೇಲೆಯೇ ಸಿಸಿಬಿಗೆ ಅನುಮಾನ ಮೂಡಲು ಶುರುವಾಗಿದೆ.

Govinda Poojari with Nalin kumar kateel and CT Ravi
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಸಿ.ಟಿ ರವಿ ಜತೆ

ಒಂದು ಕಡೆ ಗೋವಿಂದ ಪೂಜಾರಿ ಅವರು ಎಲ್ಲಾ ಹಣವನ್ನು ನಗದು ರೂಪದಲ್ಲೇ ನೀಡಿದ್ದಾರೆ. ಈ ಬಗ್ಗೆ ಫೋನ್‌ ಕಾಲ್‌ಗಳು, ಕೆಲವೊಂದು ಚಿತ್ರಗಳು ಬಿಟ್ಟರೆ ಬೇರೆ ಯಾವ ದಾಖಲೆಗಳೂ ಇಲ್ಲ. ಇನ್ನೊಂದು ಕಡೆಯಲ್ಲಿ ಚೈತ್ರಾ ಆಡಿಸಿದ ಬೊಂಬೆಯಂತೆ ಆಕೆ ಹೇಳಿದ್ದೆಲ್ಲವನ್ನು ನಂಬಿದ್ದಾರೆ. ಹಾಗಿದ್ದರೆ ಆಕೆ ನಂಬುವಂತೆ ಮಾಡಿದ್ದು ಯಾವುದು ಎನ್ನುವ ಪ್ರಶ್ನೆಯೊಂದಿಗೆ ಸಿಸಿಬಿ ವಿಚಾರಣೆಗೆ ರೆಡಿಯಾಗಿದೆ.

govinda poojari with Kalladka Prabhakar Bhat
ಆರೆಸ್ಸೆಸ್‌ನ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್‌ ಜತೆ

ಗೋವಿಂದ ಪೂಜಾರಿ ಅವರು ಬಿಜೆಪಿಯ ಸ್ಥಳೀಯ ನಾಯಕರಿಂದ ಹಿಡಿದು ರಾಷ್ಟ್ರೀಯ ನಾಯಕರವರೆಗೆ ಉತ್ತಮ ಒಡನಾಟ ಹೊಂದಿದ್ದರು. ಈಗಾಗಲೇ ಪಕ್ಷದಲ್ಲಿ ಕೆಲಸ ಮಾಡಿದ್ದ ಅವರಿಗೆ ಮನಸು ಮಾಡಿದ್ದರೆ ದೊಡ್ಡ ನಾಯಕರನ್ನೇ ನೇರವಾಗಿ ಸಂಪರ್ಕಿಸುವ ವ್ಯವಸ್ಥೆಗಳು ಇದ್ದವು. ಯಾಕೆಂದರೆ ಅವರು ಸಂಘ ಪರಿವಾರ ಮತ್ತು ಬಿಜೆಪಿಯಲ್ಲಿ ದಾನಿಯಾಗಿ ಆಗಲೇ ಗುರುತಿಸಿಕೊಂಡಿದ್ದರು.

Govinda poojari with Eshwarappa and Pralhad Joshi
ಈಶ್ವರಪ್ಪ ಮತ್ತು ಪ್ರಲ್ಹಾದ್‌ ಜೋಶಿ ಜತೆ

ಇದನ್ನೂ ಓದಿ: Chaitra Kundapura : ವಂಚನೆ ಕಥೆ ಅತ್ಲಾಗಿರಲಿ, ಕಡುಬಡವ ಗೋವಿಂದ ಪೂಜಾರಿ ಮಹಾಸಾಧಕನಾದ Motivational ಕಥೆ ಕೇಳಿ

ನನಗೆ ರಾಜಕೀಯ ಗೊತ್ತಿಲ್ಲ ಎನ್ನುವ ಗೋವಿಂದ ಪೂಜಾರಿ ಅವರಿಗೆ ಯಾರೊಂದಿಗೆಲ್ಲಾ ಸಂಪರ್ಕ ಇತ್ತು ಎನ್ನುವ ಪಟ್ಟಿ ನೋಡಿದರೆ ನೀವೇ ಬೆಚ್ಚಿಬೀಳುತ್ತೀರಿ.

Govinda poojari with Jagadish karant
ಹಿಂದೂ ಜಾಗರಣ ವೇದಿಕೆ ಹಿರಯ ನಾಯಕ ಜಗದೀಶ್‌ ಕಾರಂತ್‌ ಜತೆ

ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರಿಂದ ಹಿಡಿದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಮಾಜಿ ಸಚಿವ ಸುನೀಲ್ ಕುಮಾರ್, ಕೆ.ಎಸ್‌ ಈಶ್ವರಪ್ಪ ಅವರ ಪರಿಚಯ ಅವರಿಗಿತ್ತು.

Govinda poojari with BJP leaders
ಬಿಜೆಪಿ ನಾಯಕರಾದ ಸುನಿಲ್‌ ಕುಮಾರ್‌, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವೇದವ್ಯಾಸ ಕಾಮತ್‌, ಅರವಿಂದ ಲಿಂಬಾವಳಿ, ಬಿ.ವೈ ರಾಘವೇಂದ್ರ ಮತ್ತು ವಿನಯ್‌ ಗುರೂಜಿ ಜತೆ ಗೋವಿಂದ ಪೂಜಾರಿ

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಸಿ.ಟಿ.‌ರವಿ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಕಲ್ಲಡ್ಕ ಪ್ರಭಾಕರ್ ಭಟ್, ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ ಅವರ ಜತೆಗೆ ಸಂಪರ್ಕವಿತ್ತು. ವಿನಯ್ ಗುರೂಜಿ ಜೊತೆ ಗೋವಿಂದ ಬಾಬು ಪೂಜಾರಿ ಗುರುತಿಸಿಕೊಂಡಿದ್ದಾರೆ. ಇದಲ್ಲದೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ಗೋವಿಂದ ಪೂಜಾರಿ ಅವರು ತಮ್ಮ ಪರಮಾಪ್ತರು ಎಂದು ಹೇಳಿಕೊಂಡಿದ್ದಾರೆ. ಗೋವಿಂದ ಪೂಜಾರಿ ಅವರು ತಮ್ಮ ದೂರಿನ ಪ್ರತಿಯನ್ನು ಮೊದಲು ಓದಲು ಕೊಟ್ಟಿದ್ದೇ ಚಕ್ರವರ್ತಿ ಸೂಲಿಬೆಲೆಯವರಿಗೆ. ಹಾಗಿದ್ದರೂ ಅವರನ್ನೆಲ್ಲ ಬಿಟ್ಟು ಚೈತ್ರಾಳ ಮೇಲೆ ನಂಬಿಕೆ ಇಟ್ಟಿದ್ದು ಯಾಕೆ ಎನ್ನುವುದು ಸಿಸಿಬಿಯ ತನಿಖೆಯ ಮೂಲ.

govinda poojari with Yashpal suvarna
ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಜತೆ ಆತ್ಮೀಯತೆ

ಇದನ್ನೂ ಓದಿ : Chaitra Kundapura : ಚೈತ್ರಾ ಕುಂದಾಪುರ; ಯಾರಿವಳು ಫೈರ್‌ಬ್ರಾಂಡ್‌ ಹುಡುಗಿ?, ಆಕೆ ಟಿವಿ ನಿರೂಪಕಿ, ಉಪನ್ಯಾಸಕಿ ಆಗಿದ್ದಳು!

ಇಷ್ಟೆಲ್ಲ ಹೈಲೆವೆಲ್ ಕಾಂಟ್ಯಾಕ್ಟ್ ಇದ್ರೂ ಗೋವಿಂದ ಬಾಬು ಪೂಜಾರಿ ಹಿಂದೆ ಬೀಳುವ ಅವಶ್ಯಕತೆ ಏನಿತ್ತು? ಸದ್ಯ ತನಿಖೆ ವೇಳೆ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ತನಗೆ ಮೋಸ ಮಾಡಿದ್ದಾಳೆ ಎಂದು ಎಲ್ಲಾ ದಾಖಲೆ ಒದಗಿಸಿದ್ದಾರೆ. ಸಲ್ಲಿಸಿರುವ ಎಲ್ಲಾ ದಾಖಲೆಗಳು ಚೈತ್ರ ಅಂಡ್ ಗ್ಯಾಂಗ್ ವಿರುದ್ಧವೇ ಇದೆ. ಆದರೆ, ಈಗ ಮೂಡುವ ಇನ್ನೊಂದು ಅನುಮಾನ ಎಂದರೆ ಚೈತ್ರ ಕುಂದಾಪುರ ಪಾಪ್ಯುಲರಿಟಿಗೆ ಬ್ರೇಕ್ ಹಾಕಲು ಯಾರದೋ ಪ್ಲ್ಯಾನ್‌ ಮೂಲಕ ಟ್ರ್ಯಾಪ್‌ ಮಾಡಿದರೇ ಎನ್ನುವ ಅನುಮಾನವೂ ಸಹ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

Rain News : ರಾಜ್ಯಾದ್ಯಂತ ಇನ್ನೊಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಲವೆಡೆ ರೆಡ್‌ ಅಲರ್ಟ್‌ ನೀಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು/ಕಾರವಾರ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಗಾಳಿ ಸಹಿತ ಹಗುರದಿಂದ (Rain News) ಕೂಡಿದ ಮಳೆಯಾಗಿದೆ. ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯನಗರ, ವಿಜಯ ನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಹಲವೆಡೆ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು (Karnataka Weather Forecast) ಪರದಾಡಿದರು.

ಕೊಪ್ಪಳದಲ್ಲಿ ಹಳ್ಳ ದಾಟಲು ಹೋದವರ ಪರದಾಟ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಜಾಲಿಹಾಳ ಗ್ರಾಮದಲ್ಲಿ ಹಳ್ಳ ದಾಟಲು ಹೋಗಿ ಬೊಲೆರೋ ವಾಹನದಲ್ಲಿದ್ದ 15 ಕಾರ್ಮಿಕರು ಮಧ್ಯದಲ್ಲಿಯೇ ಸಿಲುಕಿಕೊಂಡಿದ್ದಾರೆ. ವಿಂಡ್ ಪವರ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು, ವಾಪಸ್‌ ಜಾಲಿಹಾಳಗೆ ತೆರಳುತ್ತಿದ್ದರು. ಈ ವೇಳೆ ಹಳ್ಳದಲ್ಲಿ ಸಿಲುಕಿ ಪರದಾಟ ಅನುಭವಿಸಿದರು.

ಉತ್ತರ ಕನ್ನಡದಲ್ಲಿ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಒಂದು ವಾರ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 23 ರಂದು ಸಮುದ್ರ ಭಾಗದಲ್ಲಿ 45 ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಮುನ್ಸೂಚನೆ ನೀಡಲಾಗಿದೆ.

ಕೊಡಗು ಜನತೆಗೆ ಜಿಲ್ಲಾಡಳಿತ ಸೂಚನೆ

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕೊಡಗಿಗೆ ‌ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.23, 24 ಹಾಗೂ 25ರಂದು ಎಚ್ಚರಿಕೆಯಿಂದ ಇರುವಂತೆ ಕೊಡಗಿನ ಜನತೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸುಮಾರು 115 ರಿಂದ 204.4 ಮೀ.ಮಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

ಮಳೆಯಿಂದ ಹಾಳಾಗಿರುವ ಸರ್ಕಾರಿ ಶಾಲೆ

ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಗಿಲಕೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇಂಥಹದೊಂದು ಅವಸ್ಥೆ ಇದೆ. ಮಳೆ ಬಂದಾಗ ಶಾಲೆಯ ಚಾವಣಿ, ಶಾಲೆಯ ಅಡುಗೆ ಕೋಣೆ ಸೋರುತ್ತಿದೆ. ಶಾಲೆ ಕೊಠಡಿ ಒಳಗೆ ಭಯದ ವಾತಾವರಣದಲ್ಲೇ ಮಕ್ಕಳು ಕೂರುವಂತಾಗಿದೆ. ಮಳೆ ನೀರು ಸೋರಿಕೆಯಿಂದಾಗಿ ಶಾಲಾ ಆವರಣದಲ್ಲಿ ಸಿಬ್ಬಂದಿ ಅಡುಗೆ ಮಾಡುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಇತ್ತ ಶಾಲೆಯ ಶಿಕ್ಷಕರು ಅಸಹಾಯಕರಾಗಿದ್ದಾರೆ.

ಶನಿವಾರ ಇಲ್ಲೆಲ್ಲ ಮಳೆ ಅಬ್ಬರ

ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಹಾಗೂ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಜತೆಗೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Lokayukta Raid : ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

Lokayukta Raid : ದಾವಣಗೆರೆಯಲ್ಲಿ ಹಿಟ್ಟಿನ ಗಿರಣಿ ಮನೆಗೆ ಇ- ಸ್ವತ್ತು ಮಾಡಿ ಕೊಡಲು, ಉಡುಪಿಯಲ್ಲಿ ಹಲಸಿನ ಮರ ತೆರವು ಮಾಡಲು ಅಧಿಕಾರಿಗಳು ಲಂಚಕ್ಕೆ ಕೈವೊಡ್ಡಿ ಸಿಕ್ಕಿಬಿದ್ದಿದ್ದಾರೆ. ವಶಕ್ಕೆ ಪಡೆಯಲು ಬಂದಾಗ ಮತ್ತೊಬ್ಬ ಪರಾರಿ ಆಗಿದ್ದಾನೆ.

VISTARANEWS.COM


on

By

Lokayukta raids in Davangere and Udupi Three arrested
ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿಗಳು
Koo

ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿತ್ತು. ಪ್ರತ್ಯೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿ, ಲಂಚಕೋರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಹಾಗೂ ಎಸ್‌ಡಿಎ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಬಿ.‌ಅನ್ನಪೂರ್ಣ ಹಾಗೂ ಎಸ್‌ಡಿಎ ಲಕ್ಕಪ್ಪ ವೈ ಇವರಿಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ದಾವಣಗೆರೆ ನಗರದ ಬೇತೂರು ರಸ್ತೆಯ ನಿವಾಸಿ ಚಂದ್ರಶೇಖರ್ ಎಂಬುವರಿಂದ‌‌ ‌ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಹಿಟ್ಟಿನ ಗಿರಣಿ ಮನೆಗೆ ಇ- ಸ್ವತ್ತು ಮಾಡಿ ಕೊಡಲು ಚಂದ್ರಶೇಖರ್‌ ಬಳಿ 15 ಸಾವಿರ ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವಾಗಲೇ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂಎಸ್ ಕೌಲಾಪೂರೆ ನೇತೃತ್ವದ ತಂಡ ದಾಳಿ ಮಾಡಿದೆ.

ಇತ್ತ ಉಡುಪಿಯಲ್ಲಿ ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕನೊಬ್ಬ ಹಲಸಿನ ಮರ ತೆರವುಗೊಳಿಸಲು ಲಂಚ ಕೇಳಿದ ಆರೋಪ ಕೇಳಿ ಬಂದಿದೆ. ಮಹಮ್ಮದ್ ಅನ್ವರ್ ಹಸನ್ ಎಂಬುವವರು ಹಲಸಿನ ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ತೆರವಿಗೆ ಅನುಮತಿಸಲು ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ 4000 ರೂ. ಲಂಚ ಕೇಳಿದ್ದರು.

ಲಂಚ ಸ್ವೀಕರಿಸುವಾಗಲೇ ಆರೋಪಿಗಳು ರೆಡ್‌ ಹ್ಯಾಂಡ್‌ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳ ಪೈಕಿ ಬಂಗಾರಪ್ಪನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರೆ, ಮತ್ತೋರ್ವ ಆರೋಪಿ ವಿನಾಯಕ ಪರಾರಿ ಆಗಿದ್ದಾನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ.ಎ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Actor Darshan: ಎಚ್‌ಡಿಕೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ 2 ದೂರು

ಭಟ್ಕಳದಲ್ಲಿ ಶಂಕಿತ ಉಗ್ರನಿಗಾಗಿ ಮಹಾರಾಷ್ಟ್ರ ಎಟಿಎಸ್‌ ಶೋಧ

ಕಾರವಾರ: ಶಂಕಿತ ಉಗ್ರನಿಗಾಗಿ (Suspected Terrorist) ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಿಂದ(ATS) ಭಟ್ಕಳದಲ್ಲಿ ಶೋಧ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್ ಎಂಬಾತನಿಗಾಗಿ ಹುಡುಕಾಟ ನಡೆಸಲಾಗಿದೆ.

ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಯಾಗಿರುವ ಕಬೀರ್ ಸುಲ್ತಾನ್, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದಾನೆ. ಆತನನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಮಹಾರಾಷ್ಟ್ರ ಕೋರ್ಟ್ ಸೂಚನೆ ಹಿನ್ನೆಲೆ ಎಟಿಎಸ್‌ ತಂಡ ಆಗಮಿಸಿದೆ.

ಭಟ್ಕಳದಲ್ಲಿನ ಶಂಕಿತ ಉಗ್ರನ ನಿವಾಸಕ್ಕೆ ATS ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ಶಂಕಿತನ ಬಂಧನಕ್ಕೆ ಉತ್ತರ ಕನ್ನಡ ಪೊಲೀಸರ ಸಹಕಾರ ಕೋರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

International Yoga Day 2024:  ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

VISTARANEWS.COM


on

By

International Yoga Day 2024
Koo

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಪ್ರತಿ ವರ್ಷ ಜೂನ್ 21ರಂದು ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಹತ್ತು ವರ್ಷಗಳಿಂದ ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದು ಪ್ರತಿಯೊಬ್ಬರೂ ತಮ್ಮ ದೈನಂದಿನ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ವೇಗದ ಜಗತ್ತಿನಲ್ಲಿ ಆಂತರಿಕ ಶಾಂತಿ ಮತ್ತು ಸಮತೋಲನಕ್ಕೆ ದಾರಿಯನ್ನು ತೋರುತ್ತದೆ. ಹಾಗಾದರೆ ಕರ್ನಾಟಕದಲ್ಲಿ ಹೇಗಿತ್ತು ಯೋಗಾಭ್ಯಾಸ ಇಲ್ಲಿದೆ ಅದರ ಸಣ್ಣ ಝಲಕ್‌..

International Yoga Day 2024

ವಿಜಯನಗರದ ಹೊಸಪೇಟೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯೋಗದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಯೋಗ ಗುರು ಭವರಲಾಲ್ ಆರ್ಯ ಸೇರಿದಂತೆ ನೂರಾರು ಯೋಗಪಟುಗಳು ಭಾಗಿಯಾದರು.

International Yoga Day 2024

ಇತ್ತ ಬಳ್ಳಾರಿಯ ಜಿಂದಾಲ್‌ನಲ್ಲಿ ನೂರಾರು ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡಿದರು. ಸಿಎಂ ಸಿದ್ದರಾಮಯ್ಯ, ವಚನಾನಂದ ಶ್ರೀ, ಅವಧೂತ ವಿನಯ್ ಗುರೂಜಿ ಸಾಥ್‌ ನೀಡಿದ್ದರು.

ವಿಜಯಪುರದ ಅಂಬೇಡ್ಕರ್ ಮೈದಾನದಲ್ಲಿ ಯೋಗ ದಿನಾಚರಣೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭಾಗಿಯಾದರು. ಜಿಲ್ಲಾಧಿಕಾರಿಗಳು ಟಿ ಬೂಬಾಲನ್, ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ ಸೇರಿ ಸಾವಿರಾರು ವಿದ್ಯಾರ್ಥಿಗಳು ಯೋಗದ ಮಹತ್ವ ಸಾರಿದ್ದರು.

International Yoga Day 2024

ಇತ್ತ ಧಾರವಾಡದ ಆರ್ ಎನ್ ಶೆಟ್ಟಿ ಒಳಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ನಡೆಸಲಾಯಿತು. ಮೊದಲು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ನಿನ್ನೆ ಸಂಜೆ ಸುರಿದ ಮಳೆಯಿಂದಾಗಿ ಒಳಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿ ದಿವ್ಯಾ ಪ್ರಭು ಹಾಗೂ ಜಿಪಂ ಸಿ ಈ ಓ ಡಿಕೆ ಸ್ವರೂಪ ಭಾಗಿಯಾದರು.

International Yoga Day 2024  

ಧಾರವಾಡದ ಎಪಿಎಂಸಿಯಲ್ಲಿ ಸೋಬಾನ ಪದ ಹಾಡಿ ವಿಭಿನ್ನವಾಗಿ ಯೋಗ ದಿನವನ್ನು ಆಚರಿಸಲಾಯಿತು. ಯೋಗವನ್ನು ಬೀಸುವ ಕಲ್ಲಿನ ಬಗೆಯಲ್ಲಿ ಆಚರಿಸಿದರು. ಒಬ್ಬರಿಗೊಬ್ಬರು ಕೈಹಿಡಿದು ಜಾನಪದ ಹಾಡನ್ನು ಹಾಡಿ ಆಚರಿಸಲಾಯಿತು.

ಬೆಳಗಾವಿಯಲ್ಲಿ 10ನೇ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಟಿಸಿಎಲ್ ಭವನದಲ್ಲಿ ನಡೆಸಲಾಯಿತು. ಮಳೆಯಿಂದ ಕೆಪಿಟಿಸಿಎಲ್ ಭವನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಸಾಥ್‌ ನೀಡಿದ್ದರು.

ಕೊಡಗಿನಲ್ಲೂ ಯೋಗ ಗುರು ಮಹೇಶ್ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಕೊಡಗು ಡಿಸಿ, ಎಸ್‌ಪಿ, ಸಿಇಓ ಸೇರಿ ಯೋಗಾಭ್ಯಾಸ ಮಾಡಿದರು.

International Yoga Day 2024

ಬಾಗಲಕೋಟೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಯೋಗ ದಿನಾಚರಣೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್ ಭಾಗಿಯಾದರು. ವಿವಿಧ ಯೋಗ ಭಂಗಿಗಳ ಮೂಲಕ‌ ಯೋಗ ಪಟುಗಳು ಗಮನ ಸೆಳೆದರು. ಯೋಗದಲ್ಲಿ ಎಲ್ಲ ವಯೋಮಾನದವರು ಭಾಗಿಯಾಗಿದ್ದರು. ಡಿಸಿ ಜಾನಕಿ ಕೆ.ಎಮ್, ಸಿಇಒ ಶಶಿಧರ್ ಕುರೇರ, ಎಸ್ಪಿ ಅಮರನಾಥ್ ರೆಡ್ಡಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

International Yoga Day 2024

ಕೊಪ್ಪಳ ಜಿಲ್ಲಾಡಳಿತ, ಪತಂಜಲಿ ಯೋಗ ಸಮಿತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಯೋಗ ದಿನನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್, ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ಯೋಗಪಟುಗಳು, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಯೋಗ ಪ್ರದರ್ಶಿಸಿದರು.

ತುಮಕೂರಿನಲ್ಲಿ ಯೋಗ ದಿನಾಚರಣೆಗೆ ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ ನೀಡಿದರು. ತುಮಕೂರಿನ ಡಿಎಆರ್ ಪೊಲೀಸ್ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ‌ ಸಿಇಓ ಜಿ.ಪ್ರಭು, ಎಸ್ ಪಿ ಅಶೋಕ್ ಸೇರಿದಂತೆ ಹಲವರು ಸಾಥ್ ನೀಡಿದ್ದರು.

International Yoga Day 2024

ಯಾದಗಿರಿಯ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಮೈದಾನದಲ್ಲಿ ಯೋಗ ದಿನಾಚರಣೆ ಹಿನ್ನೆಲೆ ಗಿಡಕ್ಕೆ ನೀರುಣಿಸುವ ಮೂಲಕ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಚಾಲನೆ ನೀಡಿದರು. ಡಿಸಿ ಡಾ.ಸುಶೀಲಾ, ಎಸ್ಪಿ ಸಂಗೀತಾ ಭಾಗಿಯಾಗಿದ್ದರು. ಯೋಗದಲ್ಲಿ ನೂರಾರು ವಿದ್ಯಾರ್ಥಿಗಳು ಮಗ್ನರಾಗಿದ್ದರು. ಕೊಡಗು, ಚಿಕ್ಕಮಗಳೂರು, ಗದಗದಲ್ಲೂ ಯೋಗಾಭ್ಯಾಸ ನಡೆದಿದೆ.

International Yoga Day 2024

ಕಲಬುರಗಿಯ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಯೋಗಾ ದಿನಾಚರಣೆಯಲ್ಲಿ ಸಾವಿರಾರು ಜನರು ಭಾಗಿಯಾಗಿದರು. ಇತ್ತ ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಎಸ್ಪಿ ಬಿ ಎಸ್ ನೇಮಗೌಡ, ಎಡಿಸಿ ಅನ್ನಪೂರ್ಣಾ, ನಗರಸಭೆ ಅಧ್ಯಕ್ಷೆ ಉಷಾ ದಾಸರ್ ಭಾಗಿಯಾಗಿದ್ದರು.

ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಮಂಡ್ಯ ನಗರದ ಪಿಇಟಿ ಕ್ರೀಡಾಂಗಣದಲ್ಲಿ ಯೋಗಾ ಪಂತಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬೇಬಿ ಮಠದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಡಿಸಿ ಡಾ. ಕುಮಾರ,ಎಸ್ಪಿ ಎನ್.ಯತೀಶ್, ಸಿಇಓ ವೇದಿಕೆ ಮೇಲೆ ವಿವಿಧ ಬಗೆಯ ಯೋಗ ಪ್ರದರ್ಶಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಆಯುಷ್ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಯೋಗಾ ದಿನಾಚರಣೆ ಆಚರಿಸಲಾಯಿತು. ಅರಮನೆ ಆವರಣದಲ್ಲಿ ಯೋಗಪಟುಗಳು ಮತ್ತು ಸಾರ್ವಜನಿಕರು ಯೋಗ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಶ್ರೀವತ್ಸ, ಸಂಸದ ಯದುವೀರ್ ಒಡೆಯರ್, ಎಂಎಲ್ಸಿ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಪಂ ಸಿಇಒ ಗಾಯಿತ್ರಿ ಮತ್ತಿತರರು ಭಾಗಿಯಾಗಿದ್ದರು.

ಚಿಕ್ಕಮಗಳೂರಿನ ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆದಿದೆ. ಶಾಲಾ ಮಕ್ಕಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಸಿರಿಗೆರೆ ಪೀಠದ ಡಾ, ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ವೆಂಕಟೇಶ್, ಎಸ್ ಪಿ ಉಮಾ ಪ್ರಶಾಂತ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದರು.

ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ‌ ನಡೆಯುತ್ತಿರುವ ಯೋಗ ದಿನಾಚರಣೆಯಲ್ಲಿ ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಭಾಗಿಯಾದರು. ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಶಾಸಕ‌ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ‌ಯೋಗ ದಿನವನ್ನು ಆಚರಿಸಲಾಯಿತು. ನೃಪತುಂಗ ಬೆಟ್ಟದ ತಪ್ಪಲಿನಲ್ಲಿ‌ ಯೋಗಾಸನ‌ ಮಾಡಲಾಯಿತು.

ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗಿಯಾದರು. ಹಾವೇರಿಯಲ್ಲಿ ಇನ್ನರ್ ವೀಲ್ ಕ್ಲಬ್ ನಿಂದ ಯೋಗ ದಿನಾಚರಣೆಯಲ್ಲಿ ನೂರಾರು ಮಹಿಳಾ ಯೋಗಪಟುಗಳು ಭಾಗಿಯಾದರು. ಹಾಸನದಲ್ಲಿಯೂ ಯೋಗ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಎಂಪಿ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ ಸಾಥ್‌ ನೀಡಿದರು. ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ‌ ವಿವಿಧ ಯೋಗ ಭಂಗಿಗಳ ಮೂಲಕ ಯೋಗಪಟುಗಳು ಕಣ್ಮನ ಸೆಳೆದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಜೂ.23ಕ್ಕೆ ಹೈ ಅಲರ್ಟ್‌! ಇಂದು ವಿಪರೀತ ಮಳೆಯೊಂದಿಗೆ ಬೀಸಲಿದೆ ಬಿರುಗಾಳಿ

Karnataka Weather forecast : ರಾಜ್ಯಾದ್ಯಂತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain News) ನೀಡಿದೆ. ಜೂ.23ಕ್ಕೆ ಕರಾವಳಿಗೆ ಹೈ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.21ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ (Karnataka Weather Forecast) ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಸೇರಿ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಬೆಂಗಳೂರಲ್ಲಿ ಚದುರಿದಂತೆ ಮಳೆ

ಬೆಂಗಳೂರಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್‌ 23ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್‌ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಇಂದಿನಿಂದ ಜೂನ್‌ 23ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kalki 2898 AD Final Trailer Released
ಕರ್ನಾಟಕ2 hours ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ3 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌