ಕರ್ನಾಟಕ
Cauvery Water Dispute: ಕಾವೇರಿ ನೀರು ಬಿಟ್ಟು, ರೈತರ ಬದುಕಿನ ಜತೆ ಸರ್ಕಾರ ಚೆಲ್ಲಾಟ: ಎಚ್.ಡಿ.ಕುಮಾರಸ್ವಾಮಿ
Cauvery Water Dispute: ನಾನು ಈ ಮೊದಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿ ಎಂದು ರಾಜ್ಯ ಸರ್ಕಾರಕ್ಕೆ ಹೇಳಿದ್ದೆ. ತಮಿಳುನಾಡು ಅರ್ಜಿ ಹಾಕಿದ ತಕ್ಷಣವೇ ಯಾಕೆ ನೀರು ಬಿಟ್ಟಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಮನಗರ: ಗೌರಿ ಗಣೇಶ ಹಬ್ಬ ಆಚರಣೆ ಸಮಯದಲ್ಲಿ ಸುಮಾರು 15 ದಿನಗಳ ಕಾಲ ತಮಿಳುನಾಡಿಗೆ ಮತ್ತೆ ನಿತ್ಯ 5000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಒತ್ತಡ ಹಾಕಿದೆ. ಕೋರ್ಟ್ ಆದೇಶದಂತೆ ಬಿಡದಿದ್ದರೆ ತಪ್ಪಾಗುತ್ತದೆ ಎಂದು ನೀರಾವರಿ ಮಂತ್ರಿಗಳು ನೀರು (Cauvery Water Dispute) ಬಿಟ್ಟಿದ್ದಾರೆ. ತರಾತುರಿಯಲ್ಲಿ ಈ ನಿರ್ಧಾರ ಮಾಡಿರುವುದು ರೈತರ ಬದುಕಿನ ಜತೆ ಚೆಲ್ಲಾಟವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ನೀರು ಬಿಟ್ಟಿಲ್ಲವೇ ಎಂದು ಕೇಳಿದ್ದಾರೆ. ಹೌದು ಹಿಂದಿನ ಸರ್ಕಾರದಲ್ಲೂ ನೀರು ಬಿಟ್ಟಿದ್ದಾರೆ. ಆದರೆ ಈ ವರ್ಷ ನಮ್ಮ ರೈತರಿಗೆ ನೀರು ಕೊಡುವುದಕ್ಕೆ ಆಗುತ್ತಿಲ್ಲ, ಇವತ್ತು ರೈತರು ಬೆಳೆದ ಬೆಳೆಗಳನ್ನು ನೀರಿಲ್ಲದೆ ನಾಶ ಮಾಡುತ್ತಿದ್ದಾರೆ. ಅನೇಕ ಸಂಘಟನೆಗಳು ಈಗಾಗಲೇ ಪ್ರತಿಭಟನೆ ಮಡುತ್ತಿವೆ. ಸೆ. 11ಕ್ಕೆ ಸಭೆ ಆಗಿದೆ, ಅದಾದ ನಂತರ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ್ದರು. ನಾನು ಆಗಲೇ ಹೋಗಿ ಅರ್ಜಿ ಹಾಕಿ ಎಂದು ನಮ್ಮವರಿಗೆ ಹೇಳಿದ್ದೆ. ಈಗಾಗಲೇ ಸುಪ್ರೀಂಕೋರ್ಟ್ಗೆ ಹೋಗಿರುವುದರಿಂದ ಯಾಕೆ ಭಯ? ಕೋರ್ಟ್ ಆದೇಶ ಏನು ಬರುತ್ತೋ ನೋಡೋಣ ಎಂದು ತಿಳಿಸಿದರು.
ಸುಪ್ರೀಂಕೋರ್ಟ್ ಈಗಾಗಲೇ 2007ರಲ್ಲಿ ಅಂತಿಮ ನೀಡಿದೆ. ದೇವೇಗೌಡರ ಮಾರ್ಗದರ್ಶನದಲ್ಲಿ ಮರು ಅರ್ಜಿ ಹಾಕಿದ್ದೆವು. ಆದಾದ ಬಳಿಕೆ 2018ರಲ್ಲಿ ರಾಜ್ಯದ ಪರವಾಗಿ ಆದೇಶ ಬಂತು. 18 ಟಿಎಂಸಿ ನೀರು ರಾಜ್ಯದ ಬಳಕೆಗಾಗಿ ನೀಡಲಾಗಿತ್ತು. ನೆನ್ನೆ ರಾಜ್ಯಸಭೆಯಲ್ಲಿ ದೇವೇಗೌಡರು ಏಕಾಂಗಿಯಾಗಿ ಹೋರಾಟ ಮಾಡಿದ್ದಾರೆ. ಇಳಿ ವಯಸ್ಸಿನಲ್ಲಿ ನಿಲ್ಲಲು ಆಗದ ಸ್ಥಿತಿಯಲ್ಲಿ ಅವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಎಲ್ಲಿ ಹೋಗಿದ್ದರು ಎಂದು ಕಿಡಿಕಾರಿದರು.
ಇದನ್ನೂ ಓದಿ | Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ
ತಮಿಳುನಾಡು ಅರ್ಜಿ ಹಾಕಿದ ತಕ್ಷಣವೇ ಯಾಕೆ ನೀರು ಬಿಟ್ಟಿದ್ದೀರಿ? ಯಾಕೆ ಈ ಸರ್ಕಾರದವರು ಪ್ರೊಟೆಸ್ಟ್ ಮಾಡಲಿಲ್ಲ. ಪ್ರಾಧಿಕಾರ ನೀರು ಬಿಡಿ ಎಂದ ತಕ್ಷಣ ಬಿಡಬೇಕು ಅಂತೇನಿಲ್ಲ. ಸದನದಲ್ಲಿ ದೇವೇಗೌಡರು ಏಕಾಂಗಿಯಾಗಿ ಹೋರಾಟ ಮಾಡಿದರೂ, India ಒಕ್ಕೂಟದ ನಾಯಕ ಖರ್ಗೆ ಅವರು ಕಾವೇರಿ ಬಗ್ಗೆ ಮಾತನಾಡಬೇಕಿತ್ತು, ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ಜತೆ ಚರ್ಚಿಸುವೆ
ದೇವೇಗೌಡರು ಪ್ರಧಾನಿಯಾಗಿದ್ದಾಗ ಭಾರತ-ಬಾಂಗ್ಲಾ ಜಲ ವಿವಾದ ಬಗೆಹರಿಸಿದರು. ನಮ್ಮ ದುರದೃಷ್ಟ ಎಂದರೆ ಇಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಆಗಲಿಲ್ಲ. ನಾವು ಕಟ್ಟಿರುವ ಡ್ಯಾಮ್ನಿಂದ ತಮಿಳುನಾಡಿಗೆ ನೀರು ಬಿಡಬೇಕಾ? ಬೇಕಿದ್ದರೆ ಅವರ ದುಡ್ಡಿನಲ್ಲಿ ಎರಡು ಮೂರು ಡ್ಯಾಮ್ ಕಟ್ಟಲಿ ಎಂದ ಅವರು, ರಾಜ್ಯಸಭೆಯಲ್ಲಿ ತಮಿಳುನಾಡು ಸದಸ್ಯರು ನಮಗೆ ಸರಿಯಾಗಿ ನೀರು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ನಾನು ದೆಹಲಿ ಹೋದಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತೇನೆ. ನಾನು ಬಿಜೆಪಿ ಸ್ನೇಹಿತರಿಗೂ ಹೇಳುತ್ತೇನೆ. ಎಲ್ಲರೂ ಕೇಂದ್ರದ ಮುಂದೆ ಧೈರ್ಯವಾಗಿ ಕೇಳಬೇಕು ಎಂದು ಹೇಳಿದರು.
ನೀರು ಬಿಡದೇ ಇದ್ದಿದ್ದರೆ ಏನಾಗುತ್ತಿತ್ತು?
ಕೆಆರ್ಎಸ್ ಡ್ಯಾಂನಲ್ಲಿ ನೀರು ಎಷ್ಟಿದೆ ಎಂಬುವುದನ್ನು ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ತಂಡ ಸ್ಥಳ ಪರಿಶೀಲನೆ ಮಾಡಿ ಸತ್ಯಾಂಶ ವರದಿ ಕೊಡಬೇಕಲ್ಲವೇ? ಎಲ್ಲರೂ ಒಟ್ಟಾಗಿ ಕುಳಿತು ಚರ್ಚೆ ಮಾಡಬೇಕು. ನಾನು ಅವತ್ತೇ ಹೇಳಿದ್ದೇನೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ನೀರು ಬಿಡಬೇಡಿ ಅಂತ ಹೇಳಿದ್ದೆ. ನೀರು ಬಿಡದೇ ಇದ್ದಿದ್ದರೆ ಏನು ಆಗುತ್ತಿತ್ತು, ಸರ್ಕಾರ ಬೀಳಿಸುತ್ತಿದ್ದರಾ ಯಾರಾದರೂ ಎಂದು ಪ್ರಶ್ನಿಸಿದರು.
ಇದನ್ನೂ ಓದಿ | Women Reservation Bill: ಇಂಡಿಯಾ ಕೂಟದ ನಾಯಕರೇ ಮಹಿಳಾ ಮೀಸಲಾತಿ ಮಸೂದೆಗೆ ತಡೆ ಒಡ್ಡಿದ್ದರು ಎಂದ ಎಚ್ಡಿಕೆ
ಇದೊಂದು ಕೆಟ್ಟ ಸರ್ಕಾರ, ಇದನ್ನು ಮೊದಲು ತೆಗೆಯಬೇಕು. ಅದಕ್ಕಾಗಿಯೇ ಮೈತ್ರಿ ಅವಶ್ಯಕತೆ ಇದೆ. ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ತರುವ ನಿಟ್ಟಿನಲ್ಲಿ ಅವಶ್ಯಕತೆ ಇದೆ. ವಿರೋಧ ಪಕ್ಷ ಶಕ್ತಿಯುತವಾಗಿದ್ದರೆ ಅಲ್ಲವೇ ಹೋರಾಟ ಮಾಡಬೇಕು. ನಮ್ಮವರನ್ನು ಕರೆದುಕೊಂಡು ಹೋಗೊಕೆ ಚರ್ಚೆ ನಡೆಯುತ್ತಿದೆಯಂತೆ. ನಮ್ಮ ಪಕ್ಷದವರಿಗೂ ಆಹ್ವಾನ ಇದೆಯಂತೆ. ನಮ್ಮ ಪಕ್ಷದವರು ಹೋಗುವವರು ಹೋಗಲಿ, ಹೋಗುವವರನ್ನು ತಡೆಯಲು ಆಗುತ್ತಾ? ಎಂದು ಆಪರೇಷನ್ ಹಸ್ತದ ಬಗ್ಗೆ ಕಿಡಿಕಾರಿದ್ದಾರೆ.
ಸಭೆ ನಡೆಸಲು ಸಂಸದನಿಗೆ ಯಾವ ಪವರ್ ಇದೆ?
ಚನ್ನಪಟ್ಟಣದಲ್ಲಿ ಸಂಸದ ಸುರೇಶ್ ಜನಸಂಪರ್ಕ ಸಭೆ ವಿಚಾರ ಪ್ರತಿಕ್ರಿಯಿಸಿ, ಲೋಕಸಭೆ ಸದಸ್ಯನಿಗೆ ಯಾವ ಪವರ್ ಇದೆ. ಅಧಿಕಾರಿಗಳನ್ನು ಸಭೆಗೆ ಕರೆದುಕೊಂಡು ಹೋಗುವ ಪವರ್ ಕೂಡ ಇಲ್ಲ. ಜಿಪಂನಲ್ಲಿ ದಿಶಾ ಸಭೆ ನಡೆಸಲು ಮಾತ್ರ ಅವರಿಗೆ ಅಧಿಕಾರ ಇದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಅವರ ಗಮನಕ್ಕೂ ತಂದಿದ್ದೇನೆ. ಈ ವಿಚಾರವಾಗಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ರೈತರಿಂದ ಗುಳೆ ಚಳವಳಿ; ಹೆದ್ದಾರಿ ತಡೆ ನಡೆಸಿ ಆಕ್ರೋಶ
ನಾನು ಲೋಕಸಭಾ ಸದಸ್ಯನಾಗಿದ್ದಾಗ ಸಾತನೂರಿಗೆ ಹೋಗಲು ಬಿಡಲಿಲ್ಲ. ಸಿಎಂ ಆಗಿದ್ದಾಗ ಏನು ಮಾಡಿದದು ಎನ್ನುತ್ತಾರಲ್ಲ, ಕನಕಪುರ ಡಬಲ್ ರೋಡ್ ಮಾಡಿದ್ದು ಯಾರು ಎಂದು ಕೇಳಿದರು. ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಳಾಂತರ ಬಗ್ಗೆ ಸ್ಪಂದಿಸಿ, ಅದು ನನ್ನ ಕನಸಿನ ಯೋಜನೆ. ನಾನು ಸಿಎಂ ಆಗಿದ್ದಾಗ ಕನಕಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿದ್ದೆ. ಅದು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗಿತ್ತು. ಡಿಕೆಶಿ ಕಡೆಯವರು ಜಮೀನು ಇದೆ. ಅದಕ್ಕಾಗಿಯೇ ಅವರು ತಕರಾರು ಮಾಡುತ್ತಿದ್ದಾರೆ. ರಾಮನಗರದಿಂದ ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಸ್ಥಳಾಂತರವಾಗಲು ಬಿಡಲ್ಲ ಎಂದು ಹೇಳಿದರು.
ಕರ್ನಾಟಕ
Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ
Cauvery Water Dispute: ರಾಜ್ಯದ ಸ್ಥಿತಿ ಬಗ್ಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರು: ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು. ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) (Cauvery Water Dispute) ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ‘ಗಾಯದ ಮೇಲೆ ಬರೆ’ ಎಳೆದಂತೆ ಸಿಡಬ್ಲ್ಯುಆರ್ಸಿಯಿಂದ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು, ಸರ್ಕಾರವು ಕರ್ನಾಟಕದ ಪಾಲಿಗೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ. ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಠ ಕಾಳಜಿಯೂ ತೋರದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ. ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ…
— Vijayendra Yediyurappa (@BYVijayendra) September 26, 2023
ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್ವೈ
CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.
ಕಳೆದ ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿಹಿಡಿಯಲಾಗಿತ್ತು.
ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ.
CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ
ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು.
25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.
ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.
ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್
ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು.
ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು.
ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ.
ಕಲೆ/ಸಾಹಿತ್ಯ
Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಬೆಂಗಳೂರು: ರಾಜ್ ಭಟ್ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.
ಮದರ್ ಫೌಂಡೇಶನ್ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್, ಶಶಾಂಕ್, ಶ್ರೀನಿವಾಸ್ ಪ್ರಭು, ಸುಜನ್ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.
ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್ ವಿಶ್ವನಾಥ್, ಹಾಸ್ಯ ಪಾತ್ರಗಳಲ್ಲಿ ರಮೇಶ್ ಭಂಡಾರಿ, ಸಿತಾರಾಮ ಕುಮಾರ್ ಅಭಿನಯಿಸಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!
ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್, ರುಚಿಮತಿಯಾಗಿ ಸಂತೋಷ್ ಹಿಲಿಯಾಣ, ದೂತನಾಗಿ ಸೀತಾರಾಮ್ ಕುಮಾರ್, ಬ್ರಾಹ್ಮಣನಾಗಿ ಶ್ರೀಧರ್ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್, ಪಾಸ್ತಿಯಾಗಿ ಹರೀಶ್ ಜಪ್ತಿ, ದೃಮಿಳ ಆಗಿ ಕಾರ್ತಿಕ್ ಕಣ್ಣಿ ಬಣ್ಣ ಹಚ್ಚಲಿದ್ದಾರೆ.
ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್ ಭಂಡಾರಿ, ಪ್ರಕಾಶ್ ಕಿರಾಡಿ, ವಿಶ್ವನಾಥ್ ಹೆನ್ನಾಬೈಲ್ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್ ಹೆಗಡೆ, ಶ್ರೀಕಾಂತ್ ರಟ್ಟಾಡಿ, ನಾಗರಾಜ್ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.
ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್ ಬುಕಿಂಗ್ಗಾಗಿ ರಾಜ್ ಭಟ್ ಮೊ.9019776411 ಸಂಪರ್ಕಿಸಿ.
ವಿಜಯನಗರ
Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ
Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: SBI SO Recruitment 2023: ಎಸ್ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ
ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಿವಮೊಗ್ಗ
Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)
ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.
ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.
-
Live News21 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ12 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ4 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema15 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ15 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್11 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ12 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್15 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ