HD Kumaraswamy : ಹುಷಾರ್‌…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ Vistara News

ಕರ್ನಾಟಕ

HD Kumaraswamy : ಹುಷಾರ್‌…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ

HD Kumaraswamy : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್‌ ಮತ್ತೆ ಸದ್ದು ಮಾಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಕೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಪೆನ್‌ಡ್ರೈವ್‌ ಠುಸ್‌ ಎಂದೆಲ್ಲ ಹೇಳಬೇಡಿ. ಅದೇನು ಠುಸ್‌ ಆಗಿಲ್ಲ. ನಿಮ್ಮ ಸಚಿವರು ಮನವಿ ಮಾಡಿಕೊಂಡಿದ್ದಕ್ಕೆ ಬಿಟ್ಟಿದ್ದೇನೆ ಎಂಬರ್ಥದಲ್ಲಿ ಗುಡುಗಿದ್ದಾರೆ.

VISTARANEWS.COM


on

HD Kumaraswamy pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೆನ್‌ಡ್ರೈವ್ ಠುಸ್ ಆಯಿತು (Pen Drive Politics) ಅಂತ ಹೇಳುತ್ತೀರಲ್ಲವೇ? ನಿಮ್ಮ ಸಚಿವರು ನನಗೆ ಯಾಕೆ ಮನವಿ ಮಾಡಿದರು? ನಿದ್ದೆಗೆಟ್ಟು ಸಂಪರ್ಕ ಮಾಡಿದ್ದರಲ್ಲ. ಯಾರು ಯಾರು ಫೋನ್ ಮಾಡಿದಿರಿ? ನಿಮ್ಮ ಋಣದಲಿ ಇದ್ದೇವೆ ಅಂತ ಮನವಿ ಮಾಡಿದವರು ಯಾರು? ಠುಸ್ ಆಗಿಲ್ಲ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಸಹಿತ ಕಾಂಗ್ರೆಸ್‌ ಸರ್ಕಾರಕ್ಕೆ (Congress Government) ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನನ್ನ ಬಳಿ ಇರುವ ಪೆನ್‌ಡ್ರೈವ್ ಠುಸ್‌ ಆಗಿದೆ ಎಂದೆಲ್ಲ ಹೇಳಬೇಡಿ ಎಂದು ಎಚ್ಚರಿಕೆಯನ್ನು ಕೊಡುವ ಮೂಲಕ ಕಾಂಗ್ರೆಸ್‌ ಸಚಿವರಾದಿಯಾಗಿ ಹಲವರು ಮನವಿ ಮಾಡಿಕೊಂಡಿದ್ದಕ್ಕೆ ಸುಮ್ಮನಿದ್ದೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: Chakravarty Sulibele: ಸಿದ್ದರಾಮಯ್ಯ ವಿರುದ್ಧ ಕೋಮುದ್ವೇಷದ ಹೇಳಿಕೆ; ಸೂಲಿಬೆಲೆ ಮೇಲಿನ FIRಗೆ ತಡೆ

ವಿದ್ಯುತ್‌ ಬಳಕೆಗೆ ದಂಡ ಕಟ್ಟಿದ್ದೇನೆ

ದೀಪಾವಳಿ ಹಬ್ಬ (Deepawali Festival) ಸಂದರ್ಭದಲ್ಲಿ ಮನೆಯಲ್ಲಿ ಆದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆ ದಿನ ಉಪಯೋಗಿಸಿದ 68,526 ರೂಪಾಯಿ ದಂಡ ಹಾಕಿದ್ದಾರೆ. ಆ ಹಣವನ್ನು ನಾನು ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್ ಕಳ್ಳ ಅನ್ನೋದನ್ನು ನಿಲ್ಲಿಸಿ. ಹಗಲು ದರೋಡೆಕೋರರು ನೀವು. ನಿಮ್ಮಷ್ಟು ದೊಡ್ಡ ಕಳ್ಳ ನಾನಲ್ಲ. ಲೂಲೂ ಮಾಲ್‌ಗೆ (Lulu Mall) ನೀವು ಆರು ತಿಂಗಳು ಕರೆಂಟ್‌ ಬಿಲ್‌ (Electricity Bill) ಅನ್ನೇ ಕೊಟ್ಟಿಲ್ಲ. ನನಗೆ ಈಗ ಹೇಳಲು ಬರುತ್ತೀರಾ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿದ್ಯುತ್ ಕಳ್ಳ ಅಂತ ನನಗೆ ಲೇಬಲ್ ಕಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನಾನೀಗ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ನನಗೆ ವಿದ್ಯುತ್‌ ಕಳ್ಳ ಎಂದು ಕರೆಯುವ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಒಟ್ಟು 68,526 ರೂಪಾಯಿ ದಂಡ ಹಾಕಿದ್ದಾರೆ. ಈ ಸಂಬಂಧ ಒಂದು ಬಿಲ್ ಕೊಟ್ಟಿದ್ದಾರೆ. 2.5 ಕಿಲೋ ವ್ಯಾಟ್ ಉಪಯೋಗ ಮಾಡಿಕೊಂಡಿದ್ದೇನೆ. ಒಟ್ಟು 2526 ರೂಪಾಯಿ ಹಾಕಿದ್ದಾರೆ. ಮನೆಗೆ 33 ಕಿಲೋ ವ್ಯಾಟ್ (ಪ್ರತಿದಿನ) ಉಪಯೋಗಿಸುತ್ತಿದ್ದೇನೆ. ಅದಕ್ಕೆ ಎರಡು ಸಾವಿರ ರೂಪಾಯಿಯಂತೆ ದಂಡ ಹಾಕಿದ್ದಾರೆ. ನಾನೇ ದಂಡ ಕಟ್ಟುತ್ತೇನೆಂದು ಹೇಳಿದೆ. ಮಹಜರ್‌ಗೆ ಬಂದವರು ಟಿವಿ ಮೀಡಿಯಾದಲ್ಲಿ ಬಂದ ವರದಿ ಆಧಾರದ ಮೇಲೆ ಮಹಜರ್ ಮಾಡಲು ಬಂದಿದ್ದೇವೆಂದು ಹೇಳಿದ್ದರು. ನನ್ನ ಮನೆಯ ಸೀರಿಯಲ್ ಸೆಟ್‌ಗೆ ಒಂದು ಕಿಲೋ ವ್ಯಾಟ್‌ಗಿಂತಲೂ ಕಡಿಮೆ ಬರುತ್ತದೆ. ಆದರೆ, ಇವರು 2.5 ಕಿಲೋ ವ್ಯಾಟ್‌ಗೆ ಏಳು ದಿನಕ್ಕೆ ಚಾರ್ಜ್ ಮಾಡಿದ್ದಾರೆ. ಒಟ್ಟು 71 ಯುನಿಟ್ ಬಳಕೆಗೆ 3ರಷ್ಟು ದಂಡ ಹಾಕಿದ್ದಾರೆ. ದಂಡದ ಹಣ ಕಟ್ಟಿದ್ದೇನೆ. ಆದರೆ, ಇದನ್ನು ವಿರೋಧ ಮಾಡಿ ಕಟ್ಟಿದ್ದೇನೆ. ಹೆಚ್ಚುವರಿ ಬಿಲ್ ಮುಂದೆ ನನ್ನ ಮನೆಗೆ ಬರುವ ಬಿಲ್‌ಗೆ ಅಡ್ಜೆಸ್ಟ್ ಮಾಡಬೇಕು ಎಂದು ಹೇಳಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಲೂಲೂ ಮಾಲ್‌ಗೆ ಏಕೆ ವಿದ್ಯುತ್‌ ಬಿಲ್‌ ಹಾಕಲಿಲ್ಲ?

ಲೂಲೂ ಮಾಲ್‌ಗೆ ಆರು ತಿಂಗಳು ವಿದ್ಯುತ್ ಬಿಲ್ ಹಾಕಿಲ್ಲ. ನನ್ನನ್ನು ಕಳ್ಳ ಅಂದರಲ್ಲವೇ? ಇವರು ಕಟ್ಟಿದ್ದಾರಾ? ಮೇಕೆದಾಟು ಪ್ರತಿಭಟನೆಗೆ ಕರೆಂಟ್ ಅನುಮತಿ ತಗೊಂಡಿದ್ದರಾ? ನನಗಿಂತಲೂ ದೊಡ್ಡ ಕಳ್ಳ ಅಂತ ಹೇಳಲೇ? ಕನಕೋತ್ಸವ ಮಾಡಿದ್ರಲ್ಲ ಅದಕ್ಕೆ ಪರ್ಮಿಷನ್ ತಗೊಂಡಿದ್ದಾರಾ? ನನ್ನ ಬಳಿ ಸಹ ವಿಡಿಯೊ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕರೆಂಟ್‌ ಬಿಲ್‌ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡಲ್ಲಿ ಮಳೆ; ಉಳಿದೆಡೆ ಒಣ ಹವೆ, ಬೆಂಗಳೂರಲ್ಲಿ ಹೇಗಿದೆ?

ವರ್ಗಾವಣೆ ದಂಧೆ ನಡೆಯುತ್ತಿರಬೇಕಾದರೆ ಯಾಕೆ ತಡೆಯಲಿಲ್ಲ?

ಇಡೀ ದಿನ ವರ್ಗಾವಣೆಗೆ ಸಂಬಂಧಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ವರ್ಗಾವಣೆ ವಿಚಾರ ಅಲ್ಲ ಅಂತ ಹೇಳಿದ್ದಾರೆ. ತ್ಯಾಗ ಮಾಡಿದ್ದಾರಂತೆ ಅದನ್ನು ಒಪ್ಪೋಣ. ಕ್ಷೇತ್ರದ ಕೆಲಸ ಮಾಡುತ್ತಿದ್ದಾರಂತೆ ಒಪ್ಪಿಕೊಳ್ಳೋಣ. ಆದರೆ, ನಾನು ಹತಾಶೆಯಿಂದ ಮಾತನಾಡುತ್ತಿದ್ದೇನೆಂದು ಟ್ವೀಟ್ ಮಾಡಿದ್ದಾರೆ. ನಾನು ಸದಾ ವರ್ಗಾವಣೆಯಲ್ಲಿ ಇದ್ದೆ ಅಂತ ಹೇಳಿದ್ದೀರಿ. ವರ್ಗಾವಣೆ ದಂಧೆ ನಡೆಯುತ್ತಿರಬೇಕಾದರೆ ಯಾಕೆ ತಡೆಯಲಿಲ್ಲ? ನೀವು ಕೋ ಆರ್ಡಿನೇಷನ್ ಚೇರ್ ಮ್ಯಾನ್ ಆಗಿದ್ದಿರಿ. ಯಾಕೆ ಹೇಳಲಿಲ್ಲ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ; ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಶಾಶ್ವತ ವಿದ್ಯುತ್ ಅಲಂಕಾರಕ್ಕೆ ಸೋಮವಾರ ಚಾಲನೆ ನೀಡಿದರು.

VISTARANEWS.COM


on

Suvarna Vidhana Soudha
Koo

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ (Suvarna Vidhana Soudha) ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು.

ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಉಪಸ್ಥಿತರಿದ್ದರು.

ಈವರೆಗೂ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಸುವರ್ಣಸೌಧ ಕಂಗೊಳಿಸಲಿದೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ವರ್ಷವಿಡಿ ಲೈಟಿಂಗ್ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Continue Reading

ಕರ್ನಾಟಕ

BY Vijayendra : ಪೃಥ್ವಿ ಸಿಂಗ್‌ಗೆ ಇರಿತ ಪ್ರಕರಣ; ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಆಗ್ರಹ

BY Vijayendra : ಬಿಜೆಪಿ ನಾಯಕ ಪೃಥ್ವಿ ಸಿಂಗ್‌ ಅವರಿಗೆ ಚೂರಿಯಿಂದ ಇರಿದ ಆರೋಪ ಎದುರಿಸುತ್ತಿರುವ ಚನ್ನರಾಜ್‌ ಹಟ್ಟಿಹೊಳಿ ಬಂಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

VISTARANEWS.COM


on

BY Vijayendra Channaraj Hattiholi
ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್‌ ಅವರನ್ನು ಭೇಟಿ ಮಾಡಿದ ಚನ್ನರಾಜ್‌ ಹಟ್ಟಿಹೊಳಿ
Koo

ಬೆಳಗಾವಿ: ಬಿಜೆಪಿ ಕಾರ್ಯಕಾರಿಣಿ ಸದಸ್ಯ, ರಮೇಶ್‌ ಜಾರಕಿಹೊಳಿ (Ramesh Jarakiholi) ಆಪ್ತ ಪೃಥ್ವಿ ಸಿಂಗ್‌ (Attack on Prithvi singh) ಅವರಿಗೆ ಚೂರಿಯಿಂದ ಇರಿದಿದ್ದಾರೆ ಎನ್ನಲಾದ ಎಂಎಲ್‌ಸಿ ಚನ್ನರಾಜ್‌ ಹಟ್ಟಿಹೊಳಿ (Channaraj Hattiholi), ಅವರ ಇಬ್ಬರು ಗನ್‌ ಮ್ಯಾನ್‌ಗಳು ಮತ್ತು ಇತರ ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಬೆಳಗಾವಿಯ ಜಯನಗರದಲ್ಲಿರುವ ಮನೆಯಲ್ಲಿದ್ದ ಪೃಥ್ವಿ ಸಿಂಗ್‌ ಅವರನ್ನು ಹಟ್ಟಿಹೊಳಿ ಮತ್ತು ಬೆಂಬಲಿಗರು ಹೊರಗೆ ಕರೆದು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೈ ಮತ್ತು ಬೆನ್ನಿಗೆ ಚೂರಿ ಇರಿತದ ಗಾಯಕ್ಕೆ ಒಳಗಾಗಿರುವ ಪೃಥ್ವಿ ಸಿಂಗ್‌ ಕೆಎಲ್ ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್‌ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ ಅವರು, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಗನ್ ಮ್ಯಾನ್‌ಗಳು ಹಲ್ಲೆ ಮಾಡಿದ್ದಾರೆ. ಗನ್‌ ಮ್ಯಾನ್‌ ಸುಜೀತ್ ಜಾಧವ್, ಎಂಎಲ್‌ಸಿ ಅವರ ಪಿಎ ಸದ್ದಾಂ ಅವರು ಪೃಥ್ವಿ ಮನೆಗೆ ಹೋಗಿ ಚೂರಿಯಿಂದ ಇರಿದ್ದಾರೆ. ಮೊದಲು ಮನೆಯಲ್ಲಿದ್ದ ಪೃಥ್ವಿ ಸಿಂಗ್‌ ಅವರನ್ನು ಹೊರಗಡೆ ಕರೆಸಿ ಹಲ್ಲೆ ಮಾಡಲಾಗಿದೆ. ಈ ದೃಶ್ಯವನ್ನು ಪೃಥ್ವಿ ಸಿಂಗ್ ವಿಡಿಯೋ ರೆಕಾರ್ಡ್ ಮಾಡುವ ಪ್ರಯತ್ನ ಮಾಡಿದ್ದಾರೆ. ಬ್ಲಾಕ್ ಕಲರ್ ಕ್ರಿಷ್ಟಾ ಇನ್ನೊವಾ ಕಾರಿನಲ್ಲಿ ಚನ್ನರಾಜ್ ಹಟ್ಟಿಹೊಳಿ ಅವರೂ ಬಂದಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಪೃಥ್ವಿ ಸಿಂಗ್‌ ಅವರನ್ನು ಹೊರಗೆ ಕರೆದು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಚಿವರ ಪ್ರಭಾವದಿಂದ ಹಾಡಹಗಲೇ ಹಲ್ಲೆ

ಚನ್ನರಾಜ ಹಟ್ಟಿಹೊಳಿ ಅವರು ಸಚಿವರಾಗಿರುವ ಮತ್ತು ಪ್ರಭಾವಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸಹೋದರ. ಇಷ್ಟು ಪ್ರಭಾವ ಇದ್ದಿದ್ದರಿಂದಲೇ ಹಾಡು ಹಗಲೇ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯ. ರಾಜ್ಯ ಸರ್ಕಾರ ಇಡೀ ವ್ಯವಸ್ಥೆಯೇ ಇಲ್ಲಿದೆ. ಮುಖ್ಯಮಂತ್ರಿಗಳೂ ಇಲ್ಲಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರು ದರ್ಪ ತೋರಿದ್ದಾರೆ. ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿದ್ದಾರೆʼʼ ಎಂದು ವಿಜಯೇಂದ್ರ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ಪೊಲೀಸರು ತಡ ಮಾಡದೆ ಎಫ್‌ಐಆರ್‌ ಹಾಕಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಗನ್ ಮ್ಯಾನ್, ಪಿಎ ಮತ್ತು ವಿಧಾನ ಪರಿಷತ್ ಸದಸ್ಯನನ್ನು ಬಂಧಿಸಬೇಕುʼʼ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ʻʻಇಲ್ಲಿರುವ ಪೊಲೀಸ್ ವ್ಯವಸ್ಥೆಯ ಬಗ್ಗೆ ನನಗೆ ನಂಬಿಕೆ ಇಲ್ಲ, ನಮ್ಮ ಮನೆಗೆ ರಾತ್ರೋರಾತ್ರಿ ನುಗ್ತಾರೆ, ಕೊಲೆ ಮಾಡ್ತಾರೆ ಎಂದು ಪ್ರಥ್ವಿ ಸಿಂಗ್ ಭಯದಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ನಮಗೆ ಎಳ್ಳಷ್ಟೂ ನಂಬಿಕೆಯಿಲ್ಲ, ಅಧಿಕಾರದ ದರ್ಪದಿಂದ ಸಚಿವರ ತಮ್ಮ ಯಾವ ರೀತಿ ನಡೆದುಕೊಂಡಿದ್ದಾನೆ ಎಂದು ಎಲ್ಲರೂ ನೋಡ್ತಿದ್ದಾರೆ. ಅಧಿಕಾರದ ಸೊಕ್ಕಿನಿಂದ ಮೆರೆಯುತ್ತಿರುವವರಿಗೆ ತಕ್ಕ ಪಾಠ ಆಗಬೇಕು,ʼʼ ಎಂದು ಹೇಳಿದ ವಿಜಯೇಂದ್ರ ಅವರು, ಎಂಎಲ್ಸಿ ಆದಿಯಾಗಿ ಎಲ್ಲರ ಬಂಧನಕ್ಕೆ ಆಗ್ರಹಿಸಿದರು.

ʻʻಘಟನೆಯನ್ನು ಗಂಬೀರವಾಗಿ ಪರಿಗಣಿಸಬೇಕು, ಎಲ್ಲಾ ದುಷ್ಟರನ್ನೂ ಬಂಧಿಸಬೇಕು, ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ, ಮೊದಲು ಎಫ್ ಐ ಆರ್ ಆಗಲಿʼʼ ಎಂದು ವಿಜಯೇಂದ್ರ ಆಗ್ರಹಿಸಿದರು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

Prtithvi singh attacked

ಮಣಿಕಂಠ ರಾಥೋಡ್‌ ಹಲ್ಲೆ ನೆನಪಿಸಿದ ವಿಜಯೇಂದ್ರ

ʻʻಗುಲ್ಬರ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್ ಮೇಲೆ ಇದೇ ರೀತಿ ಹಲ್ಲೆಯಾಗಿತ್ತು. ಗುಲ್ಬರ್ಗದಲ್ಲಿ ನಡೆದ ಘಟನೆ ರಾಜ್ಯಕ್ಕೆ ವ್ಯಾಪಿಸುತ್ತಿದೆʼʼ ಎಂದು ಹೇಳಿದ ವಿಜಯೇಂದ್ರ, ಎಂಎಲ್‌ಸಿ ಹಟ್ಟಿಹೊಳಿ ಅವರನ್ನು ಬಂಧಿಸದೆ ಇದ್ದರೆ ರಾಜ್ಯದ ಪ್ರತಿ ಬಿಜೆಪಿ ಕಾರ್ಯಕರ್ತರು ರಸ್ತೆಗೆ ಇಳಿಯುತ್ತಾರೆ ಎಂದು ಎಚ್ಚರಿಸಿದರು.

ʻʻಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಕ್ಕೆ ಪೃಥ್ವಿ ಸಿಂಗ್‌ಗೆ ಬೆದರಿಕೆ ಹಾಕಲಾಗಿತ್ತು.ʼʼ ಎಂದು ಹೇಳಿದ ವಿಜಯೇಂದ್ರ ಅವರು ಪೃಥ್ವಿ ಸಿಂಗ್‌ ಅವರ ಮೇಲೆ ಇನ್ನೂ ಹಲವು ಪ್ರಕರಣಗಳಿವೆ, ಅವರ ಹೆಸರು ಬರೆದಿಟ್ಟು ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆಯನ್ನು ಆಕ್ಷೇಪಿಸಿದರು.

ʻʻಒಬ್ಬ ಜವಾಬ್ದಾರಿಯುತ ಸಚಿವರು ಈ ರೀತಿ ಹೇಳಿಕೆ ಕೊಡಬಾರದು, ನಿಮ್ಮ ತಮ್ಮ ಎಲ್ಲಿದ್ದಾನೆ ಹುಡುಕಿ ಮೊದಲು ಪೊಲೀಸರಿಗೆ ಕೊಡಿʼʼ ಎಂದರು ವಿಜಯೇಂದ್ರ.

Continue Reading

ಕರ್ನಾಟಕ

Lakshmi Hebbalkar : ಜಾರಕಿಹೊಳಿ ಆಪ್ತನಿಗೆ ಹೆಬ್ಬಾಳ್ಕರ್‌ ಸೋದರನ ಗ್ಯಾಂಗ್‌ನಿಂದ ಚೂರಿ ಇರಿತ

Lakshmi Hebbalkar : ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್‌ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಇದನ್ನು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸೋದರನ ಗ್ಯಾಂಗ್‌ ನಡೆಸಿದೆ ಎಂದು ಆರೋಪಿಸಲಾಗಿದೆ.

VISTARANEWS.COM


on

Prtithvi singh attacked
ಗಾಯಗೊಂಡಿರುವ ಪೃಥ್ವಿ ಸಿಂಗ್‌
Koo

ಬೆಳಗಾವಿ: ಬೆಳಗಾವಿಯ ಬಿಜೆಪಿ ಮುಖಂಡ (Belagavi BJP Leader), ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್‌ (55) (Attack on Prithvi singh) ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರ ಸಹೋದರ ಚನ್ನರಾಜ ಹಟ್ಟಿಹೊಳಿಯ (Channaraja Hattiholi) ಆಪ್ತರು ಹಲ್ಲೆ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ. ಪೃಥ್ವಿ ಸಿಂಗ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarakiholi) ಅವರ ಅತ್ಯಾಪ್ತರಲ್ಲಿ ಒಬ್ಬರು.

ಚನ್ನರಾಜ್‌ ಹಟ್ಟಿಹೊಳಿ ಅವರ ಗ್ಯಾಂಗ್‌ ಪೃಥ್ವಿ ಸಿಂಗ್‌ ಅವರ ಮನೆಗೇ ಹೋಗಿ ಹಲ್ಲೆ ಮಾಡಿದೆ ಎಂದು ಆಪಾದಿಸಲಾಗಿದೆ. ಈ ಬಗ್ಗೆ ವಿಡಿಯೊ ದಾಖಲೆಯನ್ನೂ ನೀಡಿರುವ ಪೃಥ್ವಿ ಸಿಂಗ್‌ ಅವರು, ಪ್ರಸಕ್ತ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Prtithvi singh attacked
ಹಲ್ಲೆಗೊಳಗಾದ ಪೃಥ್ವಿ ಸಿಂಗ್

ಚನ್ನರಾಜ್‌ ಹಟ್ಟಿಹೊಳಿ ಅವರ ಬಾಡಿಗಾರ್ಡ್‌ಗಳು ಮತ್ತು ಆಪ್ತರಾದ ಸದ್ದಾಂ, ಸುಜಯ್‌ ಜಾಧವ್‌ ಅವರ ಪೃಥ್ವಿ ಸಿಂಗ್‌ ಮನೆಗೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ತಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಪೃಥ್ವಿ ಸಿಂಗ್‌. ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಪೊಲೀಸರಿಗೆ ನೀಡಲಾಗಿದೆ.

Prtithvi singh attacked
ಪೃಥ್ವಿ ಸಿಂಗ್‌ ಕೈಗೆ ಗಾಯವಾಗಿರುವುದು

ಕೈಗಳಿಗೆ ಚಾಕು ಇರಿತ

ಬೆಳಗಾವಿಯ ಜಯ ನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ. ಅವರನ್ನು ಅವರ ಪುತ್ರ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ಹೋಗುವ ಮುನ್ನ ಪೃಥ್ವಿ ಸಿಂಗ್‌ ಅವರು ವಿಡಿಯೊ ಒಂದನ್ನು ಬಿಡುಗಡೆ ಮಾತನಾಡಿ, ಚನ್ನರಾಜ್‌ ಹಟ್ಟಿಹೊಳಿ ಅವರ ತಂಡ ತನಗೆ ಹಲ್ಲೆ ಮಾಡಿದೆ ಎಂದು ಆಪಾದಿಸಿದ್ದಾರೆ.

ಇದನ್ನೂ ಓದಿ: ವಿಶೇಷಚೇತನರ ಬೇಡಿಕೆ ಶೀಘ್ರ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಆಸ್ಪತ್ರೆಗೆ ದೌಡಾಯಿಸಿದ ಬಿಜೆಪಿ ನಾಯಕರು

ಈ ನಡುವೆ, ಅಧಿವೇಶನಕ್ಕಾಗಿ ಬೆಳಗಾವಿಯಲ್ಲಿರುವ ಬಿಜೆಪಿ ನಾಯಕರು ಕೆಎಲ್‌ಇ ಆಸ್ಪತ್ರೆಗೆ ಭೇಟಿ ನೀಡಿ ಪೃಥ್ವಿ ಸಿಂಗ್‌ ಅವರ ಆರೋಗ್ಯ ವಿಚಾರಿಸಿದ್ದಾರೆ. ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಅವರು ಪೃಥ್ವಿ ಸಿಂಗ್‌ ಅವರಿಗೆ ಧೈರ್ಯ ತುಂಬಿದ್ದಾರೆ ಮತ್ತು ಹಲ್ಲೆಕೋರರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಯಾರೇ ಹಲ್ಲೆ ಮಾಡಿದರೂ ಕಠಿಣ ಕ್ರಮ ಎಂದ ಪರಮೇಶ್ವರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನ ಆಪ್ತರು ಪೃಥ್ವಿ ಸಿಂಗ್‌ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು, ʻʻಏನೇ ಇದ್ದರೂ ನಮ್ಮ‌ ಪೊಲೀಸರು ನೋಡಿಕೊಳ್ತಾರೆ.. ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುತ್ತಾರೆ.. ನಾನು ಈಗಷ್ಟೇ ಅಧಿವೇಶನ‌ ಮುಗಿಸಿ ಬಂದಿದ್ದೇನೆ ನೋಡ್ತೀನಿʼʼ ಎಂದು ಪರಮೇಶ್ವರ್ ಹೇಳಿದರು.

ದುರುದ್ದೇಶಪೂರ್ವಕ ಆರೋಪ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ಪೃಥ್ವಿ ಸಿಂಗ್ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್‌ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುವುದು ಪತ್ತೆ ಹಚ್ಚಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಚನ್ನರಾಜ್‌ ಹಟ್ಟಿಹೊಳಿ ಆಪ್ತರು ಪೃಥ್ವಿ ಸಿಂಗ್‌ ಮನೆಗೆ ಬಂದಿರುವ ದೃಶ್ಯ

Continue Reading

ಕರ್ನಾಟಕ

ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Vijayapura News: ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಅವಘಡ ನಡೆದಿದೆ.

VISTARANEWS.COM


on

labourers trapped
Koo

ವಿಜಯಪುರ: ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ (Vijayapura News) ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ನಡೆದಿದೆ. ಫುಡ್ ಪ್ರೊಸೆಸಿಂಗ್ ಯುನಿಟ್‌ನಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಬಿಹಾರ ಮೂಲದ ಕಾರ್ಮಿಕರು ಗೋದಾಮಿನಲ್ಲಿ ಸಿಲುಕಿದ್ದಾರೆ. ಕಳೆದ ಹಲವು ವರ್ಷಗಳಿಂದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಇವರು ಕೆಲಸ ಮಾಡುತ್ತಿದ್ದರು. ಕಾರ್ಮಿಕರನ್ನು ರಕ್ಷಿಸಲು 4 ಜೆಸಿಬಿಗಳಿಂದ ಕಳೆದ ಎರಡು ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಎಸ್‌.ಪಿ. ಋಷಿಕೇಶ ಸೋನಾವಣೆ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.

ಇದನ್ನೂ ಓದಿ | Bhavani Revanna : ಅದು ನಮ್ಮ ಕಾರಲ್ಲ ಫ್ರೆಂಡ್‌ದು ಎಂದ ರೇವಣ್ಣ; ಭವಾನಿ ತಪ್ಪಿಗೂ ಕ್ಷಮೆ ಕೇಳಿದ್ರು!

ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Car catches fire after hitting bus
ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rohit Sharma
ಕ್ರಿಕೆಟ್21 mins ago

Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

Suvarna Vidhana Soudha
ಕರ್ನಾಟಕ22 mins ago

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ; ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

BY Vijayendra Channaraj Hattiholi
ಕರ್ನಾಟಕ28 mins ago

BY Vijayendra : ಪೃಥ್ವಿ ಸಿಂಗ್‌ಗೆ ಇರಿತ ಪ್ರಕರಣ; ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಆಗ್ರಹ

Virat kohli
ಕ್ರಿಕೆಟ್43 mins ago

Suryakumar Yadav : ಕೊಹ್ಲಿ ದಾಖಲೆ ಮುರಿಯಲು ಸಜ್ಜಾಗಿದ್ದಾರೆ ಸೂರ್ಯಕುಮಾರ್​

Prtithvi singh attacked
ಕರ್ನಾಟಕ1 hour ago

Lakshmi Hebbalkar : ಜಾರಕಿಹೊಳಿ ಆಪ್ತನಿಗೆ ಹೆಬ್ಬಾಳ್ಕರ್‌ ಸೋದರನ ಗ್ಯಾಂಗ್‌ನಿಂದ ಚೂರಿ ಇರಿತ

Youth Sports
ಕ್ರೀಡೆ1 hour ago

Football Tournament : ರಿಲಯನ್ಸ್ ಫೌಂಡೇಶನ್ ಟ್ರೋಫಿ ಗೆದ್ದ ಸೇಂಟ್​ ಜೋಸೆಫ್ಸ್​​ ಕಾಲೇಜು

labourers trapped
ಕರ್ನಾಟಕ1 hour ago

ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Fresh violence in Manipur and 13 people found dead in village
ದೇಶ2 hours ago

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ! ಬಿತ್ತು ಲೀತು ಗ್ರಾಮದಲ್ಲಿ 13 ಜನರ ಹೆಣ

Ravi Bishnoi
ಕ್ರಿಕೆಟ್2 hours ago

Ravi Bishnoi : ರವಿ ಬಿಷ್ಣೋಯಿಯನ್ನು ಕೊಂಡಾಡಿದ ಲೆಜೆಂಡರಿ ಸ್ಪಿನ್ನರ್​

Lawyers celebrate
ಕರ್ನಾಟಕ2 hours ago

ಪೊಲೀಸರು ಹಾಕಿದ್ದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ; ಕಾಫಿನಾಡಿನಲ್ಲಿ ವಕೀಲರ ಸಂಭ್ರಮ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ16 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌