Hindu Temples: ಹಿಂದೂ ದೇಗುಲದ ಹಣವು ಮುಂದೂ ಆ ಸಮುದಾಯಗಳ ಅಭಿವೃದ್ಧಿಗೇ ಬಳಕೆ: ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

Hindu Temples: ಹಿಂದೂ ದೇಗುಲದ ಹಣವು ಮುಂದೂ ಆ ಸಮುದಾಯಗಳ ಅಭಿವೃದ್ಧಿಗೇ ಬಳಕೆ: ಸಿಎಂ ಸಿದ್ದರಾಮಯ್ಯ

Hindu Temples: 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Hindu temples money used for development of Hindu communities CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ (Hindu Temples) ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯವಾಗಿ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಿಂದೆ ಮುಂದೆ ಎಂದೆಂದೂ ಸಹ ಹಿಂದೂ ದೇವಾಲಯಗಳಿಂದ ಸಂಗ್ರಹವಾದ ಹಣವನ್ನು ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಕೆ ಮಾಡಲಾಗುತ್ತದೆ. ಈ ಸಂಬಂಧ ನಿಯಮವೂ ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಅಲ್ಲದೆ, ಬಿಜೆಪಿ ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿಕೆಯಲ್ಲೇನಿದೆ?

“ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ.

ನಿಯಮವೇ ಹೇಳುತ್ತದೆ

ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ.

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:
(1). ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;
(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ
(3) ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.
ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:
(1) ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;
(2) ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
(3) ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.
ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ.

ಬಿಜೆಪಿಯ ಸಂಚು

ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ.

ರಾಜಕೀಯ ಲಾಭಕ್ಕಾಗಿ ಯತ್ನ

ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ. ಇದೆಲ್ಲವನ್ನೂ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದು ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ.

ಇದನ್ನೂ ಓದಿ: Karnataka Budget Session 2024: ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರ ಮಧ್ಯಾಹ್ನಕ್ಕೆ ಮೊಟಕು? ಬಳಿಕ ರೆಸಾರ್ಟ್‌ಗೆ ಶಿಫ್ಟ್‌?

ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಕಾರಣಕ್ಕಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ. ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದರು. ಹಾಗಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಈಗ ಚುನಾವಣೆ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ.

VISTARANEWS.COM


on

Shyam Rangeela
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣೆ ಆಯೋಗವು ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸದಿರುವುದು ಸೇರಿ ಹಲವು ಶಿಷ್ಟಾಚಾರಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು (Election Commission) ನಾಮಪತ್ರವನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ನಾಮಪತ್ರ ತಿರಸ್ಕಾರಗೊಂಡ ಬಳಿಕ ಶ್ಯಾಮ್‌ ರಂಗೀಲಾ ಅವರು ಅಸಮಾಧಾನ ವ್ಯಕ್ತಪಡಿಸಿದೆ. “ವಾರಾಣಸಿಯಲ್ಲಿ ಚುನಾವಣೆ ಆಯೋಗವು ಪ್ರಜಾಪ್ರಭುತ್ವವನ್ನು ನಿರ್ನಾಮ ಮಾಡಲು ಹೊರಟಿದೆ. ನಾನೇನೂ ಇಲ್ಲಿಗೆ ಮೋದಿ ಅವರನ್ನು ಸೋಲಿಸಲು ಬಂದಿರಲಿಲ್ಲ. ಸ್ಪರ್ಧೆಯಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ, ವಾರಾಣಸಿಯ ಜನ ನನಗೆ ಬೆಂಬಲ ನೀಡಿದರು. ನನಗಾಗಿ ಹಣ ನೀಡಲು ಬಂದರು. ನಾನು ಸೋತರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಭಾವಿಸಿದ್ದೆ. ಆದರೆ, ನನ್ನನ್ನು ಈಗ ಸ್ಪರ್ಧೆಯಿಂದಲೇ ತಡೆಯಲಾಗಿದೆ. ಇದು ಪ್ರಜಾತಂತ್ರಕ್ಕೆ ಮಾಡಿದ ಅಪಮಾನ” ಎಂದು ಶ್ಯಾಮ್‌ ರಂಗೀಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದ ಅವರು ಮೇ 14ರಂದು ನಾಮಪತ್ರ ಸಲ್ಲಿಸಿದ್ದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Continue Reading

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕ್ರೈಂ

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Prajwal Revanna Case: ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ? ಏನು ಮಾಡಬಹುದು ಎಂಬ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Prajwal Revanna Case Will SIT team go abroad for arrest Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ಕೇಸ್‌ ಜಟಿಲವಾಗುತ್ತಲೇ ಇದೆ. ಒಂದು ಕಡೆ ಎಸ್‌ಐಟಿ ತನಿಖೆ ಬಗ್ಗೆ ವಿಪಕ್ಷಗಳ ಅಸಮಾಧಾನ ಹಾಗೂ ಆರೋಪ. ಇನ್ನೊಂದು ಕಡೆ ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ರಾಜಕೀಯ

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದ್ದಾರೆ. ಯಾದಗಿರಿ ನಗರದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

VISTARANEWS.COM


on

North East Graduate Constituency Election Congress party leaders and workers Meeting in Yadgiri
Koo

ಯಾದಗಿರಿ: ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದ್ದು ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದಾಗಿದೆ, ಚುನಾವಣೆಯಲ್ಲಿ (MLC Election) ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು.

ನಗರದ ಎಸ್.ಡಿ.ಎನ್ ಹೋಟಲ್ ಸಭಾಂಗಣದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರಿಗೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಅದರಲ್ಲೂ ವಿಶೇಷವಾಗಿ ಪದವಿಧರರಿಗೆ ಅನುಕೂಲವಾಗುವ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ, ಇನ್ನೂ ಹೆಚ್ಚು ಯೋಜನೆಗಳನ್ನು ಹಮ್ಮಿಕೊಂಡಿದೆ, ವಾಸ್ತವಿಕತೆ ಅರಿತು ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ, ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ನಾಯಕರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿ, ಸುಳ್ಳು ಭರವಸೆಗಳನ್ನು ನೀಡಿ, ಯುವಕರನ್ನು ಆಕರ್ಷಿಸಿ, ಮತ ಪಡೆದು ಅಧಿಕಾರಕ್ಕೆ ಬಂದ ನಂತರ ಉದ್ಯೋಗ ಸೃಷ್ಟಿ ಮಾಡಲಿಲ್ಲ, ಬದಲಾಗಿ ಭಾರತ ಸರ್ಕಾರದ ಪ್ರಮುಖ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ, ಉದ್ಯೋಗ ಖಡಿತಗೊಳಿಸಿದ್ದಾರೆ, ಇದರಿಂದ ಯುವಕರು ನಿರಾಶೆಗೊಂಡಿದ್ದಾರೆ, ಈ ಚುನಾವಣೆಯಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ನಮ್ಮ ಅಭ್ಯರ್ಥಿ ಪರ ಒಲವು ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಕಾಗ್ರೆಸ್ ಅಭ್ಯರ್ಥಿ ಡಾ, ಚಂದ್ರಶೇಖರ ಬಿ. ಪಾಟೀಲ್ ಮಾತನಾಡಿ, ಈಶಾನ್ಯ ಪದವಿಧರರ ಕ್ಷೇತ್ರದ ವಿಸ್ತಾರ ದೊಡ್ಡದಾಗಿದೆ, ಕಳೆದ 6 ವರ್ಷಗಳಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಮತದಾರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ, ಚುನಾವಣೆಯಲ್ಲಿ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು, ಈ ಭಾಗದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳ ಸಂಕಲ್ಪ ನಾನು ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 371ನೇ ಜೆ. ಅಡಿಯಲ್ಲಿ ಸಂವಿಧಾನಬದ್ದವಾಗಿ ಸಿಗಬೇಕಾದ ಔದ್ಯೋಗಿಕ ಹಾಗೂ ಶೈಕ್ಷಣಿಕ ಮೀಸಲಾತಿಯ ಸೌಲಭ್ಯವನ್ನು ಸಮರ್ಪಕವಾಗಿ ಜಾರಿಗೊಳಿಸಲು ಹಾಗೂ ಈ ಭಾಗದ ಪದವೀಧರರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಪರಿಷತ್‌ನಲ್ಲಿ ಕಲ್ಯಾಣ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

ಈ ಸಂದರ್ಭದಲ್ಲಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು, ಕೆಪಿಸಿಸಿ ಉಪಾಧ್ಯಕ್ಷ ಶರಣಪ್ಪ ಮಟ್ಟೂರ, ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಎ.ಸಿ ಕಾಡ್ಲೂರ, ಚಿದಾನಂದಪ್ಪ ಕಾಳೆಬೆಳಗುಂದಿ, ಡಾ. ಭೀಮಣ್ಣ ಮೇಟಿ, ಚಂದ್ರಶೇಖರ ದಂಡೀನ್, ನಿಂಗರಾಜ ಬಾಚಿಮಟ್ಟಿ, ಸಿದ್ಲಿಂಗರಡ್ಡಿ ಉಳ್ಳೆಸೂಗೂರ, ರಾಜಶೇಖರ ಪಾಟೀಲ್ ವಜ್ಜಲ್, ಸುದರ್ಶನ ನಾಯಕ, ಕೃಷ್ಣಾ ಚಪಟ್ಲಾ, ನಿರಂಜನ್‌ರಡ್ಡಿ ಶೆಟ್ಟಿಹಳ್ಳಿ, ಮರೇಪ್ಪ ಬಿಳ್ಹಾರ, ಮಲ್ಲಣ್ಣ ಸಾಹುಕಾರ, ಮಂಜುಳಾ ಗೂಳಿ, ರಾಜಾ ಕುಮಾರ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಶ್ಯಾಮಸನ್ ಮಾಳಿಕೇರಿ ಸ್ವಾಗತಿಸಿದರು.

Continue Reading
Advertisement
Kangana Ranaut
Lok Sabha Election 202418 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ24 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್29 mins ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ48 mins ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ1 hour ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

stay awake till late night what is the problem For health
ಆರೋಗ್ಯ2 hours ago

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

dina bhavishya read your daily horoscope predictions for May 16 2024
ಭವಿಷ್ಯ3 hours ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Mamata Banerjee
ಪ್ರಮುಖ ಸುದ್ದಿ8 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ8 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌