Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ? - Vistara News

ರಾಜಕೀಯ

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರೊಂದಿಗಿನ ವಾಗ್ವಾದದ ಬಳಿಕ ಇಂಡಿಯಾ ಬ್ಲಾಕ್ ಕೂಟದ ನಾಯಕರು ಒಟ್ಟಾಗಿ ರಾಜ್ಯಸಭೆಯಿಂದ ಹೊರ ನಡೆದಿದ್ದರು. ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನ್‌ಕರ್ (Jagdeep Dhankhar) ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ 87 ಸದಸ್ಯರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಕೆಳಗಿಸಲು ಸಾಧ್ಯವೇ? ಇದರ ಪ್ರಕ್ರಿಯೆ ಏನು ಎನ್ನುವ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Jagdeep Dhankhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ (Jagdeep Dhankhar) ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ (no-confidence resolution) ಮಂಡಿಸಲು ಸಿದ್ಧತೆ ನಡೆಸುತ್ತಿದೆ. 18ನೇ ಅಧಿವೇಶನದಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ (Rajya Sabha) ವಿರೋಧ ಪಕ್ಷಗಳ ನಾಯಕರುಗಳು (Leaders of opposition parties) ಮತ್ತು ಸಭಾಪತಿ ಜಗದೀಪ್ ಧನ್‌ಕರ್ ನಡುವೆ ವಾಗ್ವಾದ ನಡೆದಿದ್ದು, ಪ್ರತಿಪಕ್ಷ ʼಇಂಡಿಯಾʼ ಬಣಗಳು ಅವರ ವಿರುದ್ಧ ನೊಟೀಸ್ ಸಲ್ಲಿಸಲು ಮುಂದಾಗಿವೆ.

ಮೂಲಗಳ ಪ್ರಕಾರ ನೊಟೀಸ್ ಬಗ್ಗೆ ಚರ್ಚಿಸಿ ನಿರ್ಧರಿಸಬೇಕಿದೆ. ಇದು ಯಾವ ಸಮಯದವರೆಗೆ ಎಂಬುದು ತಿಳಿದು ಬಂದಿಲ್ಲ. ವಿರೋಧ ಪಕ್ಷಗಳು ಅವರನ್ನು ಪದಚ್ಯುತಗೊಳಿಸಲು ಸಂಖ್ಯಾಬಲವನ್ನು ಹೊಂದಿಲ್ಲದ ಕಾರಣ ನಿರ್ಣಯವು ಜಾರಿಯಾಗದಿದ್ದರೂ ಇದು ಅಧ್ಯಕ್ಷರಿಗೆ ವಿರೋಧವನ್ನು ಎತ್ತಿ ತೋರಿಸುವ ವಿಧಾನವಾಗುತ್ತದೆ ಎನ್ನುವುದು ಪ್ರತಿಪಕ್ಷಗಳ ಲೆಕ್ಕಾಚಾರವಾಗಿದೆ.

ಧನ್‌ಕರ್ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ 87 ಸದಸ್ಯರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದೆ ಸದನಸ ನಾಯಕ ಜೆ.ಪಿ. ನಡ್ಡಾ ಅವರಿಗೆ ಅನೌಪಚಾರಿಕವಾಗಿ ಉಪಾಧ್ಯಕ್ಷರನ್ನು ಪದಚ್ಯುತಗೊಳಿಸುವ ಪ್ರಸ್ತಾಪವನ್ನು ಸಲ್ಲಿಸಲು ಪ್ರತಿಪಕ್ಷಗಳು ಚಿಂತಿಸಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷಗಳ ಆತಂಕವೇನು?

ಸದನದಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ ಅನ್ನು ಪದೇಪದೇ ಆಫ್‌ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ಸದನವನ್ನು ನಿಯಮ ಮತ್ತು ಸಂಪ್ರದಾಯಗಳ ಪ್ರಕಾರ ನಡೆಸಬೇಕೆಂದು ಅವರು ಬಯಸುತ್ತಿದ್ದು, ಸದಸ್ಯರ ವಿರುದ್ಧ ವೈಯಕ್ತಿಕ ಟೀಕೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳ ವಿರುದ್ಧ ಅವರು ಪಕ್ಷಪಾತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದರಿಂದ ಧನ್‌ಕರ್ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳ ನಡುವೆ ಸಾಕಷ್ಟು ವಾಗ್ವಾದ ನಡೆಯಿತು. ಸೋನಿಯಾ ಗಾಂಧಿ ನೇತೃತ್ವದ ಪ್ರತಿಪಕ್ಷಗಳು ರಾಜ್ಯಸಭೆಯಿಂದ ಹೊರನಡೆದ ಬೆನ್ನಲ್ಲೇ, ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯಸಭಾಧ್ಯಕ್ಷರು ಮೇಲ್ಮನೆಯಲ್ಲಿ ಪ್ರತಿಪಕ್ಷಗಳಿಗೆ ನೀಡಬೇಕಾದ ಪ್ರಾಮುಖ್ಯತೆಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.


ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಮತ್ತು ಧನ್‌ಕರ್ ನಡುವೆ ತೀವ್ರ ವಾಗ್ವಾದ ನಡೆದ ಬಳಿಕ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಸದನದಿಂದ ಹೊರನಡೆದಿದ್ದರು. ಇದಕ್ಕೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ನಡ್ಡಾ, ಪ್ರತಿಪಕ್ಷಗಳು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು. ಸೋನಿಯಾ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರನ್ನು ಒಳಗೊಂದು ಸುದ್ದಿಗೋಷ್ಠಿ ನಡೆಸಿದ ಜಯಾ ಬಚ್ಚನ್, “ನಾವು ಶಾಲಾ ಮಕ್ಕಳಲ್ಲ. ನಾನು ಅವರ ಮಾತಿನಿಂದ ಅಸಮಾಧಾನಗೊಂಡಿದ್ದೇನೆ. ವಿಶೇಷವಾಗಿ ಮಾತನಾಡಲು ನಿಂತಾಗ, ಮೈಕ್ ಸ್ವಿಚ್ ಆಫ್ ಆಗಿತ್ತು. ಅವರು ಪ್ರತಿ ಬಾರಿಯೂ ಅಸಂಸದೀಯ ಪದಗಳನ್ನು ಬಳಸುತ್ತಾರೆʼʼ ಎಂದು ಆರೋಪಿಸಿದ್ದರು.

ವಿರೋಧ ಪಕ್ಷಗಳು ಹೇಳುವುದೇನು?

ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಮಾತನಾಡಿ, ಸಭಾಪತಿಯ ಧೋರಣೆ ಪಕ್ಷಪಾತದಿಂದ ಕೂಡಿದೆ. ರಾಜ್ಯಸಭೆಯಲ್ಲಿ ಸಭಾಪತಿ ಪಕ್ಷಾತೀತ ಆಗಿರಬೇಕು. ಎಲ್ಲಾ ಆಯ್ಕೆಗಳು ಮುಕ್ತವಾಗಿವೆ. ಕಾನೂನು ಮತ್ತು ನಿಯಮ ಪುಸ್ತಕದಲ್ಲಿ ಏನೇ ಇರಲಿ, ಸಂವಿಧಾನದಲ್ಲಿ ಏನೇ ಇರಲಿ, ನಡವಳಿಕೆಯ ಕಾರ್ಯವಿಧಾನದೊಳಗೆ, ಕಾನೂನಿನಲ್ಲಿ ಯಾವುದೇ ನಿಬಂಧನೆಗಳು ಇರಲಿ, ಎಲ್ಲಾ ಆಯ್ಕೆಗಳು ನಮಗೆ ಮುಕ್ತವಾಗಿವೆ. ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವಾಗ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶವಿಲ್ಲ. ಅವರಿಗೂ ಆಗಾಗ ಅಡ್ಡಿಪಡಿಸಲಾಗುತ್ತದೆ. ಅವರ ಮೈಕ್‌ಗಳನ್ನು ಆಗಾಗ ಆಫ್‌ ಮಾಡಲಾಗುತ್ತದೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

Jagdeep Dhankhar


ಉಪಾಧ್ಯಕ್ಷರನ್ನು ಹೇಗೆ ತೆಗೆದು ಹಾಕಬಹುದು?

ಉಪಾಧ್ಯಕ್ಷರು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರಾಗಿದ್ದಾರೆ ಮತ್ತು ಮೇಲ್ಮನೆಯ ಸುಗಮ ಕಾರ್ಯನಿರ್ವಹಣೆಗಾಗಿ ನಿಯಮಗಳು ಮತ್ತು ಸಂಪ್ರದಾಯಗಳನ್ನು ಎತ್ತಿಹಿಡಿಯುವ ಮೂಲಕ ಸಂಸದೀಯ ವ್ಯವಸ್ಥೆಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಅವರನ್ನು ಭಾರತದ ಉಪರಾಷ್ಟ್ರಪತಿ ಹುದ್ದೆಯಿಂದ ತೆಗೆದುಹಾಕಿದಾಗ ಮಾತ್ರ ಅವರನ್ನು ರಾಜ್ಯಸಭೆ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಬಹುದು!

ಇದನ್ನು ರಾಜ್ಯಸಭೆಯಲ್ಲಿ ನಿರ್ಣಯದ ಮೂಲಕ ಮಾಡಬಹುದು. ಆ ವೇಳೆ ಬಹುಪಾಲು ಸದಸ್ಯರ ಅಂಗೀಕಾರ ಮುಖ್ಯವಾಗುತ್ತದೆ. ಬಳಿಕ ಲೋಕಸಭೆಯ ಒಪ್ಪಿಗೆ ಬೇಕಾಗುತ್ತದೆ. ಈ ಉದ್ದೇಶಕ್ಕಾಗಿ ನಿರ್ಣಯವನ್ನು ಕನಿಷ್ಠ 14 ದಿನಗಳ ಸೂಚನೆಯ ಅನಂತರ ಮಾತ್ರ ವರ್ಗಾಯಿಸಬಹುದು. ಸಂವಿಧಾನದ ಪರಿಚ್ಛೇದ 67(b) ಪ್ರಕಾರ ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ನಿರ್ಣಯದ ಮೂಲಕ ಎಲ್ಲಾ ಸದಸ್ಯರ ಬಹುಮತದ ಬಳಿಕ ಸದನದ ಒಪ್ಪಿಗೆ ಪಡೆದು ತೆಗೆದು ಹಾಕಬಹುದು. ಆದರೆ ನಿರ್ಣಯವನ್ನು ಮಂಡಿಸುವ ಕನಿಷ್ಠ ಹದಿನಾಲ್ಕು ದಿನಗಳ ಸೂಚನೆಯನ್ನು ನೀಡಬೇಕಾಗುತ್ತದೆ.

ಏನು ಪ್ರಕ್ರಿಯೆ?

ಪದಚ್ಯುತಿ ನಿರ್ಣಯವನ್ನು ರಾಜ್ಯಸಭೆಯಲ್ಲಿ ಮಾತ್ರ ಮಂಡಿಸಬಹುದೇ ಹೊರತು ಲೋಕಸಭೆಯಲ್ಲಿ ಅಲ್ಲ.
ಇದನ್ನೂ ಓದಿ: Parliament Session: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಜಗದೀಪ್ ಧನಕರ್-ಜಯಾ ಬಚ್ಚನ್ ಜಟಾಪಟಿ! ಈ ವಿಡಿಯೊ ನೋಡಿ

ನಿರ್ಣಯವನ್ನು ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ. ಬಳಿಕ ಲೋಕಸಭೆಯಲ್ಲಿ ಸರಳ ಬಹುಮತದಿಂದಾದರೂ ಒಪ್ಪಿಗೆ ಸೂಚಿಸಬೇಕಾಗುತ್ತದೆ. ನಿರ್ಣಯವು ಪರಿಗಣನೆಯಲ್ಲಿರುವಾಗ ಅಧ್ಯಕ್ಷರು ಸದನದ ಅಧ್ಯಕ್ಷತೆ ವಹಿಸುವಂತಿಲ್ಲ. ಹಾಜರಾಗಬಹುದು, ಮಾತನಾಡಬಹುದು ಮತ್ತು ಕಲಾಪದಲ್ಲಿ ಭಾಗವಹಿಸಬಹುದು. ಆದರೆ ಮತ ಚಲಾಯಿಸಲು ಸಾಧ್ಯವಿಲ್ಲ.
ರಾಜ್ಯಸಭೆಯ ಅಧ್ಯಕ್ಷರ ಪದಚ್ಯುತಿಗೆ ನಿರ್ಣಯವು ಪರಿಗಣನೆಯಲ್ಲಿರುವಾಗ ಸಮಾನ ಮತಗಳು ಬಂದರೆ ಲೋಕಸಭೆಯ ಅಧ್ಯಕ್ಷರು ತಮ್ಮ ಮತ ಚಲಾಯಿಸಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

VISTARANEWS.COM


on

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳಂನ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿದ್ದ ಹೆಸರು ಕೆ.ಸಿ. ವೇಣುಗೋಪಾಲ್‌. ಹೈಕಮಾಂಡ್‌ ಬೆಂಬಲ ಕೂಡಾ ಕೆ.ಸಿ. ವೇಣುಗೋಪಾಲ್ ಅವರಿಗಿತ್ತು. ಹೀಗಿದ್ದರೂ, ವಿ.ಡಿ. ಸತೀಶನ್ ಆಯ್ಕೆ ಆಗಿದ್ದು ಹೇಗೆ ಎಂಬುದಕ್ಕೆ ಉತ್ತರ ಇಲ್ಲಿದೆ.

  1. ವಿ.ಡಿ ಸತೀಶನ್‌ಗೆ ಪಕ್ಷದ 47 ಶಾಸಕರ ಬೆಂಬಲ:
    ಮೂಲಗಳ ಪ್ರಕಾರ ವಿ.ಡಿ ಸತೀಶನ್‌ ಅವರಿಗೆ 63 ಕಾಂಗ್ರೆಸ್ ಶಾಸಕರ ಪೈಕಿ 47 ಶಾಸಕರು ಬೆಂಬಲ ನೀಡಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
  2. ಸತೀಶನ್‌ಗೆ ಯುಡಿಎಫ್ ಮೈತ್ರಿಕೂಟದ ನಾಯಕರ ಬೆಂಬಲ:
    ಕಾಂಗ್ರೆಸ್‌ ಶಾಸಕರ ಜೊತೆ ಮೈತ್ರಿಕೂಟದ ನಾಯಕರೂ ಬೆಂಬಲಿಸಿದ್ದು, ಸತೀಶನ್‌ ಪಾಲಿಗೆ ವರದಾನವಾಗಿತ್ತು. ಸತೀಶನ್ ಪರವಾಗಿ ಬಲವಾಗಿ ಇಂಡಿಯನ್ ಮುಸ್ಲಿಂ ಲೀಗ್ ಹಾಗೂ ಕೇರಳ ಕಾಂಗ್ರೆಸ್‌ ಪಕ್ಷಗಳು ಬಲವಾಗಿ ನಿಂತಿದ್ದವು.
  3. ಸಿಎಂ ಪದವಿಗೆ ಸತೀಶನ್ ಹಠ:
    ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಕೊಡಿ. ಇಲ್ಲದಿದ್ದರೆ ಯಾವ ಪದವಿಯೂ ಬೇಡ ಎಂದು ಸತೀಶನ್ ಪಟ್ಟು ಹಿಡಿದಿದ್ದರು. ಅನ್ಯ ಮುಖ್ಯಮಂತ್ರಿಯ ಕೆಳಗೆ ಕಾರ್ಯ ನಿರ್ವಹಿಸಲು ಸುತಾರಾಂ ಒಪ್ಪಿರಲಿಲ್ಲ. ಕೊನೆಗೂ ಸತೀಶನ್ ಹಠಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣಿದಿದೆ.
  4. ಮೆರಿಟ್ ಕೂಡಾ ಸತೀಶನ್ ಪರವಾಗಿತ್ತು:
    ಮೆರಿಟ್ ಕೂಡಾ ಸತೀಶನ್ ಪರವಾಗಿತ್ತು. ಪ್ರತಿಪಕ್ಷ ನಾಯಕನಾಗಿ ಅವರ ರಣತಂತ್ರದಿಂದಲೇ ಪಿಣರಾಯಿ ಸರ್ಕಾರ ಪರಾಭವಗೊಂಡಿತು ಎಂದು ಹೇಳಲಾಗಿದೆ. ಅಲ್ಲದೆ, ಯುಡಿಎಫ್‌ ಮೈತ್ರಿಕೂಟದ ನಾಯಕನಾಗಿ, ಪಕ್ಷವನ್ನು ಗೆಲುವಿನ ದಡ ತಲುಪಿಸಿದ ಕೀರ್ತಿ ಸತೀಶನ್‌ಗೆ ಸಲ್ಲುತ್ತದೆ. ಅದಲ್ಲದೇ ಇವರು ಕೇರಳ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರು ಹೌದು.
  5. ವೇಣುಗೋಪಾಲ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ:
    ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಬಲ ಹೆಚ್ಚಾಗುತ್ತಿರುವಂತೆಯೇ, ಸಂಭಾವ್ಯ ಭಿನ್ನಮತ ತಪ್ಪಿಸಲು ಹೈಕಮಾಂಡ್ ರಣತಂತ್ರ ರೂಪಿಸುತ್ತು. ಹಾಗಾಗಿಯೇ, ವೇಣುಗೋಪಾಲ್‌ ಮನವೊಲಿಕೆಗೆ ಮುಂದಾಯಿತು. ಅದರಲ್ಲಿ ಯಶಸ್ಸು ಕೂಡಾ ಅದಕ್ಕೆ ಸಿಕ್ಕಿದೆ.
  6. ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಪರ ಅಲೆ:
    ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಪರ ಎದ್ದ ಅಲೆ, ಕಾಂಗ್ರೆಸ್‌ ಪಕ್ಷವನ್ನು ಸಂದಿಗ್ಧತೆಗೆ ದೂಡಿತ್ತು. ಪಕ್ಷದಲ್ಲಿ ಆಂತರಿಕ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಬಲವಾಗಿತ್ತು. ಚುನಾವಣೆ ಗೆದ್ದು, ಸಿಎಂ ಆಯ್ಕೆಯಲ್ಲಿ ಸೋತರೆ ಪರಿಣಾಮ ವಿಪರೀತವಾಗಬಹುದು ಎಂದು ಯೋಚಿಸಿದ ಕಾಂಗ್ರೆಸ್, ಸತೀಶನ್ ಹೆಸರಿಗೆ ಮಣೆ ಹಾಕಿತು ಎನ್ನಲಾಗಿದೆ.
Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading
Advertisement
Latest57 minutes ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest6 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest6 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest24 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest1 day ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ1 day ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌