Kannada signboard rules: ಕರ್ನಾಟಕದಲ್ಲಿ ಕನ್ನಡ ಬೋರ್ಡ್‌ ಕಡ್ಡಾಯ; 2 ವಾರ ಗಡುವು ವಿಸ್ತರಿಸಿದ ಡಿಕೆಶಿ - Vistara News

ರಾಜಕೀಯ

Kannada signboard rules: ಕರ್ನಾಟಕದಲ್ಲಿ ಕನ್ನಡ ಬೋರ್ಡ್‌ ಕಡ್ಡಾಯ; 2 ವಾರ ಗಡುವು ವಿಸ್ತರಿಸಿದ ಡಿಕೆಶಿ

Kannada signboard rules: ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಮುಂದಿನ 2 ವಾರದವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 2 ವಾರಗಳ‌ ನಂತರ ಇದನ್ನು ಎಲ್ಲರೂ ಪಾಲಿಸುತ್ತಾರೆ ಎಂಬುದು ತಮ್ಮ ನಿರೀಕ್ಷೆಯಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Kannada signboard rules Kannada board is mandatory in Karnataka deadline 2 weeks extend
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಫೆಬ್ರವರಿ 28 ರೊಳಗಾಗಿ ಶೇ. 60ರಷ್ಟು ಕನ್ನಡ (Kannada signboard rules) ಅಳವಡಿಕೆಗೆ ಬಿಬಿಎಂಪಿ ನೀಡಿದ್ದ ಗಡುವು ಮುಕ್ತಾಯಗೊಂಡಿತ್ತು. ಆದರೆ, ಬಿಬಿಎಂಪಿ (BBMP) ಇಂದು (ಗುರುವಾರ- ಫೆ. 29) ಸಂಜೆವರೆಗೆ ಅವಕಾಶವನ್ನು ಕಲ್ಪಿಸಿತ್ತು. ಈಗ ಡಿಸಿಎಂ, ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ (DK Shivakumar) ವ್ಯಾಪಾರಸ್ಥರಿಗೆ ಬಿಗ್‌ ರಿಲೀಫ್‌ ನೀಡಿದ್ದು, ಎರಡು ವಾರಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಿದ್ದಾಗಿ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್‌ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ. ಶಿವಕುಮಾರ್‌, ಮುಂದಿನ 2 ವಾರದವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 2 ವಾರಗಳ‌ ನಂತರ ಇದನ್ನು ಎಲ್ಲರೂ ಪಾಲಿಸುತ್ತಾರೆ ಎಂಬುದು ತಮ್ಮ ನಿರೀಕ್ಷೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಡಿ.ಕೆ. ಶಿವಕುಮಾರ್ ಪೋಸ್ಟ್‌ನಲ್ಲೇನಿದೆ?

“ಬೆಂಗಳೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ” ಎಂದು ಡಿ.ಕೆ. ಶಿವಕುಮಾರ್‌ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾ. 5ರ ಗಡುವು ನೀಡಿರುವ ಕರವೇ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಲೇಬೇಕು. ಬೆಂಗಳೂರು ಮಾತ್ರವಲ್ಲ, ರಾಜ್ಯದ 31 ಜಿಲ್ಲೆಗಳಲ್ಲೂ ಈ ಕಾನೂನು ಜಾರಿಗೆ ಬರಬೇಕು. ಬಿಬಿಎಂಪಿ ನೀಡಿದ ಗಡುವು ಬುಧವಾರಕ್ಕೆ ಮುಗಿದಿದೆ. ಮಾರ್ಚ್ 1ರವರೆಗೆ ನಾವು ಕಾದು ನೋಡುತ್ತೇವೆ. ಮಾರ್ಚ್ 5ರಂದು ಮತ್ತೆ ಬೀದಿಗಿಳಿದು, ಬಿಬಿಎಂಪಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು ಬುಧವಾರ (ಫೆ.28) ಎಚ್ಚರಿಕೆ ನೀಡಿದ್ದರು.

ರಾಜ್ಯಾದ್ಯಂತ ಅನುಷ್ಠಾನ ಆಗಲೇಬೇಕೆಂದಿರುವ ಕರವೇ

46,600 ಉದ್ದಿಮೆದಾರರು ಕನ್ನಡ ನಾಮಫಲಕ ಅಳವಡಿಕೆ ಮಾಡಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ 3,616 ಉದ್ದಿಮೆದಾರರು ಅಳವಡಿಕೆ ಮಾಡಬೇಕು, ಅದನ್ನು ಶೀಘ್ರದಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದಿದ್ದಾರೆ. ಆದರೆ ಇದು ಕೇವಲ ಬೆಂಗಳೂರಿಗೆ ಅಷ್ಟೇ ಅಲ್ಲ, ರಾಜ್ಯದ 31 ಜಿಲ್ಲೆಗಳಿಗೂ ಅನ್ವಯ ಆಗಬೇಕು. ಮಾರ್ಚ್ 1ರವರೆಗೆ ಕಾದುನೋಡುತ್ತೇವೆ, ಮಾರ್ಚ್ 5ರಂದು ಮತ್ತೆ ಬೀದಿಗೆ ಇಳಿದು ಬಿಬಿಎಂಪಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕರವೇ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Nigama Mandali : 44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಅಧಿಕಾರ ಭಾಗ್ಯ; ಚಲನಚಿತ್ರ ಅಕಾಡೆಮಿಗೆ ಸಾಧುಕೋಕಿಲ

ಲೈಸೆನ್ಸ್‌ ರದ್ದು ಮಾಡಲು ಮುಂದಾಗಿದ್ದ ಬಿಬಿಎಂಪಿ

ಫೆ.29 ರಿಂದ ಅನ್ವಯವಾಗುವಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳಿಗೆ ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಗಿಯನ್ನು ಅಮಾನತು ಮಾಡಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳಿಗೆ ಬೀಗಮುದ್ರೆ (Sealdown) ಮಾಡಲು ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Lalu Prasad Yadav: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

VISTARANEWS.COM


on

Lalu Prasad Yadav
Koo

ಪಾಟ್ನಾ: ಬಿಹಾರದ ಸಾರನ್‌ ಲೋಕಸಭಾ ಕ್ಷೇತ್ರ(Saran)ದಲ್ಲಿ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ವರ್ಸಸ್‌ ಲಾಲೂ ಪುತ್ರಿ ಪರಸ್ಪರ ಮುಖಾಮುಖಿಯಾಗಿ ಕಣಕ್ಕಿದಿದ್ದಾರೆ. ಅರೆ.. ಇದೇನಿದು ಎಂದೇ ಕ್ಷೇತ್ರದಲ್ಲಿ ಅಪ್ಪ-ಮಗಳು ಇಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರಾ ಎಂದು ಅಚ್ಚರಿ ಆಗೋದಂತೂ ನಿಜ. ಆದರೆ ನಿಜಾಂಶ ಏನೆಂದರೆ ಆರ್‌ಜೆಡಿ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ(RJP) ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

ಯಾರು ಈ ಲಾಲೂ ಪ್ರಸಾದ್‌ ಯಾದವ್‌?

ಸ್ಥಳೀಯ ರೈತನಾಗಿರುವ ಲಾಲೂ ಪ್ರಸಾದ್‌ ಯಾದವ್‌, ಸಾರನ್‌ ಜಿಲ್ಲೆಯವರಾಗಿದ್ದು, ಏಪ್ರಿಲ್‌ 26ರಂದು ಆರ್‌ಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. 2022ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯ ಸಂದರ್ಭದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಸ್ಪರ್ದಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೂ ಅಲ್ಲದೇ 2017ರಲ್ಲಿ ಮಾಜಿ ಲೋಕಸಭಾ ಸ್ಪೀಕರ್‌ ಮೀರಾ ಕುಮಾರ್‌ ಮತ್ತು ರಾಮನಾಥ್‌ ಕೋವಿಂದ್‌ ಕಣದಲ್ಲಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಅವರ ನಾಮಪತ್ರವನ್ನು ತಿರಸ್ಕರಿಸಲಾಯಿತು.

ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಸಾರನ್‌ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಅನೇಕ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧವೂ ಸ್ಪರ್ಧಿಸಿದ್ದೆ. ಈ ಬಾರಿ ಅವರ ಪುತ್ರಿ ರೋಹಿಣಿ ಆಚಾರ್ಯ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ನಾನು ಬದುಕಲು ಕೃಷಿ ಮಾಡುತ್ತಿದ್ದೇನೆ. ಅದರ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಂಡಿದ್ದೇನೆ. ನಾನು ಪಂಚಾಯತ್‌ನಿಂದ ಅಧ್ಯಕ್ಷೀಯ ಚುನಾವಣೆವರೆಗೂ ಅದೃಷ್ಟಪರೀಕ್ಷೆಗೆ ನಡೆಸಿದ್ದೇನೆ. ನಾನು ಗೆದ್ದೇ ಗೆಲ್ಲುತ್ತೇನೆ. ಸಾರನ್‌ ಕ್ಷೇತ್ರದ ಜನ ನನ್ನ ಜೊತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

ಇನ್ನು ಕೇವಲ ಪ್ರಚಾರಕ್ಕಾಗಿ, ಮತ ವಿಭಜನೆಗಾಗಿ ಸ್ಪರ್ಧೆ ಎಂಬ ಟೀಕೆಗೆ ಟಾಂಗ್‌ ಕೊಟ್ಟ ಯಾದವ್‌, ನಾನು ಇಂತಹ ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಪ್ರತಿಸ್ಪರ್ಧಿಗಳು. ಅವರಿಂದ ಇಂತಹ ಹೇಳಿಕೆಗಳು ಬರುವುದು ಸಹಜ. ಇಂತಹ ಟೀಕೆಗಳಿಗೆ ನಾನು ಕುಗ್ಗಲ್ಲ. ನಾನು ಕೇವಲ ನನ್ನ ಮತದಾರರಿಗಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು. ಇನ್ನು ಲಾಲೂ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಬಳಿ 5 ಲಕ್ಷ ರೂ ಮತ್ತು ತಮ್ಮ ಪತ್ನಿ ಬಳಿ 2 ಲಕ್ಷ ರೂ. ನಗದು, 17.60 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಹಾಗೂ ತಮ್ಮ ಪತ್ನಿ ಬಳಿ 5.20 ಲಕ್ಷ ರೂ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

ದೇಶ

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Lok Sabha Election 2024: ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿಆಪ್ತ ಕಿಶೋರಿ ಲಾಲ್‌ ಶರ್ಮಾಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

VISTARANEWS.COM


on

Lok sabha Election
Koo

ನವದೆಹಲಿ:‌ ಲೋಕಸಭೆ ಚುನಾವಣೆ(Lok Sabha Election 2024)ಯ ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ(Rae Bareli) ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ(Kishori Lal Sharma) ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ. ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂದಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಠಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಇಂದೇ ನಾಮಪತ್ರ ಸಲ್ಲಿಕೆ

ಇನ್ನು ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುವುದರಿಂದ ಈ ಇಬ್ಬರೂ ನಾಯಕರೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಸೋನಿಯಾ ಗಾಂಧಿ ಸಾಥ್‌ ಕೊಡಲಿದ್ದಾರೆ. ಮತ್ತೊಂದೆಡೆ ಅಮೇಠಿಯಲ್ಲಿ ಕಿಶೋರಿಲಾಲ್‌ ಅವರಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ರಾಹುಲ್‌ ಮತ್ತು ಪ್ರಿಯಾಂಕಾ ಬೆಂಬಲಿಗರು ನಾಮಪತ್ರ ದಾಖಲೆಗಳನ್ನು ತಯಾರು ಮಾಡಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಸ್ಮೃತಿ ಇರಾನಿ ಕೂಡ ಇಂದೇ ಅಮೇಠಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Continue Reading

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading
Advertisement
Triple Talaq
ದೇಶ5 mins ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್12 mins ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ20 mins ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ21 mins ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Elephant attack in Shivamogga
ಶಿವಮೊಗ್ಗ34 mins ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ36 mins ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್40 mins ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

prajwal revanna case hd revanna farm house
ಕ್ರೈಂ44 mins ago

Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

Thomas Cup 2024
ಕ್ರೀಡೆ1 hour ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್1 hour ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ16 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌