Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು - Vistara News

ರಾಜಕೀಯ

Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು

Karnataka Budget Session 2024: ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದಾದರೆ ಬಹಿರಂಗ ಚರ್ಚೆ ಮಾಡೋಣ. ಅಲ್ಲಿಗೆ ಆರ್ಥಿಕ ತಜ್ಞರು, ಮಾಧ್ಯಮಗಳು, ಸಾರ್ವಜನಿಕರು ಬರಲಿ. ಎಲ್ಲರ ಮುಂದೆ ಮುಂದೆ ಚರ್ಚೆ ನಡೆಸೋಣ. ಅನ್ಯಾಯ ಎಂದಾದರೆ ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಅವರು ಮಾತನಾಡುತ್ತಿದ್ದಾಗ ನಿಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾಕೆ ಸುಮ್ಮನಿದ್ದರು? ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

VISTARANEWS.COM


on

Karnataka Budget Session 2024 HD Kumaraswamy challenges CM to discussion on Centre grant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ನೇರ ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕರೆಸಿ ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂಪಾಯಿಯಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್‌ಡಿಆರ್‌ಎಫ್‌ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ, ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ. ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ!! ಎನ್ನುವಂತೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ

ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ.‌ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೇಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ಖರ್ಗೆ ಯಾಕೆ ಸುಮ್ಮನೆ ಇದ್ದರು?

ರಾಜ್ಯಕ್ಕೆ ಅನ್ಯಾಯವಾದರೆ ನಾವು ಸುಮ್ಮನೆ ಇರುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆಯಲ್ಲಿ ಮೇಕೆದಾಟು ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಾತನಾಡಿದಾಗ ರಾಜ್ಯವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸದಸ್ಯರು ಯಾಕೆ ಬೆಂಬಲ ಕೊಡಲಿಲ್ಲ? ಅವರು ದನಿ ಎತ್ತಿದರೆ ನಿಮ್ಮ ಪಕ್ಷದ ಒಬ್ಬರೂ ಮಾತನಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದ್ದರಲ್ಲ, ಭಾವಿ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದೀರಿ. ಅವರೇಕೆ ಮಾತನಾಡಲಿಲ್ಲ? ಇಲ್ಲಿ ಅನ್ಯಾಯ ಆಗಿದ್ದರೆ ಅವರು ಬಾಯಿ ತೆಗೆಯಬೇಕಿತ್ತಲ್ಲ? ಅವರು ಯಾಕೆ ಮೌನವಾಗಿ ಇದ್ದರು? ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Ramanagara Lawyers: ರಾಮನಗರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ; ರಾಜಕೀಯ ಬಿಟ್ಟರೆ ವಕೀಲರ ಜತೆ ಚರ್ಚೆ: ಡಿಕೆಶಿ

ಮಾಜಿ ಸಚಿವ ಸಿಸಿ ಪಾಟೀಲ್, ಶಾಸಕರಾದ ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್ ಅವರು ಈ ಸಂದರ್ಭದಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Amethi Unrest: ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

VISTARANEWS.COM


on

amethi unrest
Koo

ಅಮೇಥಿ: ಉತ್ತರಪ್ರದೇಶ ಅಮೇಥಿ(Amethi Unrest)ಯಲ್ಲಿ ಕಾಂಗ್ರೆಸ್‌ ಕಚೇರಿ(Congress Office)ಯ ಎದುರು ನಿಲ್ಲಿಸಿದ್ದ ಕಾರುಗಳನ್ನು ಕಿಡಿಗೇಡಿಗಳು ಭಾನುವಾರ ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ(BJP workers) ದುಷ್ಕೃತ್ಯ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು, ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥ್‌(Supriya Shrinathe) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪುಂಡಾಟ ಮೆರೆಯುತ್ತಿದ್ದರೂ ಪೊಲೀಸರು ಮೌನವಹಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಬಿಜೆಪಿಗರೇ ಬದಲಾವಣೆ ಗಾಳಿ ಬೀಸುತ್ತಿದೆ. ವಾಹನಗಳನ್ನು ಧ್ವಂಸಗೊಳಿಸುವುದೊಂದೇ ಸಮಸ್ಯೆಗ ಪರಿಹಾರ ಅಲ್ಲ ಎಂದು ಅವರು ಟಾಂಗ್‌ ಕೊಟ್ಟಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆ ಕುರಿತು ಗೌರಿಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

ಅಮೇಥಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

ಸಿನಿಮಾ

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Megha Dhade:  ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಾಹುಲ್ ಗಾಂಧಿಯವರ ವೀಡಿಯೊವನ್ನು ಹಂಚಿಕೊಂಡ ನಟಿ ಮೇಘಾ, ‘ರಾಹುಲ್ ಗಾಂಧಿಯನ್ನು ಬೆಂಬಲಿಸುವವರಿಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಅವರನ್ನು ನಾನು ದ್ವೇಷಿಸುತ್ತೇನೆ. ನಮ್ಮ ದೇಶವನ್ನು ಬಿಟ್ಟು ನರಕಕ್ಕೆ ಹೋಗಿ’ ಎಂದು ಹೇಳಿದ ಪೋಸ್ಟ್ ಇದೀಗ ವೈರಲ್‌ ಆಗುತ್ತಿದೆ.

VISTARANEWS.COM


on

Megha Dhade bigg boss marathi winner crptic post about rahul gandhi
Koo

‘ಬಿಗ್ ಬಾಸ್ ಮರಾಠಿ’ ಮೊದಲ ಸೀಸನ್‌ನ ವಿಜೇತೆ ಮತ್ತು ನಟಿ ಮೇಘಾ ಧಾಡೆ (Megha Dhade) ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸಖತ್‌ ಆಕ್ಟಿವ್‌ ಆಗಿದ್ದಾರೆ. ಬಿಜೆಪಿ ಸೇರಿದ್ದ ನಟಿ ಮೇಘಾ ಧಾಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಾಹುಲ್ ಗಾಂಧಿಯವರ ವೀಡಿಯೊವನ್ನು ಹಂಚಿಕೊಂಡ ನಟಿ ಮೇಘಾ, ‘ರಾಹುಲ್ ಗಾಂಧಿಯನ್ನು ಬೆಂಬಲಿಸುವವರಿಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಅವರನ್ನು ನಾನು ದ್ವೇಷಿಸುತ್ತೇನೆ. ನಮ್ಮ ದೇಶವನ್ನು ಬಿಟ್ಟು ನರಕಕ್ಕೆ ಹೋಗಿ’ ಎಂದು ಹೇಳಿದ ಪೋಸ್ಟ್ ಇದೀಗ ವೈರಲ್‌ ಆಗುತ್ತಿದೆ.

ರಾಹುಲ್ ಗಾಂಧಿ ಅವರ ವಿಡಿಯೊವನ್ನು ನಟಿ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಹುಲ್‌ ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಭೆವೊಂದರಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವಾಗ ಕಾರ್ಯಕರ್ತರೊಬ್ಬರು ಛತ್ರಪತಿ ಶಿವಾಜಿ ಮಹಾರಾಜರ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.ರಾಹುಲ್‌ ವಿಗ್ರಹ ಜತೆ ಫೋಟೊ ತೆಗೆಸಿಕೊಂಡರೇ ವಿನಃ ವಿಗ್ರಹ ಸ್ವೀಕರಿಸಿಲ್ಲ. ಈ ವಿಡಿಯೊ ವೈರಲ್‌ ಆಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಮೇಘಾ ಧಾಡೆ ಕೂಡ ರಾಹುಲ್ ಅವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಮೇಘಾ ಧಾಡೆ ಅವರು ಭಾರತೀಯ ಜನತಾ ಪಕ್ಷದ ಸಾಂಸ್ಕೃತಿಕ ಘಟಕದ ಉಪಾಧ್ಯಕ್ಷರು ಕೂಡ ಆಗಿದ್ದಾರೆ.

Continue Reading

ದೇಶ

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Terrorist Attack: ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ

VISTARANEWS.COM


on

Terrorist attack
Koo

ಚಂಡೀಗಡ: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ಎರಡು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF) ಯೋಧರ ಮೇಲೆ ನಡೆದಿದ್ದ ಭಯೋತ್ಪಾದನಾ ದಾಳಿ(Terrorist Attack)ಯನ್ನು ಪ್ರತಿಪಕ್ಷದ ಇಬ್ಬರು ನಾಯಕರು ಇದೊಂದು ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್‌(Poll Stunt) ಎಂದು ಕರೆಯುವ ಮೂಲಕ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಸಿಂಗ್‌ ಚನ್ನಿ(Charanprit Singh Channi) ಮತ್ತು ರಾಷ್ಟ್ರೀಯ ಜನತಾದಳದ ತೇಜ್‌ ಪ್ರತಾಪ್‌ ಯಾದವ್‌ ಈ ದಾಳಿ ಯನ್ನು 2019ರಲ್ಲಿ ನಡೆದಿದ್ದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಜೊತೆ ಹೋಲಿಸಿ ಇದೊಂದು ಬಿಜೆಪಿ ನಡೆಸುತ್ತಿರುವ ಚುನಾವಣಾ ಪೂರ್ವ ಸ್ಟಂಟ್‌ ಆಗಿದ್ದು ಬಿಜೆಪಿ ಇದನ್ನು ತನ್ನ ಗೆಲುವಿಗಾಗಿ ಬಳಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷ ನಾಯಕರು ಹೇಳಿದ್ದೇನು?

ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದು, ಪುಲ್ವಾಮಾ ದಾಳಿಯಯನ್ನೂ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ. ಚುನಾವಣೆ ಬಂದಾಗಲೆಲ್ಲಾ ಭಯೋತ್ಪಾದನಾ ದಾಳಿ ನಡೆದೇ ನಡೆಯುತ್ತದೆ

ಬಿಜೆಪಿ ನಾಯಕರು ಕಿಡಿ

ಪ್ರತಿಪಕ್ಷ ನಾಯಕರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ ಮತ್ತು ಅದರ ಜೊತೆಗಿರುವ ಪಕ್ಷಗಳ ಮನಸ್ಥಿತಿಯನ್ನು ತೋರಿಸುತ್ತಿದೆ. ಕಳೆದ 70 ವರ್ಷಗಳಲ್ಲಿ ಸೇನೆಯನ್ನು ಬಲಪಡಿಸುವ ಬದಲು ಅದರ ಬಲವನ್ನು ಕುಗ್ಗಿಸುವ ಕೆಲಸವನ್ನೇ ಕಾಂಗ್ರೆಸ್‌ ಮಾಡಿತ್ತು. ನಾವು ಕಳೆದ 10ವರ್ಷಗಳಲ್ಲಿ ಸೇನೆಗೆ ಬಲ ತುಂಬಿದ್ದೇವೆ. ಪುಲ್ವಾಮಾದ ಬಳಿಕ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದೇವೆ. ಆದರೆ ಇವರು ಸಂಸತ್‌ ದಾಳಿಕೋರನ ಗಲ್ಲುಶಿಕ್ಷೆಯನ್ನು ತಪ್ಪಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದವರು ಜನ ಇದನ್ನು ಎಂದಿಗೂ ಮರೆಯಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Continue Reading

ಕರ್ನಾಟಕ

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಸಂಬಂಧ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಶಾಸಕ ಎಚ್.ಡಿ.ರೇವಣ್ಣ ಅವರ ಕೈಯಲ್ಲಿ ಸದಾ ನಿಂಬೆ ಹಣ್ಣು ಇರುತ್ತದೆ ಎಂಬುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಹಲವರು ಹಾಸ್ಯ ಮಾಡಿದರೂ ರೇವಣ್ಣ ಅವರು ಮಾತ್ರ ಎಲ್ಲವನ್ನೂ ನಗುತ್ತಲೇ ಸ್ವೀಕರಿಸಿ ಮುಂದೆ ಸಾಗುತ್ತಿದ್ದರು. ಇದೀಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧಪಟ್ಟಂತೆ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ಸಂಜೆ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಸಾಗುತ್ತಿದ್ದದ್ದು ಕಂಡುಬಂದಿದೆ.

ಈ ಹಿಂದೆ ಕುಟುಂಬಕ್ಕೆ ಸಂಕಷ್ಟ ಬಂದಾಗ ಹೋಮ-ಹವನ, ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳ ಮೊರೆ ಹೋಗುವ ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಓಡಾಡುತ್ತಿದ್ದರು. ಆದರೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ ಬಂಧನವಾದ ನಂತರ ಅವರಿಗೆ ಜ್ಯೋತಿಷ್ಯ, ನಿಂಬೆಹಣ್ಣು ಕೂಡ ಕೈಹಿಡಿಯಲಿಲ್ಲ ಎಂದು ಸಾರ್ವಜನಿಕರು ವ್ಯಂಗ್ಯವಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ರೇವಣ್ಣ ಅವರು ಎಡಗೈನಲ್ಲಿ ನಿಂಬೆಹಣ್ಣಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿಗೆ ಬರುವ ಮುನ್ನ ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು ಎನ್ನಲಾಗಿದೆ. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಆದರೆ, ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಮಾಜಿ ಸಚಿವ ಎಚ್‌.ಡಿ. ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ; ಮತ್ತೆ ತೀವ್ರ ವಿಚಾರಣೆ

Prajwal Revanna Case HD Revanna sent to judicial custody Shift to Parappana Agrahara

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

Continue Reading
Advertisement
Mahanati Show Gagana Comedy About Rishi actor
ಕಿರುತೆರೆ9 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ24 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ1 hour ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್1 hour ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ2 hours ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್2 hours ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ15 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ17 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌