Karnataka Budget Session 2024: ಬರಪೀಡಿತ ರೈತರಿಗೆ ಕೊಡಲು ಇಲ್ಲದ ಹಣ, ಸಂಪುಟ ದರ್ಜೆ ಭಾಗ್ಯಕ್ಕಿದೆ: ಎಚ್‌ಡಿಕೆ ಕಿಡಿ - Vistara News

ರಾಜಕೀಯ

Karnataka Budget Session 2024: ಬರಪೀಡಿತ ರೈತರಿಗೆ ಕೊಡಲು ಇಲ್ಲದ ಹಣ, ಸಂಪುಟ ದರ್ಜೆ ಭಾಗ್ಯಕ್ಕಿದೆ: ಎಚ್‌ಡಿಕೆ ಕಿಡಿ

Karnataka Budget Session 2024: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದು ಕಿಡಿಕಾರಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ. ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.

VISTARANEWS.COM


on

Karnataka Budget Session 2024 HD Kumaraswamy Slams Congress Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಬಜೆಟ್‌ಗೆ (Karnataka Budget Session 2024) ಸಂಬಂಧಿಸಿ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರವಾಗಿದೆ. ಬರಕ್ಕೆ ತುತ್ತಾದ ರೈತರಿಗೆ ಪರಿಹಾರ ಕೊಡಲು ಇವರಲ್ಲಿ ಹಣವಿಲ್ಲ. ಆದರೆ, ಸಂಪುಟ ದರ್ಜೆ ಭಾಗ್ಯಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದನ್ನು ಏನೆಂದು ಕರೆಯಬೇಕು? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಿಡಿಕಾರಿದರು.

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ, ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು ಸಂಸ್ಥೆ (KSFC) ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುತ್ತಿರುವುದು ಉಂಟಾ? ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಅಲ್ಲದೆ, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ದೂರಿದರು.

ಹಾಡಿದ್ದೇ ಹಾಡೋ ಕಿಸಬಾಯಿ ದಾಸ

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಪ್ರತಿ ವರ್ಷ ನಡೆಯುವ ಶಾಸ್ತ್ರವಷ್ಟೇ. ಪ್ರತಿ ವರ್ಷದ ಸಂಪ್ರದಾಯದಂತೆ ವಿಧಾನಸಭೆ ಕಲಾಪಗಳು ನಡೆಯುತ್ತವೆ. ಸರ್ಕಾರದ ಮುಂದಿನ ವರ್ಷದ ನೀಲಿನಕ್ಷೆ ಹಾಗೂ ಸಾಧನೆಗಳ ನೋಟವನ್ನು ಕೊಡಬೇಕು. ಅದನ್ನು ಮಾಡದ ಕೆಲಸಗಳ ಬಗ್ಗೆ ಡಂಗುರ ಹೊಡೆಯುವ ಕೆಲಸ ಅಷ್ಟೇ ಆಯಿತು. ಸರ್ಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರಿಂದ ಭಾಷಣ ಕೇಳಿದ್ದೇವೆ. ಆದರೆ, ಈ ಭಾಷಣ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎನ್ನುವ ರೀತಿಯಲ್ಲಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಬ್ರ್ಯಾಂಡ್ ಬೆಂಗಳೂರು ಏನಾಯಿತು?

ಇವರಿಗೆ ಸ್ಪಷ್ಟ ಬಹುಮತದ ಸರ್ಕಾರ ಕೊಟ್ಟಿದ್ದಾರೆ ಜನ. ಆದರೆ, ಇವರು ಅಸ್ಪಷ್ಟವಾಗಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಆದರೆ, ಜನರಿಗೆ ಸರಿಯಾಗಿ ತಲುಪದ ಗ್ಯಾರಂಟಿಗಳ ಬಗ್ಗೆ ಗೌರವಾನ್ವಿತ ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ್ದಾರೆ. ವಿಶೇಷವಾಗಿ ಬೆಂಗಳೂರಿನಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆಂದು ದೊಡ್ಡ ದೊಡ್ಡ ಹೇಳಿಕೆಗಳನ್ನು ಕೊಟ್ಟಿದ್ದನ್ನು ನೋಡಿದ್ದೇವೆ. ಸಂಗಮದಿಂದ ಮೇಕೆದಾಟು ಪಾದಯಾತ್ರೆ ಮಾಡಿದ್ದನ್ನೂ ನೋಡಿದ್ದೇವೆ. ಆ ಮೇಕೆದಾಟು ಕಳೆದ 8 ತಿಂಗಳಲ್ಲಿ ಎಲ್ಲಿ ಶುರುವಾಯಿತೋ ಈಗಲೂ ಅಲ್ಲಿಯೇ ನಿಂತಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಏನಾಯಿತು, ಎಲ್ಲಿಗೆ ಬಂತು? ಅಭಿವೃದ್ಧಿ ಯೋಜನೆಗಳಿಗೆ ಹಣ ಕೇಳಲೇಬೇಡಿ ಎನ್ನುವಂತೆ ಇದೆ ಪರಿಸ್ಥಿತಿ ಎಂದು ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸರ್ಕಾರ ನುಡಿದಂತೆ ನಡೆದಿದ್ದರೆ ನಾನು ಖಂಡಿತಾ ಮೆಚ್ಚುತ್ತಿದ್ದೆ. ಆದರೆ‌, ಇವರು ಎಲ್ಲಿಯೂ ನುಡಿದಂತೆ ನಡೆದಿಲ್ಲ. ಅದಕ್ಕೆ ನಾನು ಹೇಳಿದ್ದು, ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಖಾರ ಉಳಿ ಇಲ್ಲಾ ಎಂದು. ಇದರ ನಾನು ಏನು ಮಾತಾಡಲಿ? ಹದಿನೈದು ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯನವರು, ಎರಡನೇ ಮುಖ್ಯಮಂತ್ರಿ ಆದವರು ರಾಜ್ಯಪಾಲರಿಂದ ಮಾಡಿಸುವ ಭಾಷಣವೇ ಇದು? ಇದು ಅತ್ಯಂತ ಕಳಪೆ ಭಾಷಣ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದರು.

ಗ್ಯಾರಂಟಿಗಳ ಬಗ್ಗೆ ಅಧ್ಯಯನವಂತೆ

ಗ್ಯಾರಂಟಿಗಳ ಬಗ್ಗೆ ದೇಶ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರಂತೆ. ಅಧ್ಯಯನ ಮಾಡುವವರಿಗೆ ವಾಸ್ತವ ಚಿತ್ರಣ ಗೊತ್ತಿದ್ದಂತೆ ಇಲ್ಲ. ಹಾವೇರಿ ಜಿಲ್ಲೆಯ ತಾಯಿ ಮಗ ಕೆಲಸಕ್ಕಾಗಿ ಗೋವಾಕ್ಕೆ ಗುಳೆ ಹೋದರು. ಅಲ್ಲಿಯೂ ಕೆಲಸ ಸಿಗಲಿಲ್ಲ ಎಂದು ರೈಲಿನಲ್ಲಿ ಊರಿಗೆ ವಾಪಸ್ ಬರುವಾಗ ಟಿಕೆಟ್ ಇರಲಿಲ್ಲ ರೈಲಿನ ಟಿಕೆಟ್ ತಪಾಸಣೆ ಮಾಡುವವನು ಅವರಿಬ್ಬರನ್ನು ಧಾರವಾಡ ಜಿಲ್ಲೆಯ ಆಳ್ನಾವರದಲ್ಲಿ ರೈಲಿನಿಂದ ಇಳಿಸಿಬಿಟ್ಟ. ಮೂರು ದಿನ ಉಪವಾಸ ಬಿದ್ದ ಆ ತಾಯಿಮಗ ಸುಸ್ತಾಗಿದ್ದರು. ತಾಯಿಗಾಗಿ ಅನ್ನ ಹುಡುಕಲು ಹೊರಟ ಮಗನಿಗೆ ಅನ್ನವೂ ಸಿಗಲಿಲ್ಲ, ಕೆಲಸವೂ ಧಕ್ಕಲಿಲ್ಲ. ಕೊನೆಗೆ ಅದೇ ಊರಿನಲ್ಲಿ ಆ ಯುವಕ ಆತ್ಮಹತ್ಯೆ ಮಾಡಿಕೊಂಡ. ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ ಆಗಿ ಅವು ಎಲ್ಲರಿಗೂ ತಲುಪಿದ್ದಿದ್ದರೆ ಆ ತಾಯಿ ಮಗ ಗೋವಾಕ್ಕೆ ಯಾಕೆ ಹೋಗುತ್ತಿದ್ದರು? ಆ ಯುವಕ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಆ ತಾಯಿ ಇವತ್ತು ಅನಾಥೆಯಾಗಿದ್ದಾರೆ. ಆದರೆ ಇವರ ಗ್ಯಾರಂಟಿ ಜಾಹೀರಾತುಗಳು ಮಾತ್ರ ಹಾಗೆಯೇ ಬರುತ್ತಿವೆ. ಈ ಸರಕಾರ ಜಾಹೀರಾತು ಮೇಲೆ ನಡೆಯುತ್ತಿದೆ. ಜನಸ್ಪಂದನಕ್ಕೆ ಬಂದಿದ್ದ ಮಹಿಳೆಯರು ಗೃಹಲಕ್ಷಿ ಯೋಜನೆಯಲ್ಲಿ ಹಣ ಬಂದಿಲ್ಲಾ ಅಂತಾ ಸಿಎಂ ಅವರಿಗೆ ದೂರು ನೀಡಿದರು ಎಂದು ಗ್ಯಾರಂಟಿ ವೈಫಲ್ಯಗಳನ್ನು ಎಚ್‌.ಡಿ. ಕುಮಾರಸ್ವಾಮಿ ಎಳೆಎಳೆಯಾಗಿ ಬಿಡಿಸಿಟ್ಟರು.

ಬಸ್ಸಿನಲ್ಲಿ ಜನರನ್ನು ಕರೆತಂದು ಜನತಾದರ್ಶನ ಮಾಡಿಲ್ಲ

ನಾನು ಸಿಎಂ ಆಗಿದ್ದಾಗ ಜನತಾದರ್ಶನ ಮಾಡಿದ್ದೆ. ಅದಕ್ಕೆ ಬಸ್ ನಲ್ಲಿ ಜನರನ್ನು ಕರೆತಂದಿರಲಿಲ್ಲ. ರಾತ್ರಿ ಮೂರು ಗಂಟೆಗೆ ಬಂದು ಜನ ಕಾಯುತ್ತಿದ್ದರು. ಬೆಳಗ್ಗೆ 9 ಗಂಟೆಯಿಂದ ಮಧ್ಯರಾತ್ರಿವರೆಗೂ ಆ ಜನರ ಅಹವಾಲು ಕೇಳಿ ಸ್ಥಳದಲ್ಲಿಯೇ ಅವರ ಸಂಕಷ್ಟ ನಿವಾರಣೆ ಮಾಡಿದ್ದೇನೆ. ಆದರೆ, ನಾನೆಂದೂ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಳ್ಳಲಿಲ್ಲ. ದಿನಕ್ಕೆ 100 ಸುಳ್ಳು ಹೇಳಿಕೊಂಡು ಓಡಾಡುವ ಇವರು, ರಾಜ್ಯಪಾಲರಿಂದಲೂ ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಾನು‌ ಯಾವ ಗ್ಯಾರಂಟಿಗಳನ್ನು ತಪ್ಪು ಎಂದು ಹೇಳುವುದಿಲ್ಲ. ಗ್ಯಾರಂಟಿಗಳ ವಿಚಾರದಲ್ಲಿ ನನಗೆ ಯಾವ ತಕರಾರೂ ಇಲ್ಲ. ಬೇಕಾದರೆ ಇನ್ನು ಐದು ಗ್ಯಾರಂಟಿ ಜಾರಿ ಮಾಡಿ, ಅಭಿನಂದಿಸುತ್ತೇನೆ. ಆದರೆ, ಈಗಾಗಲೇ ಜಾರಿ ಮಾಡಿರುವ ಗ್ಯಾರಂಟಿಗಳು ಏನಾಗಿವೆ? ಬೆಂಗಳೂರಿನ ಭಾಗವೇ ಆಗಿರುವ ದೇವನಹಳ್ಳಿಯಲ್ಲಿ ಶಾಲಾ ಮಕ್ಕಳಿಗೆ ಬಸ್ ಇಲ್ಲ. ಮಕ್ಕಳು ಶಾಲೆಗೆ ದಿನವೂ ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಉದ್ಯೋಗ ಕೊಡುತ್ತೇವೆ ಎಂದು ಜಾಹೀರಾತು ಕೊಡುತ್ತಲೇ ಇದ್ದಾರೆ. ಅಷ್ಟು ಜನ ನೇಮಕ, ಇಷ್ಟು ಜನ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎನ್ನುತ್ತಿದ್ದಾರೆ. ಬರೀ ಪ್ರಸ್ತಾವನೆ ಸಲ್ಲಿಸುವುದರಲ್ಲಿಯೇ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇದನ್ನೂ ಓದಿ: Karnataka Budget Session 2024: ಗೃಹಲಕ್ಷ್ಮಿಗೆ 17500 ಕೋಟಿ ರೂ. ನಿಗದಿ; ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮ: ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯಪಾಲರ ಭಾಷಣದಲ್ಲಿ ಕಾಂತರಾಜು ವರದಿ ಸದ್ದೇ ಇಲ್ಲ

ಸಂವಿಧಾನವನ್ನು ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ. ಸ್ಲೋಗನ್ ಚೆನ್ನಾಗಿದೆ. ಆದರೆ, ನಾನು ಜಾತ್ಯತೀತ, ಧರ್ಮಾತೀತ ಎಂದು ಡಂಗುರ ಹೊಡೆದುಕೊಂಡು ತಿರುಗಾಡುವ ಈ ಮುಖ್ಯಮಂತ್ರಿ, ಧರ್ಮ – ಜಾತಿಗಳ ಹೆಸರಿನಲ್ಲಿ ಎಷ್ಟು ಸಮಾವೇಶಗಳನ್ನು ಮಾಡಿಲ್ಲ? ಬೇಕಾದರೆ ದಾಖಲೆ ತೆಗೆಯೋಣ ಎಂದ ಅವರು; ಕಾಂತರಾಜ್ ವರದಿಯ ಸದ್ದೇ ಇಲ್ಲವಲ್ಲ ಈ ಭಾಷಣದಲ್ಲಿ? ವರದಿ ಸ್ವೀಕಾರ ಮಾಡಿ ಜಾರಿ ಮಾಡುತ್ತೇನೆ ಎಂದು ಚಿತ್ರದುರ್ಗದಲ್ಲಿ ಅಬ್ಬರ ಮಾಡಿದ್ದರಲ್ಲ. ಈ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಚಕಾರವೇ ಇಲ್ಲ. ಜಯಪ್ರಕಾಶ್ ಹೆಗ್ಡೆ ಅವರ ಹತ್ತಿರ ಏನ್ ಬರೆಸುತ್ತಿದ್ದೀರಾ ಎಂದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್‌.ಡಿ. ಕುಮಾರಸ್ವಾಮಿ ಕುಟುಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

MLC Election: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ

VISTARANEWS.COM


on

MLC Election Withdrawal of nomination paper says Suresh Sajjan
Koo

ಬೆಂಗಳೂರು: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (MLC Election) ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದರು.

ಇದನ್ನೂ ಓದಿ: Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದು ತಿಳಿಸಿದರು. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದರು.

ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಅಮರನಾಥ ಪಾಟೀಲ್‌ ಅವರ ಗೆಲುವಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಸಜ್ಜನ್ ತಿಳಿಸಿದರು.

Continue Reading

ಕರ್ನಾಟಕ

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿ ನೋಡಿದರೆ ಅಲ್ಲಿ ಕೊಲೆ, ಸುಲಿಗೆಗಳು ಆಗುತ್ತಿವೆ. ಅತ್ಯಾಚಾರ ಪ್ರಕರಣಗಳು, ಲವ್ ಜಿಹಾದ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಪ್ರಶ್ನೆ ಕಾಡುತ್ತಿದೆ ಎಂದು ದೂರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಅಂಶಗಳನ್ನು ಮುಂದಿಟ್ಟು ಇಂದು ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಪರಾಧ ಪ್ರಮಾಣ ಹೆಚ್ಚಳದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP State President B Y Vijayendra latest statement in bengaluru
Koo

ಬೆಂಗಳೂರು: ವಿಧಾನಪರಿಷತ್ತಿನ ವಿವಿಧ ಕ್ಷೇತ್ರಗಳಲ್ಲಿ ಇರುವ ಸಮಸ್ಯೆಗಳು ಶೀಘ್ರವೇ ಪರಿಹಾರಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿಧಾನಪರಿಷತ್ತಿನ ಪದವೀಧರ- ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿ 4 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡು ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ನಿನ್ನೆ 6 ಕ್ಷೇತ್ರಗಳಿಗೆ ಬಿಜೆಪಿಯಿಂದ ಉಸ್ತುವಾರಿಗಳನ್ನೂ ನೇಮಿಸಿದ್ದೇವೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ಹಿರಿಯ ಮುಖಂಡ ಸುರೇಶ್ ಸಜ್ಜನ್ ಅವರು ಕಳೆದೆರಡು ವರ್ಷಗಳಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಪ್ರವಾಸ ಮಾಡಿ, ಸಂಘಟನೆ ಮಾಡಿ ಆಕಾಂಕ್ಷಿಯಾಗಿದ್ದು, ನಾಮಪತ್ರ ಸಲ್ಲಿಸಿದ್ದರು. ಸುರೇಶ್ ಸಜ್ಜನ್ ಅವರು ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಚುನಾವಣಾ ಅಖಾಡದಿಂದ ಹಿಂದೆ ಸರಿದು ಬಿಜೆಪಿ ಬೆಂಬಲಿಸಲು ಮುಂದಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದರ ಪರಿಣಾಮವಾಗಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಅನುಕೂಲವಾಗಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಲಿಂಗರಾಜ್ ಅವರ ಹೆಸರನ್ನು ಘೋಷಿಸಲಾಗಿತ್ತು. ನಂತರ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಡಲಾಗಿತ್ತು. ನಾಮಪತ್ರ ಸಲ್ಲಿಸಿದ್ದ ಲಿಂಗರಾಜ್ ಅವರ ಮನವೊಲಿಕೆ ಮಾಡಿ ನಾಮಪತ್ರ ಹಿಂದಕ್ಕೆ ಪಡೆಯುವುದಾಗಿ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಎರಡೂ ಕ್ಷೇತ್ರದಲ್ಲೂ ಕೂಡ ಸಮಸ್ಯೆಗಳು ಇತ್ಯರ್ಥವಾಗಿವೆ. ಬೇರೆ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವ ಕೆಲಸವನ್ನು ಇವತ್ತು ಮತ್ತು ನಾಳೆ ಮಾಡಲಿದ್ದು, ಅವು ಪರಿಹಾರ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿ ನೋಡಿದರೆ ಅಲ್ಲಿ ಕೊಲೆ, ಸುಲಿಗೆಗಳು ಆಗುತ್ತಿವೆ. ಅತ್ಯಾಚಾರ ಪ್ರಕರಣಗಳು, ಲವ್ ಜಿಹಾದ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಪ್ರಶ್ನೆ ಕಾಡುತ್ತಿದೆ ಎಂದು ದೂರಿದರು. ಈ ಅಂಶಗಳನ್ನು ಮುಂದಿಟ್ಟು ಇವತ್ತು ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಪರಾಧ ಪ್ರಮಾಣ ಹೆಚ್ಚಳದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪೊಲೀಸ್‌ ವ್ಯವಸ್ಥೆ ಸರಿ ಇಲ್ಲ, ಯಾರೇನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ, ಸರ್ಕಾರ ಬಿಗಿ ಕ್ರಮ ಕೈಗೊಳ್ಳದ ಕಾರಣ ದಿನೇ ದಿನೇ ಕೊಲೆ ಪ್ರಕರಣ ಹೆಚ್ಚಾಗಿದೆ ಎಂದು ಆರೋಪಿಸಿದರು. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದ ಅವರು, ಮಹಿಳೆಯರ ಸುರಕ್ಷತೆ ಪ್ರಶ್ನೆ ನಿಟ್ಟಿನಲ್ಲಿ ನಾವು ಕೂಡ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಸಿಬಿಐ ತನಿಖೆಗೆ ಒತ್ತಾಯ

ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಕೊಡಲು ಒತ್ತಾಯಿಸುತ್ತಿದ್ದೇವೆ. ದಿನನಿತ್ಯ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತಡ ಮಾಡದೆ ಈ ಪೆನ್‌ಡ್ರೈವ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.

ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ? ಇದರಲ್ಲಿ ಸರ್ಕಾರದ ಘಟಾನುಘಟಿಗಳ ಹೆಸರುಗಳೂ ಕೇಳಿಬರುತ್ತಿವೆ. ಎಸ್‍ಐಟಿಯಿಂದ ಪಾರದರ್ಶಕ ತನಿಖೆ ಮಾಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು, ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬಿಟ್ಟು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಅವರು ಒತ್ತಾಯಿಸಿದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Prajwal Revanna Case: ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್‌ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟ್ರೈಕ್‌ ಆರಂಭಿಸಿದ್ದು, ಇದೀಗ ಹೊಳೆನರಸೀಪುರ ಕೇಸ್‌ನಲ್ಲಿ (Prajwal Revanna Case) ಪ್ರಜ್ವಲ್‌ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.

ನಗರದ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್‌ ಮಾಹಿತಿ ಕೇಳಿತ್ತು. ಈ ವೇಳೆ ಲುಕ್‌ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.

ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ನೀಡಿತ್ತು. ಇದೀಗ ಅರೆಸ್ಟ್‌ ವಾರಂಟ್‌ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್‌ ಕಾರ್ನರ್‌ ನೋಟಿಸ್‌ ಬಳಿಕ ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.

ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹುದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ.

ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Prajwal Revanna Case obscene video goes viral Advocate Devarajegowda SIT custody extended by 2 days

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ (Devarajegowda) ಅವರನ್ನೂ ಮತ್ತೂ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆದೇಶಿಸಿದೆ.

ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು.

ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.
ಎರಡೆರಡು ಕೇಸ್‌

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಪೆನ್‌ಡ್ರೈವ್‌ ಪ್ರಕರಣದಲ್ಲಿ ಶುಕ್ರವಾರ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಈಗ ಮತ್ತೆ ಎರಡು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.
ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

Continue Reading

ರಾಜಕೀಯ

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Prajwal Revanna Case: ದೇವರಾಜೇಗೌಡರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ದಿನಕ್ಕೊಂದು ಮಾತನಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಆಕ್ರೋಶವನ್ನು ಹೊರಹಾಕಿದೆ.

VISTARANEWS.COM


on

Prajwal Revanna case Devaraje Gowda should be given mental treatment says Congress
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರವಾಗಿರಲು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ (Devarajegowda) ಆರೋಪಕ್ಕೆ ಕಾಂಗ್ರೆಸ್‌ ಕಿಡಿಕಾರಿದೆ. ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಅವರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸುವುದು ಒಳ್ಳೆಯದು ಎಂದು ಹೇಳಿದೆ.

ದೇವರಾಜೇಗೌಡ ವಿರುದ್ಧ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಜ್ಯ ಕಾಂಗ್ರೆಸ್, ದೇವರಾಜೇಗೌಡರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ದಿನಕ್ಕೊಂದು ಮಾತನಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಆಕ್ರೋಶವನ್ನು ಹೊರಹಾಕಿದೆ.

ಬ್ರದರ್ ಸ್ವಾಮಿಗಳು ಹೇಳಿಕೊಟ್ಟ ಮಾತನ್ನು ದೇವರಾಜೇಗೌಡ ಆಡಿದ್ದಾರೆ. ಆತನ ಬಾಯಲ್ಲಿ ಬರುವ ಪ್ರತಿ ಮಾತುಗಳಲ್ಲೂ “ದೊಡ್ಡವರ“ ಚಿತಾವಣೆ ಇರುತ್ತದೆ. ಬಾಯಿ ದೇವರಾಜೇಗೌಡನದ್ದು, ಮಾತು ಬ್ರದರ್ ಸ್ವಾಮಿಗಳದ್ದು! ಇದನ್ನು ಸ್ವತಃ ದೇವರಾಜೇಗೌಡ ಒಪ್ಪಿಕೊಂಡಿರುವಾಗ ಅವರ ಮಾತುಗಳಿಗೆ ಗಾಂಭೀರ್ಯತೆಯನ್ನು, ಸತ್ಯವನ್ನು ಹುಡುಕುವುದು ಹಾಸ್ಯಾಸ್ಪದವಾಗುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

ಈ ಬಗ್ಗೆ ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ದೇವರಾಜೇಗೌಡ ಮೆಂಟಲ್ ಕೇಸ್. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನೀವು ಬುದ್ಧಿವಂತರು, ಜಾಣರಿದ್ದೀರಿ. ಆ ದೇವರಾಜೇಗೌಡನಂಥವರು ಯಾರೋ ಏನೋ ಹೇಳುತ್ತಾರೆಂದರೆ ಅದನ್ನು ಹಾಕಿಬಿಡುವುದಾ? ನಮಗೆ ರೆಪ್ಯುಟೇಷನ್ ಇದೆ. ಏನಾದರೂ ಆಧಾರ ಇದ್ದರೆ ಹಾಕಬೇಕು. ತಲೆ ಕೆಟ್ಟ, ಆಸ್ಪತ್ರೆಗೆ ಸೇರಬೇಕಾದವರ ಬಗ್ಗೆ ಮಾತನಾಡುತ್ತೀರಾ ಎಂದು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು.

ನಾನು ಆಫರ್ ಮಾಡಿದರೆ ದೇವರಾಜೇಗೌಡ ಅವರು ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ. ಎಲ್ಲ ಪೆನ್ ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಸಂತ್ರಸ್ತೆಯರ ಬಗ್ಗೆ ಯಾರೂ ಏನೂ ಮಾತನಾಡುತ್ತಿಲ್ಲ ಏಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡಲ್ಲ ಎಂದು ಡಿ.ಕೆ. ಶಿವಕುಮಾರ್‌ ಗರಂ ಆಗಿಯೇ ಹೇಳಿದರು.

ನನ್ನ ಹೆಸರನ್ನು ಕೆಲವರು ಉಪಯೋಗಿಸಿಕೊಳ್ಳುತ್ತಾರೆ‌. ನೀವು ನನ್ನ ಹೆಸರು ಬಳಸಿಕೊಳ್ಳುತ್ತೀರಾ? ನನ್ನ ಹೆಸರು ಬಳಸಿಕೊಂಡರೆ ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿದ್ದಾರೆ, ಇದು ಬಹಳ ಒಳ್ಳೆಯದು. ಅವರ ಹುಟ್ಟುಹಬ್ಬ, ಸಂತೋಷ ಕೊಡಲಿ, ದುಃಖವನ್ನು ದೂರ ಮಾಡಲಿ. ಆರೋಗ್ಯ ಆಯಸ್ಸನ್ನು ದೇವರು‌ ಕರುಣಿಸಲಿ ಎಂದು ನಮ್ಮ ಸರ್ಕಾರದ ಪರವಾಗಿ ಹಾರೈಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ದೇವರಾಜೇಗೌಡ ಬಾಂಬ್‌

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಡಿ.ಕೆ. ಶಿವಕುಮಾರ್‌ ಶುಕ್ರವಾರ ಹೇಳಿದ್ದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದ್ದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.

Continue Reading
Advertisement
Karnataka Police
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ3 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ4 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ4 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ4 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ5 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ5 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ5 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ7 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ7 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌