Congress Files Complaint Against Amit Shah Over Remarks at election RallyKarnataka Election 2023 : ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ದೂರು ನೀಡಿದ ಕಾಂಗ್ರೆಸ್‌ Vistara News

ಕರ್ನಾಟಕ ಎಲೆಕ್ಷನ್

Karnataka Election 2023 : ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ದೂರು ನೀಡಿದ ಕಾಂಗ್ರೆಸ್‌

Karnataka Election 2023 : ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೋಮುಗಲಭೆಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಪಕ್ಷ ದೂರು ನೀಡಿದ್ದು, ಎಫ್‌ ಐಆರ್‌ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದೆ.

VISTARANEWS.COM


on

karnataka-election-2023-Congress Files Complaint Against Amit Shah Over Remarks at election Rally
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಯ (Karnataka Election 2023) ಪ್ರಚಾರದ ವೇಳೆ ಬಿಜೆಪಿ ನಾಯಕರು ನೀಡಿರುವ ಪ್ರಚೋದನಾತ್ಮಕ ಹೇಳಿಕೆಗಳ ವಿರುದ್ಧ ಕಾಂಗ್ರೆಸ್‌ ಪೊಲೀಸರಿಗೆ ದೂರು ನೀಡಿದೆ. ಅಲ್ಲದೆ, ಗೃಹ ಸಚಿವ ಅಮಿತ್‌ ಶಾ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಅವರಿಗೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಅವಕಾಶ ನೀಡಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ನಗರದ ಹೈಗ್ರೌಂಡ್ ಪೋಲಿಸ್ ಠಾಣೆಗೆ ಆಗಮಿಸಿದ ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈ ದೂರು ನೀಡಿದ್ದಾರೆ. ಏಪ್ರಿಲ್ 25 ರಂದು ಚುನಾವಣೆ ಭಾಷಣದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮುಗಲಭೆಗಳು ಆಗುತ್ತವೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಹೇಳಿಕೆಯಿಂದಾಗಿ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಬಹುದು ಎಂದು ದೂರಿನಲ್ಲಿ ಕಾಂಗ್ರೆಸ್‌ ಆತಂಕ ವ್ಯಕ್ತಪಡಿಸಿದೆ.

ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಅಮಿತ್‌ ಶಾ ರಾಜ್ಯದಲ್ಲಿ ಜನರನ್ನು ಎದುರಿಸಿ, ಮತ ಕೇಳುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಅವರು ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಬೇಕು. ಗೃಹ ಸಚಿವರೇ ಈ ರೀತಿ ನಡೆದುಕೊಳ್ಳುತ್ತಿರುವುದು ದುರಂತ. ಅವರ ವಿರುದ್ಧ ಕೂಡಲೇ ಎಫ್‌ಐಆರ್‌ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ದೂರು ನೀಡುತ್ತಿರುವ ಕಾಂಗ್ರೆಸ್‌ ನಾಯಕರು

ಪಿಎಫ್ ಐ ಬ್ಯಾನ್ ಗೆ ಕಾಂಗ್ರೆಸ್ ಒತ್ತಾಯ ಮಾಡಿತ್ತು. ಬೊಮ್ಮಾಯಿ‌ ಸರ್ಕಾರವನ್ನು ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಒತ್ತಾಯ ಮಾಡಿದ್ದರು. ಆದರೂ ಬೊಮ್ಮಾಯಿ ಸರ್ಕಾರ ಕ್ರಮ ತೆಗೆದುಕೊಂಡಿರಲಿಲ್ಲ. ಈಗ ಬಿಜೆಪಿ ಸರ್ಕಾರ ಸೋಲಿನ ಭಯಕ್ಕೆ ಒಳಗಾಗಿ ಕಾಂಗ್ರೆಸ್‌ ಪಕ್ಷದ ಮೇಲೆ ಆರೋಪ ಮಾಡುತ್ತಿದೆ. ಕಾಂಗ್ರೆಸ್ ಪರ ಜನಾಭಿಪ್ರಾಯಕ್ಕೆ ಬಿಜೆಪಿ ಹೆದರಿ ಈ ರೀತಿ ವರ್ತಿಸುತ್ತಿದೆ ಎಂದು ಹೇಳಿದ ಸುರ್ಜೇವಾಲಾ , ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿಯ ರಾಷ್ಟ್ರೀಯ ನಾಯಕರಾದ ಅಮೀತ್ ಶಾ, ಯೋಗಿ ಆದಿತ್ಯ ನಾಥ್ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದರು.

ಈ ರೀತಿಯ ಹೇಳಿಕೆಯನ್ನು ಬೇರೆ ಪಕ್ಷದ ನಾಯಕರು ನೀಡಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು ಎಂದಿರುವ ಅವರು, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ ಸೋಮಣ್ಣ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡಿದ್ದಾರೆ ಎನ್ನಲಾದ ಆಡಿಯೋ ಲೀಕ್ ಆಗಿದೆ. ಇದು ಬಿಜೆಪಿ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಇವರ ವಿರುದ್ಧವೂ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಅಮಿತ್‌ ಶಾ ನಿರ್ಬಂಧಿಸಿ

ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಆಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಈ ರೀತಿಯಲ್ಲಿ ಮತದಾರರನ್ನು ಹೆದರಿಸುತ್ತಿದ್ದಾರೆ. ದೊಡ್ಡ ಸ್ಥಾನದಲ್ಲಿರುವವರು ಮತದಾರರನ್ನು ಹೆದರಿಸುತ್ತಿರುವುದು ದುರಂತ. ಚುನಾವಣಾ ಆಯೋಗ ಅಮಿತ್ ಶಾ ರನ್ನ ಬ್ಯಾನ್ ಮಾಡಬೇಕು. ಪೇ ಸಿಎಂ ಪೋಸ್ಟರ್ ಅಂಟಿಸಿದಾಗ ನಮ್ಮ‌ ಮೇಲೆ ಕೇಸ್ ಹಾಕಿದ್ದರು. ಈಗ ಇವರು ಈ ರೀತಿ ಮಾತನಾಡಿರುವುದಕ್ಕೆ ಎಲ್ಲ ‌ ಸಾಕ್ಷಿಗಳು ಇವೆ, ಇವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಮಿತ್‌ ಶಾ ವಿರುದ್ಧ ದೂರು ನೀಡಿದ ಕಾಂಗ್ರೆಸ್‌ ನಾಯಕರು

ಚುನಾವಣಾ ಆಯೋಗಕ್ಕೂ ದೂರು

ಇಂದು ಬಿಜೆಪಿ ನಾಯಕರ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕಾಂಗ್ರೆಸ್‌ ನಾಯಕರು ನಾಳೆ ಚುನಾವಣಾ ಆಯೋಗವನ್ನೂ ಭೇಟಿ ಮಾಡಿ ಈ ಸಂಬಂಧ ದೂರು ನೀಡುವುದಾಗಿ ತಿಳಿಸಿದ್ದಾರೆ.

ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಿಕೊಳ್ಳಬೇಕೆಂದು ದೂರಿನಲ್ಲಿ ಕಾಂಗ್ರೆಸ್‌ ಪಕ್ಷ ಮನವಿ ಮಾಡಿದ್ದಾರೆ.

ಕೈಲಾಗದವರು ಮೈ ಪರಿಚಿಕೊಂಡ್ರು!

ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ʻಕೈಲಾಗದವರು ಮೈ ಪರಿಚಿಕೊಂಡ್ರುʼ ಎಂಬಂತೆ ಕಾಂಗ್ರೆಸ್‌ ವರ್ತಿಸುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್‌ ದೇಶದಲ್ಲಿ ಅಧಿಕಾರದಲ್ಲಿದ್ದಾಗ ಇದೇ ರೀತಿ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡೇ ಬಂದಿತ್ತು. ನಮ್ಮ ಪಕ್ಷದ ಅನೇಕ ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಅನೇಕರನ್ನು ರೌಡಿಶೀಟರ್‌ ಪಟ್ಟಿಗೆ ಸೇರಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Karnataka Election 2023: ಶೆಟ್ಟರ್ ನೂರಕ್ಕೆ ನೂರಷ್ಟು ಗೆಲ್ಲುತ್ತಾರೆ; ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

Shadow CM Posters
Koo

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

Continue Reading

ಕರ್ನಾಟಕ

Evm Machine : ಡೆಮಾಲಿಷನ್‌ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!

Evm Control Units : ಮನೆ ಡೆಮಾಲಿಷನ್‌ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್‌ ಯೂನಿಟ್‌ಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

EVM units
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.

2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್‌ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್‌ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

EVM units found in demolition
ಎಂಜಿನಿಯರ್‌ ಮನೆ ಡೆಮಾಲಿಷನ್‌ ವೇಳೆ ಇವಿಎಂ ಯೂನಿಟ್‌ಗಳು ಪತ್ತೆ

ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್‌ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್‌ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್‌ ಆಗಿರುವ ಇವಿಎಂ ಕಂಟ್ರೋಲ್‌ ಯೂನಿಟ್‌ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

Continue Reading

ಕರ್ನಾಟಕ

‌Brand Bengaluru: ವಿದ್ಯುತ್‌ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar Thushar girinath
Koo

ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್‌ ಬಿಲ್‌ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.

1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.

ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್‌ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್‌ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.

ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.

ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: Rice Politics: ನಾಳೆ ಅಮಿತ್‌ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ

Continue Reading
Advertisement
Car catches fire after hitting bus
ಕರ್ನಾಟಕ9 mins ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ27 mins ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema41 mins ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ48 mins ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ1 hour ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ1 hour ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ2 hours ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ2 hours ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ2 hours ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್2 hours ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ10 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌