Karnataka Election 2023 : ಅತಂತ್ರ ಫಲಿತಾಂಶ ಬಂದರೆ ಏನಿರಲಿದೆ ಮೂರೂ ಪಕ್ಷಗಳ ತಂತ್ರ? Vistara News
Connect with us

ಕರ್ನಾಟಕ ಎಲೆಕ್ಷನ್

Karnataka Election 2023 : ಅತಂತ್ರ ಫಲಿತಾಂಶ ಬಂದರೆ ಏನಿರಲಿದೆ ಮೂರೂ ಪಕ್ಷಗಳ ತಂತ್ರ?

ಮತಗಟ್ಟೆ ಸಮೀಕ್ಷೆಗಳು ಹೇಳಿರುವಂತೆ ಈ ಬಾರಿಯೂ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾದರೆ (Karnataka Election 2023) ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಮುಂದೇನು ಮಾಡಬಹುದು ಎಂಬ ಕುರಿತು ಚರ್ಚೆ ನಡೆಯುತ್ತಿದೆ. ಈ ಪಕ್ಷಗಳಿಗೆ ಇರುವ ಅವಕಾಶಗಳೇನು? ಇಲ್ಲಿದೆ ಓದಿ.

VISTARANEWS.COM


on

Karnataka Election 2023 if hung assembly what next 5 possibilities
Koo

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಅತಂತ್ರ ವಿಧಾನಸಭೆ (Karnataka Election 2023) ರಚನೆಯಾಗಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು (ಎಕ್ಸಿಟ್‌ ಪೋಲ್‌) ಅಭಿಪ್ರಾಯಪಟ್ಟಿರುವುದರಿಂದ ಮುಂದೇನು ಎಂದು ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಚಿಂತಿಸುತ್ತಿದ್ದಾರೆ. ಒಂದು ವೇಳೆ ಮತಗಟ್ಟೆ ಸಮೀಕ್ಷೆಗಳು ಅಭಿಪ್ರಾಯಪಟ್ಟಂತೆ ಅತಂತ್ರ ವಿಧಾನಸಭೆ ರಚನೆಯಾದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಇರುವ ಏಕೈಕ ಅವಕಾಶವೆಂದರೆ ಜೆಡಿಎಸ್‌ನೊಂದಿಗೆ ಸೇರಿಕೊಂಡು ಸರ್ಕಾರ ರಚಿಸುವುದು.

ಜೆಡಿಎಸ್‌ಗೆ ಕೂಡ ಈ ಎರಡು ಪಕ್ಷಗಳೇ ಗತಿ. ಇವುಗಳಲ್ಲಿಯೇ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕು, ಇಲ್ಲವೇ ಬೆಂಬಲ ಪಡೆದು ಸರ್ಕಾರ ರಚಿಸಬೇಕು. ಹೀಗಾಗಿ ಮೂರು ಪಕ್ಷದಲ್ಲಿಯೂ ಸರ್ಕಾರ ರಚನೆ ಹೇಗೆಂಬ ಕುರಿತು ಈಗ ಬಿಸಿ ಬಿಸಿ ಚರ್ಚೆ ನಡೆಯುತ್ತಿವೆ. ಈ ಮೂರು ಪಕ್ಷಗಳಿಗಿರುವ ಅವಕಾಶಗಳೇನು ಎಂಬುದನ್ನು ನೋಡೋಣ;

ಬಿಜೆಪಿಯ ಮುಂದಿರುವ ಅವಕಾಶಗಳೇನು? ಒಡೆದು ಹೋಗುತ್ತಾ ಗೌಡರ ಕುಟುಂಬ?

1. ಒಂದು ವೇಳೆ ಬಿಜೆಪಿಗೆ ಸರಳ ಬಹುಮತ ದೊರೆಯದಿದ್ದರೆ ಅದು ಜೆಡಿಎಸ್‌ನ ಬೆಂಬಲ ಕೋರಬಹುದು. ಈಗಾಗಲೇ ಪಕ್ಷದ ಹೈಕಮಾಂಡ್‌ ಈ ನಿಟ್ಟಿನಲ್ಲಿ ಸಕ್ರಿಯವಾಗಿದೆ ಎಂದು ಹೇಳಲಾಗಿದೆ.

2. ಒಂದು ವೇಳೆ ಜೆಡಿಎಸ್‌ ಬೆಂಬಲ ನೀಡದೆ ತಾನೇ ಸರ್ಕಾರ ರಚಿಸುವುದಾಗಿ ಹೇಳಿದರೆ ಅದಕ್ಕೆ ಬೆಂಬಲ ನೀಡಬಹುದು. ಸರ್ಕಾರದಲ್ಲಿ ಭಾಗಿಯಾಗುವ ಅವಕಾಶವೂ ಇರುತ್ತದೆ.

3.ಜೆಡಿಎಸ್‌ನ ಕೆಲ ಶಾಸಕರನ್ನು ಸೆಳೆದು, ಈ ಹಿಂದಿನಂತೆ ಸೆಳೆದು (ಆಪರೇಷನ್‌ ಕಮಲ ನಡೆಸಿ) ಸರ್ಕಾರ ರಚನೆ ಮಾಡಬಹುದು. ಅಗತ್ಯಬಿದ್ದರೆ ಕಾಂಗ್ರೆಸ್‌ ಶಾಸಕರನ್ನೂ ಸೆಳೆಯಬಹುದು.

4. ಜೆಡಿಎಸ್‌ನಲ್ಲಿನ ಭಿನ್ನಮತವನ್ನು ಬಳಸಿಕೊಂಡು, ಗೌಡರ ಕುಟುಂಬ ಸೇರಿದಂತೆ ಪಕ್ಷವನ್ನು ಒಡೆದು (ಶಿವಸೇನೆಯನ್ನು ಒಡೆದಂತೆ) ಜೆಡಿಎಸ್‌ ಶಾಸಕರ ಬೆಂಬಲವನ್ನೂ ಪಡೆದುಕೊಂಡು ಸರ್ಕಾರ ರಚಿಸುವುದು.

5. ಪಕ್ಷೇತರ ಶಾಸಕರು, ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಕೆಆರ್‌ಪಿಪಿ ಸೇರಿದಂತೆ ಇನ್ನಿತರ ಸಣ್ಣ ಪುಟ್ಟ ಪಕ್ಷಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಸರ್ಕಾರ ರಚಿಸಬಹುದು.

ಬಿಜೆಪಿಯ ಲೆಕ್ಕಾಚಾರಗಳನ್ನು ತಿಳಿಯಲು ಇಲ್ಲಿ ನೋಡಿ.

ಕಾಂಗ್ರೆಸ್‌ ಏನು ಮಾಡಬಹುದು? ಮತ್ತೆ ಗೌಡರ ಮನೆಗೆ ಬಾಗಿಲಿಗೆ ಹೋಗುತ್ತಾ?

1. ಹಿಂದಿನ ಕಹಿ ಘಟನೆಗಳನ್ನೆಲ್ಲಾ ಮರೆತು ಮತ್ತೆ ಜೆಡಿಎಸ್‌ನ ಬೆಂಬಲ ಪಡೆದು ಸರ್ಕಾರ ರಚನೆ ಮಾಡಬಹುದು. ಇದಕ್ಕೆ ಜೆಡಿಎಸ್‌ ಅನ್ನು ಒಪ್ಪಿಸಲು ʻಕೋಮು ಶಕ್ತಿಗಳನ್ನು ಅಧಿಕಾರದಿಂದ ದೂರ ಇಡುವ ಪ್ರಯತ್ನʼʼ ಎಂಬ ಬಣ್ಣ ಕಟ್ಟಬಹುದು.

2. ಕಳೆದ ಬಾರಿಯಂತೆಯೇ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್‌ಗೆ ನೀಡಿ, ಆ ಪಕ್ಷದ ನೇತೃತ್ವದಲ್ಲಿಯೇ ಸರ್ಕಾರ ರಚನೆಗೆ ಅವಕಾಶ ಒದಗಿಸಬಹುದು. ಇಲ್ಲವೇ ಹೊರಗಿನಿಂದ ಜೆಡಿಎಸ್‌ಗೆ ಬೆಂಬಲ ನೀಡಬಹುದು.

3. ಪಕ್ಷೇತರರು, ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಕೆಆರ್‌ಪಿಪಿ ಸೇರಿದಂತೆ ಇನ್ನಿತರ ಸಣ್ಣ ಪುಟ್ಟ ಪಕ್ಷಗಳಿಂದ ಆಯ್ಕೆಯಾಗುವವರ ಬೆಂಬಲ ಪಡೆದು ಸರ್ಕಾರ ರಚನೆ ಮಾಡಬಹುದು.

4. ಜೆಡಿಎಸ್‌ ಬೆಂಬಲ ನೀಡಲು ಒಪ್ಪದೇ ಇದ್ದಲ್ಲಿ ಆಪರೇಷನ್‌ ಹಸ್ತದ ಮೂಲಕ ಜೆಡಿಎಸ್‌ನ ಶಾಸಕರನ್ನು ಸೆಳೆದು, ಅವರ ಬೆಂಬಲ ಪಡೆದುಕೊಳ್ಳಬಹುದು.

5. ಇತ್ತೀಚೆಗೆ ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌, ಸವದಿ ಮತ್ತಿತರರ ಮೂಲಕ ಬಿಜೆಪಿಯ ಕೆಲ ಶಾಸಕರನ್ನು ಸಂಪರ್ಕಿಸಿ, ʻಆಪರೇಷನ್‌ ಹಸ್ತʼ ನಡೆಸಬಹುದು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಜೆಡಿಎಸ್‌ಗೆ ಇರುವುದು ಎರಡೇ ದಾರಿ!

1. ಕಾಂಗ್ರೆಸ್‌ನ ಬೆಂಬಲ ಪಡೆದು ಸರ್ಕಾರ ರಚಿಸಬಹುದು. ಇಲ್ಲವೇ, ಕಠಿಣ ಷರತ್ತುಗಳನ್ನು ವಿಧಿಸಿ, ಕಾಂಗ್ರೆಸ್‌ಗೆ ಬೆಂಬಲ ನೀಡಿ ಅಥವಾ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಬಹುದು.

2. ಬಿಜೆಪಿ ಬೆಂಬಲ ಪಡೆದು ಸರ್ಕಾರ ರಚಿಸಬಹುದು. ಇಲ್ಲವೇ ಕಠಿಣ ಷರತ್ತುಗಳನ್ನು ವಿಧಿಸಿ, ಬಿಜೆಪಿಗೆ ಬೆಂಬಲ ನೀಡಿ ಅಥವಾ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಬಹುದು.

3. ಈ ಬಾರಿ ಈ ಎರಡೂ ಪಕ್ಷಗಳಿಗೆ ಬೆಂಬಲ ನೀಡುವುದಿಲ್ಲ ಎಂದು ದೂರ ಉಳಿದು, ಯಾವ ಪಕ್ಷವೂ ಸರ್ಕಾರ ರಚಿಸದಂತೆ ನೋಡಿಕೊಂಡು ಮತ್ತೊಂದು ಚುನಾವಣೆಗೆ ಸಿದ್ಧತೆ ನಡೆಸಬಹುದು.

4. ರಾಜ್ಯದ ಹಿತದೃಷ್ಟಿಯಿಂದ ಸರ್ಕಾರ ರಚಿಸುವುದಾಗಿ ಪ್ರಕಟಿಸಿ, ಸಣ್ಣ ಪುಟ್ಟ ಪಕ್ಷಗಳ ಬೆಂಬಲ ಪಡೆದುಕೊಂಡು ಸರ್ಕಾರ ರಚಿಸಿ, ಕಾಂಗ್ರೆಸ್‌ ಮತ್ತು ಬಿಜೆಪಿಯ ಶಾಸಕರಿಗೂ ಬೆಂಬಲ ನೀಡುವಂತೆ ಕರೆ ನೀಡಿ, ರಾಜಕೀಯ ಡ್ರಾಮಾ ನಡೆಸಬಹುದು.

5. ಬೇರೆಯಾವ ಪಕ್ಷವೂ ತಮ್ಮ ಪಕ್ಷವನ್ನು ಒಡೆಯದಂತೆ ಎಚ್ಚರಿಕೆ ವಹಿಸಿಕೊಂಡು, ಈ ಪ್ರಯತ್ನ ನಡೆಸುವ ಪಕ್ಷದ ವಿರುದ್ಧ ತಿರುಗಿಬಿದ್ದು, ಮತ್ತೊಂದು ಪಕ್ಷಕ್ಕೆ ಬೆಂಬಲ ನೀಡಬಹುದು.

ಜೆಡಿಎಸ್‌ ಮುಂದಿದೆ ಹಲವು ಸವಾಲು.

ಅತಂತ್ರ ವಿಧಾನಸಭೆ ರಚನೆಯಾದರೆ ʻಜೆಸಿಬಿʼ ಪಕ್ಷಗಳು ಎಂದು ಕರೆಸಿಕೊಳ್ಳುವ ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಏನು ಮಾಡಲಿವೆ ಎಂಬುದು ಸದ್ಯದ ಮಟ್ಟಿಗೆ ತೀವ್ರ ಕುತೂಹಲಕಾರಿ ಸಂಗತಿಯಾಗಿದೆ.

ಇದನ್ನೂ ಓದಿ : Karnataka Election 2023 : ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ, ಹೈಕಮಾಂಡ್‌ನತ್ತ ಬಿಜೆಪಿಗರ ನೋಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

VISTARANEWS.COM


on

Edited by

CM Siddaramaiah and B Nagendra and DK Shivakumar
Koo

ಬೆಂಗಳೂರು, ಕರ್ನಾಟಕ: ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರದಲ್ಲಿ ಎಲ್ಲ ಮಂತ್ರಿ ಸ್ಥಾನಗಳ್ನು (Karnataka Cabinet) ಭರ್ತಿ ಮಾಡಲಾಗಿದೆ. ಕಳೆದ ವಾರ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ನಿನ್ನೆ ಮತ್ತೆ 24 ಶಾಸಕರು ಸಚಿವರಾಗಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಂತಾಗಿದೆ. ಈ ಮಧ್ಯೆ, ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರ ಪೈಕಿ ಅಂದರೆ, 34 ಸಚಿವರ ಪೈಕಿ 16 ಜನರು ಕ್ರಿಮಿನಲ್ ಪ್ರಕರಣಗಳನ್ನು (Criminal Cases) ಎದುರಿಸುತ್ತಿದ್ದಾರೆ. ಎಡಿಆರ್ (ADR) ಈ ಮಾಹಿತಿಯನ್ನು ಹೊರ ಹಾಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಸಚಿವ ಬಿ ನಾಗೇಂದ್ರ ಅವರ 42 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರೇ ಅಗ್ರಸ್ಥಾನಿಯಾಗಿದ್ದಾರೆ. ನಾಗೇಂದ್ರ ನಂತರದ ಸ್ಥಾನದಲ್ಲಿ ಉಪ ಮುಖ್ಯಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರಿದ್ದು, 19 ಕ್ರಿಮಿನಲ್ ಪ್ರಕ್ರಣಗಳ ವಿಚಾರಣೆ ನಡೆಯುತ್ತಿದೆ. ನಾಗೇಂದ್ರ ಅವರ ವಿರುದ್ಧ ಪ್ರಕರಣಗಳಲ್ಲಿ 21 ಪ್ರಕರಣಗಳು ಲೋಕಾಯುಕ್ತ ಮುಂದಿವೆ. ಉಳಿದ ಪ್ರಕರಣಗಳು ಸಿಬಿಐ, ಸಿಐಡಿಗಳ ಮುಂದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ 13 ಪ್ರಕರಣಗಳಿವೆ. ಕಾನೂನು ಬಾಹಿರ ಸಭೆ, ಚುನಾವಣೆ ಮೇಲೆ ಪ್ರಭಾವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಜಮೀರ್ ಖಾನ್ ಅವರು ವಿರುದ್ಧ 6 ಗಂಭೀರ ಪ್ರಕರಣಗಳಿವೆ. ಇನ್ನುಳಿದಂತೆ ಪ್ರಿಯಾಂಕ್ ಖರ್ಗೆ(9), ಈಶ್ವರ್ ಖಂಡ್ರೆ(7), ಎಂ ಬಿ ಪಾಟೀಲ್(5), ರಾಮಲಿಂಗಾ ರೆಡ್ಡಿ(4), ಡಾ. ಜಿ ಪರಮೇಶ್ವರ್(3), ಎಚ್ ಕೆ ಪಾಟೀಲ್ (2), ಡಿ ಸುಧಾಕರ್ (2), ಸತೀಶ್ ಜಾರಕಿಹೊಳಿ (2), ಕೃಷ್ಣ ಭೈರೇಗೌಡ (1), ಎನ್ ಚಲುವರಾಯಸ್ವಾಮಿ (1), ಕೆ ಎಚ್ ಮುನಿಯಪ್ಪ (1) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ

ಅಸೋಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(Association for Demorcatic Reforms- ADR) ಈ ಮಾಹಿತಿಯನ್ನು ಹೊರ ಹಾಕಿದೆ. ಚುನಾವಣಾ ವೇಳೆ ಆಯೋಗಕ್ಕೆ ಸಲ್ಲಿಸಲಾದ ಅಫಿಡವಿಟ್‌ಗಳ ಮೂಲಕ ಈ ಪಟ್ಟಿಯನ್ನು ರಚಿಸಲಾಗಿದೆ.

ಕರ್ನಾಟಕ ರಾಜಕೀಯದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರ ಟೇಕಾಫ್‌ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.

VISTARANEWS.COM


on

Edited by

Siddaramaiah
Koo

ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್‌ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.

ಹೌದು, ಎಂ.ಸಿ.ಸುಧಾಕರ್‌ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್‌ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್‌.ಕೆ.ಪಾಟೀಲ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ

Karnataka Ministers List

ಮೂಲ-ವಲಸಿಗ ಜಗಳ

ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

VISTARANEWS.COM


on

Edited by

MLA N Ravikumar
Koo

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ನವದೆಹಲಿಯಲ್ಲಿ ನೂತನ ಸಂಸತ್ ಭವನವನ್ನು ಕೇಂದ್ರ ಸರ್ಕಾರವು ಉದ್ಘಾಟನೆ (New Parliament Building) ಮಾಡುತ್ತಿದೆ. ಆದರೆ, ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ ಅವರ ಜನ್ಮದಿನದಂದು ನೂತನ ಸಂಸತ್ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಹಲವು ನಾಯಕರು ಸಂಸತ್ತಿನಲ್ಲಿ ಕುಳಿತು ದೇಶವನ್ನು ಮುನ್ನಡೆಸಬೇಕಿತ್ತು, ವಿಪರ್ಯಾಸವೆಂದರೆ ನೆಹರು ಕುಟುಂಬಸ್ಥರು ಇಡೀ ದೇಶವನ್ನೇ ತಮ್ಮ ಕುಟುಂಬದ ಸುಪರ್ದಿಗೆ ನೀಡುವ ಮೂಲಕ ಸಂಸತ್ತನ್ನು ತಮ್ಮ ಕುಟುಂಬಕ್ಕೆ ಸೀಮಿತ ಮಾಡಿಬಿಟ್ಟರು ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯ ಬಗ್ಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಕಾಂಗ್ರೆಸ್, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಈ ಹಿಂದೆ 1987ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸತ್ತಿನ ನೂತನ ಗ್ರಂಥಾಲಯ ಉದ್ಘಾಟನೆಯನ್ನು ಅವರೇ ಮಾಡಿದ್ದರು, ಅಂದಿನ ರಾಷ್ಟ್ರಪತಿಗಳಿಗೆ ಕೂಡ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್‌ ಭವನ

ಇನ್ನು 2010ರಲ್ಲಿ ಸೋನಿಯಾ ಗಾಂಧಿ ಅವರು ‘ಅಟಲ್ ಟನೆಲ್’ಗೆ ಭೂಮಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರದ ಯೋಜನೆಯೊಂದಕ್ಕೆ ಭೂಮಿ ಪೂಜೆ ಮಾಡಲು ಸೋನಿಯಾ ಗಾಂಧಿ ಯಾಕೆ ಬರಬೇಕಿತ್ತು? 2009ರಲ್ಲಿ ಮುಂಬೈ ನಗರದ ‘ಬಾಂದ್ರಾ ಮತ್ತು ವರ್ಲಿ’ ಸೀ ಲಿಂಕ್ ಉದ್ಘಾಟನೆಯನ್ನು ಸೋನಿಯಾ ಗಾಂಧಿ ಅವರು ಮಾಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಅಷ್ಟೂ ಯೋಜನೆಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರನ್ನೇ ಬಳಸಿಕೊಂಡಿರುವ ನೆಹರು ಕುಟುಂಬದ ಕುಡಿಗಳು ಈಗ ಸೆಂಟ್ರಲ್ ವಿಸ್ಟಾ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ ಪಕ್ಕದ ರಾಜ್ಯವಾದ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಲ್ಲಿ ನೂತನ ಸಚಿವಾಲಯ ಉದ್ಘಾಟನೆಗೆ ತೆಲಂಗಾಣದ ‘ರಾಜ್ಯಪಾಲ’ರನ್ನೂ ಆಹ್ವಾನಿಸಿರಲಿಲ್ಲ, ಆದರೆ ಈಗ ಸೆಂಟ್ರಲ್ ವಿಸ್ಟಾ ಉದ್ಘಾಟನೆಗೆ ರಾಷ್ಟ್ರಪತಿಗಳು ಬರದಿರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸಿದ ಸಂದರ್ಭದಲ್ಲಿ ಮೊದಲ ಪ್ರಧಾನಮಂತ್ರಿಯಾಗಿದ್ದ ನೆಹರು ಅವರಿಗೆ ನೀಡಿದ್ದ ತಮಿಳುನಾಡಿನ ‘ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಸ್ಪೀಕರ್ ಕುರ್ಚಿ ಬಳಿ ಇಡುತ್ತಿರುವುದು ಮತ್ತೊಂದು ವಿಶೇಷ. ಬ್ರಿಟಿಷರಿಂದ ಅಧಿಕಾರ ಹಸ್ತಾಂತರವಾಗಿದ್ದರೂ ಅವರು ಕಟ್ಟಿಸಿದ್ದ ಸಂಸತ್ತಿನಿಂದ ನಾವು ಹೊರಬಂದಿರಲಿಲ್ಲ. ಬ್ರಿಟಿಷರ ಮನಸ್ಥಿತಿಯನ್ನೇ ತೋರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯರೇ ನಿರ್ಮಾಣ ಮಾಡಿರುವ ನೂತನ ಸಂಸತ್ ಕಟ್ಟಡ ಇಷ್ಟವಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ | New Parliament Building: ಸೆಂಗೋಲ್‌ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ

ನೂತನ ಸಂಸತ್ ಭವನದ ಉದ್ಘಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಇಲ್ಲಸಲ್ಲದ ನೆಪವೊಡ್ಡಿ ಸೆಂಟ್ರಲ್ ವಿಸ್ಟಾ ಉದ್ಘಾಟನೆಯ ಕಾರ್ಯಕ್ರಮವನ್ನು ಕೆಲ ವಿರೋಧ ಪಕ್ಷಗಳು ಬಹಿಷ್ಕರಿಸುವುದಾಗಿ ಹೇಳಿರುವುದು ಸರಿಯಲ್ಲ. ಸಂಸತ್ ಭವನ ಕೇವಲ ಕಟ್ಟಡವಲ್ಲಿ ಅದು ದೇಶದ ಪ್ರಜಾಪ್ರಭುತ್ವ ಎಂಬುದನ್ನು ವಿರೋಧಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.‌

Continue Reading

ಕರ್ನಾಟಕ

Praveen Nettaru: ಆಕ್ರೋಶದ ಬೆನ್ನಲ್ಲೇ ಔದಾರ್ಯ ಮೆರೆದ ಸಿದ್ದರಾಮಯ್ಯ; ನೆಟ್ಟಾರು ಪತ್ನಿ ಮರುನೇಮಕಕ್ಕೆ ನಿರ್ಧಾರ

Praveen Nettaru: ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಗ್ರೂಪ್‌ ಸಿ ಹುದ್ದೆಗೆ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.

VISTARANEWS.COM


on

Edited by

Praveen Nettarus wife nutan kumari
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು (Praveen Nettaru) ಗ್ರೂಪ್‌ ಸಿ ಹುದ್ದೆಗೆ ಮರುನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಬೊಮ್ಮಾಯಿ ಸರ್ಕಾರದಲ್ಲಿ ನೇಮಕ ಮಾಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ‌ ಸಿದ್ದರಾಮಯ್ಯ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಆದರೂ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

ಬೊಮ್ಮಾಯಿ ಸರ್ಕಾರದಲ್ಲಿ ಗ್ರೂಪ್‌ ಸಿ ಹುದ್ದೆ

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಮಾನವೀಯ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಬೊಮ್ಮಾಯಿ ಸರ್ಕಾರವು ತಾತ್ಕಾಲಿಕ ನೆಲೆಯ ನೇಮಕಾತಿ ಮಾಡಿತ್ತು. ಮೊದಲಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿತ್ತು. ಗ್ರೂಪ್‌ ಸಿ ಹುದ್ದೆಗೆ ನೇಮಕಗೊಳಿಸಿ, 30,350 ರೂ. ವೇತನ ನಿಗದಿಪಡಿಸಲಾಗಿತ್ತು. ನಂತರ ನೂತನ ಕುಮಾರಿ ಅಪೇಕ್ಷೆ ಮೇರೆಗೆ ದಕ್ಷಿಣ ಕ‌ನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತು.

ಈ ಹುದ್ದೆಯ ಅವಧಿಯು ಈ ಹಿಂದಿನ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿತ್ತು. ಈಗ ಹೊಸ ಸರ್ಕಾರ ರಚನೆಯಾಗಿರುವುದರಿಂದ ಕೆಲಸದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

2022ರ ಸೆ. 22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಹೊಸ ಸರ್ಕಾರ ಬಂದ ಕೂಡಲೇ ನೆಟ್ಟಾರ್ ಪತ್ನಿಯನ್ನು ಕೆಲಸದಿಂದ ವಜಾ ಮಾಡಿದ್ದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಈಗ, ನೂತನ ಕುಮಾರಿ ಮರು ನೇಮಕಕ್ಕೆ ನಿರ್ಧರಿಸಿದೆ.

Continue Reading
Advertisement
kapil dev 1983 world cup captain
ಕ್ರಿಕೆಟ್7 mins ago

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

daredevil mustafa Running successful
South Cinema9 mins ago

Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

somana kunitha
ಕಲೆ/ಸಾಹಿತ್ಯ10 mins ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಪ್ರಥಮ ಬಹುಮಾನ ಪಡೆದ ಕಥೆ: ಸೋಮನ ಕುಣಿತ

Ram Charan presents The India House Film
South Cinema10 mins ago

Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್‌; ವಿಡಿಯೊ ಹಂಚಿಕೊಂಡ ರಾಮ್‌ಚರಣ್‌!

PM Modi Tweet After inaugurates new Parliament building
ದೇಶ13 mins ago

ಹೊಸ ಸಂಸತ್​ ಭವನ ಉದ್ಘಾಟನೆ; ಈ ಕಟ್ಟಡ ಸಬಲೀಕರಣಕ್ಕೆ ತೊಟ್ಟಿಲಾಗಲಿ ಎಂದ ಪ್ರಧಾನಿ ಮೋದಿ

Bandipur National Park PM Narendra modi visit
ಕರ್ನಾಟಕ14 mins ago

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

CM Siddaramaiah and B Nagendra and DK Shivakumar
ಕರ್ನಾಟಕ20 mins ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ35 mins ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

french open novak djokovic
ಕ್ರೀಡೆ56 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ1 hour ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!