modi in roadshow in bangalore and its effectsKarnataka Election 2023 : 13 ಕ್ಷೇತ್ರಗಳಲ್ಲಿ ಹಾದು ಹೋದ ಮೋದಿ ರೋಡ್‌ ಶೋ; ಬೆಂಗಳೂರಿನಾದ್ಯಂತ ಸಂಚಲನ Vistara News
Connect with us

ಕರ್ನಾಟಕ ಎಲೆಕ್ಷನ್

Karnataka Election 2023 : 13 ಕ್ಷೇತ್ರಗಳಲ್ಲಿ ಹಾದು ಹೋದ ಮೋದಿ ರೋಡ್‌ ಶೋ; ಬೆಂಗಳೂರಿನಾದ್ಯಂತ ಸಂಚಲನ

ಈ ಚುನಾವಣೆಯ (Karnataka Election 2023) ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಮೂರು ರೋಡ್‌ ಶೋಗಳಲ್ಲಿ ಎರಡು ರೋಡ್‌ ಶೋಗಳು ಮುಗಿದಿವೆ. ಇದು ಚುನಾವಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರ ಈಗ ನಡೆಯುತ್ತಿದೆ.

VISTARANEWS.COM


on

modi in roadshow in bangalore and its effects
Koo

ಬೆಂಗಳೂರು: ವಿಧಾನಸಭಾ ಚುನಾವಣೆಯ (Karnataka Election 2023) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆಸಿದ ರೋಡ್‌ ಶೋ (Narendra Modi Road show) ಯಶಸ್ವಿಯಾಗಿ ಅಂತ್ಯಗೊಂಡಿದೆ. 26.5 ಕಿ.ಮೀ. ದೂರ ಕ್ರಮಿಸಿದ ಈ ಮೆಗಾ ರೋಡ್‌ ಶೋಗೆ ಅರ್ಧ ಗಂಟೆ ಹೆಚ್ಚು ಸಮಯ ತೆಗೆದುಕೊಳ್ಳಲಾಯಿತು ಎಂಬುದನ್ನು ಬಿಟ್ಟರೆ ಮತ್ತೆಲ್ಲವೂ ನಿಗದಿಯಂತೆಯೇ ನಡೆದಿದೆ.

ಮೋದಿ ಈ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ನಡೆಸಿದ ಎರಡನೇ ರೋಡ್‌ ಶೋ ಇದಾಗಿದೆ. ಮೂರನೇ ರೋಡ್‌ ಶೋ ಭಾನುವಾರ ನಡೆಯಲಿದೆ. ಗುಜರಾತ್‌ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ 50 ಕಿ.ಮೀ. ರೋಡ್‌ ಶೋ ನಡೆಸಿದ್ದರು. ಒಟ್ಟು 16 ಕ್ಷೇತ್ರಗಳಲ್ಲಿ ಈ ಮೂಲಕ ಪ್ರಚಾರ ನಡೆಸಿದ್ದರು. ಅದನ್ನು ಬಿಟ್ಟರೆ ಇದೇ ಮೋದಿಯವರ ಉದ್ದದ ರೋಡ್‌ ಶೋ ಆಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೋದಿ ಒಟ್ಟು ಮೂರು ರೋಡ್‌ ಶೋ ನಡೆಸುತ್ತಿದ್ದು, ಸುಮಾರು 39 ಕಿ.ಮೀ ಕ್ರಮಿಸಿದಂತಾಗಲಿದೆ.

ಮೋದಿಯವರ ಶನಿವಾರದ ಮೆಗಾ ರೋಡ್‌ ಶೋ ಮುಗಿಯುತ್ತಿದ್ದಂತೆಯೇ ಚುನಾವಣೆಯ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಬಹದು ಎಂಬ ರಾಜಕೀಯ ಲೆಕ್ಕಾಚಾರ ಶುರುವಾಗಿದೆ. 26 ಕಿಲೋಮೀಟರ್ ಉದ್ದದ ಈ ರೋಡ್ ಶೋ 13 ವಿಧಾನಸಭೆ ಕ್ಷೇತ್ರಗಳನ್ನು ಹಾದು ಹೋಗಿದೆ. ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜ ಪೇಟೆ, ಗಾಂಧಿನಗರ, ಮಹಾಲಕ್ಷ್ಮಿ ಲೇಔಟ್, ವಿಜಯ ನಗರ, ಗೋವಿಂದರಾಜ ನಗರ, ರಾಜಾಜಿ ನಗರ, ಮಲ್ಲೇಶ್ವರ ವಿಧಾನ ಸಭಾ ಕ್ಷೇತ್ರಗಳಲ್ಲಿ ಮೋದಿ ಸಂಚರಿಸಿದ್ದಾರೆ.

ಈ 13 ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ಬಿಟ್ಟರೆ ಉಳಿದೆಲ್ಲಾ ಕ್ಷೇತ್ರಗಳಲ್ಲಿಯೂ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಜಯನಗರ, ಚಾಮರಾಜ ಪೇಟೆ, ಗಾಂಧಿನಗರ ಮತ್ತು ವಿಜಯನಗರದಲ್ಲಿ ಕಾಂಗ್ರೆಸ್‌ ಗೆದ್ದಿದೆ. ಈ ಬಾರಿಯೂ ಈ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ನಾಲ್ಕು ಕ್ಷೇತ್ರಗಳ ಮೇಲೆ ಮೋದಿ ರೋಡ್‌ ಶೋನ ಪರಿಣಾಮವೇನಿರಬಹುದು ಎಂಬುದು ಮುಖ್ಯವಾಗಿದೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

ರಾಜಧಾನಿಯ ಒಟ್ಟು 28 ಕ್ಷೇತ್ರಗಳ ಪೈಕಿ ಈ ಬಾರಿ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬುದು ಬಿಜೆಪಿಯ ಗುರಿಯಾಗಿದೆ. ಇದಕ್ಕಾಗಿ ಪಕ್ಷ ಹಲವಾರು ತಂತ್ರಗಳನ್ನು ರೂಪಸಿದ್ದು, ಇದರ ಭಾಗವಾಗಿ ಪ್ರಧಾನಿ ಮೋದಿಯವರ ಮೂರು ರೋಡ್‌ ಶೋಗಳನ್ನು ಆಯೋಜಿಸಿದೆ. ರೋಡ್‌ ಶೋ ಮೂಲಕ ಜನರನ್ನು ತಲುಪುವುದು ಸುಲಭ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಗುಜರಾತ್‌ನಲ್ಲಿ ರೋಡ್‌ ಶೋಗಳು ಯಶಸ್ವಿಯಾಗಿರುವುದರಿಂದ ಇಲ್ಲಿಯೂ ಇದರ ಲಾಭ ಪಡೆಯುವ ಯೋಚನೆ ಪಕ್ಷದ್ದು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಧಾನಿಯಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 15 ಮತ್ತು ಜೆಡಿಎಸ್‌ 2 ಸ್ಥಾನಗಳನ್ನು ಗೆದ್ದಿದ್ದವು. ನಂತರ ʻಆಪರೇಷನ್‌ ಕಮಲʼ ದಿಂದಾಗಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂರು ಸ್ಥಾನ ಕಳೆದುಕೊಂಡಿದ್ದರೆ ಜೆಡಿಎಸ್‌ 1 ಸ್ಥಾನ ಕಳೆದುಕೊಂಡಿತ್ತು. ಬಿಜೆಪಿಯ ಶಕ್ತಿ 15 ಸ್ಥಾನಗಳಿಗೆ ಏರಿತ್ತು, ಕಾಂಗ್ರೆಸ್‌ 12 ಮತ್ತು ಜೆಡಿಎಸ್‌ 1 ಸ್ಥಾನ ಉಳಿಸಿಕೊಂಡಿದ್ದವು. ಈ ಬಾರಿಯ ಚುನಾವಣೆಯಲ್ಲಿ ರಾಜಧಾನಿಯಲ್ಲಿ ಯಾರು ಎಷ್ಟು ಸ್ಥಾನ ಗೆಲ್ಲಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ಮೂಲಗಳ ಪ್ರಕಾರ ಈ ಬಾರಿ ಏನಾದರೂ ಮಾಡಿ ಪಕ್ಷ 18 ಸ್ಥಾನಗಳಲ್ಲಿಯಾದರೂ ಗೆಲ್ಲಬೇಕೆಂದು ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಪಕ್ಷದ ಸಮೀಕ್ಷೆಗಳ ಪ್ರಕಾರ ನಗರದ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಜಿದ್ದಾಜಿದ್ದಿ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಲೇಬೇಕೆಂದು ಪ್ರಚಾರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಪ್ರಧಾನಿ ರೋಡ್‌ ಶೋ ನಡೆಸುತ್ತಿರುವುದು ಕೂಡ ಒಂದು ತಂತ್ರಗಾರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ; ರಾಜಕೀಯ ಪರಿಣಾಮವೇನು?

ಬೆಂಗಳೂರಿನಲ್ಲಿ ನಡೆಸುವ ರೋಡ್‌ ಶೋನಲ್ಲಿ ಲಕ್ಷಾಂತರ ಜನರ ಭಾಗವಹಿಸುತ್ತಿದ್ದಾರೆ. ಇದು ಬೆಂಗಳೂರಿನ ಇತರ ಕ್ಷೇತ್ರಗಳ ಮೇಲೆ ಪರಿಣಾಮ ಬೀರುವುದಲ್ಲದೆ ರಾಜ್ಯಾದ್ಯಂತ ಇದರ ಎಫೆಕ್ಟ್‌ ಇರಲಿದೆ. ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದ್ದರಿಂದ ಪ್ರಧಾನಿ ಮೋದಿಯವರೇ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲು ಉತ್ಸಾಹ ತೋರಿದರೆಂದು ಪಕ್ಷದ ಮೂಲಗಳು ತಿಳಿಸಿವೆ.

ಒಟ್ಟಾರೆಯಾಗಿ ಮೋದಿಯವರ ಎರಡನೇ ರೋಡ್‌ ಶೋ ಕೂಡ ಯಶಸ್ವಿಯಾಗಿ ನಡೆದಿದ್ದು, ನಗರದ ಬಿಜೆಪಿ ನಾಯಕರಲ್ಲಿ, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ.

ಇದನ್ನೂ ಓದಿ : Modi In Karnataka: ಮೋದಿ ರೋಡ್‌ ಶೋ ವೇಳೆ ರಾರಾಜಿಸಲಿವೆ ಆಂಜನೇಯನ ಭಾವಚಿತ್ರ ಇರುವ ಕೇಸರಿ ಬಾವುಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ ಎಲೆಕ್ಷನ್

Modi Magic: ಬರೀ ಮೋದಿ ಹೆಸರಿಗೆ ವೋಟ್ ಬರಲ್ಲ! ಬಿಜೆಪಿಗೆ ಆರೆಸ್ಸೆಸ್ ಮುಖವಾಣಿ ಪತ್ರಿಕೆಯಿಂದ ಫುಲ್ ಕ್ಲಾಸ್

Modi Magic: ಕರ್ನಾಟಕ ಚುನಾವಣೆ ಸೋತ ಬೆನ್ನಲ್ಲೇ ಆರೆಸ್ಸೆಸ್ ಚಿಂತಕರ ಚಾವಡಿ ಹೊಸ ನಿಟ್ಟಿನಲ್ಲಿ ಯೋಚಿಸುತ್ತಿರುವಂತಿದೆ. ಕೇವಲ ಮೋದಿ, ಹಿಂದುತ್ವದಿಂದಲೇ ಮತ ಬರುವುದಿಲ್ಲಎಂದು ಬಿಜೆಪಿಗೆ ಎಚ್ಚರಿಸಿದೆ.

VISTARANEWS.COM


on

Edited by

Narendra Modi
Koo

ಮುಂಬೈ, ಮಹಾರಾಷ್ಟ್ರ: ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವುದು ಬಿಜೆಪಿಯ ಥಿಂಕ್‌ ಟ್ಯಾಂಕ್‌ನಲ್ಲಿ ಪರ್ಯಾಯ ಯೋಚನೆಗೆ ಕಾರಣವಾಗಿದೆಯೇ? ಹೌದು, ಇಂಥದೊಂದು ಅನುಮಾನ ಬರಲು ಕಾರಣವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಮುಖವಾಣಿಯಾಗಿರುವ ಆರ್ಗೈನಸರ್ (Organizer) ವಾರ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ. ಚುನಾವಣೆ ಗೆಲ್ಲಲು ಮೋದಿ (Modi Magic) ನಾಮಬಲ, ಹಿಂದುತ್ವವು (hindutva) ಪ್ರತಿಬಾರಿಯೂ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಟೀಕಿಸಿದೆ.

ಕರ್ನಾಟಕದಲ್ಲಿನ ಹೀನಾಯ ಸೋಲು ಮತ್ತು ಮುಂಬರುವ 2024ರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ವರದಿಯು ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಎಲ್ಲ ಚುನಾವಣೆಗಳನ್ನು ಮೋದಿ ಮ್ಯಾಜಿಕ್‌ನಿಂದಲೇ ನಡೆಯುತ್ತದೆ ಎಂದು ಭಾವಿಸುತ್ತದೆ. ಆದರೆ, ಈಗ ಮೋದಿ ಮ್ಯಾಜಿಕ್ ನಡೆಯುತ್ತಿಲ್ಲ ಎಂಬುದು ಸಾಬೀತಾಗಿದೆ ಎಂಬ ರೀತಿಯಲ್ಲಿ ಆರೆಸ್ಸೆಸ್ ಮುಖವಾಣಿ ವರದಿಯನ್ನು ಪ್ರಕಟಿಸಿದೆ. ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಪ್ರಭಾವಿ ನಾಯಕತ್ವ ಅಗತ್ಯವಾಗಿದೆ. ಪ್ರಾದೇಶಿಕವಾಗಿ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರಾದೇಶಿಕ ಮಟ್ಟದಲ್ಲಿ ಪ್ರಬಲ ನಾಯಕತ್ವ ಮತ್ತು ಪರಿಣಾಮಕಾರಿ ಪ್ರಯತ್ನವಿಲ್ಲದೇ, ಪ್ರಧಾನಿ ಮೋದಿಯವರ ವರ್ಚಸ್ಸು ಮತ್ತು ಹಿಂದುತ್ವವು ಸೈದ್ಧಾಂತಿಕ ವಿಷಯಗಳು ಚುನಾವಣೆ ಗೆಲ್ಲಲು ಸಾಕಾಗುವುದಿಲ್ಲ ಪತ್ರಿಕೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿ ಹೊರಬಂದಿವೆ. ಆದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಒಳ್ಳೆಯ ಹಾದಿಯಂತೂ ಅಲ್ಲ. ಹಾಗಾಗಿ, ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಗೆ ಇದು ಸರಿಯಾದ ಸಮಯ ಎಂದು ಅದು ಹೇಳಿದೆ.

ಕರ್ನಾಟಕದ ಚುನಾವಣೆಯಲ್ಲಿ ಭ್ರಷ್ಟಾಚಾರವು ಪ್ರಮುಖ ವಿಷಯವಾಗಿತ್ತು. ಮೋದಿ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಸಮರ್ಥಿಸಿಕೊಳ್ಳಬೇಕಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Jagadish Shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿಯೇ ಸೋತಿದೆ: ಜಗದೀಶ್‌ ಶೆಟ್ಟರ್

ಕರ್ನಾಟಕ ಚುನಾವಣೆಯಲ್ಲಿ ಆಡಳಿತ ಪಕ್ಷವು (ಬಿಜೆಪಿ) ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳೊಂದಿಗೆ ಮತದಾರರನ್ನು ಹುರಿದುಂಬಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿತು. ಆದರೆ, ಕಾಂಗ್ರೆಸ್ ಸ್ಥಳೀಯ ಮಟ್ಟದಲ್ಲಿ ತನ್ನ ದಾಳಿ ಉರುಳಿಸಿತು. ಹಾಗಾಗಿ, ಅತಿ ಹೆಚ್ಚು ಮತದಾನವಾದ ಈ ಚುನಾವಣೆಯಲ್ಲಿ ಬಿಜೆಪಿಗೆ ತನ್ನ ಈ ಹಿಂದಿನ ಮತ ಪ್ರಮಾಣವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಇದರಿಂದ ಹೀನಾಯವಾಗಿ ಸೋತಿತು. ಹಾಲಿ ಸಚಿವರ ವಿರುದ್ಧದ ಆಡಳಿತ ವಿರೋಧಿ ನಿಲುವು ಬಿಜೆಪಿಗೆ ಮುಳುವಾಯಿತು ಎಂದು ಆರ್ಗನೈಸರ್ ಹೇಳಿದೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಭಾಗ-2: ಕನ್ನಡ ಬಾರದ ಶಿಕ್ಷಕಿ ವಿರುದ್ಧ ಉಪವಾಸ ಕುಳಿತ ವಿದ್ಯಾರ್ಥಿಗಳು!

ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿರುವುದನ್ನು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ.

VISTARANEWS.COM


on

Edited by

Kasaragod School students protest
Koo

ಬೆಂಗಳೂರು: ಕರ್ನಾಟಕ ಹಾಗೂ ಕಾಸರಗೋಡಿನ ನಡುವಿನ ಕೊಂಡಿಯಾಗಿರುವ ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕಂಟಕ ಇನ್ನೂ ತಪ್ಪಿಲ್ಲ. ರಾಜಕೀಯವಾಗಿ ಕೇರಳ ರಾಜ್ಯಕ್ಕೆ ಸೇರಿರುವ ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲು ಅಥವಾ ನಿರ್ಬಲಗೊಳಿಸಲು ಆಗಾಗ್ಗೆ ಅಲ್ಲಿ ನಡೆಯುವ ಪ್ರಯತ್ನಗಳ ಕುರಿತು 2018ರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಸಿನಿಮಾವನ್ನು ರಿಷಭ್‌ ಶೆಟ್ಟಿ ನಿರ್ಮಿಸಿದ್ದರು.

ಈ ಸಿನಿಮಾ ಕರ್ನಾಟಕದಾದ್ಯಂತ ಜನಮೆಚ್ಚುಗೆಯನ್ನು ಪಡೆದು ಕಾಸರಗೋಡು ಸೇರಿ ರಾಜ್ಯದ ವಿವಿಧೆಡೆ ಸರ್ಕಾರಿ ಶಾಲೆ ಉಳಿಸುವ ಪ್ರೇರೇಪಣೆಯನ್ನು ಸಾರ್ವಜನಿಕರಿಗೆ ನೀಡಿತ್ತು. ಆದರೆ ಇದೀಗ ನಡೆದಿರುವುದು ಸಿನಿಮಾ ಕಥೆ ಅಲ್ಲ, ನಿಜವಾದ ಘಟನೆ.

ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿದೆ. ಆ ಶಿಕ್ಷಕಿ ಸಮಾಜ ವಿಜ್ಞಾನ ಬೋಧಿಸುವವರಿದ್ದರು. ಆದರೆ ಅವರಿಗೆ ಕನ್ನಡವೇ ಬರುವುದಿಲ್ಲ. ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡವೇ ಬಾರದ ಶಿಕ್ಷಕರನ್ನು ನೇಮಿಸಿದ್ದಕ್ಕೆ ಪೋಷಕರು ಹಾಗೂ ಸ್ವತಃ ವಿದ್ಯಾರ್ಥಿಗಳೇ ಸಿಟ್ಟಾಗಿದ್ದಾರೆ.

ಇತ್ತೀಚೆಗೆ ಈ ಶಿಕ್ಷಕಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆಗಮಿಸಿದ್ದರು. ಆದರೆ ಆಗ ಗ್ರಾಮಸ್ಥರು ವಿರೋಧಿಸಿದ್ದರಿಂದ ವಾಪಸಾಗಿದ್ದರು. ಆದರೆ ಶನಿವಾರ ಪೊಲೀಸ್‌ ಕಾವಲಿನೊಂದಿಗೆ ವರದಿ ಮಾಡಿಕೊಳ್ಳಲು ಶಿಕ್ಷಕಿ ಆಗಮಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಊಟವನ್ನೂ ಮಾಡದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಘಟನಾವಳಿಗಳನ್ನು ತಿಳಿದ ಮುಖ್ಯಶಿಕ್ಷಕರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೆ ಸೋಮವಾರವೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.

ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಕಳೆದ ವರ್ಷ ಕಾಸರಗೋಡಿನ ಅನೇಕ ಕನ್ನಡ ಮಾಧ್ಯಮ ಶಾಲೆಗಳಿಗೆ ಕ ನ್ನಡವೇ ತಿಳಿದಿಲ್ಲದ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು. ಇದರ ವಿರುದ್ಧ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೇರಳ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಸಂಬಂಧ ಪ್ರತಿಭಟನೆಗಳು ನಡೆದಾಗ ಸರ್ಕಾರ ತನ್ನ ನಿರ್ಧಾರವನ್ನು ಬದಲಾವಣೆ ಮಾಡಿಕೊಂಡಿತ್ತು.

ಆನಂತರ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಭೇಟಿ ಮಾಡಿದಾಗಲೂ, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಈಗ ಮತ್ತೊಮ್ಮೆ ಸರ್ಕಾರ ಅದೇ ತಪ್ಪನ್ನು ಮಾಡಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಕೇರಳ ಸರ್ಕಾರಕ್ಕೆ ದೂರವಾಣಿ ಹಾಗೂ ಪತ್ರದ ಮೂಲಕ ಸಂಪರ್ಕಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿಗೂ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು; ಸರ್ಕಾರಿ ಶಾಲೆಗೆ ಕಲ್ಲೆಸೆದು ವಿಕೃತಿ

Continue Reading

ಕರ್ನಾಟಕ

Congress Guarantee: ಡಿಗ್ರಿ ನಂತರ ಪಿಜಿ ಓದಿದರೆ ಯುವನಿಧಿ ಇಲ್ಲ: ಸರ್ಕಾರದ ಮಾರ್ಗಸೂಚಿಯಲ್ಲಿ ಬಯಲಾಯ್ತು ಸತ್ಯ

ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ.

VISTARANEWS.COM


on

Edited by

Unemployed youth of india AI Photo
AI Photo
Koo

ಬೆಂಗಳೂರು: ರಾಜ್ಯದ ನಿರುದ್ಯೋಗ ಯುವಕರಿಗೆ ಭತ್ಯೆ ನೀಡುವ ಯುವನಿಧಿ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಪದವಿ ವ್ಯಾಸಂಗ ಮಾಡಿದವರಿಗಷ್ಟೆ ನಿರುದ್ಯೋಗಭತ್ಯೆ ಸಿಗಲಿದೆ.

2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ಹಾಗೂ
ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 1500 ರೂ. ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ ಯೋಜನೆ” ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆಯನ್ನು ಮೊದಲ ಸಂಪುಟ ಸಭೆಯಲ್ಲಿ ಸರ್ಕಾರ ನೀಡಿತ್ತು.

ಸಚಿವ ಸಂಪುಟದ ಅನುಮೋದನೆ ನ೦ತರ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬ೦ಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಿದೆ.

2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾ೦ಕದಿ೦ದ 180 ದಿನಗಳು ಕಳೆದರೂ ಉದ್ಯೋಗ
ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ನೀಡಲಾಗುತ್ತದೆ. ಇದರಲ್ಲಿ ಇಂಜಿನಿಯರಿಂಗ್‌, ಮೆಡಿಕಲ್‌ನಂತಹ ವೃತ್ತಿಪರ ಕೋರ್ಸ್‌ಗಳೂ ಸೇರಿವೆ. ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ
ತಿ೦ಗಳು 1500 ರೂ. ನೀಡಲಾಗುತ್ತದೆ. ಎರಡೂ ಭತ್ಯೆಗಳನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುತ್ತದೆ.

ಪದವೀಧರರಿಗೆ ಯುವನಿಧಿ ಎಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಪದವಿ ನಂತರ ಸ್ನಾತಕೋತ್ತರ ವ್ಯಾಸಂಗಕ್ಕೆ ತೆರಳುವವರಿಗೆ ಭತ್ಯೆ ಇಲ್ಲ ಎಂದು ತಿಳಿಸಿದೆ. ಆದರೆ ಸ್ನಾತಕೋತ್ತರ ಪದವಿ ನಂತರ ಉದ್ಯೋಗ ಲಭಿಸದಿದ್ದರೆ ಏನು ಎಂಬ ಪ್ರಶ್ನೆಗೆ ಮಾರ್ಗಸೂಚಿಯಲ್ಲಿ ಉತ್ತರ ಇಲ್ಲ.

ಷರತ್ತು ಮತ್ತು ನಿಬಂಧನೆಗಳು:

  1. ಪದವಿ ಅಥವಾ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
  2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ
    ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಮಗಿತಗೊಳಿಸಲಾಗುವುದು.
  3. ಭತ್ಯೆಯನ್ನು ಖಾತೆಗೆ ನೇರ ನಗದು ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು
    ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು.
  4. ವಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತ೦ತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನ೦ತರ ತಪ್ಪು ಫೋಷಣೆ
    ಅಥವಾ ಘೋಷಿಸಲು ವಿಫಲವಾದರೆ ದ೦ಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದೇ ಇರುವವರು ಯಾರು?

  1. ಉನ್ನತ ವ್ಯಾಸ೦ಗಕ್ಕೆ ದಾಖಲಾತಿ ಹೊ೦ದಿ ವಿದ್ಯಾಭ್ಯಾಸ ಮು೦ದುವರಿಸುವವರು.
  2. ಶಿಶಿಕ್ಕು (ಅಪ್ರೆಂಟೀಸ್‌) ವೇತನವನ್ನು ಪಡೆಯುತ್ತಿರುವವರು.
  3. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
  4. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ
    ಉದ್ಯೋಗ ಹೊ೦ದಿದವರು ಈ ಯೋಜನೆಗೆ ಅರ್ಹರಲ್ಲ.

ನಿವಾಸಿ ಪ್ರಮಾಣ ಪತ್ರ:
ಕನ್ನಡಿಗರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಹಾಗಾಗಿ ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಡೊಮಿಸಿಲ್‌ ಸರ್ಟಿಫಿಕೇಟ್‌ (ನಿವಾಸಿ ಪ್ರಮಾಣಪತ್ರ) ಅಗತ್ಯವಾಗುತ್ತದೆ ಎಂಬ ಚರ್ಚೆ ನಡೆದಿದೆ. ನಿವಾಸಿ ಪ್ರಮಾಣಪತ್ರಕ್ಕೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಸೇವಾಸಿಂಧು ಮೂಲಕ ಅರ್ಜಿ:
ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ. ಕಾರಣವೇನೆಂದರೆ ಈ ವರ್ಷ ಅಂದರೆ 2023ರಲ್ಲಿ ತೇರ್ಗಡೆ ಹೊಂದಿರುವ ಪದವೀಧರರು ಹಾಗೂ ಡಿಪ್ಲೊಮಾದಾರರಿಗೆ ಮಾತ್ರವೇ ಈ ಯೋಜನೆ ಅನ್ವಯವಾಗಲಿದೆ. ಪದವಿ ಫಲಿತಾಂಶಗಳು ಆಗಮಿಸಿ ಆರು ತಿಂಗಳ ನಂತರವಷ್ಟೆ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಇದಕ್ಕೆ ಇನ್ನೂ ಸಮಯವಿದೆ.

Continue Reading

ಕರ್ನಾಟಕ

Political News : ನಿಮ್ಮ ಶಾಸಕರು ಬೆಂಗಳೂರಿನಲ್ಲಿ ಎಲ್ಲಿ ಸಿಗುತ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ!

ನೂತನ ಶಾಸಕರಿಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ (Political News). ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Edited by

shasakara bhavana in bangalore Legislators house
Koo

ಬೆಂಗಳೂರು: ನೂತನ ವಿಧಾನಸಭೆಗೆ ಆಯ್ಕೆಯಾಗಿರುವ ರಾಜ್ಯದ ಎಲ್ಲ ಶಾಸಕರುಗಳಿಗೆ ರಾಜಧಾನಿಯ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ (Political News) ಮಾಡಲಾಗಿದೆ.

ವಿಧಾನಸಭೆ ಅಧಿವೇಶನ ಮತ್ತು ಸರ್ಕಾರದ ಕೆಲಸಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಶಾಸಕರು ಇನ್ನು ಮುಂದೆ ಶಾಸಕರ ಭವನದ ಈ ಕೊಠಡಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಯಾವ ಶಾಸಕರಿಗೆ ಯಾವ ಕೊಠಡಿಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ;

 Shasakara Bhavana 

Legislators house
 Shasakara Bhavana 

Legislators house
 Shasakara Bhavana 

Legislators house
 Shasakara Bhavana 

Legislators house
 Shasakara Bhavana 

Legislators house

ಇದನ್ನೂ ಓದಿ: Congress Guarantee : ನಿಮಗೆ ಫ್ರೀ ಕರೆಂಟ್‌ ಸಿಗುತ್ತದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸರಳ ಮಾರ್ಗ

Continue Reading
Advertisement
Transport Minister Ramalinga reddy
ಕರ್ನಾಟಕ28 mins ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ2 hours ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ2 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ2 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ3 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ3 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ3 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್4 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ4 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ14 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ14 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ21 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!