Submission of nomination papers by JDS leaders including RevannaKarnataka Election 2023: ರೇವಣ್ಣ ಸೇರಿದಂತೆ ಜೇಡಿಎಸ್‌ ನಾಯಕರಿಂದ ನಾಮಪತ್ರ ಸಲ್ಲಿಕೆ Vistara News

ಕರ್ನಾಟಕ ಎಲೆಕ್ಷನ್

Karnataka Election 2023: ರೇವಣ್ಣ ಸೇರಿದಂತೆ ಜೇಡಿಎಸ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಗೆ (Karnataka Election 2023) ಜೆಡಿಎಸ್‌ ಪಕ್ಷದ ಅನೇಕ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಇವರಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಸಹ ಸೇರಿದ್ದಾರೆ.

VISTARANEWS.COM


on

Submission of nomination papers by JDS leaders including Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು / ಹೊಳೆನರಸೀಪುರ: ಜೆಡಿಎಸ್‌ನ ನಾಯಕ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ (Karnataka Election 2023) ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ರೀತಿಯಾಗಿ ಜೆಡಿಎಸ್‌ ಪಕ್ಷದ ಅನೇಕ ನಾಯಕರು ಕೂಡ ನಾಮಪತ್ರ ಸಲ್ಲಿಸಿದ್ದಾರೆ.

ಹೊಳೆನರಸೀಪುರದ ಲಕ್ಷ್ಮೀನರಸಿಂಹ ಸ್ವಾಮಿ, ಮಹಾಲಕ್ಷ್ಮೀ, ಹರದನಹಳ್ಳಿ ಈಶ್ವರ, ಯಲಿಯೂರು ದೇವಿರಮ್ಮ, ರಾಘವೇಂದ್ರಸ್ವಾಮಿಗೆ ಪೂಜೆ ಸಲ್ಲಿಸಿ ತಾಲ್ಲೂಕು ಕಚೇರಿಗೆ ಆಗಮಿಸಿದ ರೇವಣ್ಣ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಭವಾನಿ, ಪುತ್ರರಾದ ಸೂರಜ್, ಪ್ರಜ್ವಲ್ ಇದ್ದರು. ಈ ಕ್ಷೇತ್ರದಿಂದ ರೇವಣಕ್ಕ ಸ್ಪರ್ಧಿಸುತ್ತಿರುವುದು ಇದು ಏಳನೇ ಬಾರಿ. ಐದು ಬಾರಿ ಅವರು ‌ಶಾಸಕರಾಗಿದ್ದಾರೆ. ಒಂದು ಬಾರಿ ಅಂದರೆ 1999ರಲ್ಲಿ‌ ಅವರು ಸೋತಿದ್ದರು.

ಏಳು ಕ್ಷೇತ್ರಗಳಲ್ಲೂ ಗೆಲುವು

ನಾಮ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ , ತಂದೆ ದೇವೇಗೌಡರು ಸ್ಪರ್ಧಿಸುತ್ತಿದ್ದ ಕ್ಷೇತ್ರ ಇದು. ಅವರ ನಂತರ ನಾನು ಪ್ರತಿನಿಧಿಸುತ್ತಿದ್ದೇನೆ. ಪ್ರತಿ ಸಾರಿ ಅತಿ ಹೆಚ್ಚು ಮತಗಳಿಂದ ನನ್ನನ್ನೂ ಗೆಲ್ಲಿಸುತ್ತಿದ್ದಾರೆ. ಈ ಬಾರಿಯೂ ಗೆಲ್ಲಿಸಲಿದ್ದಾರೆ. ಗೆದ್ದು ಬಂದು ಬಡವರ ಪರವಾದ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಏಳು ಕ್ಷೇತ್ರಗಳನ್ನು ಜೆಡಿಎಸ್ ಗೆಲ್ಲುವುದು ನಿಶ್ಚಿತ. ನಾನು ಏಳೂ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ರೇವಣ್ಣ ಹೇಳುವ ಮೂಲಕ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆಯೇ ಎಂಬ ಗೊಂದಲಕ್ಕೆ ತೆರೆ ಎಳೆದರು.

ಜೆಡಿಎಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೈಸೂರು ವರದಿ: ಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಸಿದರು. ಪತ್ರ ಸಲ್ಲಿಕೆ‌ಗೂ ಮುನ್ನ ಕೋಟೆ ಆಂಜನೇಯ ಸ್ವಾಮಿಗೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ರೋಡ್ ಶೋ ಕೂಡ ನಡೆಸಿದರು.

ರಾಯಚೂರು ವರದಿ: ಜಿಲ್ಲೆಯ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿದ್ದು ವೈ ಬಂಡಿ ನಾಮಪತ್ರ ಸಲ್ಲಿಸಿದ್ದಾರೆ. ಸಹಾಯಕ ಆಯುಕ್ತರ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ, ರಾಜ್ಯ ವಕ್ತಾರೆ ನಜ್ಮಾ ನಜೀರ್ ಇದ್ದರು. ಇದಕ್ಕೂ ಮೊದಲು ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು.

Submission of nomination papers by JDS leaders including Revanna
ನಾಮಪತ್ರ ಸಲ್ಲಿಸುತ್ತಿರುವ ಸಿದ್ದು ವೈ ಬಂಡಿ

ವಿಜಯಪುರ ವರದಿ: ಜಿಲ್ಲೆ ನಾಗಠಾಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದೇವಾನಂದ್ ಚವ್ಹಾಣ ನಾಮಪತ್ರ ಸಲ್ಲಿಸಿದ್ದಾರೆ. ವಿಜಯಪುರದ ಜಿಲ್ಲಾ ಪಂಚಾಯತ ಆವರಣದಲ್ಲಿರುವ ಆಜಾದ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು.

ಕುಮಟಾ ವರದಿ: ಉತ್ತರಕನ್ನಡ ಜಿಲ್ಲೆಯ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ನಾಮಪತ್ರ ಸಲ್ಲಿಸಿದ್ದಾರೆ. ಗಿಬ್ ಸರ್ಕಲ್ ಸಮೀಪದ ಜೆಡಿಎಸ್ ಕಚೇರಿಯಿಂದ ಇನ್ನೂರು ಮಂದಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂದ ಅವರು ನಾಮಪತ್ರ ಸಲ್ಲಿಸಿದರು.

ಬಾಗಲಕೋಟೆ ವರದಿ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಡಾ. ದೇವರಾಜ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದೇವರಾಜ ಪಾಟೀಲ್ ಟಿಕೆಟ್‌ ದೊರೆಯದೇ ಇದ್ದುದ್ದರಿಂದ ಜೆಡಿಎಸ್‌ ಸೇರಿದ್ದರು. ಇಂದು ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿ ಸಲ್ಲಿಸಿದ್ದಾರೆ.

ಶಿವಮೊಗ್ಗ ವರದಿ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರ್ ರಾಜಾರಾಮ್ ನಾಮಪತ್ರ ಸಲ್ಲಿಸಿದ್ದಾರೆ. ತೀರ್ಥಹಳ್ಳಿಯ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯಾಗಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ.

Submission of nomination papers by JDS leaders including Revanna
ನಾಮಪತ್ರ ಸಲ್ಲಿಸುತ್ತಿರುವ ಯಡೂರ್‌ ರಾಜಾರಾಮ್‌

ಚಿತ್ರದುರ್ಗ ವರದಿ: ಹಿರಿಯೂರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ ರವೀಂದ್ರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಏ. 20ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Election 2023: ಡಿ.ಕೆ.ಶಿವಕುಮಾರ್‌ ಸೇರಿ ವಿವಿಧ ಕಾಂಗ್ರೆಸ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

Shadow CM Posters
Koo

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

Continue Reading

ಕರ್ನಾಟಕ

Evm Machine : ಡೆಮಾಲಿಷನ್‌ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!

Evm Control Units : ಮನೆ ಡೆಮಾಲಿಷನ್‌ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್‌ ಯೂನಿಟ್‌ಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

EVM units
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.

2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್‌ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್‌ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

EVM units found in demolition
ಎಂಜಿನಿಯರ್‌ ಮನೆ ಡೆಮಾಲಿಷನ್‌ ವೇಳೆ ಇವಿಎಂ ಯೂನಿಟ್‌ಗಳು ಪತ್ತೆ

ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್‌ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್‌ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್‌ ಆಗಿರುವ ಇವಿಎಂ ಕಂಟ್ರೋಲ್‌ ಯೂನಿಟ್‌ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

Continue Reading

ಕರ್ನಾಟಕ

‌Brand Bengaluru: ವಿದ್ಯುತ್‌ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar Thushar girinath
Koo

ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್‌ ಬಿಲ್‌ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.

1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.

ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್‌ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್‌ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.

ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.

ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: Rice Politics: ನಾಳೆ ಅಮಿತ್‌ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ

Continue Reading
Advertisement
Supreme Court Says than actions must be taken against hate speeches
ಕೋರ್ಟ್13 mins ago

Hate Speeches: ದ್ವೇಷ ಭಾಷಣಗಳ ವಿರುದ್ಧ ಕ್ರಮ ಜರುಗಿಸಲೇಬೇಕು! ಸರ್ಕಾರಗಳಿಗೆ ಸುಪ್ರೀಂ ತಾಕೀತು

Fashion Show
ದೇಶ49 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ50 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ50 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ52 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ1 hour ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ1 hour ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ1 hour ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್2 hours ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ2 hours ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌